Tag: women

  • ಮಕ್ಕಳಿಬ್ಬರ ಜೊತೆ ಕೃಷಿ ಹೊಂಡಕ್ಕೆ ಹಾರಿದ ಮಹಿಳೆ

    ಮಕ್ಕಳಿಬ್ಬರ ಜೊತೆ ಕೃಷಿ ಹೊಂಡಕ್ಕೆ ಹಾರಿದ ಮಹಿಳೆ

    ಬಳ್ಳಾರಿ: ಒಂದೇ ಕುಟುಂಬದ ಮೂವರು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡದಿದೆ.

    ಆತ್ಮಹತ್ಯೆ ಮಾಡಿಕೊಂಡವರನ್ನು ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶಾಲಿಗನೂರು ಗ್ರಾಮದ ನಾಗರತ್ನ (40), ಪುತ್ರಿಯರಾದ ಶೃತಿ (12), ಗಿರಿಜಾ (7) ಎಂದು ಗುರುತಿಸಲಾಗಿದೆ. ನಾಗರತ್ನ ತಮ್ಮ ಹೊಲದಲ್ಲಿದ್ದ ಕೃಷಿ ಹೊಂಡಕ್ಕೆ ತಮ್ಮಿಬ್ಬರು ಹೆಣ್ಣು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಜಮೀನಿನಲ್ಲಿ ಕೃಷಿ ಮಾಡಿಕೊಂಡು ರೈತ ಮಹಿಳೆಯಾಗಿ ಗುರುತಿಸಿಕೊಂಡಿದ್ದ ನಾಗರತ್ನ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

    ಆಂಧ್ರ ಬ್ಯಾಂಕ್‍ನಲ್ಲಿ ಅಂದಾಜು 5.60 ಲಕ್ಷ ರೂ ಹಾಗೂ ಖಾಸಗಿ ಲೇವಾದೇವಿಗಾರರಿಂದ 15 ಲಕ್ಷ ರೂ. ಸಾಲಮಾಡಿದ್ದರೆಂದು ಮಾಹಿತಿ ಸಿಕ್ಕಿದ್ದು, ಸಾಲ ಮರುಪಾವತಿ ಮಾಡಲು ಸಾಲಗಾರರು ಕಾಟ ಕೊಡುತ್ತಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

    ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸಿರುಗುಪ್ಪ ಪೋಲಿಸ್ ಠಾಣೆಯ ಸಿಪಿಐ ಟಿ ಆರ್ ಪವಾರ್, ಪಿಎಸ್‍ಐ ಕೆ.ರಂಗಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಿರುಗುಪ್ಪ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

  • ಮಹಿಳೆಯರ ಒಳ ಉಡುಪು ಕದಿಯುವುದೇ ಇವರ ಖಯಾಲಿ

    ಮಹಿಳೆಯರ ಒಳ ಉಡುಪು ಕದಿಯುವುದೇ ಇವರ ಖಯಾಲಿ

    ಲಕ್ನೋ: ಮಹಿಳೆಯರ ಒಳ ಉಡುಪು ಕದ್ದು ವಿಕೃತಿ ಮೆರೆಯುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್‍ನಲ್ಲಿದೆ.

    ಮಹಿಳೆಯರು ತೊಳೆದು ಹೊರಗಡೆ ಒಣ ಹಾಕಿದ್ದ ಒಳ ಉಡುಪುಗಳನ್ನು ಈ ಖದೀಮರು ಕದ್ದು ಪರಾರಿಯಾಗುತ್ತಿದ್ದರು. ಈ ಘಟನೆಯನ್ನು ವ್ಯಕ್ತಿ ರೆಕಾರ್ಡ್ ಮಾಡಿದ್ದರಿ ಅಲ್ಲದೆ ಸಿಸಿಟಿವಿ ಕ್ಯಾಮೆರಾದಲ್ಲಿ ಸಹ ಸೆರೆಯಾಗಿತ್ತು. ಹೊರಗಡೆ ಒಣ ಹಾಕಿದ ವೇಳೆ ಇಬ್ಬರು ಖದೀಮರು ಕದ್ದು, ಬೈಕ್ ಹತ್ತಿ ಪರಾರಿಯಾಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಸದರ್ ಪೊಲೀಸರು ಮೊಹ್ದ್ ರೋಮಿನ್ ಹಾಗೂ ಮೊಹದ್ ಅಬ್ದುಲ್ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಜಸ್ಟ್ ಫನ್‍ಗಾಗಿ ಮಹಿಳೆಯರ ಒಳ ಉಡುಪು ಕದ್ದಿದ್ದೇವೆ ಎಂದು ಆರೋಪಿಗಳು ಹೇಳಿದ್ದಾರೆ. ರೋಮಿನ್ ಹಾಗೂ ಅಬ್ದುಲ್ ವಿರುದ್ಧ ಐಪಿಸಿ ಸೆಕ್ಷನ್ 379(ಕಳ್ಳತನ) ಹಾಗೂ 509(ಮಹಿಳೆಯರ ಗೌರವಕ್ಕೆ ಧಕ್ಕೆ) ಅಡಿ ಪ್ರಕರಣ ದಾಖಲಿಸಿದ್ದಾರೆ.

    ಸಂಜಯ್ ಚೌಧರಿ ಅವರು ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಮಾ.14ರಂದು ಈ ಬಗ್ಗೆ ದೂರು ನೀಡಿದ್ದು, ನನ್ನ ಅಪ್ರಾಪ್ತ ಮಗಳ ಒಳ ಉಡುಪುಗಳನ್ನು ಒಣ ಹಾಕಿದಾಗ ಈ ಇಬ್ಬರು ಕದಿಯುತ್ತಿರುವುದನ್ನು ವೀಡಿಯೋ ರೆಕಾರ್ಡ್ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

    ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಅಪನಂಬಿಕೆ, ಹಲವು ಅತೀಂದ್ರಿಯ ಅಭ್ಯಾಸವು ಮಹಿಳೆಯ ಒಳ ಉಡುಪುಗಳನ್ನು ಕದಿಯುವ ಹಿಂದಿನ ಉದೇಶವಾಗಿದೆ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಸುದ್ದಿ ಹರಿದಾಡುತ್ತಿದ್ದಂತೆ ಟ್ವಿಟ್ಟರ್ ನಲ್ಲಿ ಟ್ರೆಂಡ್ ಸೃಷ್ಟಿಸಿದ್ದು, ಪ್ಯಾಂಟಿ ಚೋರ್ ಅಬ್ದುಲ್ ಹ್ಯಾಷ್ ಟ್ಯಾಗ್‍ನೊಂದಿಗೆ ಟ್ರೆಂಡ್ ಕ್ರಿಯೇಟ್ ಮಾಡಿದ್ದಾರೆ. ಹಲವು ರೀತಿಯ ಮೀಮ್ಸ್ ಹಾಗೂ ಜಿಫ್‍ಗಳೊಂದಿಗೆ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಸಿದ್ದಾರೆ.

  • ಟಾಸ್ಕ್ ಗೆದ್ದು ಪಿಜ್ಜಾ ಸವಿದ ಬಿಗ್‍ಬಾಸ್ ಮನೆಯ ಮಹಿಳೆಯರು

    ಟಾಸ್ಕ್ ಗೆದ್ದು ಪಿಜ್ಜಾ ಸವಿದ ಬಿಗ್‍ಬಾಸ್ ಮನೆಯ ಮಹಿಳೆಯರು

    ಸದಾ ಫಿಸಿಕಲ್ ಟಾಸ್ಕ್ ಕೊಡುತ್ತಿದ್ದ ಬಿಗ್‍ಬಾಸ್ ನಿನ್ನೆ ಮನೆ ಸದಸ್ಯರಿಗೆ ಹಾಸ್ಯಮಯ ಚಟುವಟಿಕೆಯೊಂದನ್ನು ನೀಡಿದರು. ಅದುವೇ ನಗುವುದೋ, ಅಳುವುದೋ ನೀವೇ ಹೇಳಿ. ಇದರ ಅನುಸಾರ ಮನೆಯ ಪುರುಷರೆಲ್ಲರೂ ಮನೆಯಲ್ಲಿರುವ ನಾಲ್ಕು ಮಹಿಳೆಯರ ಪ್ರತಿಕ್ರಿಯೆಯನ್ನು ಪಡೆಯಬೇಕಿತ್ತು. ಅಂದರೆ ಒಂದು ನಗಿಸಬೇಕು, ಇಲ್ಲ ಅಳಿಸಬೇಕು. ನೀಡುವ ನಿಗದಿತ ಅವಧಿಯೊಳಗೆ ನಾಲ್ಕು ಮಹಿಳಾ ಸದಸ್ಯರನ್ನು ನಗಿಸಿದರೆ ಅಥವಾ ಅಳಿಸಿದರೆ ಪುರುಷರು ವಿಜೇತರಾಗುತ್ತಾರೆ. ಒಂದು ವೇಳೆ ಮಹಿಳಾ ಸದಸ್ಯರ ತಂಡದಲ್ಲಿ ಒಬ್ಬ ಸದಸ್ಯ ನಗದೇ ಅಥವಾ ಅಳದೇ ಉಳಿದರು ಮಹಿಳೆಯರ ತಂಡ ಗೆಲ್ಲುತ್ತದೆ ಹಾಗೂ ಗೆಲ್ಲುವ ತಂಡಕ್ಕೆ ವಿಶೇಷವಾಗಿ ಪಿಜ್ಜಾ ನೀಡಲಾಗುತ್ತದೆ ಎಂದು ತಿಳಿಸಿದರು. ಇದನ್ನು ಕೇಳಿ ಮನೆ ಮಂದಿಯೆಲ್ಲಾ ಫುಲ್ ಖುಷ್ ಆಗುತ್ತಾರೆ.

    ಗೆಲ್ಲಲೇ ಬೇಕೆಂದು ನಿರ್ಧರಿಸಿದ ಪುರುಷರು ದಿವ್ಯಾ ಸುರೇಶ್, ದಿವ್ಯಾ ಉರುಡುಗ, ಶುಭ ಪೂಂಜಾ, ನಿಧಿ ಸುಬ್ಬರನ್ನು ಟಾರ್ಗೆಟ್ ಮಾಡಿ ನಗಿಸಲು ಪ್ಲಾನ್ ಮಾಡುತ್ತಾರೆ. ನಂತರ ಮಹಿಳಾ ಸದಸ್ಯರು ಊಟ ಮಾಡಲು ಡೈನಿಂಗ್ ಹಾಲ್‍ನಲ್ಲಿ ಕುಳಿತಿರುವ ವೇಳೆ ಲ್ಯಾಗ್ ಮಂಜು ದಿವ್ಯಾ ಉರುಡುಗರನ್ನು ನಗಿಸಲು ಪ್ರಾರಂಭಿಸುತ್ತಾರೆ. ಈ ವೇಳೆ ದಿವ್ಯಾ ಉರುಡುಗ ಊಟದಿಂದ ಎದ್ದು ಅಲ್ಲಿಂದ ಇಲ್ಲಿಗೆ ಇಲ್ಲಿಂದ ಅಲ್ಲಿಗೆ ಓಡಾಡುತ್ತಾರೆ. ಆದರೂ ಹಠ ಬಿಡದ ಮಂಜು ವಾಶ್ ರೂಮ್‍ಗೆ ತಲುಪಿದ ದಿವ್ಯಾ ಉರುಡುಗರನ್ನು ಬೆನ್ನು ಬೇಡದೇ ಕಾಡುತ್ತಾರೆ. ಈ ವೇಳೆ ದಿವ್ಯಾ ಉರುಡುಗ ಒಬ್ಬೊಬ್ಬರೇ ಮಾತನಾಡಿಕೊಳ್ಳುತ್ತಾ, ಮಂಜು ಬಟ್ಟೆ ಒಗೆಯಲು ಏಕೆ ಬಿಡುತ್ತಿಲ್ಲ ನೀನು ಎಂದು ಪ್ರಶ್ನಿಸುತ್ತಾರೆ. ದಿವ್ಯಾ ಕೈ ಹಿಡಿದು ಎಳೆದು ನಗಿಸಲು ಪ್ರಯತ್ನಿಸುತ್ತಾರೆ. ಆದರೂ ದಿವ್ಯಾ ದೃತಿಗೆಡದೇ ಆಟದ ಮೇಲೆ ಗಮನ ಹರಿಸಲೇಬೇಕೆಂದು ನಗುವನ್ನು ಕಂಟ್ರೋಲ್ ಮಾಡಿಕೊಳ್ಳುತ್ತಾರೆ.

    ನಂತರ ಬಾತ್ ರೂಮ್‍ನಿಂದ ಹೊರ ಬರುತ್ತಿದ್ದ ದಿವ್ಯಾ ಸುರೇಶ್ ಬೆನ್ನತ್ತಿದ ಲ್ಯಾಗ್ ಮಂಜು, ಆಕೆಯನ್ನು ನಗಿಸಲು ಪ್ರಯತ್ನಿಸುತ್ತಾರೆ. ಈ ವೇಳೆ ದಿವ್ಯಾ ನನ್ನ ಬಾಯಲ್ಲಿ ನೀರಿದೆ ನಾನು ಉಗುಳಿ ಬಿಡುತ್ತೇನೆ, ನನ್ನ ಕೈ ಬಿಡು ಎಂದು ಸನ್ನೆ ಮಾಡುವ ಮೂಲಕ ತಿಳಿಸುತ್ತಾರೆ. ಆಗ ಮಂಜು ಆಗಿದ್ದೆಲ್ಲಾ ಆಗಿಲಿ ನೀನು ಉಗುಳಿದರು ಪರವಾಗಿಲ್ಲ ಎಂದು ಹೇಳುವ ಮೂಲಕ ನಗಿಸಲು ಮುಂದಾಗುತ್ತಾರೆ. ಆದರೂ ನಗಬಾರದೆಂದು ದಿವ್ಯಾ ಬಾಯಿಯಲ್ಲಿದ್ದ ನೀರನ್ನು ಉಗುಳದೇ ಹಾಗೇಯೇ ಮೈನ್‍ಟೈನ್ ಮಾಡುತ್ತಾರೆ. ನಗಿಸಲೇ ಬೇಕೆಂದು ಹಠ ಬಿಡದ ಮಂಜು ದಿವ್ಯಾರ ಕೈ ಹಿಡಿದು ಎಳೆದಾಡುತ್ತಾರೆ. ಈ ವೇಳೆ ಕೊನೆಗೂ ದಿವ್ಯಾ ಕೊಂಚ ನಗೆ ಬೀರಿಬಿಡುತ್ತಾರೆ. ಇದನ್ನು ಗಮನಿಸಿದ ಬಿಗ್‍ಬಾಸ್ ದಿವ್ಯಾ ಸುರೇಶ್ ಔಟ್ ಎಂದು ಘೋಷಿಸುತ್ತಾರೆ.

    ಬಳಿಕ ಉಳಿದ ಮಹಿಳೆಯರ ಬೆನ್ನಟ್ಟಿದ ಪುರುಷ ಸದಸ್ಯರು ಎಷ್ಟೇ ಪ್ರಯತ್ನಿಸಿದರು ಮಹಿಳೆಯರು ನಗದೇ ಟಾಸ್ಕ್ ಕಂಪ್ಲೀಟ್ ಮಾಡಿ ವಿಜಯ ಶಾಲಿಯಾಗುತ್ತಾರೆ. ಹೀಗಾಗಿ ಬಿಗ್‍ಬಾಸ್ ಮನೆಯ ಮಹಿಳಾ ಸದಸ್ಯರಿಗೆ ಸವಿಯಲು ಪಿಜ್ಜಾ ಕಳುಹಿಸಿಕೊಡುತ್ತಾರೆ. ಎಷ್ಟೋ ದಿನಗಳಿಂದ ಪಿಜ್ಜಾ ನೋಡದ ಮಹಿಳೆಯರು ನಿನ್ನೆ ಪಿಜ್ಜಾ ತಿಂದು ಸಖತ್ ಎಂಜಾಯ್ ಮಾಡುತ್ತಾರೆ.

  • ಎರಡು ಕೈ ಕಳೆದುಕೊಂಡರೂ ಛಲ ಬಿಡದೇ ಶಿಕ್ಷಕಿಯಾದ ಸಾಧಕಿ

    ಎರಡು ಕೈ ಕಳೆದುಕೊಂಡರೂ ಛಲ ಬಿಡದೇ ಶಿಕ್ಷಕಿಯಾದ ಸಾಧಕಿ

    ಲಕ್ನೋ: ಈಕೆ ಆ ದೇವರ ಇಚ್ಛೆಯೆಂಬಂತೆ ವಿದ್ಯುತ್ ಶಾಕ್ ಹೊಡೆದು ಎರಡು ಕೈಗಳನ್ನು ಕಳೆದುಕೊಂಡಾಕೆ. ಆದರೆ ಈಕೆಯ ಮನೋಸ್ಥೈರ್ಯದ ಮುಂದೆ ಈ ಸಮಸ್ಯೆ ಕಾಡಲೇ ಇಲ್ಲ. ಸಾಧಿಸಬೇಕೆಂಬ ಛಲದಂಕ ಮಲ್ಲೆಯಾಗಿ ಇದೀಗ ಕೈ ಇದ್ದವರಿಗೂ ಸಾಧಿಸಲಾಗದಂತಹ ಮಹೋತ್ತರವಾದ ಗುರಿಯೊಂದಿಗೆ ಮುನ್ನುಗ್ಗಿ ನಿಜವಾದ ಮಹಿಳಾ ಸಾಧಕಿಯ ಸಾಲಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾಳೆ.

    ಈಕೆಯ ಹೆಸರು ಪ್ರಗತಿ ಉತ್ತರ ಪ್ರದೇಶದ ಮೊರಾದಾಬಾದ್ ನ ಹಳ್ಳಿ ಹುಡುಕಿ 2010ರಲ್ಲಿ ತನಗೆ ಅರಿವಿಲ್ಲದೆ ವಿದ್ಯುತ್ ತಂತಿಯನ್ನು ಮುಟ್ಟಿ ತನ್ನ ಎರಡು ಕೈಯನ್ನು ಕಳೆದುಕೊಳ್ಳುತ್ತಾಳೆ. ಆದರೆ ಕೈ ಇಲ್ಲ ಎಂದು ಸುಮ್ಮನೆ ಕುಳಿತಿದ್ದರೆ ಇಂದು ಪ್ರಗತಿ ಯಾರಿಗೂ ತಿಳಿಯುತ್ತಿರಲಿಲ್ಲ. ಇದೀಗ ಈಕೆ ತನ್ನ ಎರಡು ಕೈಗಳನ್ನು ಕಳೆದುಕೊಂಡಿದ್ದರು ಕೂಡ ತನ್ನ ಸಾಧನೆಯ ಛಲ ಬಿಡದೆ ಅರ್ಧ ತುಂಡಾಗಿರುವ ಎರಡು ಕೈಗಳನ್ನು ಬಳಸಿಕೊಂಡು ಎಲ್ಲರಂತೆ ಮೊಬೈಲ್ ಮತ್ತು ಲ್ಯಾಪ್‍ಟಾಪ್‍ಗಳನ್ನು ಬಳಸುವ ಮೂಲಕ ಜ್ಞಾನರ್ಜನೆ ಮಾಡಿ ಮುನ್ನುಗ್ಗುತ್ತಿದ್ದಾಳೆ.

    ಪ್ರಗತಿ ಕೈಗಳು ಇಲ್ಲವೆಂದು ಸುಮ್ಮನಿರದೆ, ತನ್ನ ಅರ್ಧ ತುಂಡಾಗಿರುವ ಕೈಯನ್ನು ಬಳಸಿಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಾ ಬಂದ ಹಣದಿಂದ ಬ್ಯಾಕಿಂಗ್ ಪ್ರವೇಶ ಪರೀಕ್ಷೆ ಬರೆಯಬೇಕೆಂಬ ಹಂಬಲದೊಂದಿಗೆ ಸಾಧನೆಯ ಹಾದಿಯಲ್ಲಿ ತೊಡಗಿಕೊಂಡಿದ್ದಾಳೆ.

    ಪ್ರಗತಿ ತನ್ನ ಕೈ ಕಳೆದುಕೊಂಡು ಪಟ್ಟ ಕಷ್ಟ ಆ ನೋವು, ಕಿಳರಿಮೆಗಳನ್ನು ಸಹಿಸಿಕೊಂಡು ನಾನು ಏನಾದರೂ ಸಾಧಿಸಿ ತೊರಿಸಬೇಕೆಂಬ ಛಲದಿಂದಾಗಿ ಮುನ್ನಡೆಯುವ ಮೂಲಕ ನಿಜವಾದ ಮಹಿಳಾ ದಿನದ ಧೀರ ಮಹಿಳೆಯಾಗಿ ಇತರರಿಗೆ ಸ್ಫೂರ್ತಿಯಾಗುತ್ತಿದ್ದಾಳೆ.

  • ಮಹಿಳೆಯರಿಗೆ ಬಂಪರ್‌ – 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ

    ಮಹಿಳೆಯರಿಗೆ ಬಂಪರ್‌ – 6 ತಿಂಗಳು ಪ್ರಸೂತಿ ರಜೆಯ ಜೊತೆ 6 ತಿಂಗಳು ಮಕ್ಕಳ ಆರೈಕೆ ರಜೆ

    ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಬಜೆಟ್‌ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ ಮಹಿಳೆಯರಿಗೆ ಬಂಪರ್‌ ಯೋಜನೆಗಳನ್ನ ಪ್ರಕಟಿಸಿದ್ದಾರೆ.

    ಸಂಜೀವಿನಿ ಯೋಜನೆಯ ಅಡಿ ಮಹಿಳಾ ಸ್ವಸಹಾಯ ಸಂಘಗಳಿಗೆ 60 ಸಾವಿರ ಮಹಿಳೆಯರಿಗೆ ಸ್ವಯಂ ಉದ್ಯೋಗದ ಅವಕಾಶ
    ಸಣ್ಣ ಸಣ್ಣ ಆಹಾರ ಪದಾರ್ಥಗಳ ಮಾರುಕಟ್ಟೆ ಸೌಲಭ್ಯ
    ಉದ್ಯೋಗಸ್ಥ ಮಹಿಳೆಯರ ಮಕ್ಕಳ ಪಾಲನೆಗೆ ಜಿಲ್ಲಾ ಮಟ್ಟದಲ್ಲಿ 2 ಶಿಶುಪಾಲನಾ ಕೇಂದ್ರ ಸ್ಥಾಪನೆ
    ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹಿಸಲು ಶೇ.4ರಷ್ಟು ಬಡ್ಡಿ ದರದಲ್ಲಿ ಸಾಲ ಸೌಲಭ್ಯ
    ವನಿತಾ ಸಂಗಾತಿ – ಗಾರ್ಮೆಂಟ್ಸ್ ಕಾರ್ಮಿಕರಿಗೆ ಉಚಿತ ಬಸ್ ಪಾಸ್

    ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನಿರ್ಭಯ ಸಹಾಯ ಕೇಂದ್ರ
    ಮಹಿಳಾ ಸುರಕ್ಷತೆಗೆ ಬೆಂಗಳೂರಿನ 7.500 ಸಿಸಿಟಿವಿ ಅಳವಡಿಕೆ,ಮಹಿಳಾ ಸುರಕ್ಷತೆಗೆ ಇ-ಬೀಟ್ ವ್ಯವಸ್ಥೆ
    ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಗೋದಾಮು-ಅಂಗಡಿ ನೀಡುವಲ್ಲಿ ಶೇ.10 ರಷ್ಟು ಮೀಸಲು
    ಮಹಿಳಾ ಸರ್ಕಾರಿ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆ 6 ತಿಂಗಳು ಜೊತೆಗೆ ಸೇವಾವಧಿಯಲ್ಲಿ 6 ತಿಂಗಳು ಮಕ್ಕಳ ಆರೈಕೆ ರಜೆ
    ಮಹಿಳಾ ಪರ ಚಿಂತನೆ ಜಾರಿಗೊಳಿಸಲು ಸಿಎಂ ಮೇಲ್ವಿಚಾರಣೆಯಲ್ಲಿ ಮಹಿಳಾ ಸಬಲೀಕರಣ ಅಭಿಯಾನ

  • ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

    ಮಹಿಳಾ ದಿನಾಚರಣೆಯ ಗಿಫ್ಟ್ – ಸಕ್ಕರೆ ನಾಡಿನಲ್ಲಿ ಮಹಿಳೆಯರ ಸಾಧನೆಯ ಮೈಲಿಗಲ್ಲು

    ಮಂಡ್ಯ: ಆರ್ಥಿಕ, ಸಾಮಾಜಿಕ, ರಾಜಕೀಯ ಕ್ಷೇತ್ರ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ನೆನೆಯುವ ಮೂಲಕ ಮಹಿಳೆಯರ ಸಬಲೀಕರಣ ಮಾಡಲು ಮಾರ್ಚ್ 8 ರಂದು ವಿಶ್ವ ಮಹಿಳಾ ದಿನವೆಂದು ಆಚರಣೆ ಮಾಡಲಾಗುತ್ತದೆ. ಈ ದಿನಕ್ಕೆ ಅರ್ಥ ಪೂರ್ಣವೆಂಬಂತೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಮಹಿಳೆಯರು ಸಾಧನೆಯ ಮೈಲಿಗಲ್ಲಾಗಿದ್ದಾರೆ.

    ಕಳೆದ ಮೂರು ದಶಕಗಳ ಹಿಂದೆ ಮಹಿಳೆಯರು ಕೇವಲ ಮನೆಗೆ ಮಾತ್ರ ಸೀಮಿತವಾಗಿರಬೇಕು ಎಂಬ ಕಲ್ಪನೆ ಎಲ್ಲರಲ್ಲಿ ಇತ್ತು. ಬಳಿಕ ಹಂತ ಹಂತವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ನಾವು ಪುರುಷರಿಗೇನು ಕಮ್ಮಿ ಇಲ್ಲ, ನಮ್ಮಲ್ಲೂ ಸಾಧನೆ ಮಾಡುವ ಆತ್ಮಸ್ಥೈರ್ಯವಿದೆ ಎಂದು ತೊರಿಸಿಕೊಡುವ ಮೂಲಕ ನಮ್ಮಿದಂಲೂ ದೇಶ ಕಟ್ಟಲು ಸಾಧ್ಯ ಎಂದು ಹೇಳಿದ್ದಾರೆ. ನಾಳೆ ವಿಶ್ವ ಮಹಿಳಾ ದಿನಾಚರಣೆ ಇದೆ. ಇದಕ್ಕೆ ಅರ್ಥ ಕಲ್ಪಿಸುವಂತೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯನ್ನು ಮಹಿಳೆಯರೇ ಬಹುತೇಕ ಲೀಡ್ ಮಾಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದು, ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಕಾರ್ಯನಿರ್ವಹಿಸುತ್ತಿದ್ದಾರೆ.

    ಸದ್ಯ ಜಿಲ್ಲೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರಿಂದ ಮಹಿಳೆಯರ ಪರ್ವ ಆರಂಭವಾಗಿದೆ. ಜಿಲ್ಲಾಧಿಕಾರಿ ಅಶ್ವಥಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶ್ವಿನಿ, ಎಡಿಸಿ ಶೈಲಜಾ, ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪ, ಭೂ ಮತ್ತು ಗಣಿ ಇಲಾಖೆ ಪುಷ್ಪ, ಜಿ.ಪಂ ಅಧ್ಯಕ್ಷೆ ನಾಗರತ್ನಸ್ವಾಮಿ, ಉಪಾಧ್ಯಕ್ಷೆ ಗಾಯಿತ್ರಿ ಸೇರಿದಂತೆ ಬಹುತೇಕ ಇಲಾಖೆಗಲ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಮಹಿಳೆಯರೆ ಹೆಚ್ಚಿದ್ದಾರೆ. ಜಿಲ್ಲೆಯಲ್ಲಿ ಪ್ರಮುಖ ಹುದ್ದೆಗಳಲ್ಲಿ ಅತೀ ಹೆಚ್ಚು ಮಹಿಳೆಯರು ಇರುವುದು ಇದೇ ಮೊದಲ ಬಾರಿಗೆ ಎನ್ನಲಾಆಗುತ್ತಿದ್ದು, ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಇದು ಒಳ್ಳೆಯ ಸಮಯವಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

    ಸಕ್ಕರೆ ನಾಡು ಮಂಡ್ಯ ಜಿಲ್ಲೆಯನ್ನು ಸದ್ಯ ಲೀಡ್ ಮಾಡುತ್ತಿರುವುದು ಮಹಿಳೆಯರೇ ಆಗಿದ್ದಾರೆ. ಈ ವರ್ಷದ ಮಹಿಳಾ ದಿನಾಚರಣೆಗೆ ಜಿಲ್ಲೆಯ ಮಹಿಳೆಯರಿಗೆ ಇದೊಂದು ಗಿಫ್ಟ್ ಎಂಬಂತೆ ಆಗಿದೆ. ಈ ಮಹಿಳೆಯರ ಸಾಧನೆ ಎಲ್ಲಾ ಮಹಿಳೆಯರಿಗೆ ಸ್ಫೂರ್ತಿಯಾಗಿ ಸಾಧನೆಯ ಶಿಖರವನ್ನೇರಬೇಕು ಎನ್ನೋದೇ ನಮ್ಮ ಆಶಯವಾಗಿದೆ.

  • ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ – ಕಮಲ್ ಹಾಸನ್ ಆಶ್ವಾಸನೆ

    ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ – ಕಮಲ್ ಹಾಸನ್ ಆಶ್ವಾಸನೆ

    ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮಕ್ಕಳ್ ನಿಧಿ ಮೈಯಂ(ಎಂಎನ್‍ಎಂ) ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರ ಮತ್ತು ಯುವ ಜನರ ಅಭಿವೃದ್ಧಿಗಳಿಗೆ ಹೆಚ್ಚು ಹೊತ್ತು ನೀಡುವುದಾಗಿ ಕಾಲಿವುಡ್ ನಟ ಕಮಲ್ ಹಾಸನ್ ಬುಧವಾರ ಘೋಷಿಸಿದ್ದಾರೆ.

    ಏಪ್ರಿಲ್ 6ರಂದು ನಡೆಯಲಿರುವ ತಮಿಳುನಾಡು ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಅವಕಾಶ ನೀಡಿದರೆ ಶೇ.50ರಷ್ಟು ಮೀಸಲಾತಿಯನ್ನು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರಿಗೆ ನೀಡುವುದಾಗಿ ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಭರವಸೆ ನೀಡಿದ್ದಾರೆ.

    ಇಷ್ಟೇ ಅಲ್ಲದೇ ಸ್ಯಾನಿಟರಿ ನ್ಯಾಪ್‍ಕಿನ್ ವಿತರಣೆ, ಮಹಿಳೆಯರಿಗೆ ರಕ್ಷಣೆ, ಒಂಟಿ ತಾಯಂದಿರಿಗೆ ಬೆಂಬಲ, ಎಲ್ಲಾ ಗರ್ಭಿಣಿಯರಿಗೆ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಹಲವು ರೀತಿಯ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ಯುವಕರಿಗೆ 50 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದು, ನಿರುದ್ಯೋಗ ಭತ್ಯೆ ಮಾಡಲಾಗುವುದು ಎಂದು ಹೇಳಿದ್ದಾರೆ.

    ಮುಂಬರುವ ಚುನಾವಣೆಯಲ್ಲಿ ಎಂಎನ್‍ಎಂ ಮೈತ್ರಿಗಾಗಿ ಈಗಾಗಲೇ ಹಲವಾರು ಪಕ್ಷಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

    ಎಂಎನ್‍ಎಂ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಮಾರ್ಚ್ 7ರಂದು ಪ್ರಕಟಿಸುವ ನಿರೀಕ್ಷೆ ಇದೆ. ಆಡಳಿತ ಪಕ್ಷ ಎಐಎಡಿಎಂಕೆ-ಬಿಜೆಪಿ ಮತ್ತು ಡಿಎಂಕೆ-ಕಾಂಗ್ರೆಸ್ ನೇತೃತ್ವದ ಮಯತ್ರಿ ಪಕ್ಷಗಳು ಈಗಾಗಲೇ ಚುನಾವಣೆ ಪ್ರಚಾರವನ್ನು ಆರಂಭಿಸಿದೆ.

  • ಸರಕಾರಿ ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ- ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

    ಸರಕಾರಿ ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ- ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

    ಕೊಪ್ಪಳ: ಆಸ್ಪತ್ರೆಗೆ ಆಗಮಿಸಿದ ಮಹಿಳೆಯೊಬ್ಬರು ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಆಸ್ಪತ್ರೆಯ ಬಾಗಿಲಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

    ಜಿಲ್ಲೆಯ ಗೌರಿಪುರ ಗ್ರಾಮದ ಗರ್ಭಿಣಿ ಬೃಂದಾ ಅವರಿಗೆ ಏಕಾಏಕಿ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಕುಟುಂಬಸ್ಥರು ಕನಕಗಿರಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಬೆಳಿಗ್ಗೆ ಆರು ಗಂಟೆಗೆ ಆಸ್ಪತ್ರೆಯ ಮುಂಭಾಗ ಬಂದು ಬಾಗಿಲು ತೆಗೆಯಿರಿ ಎಂದು ಬೇಡಿಕೊಂಡರೂ ಅಲ್ಲಿದ್ದ ಸಿಬ್ಬಂದಿ ಬಂದು ನೋಡದೆ, ಸಮುದಾಯ ಆರೋಗ್ಯ ಕೇಂದ್ರದ ಬಾಗಿಲು ತೆರೆಯದೆ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ಬೃಂದಾ ಅವರು ಹೆರಿಗೆ ನೋವಿನಿಂದ ಬಳಲಿ ಕೆಂದ್ರದ ಬಾಗಿಲಲ್ಲೆ ಹೆರಿಗೆಯಾಗಿದ್ದಾರೆ.

    ಬೃಂದಾ ಅವರು ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ಮನಕಲಕುವ ದೃಶ್ಯ ನೋಡಿ ಸ್ಥಳೀಯರು ದಂಗಾಗಿದ್ದಾರೆ. ಈ ರೀತಿ ಹೆರಿಗೆಯಾಗಿದ್ದರಿಂದ ಕುಟುಂಬಸ್ಥರು ಆರೋಗ್ಯ ಸಿಬ್ಬಂದಿ ವಿರುದ್ಧ ಹಿಡಿ ಶಾಪ ಹಾಕಿದ್ದಾರೆ. ವಿಷಯ ತಿಳಿಯುತ್ತಿದಂತೆ ಕುಟುಂಬಸ್ಥರು ಮತ್ತು ಕನ್ನಡ ಪರ ಸಂಘಟನೆಗಳು ಆರೋಗ್ಯ ಕೇಂದ್ರದ ಮುಂದೇ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿ ನಿರ್ಲಕ್ಷ್ಯ ತೋರಿದ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

  • ಹರಕೆಯ ನೆಪದಲ್ಲಿ ಮಹಿಳೆಯ ಶೋಷಣೆ – ದೇಹಕ್ಕೆ ಬೇವಿನ ಸೊಪ್ಪು ಕಟ್ಟಿ ಮೆರವಣಿಗೆ

    ಹರಕೆಯ ನೆಪದಲ್ಲಿ ಮಹಿಳೆಯ ಶೋಷಣೆ – ದೇಹಕ್ಕೆ ಬೇವಿನ ಸೊಪ್ಪು ಕಟ್ಟಿ ಮೆರವಣಿಗೆ

    ಯಾದಗಿರಿ: ರಾಜ್ಯದಲ್ಲಿ ಮೌಢ್ಯ ನಿರ್ಬಂಧ ಕಾಯ್ದೆ ಜಾರಿಯಲ್ಲಿದ್ದರೂ ದೇವರ ಹೆಸರಿನಲ್ಲಿ ಅಮಾಯಕರ ಶೋಷಣೆ ಮಾತ್ರ ನಿಲ್ಲುತ್ತಿಲ್ಲ. ಅನಾಗರಿಕ ಅನಿಷ್ಟ ಪದ್ಧತಿಗಳು ಇನ್ನೂ ರಾಜ್ಯದಲ್ಲಿ ತಂಡವಾಡುತ್ತಿದೆ ಎನ್ನುವುದಕ್ಕೆ ಈಗ ಮತ್ತೊಂದು ಸಾಕ್ಷಿ ಸಿಕ್ಕಿದೆ.

    ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಹೊರ ವಲಯದಲ್ಲಿ ಹರಕೆಯ ನೆಪದಲ್ಲಿ ಮಹಿಳೆಯರ ಬೆತ್ತಲೆ ಸೇವೆ ನಡೆದಿದ್ದು, ಇದು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಮಂಗಳವಾರ ಹಿನ್ನೆಲೆ ಕೆಲ ಸಮುದಾಯಗಳು ದೇವರಿಗೆ ಹರಕೆ ತೀರಿಸುವ ನೆಪದಲ್ಲಿ ಹೆಣ್ಣುಮಕ್ಕಳ ಅರೇ ಬೆತ್ತಲೆ ಮಾಡಿ ದೇಹಕ್ಕೆ ಬೇವಿನ ಸೊಪ್ಪನ್ನು ಕಟ್ಟಿ ಉರಿ ಬಿಸಿಲಿನಲ್ಲಿ ರಸ್ತೆಯಲ್ಲಿ ಮೆರವಣಿಗೆ ಸಹ ಮಾಡಿದ್ದಾರೆ. ಇಷ್ಟೇ ಅಲ್ಲದೇ ಸಾರ್ವಜನಿಕವಾಗಿ ಪ್ರಾಣಿಬಲಿ ಸಹ ನಡೆಸಲಾಗಿದೆ.

    ಜಿಲ್ಲೆಯ ಖಾನಾಪುರ, ಗುಂಡಗುರ್ತಿ, ಬಿಜಾಸಪುರ ಸೇರಿದಂತೆ ಬಹುತೇಕ ಕಡೆ ಇದೆ ರೀತಿಯ ಆಚರಣೆ ನಡೆದಿದೆ. ಸುರಪುರ ಪಟ್ಟಣದಲ್ಲಿಯೆ ಇಂತಹ ಅನಿಷ್ಟ ಪದ್ಧತಿಗಳು ರಾಜಾರೋಷವಾಗಿ ನಡೆಯುತ್ತಿದ್ದರೂ ಜಿಲ್ಲಾಡಳಿತ ಮತ್ತು ತಾಲೂಕ ಆಡಳಿತ ಅಧಿಕಾರಿಗಳು ಕಣ್ಣಮುಚ್ಚಿ ಕುಳಿತ್ತಿರುವುದು ವಿಪರ್ಯಾಸದ ಸಂಗತಿ.

  • ಗಂಡು ಮಗುವಿಗೆ ಜನ್ಮ ನೀಡಿದ ಎರಡು ದಿನದ ಬಳಿಕ ಬಾಣಂತಿ ಸಾವು!

    ಗಂಡು ಮಗುವಿಗೆ ಜನ್ಮ ನೀಡಿದ ಎರಡು ದಿನದ ಬಳಿಕ ಬಾಣಂತಿ ಸಾವು!

    ಚಿಕ್ಕಮಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಎರಡು ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

    ಕಡೂರು ತಾಲೂಕಿನ ಅಂಚೆಚೋಮನಹಳ್ಳಿ ಗ್ರಾಮದ ಶೀಲಾ(22) ಮೃತ ದುರ್ದೈವಿ. ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತಳ ಸಂಬಂಧಿಕರು ಆರೋಪಿಸಿ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಮೃತಳ ಶವವನ್ನು ಪೊಲೀಸ್ ಠಾಣೆ ಮುಂದಿಟ್ಟು ಸಂಬಂಧಿಕರು ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ ಹಾಗೂ ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮದುವೆಯಾಗಿ ಮೂರು ವರ್ಷವಾಗಿದೆ. ಮೊದಲ ಮಗು ಹೆಣ್ಣಾಗಿದ್ದು, ಈಗ ಮುದ್ದಾದ ಗಂಡು ಮಗು ಜನಿಸಿದೆ. ಆದರೆ ವೈದ್ಯರ ನಿರ್ಲಕ್ಷ್ಯದಿಂದ ಮಗು ಅಮ್ಮನನ್ನು ಕಳೆದುಕೊಂಡಿದೆ ಹಾಗೂ ಪೋಷಕರು ಮಗಳನ್ನು ಕಳೆದುಕೊಂಡಿದ್ದೇವೆ ಎಂದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಗೋಳಾಡಿದ್ದಾರೆ.

    ಎರಡು ದಿನದ ಹಿಂದೆ ಡೆಲಿವರಿಯಾದ ಶೀಲಾಗೆ ತೀವ್ರವಾದ ರಕ್ತಸ್ರಾವ ಆಗುತ್ತಿತ್ತು. ನಂತರ ವೈದ್ಯರು ಬಾಣಂತಿಯನ್ನು ಶಿವಮೊಗ್ಗಕ್ಕೆ ಕರೆದೊಯ್ಯುವಂತೆ ಸೂಚಿಸಿದ್ದರು. ಬಾಣಂತಿಯನ್ನು ಶಿವಮೊಗ್ಗಕ್ಕೆ ಕರೆದೊಯ್ದು ಚಿಕಿತ್ಸೆಗೆ ಸಿದ್ಧತೆ ನಡೆಸಿಕೊಳ್ಳುವ ಮುನ್ನವೇ ಸಾವಿಗೀಡಾಗಿದ್ದಾರೆ. 22 ವರ್ಷದ ಯುವತಿ ಸಾವಿಗೆ ಕಡೂರು ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತಳ ಪೋಷಕರು ಆರೋಪಿಸಿ ವೈದ್ಯರ ವಿರುದ್ಧ ಪೊಲೀಸ್ ಠಾಣೆ ಮುಂದೆ ಕಣ್ಣೀರಿಡುತ್ತಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಅಕ್ಷಯ್, ಈಗಾಗಲೇ ಡಿ.ಎಚ್.ಓ ಜೊತೆ ಮಾತನಾಡಿದ್ದು, ತನಿಖೆ ಮಾಡುವುದಾಗಿ ತಿಳಿಸಿದ್ದಾರೆ. ತನಿಖೆಯ ರಿಪೋರ್ಟ್ ಬಂದ ಬಳಿಕ ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.