Tag: women

  • ಹೈ ಹೀಲ್ಸ್ ಧರಿಸಿ ವೇಗವಾಗಿ ಓಡಿದ ಮಹಿಳೆಯ ವೀಡಿಯೋ ವೈರಲ್

    ಹೈ ಹೀಲ್ಸ್ ಧರಿಸಿ ವೇಗವಾಗಿ ಓಡಿದ ಮಹಿಳೆಯ ವೀಡಿಯೋ ವೈರಲ್

    ಮಹಿಳೆಯರು ಹೈ ಹೀಲ್ಸ್ ಧರಿಸುವುದು ಸರ್ವೇಸಾಮಾನ್ಯ. ಹೀಲ್ಸ್ ಧರಿಸಿ ನಡೆಯಲು ಕಷ್ಟಪಡುವವರ ಮಧ್ಯೆ ಇಲ್ಲೊಬ್ಬರು ಮಹಿಳೆ ತಾವು ಧರಿಸಿರುವ ಪೆನ್ಸಿಲ್ ಹೀಲ್‍ನಲ್ಲಿ ವೇಗವಾಗಿ ಓಡಿ ಎಲ್ಲರನ್ನೂ ನಿಬ್ಬೆರಾಗುವಂತೆ ಮಾಡಿದ್ದಾರೆ. ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಮಹಿಳೆಯರು ತಾವು ಧರಿಸುವ ಬಟ್ಟೆ, ಆಭರಣ, ಚಪ್ಪಲಿಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಾರೆ. ಫ್ಯಾಷನ್ ಪ್ರಿಯರಾಗಿರುವ ಕೆಲವರು ತಾವು ಉದ್ದವಾಗಿ ಕಾಣಬೇಕೆಂಬ ಹಂಬಲದಿಂದ ಹೀಲ್ಸ್ ಧರಿಸುತ್ತಾರೆ. ಆದರೆ ಹೀಲ್ಸ್ ಧರಿಸಿದ ಮೇಲೆ ನಡೆದಾಡಲು ಕೆಲವರು ಕಷ್ಟಪಡುತ್ತಾರೆ. ಕೆಲವರು ಸಲಿಸಾಗಿ ನಡೆದು ತೋರಿಸುತ್ತಾರೆ. ಅಂತವರ ಮಧ್ಯೆ ಈ ವೀಡಿಯೋದಲ್ಲಿರುವ ಮಹಿಳೆ ಹೈ ಪೆನ್ಸಿಲ್ ಹೀಲ್ಸ್ ಧರಿಸಿ ಇಷ್ಟು ವೇಗವಾಗಿ ಓಡಿರುವುದು ಆಶ್ಚರ್ಯಕರವಾಗಿಸಿದೆ.

    https://twitter.com/thebedsideghoul/status/1359999472768610317

    ಟಿಕ್‍ಟಾಕ್ ಆ್ಯಪ್‍ನಲ್ಲಿ ಮಹಿಳೆಯೊಬ್ಬರು ಹೀಲ್ಸ್ ಧರಿಸಿ ಯಾವುದೇ ತೊಂದರೆಗೊಳಗಾಗದೇ ಸಲಿಸಾಗಿ ವೇಗವಾಗಿ ಓಡುವ ವೀಡಿಯೋ ಹಾಕಿಕೊಂಡಿದ್ದಾರೆ. ಇದನ್ನು ಗಮನಿಸಿರುವ ನೆಟ್ಟಿಗರು ಹಲವು ರೀತಿಯ ಕಾಮೆಂಟ್ ಮಾಡಿ ವೀಡಿಯೋ ವೈರಲ್ ಆಗುವಂತೆ ಮಾಡಿದ್ದಾರೆ.

  • ಮದುವೆಯಾಗಲು ಹೆಣ್ಣು ಸಿಕ್ತಿಲ್ಲ – ಯೋಗೇಶ್ವರ್ ಬಳಿ ಅಳಲು ತೋಡಿಕೊಂಡ ರೈತ

    ಮದುವೆಯಾಗಲು ಹೆಣ್ಣು ಸಿಕ್ತಿಲ್ಲ – ಯೋಗೇಶ್ವರ್ ಬಳಿ ಅಳಲು ತೋಡಿಕೊಂಡ ರೈತ

    – ನನ್ನದು ಮಾತ್ರವಲ್ಲ, ಇಡೀ ರೈತ ಯುವಕರ ಸಮಸ್ಯೆಯಿದು
    – ರೈತನನ್ನು ಮದುವೆಯಾದರೆ ಪ್ರೋತ್ಸಾಹ ಧನ ನೀಡಿ

    ಮಂಡ್ಯ: ಮದುವೆಯಾಗಲು ಹೆಣ್ಣು ನೀಡುತ್ತಿಲ್ಲ ಎಂದು ಸಚಿವ ಪಿ ಯೋಗೇಶ್ವರ್ ಬಳಿ ಯುವ ರೈತರೊಬ್ಬರು ತನ್ನ ಅಳಲನ್ನು ತೋಡಿಕೊಂಡಿದ್ದಾರೆ.

    ಲಾಕ್‍ಡೌನ್ ಸಂದರ್ಭದಲ್ಲಿ ಪಟ್ಟಣ ಪ್ರದೇಶದಲ್ಲಿ ವಾಸ ಮಾಡಲು ಸಾಧ್ಯವಾಗದೇ ಶೇ.75 ಜನರು ಹಳ್ಳಿಗಳಿಗೆ ವಾಪಸ್ ಬಂದಿದ್ದರು. ಈ ವೇಳೆ ಜನರು ಹಳ್ಳಿ ಲೈಫ್ ಸೂಪರ್, ರೈತನೇ ಗ್ರೇಟ್ ಎಂದು ಹೇಳುತ್ತಿದ್ದರು. ಆದರೆ ಲಾಕ್‍ಡೌನ್ ಮುಗಿದ ಬಳಿಕ ಹಳ್ಳಿ ಲೈಫ್‍ನ ಅನುಭವಿಸಲು ಇಷ್ಟ ಪಡುತ್ತಿಲ್ಲ ಹಾಗೂ ರೈತನಿಗೆ ಹೆಣ್ಣು ಕೊಡಲು ಹೆಣ್ಣೆತ್ತವರು ಮೂಗು ಮುರಿಯುವಂತಹ ಸ್ಥಿತಿ ನಿರ್ಮಾಣವಾಗಿದೆ.

    ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ರೈತ ಪ್ರವೀಣ್ ಅವರು ರೈತರಿಗೆ ಹೆಣ್ಣು ಕೊಡುತ್ತಿಲ್ಲ ಎಂದು ಸಚಿವ ಯೋಗೇಶ್ವರ್ ಹತ್ತಿರ ತನ್ನ ಕಣ್ಣೀರಿನ ಕಹಾನಿಯನ್ನು ಹೇಳಿಕೊಂಡಿದ್ದಾರೆ. ಸರ್ ನಾನೊಬ್ಬ 28 ವರ್ಷದ ಯುವಕ, ನಾನು ರೇಷ್ಮೆ ಕೃಷಿಯನ್ನು ಮಾಡುತ್ತೇನೆ. ಅದರಿಂದ ಒಳ್ಳೆಯ ಸಂಪಾದನೆಯನ್ನು ಮಾಡುತ್ತಿದ್ದೇನೆ. ಆದರೆ ನಾನು ಮದುವೆಯಾಗಲು ಹುಡುಗಿ ಕೇಳಲು ಹೋದರೆ, ನನಗೆ ಹುಡುಗಿ ಕೊಡುತ್ತಿಲ್ಲ. ನಾವು ರೈತರಿಗೆ ಕೊಡಲ್ಲ. ಸಿಟಿಯಲ್ಲಿ ಇದ್ದವರಿಗೆ ಹೆಣ್ಣು ಕೊಡುತ್ತೇವೆ ಎಂದು ಹೆಣ್ಣೆತ್ತವರು ಹೇಳುತ್ತಿದ್ದಾರೆ. ಇದು ನನ್ನೊಬ್ಬನ ಸಮಸ್ಯೆ ಮಾತ್ರವಲ್ಲ, ಇಡೀ ರೈತ ಯುವಕರ ಸಮಸ್ಯೆ ಎಂದು ಹೇಳಿದ್ದಾರೆ.

    ಈ ಸಮಸ್ಯೆ ಹೋಗಲಾಡಿಸಲು ಒಂದು ಕಾಯ್ದೆ ತನ್ನಿ. ಅಂತರ್ಜಾತಿ ಮದುವೆಯಾದವರಿಗೆ 2 ಲಕ್ಷ, 3 ಲಕ್ಷ ಎಂದು ಕೊಡುತ್ತೀರಾ. ಅದೇ ರೀತಿ ರೈತನನ್ನು ಮದುವೆಯಾದರೆ ಅವರಿಗೆ ಹುಟ್ಟಿಗೆ ಹುಟ್ಟಿದ ಮಕ್ಕಳಿಗೆ ವಿಮೆ ಅಥವಾ ಪ್ರೋತ್ಸಾಹ ಧನ ನೀಡುವಂತಹ ಯೋಜನೆಗಳನ್ನು ತನ್ನಿ. ಈ ಬಗ್ಗೆ ಸಿಎಂ ಸರ್‍ಗೂ ಹೇಳಿ ಸರ್, ಇದೊಂದು ಒಳ್ಳೆಯ ಕೆಲಸ ಮಾಡಿ ಎಂದು ಪ್ರವೀಣ್ ಅವರು ಮನವಿ ಮಾಡಿಕೊಂಡಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸಿ.ಪಿ.ಯೋಗೇಶ್ವರ್, ಹೌದು ಅಣ್ಣ ನೀನು ಹೇಳುತ್ತಿರುವುದು ಸರಿ ಇದೆ. ಯೋಚನೆ ಮಾಡೋಣಾ ಇದು ಬಹಳ ಗಂಭೀರ ಸಮಸ್ಯೆ. ಈ ಬಗ್ಗೆ ನಾನು ಮಾತನಾಡುತ್ತೇನೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

  • ಹೆಲಿಕಾಪ್ಟರ್ ಲೋನ್‍ಗಾಗಿ ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ

    ಹೆಲಿಕಾಪ್ಟರ್ ಲೋನ್‍ಗಾಗಿ ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ

    ಭೋಪಾಲ್: ಮಹಿಳೆಯೊಬ್ಬರು ತನಗೆ ಹೆಲಿಕಾಪ್ಟರ್ ಖರೀದಿಗಾಗಿ ಲೋನ್ ಮತ್ತು ಅದರಲ್ಲಿ ಹಾರಾಟ ನಡೆಸಲು ಪರವಾನಿಗೆ ನೀಡಬೇಕೆಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಬಸಂತಿ ಬಾಯಿ ಲೋಹರ್ ಅವರು ಮಾಂಡ್ಸೌರ್ ಜಿಲ್ಲೆ, ಅಗರ್ ಗ್ರಾಮದಲ್ಲಿ ವಾಸಿಸುತ್ತಿದ್ದು. ಕಳೆದ ಕೆಲದಿನಗಳ ಹಿಂದೆ ತಮ್ಮ ಮಕ್ಕಳು ಬಸಂತಿ ಬಾಯಿ ಲೋಹರ್ ಅವರು ಜಮೀನಿಗೆ ಹೋಗುವ ರಸ್ತೆಯನ್ನು ಬಂದ್ ಮಾಡಿದ್ದಾರೆ. ಹಾಗಾಗಿ ರಾಷ್ಟ್ರಪತಿಗೆ ಪತ್ರ ಬರೆದು ಹೆಲಿಕಾಪ್ಟರ್ ಖರೀದಿಸಿ ಜಮೀನಿಗೆ ಹೋಗುವ ಉಪಾಯ ಮಾಡಿದ್ದಾರೆ.

    ಬಸಂತಿ ಬಾಯಿ ಲೋಹರ್ ಪತ್ರವನ್ನು ಹಿಂದಿಯಲ್ಲಿ ಬರೆದಿದ್ದು, ನನ್ನ ಮಕ್ಕಳಾದ ಲವ ಮತ್ತು ಕುಶ ಹಾಗೂ ಸ್ಥಳೀಯ ನಿವಾಸಿ ಪರಮಾನಂದ್ ಪಾಟಿದಾರ್ ಸೇರಿಕೊಂಡು ದಿನನಿತ್ಯ ನಾನೂ ಸಂಚರಿಸುವ ಜಮೀನಿನ ದಾರಿಯನ್ನು ಮುಚ್ಚಿದ್ದಾರೆ. ಹಾಗಾಗಿ ಜಮೀನಿಗೆ ಯಾವುದೇ ವಸ್ತುಗಳು ಮತ್ತು ದನಕರುಗಳನ್ನು ಕರೆದೊಯ್ಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಮುಕ್ತಿ ಹೊಂದಲು ಹೆಲಿಕಾಪ್ಟರ್ ಖರೀದಿಗೆ ಸಾಲ ಕೊಡುವಂತೆ ರಾಷ್ಟ್ರಪತಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

    ಜಮೀನಿನ ದಾರಿಯ ತಕರಾರನ್ನು ಸರಿಪಡಿಸುವಂತೆ ಮತ್ತೊಂದು ಪತ್ರ ಬರೆದಿರುವ ಬಸಂತಿ. ಈ ಪತ್ರವನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರದು ಸಮಸ್ಯೆ ಬಗೆಹರಿಸುವಂತೆ ಕೇಳಿಕೊಂಡಿದ್ದಾರೆ.

    ಮಾಂಡ್ಸೌರ್ ಜಿಲ್ಲೆಯ ಸ್ಥಳೀಯಾಡಳಿತ ಪತ್ರದ ಕುರಿತು ತನಿಖೆ ನಡೆಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ. ಪತ್ರ ವೈರಲ್ ಆಗುತ್ತಿದ್ದಂತೆ ಈ ಕುರಿತು ಕಂದಾಯ ಇಲಾಖೆ ಗಮನಹರಿಸಿದ್ದು ಜಿಲ್ಲಾ ತಾಹಶೀಲ್ದಾರ್ ಬಸಂತಿ ಅವರ ಮನೆಗೆ ತೆರಳಿ ಸ್ಥಳ ಪರಿಶೀಲಿಸಿದ್ದಾರೆ. ಆದರೆ ಅಲ್ಲಿ ಯಾವುದೇ ರೀತಿಯ ಸಮಸ್ಯೆ ಇರಲಿಲ್ಲ ಎಂದು ಜಿಲ್ಲಾಧಿಕಾರಿ ಮನೋಜ್ ಪುಷ್ಪ್ ತಿಳಿಸಿದ್ದಾರೆ.

  • ಇಬ್ಬರು ಯುವತಿಯರನ್ನ ಪ್ರೀತಿಸಿ ಒಂದೇ ಮಂಟಪದಲ್ಲಿ ಮದವೆಯಾದ ಪುಣ್ಯಾತ್ಮ..!

    ಇಬ್ಬರು ಯುವತಿಯರನ್ನ ಪ್ರೀತಿಸಿ ಒಂದೇ ಮಂಟಪದಲ್ಲಿ ಮದವೆಯಾದ ಪುಣ್ಯಾತ್ಮ..!

    – ಒಂದೇ ಮನೆಯಲ್ಲಿದ್ದಾರೆ ಮೂವರು

    ರಾಯ್ಪುರ: ಪ್ರೀತಿ ಮಾಡಿ ಮನೆಯವರನ್ನು ಒಪ್ಪಿಸಿ ಮದುವೆಯಾಗಲು ಕಷ್ಟಪಟ್ಟರೂ ಎಷ್ಟೋ ಜನರಿಗೆ ಆ ಪ್ರೀತಿ ಉಳಿಸಿಕೊಳ್ಳಲು ಆಗುವುದಿಲ್ಲ. ಆದರೆ ಇಲ್ಲೊಬ್ಬ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯುವಂತೆ ಒಂದೇ ಮಂಟಪದಲ್ಲಿ ಪ್ರೀತಿ ಮಾಡಿದ ಇಬ್ಬರು ಯುವತಿಯರನ್ನು ಅವರ ಕುಟುಂಬಸ್ಥರ ಮುಂದೆಯೇ ಮದುವೆಯಾಗಿ ಸುದ್ದಿಯಾಗಿದ್ದಾನೆ.

    ಹೌದು. ವ್ಯಕ್ತಿಯೊಬ್ಬ ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಯುವತಿಯರನ್ನು ಮದುವೆಯಾದ ಅಚ್ಚರಿಯ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ. ಜನವರಿ 5 ರಂದು ನಡೆದ ಈ ಮದುವೆಗೆ ಸುಮಾರು 600 ಜನರು ಸಾಕ್ಷಿಯಾಗಿದ್ದಾರೆ.

    ಬಸ್ತಾರ್ ಜಿಲ್ಲೆಯ ರೈತ ಮತ್ತು ಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದು ಮೌರ್ಯ(21), ಬುಡಕಟ್ಟು ಯುವತಿ ಸುಂದರಿ ಕಶ್ಯಪ್ ಅವರನ್ನು ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಫೋನ್ ಕರೆಯಲ್ಲಿ ಮಾತನಾಡುತ್ತಾ ಇವರ ಮಧ್ಯೆ ಪ್ರೀತಿ ಚಿಗುರಿ, ಈ ಜೋಡಿ ಮದುವೆಯಾಗಲು ನಿರ್ಧರಿಸಿದರು. ಆದರೆ ವಿಧಿ ಚಂದು ಸಂಬಂಧಿಕರ ಮದುವೆಯಲ್ಲಿ ಭೇಟಿಯಾಗಿದ್ದ ಹಸೀನಾಳನ್ನು ಮತ್ತೆ ಪ್ರೀತಿಸುವಂತೆ ಮಾಡಿತು.

    ಚಂದು ಈಗಾಗಲೇ ಒಬ್ಬರನ್ನು ಪ್ರೀತಿಸುತ್ತಿದ್ದಾರೆ ಎಂದು ತಿಳಿದ ಬಳಿಕ ಕೂಡ ಅದನ್ನು ಒಪ್ಪಿಕೊಂಡ ಹಸೀನಾ ತನ್ನೊಂದಿಗೆ ಫೋನ್ ಮೂಲಕ ಸಂಪರ್ಕದಲ್ಲಿರುವಂತೆ ಚಂದುವನ್ನು ಒತ್ತಾಯಿಸಿದಳು. ಹಸೀನಾ ಮತ್ತು ಸುಂದರಿ ಇಬ್ಬರೂ ಒಬ್ಬರಿಗೊಬ್ಬರು ಪರಸ್ಪರ ತಿಳಿದುಕೊಂಡ ಬಳಿಕ ನನ್ನೊಂದಿಗೆ ಸಂಬಂಧ ಹೊಂದಲು ಒಪ್ಪಿಕೊಂಡರು. ಹೀಗೆ ಮೂವರು ದೂರವಾಣಿ ಕರೆಯಲ್ಲಿಯೇ ಸಂಪರ್ಕ ಹೊಂದಿದ್ದೆವು. ಆದರೆ ಒಂದು ದಿನ ಹಸೀನಾ ನನ್ನೊಂದಿಗೆ ವಾಸಿಸಲು ನನ್ನ ಮನೆಗೆ ಬಂದಳು. ಇದನ್ನು ತಿಳಿದ ಸುಂದರಿ ಕೂಡ ನನ್ನ ಬಳಿ ಬಂದಳು. ಅಂದಿನಿಂದ ನಾವು ಒಂದೇ ಮನೆಯಲ್ಲಿ ಕುಟುಂಬದಂತೆ ವಾಸಿಸಲು ಆರಂಭಿಸಿದ್ದೇವೆ.

    ಇಬ್ಬರು ಮಹಿಳೆಯೊಂದಿಗೆ ಸಂಬಂಧ ಹೊಂದಿ ಒಂದೇ ಮನೆಯಲ್ಲಿ ವಾಸಿಸುವುದರ ಬಗ್ಗೆ ಗ್ರಾಮಸ್ಥರು ಪ್ರಶ್ನೆ ಮಾಡಲು ಆರಂಭಿಸಿದರು. ಹಾಗಾಗಿ ಇಬ್ಬರನ್ನು ಮದುವೆಯಾಗಲು ನಿರ್ಧರಿಸಿದೆ. ಇಬ್ಬರೂ ಮಹಿಳೆಯರೂ ನನ್ನನ್ನು ಪ್ರೀತಿಸುತ್ತಾರೆ. ಇಬ್ಬರಿಗೂ ನಾನು ದ್ರೋಹ ಮಾಡಲು ಆಗುವುದಿಲ್ಲ. ಅವರಿಬ್ಬರನ್ನು ಮದುವೆಯಾಗಿ ಶಾಶ್ವತವಾಗಿ ಇಬ್ಬರೊಟ್ಟಿಗೆ ವಾಸಿಸಲು ಒಪ್ಪಿರುವುದಾಗಿ ತಿಳಿಸಿದರು. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹಸೀನಾ ಅವರ ಕುಟುಂಬ ಸದಸ್ಯರು ಬಂದಾಗ, ಸುಂದರಿ ಕುಟುಂಬದ ಸದಸ್ಯರು ಸಮಾರಂಭದಿಂದ ಹಿಂದಿರುಗಿದರು. ಒಟ್ಟಾರೆಯಾಗಿ ನಾವು ಮೂವರು ಕೂಡ ರೈತರಾಗಿ ಕೆಲಸ ಮಾಡುವುದರ ಮೂಲಕ ಜೀವನವನ್ನು ಸಂತೋಷದಿಂದ ನಡೆಸುತ್ತೇವೆ ಎಂದು ಚಂದು ಹೇಳಿದ್ದಾರೆ.

  • ಧರ್ಮ ಪ್ರಚಾರದ ಹೆಸರಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ- ಚರ್ಚ್ ಪಾದ್ರಿ ಅರೆಸ್ಟ್

    ಧರ್ಮ ಪ್ರಚಾರದ ಹೆಸರಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ- ಚರ್ಚ್ ಪಾದ್ರಿ ಅರೆಸ್ಟ್

    – ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ ಪಾದ್ರಿ

    ಬಳ್ಳಾರಿ: ಮಹಿಳೆಯರಿಗೆ ವಂಚಿಸಿದ್ದ ಚರ್ಚ್ ಪಾದ್ರಿ ರವಿಕುಮಾರ್ ಕೊನೆಗೂ ಅಂದರ್ ಆಗಿದ್ದಾನೆ. ಧರ್ಮ ಪ್ರಚಾರದ ಹೆಸರಲ್ಲಿ ಮಹಿಳೆಯರಿಗೆ ವಂಚನೆ ಹಾಗೂ ಲೈಂಗಿಕ ದೌರ್ಜನ್ಯ ಮಾಡಿದ ಹಿನ್ನೆಲೆಯಲ್ಲಿ ರವಿಕುಮಾರ್ ನನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

    ನಗರದ ಲಿವಿಂಗ್ ವಾಟರ್ ಚರ್ಚ್‍ನ ಪಾದ್ರಿಯಾಗಿದ್ದ ರವಿ ಕುಮಾರ್, ಮಹಿಳೆಯರನ್ನು ಮರಳು ಮಾಡಿ ಹಣ ಪಡೆದು ವಂಚಿಸಿದ್ದಾನೆ. ಅಲ್ಲದೆ ಅತ್ಯಾಚಾರವನ್ನೂ ಎಸಗಿದ್ದಾನೆ. ಈ ಕುರಿತು ಇದೀಗ ಇಬ್ಬರು ಮಹಿಳೆಯರು ದೂರು ನೀಡಿದ್ದು, ದೂರಿನ ಆಧಾರದ ಮೇರೆಗೆ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

    ಕಳೆದ ಒಂದು ವಾರದ ಹಿಂದೆ ಬಳ್ಳಾರಿಯ ಯುವತಿ ಶ್ವೇತಾಳನ್ನು ಅಪಹರಿಸಿದ್ದಾನೆ ಎಂದು ಡಿಸೆಂಬರ್ 24ರಂದು ಪಾಲಕರು ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಬಳಿಕ ಶ್ವೇತಾ ಸ್ವತಃ ನಾನೇ ರವಿ ಜೊತೆಯಲ್ಲಿ ಬಂದಿರುವೆ, ನಾನು ಅವಳ ಜೊತೆ ಮದುವೆ ಆಗಿರುವುದಾಗಿ ರವಿ ಹೇಳಿರುವ ವಿಡಿಯೋವನ್ನು ಶ್ವೇತಾ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಳು.

    ಬಳಿಕ ಪಾದ್ರಿ ರವಿ ವಿರುದ್ಧ ಮತ್ತಿಬ್ಬರು ಯುವತಿಯರು ದೂರು ನೀಡಿದ್ದು, ಧರ್ಮದ ಹೆಸರಲ್ಲಿ ಸುಮಾರು 9 ಲಕ್ಷ ರೂ. ಹಣ ದೋಚಿರುವ ಬಗ್ಗೆ ಒಬ್ಬರು, ಇನ್ನೊಬ್ಬ ಯುವತಿ ಅತ್ಯಾಚಾರ ಮಾಡಿದ್ದಾನೆ ಎಂದು ದೂರು ದಾಖಸಿದ್ದಾರೆ. ಇಬ್ಬರು ಮಹಿಳೆಯರು ಪಾದ್ರಿ ವಿರುದ್ಧ ವಂಚನೆ ಹಾಗೂ ಲೈಂಗಿಕ ಕಿರುಕುಳದ ದೂರು ದಾಖಲು ಮಾಡಿದ್ದರು. ಮಹಿಳೆಯರ ದೂರು ಹಿನ್ನೆಲೆ ಪಾದ್ರಿ ವಿರುದ್ಧ ಎರಡು ಪ್ರತ್ಯೇಕ ಎಫ್‍ಐಆರ್ ದಾಖಲಾಗಿತ್ತು.

    ಎಫ್‍ಐಆರ್ ದಾಖಲಿಸಿದ ಬೆನ್ನಲ್ಲೇ ಪಾದ್ರಿ ರವಿಕುಮಾರ್ ಹುಡುಕಾಟಕ್ಕೆ ಪೋಲೀಸರು ಬಲೆ ಬೀಸಿದ್ದರು. ಬಳಿಕ ಶ್ವೇತಾಳ ಬೆಂಗಳೂರಿನ ಸ್ನೇಹಿತರ ಮನೆಯಲ್ಲಿ ಅಡಗಿ ಕುಳಿತಿದ್ದ ಆರೋಪಿ ಪಾದ್ರಿ ರವಿಯನ್ನು ಬಂಧಿಸಿ ಬಳ್ಳಾರಿಗೆ ಕರೆತರಲಾಗಿದೆ. ಆರೋಪಿಯನ್ನು ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ ವೇಳೆ ಶ್ವೇತಾ ಮನೆಯವರು ಹಾಗೂ ಮಹಿಳಾ ಸಂಘಟನೆಯ ಕಲ ಮಹಿಳೆಯರು ರವಿಗೆ ಚೀಮಾರಿ ಹಾಕಿದ್ದಾರೆ. ಮಹಿಳೆಯೊಬ್ಬರು ತನ್ನ ಕೈಯಲ್ಲಿದ್ದ ಮೊಬೈಲ್ ಒಗೆದು ಆಕ್ರೋಶ ಹೊರ ಹಾಕಿದ್ದಾರೆ. ಬಳಿಕ ಮಧ್ಯ ಪ್ರವೇಶ ಮಾಡಿದ ಪೊಲೀಸರು ರವಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.

  • ನಕಲಿ ಬೆತ್ತಲೆ ಫೋಟೋ ಇಟ್ಕೊಂಡು 100 ಮಹಿಳೆಯರಿಗೆ ಬ್ಲ್ಯಾಕ್ ಮೇಲ್

    ನಕಲಿ ಬೆತ್ತಲೆ ಫೋಟೋ ಇಟ್ಕೊಂಡು 100 ಮಹಿಳೆಯರಿಗೆ ಬ್ಲ್ಯಾಕ್ ಮೇಲ್

    – ಇನ್‍ಸ್ಟಾ ಖಾತೆಯ ಪ್ರೊಫೈಲ್ ಫೋಟೋ ಬಳಸಿ ಕೃತ್ಯ
    – ಇನ್‍ಸ್ಟಾದಲ್ಲೇ ಮೆಸೇಜ್ ಮಾಡಿ ಮಹಿಳೆಯರಿಗೆ ಬೆದರಿಕೆ

    ನವದೆಹಲಿ: ನಕಲಿ ಬೆತ್ತಲೆ ಫೋಟೋ ತೋರಿಸಿ ಬರೋಬ್ಬರಿ ನೂರಕ್ಕೂ ಹೆಚ್ಚು ಮಹಿಳೆಯರಿಗೆ ಬ್ಲ್ಯಾಕ್‍ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ದಕ್ಷಿಣ ದೆಹಲಿಯ ನಿವಾಸಿ ಸುಮಿತ್ ಝಾ ನಕಲಿ ಬೆತ್ತಲೆ ಫೊಟೋಗಳನ್ನು ಇಟ್ಟುಕೊಂಡು ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ 100ಕ್ಕೂ ಹೆಚ್ಚು ಮಹಿಳೆಯರಿಗೆ ಬೆದರಿಕೆ ಹಾಕಿದ್ದಾನೆ. ಇತ್ತೀಚೆಗೆ ಇಂತಹದ್ದೇ ಪ್ರಕರಣದಲ್ಲಿ ಸುಮಿತ್ ಝಾನನ್ನು ಛತ್ತಿಸ್‍ಗಡಲ್ಲಿ ಬಂಧಿಸಲಾಗಿತ್ತು. ಆರೋಪಿ ತಪ್ಪೊಪ್ಪಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಈತ ಮಹಿಳೆಯರ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬೆದರಿಸುತ್ತಿದ್ದ. ಹೀಗೆ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದ ಮೊಬೈಲ್‍ನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಮಹಿಳೆ ನೀಡಿದ ದೂರಿನ ಆಧಾರದ ಮೇರೆಗೆ ಸುಲಿಗೆ, ಲೈಂಗಿಕ ಕಿರುಕುಳ ಹಾಗೂ ಕ್ರಿಮಿನಲ್ ಬೆದರಿಕೆ ಪ್ರಕರಣವನ್ನು ದಾಖಲಿಸಲಾಗಿದೆ. ನನ್ನ ಇನ್‍ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಿದ್ದು, ಹಣ ನೀಡದಿದ್ದರೆ ನಿನ್ನ ನಗ್ನ ಚಿತ್ರಗಳನ್ನು ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

    ಮಹಿಳೆಯ ಇನ್‍ಸ್ಟಾಗ್ರಾಂ ಖಾತೆ ಹ್ಯಾಕ್ ಮಾಡಿರುವುದು ಮಾತ್ರವಲ್ಲದೆ ಆಕೆಯ ಖಾತೆಯ ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿದ್ದವರಿಗೂ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ದೆಹಲಿಯ ಸೈಬರ್ ಸೆಲ್ ಪೊಲೀಸರು ಈ ಕುರಿತು ವಿಸ್ತೃತ ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಇಂಟರ್‍ನೆಟ್ ಕಾಲಿಂಗ್ ಸೌಲಭ್ಯ ಬಳಸಿ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದ ಎಂಬುದು ಈ ವೇಳೆ ತಿಳಿದಿದೆ.

    ಸೈಬರ್ ಸೆಲ್ ಪೊಲೀಸರು ಇನ್‍ಸ್ಟಾಗ್ರಾಮ್‍ನಿಂದ ಟೆಕ್ನಿಕಲ್ ವಿವರಗಳು ಹಾಗೂ ಟೆಲಿಕಾಂ ಕಂಪನಿ ನೀಡಿದ ಮಾಹಿತಿಯನ್ನಾಧರಿಸಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ.

    ಆರೋಪಿ ಮಹಿಳೆಯರ ಇನ್‍ಸ್ಟಾಗ್ರಾಮ್ ಖಾತೆಯಲ್ಲಿನ ಪ್ರೊಫೈಲ್ ಫೋಟೋ ಬಳಸಿ, ಅವುಗಳನ್ನು ಮಾರ್ಫ್ ಮಾಡಿ, ನಕಲಿ ಪ್ರೊಫೈಲ್ ಫೋಟೋ ಕ್ರಿಯೇಟ್ ಮಾಡುತ್ತಿದ್ದ. ಬಳಿಕ ಇದೇ ಫೋಟೋ ಇಟ್ಟುಕೊಂಡು ಮಹಿಳೆಯರಿಗೆ ಬೆದರಿಕೆ ಒಡ್ಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ.

    ಆರೋಪಿ ಬಳಿಕ ಮಹಿಳೆಯರಿಗೆ ಮೆಸೇಜ್ ಮಾಡಿ, ನಿಮ್ಮ ಬೆತ್ತಲೆ ಫೋಟೋ ನನ್ನ ಬಳಿ ಇದೆ ಎಂದು ಬೆದರಿಕೆ ಸಂದೇಶ ಕಳುಹಿಸುತ್ತಿದ್ದ. ಅವರು ಪ್ರೂಫ್ ಕೇಳಿದ ಬಳಿಕ ಮಾರ್ಫ್ ಮಾಡಿದ ಫೋಟೋಗಳನ್ನು ಕಳುಹಿಸುತ್ತಿದ್ದ. ಬಳಿಕ ಬೆದರಿಕೆ ಹಾಕುತ್ತಿದ್ದ. ಆರೋಪಿ ಝಾ ಪ್ರಸ್ತುತ ನೋಯ್ಡಾದಲ್ಲಿ ವಾಸಿಸುತ್ತಿದ್ದು, ಪದವೀಧರನಾಗಿದ್ದಾನೆ. ಫೀಶಿಂಗ್ ತಂತ್ರಗಳನ್ನು ಕಲಿತಿದ್ದಾನೆ ಎಂದು ಪೊಲೀಸರು ವಿವರಿಸಿದ್ದಾರೆ.

  • ಪಕ್ಷ ಗೆದ್ದರೆ ಗೃಹಿಣಿಯರ ಮನೆಗೆಲಸಕ್ಕೂ ವೇತನ – ಕಮಲ್ ಹಾಸನ್ ಘೋಷಣೆ

    ಪಕ್ಷ ಗೆದ್ದರೆ ಗೃಹಿಣಿಯರ ಮನೆಗೆಲಸಕ್ಕೂ ವೇತನ – ಕಮಲ್ ಹಾಸನ್ ಘೋಷಣೆ

    ಚೆನ್ನೈ: ತಮ್ಮ ಪಕ್ಷ ಮಕ್ಕಳ್ ನೀಧಿ ಮೈಯ್ಯಮ್(ಎಂಎನ್‍ಎಂ) ಪಕ್ಷ ಗೆದ್ದರೆ ಗೃಹಿಣಿಯರ ಮನೆಗೆಲಸಕ್ಕೂ ವೇತನ ನೀಡುವುದಾಗಿ ನಟ ಕಮಲ್ ಹಾಸನ್ ಘೊಷಣೆ ಮಾಡಿದ್ದಾರೆ.

    ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ 7 ಅಂಶಗಳುಳ್ಳ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಅವರು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಒಂದು ವೇಳೆ 2021ರ ಚುನಾವಣೆಯಲ್ಲಿ ತಮ್ಮ ಪಕ್ಷ ಜಯಗಳಿಸಿದರೆ ಮನೆಯ ಜವಾಬ್ದಾರಿ ನಿರ್ವಹಿಸುವ ಮಹಿಳೆಯರಿಗೂ ಭತ್ಯೆ ನೀಡುವುದಾಗಿ ಭರವಸೆ ನೀಡಿದ್ದಾರೆ.

    ಮನೆಯನ್ನು ನಿಭಾಯಿಸುವ ಗೃಹಿಣಿಯರ ಗೌರವವನ್ನು ಹೆಚ್ಚಿಸಲು ಅವರಿಗೆ ಈ ವೇತನ ನೀಡಲಾಗುವುದು. ಅಲ್ಲದೆ ಮನೆಯ ಎಲ್ಲಾ ಮಂದಿಗೆ ಕಂಪ್ಯೂಟರ್ ಜೊತೆ ಅತಿ ವೇಗದ ಇಂಟರ್ನೆಟ್ ಆಶ್ವಾಸನೆ ಪ್ರಣಾಳಿಕೆಯ ಪ್ರಮುಖ ಅಂಶಗಳಾಗಿವೆ.

    ಬಡತನ ರೇಖೆಗಿಂತ ಕೆಳಗಿನವರ ಆರ್ಥಿಕ ಉನ್ನತೀಕರಣಕ್ಕೆ ತಮ್ಮ ಪಕ್ಷ ಕ್ರಮ ಕೈಗೊಳ್ಳಲಿದೆ. ಗ್ರಾಮಗಳಲ್ಲಿ ರೈತರಿಗೆ ವಿಶ್ವದರ್ಜೆಯ ಶೀತಲೀಕರಣ ವ್ಯವಸ್ಥೆ, ಸಾವಯವ ಕೃಷಿಗೆ ಒತ್ತು ನೀಡುವುದಾಗಿ ಕಮಲ್ ಹಾಸನ್ ಘೋಷಿಸಿದ್ದಾರೆ.

  • ರೈತರ ಸಾಲಮನ್ನಾ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ಹೆಚ್‍ಡಿಕೆ

    ರೈತರ ಸಾಲಮನ್ನಾ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ಹೆಚ್‍ಡಿಕೆ

    ಬೆಂಗಳೂರು: ರೈತರ ಸಾಲ ಮನ್ನಾ ಮಾಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದು, ರೈತರ ಸಾಲ ಮನ್ನಾ ಮಾಡುವ ಬದಲು ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡಿದ್ದರೆ ಮಹಿಳೆಯರು ಜೆಡಿಎಸ್ ಕೈ ಹಿಡಿಯುತ್ತಿದ್ದರು ಎಂದು ತಿಳಿಸಿದರು.

    ನಗರದ ಪಕ್ಷದ ಕಚೇರಿ ಆವರಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ಮಾಡಿದ್ದಕ್ಕೆ ರೈತರಿಗೆ ಅನುಕೂಲವಾಯಿತು. ಆದರೆ ರೈತರು ನಮ್ಮನ್ನು ನೆನೆಯಲಿಲ್ಲ. ರೈತರ 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡುವ ಬದಲು, ಸ್ತ್ರೀ ಶಕ್ತಿ ಸಂಘಗಳದ್ದು ಕೇವಲ 1 ಸಾವಿರ ಕೋಟಿ ರೂ. ಮಾತ್ರ ಇತ್ತು. ಇದನ್ನು ಮನ್ನಾ ಮಾಡಿದ್ದರೆ ಬಹುಷಃ ಎಲ್ಲ ಮಹಿಳೆಯರು ನನ್ನ ಜೊತೆ ನಿಲ್ಲುತ್ತಿದ್ದರೆನೋ ಎಂದು ಬೇಸರ ವ್ಯಕ್ತಡಪಸಿದರು.

    ಹೋದ ಕಡೆಯಲ್ಲೆಲ್ಲ ನನಗೆ 1.50, 2 ಲಕ್ಷ ಸಾಲ ಮನ್ನಾ ಆಗಿದೆ ಎಂದು ಹೋದ ಕಡೆಯಲ್ಲೆಲ್ಲ ಹೇಳುತ್ತಾರೆ. ಆದರೆ ಮತ ಹಾಕುವಾಗ ಮಾತ್ರ ಜೆಡಿಎಸ್ ಪಕ್ಷವನ್ನು ಮರೆಯುತ್ತಾರೆ. ಇದೀಗ ಹಲೆವೆ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಹೀಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಸಾಲ ಮನ್ನಾ ಮಾಡಿದೆ. ಆದರೆ ರೈತರು ಮಾತ್ರ ನಮಗೆ ಮತ ಹಾಕಲಿಲ್ಲ ಎಂದರು.

    ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ರೈತರ ಕುಟುಂಬಗಳಿಗೆ 50 ಸಾವಿರ, 1 ಲಕ್ಷ ರೂ. ಪರಿಹಾರವನ್ನು ಪಕ್ಷದಿಂದ ನೀಡಿದೆವು. ಚುನಾವಣೆ ಸಂದರ್ಭದಲ್ಲಿ ನೀಡುವ 5 ಸಾವಿರ ರೂ.ಗೆ ಮತ ಹಾಕುತ್ತಾರೆ. ಆದರೆ ರೈತರ ಕುಟುಂಬ ಕಷ್ಟದಲ್ಲಿದೆ ಎಂದು ಪರಿಹಾರ ನೀಡಿದರೆ ನಮಗೆ ಮತ ಹಾಕಲ್ಲ ಎಂದು ತಿಳಿಸಿದರು.

  • 200 ಮಹಿಳೆಯರಿಗೆ ಅಶ್ಲೀಲ ಫೋಟೋ ರವಾನಿಸಿದ್ದ ಚಪಲಚನ್ನಿಗರಾಯ ಅರೆಸ್ಟ್

    200 ಮಹಿಳೆಯರಿಗೆ ಅಶ್ಲೀಲ ಫೋಟೋ ರವಾನಿಸಿದ್ದ ಚಪಲಚನ್ನಿಗರಾಯ ಅರೆಸ್ಟ್

    ಚಿತ್ರದುರ್ಗ: ಮಹಿಳೆಯರ ಮೊಬೈಲ್ ನಂಬರ್ ಸಂಗ್ರಹಿಸಿ ಅವರ ವಾಟ್ಸಪ್‍ಗೆ ಅಶ್ಲೀಲ ಫೋಟೋ ಹಾಗೂ ಸಂದೇಶ ರವಾನಿಸುತ್ತಿದ್ದ 55 ವರ್ಷದ ವ್ಯಕ್ತಿಯೋರ್ವನನ್ನು ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತ್ಯಾಗರಾಜ ನಗರದ ಓ.ರಾಮಕೃಷ್ಣ (54) ಎಂಬ ವ್ಯಕ್ತಿಯು ಸುಮಾರು 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೊ ಸಂದೇಶ ಕಳಿಸಿದ್ದಾನೆಂಬ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಿದ ಚಳ್ಳಕೆರೆ ಪೊಲೀಸರು ರಾಮಕೃಷ್ಣನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    ಬಂಧನಕ್ಕೊಳಪಟ್ಟಿರುವ ರಾಮಕೃಷ್ಣ, ಸುಮಾರು 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿರುವುದಾಗಿ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಆದರೆ ಮರ್ಯಾದೆಗೆ ಅಂಜಿ ಯಾರೂ ದೂರು ನೀಡಿರಲಿಲ್ಲ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಸಾರ್ವಜನಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಕಾರ್ಯಪ್ರವೃತ್ತರಾದ ಚಳ್ಳಕೆರೆ ಪೊಲೀಸರು ಆತನ ಮೊಬೈಲ್ ಟವರ್ ಲೊಕೇಶನ್ ಪತ್ತೆಹಚ್ಚಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮಹಿಳೆಯರಿಗೆ ಆಗುತ್ತಿದ್ದ ಕಿರುಕುಳ ತಪ್ಪಿಸಿದಂತಾಗಿದೆ. ಅಲ್ಲದೆ ಈತನಿಂದ ಸಂಕಷ್ಟಕ್ಕೀಡಾಗಿದ್ದ ಮಹಿಳೆಯರು ನಿಟ್ಟಸಿರು ಬಿಡುವಂತಾಗಿದೆ.

  • ನಡುರಸ್ತೆಯಲ್ಲೇ ಕಾಂಗ್ರೆಸ್ ಮುಖಂಡನ ಶರ್ಟ್ ಬಿಚ್ಚಿ ಥಳಿಸಿದ ಮಹಿಳೆಯರು

    ನಡುರಸ್ತೆಯಲ್ಲೇ ಕಾಂಗ್ರೆಸ್ ಮುಖಂಡನ ಶರ್ಟ್ ಬಿಚ್ಚಿ ಥಳಿಸಿದ ಮಹಿಳೆಯರು

    – ಮಹಿಳೆಯರ ವಿರುದ್ಧ ದೂರು ದಾಖಲಿಸಿದ ಮುಖಂಡ

    ಲಕ್ನೋ: ಕಾಂಗ್ರೆಸ್ ಜಿಲ್ಲಾಧ್ಯಕ್ಷರೊಬ್ಬರನ್ನ ಮಹಿಳೆಯರು ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಜಲೌನ್ ಜಿಲ್ಲಾಧ್ಯಕ್ಷ ಅನುಜ್ ಮಿಶ್ರಾ ಹಲ್ಲೆಗೊಳಗಾದ ಮುಖಂಡ.

    ಮಹಿಳೆಯರು ಅನುಜ್ ತಮ್ಮ ಜೊತೆ ಫೋನ್ ನಲ್ಲಿ ಅಶ್ಲೀಲವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇತ್ತ ಘಟನೆಯ ಬಳಿಕ ಪ್ರತಿಕ್ರಿಯಿಸಿರುವ ಅನುಜ್ ಮಿಶ್ರಾ, ನನ್ನದು ಕಟ್ಟಡ ಉಪಕರಣಗಳ ಅಂಗಡಿ ಇದೆ. ಈ ಇಬ್ಬರು ಮಹಿಳೆಯರು ನಮ್ಮ ಅಂಗಡಿಯಿಂದ ಒಂದೂವರೆಯಿಂದ ಎರಡು ಲಕ್ಷ ರೂ. ಮೌಲ್ಯದ ವಸ್ತುಗಳನ್ನ ಖರೀದಿಸಿ ಹಣ ಪಾವತಿಸಿಲ್ಲ. ಹಣ ನೀಡುವಂತೆ ಹೇಳಿದ್ದಕ್ಕೆ ಸುಳ್ಳು ಆರೋಪಗಳನ್ನ ಮಾಡಿದ್ದಾರೆ ಎಂದು ಹೇಳಿದ್ದಾರೆ.

    ಅನುಜ್ ಮಿಶ್ರಾ ಮಹಿಳೆಯರಿಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಮಹಿಳೆಯರಿಬ್ಬರಿಗೂ ಸೂಚನೆ ನೀಡಲಾಗಿದೆ. ಸದ್ಯ ತನಿಖೆ ನಡೆಯುತ್ತಿದೆ ಎಂದು ಇನ್‍ಸ್ಪೆಕ್ಟರ್ ಸುಧಾಕರ್ ಮಿಶ್ರಾ ಹೇಳಿದ್ದಾರೆ.