Tag: women

  • ಆಹಾರ ಕಿಟ್‍ಗಾಗಿ ಬಿಜೆಪಿ ಶಾಸಕನ ಮನೆ ಮುಂದೆ ಜಮಾಯಿಸಿದ ಜನ

    ಆಹಾರ ಕಿಟ್‍ಗಾಗಿ ಬಿಜೆಪಿ ಶಾಸಕನ ಮನೆ ಮುಂದೆ ಜಮಾಯಿಸಿದ ಜನ

    ಹುಬ್ಬಳ್ಳಿ: ಆಹಾರ ಕಿಟ್ ನೀಡುವಂತೆ ಆಗ್ರಹಿಸಿ ಬಿಜೆಪಿ ಶಾಸಕರ ಮನೆ ಮುಂದೆ ಜನಸ್ತೋಮವೇ ನೆರೆದಿದ್ದ ಪ್ರಸಂಗ ಇಂದು ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಕಂಡು ಬಂದಿತು.

    ಕಲಘಟಗಿ ಮತಕ್ಷೇತ್ರದ ಶಾಸಕ ಸಿ.ಎಂ.ನಿಂಬಣ್ಣವರ ಮನೆ ಮುಂದೆ ಕಲಘಟಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ನೂರಾರು ಜನರು ಆಹಾರ ಕಿಟ್ ನೀಡುವಂತೆ ಆಗ್ರಹಿಸಿ ಜಮಾಯಿಸಿದ್ದರು. ಈ ವೇಳೆ ಮಹಿಳೆಯರು ಯಾವುದೇ ಸಾಮಾಜಿಕ ಕಾಯ್ದುಕೊಳ್ಳಲೇ ಇಲ್ಲ.

    ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ವಿತರಣೆ ಮಾಡಲು ನೀಡಿದ ಕಿಟ್‍ಗಳನ್ನು ಶಾಸಕರು ಬಿಜೆಪಿ ಕಾರ್ಯಕರ್ತರಿಗೆ ನೀಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿತ್ತು. ಇದರಿಂದಾಗಿ ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕಿದರು. “ರಾಜ್ಯದ ವಿವಿಧೆಡೆ ಬಡವರಿಗೆ ಆಹಾರ ಕಿಟ್ ವಿತರಿಸುತ್ತಿದ್ದಾರೆ. ನಮಗೂ ಆಹಾರದ ಕಿಟ್‍ಗಳನ್ನು ಕೊಡಿ” ಎಂದು ಆಗ್ರಹಿಸಿದರು.

    ಪ್ರತಿಭಟನೆಗೆ ಮುಂದಾಗಿದ್ದ ಮಹಿಳೆಯರನ್ನು ಶಾಸಕರ ಸಹಾಯರು ತಡೆದು ವಾಪಸ್ ಕಳುಹಿಸಿದರು. ಇದರಿಂದಾಗಿ ಕೋಪಗೊಂಡ ಮಹಿಳೆಯರು, ಬಡವರಿಗೆ ವಿತರಿಸಲು ಸರ್ಕಾರ ಕೊಟ್ಟ ಆಹಾರದ ಕಿಟ್‍ಗಳನ್ನು ಇವರೇ ಹಂಚಿಕೊಂಡಿದ್ದಾರೆ. ಇವರಿಗೆ ಸರಿಯಾಗಿ ಪಾಠ ಕಲಿಸಬೇಕು ಎಂದು ಅಸಮಾಧಾನ ಹೊರಹಾಕಿ ತಮ್ಮ ಮನೆಗಳಿಗೆ ಹಿಂತಿರುಗಿದರು.

  • ವಲಸೆ ಕಾರ್ಮಿಕರ ಬದುಕು ಬೀದಿಗೆ – ನೆಲೆಯಿಲ್ಲದೆ ಸುಡುವ ಬಿಸಿಲಿನಲ್ಲಿ ನಲುಗಿಹೋದ ಬಾಣಂತಿ, ಮಕ್ಕಳು

    ವಲಸೆ ಕಾರ್ಮಿಕರ ಬದುಕು ಬೀದಿಗೆ – ನೆಲೆಯಿಲ್ಲದೆ ಸುಡುವ ಬಿಸಿಲಿನಲ್ಲಿ ನಲುಗಿಹೋದ ಬಾಣಂತಿ, ಮಕ್ಕಳು

    ಯಾದಗಿರಿ: ಹೊರರಾಜ್ಯಗಳಿಂದ ಬಂದ ವಲಸೆ ಕಾರ್ಮಿಕರ ಸ್ಥಿತಿ ಹೇಳತೀರದ್ದಾಗಿದೆ. ನೆಲೆಯಿಲ್ಲದೆ ಸುಡು ಬಿಸಿಲಿನಲ್ಲಿ ಬಾಣಂತಿ, ಮಕ್ಕಳು ಮತ್ತು ವೃದ್ಧರು ಸಾಯುತ್ತಿದ್ದಾರೆ. ತಿನ್ನಲು ಊಟವಿಲ್ಲದೆ ಕಳೆದ ನಾಲ್ಕು ದಿನದಿಂದ ಮಕ್ಕಳು ಬಿಸ್ಕತ್ತು ತಿಂದುಕೊಂಡು ಹೊಟ್ಟೆ ತುಂಬಿಸಿಕೊಳ್ಳುತ್ತಿರುವ ದೃಶ್ಯಗಳು ಮನಕಲಕುವಂತಿದೆ.

    ಕೊರೊನಾ ಲಾಕ್‍ಡೌನ್ ಹಿನ್ನೆಲೆ ಮಹಾರಾಷ್ಟ್ರದಿಂದ ಯಾದಗಿರಿಗೆ ಮತ್ತೆ ವಾಪಸ್ ಬಂದ ವಲಸೆ ಕೂಲಿ ಕಾರ್ಮಿಕರನ್ನು ಕೇಳುವವರೆ ಇಲ್ಲವಾಗಿದೆ. ವಲಸೆ ಕೂಲಿ ಕಾರ್ಮಿಕರು ಪಡುತ್ತಿರುವ ಕಷ್ಟ ನೋಡಿದರೆ ನರಕದಲ್ಲೂ ಈ ರೀತಿಯ ಶಿಕ್ಷೆ ಇರಲ್ಲಾ ಅನ್ನಸುತ್ತೆ. ಕೂಲಿ ಕಾರ್ಮಿಕರು ಅನುಭವಿಸುತ್ತಿರುವ ಯಾತನೆಯ ಒಂದೊಂದು ದೃಶ್ಯಗಳು ಕರಳು ಹಿಂಡುತ್ತೆ.

    ಹೊರ ರಾಜ್ಯಗಳಿಂದ ಬಂದ ವಲಸೆ ಕೂಲಿ ಕಾರ್ಮಿರನ್ನು ಕ್ವಾರೆಂಟೈನ್ ಮಾಡದೆ ಇರುವ ಕಾರಣ ಸುಡು ಬಿಸಿನಲ್ಲಿಯೇ ಛತ್ರಿಯ ಕೆಳಗೆ, ಮರದ ಕೆಳಗೆ ಮತ್ತು ದೇವಸ್ಥಾನದಲ್ಲಿ ವಲಸೆ ಕಾರ್ಮಿಕರು ವಾಸಿಸುತ್ತಿದ್ದಾರೆ. ಸುರಪುರ ತಾಲೂಕಿನ ಏವೂರ ತಾಂಡದ ಹೊರ ವಲಯದಲ್ಲಿ ಕಳೆದ ನಾಲ್ಕೈದು ದಿನದಿಂದ ಇಂತಹ ಮನಕಲಕುವ ದೃಶ್ಯಗಳು ಕಂಡು ಬರುತ್ತಿವೆ. ಇದನ್ನು ನೋಡಿದರೆ ಸುರಪುರ ತಹಶೀಲ್ದಾರ್ ಅವರಿಗೆ ಮಾನವೀಯತೆಯೆ ಮರೆತು ಹೋಗಿದ್ದಾರಾ ಎಂಬ ಪ್ರಶ್ನೆ ಕಾಡುತ್ತಿದೆ.

    ಮಹಾರಾಷ್ಟದಿಂದ ಬಂದ ಕೂಲಿ ಕಾರ್ಮಿಕರಿಗೆ ಕ್ವಾರೆಂಟನ್ ಮಾಡಲು ಸುರಪುರ ತಹಶೀಲ್ದಾರ್ ನಿಂಗಣ್ಣ ಅವರು ಉದ್ಧಟತನ ತೋರುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಕಳೆದ ನಾಲ್ಕೈದು ದಿನದಿಂದ ಕಾರ್ಮಿಕರು ಜಮೀನಲ್ಲಿ ಛತ್ರಿಯ ಕೇಳಗೆ ಜೀವ ಸಾಗಿಸುವಂತಾಗಿದೆ. ಅತ್ತ ಊರ ಒಳಗೆ ಹೋಗಲು ಆಗದೇ, ಇತ್ತ ತಹಶೀಲ್ದಾರ್ ಅವರ ನಿರ್ಲಕ್ಷ್ಯದಿಂದ ಕ್ವಾರೆಂಟನ್ ಆಗದೇ ಕಾರ್ಮಿಕರ ಸಂಕಷ್ಟಕ್ಕೆ ಸಿಲುಕಿದ್ದಾರೆ.

  • ಕರ್ನಾಟಕದಲ್ಲಿ ಹೆಣ್ಮಕ್ಕಳೇ ಸ್ಟ್ರಾಂಗ್ – ಕೊರೊನಾ ಸೋಂಕಿತರಲ್ಲಿ ಪುರುಷರೆಷ್ಟು ಗೊತ್ತಾ?

    ಕರ್ನಾಟಕದಲ್ಲಿ ಹೆಣ್ಮಕ್ಕಳೇ ಸ್ಟ್ರಾಂಗ್ – ಕೊರೊನಾ ಸೋಂಕಿತರಲ್ಲಿ ಪುರುಷರೆಷ್ಟು ಗೊತ್ತಾ?

    ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ತುತ್ತಾದವರ ಪೈಕಿ ಪುರಷರ ಸಂಖ್ಯೆಯೇ ಹೆಚ್ಚಾಗಿ ಇರುವುದು ಕಂಡು ಬಂದಿದೆ.

    ಕರ್ನಾಟಕದಲ್ಲಿ ಈವೆರಗೂ ಕಂಡ ಬಂದ 858 ಮಂದಿ ಕೊರೊನಾ ಸೋಂಕಿತರ ಪೈಕಿ, ಪುರಷರಿಗೆ ಹೆಚ್ಚು ಕೊರೊನಾ ಸೋಂಕು ಕಡಿಮೆ ಬಂದಿದೆ. ಆದರೆ ರಾಜ್ಯದಲ್ಲಿ ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂಬದನ್ನು ಮಹಿಳೆಯರು ಮತ್ತೊಮ್ಮೆ ಸಾಬೀತು ಪಡಿಸಿದ್ದು, ಮಹಿಳಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಕಡಿಮೆ ಇದೆ.

    ಈ ಅಂಕಿ ಅಂಶಗಳನ್ನು ನೋಡುವುದಾದರೆ. ಇಂದು ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಅಲ್ಲಿ ಬರೋಬ್ಬರಿ 858 ಜನರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಒಟ್ಟು 550 ಜನ ಪುರುಷರು ಸೋಂಕಿತರಾಗಿದರೇ 308 ಜನ ಮಹಿಳೆಯರು ಇದ್ದಾರೆ. ಈ ಮೂಲಕ ಕೊರೊನಾ ಮಹಾಮಾರಿಗೆ ಅತೀ ಹೆಚ್ಚು ಪರುಷರೇ ತುತ್ತಾಗಿದ್ದಾರೆ. ಮನೆಯಲ್ಲಿಯೇ ಇರುವ ಮಹಿಳೆಯರು ಸೇಫ್ ಆಗಿದ್ದಾರೆ.

    ಇಂದು ರಾಜ್ಯದಲ್ಲಿ 10 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 858ಕ್ಕೆ ಏರಿಕೆಯಾಗಿದೆ. ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ 1, ಹಾವೇರಿ 1 ಮತ್ತು ವಿಜಯಪುರದಲ್ಲಿ 1 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದೆ.

  • ಸೀಲ್‍ಡೌನ್ ಇದ್ರೂ ಡೋಂಟ್ ಕೇರ್ – ಪಾದರಾಯಪುರದಲ್ಲಿ 7 ಅಡಿ ಎತ್ತರದ ಕಾಂಪೌಂಡ್ ಹಾರಿದ ಮಹಿಳೆಯರು

    ಸೀಲ್‍ಡೌನ್ ಇದ್ರೂ ಡೋಂಟ್ ಕೇರ್ – ಪಾದರಾಯಪುರದಲ್ಲಿ 7 ಅಡಿ ಎತ್ತರದ ಕಾಂಪೌಂಡ್ ಹಾರಿದ ಮಹಿಳೆಯರು

    ಬೆಂಗಳೂರು: ಪಾದರಾಯನಪುರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೊರೊನಾ ಹಾಟ್‍ಸ್ಟಾಟ್ ಆಗುತ್ತಿದಿಯಾ ಎಂಬ ಆತಂಕ ಉಂಟಾಗಿದೆ. ಈ ಮದ್ಯೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಪಾದರಾಯನಪುರದಲ್ಲಿ ಮಹಿಳೆಯರು ಕಾಂಪೌಂಡ್ ಹಾರಿ ಹೋಗುತ್ತಿದ್ದಾರೆ.

    ಪಾದರಾಯನಪುರದಲ್ಲಿ ಸೀಲ್‍ಡೌನ್, ಲಾಕ್‍ಡೌನ್ ಇದ್ದರೂ ಮಹಿಳೆಯರು ಕೇರ್ ಮಾಡದೇ ಕಾಂಪೌಂಡ್ ಹಾರಿ ಬೇರೆ ಕಡೆ ಹೋಗುತ್ತಿದ್ದಾರೆ. ಪಾದರಾಯನಪುರದವನ್ನು ಸೀಲ್‍ಡೌನ್ ಮಾಡಲಾಗಿದ್ದು, ಏರಿಯಾದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ಆದರೆ ಇಂದು ಮಹಿಳೆಯರು ಪೊಲೀಸರ ಮಾತಿಗೂ ಬಲೆ ಕೊಡದೆ ಬ್ಯಾರಿಕೇಡ್ ದಾಟಲು ಯತ್ನಿಸಿದ್ದಾರೆ. ಆಗ ಪೊಲೀಸರು ಮಹಿಳೆಯರಿಗೆ ಹೋಗಲು ಅವಕಾಶ ಮಾಡಿಕೊಟ್ಟಿಲ್ಲ.

    ಕೊನೆಗೆ ಮಹಿಳೆಯರು ಏಳು ಅಡಿ ಕಾಂಪೌಂಡ್ ಹಾರಿ ನಂತರ ರೈಲ್ವೇ ಹಳಿ ದಾಟಿ ವಿಜಯನಗರದ ಕಡೆ ಹೋಗುತ್ತಿದ್ದಾರೆ. ಪೊಲೀಸರು ಮಹಿಳೆಯರಿಗೆ ಹಾರದಂತೆ ಎಚ್ಚರಿಸಿದ್ದಾರೆ. ಆದರೆ ಮಹಿಳೆಯರನ್ನು ಪೊಲೀಸರು ಮುಟ್ಟುವುದಿಲ್ಲ ಎಂಬುದನ್ನೇ ದುರಪಯೋಗ ಮಾಡಿಕೊಂಡ ಮಹಿಳೆಯರು ಕಾಂಪೌಂಡ್‍ ಹಾರಿ ಹೋಗಿದ್ದಾರೆ. ಸದ್ಯಕ್ಕೆ ಪೊಲೀಸರು ಪಾದರಾಯನಪುರದಲ್ಲಿ ಮಹಿಳಾ ಪೊಲೀಸ್ ನಿಯೋಜನೆ ಮುಂದಾಗಿದ್ದಾರೆ.

    ಪಾದರಾಯನಪುರಕ್ಕೆ ಆರೋಗ್ಯ ಇಲಾಖೆಯ ಅಸ್ತ್ರ:
    ಕೊರೊನಾ ಹಬ್ ಪಾದರಾಯನಪುರದಲ್ಲಿ ಇಂದು ಆರೋಗ್ಯ ಇಲಾಖೆ ಮೆಗಾ ಪ್ಲಾನ್ ಶುರು ಮಾಡುವ ಸಾಧ್ಯತೆಯಿದೆ. ಕೊರೊನಾ ರಣಕೇಕೆಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಪಾದರಾಯನಪುರದಲ್ಲೇ ಲ್ಯಾಬ್ ಸ್ಥಾಪಿಸಿ, ಮನೆ-ಮನೆ ಟೆಸ್ಟ್ ಮಾಡುವ ತಯಾರಿ ಮಾಡಿದೆ. ಆರೋಗ್ಯ ಸಮಸ್ಯೆ ಇದ್ದವರನ್ನ ಗುರುತಿಸಿ ಕೂಡಲೇ ಪರೀಕ್ಷೆ ಮಾಡಲಾಗುತ್ತದೆ. ಅಲ್ಲದೇ ಕೊರೊನಾ ಹಬ್ ಆಗಿರುವ 11 ನೇ ಕ್ರಾಸ್ ಮೇಲೆ ತೀವ್ರ ನಿಗಾವಹಿಸಲಾಗಿದೆ. ಹೀಗಾಗಿ 11ನೇ ಕ್ರಾಸಿನಲ್ಲಿ ಒಬ್ಬರನ್ನೂ ಬಿಡದೇ ರ‍್ಯಾಂಡಮ್ ಟೆಸ್ಟ್ ಮಾಡಲಾಗುತ್ತದೆ. ಒಟ್ಟು 45 ಸಾವಿರ ಜನರಿದ್ದು, ಎಲ್ಲರಿಗೂ ಕೊರೊನಾ ಪರೀಕ್ಷೆ ಮಾಡಲಾಗುತ್ತದೆ.

  • ಕಲ್ಲೆಸೆದು ಮದ್ಯದ ಅಂಗಡಿ ಬಂದ್ ಮಾಡಿಸಿದ ಮಹಿಳೆಯರು

    ಕಲ್ಲೆಸೆದು ಮದ್ಯದ ಅಂಗಡಿ ಬಂದ್ ಮಾಡಿಸಿದ ಮಹಿಳೆಯರು

    ಹಾವೇರಿ: ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ಮದ್ಯದ ಅಂಗಡಿಗಳ ಆರಂಭದ ದಿನವೇ ಮಹಿಳೆಯರು ಕಲ್ಲೆಸೆದು ಮದ್ಯದ ಅಂಗಡಿಗಳನ್ನ ಬಂದ್ ಮಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

    ಮೇ 4ರಂದು ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಒಂದು ಎಂಎಸ್‍ಐಎಲ್ ಮತ್ತು ಎರಡು ಎಂಆರ್‌ಪಿ ಮದ್ಯದ ಅಂಗಡಿಗಳಿಗೆ ಮಹಿಳೆಯರು ಕಲ್ಲೆಸೆದು ಕೆಲಕಾಲ ಅಂಗಡಿಗಳನ್ನ ಬಂದ್ ಮಾಡಿಸಿದರು. ಲಾಕ್‍ಡೌನ್ ವೇಳೆಯಲ್ಲಿ ಮದ್ಯದ ಅಂಗಡಿಗಳು ಬಂದ್ ಆಗಿದ್ದರಿಂದ ಪುರುಷರು ಮನೆಯಲ್ಲಿ ಸುಮ್ಮನಿದ್ದರು. ಆದರೆ ಈಗ ಮದ್ಯದ ಅಂಗಡಿಗಳು ಆರಂಭ ಆಗಿದ್ದರಿಂದ ಮತ್ತೆ ಕುಟುಂಬಗಳು ಹಾಳಾಗುತ್ತವೆ ಎಂದು ಗರಂ ಆಗಿದ್ದ ಮಹಿಳೆಯರು ಮದ್ಯದಂಗಡಿಗಳ ಮೇಲೆ ಕಲ್ಲೆಸೆದು, ಅಂಗಡಿಗಳನ್ನ ಬಂದ್ ಮಾಡಿಸಿ ತಮ್ಮ ಆಕ್ರೋಶ ಹೊರಹಾಕಿದರು.

    ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿಯೇ ಇದ್ದರೂ ಕ್ಯಾರೇ ಮಾಡದೆ ಮದ್ಯದ ಅಂಗಡಿಗಳ ಮೇಲೆ ಕಲ್ಲೆಸೆದು ಅಂಗಡಿಗಳನ್ನ ಮಹಿಳೆಯರು ಬಂದ್ ಮಾಡಿಸಿದರು. ಅಂಗಡಿಗಳ ಮೇಲೆ ಮಹಿಳಾ ಮಣಿಗಳು ಕಲ್ಲೆಸೆದು ಮದ್ಯದಂಗಡಿ ಬಂದ್ ಮಾಡಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

  • ಕೊರೊನಾ ವಾರಿಯರ್ಸ್‍ಗಾಗಿ ಪಿಪಿಇ ಕಿಟ್, ಮಾಸ್ಕ್ ತಯಾರಿಸ್ತಿದ್ದಾರೆ ಮಹಿಳೆಯರು

    ಕೊರೊನಾ ವಾರಿಯರ್ಸ್‍ಗಾಗಿ ಪಿಪಿಇ ಕಿಟ್, ಮಾಸ್ಕ್ ತಯಾರಿಸ್ತಿದ್ದಾರೆ ಮಹಿಳೆಯರು

    ಬೆಂಗಳೂರು: ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ಹಾಗೆ ಮಹಿಳೆಯರೆಲ್ಲಾ ಸೇರಿ ಕೌಶಲ್ಯ ಪಡೆದು ಇಡೀ ಕುಟುಂಬದ ಆರ್ಥಿಕ ಮಟ್ಟ ಸುಧಾರಿಸಿ, ಮಾರಾಣಾಂತಿಕ ಕೋವಿಡ್-19 ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್‍ಗೆ ಅಗತ್ಯವಾದ ಪಿಪಿಇ ಕಿಟ್ ತಯಾರಿಸಿ ನೆರವಾಗುತ್ತಿದ್ದಾರೆ.

    ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ಸಮೀಪ ಬ್ಲಾಕ್ ಸ್ತ್ರೀ ಶಕ್ತಿ ಸೊಸೈಟಿ ಅಡಿಯಲ್ಲಿ ಮಹಿಳೆಯರು ಕೋವಿಡ್ 19 ವಾರಿಯರ್ಸ್‍ಗೆ ತಮ್ಮ ಅಳಿಲು ಸೇವೆ ಮಾಡಿ, ಕೊರೊನಾ ಸಂದರ್ಭದಲ್ಲಿ ನೆರವಾಗಿ ಸಾರ್ಥಕತೆ ಮೆರೆಯುತ್ತಿದ್ದಾರೆ.

    ಈ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಸ್ತ್ರೀ ಶಕ್ತಿ ಸಂಘಗಳನ್ನು ರಚಿಸಿಕೊಂಡು, ಕೌಶಲ್ಯ ತರಬೇತಿಯಲ್ಲಿ ಪಾಲ್ಗೊಂಡು, ವಿದ್ಯುತ್ ಚಾಲಿತ ಹೋಲಿಗೆ ಯಂತ್ರಗಳಲ್ಲಿ ಕೆಲಸ ಮಾಡುವ ವಿಧಾನ ಕಲಿತಿದ್ದಾರೆ. ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು, ಪೊಲೀಸರು, ಬೆಂಗಳೂರು ಹಾಲು ಒಕ್ಕೂಟಕ್ಕೆ ಅಗತ್ಯವಿರುವ ಮುಖಕವಚ, ಮಾಸ್ಕ್, ಪಿಪಿಇ ಕಿಟ್‍ಗಳ ಸಾಮಾಗ್ರಿಗಳಾದ ಕೋಟ್, ಗ್ಲೌಸ್, ಕಾಲು ಚೀಲ, ದೇಹ ರಕ್ಷಕಗಳನ್ನು ಹೊಲಿಗೆ ಮಾಡಿ ದೇಶ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ.

    ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಕಡಿಮೆ ಬೆಲೆಯಲ್ಲಿ ಮಾಸ್ಕ್, ಸರ್ಜಿಕಲ್ ಮಾಸ್ಕ್, ಇನ್ನಿತರೆ ವಸ್ತುಗಳನ್ನು ಹೋಲಿಯುತ್ತಿದ್ದು, ಲಾಕ್‍ಡೌನ್ ವೇಳೆಯಲ್ಲಿ ಸ್ವಾವಲಂಬಿಯಾಗುತ್ತಿದ್ದಾರೆ. ಸುಮಾರು 30ರಿಂದ 40 ಮಹಿಳೆಯರು ದಿನನಿತ್ಯ ಕೆಲಸ ಮಾಡಿ ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಬಡ ಕುಟುಂಬದಿಂದ ಬಂದಂತಹ ಮಹಿಳೆಯರ ಸ್ವಾವಲಂಬಿಗಳಾಗಿ ಮಾಸ್ಕ್, ಮತ್ತು ಪಿಪಿಇ ಕಿಡ್ ತಯಾರಿಸಲು ಮುಂದಾಗಿದ್ದಾರೆ.

    ಈ ಬಗ್ಗೆ ಚಿಕ್ಕಬಾಣಾವರ ಸ್ತ್ರೀ ಶಕ್ತಿ ಒಕ್ಕೂಟದ ಕಾರ್ಯಾಧ್ಯಕ್ಷೆ ಭಾಗ್ಯಮ್ಮ ಅವರು ಮಾತನಾಡಿ, ಇವರೇಲ್ಲರಿಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಗತ್ಯ ತರಬೇತಿ ನೀಡಿದ್ದು, ಈ ಮಹಿಳೆಯರು ದಾಸರಹಳ್ಳಿ, ಪೀಣ್ಯ ಪೊಲೀಸ್ ಠಾಣೆಗೂ ರಿಯಾಯಿತಿ ದರದಲ್ಲಿ ಮಾಸ್ಕ್ ನೀಡುತ್ತಿದ್ದಾರೆ. ಕೆಲಸಕ್ಕೆ ಆದ್ಯತೆ ನೀಡಿ, ತರಬೇತಿ ಕೊಡಿಸಿ ನಮ್ಮಲ್ಲೇ ಮಹಿಳೆಯರು ಆರ್ಥಿಕವಾಗಿ ಸದೃಢರಾಗಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

  • ಗಂಡಂದಿರಿಗೆ ಮದ್ಯ ಖರೀದಿಸಲು ಬಂದ ವೃದ್ಧೆಯರು

    ಗಂಡಂದಿರಿಗೆ ಮದ್ಯ ಖರೀದಿಸಲು ಬಂದ ವೃದ್ಧೆಯರು

    ರಾಯಚೂರು: ಗಂಡದಿರಿಗಾಗಿ ಮದ್ಯ ಖರೀದಿಸಲು ವೃದ್ಧೆಯರು ಮದ್ಯದಂಗಡಿಗೆ ಆಗಮಿಸುವ ಮೂಲಕ ಹೆಬ್ಬೇರಿಸುವಂತೆ ಮಾಡಿದ್ದಾರೆ.

    ರಾಯಚೂರಿನ ಎಂಎಸ್‍ಐಎಲ್ ಮದ್ಯದಂಗಡಿಗಳಿಗೆ ವೃದ್ದೆಯರು ಲಗ್ಗೆ ಇಟ್ಟಿದ್ದು, ಮಹಿಳೆಯರು, ವೃದ್ಧೆಯರಿಂದ ಮದ್ಯ ಖರೀದಿ ಜೋರಾಗಿಯೇ ನಡೆದಿದೆ. ಎಂಎಸ್‍ಐಎಲ್ ಮದ್ಯದಂಗಡಿಯ ಮುಂದೆ ಸಾಲುಗಟ್ಟಿ ನಿಂತು ಮದ್ಯ ಖರೀದಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮಹಿಳೆಯರು ಹಾಗೂ ವೃದ್ಧೆಯರು ಸಾಲುಗಟ್ಟಿ ನಿಂತಿರುವುದನ್ನು ನೋಡಿದ ಸಾರ್ವಜನಿಕರು ಆಶ್ಚರ್ಯಕ್ಕೊಳಗಾದರು. ರಾಯಚೂರಿನಲ್ಲಿ ಬೆಳಗ್ಗೆ ಮಾತ್ರ ಮದ್ಯ ಖರೀದಿಗೆ ಅವಕಾಶವಿದ್ದು, ಈ ಹಿನ್ನೆಲೆ ಬೆಳ್ಳಂಬೆಳಗ್ಗೆ ಎದ್ದು ಎಣ್ಣೆಗಾಗಿ ಕ್ಯೂ ನಿಂತಿದ್ದಾರೆ.

    ವೃದ್ಧೆಯರು ನಾಲ್ಕೈದು ಕ್ವಾಟರ್ ಪ್ಯಾಕೆಟ್ ಮದ್ಯ ಖರೀದಿಸಿದ್ದು, ಬೆಳಗ್ಗೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಮಾತ್ರ ಮದ್ಯ ಖರೀದಿಗೆ ಅವಕಾಶ ಇರುವ ಹಿನ್ನೆಲೆ ಮದ್ಯ ಪ್ರಿಯರ ಕ್ಯೂ ಹೆಚ್ಚಾಗುತ್ತಲೇ ಇದೆ. ಬೆಳಗ್ಗೆಯಿಂದಲೇ ಹತ್ತಾರು ಜನ ನಿಂತಿದ್ದು, ಇದರ ಮಧ್ಯೆ ಮಹಿಳೆಯರು ವೃದ್ಧೆಯರು ಸಹ ಮದ್ಯಕ್ಕಾಗಿ ಕಾದು ನಿಂತಿದ್ದರು. 40 ದಿನಗಳಿಂದ ಬಾಯಾರಿದ್ದ ಮದ್ಯ ವ್ಯಸನಿಗಳಿಗೆ ಇದೀಗ ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆ ಹಬ್ಬದಂತಾಗಿದ್ದು, ಸಾಲುಗಟ್ಟಿ ನಿಂತು ಮದ್ಯ ಖರೀದಿಸುತ್ತಿದ್ದಾರೆ.

  • ಮಾಟಗಾತಿಯರೆಂದು ಮೂವರು ಮಹಿಳೆಯರ ತಲೆ ಬೋಳಿಸಿದ ಜನ

    ಮಾಟಗಾತಿಯರೆಂದು ಮೂವರು ಮಹಿಳೆಯರ ತಲೆ ಬೋಳಿಸಿದ ಜನ

    – ಗ್ರಾಮದಲ್ಲಿ ಅರೆಬೆತ್ತಲಾಗಿ ಮಹಿಳೆಯರ ಮೆರವಣಿಗೆ
    – 9 ಜನರನ್ನ ಬಂಧಿಸಿದ ಪೊಲೀಸ್

    ಪಾಟ್ನಾ: ಮಾಟಗಾತಿಯರೆಂದು ತಿಳಿದು ಒಂದೇ ಕುಟುಂಬದ ಮೂವರು ಮಹಿಳೆಯರ ತಲೆ ಬೋಳಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ಬಿಹಾರದಲ್ಲಿ ನಡೆದಿದೆ.

    ಪಾಟ್ನಾದಿಂದ 80 ಕಿ.ಮೀ ದೂರದಲ್ಲಿರುವ ಮುಜಾಫರ್ಪುರ್ ಜಿಲ್ಲೆಯ ಹಮ್ಮರಿ ಸಮೀಪ ಡಕ್ರಾಮ ಎಂಬ ಹಳ್ಳಿಯಲ್ಲಿ ಘಟನೆ ನಡೆಸಿದೆ. ಮಹಿಳೆಯರನ್ನು ಮಾಟಗಾತಿಯರೆಂದು ತಿಳಿದ ಜನರು ಅವರ ಕೂದಲನ್ನು ಕತ್ತರಿಸಿದ್ದಾರೆ. ನಂತರ ಅರೆಬೆತ್ತಲಾಗಿ ಮಹಿಳೆಯರನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

    ಕೆಲವು ದಿನಗಳ ಹಿಂದೆ ಗ್ರಾಮದಲ್ಲಿ ಎರಡು ನವಜಾತ ಶಿಶುಗಳು ಸಾವನ್ನಪ್ಪಿದ್ದವು. ಈ ಮೂವರು ಮಹಿಳೆಯರೇ ಶಿಶುಗಳ ಸಾವಿಗೆ ಕಾರಣ ಎಂದು ಗ್ರಾಮಸ್ಥರು ತಿಳಿದಿದ್ದರು. ಹೀಗಾಗಿ ಕೆಲವರು ಅವರನ್ನು ಮಾಟಗಾತಿ ಎಂದು ಕರೆದರು. ಗ್ರಾಮದ ಕೆಲ ಮುಖಂಡರು ಸೇರಿ ಮಹಿಳೆಯರಿಗೆ ಪಾಠ ಕಲಿಸುವ ಚರ್ಚೆ ನಡೆಸಿದರು. ಸೋಮವಾರ ಮಹಿಳೆಯರನ್ನು ಹಿಡಿದು ಎಳೆದಾಡಿದ ಗ್ರಾಮಸ್ಥರು ಸಾರ್ವಜನಿಕ ಪ್ರದೇಶದಲ್ಲಿ ಅವರನ್ನು ಕೂರಿಸಿ ತಲೆ ಬೋಳಿಸಿದ್ದಾರೆ.

    ಈ ದೃಶ್ಯವನ್ನು ಸ್ಥಳದಲ್ಲಿ ಕೆಲವರು ಮೊಬೈಲ್‍ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಿಡಿಯೋ ವೈರಲ್ ಆದ ನಂತರ ಆ ಪ್ರದೇಶದಲ್ಲಿ ಕೋಲಾಹಲ ಉಂಟಾಯಿತು. ಇತ್ತ ಘಟನೆಯಿಂದ ಭಯಗೊಂದ ಮೂವರು ಮಹಿಳೆಯರು ಕುಟುಂಬದವರೊಂದಿಗೆ ಗ್ರಾಮವನ್ನು ತೊರೆದಿದ್ದರು. ಹೀಗಾಗಿ ಸಂತ್ರಸ್ತರು ನೀಡದೆ ಪ್ರಕರಣ ದಾಖಲಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹಮ್ಮರಿ ಪೊಲೀಸ್ ಠಾಣೆಯ ಅಧಿಕಾರಿ ಜಿತೇಂದ್ರ ದೇವ್ ದೀಪಕ್ ಹೇಳಿದರು.

    ಈ ವಿಷಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆರಂಭವಾಗುತ್ತಿದ್ದಂತೆ ಎಡಿಜಿ ಜಿತೇಂದ್ರ ಕುಮಾರ್ ಎಚ್ಚೆತ್ತುಕೊಂಡರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಬೇಕು ಎಂದು ಸಿಬ್ಬಂದಿಗೆ ಸೂಚನೆ ನೀಡಿದರು. ಅದರಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈ ಪೈಕಿ 9 ಜನರನ್ನು ಬಂಧಿಸಲಾಗಿದೆ.

  • ಡ್ಯಾನ್ಸರ್, ಸ್ಲಂ ನಿವಾಸಿಗಳಿಗೆ ತುಪ್ಪದ ಬೆಡಗಿಯ ಸಹಾಯ ಹಸ್ತ

    ಡ್ಯಾನ್ಸರ್, ಸ್ಲಂ ನಿವಾಸಿಗಳಿಗೆ ತುಪ್ಪದ ಬೆಡಗಿಯ ಸಹಾಯ ಹಸ್ತ

    – ನಿರಾಶ್ರಿತರಿಗೆ ಸ್ಯಾನಿಟರಿ ಪ್ಯಾಡ್ಸ್ ವಿತರಣೆ

    ಬೆಂಗಳೂರು: ತುಪ್ಪದ ಬೆಡಗಿ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ನಿರಾಶ್ರಿತರಿಗೆ, ಬಡವರಿಗೆ ಆಹಾರ ಪದಾರ್ಥ, ನಿರಾಶ್ರಿತರಿಗೆ ಸ್ಯಾನಿಟರಿ ಪ್ಯಾಡ್ಸ್ ನೀಡುವ ಮೂಲಕ ನೆರವಾಗುತ್ತಿದ್ದಾರೆ.

    ತಮ್ಮ ಆರ್‍ಡಿ(ರಾಗಿಣಿ ದ್ವಿವೇದಿ) ಫೌಂಡೇಶನ್ ವತಿಯಿಂದ ರಾಗಿಣಿ ದ್ವಿವೇದಿ ಸಿನಿಮಾ ರಂಗದ ಕೂಲಿ ಕಾರ್ಮಿಕರಿಗೆ, ತಂತ್ರಜ್ಞರಿಗೆ ನೆರವು ನೀಡುತ್ತಿದ್ದಾರೆ. ಇಷ್ಟು ಮಾತ್ರವಲ್ಲದೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ನೂರು ಡ್ಯಾನ್ಸರ್ಸ್, 40 ಸ್ಲಮ್ ಏರಿಯಾಗಳಲ್ಲಿರುವ ಬಡವರಿಗೆ ದವಸ-ಧಾನ್ಯ ವಿತರಣೆ ಮಾಡುತ್ತಿದ್ದಾರೆ. ಮಾಜಿ ಮೇಯರ್ ಪದ್ಮಾವತಿ ಜೊತೆ ಸೇರಿ ಅನ್ನದಾಸೋಹ ಮತ್ತು ಕಾರ್ಮಿಕರಿಗೆ ಅಗತ್ಯ ವಸ್ತುಗಳನ್ನು ಸಹ ವಿತರಣೆಯನ್ನು ಮಾಡಿದ್ದಾರೆ.

    ಕೆಲ ಮಹಿಳಾ ಹಾಸ್ಟೆಲ್‍ಗಳಿಗಳಲ್ಲಿರುವ ನಿರಾಶ್ರಿತರಿಗೆ ಸ್ಯಾನಿಟರಿ ಪ್ಯಾಡ್ಸ್ ಗಳನ್ನು ವಿತರಿಸುವ ಮೂಲಕ ಮಹಿಳೆಯರ ಸಹಾಯಕ್ಕೂ ರಾಗಿಣಿ ನಿಂತಿದ್ದಾರೆ. ಲಾಕ್‍ಡೌನ್ ಆದಾಗಿನಿಂದಲೂ ಬಡವರಿಗೆ, ನಿರಾಶ್ರಿತರಿಗೆ ರಾಗಿಣಿ ಸಹಾಯ ಮಾಡುತ್ತಿದ್ದು, ಹಲವು ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ. ಕೊರೊನಾ ವಾರಿಯರ್ಸ್‍ಯಿಂದ ಹಿಡಿದು ಬಡ ಜನರ ವರೆಗೆ ರಾಗಿಣಿ ಸಹಾಯ ಮಾಡುತ್ತಿದ್ದಾರೆ.

    ಈ ಹಿಂದೆ ಕೊರೊನಾ ವಾರಿಯರ್ಸ್ ಗಳಾದ ವೈದ್ಯರು, ಪೊಲೀಸ್, ಪೌರ ಕಾರ್ಮಿಕರಿಗೆ ಊಟ ವಿತರಿಸಿದ್ದಾರೆ. ಹಲವು ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಸ್ವತಃ ಅವರೇ ಆಹಾರದ ಕಿಟ್ ವಿತರಿಸಿದ್ದಾರೆ. ಈ ಮೂಲಕ ಬಡವರ ಸಹಾಯಕ್ಕೆ ನಿಂತಿದ್ದಾರೆ. ಇಷ್ಟು ಮಾತ್ರವಲ್ಲದೆ ಬೀದಿ ನಾಯಿಗಳು, ಪ್ರಾಣಿಗಳಿಗೂ ರಾಗಿಣಿ ಆಹಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದೀಗ ಮಹಿಳೆಯರಿಗೆ, ಡ್ಯಾನ್ಸರ್ಸ್‍ಗೆ ಹಾಗೂ ಸ್ಲಂ ನಿವಾಸಿಗಳಿಗೆ ನೆರವಾಗುತ್ತಿದ್ದಾರೆ.

    ತಮ್ಮ ಎಲ್ಲ ಚಟುವಟಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮ ರೀಲ್ ಜೀವನವನ್ನು ನಾವು ತುಂಬಾ ಇಷ್ಟಪಡುತ್ತೇವೆ. ಅಂತೆಯೇ ಇದೀಗ ರಿಯಲ್ ಜೀವನ ತುಂಬಾ ಅಪ್ಯಾಯಮಾನವಾಗಿದ್ದು, ಇದಕ್ಕೆ ಗೌರವ ಸಲ್ಲಿಸುತ್ತೇವೆ ಎಂದು ಕಮೆಂಟ್ ಮಾಡಿದ್ದಾರೆ. ಹಲವರು ಇದೇ ರೀತಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದು, ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ರಾಗಿಣಿ ದ್ವಿವೇದಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದು, ತಮ್ಮ ಸಿನಿಮಾಗಳ ಅಪ್‍ಡೇಟ್ ಜೊತೆಗೆ ಅಡುಗೆ ಮಾಡುವುದು, ಫುಡ್ ಕುರಿತ ಅಪ್‍ಡೇಟ್‍ಗಳನ್ನು ನೀಡುತ್ತಿರುತ್ತಾರೆ. ಅದೇ ರೀತಿ ಮಾನವೀಯ ಗುಣಗಳನ್ನು ತೋರಿಸುವ ಕೆಲಸಗಳ ಕುರಿತು ಸಹ ಮಾಹಿತಿ ಹಂಚಿಕೊಳ್ಳುತ್ತಿರುತ್ತಾರೆ. ಈ ಹಿಂದೆ ಪೌರ ಕಾರ್ಮಿಕರೊಂದಿಗೆ ಚಹಾ ಸೇವಿಸಿ ಅವರ ಕುಶಲೋಪರಿ ವಿಚಾರಿಸಿದ್ದರು. ಇದೀಗ ಸ್ವತಃ ಅವರೇ ಬಡವರ ಸಹಾಯಕ್ಕೆ ನಿಂತಿದ್ದಾರೆ.

  • ಲಾಕ್‍ಡೌನ್ ಸಮಯದಲ್ಲಿ ಅಭಿಮಾನಿಗಳಿಗೆ ಜಿರಳೆ ಕಥೆ ಹೇಳಿದ ಹರಿಪ್ರಿಯಾ

    ಲಾಕ್‍ಡೌನ್ ಸಮಯದಲ್ಲಿ ಅಭಿಮಾನಿಗಳಿಗೆ ಜಿರಳೆ ಕಥೆ ಹೇಳಿದ ಹರಿಪ್ರಿಯಾ

    – ಮಹಿಳೆಯರಿಗೆ ಸಲಹೆಯೊಂದನ್ನು ನೀಡಿದ ನಟಿ

    ಬೆಂಗಳೂರು: ಸಿನಿಮಾದಲ್ಲಿ ಬರುವ ಭಯಾನಕ ವಿಲನ್ ಕೂಡ ಜಿರಳೆಯಷ್ಟು ಭಯ ಹುಟ್ಟಿಸುವುದಿಲ್ಲ ಎಂದು ಚಂದನವದ ನಟಿ ಹರಿಪ್ರಿಯಾ ಹೇಳಿದ್ದಾರೆ.

    ಲಾಕ್‍ಡೌನ್‍ನಿಂದ ಮನೆಯಲ್ಲೇ ಕುಳಿತಿರುವ ನಟ-ನಟಿಯರು ಸಾಮಾಜಿಕ ಜಾಲತಾಣದಲ್ಲಿ ಮುಳುಗಿದ್ದಾರೆ. ಅಂತೆಯೇ ನಟಿ ಹರಿಪ್ರಿಯಾ ಕೂಡ ತಮ್ಮ ಬ್ಲಾಗ್‍ನಲ್ಲಿ ಆಗಾಗ ತಮ್ಮ ಅನುಭವದ ಕಥೆಯನ್ನು ಬರೆದು ಪೋಸ್ಟ್ ಮಾಡುತ್ತಿರುತ್ತಾರೆ. ಈಗ ಜಿರಳೆ ಕಥೆಯೊಂದು ಬರೆದು ತಮ್ಮ ಲೇಡಿ ಫ್ಯಾನ್ಸ್ ಗೆ ಸಲಹೆಯೊಂದನ್ನು ಹೇಳಿದ್ದಾರೆ.

    ಈ ವಿಚಾರವಾಗಿ ತಮ್ಮ ಬ್ಲಾಗ್‍ನಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿರುವ ಹರಿಪ್ರಿಯಾ ಜಿರಳೆಗಳನ್ನು ಕಂಡರೆ ನನಗೇಕೆ ಅಷ್ಟು ಭಯ ಎಂದು ತಿಳಿಯುತ್ತಿಲ್ಲ. ನಮ್ಮ ಕುಟುಂಬದಲ್ಲಿ ಹೆಚ್ಚಿನವರು ಜಿರಳೆಯನ್ನು ಕಂಡರೆ ಹೆದರಿ ಓಡುತ್ತಾರೆ. ಅದರಲ್ಲಿ ನಮ್ಮ ಅಮ್ಮ, ಚಿಕ್ಕಮ್ಮ ಕೂಡ ಜಿರಳೆಯನ್ನು ಕಂಡಾಗ ಭಯಪಡುತ್ತಿದ್ದರು. ಅವರಿಂದಾಗಿ ನನಗೂ ಜಿರಳೆಯನ್ನು ಕಂಡಾಗ ಭಯ ಹುಟ್ಟಿಕೊಂಡಿದೆ. ಇದಕ್ಕೆ ಅವರೇ ಹೊಣೆ ಎಂದು ಹರಿಪ್ರಿಯಾ ತಿಳಿಸಿದ್ದಾರೆ.

    ಮಹಿಳೆಯರಿಗೆ ಎಲ್ಲವನ್ನು ಎದುರಿಸಬಲ್ಲ ಶಕ್ತಿ ಇರುತ್ತದೆ. ಆದರೆ ಕೆಲವರಿಗೆ ಜಿರಳೆಯನ್ನು ಕಂಡರೆ ಭಯವಾಗುತ್ತದೆ. ಇನ್ನು ಕೆಲವರು ಜಿರಳೆ ಹತ್ತಿರ ಬಂದರೆ ಸಾಕು ಓಡಿ ಹೋಗುತ್ತಾರೆ. ನಾನು ಕೂಡ ಅಷ್ಟೇ ಜಿರಳೆಯನ್ನು ಕಂಡರೆ ಭಯಪಡುತ್ತೇನೆ. ಜಿರಳೆಗಳು ನೋಡಲು ಚಿಕ್ಕದಾಗಿದ್ದರೂ ದೊಡ್ಡ ಮಹಿಳೆಯನ್ನು ಹೆದರಿಸಿಬಿಡುತ್ತವೆ. ಮಹಿಳೆಯರೂ ಕೂಡ ದೊಡ್ಡ ಗಾತ್ರದ ಡೈನೋಸರ್ಸ್ ಅನ್ನು ಬೇಕಾದರೂ ಪಳಗಿಸುತ್ತಾರೆ. ಆದರೆ ಜಿರಳೆಯನ್ನು ಕಂಡರೆ ಭಯಪಡುತ್ತಾರೆ ಎಂದು ಹೇಳಿದ್ದಾರೆ.

    ಈ ವಿಚಾರವಾಗಿ ಮಹಿಳೆಯರಿಗೊಂದು ಸಣ್ಣ ಸಲಹೆ, ನೀವು ಜಿರಳೆಯನ್ನು ಕಂಡು ಭಯಪಡುತ್ತೀರಾ ಎಂಬ ವಿಚಾರವನ್ನು ಪುರುಷರೊಂದಿಗೆ ಹೇಳಿಕೊಳ್ಳಬೇಡಿ. ಅವರು ನಿಮ್ಮನ್ನು ಹೆದರಿಸಲು ಈ ತಂತ್ರವನ್ನು ಮುಂದೆ ಬಳಸಬಹುದು. ಈ ಹಿಂದೆ ಕೂಡ ನನ್ನ ಸ್ನೇಹಿತರು ಜಿರಳೆಯನ್ನು ಹಿಡಿದುಕೊಂಡು ನನಗೆ ಭಯಪಡಿಸಿದ್ದರು. ಅದರ ಕಾಲುಗಳನ್ನು ಹಿಡಿದುಕೊಂಡು ನನ್ನ ಕಣ್ಣುಗಳ ಮುಂದೆ ತಂದಿದ್ದರು. ನಾನು ಜಿರಳೆ ಕಂಡು ಜೋರಾಗಿ ಕಿರುಚಿದೆ ಎಂದು ಹರಿಪ್ರಿಯಾ ಅನುಭವವನ್ನು ಬರೆದಿದ್ದಾರೆ.

    ಜಿರಳೆ ನನ್ನ ಕಡೆಗೆ ಒಂದು ಹೆಜ್ಜೆ ಇಟ್ಟರೆ, ನಾನು ಸಾವಿರ ಹೆಜ್ಜೆ ಹಿಂದಕ್ಕೆ ಓಡುತ್ತೇನೆ. ನನ್ನ ಕೋಣೆಯಲ್ಲಿ ಜಿರಳೆ ಕಂಡರೆ ಒಂದೋ ಅದು ಸಾಯಬೇಕು. ಇಲ್ಲವೇ ಅದು ಬೇರೆ ಕಡೆ ಹೋಗಬೇಕು. ಸಿನಿಮಾದಲ್ಲಿನ ವಿಲನ್ ಕೂಡ ಜಿರಳೆಯಷ್ಟು ಭಯ ಹುಟ್ಟಿಸುವುದಿಲ್ಲ. ಆದರೆ ಈಗ ಜಿರಳೆಯ ಭಯವನ್ನು ನಾನು ನಿವಾರಿಸಿಕೊಂಡಿದ್ದೇನೆ. ಇನ್ನು ನಿಮ್ಮ ಸರದಿ ಎಂದು ತಮ್ಮ ಬ್ಲಾಗ್‍ನಲ್ಲಿ ಬರೆದುಕೊಂಡಿದ್ದಾರೆ.