Tag: work

  • 8 ಗಂಟೆ ಕೆಲಸ ಮಾಡ್ತಾ ಕುಳಿತರೆ ಹೆಂಡ್ತಿ ಓಡಿಹೋಗ್ತಾಳೆ – ಗೌತಮ್‌ ಅದಾನಿ ಹಾಸ್ಯ!

    8 ಗಂಟೆ ಕೆಲಸ ಮಾಡ್ತಾ ಕುಳಿತರೆ ಹೆಂಡ್ತಿ ಓಡಿಹೋಗ್ತಾಳೆ – ಗೌತಮ್‌ ಅದಾನಿ ಹಾಸ್ಯ!

    ಮುಂಬೈ: ವಾರಕ್ಕೆ 70 ಗಂಟೆ ದುಡಿಬೇಕು ಎನ್ನುವ ಇನ್ಫೋಸಿಸ್ (Infosys) ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ (Narayana Murthy) ಅವರ ಹೇಳಿಕೆ ಕುರಿತು ಚರ್ಚೆಗಳು ನಡೆಯುತ್ತಲೇ ಇವೆ. ಈ ಹೊತ್ತಿನಲ್ಲೇ ದೇಶದ ಶ್ರೀಮಂತ ಉದ್ಯಮಿ ಗೌತಮ್‌ ಅದಾನಿ (Gautam Adani) ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ʻಕೆಲಸ-ಜೀವನ ಸಮತೋಲʼ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ನಾವು ಇಷ್ಟಪಡುವ ಕೆಲಸಗಳನ್ನು ಮಾಡಿದಾಗ ಮಾತ್ರ ಜೀವನದಲ್ಲಿ ಸಮತೋಲನ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

    ನಿಮ್ಮ ಕೆಲಸ ಮತ್ತು ಜೀನವದ ಸಮತೋಲನವನ್ನು ನನ್ನ ಮೇಲೆ ಹೇರಬಾರದು, ಹಾಗೆಯೇ ನನ್ನ ಕೆಲಸ-ಜೀವನ ಸಮತೋಲನವನ್ನ ನಿಮ್ಮ ಮೇಲೆ ಹೇರಬಾರದು. ನಾನು ನನ್ನ ಕುಟುಂಬದೊಂದಿಗೆ ನಿತ್ಯ 4 ಗಂಟೆ ಕಳೆಯುತ್ತೇನೆ, ನನಗೆ ಅದರಲ್ಲಿ ಆನಂದ ಇದೆ. ಉಳಿದ ಸಮಯದಲ್ಲೂ 8 ಗಂಟೆಕಾಲ ಕೆಲಸ ಮಾಡ್ತಾ ಕುಳಿತರೇ ಹೆಂಡ್ತಿ ಓಡಿಹೋಗ್ತಾಳೆ ಅಂತ ಹಾಸ್ಯ ಚಟಾಕಿ ಹಾರಿಸಿದ್ದಾರೆ.

    ಕೆಲದಿನಗಳ ಹಿಂದೆಯಷ್ಟೆ ಇನ್ಫೋಸಿಸ್ ನಾರಾಯಣ ಮೂರ್ತಿ ಅವರು, ಭಾರತದ (India) ಕೆಲಸದ ಸಂಸ್ಕೃತಿ ಬದಲಾಗಬೇಕು ಮತ್ತು ಜಾಗತಿಕ ಮಟ್ಟದಲ್ಲಿ ದೇಶವು ಪರಿಣಾಮಕಾರಿಯಾಗಿ ಸ್ಪರ್ಧಿಸಬೇಕಾದರೆ ಯುವಜನತೆ (Youngsters) ವಾರಕ್ಕೆ 70 ಗಂಟೆಗಳ ಕಾಲ ಕೆಲಸ (70-Hour Work Week) ಮಾಡಲು ಸಿದ್ಧರಾಗಿರಬೇಕು ಎಂದು ಹೇಳಿದ್ದರು.

    ಎರಡನೇ ಮಹಾಯುದ್ಧದ ಬಳಿಕ ಜರ್ಮನಿ (Germany) ಹಾಗೂ ಜಪಾನ್ (Japan) ದೇಶ ಅಭಿವೃದ್ಧಿಯಾಗಿದ್ದನ್ನು ಉಲ್ಲೇಖಿಸಿದ್ದ ಅವರು, ಎರಡನೇ ಮಹಾಯುದ್ಧದ ಬಳಿಕ ಪ್ರತಿಯೊಬ್ಬ ಜರ್ಮನ್‌ ಪ್ರಜೆ ಕೆಲ ವರ್ಷಗಳವರೆಗೆ ಹೆಚ್ಚುವರಿ ಅವಧಿ ದುಡಿಯುತ್ತಿದ್ದರು. ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ನಾವು ಕಲಿಯಬಾರದು. ಭಾರತ ನನ್ನ ದೇಶ, ಇದಕ್ಕಾಗಿ ನಾನು ವಾರಕ್ಕೆ 70 ಗಂಟೆಗಳ ಕಾಲ ದುಡಿಯುತ್ತೇನೆ ಎಂಬ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎ೦ದು ಯುವಜನತೆಯಲ್ಲಿ ಮನವಿ ಮಾಡಿದ್ದರು.

  • ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿ

    ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿ

    ನವದೆಹಲಿ: ಭಾರತದ (India) ಕೆಲಸದ ಸಂಸ್ಕೃತಿ ಬದಲಾಗಬೇಕು ಮತ್ತು ಜಾಗತಿಕ ಮಟ್ಟದಲ್ಲಿ ದೇಶವು ಪರಿಣಾಮಕಾರಿಯಾಗಿ ಸ್ಪರ್ಧಿಸಬೇಕಾದರೆ ಯುವಜನತೆ (Youngsters) ವಾರಕ್ಕೆ 70 ಗಂಟೆಗಳ ಕಾಲ ಕೆಲಸ (70-Hour Work Week) ಮಾಡಲು ಸಿದ್ಧರಾಗಿರಬೇಕು ಎಂದು ಇನ್ಫೋಸಿಸ್ (Infosys) ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ (Narayana Murthy) ಸಲಹೆ ನೀಡಿದ್ದಾರೆ.

    ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಅವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ನಾವು ಕಲಿಯಬಾರದು. ಭಾರತ ನನ್ನ ದೇಶ, ಇದಕ್ಕಾಗಿ ನಾನು ವಾರಕ್ಕೆ 70 ಗಂಟೆಗಳ ಕಾಲ ದುಡಿಯುತ್ತೇನೆ ಎಂಬ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎ೦ದು ಯುವಜನತೆಯಲ್ಲಿ ಮನವಿ ಮಾಡಿದರು.

    ಎರಡನೇ ಮಹಾಯುದ್ಧದ ಬಳಿಕ ಜರ್ಮನಿ (Germany) ಹಾಗೂ ಜಪಾನ್ (Japan) ದೇಶ ಅಭಿವೃದ್ಧಿಯಾಗಿದ್ದನ್ನು ಉಲ್ಲೇಖಿಸಿದ ಅವರು, ಎರಡನೇ ಮಹಾಯುದ್ಧದ ಬಳಿಕ ಪ್ರತಿಯೊಬ್ಬ ಜರ್ಮನ್‌ ಪ್ರಜೆ ಕೆಲ ವರ್ಷಗಳವರೆಗೆ ಹೆಚ್ಚುವರಿ ಅವಧಿ ದುಡಿಯುತ್ತಿದ್ದರು ಎಂದು ತಿಳಿಸಿದರು.  ಇದನ್ನೂ ಓದಿ: ಯುಪಿಎ ಅವಧಿಯಲ್ಲಿ ಆರ್ಥಿಕ ಚಟುವಟಿಕೆ ಸ್ಥಗಿತ – ಇನ್ಫಿ ನಾರಾಯಣ ಮೂರ್ತಿ

    ಭಾರತದ ಕೆಲಸದ ಉತ್ಪಾದಕತೆಯು ವಿಶ್ವದಲ್ಲೇ ಅತ್ಯಂತ ಕಡಿಮೆಯಾಗಿದೆ. ನಾವು ನಮ್ಮ ಕೆಲಸದ ಉತ್ಪಾದಕತೆಯನ್ನು ಹೆಚ್ಚಿಸದೇ ಇದ್ದರೆ ಮತ್ತು ಸರ್ಕಾರದಲ್ಲಿನ ಭ್ರಷ್ಟಾಚಾರವನ್ನು ಕಡಿಮೆ ಮಾಡದೇ ಇದ್ದರೆ ಪ್ರಚಂಡ ಸಾಧನೆ ಮಾಡಿದ ದೇಶಗಳೊಂದಿಗೆ ಸ್ಪರ್ಧಿಸಲು ನಮಗೆ ಸಾಧ್ಯವಾಗುವುದಿಲ್ಲ. ನಾವು ಅಂದುಕೊಂಡಿರುವ ಅವಧಿಯಲ್ಲಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

    ನಾವು ಶಿಸ್ತುಬದ್ಧವಾಗಿರಬೇಕು ಮತ್ತು ನಮ್ಮ ಕೆಲಸದ ಉತ್ಪಾದಕತೆಯನ್ನು ಸುಧಾರಿಸಬೇಕು. ನಾವು ಏನೂ ಮಾಡದೇ ಇದ್ದರೆ ಸರ್ಕಾರ ಏನು ಮಾಡಬಹುದು? ನಾವು ಅತ್ಯಂತ ಶಿಸ್ತಿನ ಮತ್ತು ಅತ್ಯಂತ ಕಷ್ಟಪಟ್ಟು ದುಡಿಯುವ ಜನರಾಗಿ ಬದಲಾಗಬೇಕು ನಾರಾಯಣ ಮೂರ್ತಿ ಹೇಳಿದರು.  ಇದನ್ನೂ ಓದಿ: ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ನಾರಾಯಣ ಮೂರ್ತಿ

    https://twitter.com/nuts2406/status/1717574024589705503

    ನಮ್ಮ ಜನಸಂಖ್ಯೆಯಲ್ಲಿ ಬಹುಪಾಲು ಯುವಜನರೇ ಇರುವುದರಿಂದ ನಮ್ಮ ದೇಶವನ್ನು ಕಟ್ಟಲು ಅವರು ರೂಪಾಂತರವಾಗುವುದು ಬಹಳ ಮುಖ್ಯ ಎಂದರು.

    ನಾರಾಯಣ ಮೂರ್ತಿ ಅವರು ಯುವ ಜನತೆ ವಾರಕ್ಕೆ 70 ಗಂಟೆ ದುಡಿಯಬೇಕು ಎಂಬ ಹೇಳಿಕೆಯ ಬಗ್ಗೆ ಈಗ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಲಸಕ್ಕಾಗಿ ಅಲೆಯುತ್ತಿದ್ದಾರಂತೆ ನಟಿ ಉರ್ಫಿ ಜಾವೇದ್

    ಕೆಲಸಕ್ಕಾಗಿ ಅಲೆಯುತ್ತಿದ್ದಾರಂತೆ ನಟಿ ಉರ್ಫಿ ಜಾವೇದ್

    ವಿಚಿತ್ರ ವಿನ್ಯಾಸದ ಬಟ್ಟೆಗಳ ಮೂಲಕ ಫೇಮಸ್ ಆಗಿರುವ ಹಿಂದಿ ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟಿ ಉರ್ಫಿ ಜಾವೇದ್ (Urfi Javed) ಇದೀಗ ಕೆಲಸ ಹುಡುಕುತ್ತಿದ್ದಾರಂತೆ. ಈ ಮಾಹಿತಿಯನ್ನು ಸ್ವತಃ ಅವರೇ ಹಂಚಿಕೊಂಡಿದ್ದಾರೆ. ನಾನು ಫೇಮಸ್ ಆಗಿದ್ದೇನೆ, ಜನರು ನನ್ನನ್ನು ಗುರುತಿಸುತ್ತಾರೆ ಎಲ್ಲವೂ ನಿಜ. ಆದರೆ, ನನಗೆ ಕೆಲಸವಿಲ್ಲ (Work). ನನ್ನೊಂದಿಗೆ ಕೆಲಸ ಮಾಡಲು ಯಾರೂ ಒಪ್ಪುವುದಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

    ತಾವು ಕೆಲಸ ಮಾಡಲು ರೆಡಿಯಾಗಿದ್ದು, ತಮಗೆ ಯಾವುದೇ ಕೆಲಸ ಸಿಗುತ್ತಿಲ್ಲ ಎಂದು ಉರ್ಫಿ ಹೇಳಿಕೊಂಡಿದ್ದಾರೆ. ನಾನು ಕೆಲಸ ಮಾಡಲು ತಯಾರಿದ್ದರೂ, ನನ್ನೊಂದಿಗೆ ಕೆಲಸ ಮಾಡಲು ಯಾರೂ ಸಿದ್ದರಿಲ್ಲ. ಹಾಗಾಗಿ ನನಗೆ ಕೆಲಸ ಸಿಗುತ್ತಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ತಮಗಾಗಿ ಯಾರಾದರೂ ಕೆಲಸ ಸೃಷ್ಟಿ ಮಾಡಿದರೆ ಹೋಗುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ:ಕೊನೆಗೂ ತನ್ನ ಮಗುವಿನ ತಂದೆ ಬಗ್ಗೆ ಗುಟ್ಟು ರಟ್ಟು ಮಾಡಿದ ಇಲಿಯಾನಾ

    ಈ ಹಿಂದೆ ಉರ್ಫಿಗಾಗಿ ಕಾಸ್ಟ್ಯೂಮ್ (Costume) ಡಿಸೈನ್ ಮಾಡುವವರು ಯಾರೂ ಇರಲಿಲ್ಲವಂತೆ. ಹಾಗಾಗಿಯೇ ತಮ್ಮ ಕಾಸ್ಟ್ಯೂಮ್ ಅನ್ನು ತಾವೇ ಡಿಸೈನ್ ಮಾಡಲು ಕಲಿತಿದ್ದಾರಂತೆ. ಇತ್ತ ಮನೆಯಲ್ಲೂ ಗೌರವವಿಲ್ಲ, ಬೀದಿಯಲ್ಲೂ ಇಲ್ಲ. ಈ ವಿಚಾರವಾಗಿ ತಮಗೆ ತುಂಬಾ ನೋವಾಗಿದೆ ಎಂದಿದ್ದಾರೆ ಉರ್ಫಿ.

     

    ಕಾಸ್ಟ್ಯೂಮ್ ವಿಚಾರವಾಗಿಯೇ ಉರ್ಫಿ ಕೋರ್ಟ್ (ಕೋರ್ಟ್) ಮೆಟ್ಟಿಲು ಕೂಡ ಏರಿದ್ದಾರೆ. ಅರೆಬರೆ ಬಟ್ಟೆ ಹಾಕಿಕೊಂಡು ಬೀದಿಗೆ ಬಂದು ನಮ್ಮ ಸಂಸ್ಕೃತಿಯನ್ನು ಉರ್ಫಿ ಹಾಳು ಮಾಡುತ್ತಿದ್ದಾರೆ ಎಂದು ಹಲವರು ಇವರ ಮೇಲೆ ಪೊಲೀಸರಿಗೆ (Police) ದೂರು ನೀಡಿದ್ದರು. ಅನೇಕರು ತಮಗೆ ಸುಖಾಸುಮ್ಮನೆ ಕಿರುಕುಳು ನೀಡುತ್ತಿದ್ದಾರೆ ಎಂದು ಸ್ವತಃ ಉರ್ಫಿ ಅವರೇ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಇದೆಲ್ಲದರಿಂದ ಆಚೆ ಬರಲು ಉರ್ಫಿ ಕೆಲಸ ಹುಡುಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ಲ್ಯಾಕ್ ಏಲಿಯನ್‍ನಂತೆ ಬದಲಾದ ಇವನನ್ನು ನೋಡಿದವರು ಕೆಲಸವನ್ನೆ ಕೊಡುತ್ತಿಲ್ಲ – ಓದಿ ವಿಚಿತ್ರ ಕಥೆ

    ಬ್ಲ್ಯಾಕ್ ಏಲಿಯನ್‍ನಂತೆ ಬದಲಾದ ಇವನನ್ನು ನೋಡಿದವರು ಕೆಲಸವನ್ನೆ ಕೊಡುತ್ತಿಲ್ಲ – ಓದಿ ವಿಚಿತ್ರ ಕಥೆ

    ಪ್ಯಾರಿಸ್: ಕೆಲಸ ಸಿಗಬೇಕೆಂದು ಮನುಷ್ಯರು ಹಲವು ಸರ್ಕಸ್ ಮಾಡುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನನ್ನು ವಿಚಿತ್ರವಾಗಿ ರೂಪಾಂತರಿಸಿಕೊಂಡಿದ್ದಕ್ಕೆ ಕೆಲಸವೇ ಸಿಗದೇ ಪರದಾಡುತ್ತಿದ್ದಾನೆ.

    ಮೈಮೇಲೆಲ್ಲಾ ಟ್ಯಾಟೂ ಹಾಕಿಸಿಕೊಂಡು ‘ಬ್ಲ್ಯಾಕ್ ಏಲಿಯನ್’ ಆಗಿ ರೂಪಾಂತರವಾಗಿರುವ ಫ್ರೆಂಚ್‍ನ ಆಂಥೋನಿ ಲೋಫ್ರೆಡೊ ಈಗ ಎಲ್ಲಿಯೂ ಕೆಲಸ ಸಿಗುತ್ತಿಲ್ಲ ಎಂದು ಕೊರಗುತ್ತಿದ್ದಾನೆ. ಆಂಥೋನಿ ಲೋಫ್ರೆಡೊ ಹೇಗೆ ಕಾಣುತ್ತಾನೆ ಎಂಬುದರ ಆಧಾರದ ಮೇಲೆ ಜನರು ಅವನನ್ನು ನಿರ್ಣಯಿಸುತ್ತಿರುವುದರಿಂದ ಜೀವನ ನಡೆಸುವುದು ಕಷ್ಟವಾಗುತ್ತಿದೆ ಎಂದು ತನ್ನ ದುಃಖವನ್ನು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ನಲಪಾಡ್ ಮಾಡಿರೋ ಕೃತ್ಯಕ್ಕೂ ನಮಗೂ ಸಂಬಂಧವಿಲ್ಲ: ಅಶೋಕ್ ಪಟ್ಟಣ

    ತನ್ನನ್ನು ‘ಬ್ಲ್ಯಾಕ್ ಏಲಿಯನ್’ ಎಂದು ಕರೆದುಕೊಳ್ಳುವ ಆಂಥೋನಿ ತನ್ನ ಕಣ್ಣುಗುಡ್ಡೆಗಳು ಸೇರಿದಂತೆ ಮೈಮೇಲೆ ಕಪ್ಪು ಟ್ಯಾಟೂ ಹಾಕಿಸಿಕೊಂಡಿದ್ದಾನೆ. ಅದರ ಹೊರತಾಗಿ, ಪಾಪ್ ಸ್ಟೈಲ್‍ನಲ್ಲಿ ತನ್ನ ಉಡುಗೆಯನ್ನು ಬದಲಾಯಿಸಿಕೊಂಡಿದ್ದಾನೆ. ಅವನ ಎಡಗೈ ಪಂಜವನ್ನು ಹೋಲುವಂತೆ ಮಾಡಲು ಅವನ ಎರಡು ಬೆರಳುಗಳನ್ನು ಕತ್ತರಿಸಿಕೊಂಡಿದ್ದಾನೆ.

    ಆಂಥೋನಿ 27ನೇ ವಯಸ್ಸಿನಲ್ಲಿ ತನ್ನ ಲುಕ್ ಬದಲಾಯಿಸಲು ಪ್ರಾರಂಭ ಮಾಡಿಕೊಂಡಿದ್ದಾನೆ. ಅದಕ್ಕೆ ಅವನಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಬಳಗವೇ ಇದೆ. ಇನ್‌‌ಸ್ಟಾದಲ್ಲಿ 1.2 ಮಿಲಿಯನ್ ಅನುಯಾಯಿಗಳಿದ್ದಾರೆ. ಸೊಶೀಯಲ್ ಮಿಡಿಯಾದಲ್ಲಿ ಭಾರೀ ಅನುಯಾಯಿಗಳನ್ನು ಹೊಂದಿದ್ದರೂ ಸಹ ನಿಜ ಜೀವನದಲ್ಲಿ ಆಂಥೋನಿ ಅವರು ಎಷ್ಟು ವಿಚಿತ್ರವಾಗಿ ಕಾಣುತ್ತಾರೆ ಎಂಬ ಕಾರಣದಿಂದಾಗಿ ಬಹಳಷ್ಟು ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಪ್ರತಿಭಟನಾ ಶಿಬಿರ ಧ್ವಂಸಗೊಳಿಸಿದ ಶ್ರೀಲಂಕಾ ಭದ್ರತಾ ಪಡೆ 

    ಈ ಕುರಿತು ಆಂಥೋನಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಈ ರೂಪದಿಂದ ಯಾರು ನನಗೆ ಕೆಲಸ ಕೊಡುತ್ತಿಲ್ಲ. ನನ್ನ ಈ ರೂಪದಿಂದ ಬಹಳಷ್ಟು ಕೆಟ್ಟ ಸಂಗತಿಗಳು ನಡೆದಿದೆ. ಇದನ್ನು ನೋಡಿ ಕೆಲವರು ಧನಾತ್ಮಕವಾಗಿ ಅಭಿಪ್ರಾಯವನ್ನು ಕೊಡುತ್ತಿದ್ದು, ಇನ್ನೂ ಕೆಲವರು ಕೆಟ್ಟದಾಗಿ ಕಾಮೆಂಟ್ ಮಾಡುತ್ತಾರೆ ಎಂದು ಮನಬಿಚ್ಚಿ ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾಳೆ ಫಸ್ಟ್ ಡೇ ಕೆಲಸಕ್ಕೆ ಹೋಗಬೇಕಿದ್ದವ ಮಸಣಕ್ಕೆ – ಅಪಘಾತದಲ್ಲಿ ತಂದೆ, ಮಗ ಸ್ಥಳದಲ್ಲೇ ಸಾವು

    ನಾಳೆ ಫಸ್ಟ್ ಡೇ ಕೆಲಸಕ್ಕೆ ಹೋಗಬೇಕಿದ್ದವ ಮಸಣಕ್ಕೆ – ಅಪಘಾತದಲ್ಲಿ ತಂದೆ, ಮಗ ಸ್ಥಳದಲ್ಲೇ ಸಾವು

    ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯೊಡೆದ ಪರಿಣಾಮ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ಗೇಟ್ ಬಳಿ ನಡೆದಿದೆ.

    ಮೃತರನ್ನು ನರಸಿಂಹರಾಜ್(56) ಹಾಗೂ ಕಿರಣ್(23) ಎಂದು ಗುರುತಿಸಲಾಗಿದೆ. ಮೃತ ಕಿರಣ್‍ಗೆ ಹೊಸದಾಗಿ ಕೆಲಸ ಸಿಕ್ಕಿತ್ತು. ನಾಳೆ(ಸೋಮವಾರ) ಕಿರಣ್ ಮೊದಲ ದಿನದ ಕೆಲಸಕ್ಕೆ ಹೋಗಬೇಕಿತ್ತು. ಈ ಹಿನ್ನೆಲೆ ನರಸಿಂಹರಾಜ್ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಪೂಜೆ ಮಾಡಿಸಿಕೊಂಡು ಬೆಂಗಳೂರಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಮಕ್ಕಳನ್ನು ನೋಡಿಕೊಳ್ಳಲು ಆಗುತ್ತಿಲ್ಲವೆಂದು ಪತ್ನಿಯನ್ನ ಕೊಂದು ಬಾತ್‍ರೂಮ್‍ನಲ್ಲಿ ಬಚ್ಚಿಟ್ಟ 

    ಮೃತರು ಮೂಲತಃ ಬೆಂಗಳೂರಿನ ರಾಜಾಜಿನಗರದವರು. ನಾಳೆಯಿಂದ ಮಗ ಕೆಲಸಕ್ಕೆ ಹೋಗುತ್ತಾನೆ ಎಂದು ನರಸಿಂಹರಾಜ್ ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಬಂದಿದ್ದರು. ಪೂಜೆ ಮುಗಿಸಿಕೊಂಡು ಬೆಂಗಳೂರಿಗೆ ಹಿಂತಿರುಗುವಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಿರಣ್ ತಂದೆ ನರಸಿಂಹರಾಜ್ ಸ್ಥಿತಿ ಗಂಭೀರವಾಗಿದ್ದ ಪರಿಣಾಮ ಹಾಸನದ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಬೇಲೂರು ಬಳಿ ಸಾವನ್ನಪ್ಪಿದ್ದಾರೆ. ಬಳಿಕ ಅವರ ಮೃತದೇಹವನ್ನು ಮೂಡಿಗೆರೆಗೆ ವಾಪಸ್ ತಂದಿದ್ದಾರೆ.

    ಕಾರಿನಲ್ಲಿದ್ದ ತಾಯಿ ಭಾರತಿ(52) ಹಾಗೂ ಪ್ರೇರಣಾ(19) ಸ್ಥಿತಿ ಗಂಭೀರವಾಗಿದೆ. ಪ್ರೇರಣಾಳ ಕೈ ಹಾಗೂ ಕಾಲಿನ ಮೂಳೆ ಮುರಿದು ಹೋಗಿದೆ ಎಂದು ಹೇಳಲಾಗಿದೆ. ಅವರಿಬ್ಬರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕೋಮು ಗಲಭೆ ಸೃಷ್ಟಿಸುವ ಪೋಸ್ಟ್ ಹಾಕಿದ ಹಿರಿಯ ಸರ್ಕಾರಿ ಅಧಿಕಾರಿ ಅರೆಸ್ಟ್

    ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮೂಡಿಗೆರೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Live Tv

  • 12 ದಿನದ ಮಗು ಬಿಟ್ಟು ಶೂಟಿಂಗ್‍ಗೆ ಮರಳಿದ ಭಾರತಿ ಸಿಂಗ್ – ಮಗು ನೆನೆದು ಕಣ್ಣೀರು

    12 ದಿನದ ಮಗು ಬಿಟ್ಟು ಶೂಟಿಂಗ್‍ಗೆ ಮರಳಿದ ಭಾರತಿ ಸಿಂಗ್ – ಮಗು ನೆನೆದು ಕಣ್ಣೀರು

    ಬಾಲಿವುಡ್ ಡ್ರಾಮಾ ಕ್ವೀನ್, ನಿರೂಪಕಿ ಮತ್ತು ಹಾಸ್ಯ ನಟಿ ಭಾರತಿ ಸಿಂಗ್ ಇತ್ತೀಚೆಗಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ಏಪ್ರಿಲ್ 3ರಂದು ಭಾರತಿ ಸಿಂಗ್ ಹಾಗೂ ಹರ್ಷ್ ಲಿಂಬಾಣಿಯಾ ತಮ್ಮ ಮುದ್ದು ಮಗನನ್ನು ವೆಲ್‍ಕಮ್ ಮಾಡಿಕೊಂಡಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಕ್ಯಾಮೆರಾ ಕಣ್ಣಿಗೂ ಬಿದ್ದಿದ್ದರು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

    ಇದೀಗ ಮಗುವಾದ 12 ದಿನಕ್ಕೇ ಭಾರತಿ ಸಿಂಗ್ ಕೆಲಸಕ್ಕೆ ಮರಳಿದ್ದು, ತಮ್ಮ ಮಗುವನ್ನು ನೆನಪಿಸಿಕೊಂಡು ತುಂಬಾ ಭಾವುಕರಾಗಿದ್ದಾರೆ. ಸಾಮಾನ್ಯವಾಗಿ ಮಗು ಜನಿಸಿದ ನಂತರ ಕನಿಷ್ಠ ಐದಾರು ತಿಂಗಳುಗಳ ಕಾಲ ತಾಯಂದಿರು ಮಗುವನ್ನು ಬಿಟ್ಟು ಎಲ್ಲೂ ಬರುವುದಿಲ್ಲ. ಆದರೆ ಭಾರತಿ ಸಿಂಗ್ ಹಸುಗೂಸಿಟ್ಟುಕೊಂಡು ಕೆಲಸಕ್ಕೆ ಮರಳಿದ್ದಾರೆ. ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ನಿರೂಪಕಿಯಾಗಿ ಭಾರತಿ ಸಿಂಗ್ ಕಾರ್ಯನಿರ್ವಹಿಸುತ್ತಿದ್ದು, ಸದ್ಯ ಅವರು ಈ ಕಾರ್ಯಕ್ರಮದ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದಾರೆ.  ಇದನ್ನೂ ಓದಿ: ಬೇಬಿ ಬಂಪ್ ಫೋಟೋಗೆ ಮಜವಾದ ಕ್ಯಾಪ್ಷನ್ ಕೊಟ್ಟ ಭಾರತಿ ಸಿಂಗ್

     

    View this post on Instagram

     

    A post shared by Viral Bhayani (@viralbhayani)

    ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ‘ನಾನು ಇಂದು ತುಂಬಾ ಅಳುತ್ತಿದ್ದೆ. ಮಗುವಿಗೆ ಕೇವಲ 12 ದಿನಗಳಾಗಿವೆ. ಆದರೆ ಕೆಲಸ ಕೂಡ ಬಹಳ ಮುಖ್ಯವಾಗಿದೆ’ ಎಂದು ಕಣ್ಣೀರು ಹಾಕಿದ್ದಾರೆ.  ಇದನ್ನೂ ಓದಿ: ಡ್ರಾಮಾ ಕ್ವೀನ್ ಭಾರತಿ ಸಿಂಗ್ ಗಂಡನಿಗೆ 6 ಮಕ್ಕಳು ಬೇಕಂತೆ : ಹೆರಿಗೆ ನೋವಿನ ಕ್ಷಣಗಳನ್ನು ಹಂಚಿಕೊಂಡ ಹಾಸ್ಯ ಕಲಾವಿದೆ

    ಈ ಮುನ್ನ ಭಾರತಿ ಸಿಂಗ್ ಅವರು ಗರ್ಭಿಣಿಯಾಗಿದ್ದಾಗಲೂ ಮಗುವಿಗೆ ಜನ್ಮ ನೀಡುವವರೆಗೂ ಕೆಲಸ ಮಾಡಿದ್ದರು. ನಂತರ ಡೆಲಿವರಿ ಸಮಯದಲ್ಲಿ ಭಾರತಿ ಸಿಂಗ್ ಬದಲಾಗಿ ಸುರಭಿ ಚಂದನಾ ಈ ಕಾರ್ಯಕ್ರಮ ಹೋಸ್ಟ್ ಮಾಡಿದ್ದರು. ಇದೀಗ ಮಗುವಾಗಿ 12 ದಿನಗಳಲ್ಲಿಯೇ ಭಾರತಿ ಸಿಂಗ್ ಮತ್ತೆ ಕೆಲಸಕ್ಕೆ ಮರಳಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

  • ಮಗ MLA- ತಾಯಿ ಸರ್ಕಾರಿ ಶಾಲೆಯಲ್ಲಿ ಸ್ವೀಪರ್

    ಮಗ MLA- ತಾಯಿ ಸರ್ಕಾರಿ ಶಾಲೆಯಲ್ಲಿ ಸ್ವೀಪರ್

    ಚಂಡೀಗಢ: 2022ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಲಭ್ ಸಿಂಗ್ ಉಗೋಕೆ ಗೆಲವು ಸಾಧಿಸಿದ್ದಾರೆ. ಇವರ ಅವರ ತಾಯಿ ಸರ್ಕಾರಿ ಶಾಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸ್ವೀಪರ್ ಆಗಿ ಕೆಲಸ ಮಾಡುವ ಮೂಲಕವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಪಂಜಾಬ್‍ನಲ್ಲಿ ತನ್ನ ಮಗ ಗೆದ್ದ ನಂತರವೂ ಬಲ್ದೇವ್ ಕೌರ್ ಅವರು ಸರ್ಕಾರಿ ಶಾಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸ್ವೀಪರ್ ಆಗಿ ಕೆಲಸ ಮಾಡುವುದನ್ನು ಮುಂದುವರೆಸಿದ್ದಾರೆ. ಉಗೋಕೆ ಅವರ ತಂದೆ ದರ್ಶನ್ ಸಿಂಗ್ ಚಾಲಕರಾಗಿದ್ದಾರೆ. ಅವರು ಸಹ ನಮ್ಮ ಕುಟುಂಬವು ಹಿಂದಿನ ರೀತಿಯಲ್ಲಿಯೇ ಮುಂದುವರಿಯುತ್ತದೆ. ಮಗ ಶಾಸಕರಾದ ನಂತರ ಹೆಚ್ಚೇನೂ ಬದಲಾಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿಮ್ಮನ್ನ ಚಾಮುಂಡೇಶ್ವರಿ ಕ್ಷೇತ್ರದ ಜನರೇ ತಿರಸ್ಕಾರ ಮಾಡಿದ್ದಾರೆ: ಸಿದ್ದು ಕಾಲೆಳೆದ ಬಿಜೆಪಿ

    ಬಲ್ದೇವ್ ಕೌರ್ ಮಾತನಾಡಿ, ನಾವು ಬಹಳ ಹಿಂದಿನಿಂದಲೂ ಹಣ ಸಂಪಾದಿಸಲು ಕಷ್ಟಪಟ್ಟು ಶ್ರಮಿಸಿದ್ದೇವೆ. ನನ್ನ ಮಗ ಈಗ ಶಾಸಕನಾಗಿದ್ದಾನೆ. ಆತ ಗೌರವಾನ್ವಿತ ಸ್ಥಾನ ಪಡೆದರೂ, ನನ್ನ ಹಳೆಯ ಕಾಯಕವನ್ನು ನಾನು ಮುಂದುವರೆಸುತ್ತೇನೆ. ನಾನು ಶಾಲೆಯಲ್ಲಿ ಈಮುನ್ನ ನಿರ್ವಹಿಸುತ್ತಿದ್ದ ಕರ್ತವ್ಯವನ್ನು ಮುಂದುವರಿಸುತ್ತೇನೆ ಎಂದಿದ್ದಾರೆ.

    ತಮ್ಮ ಮಗನ ಗೆಲುವು ತಮ್ಮ ಜೀವನದ ಪ್ರಮುಖ ಭಾಗವಾಗಿದೆ ಎಂದು ಅವರು ಖುಷಿಗೊಂಡಿದ್ದಾರೆ. ಅಲ್ಲದೇ ಅವರಿಗೆ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಿದ್ದ ತಮ್ಮ ಮಗ ಗೆಲ್ಲುತ್ತಾನೆ ಎಂದು ಭಾರೀ ವಿಶ್ವಾಸ ಇತ್ತು. ಲಭ್ ಸಿಂಗ್ ಉಗೋಕೆ ಆಮ್ ಆದ್ಮಿ ಪಕ್ಷದಿಂದ ಗೆಲುವು ಸಾಧಿಸಿದ್ದಾರೆ. ಎಎಪಿ ಅಭ್ಯರ್ಥಿಯಾಗಿ ಪಕ್ಷದ ಚಿಹ್ನೆ ಪೊರಕೆಯಾಗಿರುವುದು ಬಹಳ ಸಂತೋಷ ತಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಕ್ಷಾಂತರ ಕೇವಲ ಊಹಾಪೋಹ: ಬೊಮ್ಮಾಯಿ

    ಪಂಜಾಬ್‍ನ ಭದೌರ್ ವಿಧಾನಸಭಾ ಕ್ಷೇತ್ರದಲ್ಲಿ 37,550 ಮತಗಳ ಅಂತರದಿಂದ ಲಭ್ ಸಿಂಗ್ ಉಗೋಕೆ, ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಚರಂಜಿತ್ ಸಿಂಗ್ ಚನ್ನಿ ಅವರ ಸೋಲಿಸಿದ್ದಾರೆ. ಈಮೂಲಕ ಮಗ ಶಾಸಕನಾದರೂ ತಮ್ಮ ಮೊದಲಿನ ಕೆಲಸವನ್ನೇ ಮುಂದುವರೆಸುವುದಾಗಿ ಅವರು ತಿಳಿಸಿದ್ದಾರೆ.

     

  • ಛತ್ತೀಸ್‍ಗಢ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ

    ಛತ್ತೀಸ್‍ಗಢ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ

    ರಾಯ್ಪರ: ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಗಣರಾಜ್ಯೋತ್ಸವ ಅಂಗವಾಗಿ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ಕೊಟ್ಟಿದ್ದಾರೆ. ಸರ್ಕಾರಿ ಕಚೇರಿಗಳು ವಾರದಲ್ಲಿ 5 ದಿನ ಮಾತ್ರ ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಸರ್ಕಾರಿ ನೌಕರರ ದಕ್ಷತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ, ಛತ್ತೀಸ್‍ಗಢ ಸರ್ಕಾರವು ವಾರದಲ್ಲಿ ಐದು ದಿನ ಕೆಲಸ ನಿಯಮವನ್ನು ಜಾರಿಗೊಳಿಸುತ್ತಿದೆ. ಪಿಂಚಣಿ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆಯನ್ನು ಸಹ ಶೇಕಡಾ 10 ರಿಂದ ಶೇಕಡಾ 14 ಕ್ಕೆ ಹೆಚ್ಚಿಸಲಾಗುವುದು ಎಂದು ಬಘೇಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಸೋದರಮಾವನ ಜೊತೆ ಸೇರಿ ಪತಿಯನ್ನೇ ಕೊಂದಳು!

    ಮಹಿಳೆಯರ ಸುರಕ್ಷತೆಯನ್ನು ಬಲಪಡಿಸಲು ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸುರಕ್ಷತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ವಸತಿ ಪ್ರದೇಶಗಳಲ್ಲಿ ಕೈಗೊಳ್ಳಲಾಗುತ್ತಿರುವ ಸಣ್ಣ ವಾಣಿಜ್ಯ ಚಟುವಟಿಕೆಗಳಿಗೆ ನ್ಯಾಯ ಒದಗಿಸುವ ಮಸೂದೆಯನ್ನು ರಾಜ್ಯ ಸರ್ಕಾರವು ಪರಿಚಯಿಸುತ್ತಿದೆ. ಇದು ಸಾವಿರಾರು ಸಣ್ಣ ಉದ್ಯಮಿಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಿಂಚಣಿ ಪಡೆಯಲು ಚಿಕ್ಕಪ್ಪನ ಶವವನ್ನ ಪೋಸ್ಟ್ ಆಫೀಸ್‍ಗೇ ತಂದ!

    ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಸಾರ್ವಜನಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗುವಂತೆ ರಾಜ್ಯಾದ್ಯಂತ ಹೆಚ್ಚಿನ ಸಂಖ್ಯೆಯ ಸಾರಿಗೆ ಸೌಲಭ್ಯ ಕೇಂದ್ರಗಳನ್ನು ತೆರೆಯಲಾಗುವುದು. ಇದಕ್ಕೆ ಪೂರಕವಾಗಿ ಕಲಿಕಾ ಚಾಲನಾ ಪರವಾನಗಿ ನೀಡುವ ನಿಯಮಗಳನ್ನು ಸರಳೀಕರಿಸಲಾಗುವುದು. ಛತ್ತೀಸ್‍ಗಢವು ದಟ್ಟವಾದ ಅರಣ್ಯ ಪ್ರದೇಶವಾಗಿದ್ದು, ಬಹುಪಾಲು ಬುಡಕಟ್ಟು ಜನಸಂಖ್ಯೆಯ ಜೀವನೋಪಾಯವು ಅರಣ್ಯಗಳ ಮೇಲೆ ಅವಲಂಬಿತವಾಗಿದೆ. ಈ ಅರಣ್ಯವಾಸಿಗಳಿಗೆ ಕೆಲವು ಯೋಜನೆಗಳನ್ನು ಮುಂದಿನ ದಿನಗಳಲ್ಲಿ ತರುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಂದಿಗೂ ಮನೆಗೆ ಬಾರದ ಮಾಲಕಿಗಾಗಿ ಕಾಯುತ್ತಿರುವ ನಾಯಿ – ವೀಡಿಯೋ ವೈರಲ್!

  • ಕ್ಲಾಸ್ ರೂಮ್‍ನಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ- ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್

    ಕ್ಲಾಸ್ ರೂಮ್‍ನಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ- ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್

    ಯಾದಗಿರಿ: ಶಾಲೆಗೆ ಬರದೇ ಮಕ್ಕಳು ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ. ಶಾಲೆ ಓಪನ್ ಆದ್ರೂ ಶಾಲೆ ಕಡೆ ಮುಖ ಮಾಡದ ವಿದ್ಯಾರ್ಥಿಗಳು, ಶಾಲೆಗೆ ಗೈರು ಕೂಲಿಗೆ ಹೋಗುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದ ಯಾದಗಿರಿ ಜಿಲ್ಲೆಯ ವಿದ್ಯಾರ್ಥಿಗಳು ಬಾಲಕಾರ್ಮಿಕರಾಗುತ್ತಿದ್ದಾರೆ.

    ಇಡೀ ಕ್ಲಾಸ್ ರೂಮ್‍ನಲ್ಲಿ ಒಬ್ಬನೇ ಒಬ್ಬ ವಿದ್ಯಾರ್ಥಿ ಆರನೇ ತರಗತಿಯಲ್ಲಿ ಒಬ್ಬ ವಿದ್ಯಾರ್ಥಿ, ಏಳನೇ ತರಗತಿಯಲ್ಲಿ ನಾಲ್ಕು ಮಕ್ಕಳು ಇದ್ದರು. ಉಳಿದ ಮಕ್ಕಳು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು,ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಸಂಬರ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪರಿಸ್ಥಿತಿಯನ್ನು,ಹೇಳೊರಿಲ್ಲ ಕೇಳೋರಿಲ್ಲ ಎಂಬುವಂತಾಗಿದೆ. ಅಮಿತ್ ಶಾಗೆ ವಿಶ್ ಮಾಡಿ ಟ್ರೋಲ್‍ಗೊಳಗಾದ ನಟಿ ಸಾರಾ ಅಲಿಖಾನ್

    ಈ ಶಾಲೆಯಲ್ಲಿ ಸುಮಾರು 250 ಮಕ್ಕಳ ದಾಖಲಾತಿದ್ದು, 6 ನೇ ತರಗತಿಯಲ್ಲಿ ಒಬ್ಬ ವಿದ್ಯಾರ್ಥಿ ಶಾಲೆಗೆ ಬಂದ್ರೆ ಇನ್ನೂಳಿದ 49 ವಿದ್ಯಾರ್ಥಿಗಳು ಕೆಲಸಕ್ಕೆ ಹೋಗುತ್ತಿದ್ದಾರೆ. 7ನೇ ತರಗತಿಯಲ್ಲಿ 60 ಮಕ್ಕಳಿದ್ದು, ಇದರಲ್ಲಿ 4 ಜನ ವಿದ್ಯಾರ್ಥಿಗಳು ಶಾಲೆಗೆ ಬರ್ತಿದ್ದಾರೆ. ಹಲವಾರು ದಿನಗಳಿಂದ ಇದೆ ಪರಿಸ್ಥಿತಿ ನಡಿತೀದ್ರೂ ಶಿಕ್ಷಕರು ಫುಲ್ ಸೈಲಂಟ್ ಆಗಿದ್ದಾರೆ.

    ಮಕ್ಕಳು ಕೂಲಿಗೆ ಹೋದ್ರು ಶಿಕ್ಷಣ ಇಲಾಖೆ ಮಾತ್ರ ಕಣ್ಮುಚ್ಚಿದೆ. ಮಕ್ಕಳ ಕೂಲಿ ಕೆಲಸವೇ ನೆಪಾವಗಿಟ್ಟುಕೊಂಡ ಟೀಚರ್ಸ್, ಕಾಟಾಚಾರಕ್ಕೆ ಶಾಲೆಗೆ ಬಂದು, ಹರಟೆ ಹೊಡೆದು ಮತ್ತೆ ಸಂಜೆ ಮನೆಯ ವಾಪಸ್ ಆಗತ್ತಾರೆ.

    ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‌ನಲ್ಲಿ ಇದು ಬಯಲಾಗಿದೆ. ಉರಿ ಬಿಸಿಲು, ಜಡಿ ಮಳೆಯನ್ನದೇ ದಿನವಿಡೀ ಮಕ್ಕಳು ಹತ್ತಿ ಹೊಲದಲ್ಲಿ ದುಡಿಯುತ್ತಿದ್ದಾರೆ. ಸ್ವತಃ ಪೋಷಕರೇ ಮಕ್ಕಳನ್ನು ಕೂಲಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಯಾದಗಿರಿ ಜಿಲ್ಲೆಯಾದ್ಯಂತ ಬಾಲ ಕಾರ್ಮಿಕರು ಹೆಚ್ಚುತ್ತಿದ್ದು, 150 ರೂ. ಕೂಲಿಗಾಗಿ ಈಡೀ ದಿನ ಶಾಲಾ ಮಕ್ಕಳು ದುಡಿವಂತಾಗಿದೆ.ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಸಂಬರ, ವಂಕಸಂಬರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಈ ಪರಿಸ್ಥಿತಿ ನಿರ್ಮಾಣವಾಗಿದೆ.

    ಇನ್ನೂ ಪೋಷಕರ ಒತ್ತಾಯಿಂದ ಕೂಲಿಗೆ ತೆರಳುತ್ತಿರುವ ವಿದ್ಯಾರ್ಥಿಗಳು ಶಾಲೆಯನ್ನು ನೆನದು ಕಣ್ಣೀರು ಹಾಕುತ್ತಿದ್ದಾರೆ. ಸರ್ ಶಾಲೆಗೆ ಹೋಗು ಅನ್ನಸತ್ತಿದೆ ಆದರೆ ಬಡತನ ಅದಕ್ಕೆ ಕೂಲಿಗೆ ಬಂದೆ. ನಮ್ಮ ಸರ್, ಗೆಳೆಯರು ನೆನಪಾಗುತ್ತಾರೆ, ಕೂಲಿ ಮಾಡೋಕೆ ಕಷ್ಟ ಆಗುತ್ತಿದೆ ಎಂದು ಪಬ್ಲಿಕ್ ಟಿವಿ ಕ್ಯಾಮರಾ ಎದುರು ಮುಗ್ಧ ವಿದ್ಯಾರ್ಥಿಗಳ ಅಳಲು ತೋಡಿಕೊಂಡಿದ್ದಾರೆ.

  • ಕೂಲಿ ಕೆಲಸಕ್ಕೆ ಮಕ್ಕಳನ್ನು ಕಳಿಸುವ ಪಾಲಕರಿಗೆ ದಂಡ- ಗ್ರಾಮದಲ್ಲಿ ಡಂಗೂರ

    ಕೂಲಿ ಕೆಲಸಕ್ಕೆ ಮಕ್ಕಳನ್ನು ಕಳಿಸುವ ಪಾಲಕರಿಗೆ ದಂಡ- ಗ್ರಾಮದಲ್ಲಿ ಡಂಗೂರ

    ಬಳ್ಳಾರಿ: ಕೂಲಿ ಕೆಲಸಕ್ಕೆ ಮಕ್ಕಳನ್ನು ಕಳಿಸುವ ಪಾಲಕರಿಗೆ ದಂಡ ಹಾಕಲಾಗುವುದು ಎಂದು ಬಳ್ಳಾರಿ ಜಿಲ್ಲೆಯ ಕುರುಗೋಡು ಕೋಳೂರು ಗ್ರಾಮದಲ್ಲಿ ಡಂಗೂರು ಹೊರಡಿಸಲಾಗಿದೆ.

    ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ರಿಂದ 10ತರಗತಿ ಒಟ್ಟು 184 ವಿದ್ಯಾರ್ಥಿಗಳು ಇದ್ದಾರೆ. ಆದರೆ ಶಾಲೆ ಪ್ರಾರಂಭವಾರದೂ ವಿದ್ಯಾರ್ಥಿಗಳ ಹಾಜರಾತಿ 50 ದಾಟಿಲ್ಲ. ಇದು ಶಿಕ್ಷಕರಿಗೆ ತೆಲೆನೋವು ಸೃಷ್ಟಿಸಿದೆ. ಮಕ್ಕಳನ್ನು ಶಾಲೆಗೆ ಬರುವ ನಿಟ್ಟಿನಲ್ಲಿ ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರು, ಮುಖ್ಯ ಶಿಕ್ಷಕ ಹಾಗೂ ಶಿಕ್ಷಕರು ಸೇರಿ ಸಭೆಯನ್ನು ನಡೆಸಿದ್ದಾರೆ. ಇದನ್ನೂ ಓದಿ: ನೀಚ ಕೃತ್ಯ ಮಾಡುವವರಿಗೆ ಪೊಲೀಸರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ: ಅರಗ ಜ್ಞಾನೇಂದ್ರ

    ಸಭೆಯಲ್ಲಿ ಚರ್ಚಿಸುವ ಸಂದರ್ಭದಲ್ಲಿ ಮಕ್ಕಳನ್ನು ಪಾಲಕರು ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಕೂಲಿ ಕೆಲಸಕ್ಕೆ ಪಾಲಕರನ್ನು ಕರೆದುಕೊಂಡು ಹೋದರೆ ದಂಡ ಹಾಕುವ ಕುರಿತು ತೀರ್ಮಾನಿಸಲಾಗಿದೆ. ಹೀಗಾಗಿ ಪ್ರತಿ ಓಣಿಯಲ್ಲಿ ದಂಡ ಹಾಕುವ ಕುರಿತು ಡಂಗೂರ ಸಾರಲಾಗಿದೆ. ಈ ಡಂಗೂರ ಸಾರಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ಸಾಕಷ್ಟು ಸದ್ದು ಮಾಡುತ್ತಿದೆ.