Tag: workers protest

  • ಹೆಚ್ಚು ಕಡಿಮೆ ಆದ್ರೆ ನೀವೇ ಜವಾಬ್ದಾರಿ, ಬಿ ಕೇರ್ ಫುಲ್: ಭಾಸ್ಕರ್ ರಾವ್

    ಹೆಚ್ಚು ಕಡಿಮೆ ಆದ್ರೆ ನೀವೇ ಜವಾಬ್ದಾರಿ, ಬಿ ಕೇರ್ ಫುಲ್: ಭಾಸ್ಕರ್ ರಾವ್

    ಬೆಂಗಳೂರು: ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಕರೆದಿರುವ ಭಾರತ್ ಬಂದ್‍ಗೆ ಎಲ್ಲೆಡೆ ಪರ-ವಿರೋಧಗಳು ವ್ಯಕ್ತವಾಗುತ್ತಿದೆ. ಈಗಾಗಲೇ 46 ಸಂಘಟನೆಗಳು ಪ್ರತಿಭಟನೆಗೆ ಅವಕಾಶವನ್ನು ಪಡೆದುಕೊಂಡಿವೆ. ಆದರೆ ಪೊಲೀಸ್ ಇಲಾಖೆ ತುಂಬಾ ಎಚ್ಚರಿಕೆಯಿಂದ ಇರಬೇಕು ಅಂತ ಸೂಚನೆ ನೀಡಲಾಗಿದೆ.

    ನಾಳೆಯ ಭಾರತ್ ಬಂದ್‍ಗೆ ಖಡಕ್ ಸೂಚನೆಗಳನ್ನು ನೀಡಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪ್ರತಿಯೊಂದು ಸ್ಟೇಷನ್ ವ್ಯಾಪ್ತಿಯ ಇನ್ಸ್ ಪೆಕ್ಟರ್ ಗಳಿಗೆ ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ಎಚ್ಚರಿಕೆ ವಹಿಸಬೇಕು. ನಿಮ್ಮ ಎಚ್ಚರಿಕೆಯನ್ನೂ ಮೀರಿ ಪ್ರತಿಭಟನಾ ರ‍್ಯಾಲಿಗಳು, ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸೋದು, ಕಲ್ಲು ತೂರಾಟ ಮಾಡಿದ ಕುರಿತು ವರದಿಯಾದರೆ ಅದಕ್ಕೆ ಇನ್ಸ್‍ಪೆಕ್ಟರ್‍ಗಳೇ ಜವಾಬ್ದಾರಿ ಎಂದು ವಾರ್ನ್ ಮಾಡಿದ್ದಾರೆ. ಇದನ್ನೂ ಓದಿ: ಬುಧವಾರ ಭಾರತ್ ಬಂದ್ – ಏನು ಇರುತ್ತೆ? ಏನು ಇರಲ್ಲ?

    ಇಂದು ರಾತ್ರಿಯಿಂದಲೇ ಅತಿ ಹೆಚ್ಚು ಗಸ್ತು ತಿರುಗಲು ಸೂಚನೆ ನೀಡಲಾಗಿದೆ. ಬೆಳ್ಳಂಬೆಳಗ್ಗೆ ಸಂಚರಿಸುವ ಬಸ್‍ಗಳಿಗೂ ಭದ್ರತೆಯನ್ನು ಒದಗಿಸಬೇಕು. ಗುಂಪು ಸೇರಿ ಹೊಂಚು ಹಾಕುವವರ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

  • ಪ್ರತಿಭಟನಾಕಾರರಿಗೆ ದಾವಣಗೆರೆ ಡಿಸಿ ಖಡಕ್ ಎಚ್ಚರಿಕೆ

    ಪ್ರತಿಭಟನಾಕಾರರಿಗೆ ದಾವಣಗೆರೆ ಡಿಸಿ ಖಡಕ್ ಎಚ್ಚರಿಕೆ

    – ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ

    ದಾವಣಗೆರೆ: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಒಂದು ದಿನದ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರಿಗೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಖಡತ್ ಎಚ್ಚರಿಕೆ ನೀಡಿದ್ದಾರೆ.

    ಮುಷ್ಕರದ ಬಿಗಿ ಭದ್ರತೆಯ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪ್ರತಿಭಟನೆ ಸಾಂವಿಧಾನಿಕ ಹಕ್ಕು, ಅದನ್ನು ಶಾಂತಿಯುತವಾಗಿ ನಡೆಸಬೇಕು. ಅದು ಬಿಟ್ಟು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಏನಾದರೂ ನಷ್ಟವಾದರೆ ಹಾಗೂ ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಈಗಾಗಲೇ ಎಲ್ಲಾ ಕಾರ್ಮಿಕ ಮುಖಂಡರ ಜೊತೆ ಚರ್ಚಿಸಲಾಗಿದೆ. ಜಯದೇವ ಸರ್ಕಲ್ ನಿಂದ ನಗರದ ಪ್ರಮುಖ ರಸ್ತೆಗಳಲ್ಲಿ ರ್ಯಾಲಿ ಹಮ್ಮಿಕೊಂಡು ಗಡಿಯಾರ ಕಂಬದ ಬಳಿ ಸಮಾವೇಶ ಹಮ್ಮಿಕೊಂಡಿದ್ದಾರೆ. ಇದೆಲ್ಲ ಶಾಂತಿಯುತವಾಗಿ ನಡೆಸಲು ಸೂಚಿಸಲಾಗಿದೆ. ಪೊಲೀಸ್ ಬಿಗಿ ಭದ್ರತೆಯನ್ನು ನೀಡಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಸಾರಿಗೆಯಲ್ಲಿ ಕೂಡ ಯಥಾಸ್ಥಿತಿ ಇರುತ್ತದೆ ಎಂದು ಡಿಸಿ ಸ್ಪಷ್ಟಪಡಿಸಿದರು.