Tag: workers

  • ಕಾಲಿನಲ್ಲಿ ತುಳಿಯುವುದಲ್ಲದೆ ನೆಕ್ಕಿ ರಸ್ಕ್ ಪ್ಯಾಕ್ – ವೀಡಿಯೋ ವೈರಲ್

    ಕಾಲಿನಲ್ಲಿ ತುಳಿಯುವುದಲ್ಲದೆ ನೆಕ್ಕಿ ರಸ್ಕ್ ಪ್ಯಾಕ್ – ವೀಡಿಯೋ ವೈರಲ್

    ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುವ ಕೆಲಸಗಾರರ ಗುಂಪೊಂದು ತಮ್ಮ ಪಾದಗಳಿಂದ ರಸ್ಕ್‌ಗಳನ್ನು ತುಳಿಯುವುದರ ಜೊತೆಗೆ ಕೆಲವು ರಸ್ಕ್‌ಗಳನ್ನು ನೆಕ್ಕಿ ಪ್ಯಾಕಿಂಗ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    rusks

    ವೀಡಿಯೋದಲ್ಲಿ ಕಾರ್ಖಾನೆಯಲ್ಲಿ ಕೆಲಸಗಾರರು ಒಟ್ಟಿಗೆ ಕುಳಿತುಕೊಂಡು ರಸ್ಕ್ ಪ್ಯಾಕ್ ಮಾಡುತ್ತಿರುತ್ತಾರೆ. ಈ ವೇಳೆ ವ್ಯಕ್ತಿಗಳಿಬ್ಬರು ಕುಳಿತುಕೊಂಡು ಉದ್ದೇಶಪೂರ್ವಕವಾಗಿ ತಮ್ಮ ಪಾದವನ್ನು ರಸ್ಕ್ ಮೇಲೆ ಇಡುವುದನ್ನು ಕಾಣಬಹುದಾಗಿದೆ. ಅಲ್ಲದೇ ನೆಲದ ಮೇಲೆ ಟ್ರೇನಲ್ಲಿ ಇರಿಸಲಾದ ರಸ್ಕ್‌ಗಳನ್ನು ಉಗುಳಿ, ನೆಕ್ಕಿ ಕವರ್‍ನಲ್ಲಿ ಪ್ಯಾಕಿಂಗ್ ಮಾಡುತ್ತಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ರಾತ್ರಿಯೆಲ್ಲಾ ಸುರಿದ ಮಳೆ – ಜೈನ್ ಆಸ್ಪತ್ರೆಗೆ ನುಗ್ಗಿದ ನೀರು

    rusks

    ಈ ವೀಡಿಯೋವನ್ನು ಶಿವಕುಮಾರ್ ಪಾರ್ಥಸಾರಥಿ ಎಂಬವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, ಸಾವಿರಾರು ಬೇಕರಿಗಳನ್ನು ಅಲ್ಲಿನ ಕೆಲಸಗಾರರು ಹಾಳು ಮಾಡುತ್ತಿದ್ದಾರೆ. ಈ ವೀಡಿಯೋ ರಾಜ್ಯದ ಪೊಲೀಸರಿಗೆ ತಲುಪುವವರೆಗೂ ಶೇರ್ ಮಾಡಿ. ಪೊಲೀಸರಿಗೆ ಇವರನ್ನು ಪತ್ತೆ ಹಚ್ಚುವುದು ಕಷ್ಟವಲ್ಲ. ಅಧಿಕಾರಿಗಳಿಗೆ ತಲುಪುವವರೆಗೂ ಕೇವಲ ಶೇರ್ ಮಾಡಿ. ಸ್ನೇಹಿತರೇ ಇದನ್ನು ನೀವು ಎಷ್ಟು ಬೇಗ ಶೇರ್ ಹಾಗೂ ಫಾರ್ವರ್ಡ್ ಮಾಡುತ್ತಿರೋ ಅಷ್ಟು ಬೇಗ ಕಿಡಿಗೇಡಿಗಳು ಸಿಕ್ಕಿ ಹಾಕಿಕೊಳ್ಳುತ್ತಾರೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಆನೇಕಲ್ ಬಳಿ ಹಳಿಯಲ್ಲಿ ಸಿಲುಕಿಕೊಂಡ ಕ್ಯಾಂಟರ್ – ಎಕ್ಸ್‌ಪ್ರೆಸ್‌ ರೈಲು ಡಿಕ್ಕಿಗೆ ಲಾರಿ ಎಂಜಿನ್ ಪೀಸ್ ಪೀಸ್

    ಸದ್ಯ ಈ ವೀಡಿಯೋ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

  • ಬೆಲೆ ಏರಿಕೆ ಖಂಡಿಸಿ 500ಕ್ಕೂ ಹೆಚ್ಚು ಸೈಕಲ್‍ಗಳಲ್ಲಿ ರಸ್ತೆಗಿಳಿದ ಜೆಡಿಎಸ್ ಕಾರ್ಯಕರ್ತರು

    ಬೆಲೆ ಏರಿಕೆ ಖಂಡಿಸಿ 500ಕ್ಕೂ ಹೆಚ್ಚು ಸೈಕಲ್‍ಗಳಲ್ಲಿ ರಸ್ತೆಗಿಳಿದ ಜೆಡಿಎಸ್ ಕಾರ್ಯಕರ್ತರು

    ಹಾಸನ: ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು 500ಕ್ಕೂ ಹೆಚ್ಚು ಸೈಕಲ್‍ಗಳಲ್ಲಿ ರಸ್ತೆಗಿಳಿದು ಆಕ್ರೋಶ ಹೊರಹಾಕಿದ್ದಾರೆ.

    ಜೆಡಿಎಸ್ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ಸೈಕಲ್ ಏರಿ ರಸ್ತೆಗಿಳಿದ ಜೆಡಿಎಸ್ ಕಾರ್ಯಕರ್ತರು, ಹಾಸನದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಆಕ್ರೋಶ ಹೊರಹಾಕಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರ ಹಿತ ಕಡೆಗಣಿಸಿವೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಬೆಲೆ ಏರಿಕೆ ಆಗುತ್ತಲೇ ಇದೆ. ಇದರಿಂದ ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ದಸರಾ, ದೀಪಾವಳಿಗೆ ಸೌತ್ ಸೆಂಟ್ರಲ್ ರೈಲ್ವೆಯಿಂದ ಹೆಚ್ಚುವರಿ ರೈಲು ಸೇವೆ

    ಜೆಡಿಎಸ್ ಕಾರ್ಯಕರ್ತರ ಸೈಕಲ್ ಪ್ರತಿಭಟನೆಯಿಂದಾಗಿ ಹಾಸನದ ಹಲವೆಡೆ ಸಂಚಾರ ಅಸ್ತವ್ಯಸ್ತವಾಗಿತ್ತು. ಹಾಸನ ನಗರದಾದ್ಯಂತ ಸೈಕಲ್ ಏರಿ ಪ್ರತಿಭಟನೆ ನಡೆಸಿದ ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಬೆಲೆ ಏರಿಕೆ ವಿರುದ್ಧ ಮನವಿ ಸಲ್ಲಿಸಿದರು.

  • ಸರ್ಕಾರಿ ಆಸ್ಪತ್ರೆ, ಶಾಲೆ, ಸಕಾಲ ಸೇವೆಗಳನ್ನು ಜನರಿಗೆ ತಲುಪಿಸಿ- ಕಾರ್ಯಕರ್ತರಿಗೆ ಅಶ್ವಥ್ ನಾರಾಯಣ್ ಸಲಹೆ

    ಸರ್ಕಾರಿ ಆಸ್ಪತ್ರೆ, ಶಾಲೆ, ಸಕಾಲ ಸೇವೆಗಳನ್ನು ಜನರಿಗೆ ತಲುಪಿಸಿ- ಕಾರ್ಯಕರ್ತರಿಗೆ ಅಶ್ವಥ್ ನಾರಾಯಣ್ ಸಲಹೆ

    – ಜನರಿಗೆ ಸಹಾಯ ಹಸ್ತ ಚಾಚುವ ಜೊತೆಗೆ ತಳಮಟ್ಟದಿಂದ ಅಭಿಪ್ರಾಯ ಸಂಗ್ರಹ ಅಗತ್ಯ

    ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು ಹಾಗೂ ಸಕಾಲದಂತಹ ಸೇವೆಗಳನ್ನು ಜನರಿಗೆ ವೈಯಕ್ತಿಕ ಮಟ್ಟದಲ್ಲಿ ಸಿಗುವಂತೆ ಮಾಡಲು ಬಿಜೆಪಿ ಕಾರ್ಯಕರ್ತರು ಗಮನ ಕೊಡಬೇಕು ಎಂದು ಉನ್ನತ ಶಿಕ್ಷಣ ಹಾಗೂ ಐಟಿ, ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಸಲಹೆ ನೀಡಿದರು.

    ಬಿಜೆಪಿಯಿಂದ ಶನಿವಾರ ನಡೆದ ಬೆಂಗಳೂರು ಉತ್ತರ ಜಿಲ್ಲೆಯ ಸಂಘಟನಾತ್ಮಕ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಆಡಳಿತವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಬೆಂಗಳೂರು ನಗರದ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ಮಾಡಬೇಕು. ಸರ್ಕಾರಿ ಆಸ್ಪತ್ರೆಗಳ ಮತ್ತು ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಈ ಬಗ್ಗೆ ಜನರಿಗೆ ಇನ್ನೂ ಸರಿಯಾದ ಮಾಹಿತಿ ಇಲ್ಲವಾಗಿದೆ. ಈ ಕೊರತೆಯನ್ನು ಹೋಗಲಾಡಿಸುವುದು ಹಾಗೂ ಸೌಲಭ್ಯಗಳನ್ನು ಆದಷ್ಟು ಹೆಚ್ಚು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದರು. ಇದನ್ನೂ ಓದಿ: ರಾಜ್ಯದಲ್ಲಿಂದು 801 ಹೊಸ ಕೊರೊನಾ ಕೇಸ್- 1,142 ಡಿಸ್ಚಾರ್ಜ್, 15 ಸಾವು

    ಜನರಿಗೆ ಸೇವೆಗಳನ್ನು ಸುಲಭವಾಗಿ ತಲುಪಿಸಲು ಡಿ.ವಿ.ಸದಾನಂದಗೌಡರು ತಮ್ಮ ಆಡಳಿತಾವಧಿಯಲ್ಲಿ ಸಕಾಲ ಸೇವೆಯನ್ನು ಪರಿಚಯಿಸಿದರು. ಆದರೆ ಇದನ್ನು ಬಳಸಿಕೊಳ್ಳುತ್ತಿರುವವರ ಸಂಖ್ಯೆ ಕಡಿಮೆ ಇದೆ. ಇಂದು ತಂತ್ರಜ್ಞಾನದಿಂದಾಗಿ ಜನರ ಬೆರಳ ತುದಿಗೆ ಆಡಳಿತದ ಸೇವೆಗಳನ್ನು ತಲುಪಿಸಬಹುದಾಗಿದೆ. ಇದಕ್ಕೆ ಪೂರಕವಾಗಿ ಕಾರ್ಯಕರ್ತರು ಜನರೊಂದಿಗೆ ಸಂಪರ್ಕದಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಗಳ ಪ್ರಯೋಜನ ಪಡೆಯುವಂತೆ ಮಾಡಬೇಕು ಎಂದು ತಿಳಿಸಿದರು.

    ಜನರು ಖಾತೆ ಮಾಡಿಸುವುದು ಸೇರಿದಂತೆ ಇತರೆ ಸರ್ಕಾರಿ ಕೆಲಸಗಳಿಗೆ ಬ್ರೋಕರ್ ಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇಲ್ಲದಂತೆ ಮಾಡಬೇಕು. ಕಾರ್ಯಕರ್ತರು ನಾಯಕರ ಹಿಂದೆ ಓಡಾಡುವುದನ್ನು ಬಿಟ್ಟು ಜನರ ಮಧ್ಯೆ ಇದ್ದು ಕೆಲಸ ಮಾಡಬೇಕು. ಎಲ್ಲಿ ಅಗತ್ಯವೋ ಅಂತಹ ಕಡೆಗಳಲ್ಲಿ ಇದ್ದು ಕೆಲಸಗಳನ್ನು ಮಾಡಬೇಕು ಎಂದರು. ಇದನ್ನೂ ಓದಿ: ರೈತರು, ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಅಧಿವೇಶನದಲ್ಲಿ ಒತ್ತಾಯ: ಸತೀಶ್ ಜಾರಕಿಹೊಳಿ

    ನಗರ ಪ್ರದೇಶಗಳಲ್ಲಿ ಹೆಚ್ಚಿನ ಜನ ಪಡಿತರ ಕಾರ್ಡ್ ನಿಂದ ವಂಚಿತರಾಗಿದ್ದು, ಕಾರ್ಯಕರ್ತರು ಅರ್ಹರಿಗೆ ಕಾರ್ಡ್ ಸಿಗುವಂತೆ ಮುತುವರ್ಜಿ ವಹಿಸಬೇಕು. ಅರ್ಹ ವಸತಿ ರಹಿತರು ಮುಖ್ಯಮಂತ್ರಿಗಳ ಗೃಹ ವಸತಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಹಾಕುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

    ಕೊರೊನಾ ತಡೆಗಟ್ಟಲು ಸರ್ಕಾರ ಉಚಿತವಾಗಿ ನೀಡುತ್ತಿರುವ ಲಸಿಕೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ತಲುಪಿಸುವುದರ ಬಗ್ಗೆಯೂ ಕಾರ್ಯಕರ್ತರು ಒತ್ತು ಕೊಡಬೇಕು. ಅಲ್ಲದೆ ಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ವ್ಯವಸ್ಥಿತ ರೀತಿಯಲ್ಲಿ ಅಭಿಪ್ರಾಯ ಸಂಗ್ರಹದ ಕೆಲಸ ಆಗಬೇಕು. ನಾಯಕರ ಕಿವಿಯಲ್ಲಿ ಏನೋ ಹೇಳಿಬಿಟ್ಟರೆ ಅದು ಅಭಿಪ್ರಾಯ ತಿಳಿಸಿದಂತೆ ಆಗುವುದಿಲ್ಲ. ಬೂತ್ ಮಟ್ಟದಿಂದ ಶುರುವಾಗುವ ಅಭಿಪ್ರಾಯ ಸಂಗ್ರಹವನ್ನು ಆಡಳಿತ ನಡೆಸುವವರಿಗೆ ತಲುಪಿಸಲು ಕ್ರಮಬದ್ಧ ವ್ಯವಸ್ಥೆಯನ್ನು ಅನುಸರಿಸಬೇಕು ಎಂದು ಅಶ್ವಥ್ ನಾರಾಯಣ ತಿಳಿಸಿದರು.

    ಜನರ ನಂಬಿಕೆಯೇ ಪಕ್ಷದ ಜೀವಾಳ. ಹಣ ಬಲವೊಂದೇ ನಾಯಕತ್ವದ ಮಾನದಂಡ ಆಗಲಾರದು. ಹೊಟ್ಟೆಪಾಡಿಗಾಗಿ ರಾಜಕೀಯ ಮಾಡುವ ಪರಿಸ್ಥಿತಿ ಬರಬಾರದು. ಬದಲಿಗೆ ಉತ್ತಮ ನಾಯಕತ್ವ ಕೊಡುವುದಕ್ಕಾಗಿ ರಾಜಕೀಯ ಕ್ಷೇತ್ರವು ವೇದಿಕೆಯಾಗಬೇಕು. ಈ ಬಗ್ಗೆ ರಾಜಕೀಯ ಮುಖಂಡರಲ್ಲಿ ಮತ್ತು ಕಾರ್ಯಕರ್ತರಲ್ಲಿ ಸ್ಪಷ್ಟತೆ ಇರಬೇಕು ಎಂದರು.

    ಬೆಂಗಳೂರು ಉತ್ತರ ಸಂಸದ ಡಿ.ವಿ.ಸದಾನಂದಗೌಡ, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಅಬಕಾರಿ ಸಚಿವ ಗೋಪಾಲಯ್ಯ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಗೋಪಿನಾಥ್ ರೆಡ್ಡಿ, ರಾಜಣ್ಣ, ಮಹಿಳಾ ಮೋರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಮಾಜಿ ಶಾಸಕ ಮುನಿರಾಜು, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು ಹಾಗೂ ಮತ್ತಿತರರು ಇದ್ದರು.

  • ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಾಗಿ ನೀಡಿರುವ ವರ್ಕ್ ಆರ್ಡರ್ ರದ್ದುಪಡಿಸಿ: CWFI ಆಗ್ರಹ

    ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಾಗಿ ನೀಡಿರುವ ವರ್ಕ್ ಆರ್ಡರ್ ರದ್ದುಪಡಿಸಿ: CWFI ಆಗ್ರಹ

    ಬೆಂಗಳೂರು: ಕಾರ್ಮಿಕ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನೀಡಿರುವ ವರ್ಕ್ ಆರ್ಡರ್ ನ್ನು ಕೂಡಲೇ ರದ್ದುಪಡಿಸಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್(CWFI) ಆಗ್ರಹಿಸಿದೆ.

    ರಾಜ್ಯದಲ್ಲಿರುವ 30 ಲಕ್ಷ ಕಟ್ಟಡ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಇತ್ತೀಚೆಗೆ ಕಟ್ಟಡ ಕಾರ್ಮಿಕ ಮಂಡಳಿ ಪ್ರತಿ ಡೋಸ್ ಗೆ 780 ರೂ. ದರ ನಿಗದಿಪಡಿಸಿತ್ತು. ಇದನ್ನು ವಿರೋಧಿಸಿ ಕಟ್ಟಡ ಕಾರ್ಮಿಕ ಸಂಘಟನೆಗಳು ತೀವ್ರ ಹೋರಾಟ ನಡೆಸಿದ್ದವು. ಅಲ್ಲದೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಮಿಕ ಸಚಿವರು ಹಾಗೂ ಹಿರಿಯ ಕಾರ್ಮಿಕ ಅಧಿಕಾರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿ, ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟ ಸೆಸ್ ಹಣವನ್ನು ರಾಜ್ಯದ 400 ಖಾಸಗಿ ಆಸ್ಪತ್ರೆಗಳಿಗೆ ನೀಡುವ ತೀರ್ಮಾನ ಕೈ ಬಿಡುವಂತೆ ಒತ್ತಾಯಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿಂದು 851 ಹೊಸ ಕೊರೊನಾ ಕೇಸ್- 790 ಡಿಸ್ಚಾರ್ಜ್, 15 ಸಾವು

    ಕಾರ್ಮಿಕರ ಹೋರಾಟದಿಂದ ಕಲ್ಯಾಣ ಮಂಡಳಿ ತನ್ನ ತೀರ್ಮಾನದಿಂದ ಹಿಂದೆ ಸರಿದಿದ್ದು, ಎಲ್ಲ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೂ ಸರ್ಕಾರದ ವತಿಯಿಂದಲೇ ಉಚಿತ ಲಸಿಕೆ ನೀಡುವುದಾಗಿ ಮಾಧ್ಯಮದಲ್ಲಿ ಪ್ರಕಟವಾಗಿದೆ, ಇದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಈಗಾಗಲೇ ಬೆಂಗಳೂರು ಆರು ಕಾರ್ಮಿಕ ಉಪವಿಭಾಗ ವ್ಯಾಪ್ತಿಯಲ್ಲಿ 2 ಲಕ್ಷ ಡೋಸ್ ಲಸಿಕೆಗಳನ್ನು ನೀಡಲು ಮಂಡಳಿಯಿಂದ 15.60 ಕೋಟಿ ರೂ. ವರ್ಕ್ ಆರ್ಡರ್ ನೀಡಲಾಗಿದೆ. ಮಂಡಳಿಯಿಂದ ನೀಡಲಾದ ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಫೆಡರೇಶನ್ ಒತ್ತಾಯಿಸಿದೆ.

    ಈಗಾಗಲೇ ಕೊರೊನಾ ಸಂಕಷ್ಟಕ್ಕೀಡಾದ ಕಟ್ಟಡ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡುವ ನೆಪದಲ್ಲಿ ಸಾವಿರಾರು ಕೋಟಿ ರೂ. ಹಣವನ್ನು ವ್ಯಯ ಮಾಡುವ ಮೂಲಕ ಕಾರ್ಮಿಕ ಸಚಿವರು, ಮಂಡಳಿ ಅಧಿಕಾರಿಗಳು, ಕಾರ್ಮಿಕ ಅಧಿಕಾರಿಗಳು ವ್ಯಾಪಕ ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದರ ವಿರುದ್ಧ ಮತ್ತು ಮಂಡಳಿಯ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 20ರಂದು ಮುಖ್ಯಮಂತ್ರಿ ಮನೆ ಚಲೋ ಹೋರಾಟವನ್ನು ಇತರೆ ಕಾರ್ಮಿಕ ಸಂಘಗಳ ಜೊತೆ ಸೇರಿ ಫೆಡರೇಶನ್ ಸಂಘಟಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ ತಿಳಿಸಿದ್ದಾರೆ.

  • ಕಾರ್ಮಿಕ ಸಚಿವರ ಕ್ಷೇತ್ರದಲ್ಲಿ ಕಾರ್ಮಿಕರಿಗಿಲ್ಲ ಒಂದು ವರ್ಷದಿಂದ ಸಂಬಳ

    ಕಾರ್ಮಿಕ ಸಚಿವರ ಕ್ಷೇತ್ರದಲ್ಲಿ ಕಾರ್ಮಿಕರಿಗಿಲ್ಲ ಒಂದು ವರ್ಷದಿಂದ ಸಂಬಳ

    – ವೇತನವಿಲ್ಲದೇ ದುಡಿಯುತ್ತಿರುವ ಗಾಂಧಿ ಮ್ಯೂಸಿಯಮ್ ಸಿಬ್ಬಂದಿ
    – ಹಾಳು ಕೊಂಪೆಯಾದ ಗಾಂಧಿ ಸ್ವಾತಂತ್ರ್ಯ ಸ್ಮಾರಕ ಭವನ

    ಕಾರವಾರ: ಟಾಯ್ಲೆಟ್ ನಲ್ಲಿ ಬಿದ್ದ ಪುಸ್ತಕಗಳು, ಪಾಳು ಬಿದ್ದ ಗಾಂಧಿ ವಸ್ತುಸಂಗ್ರಹಾಲಯದ ಕಟ್ಟಡ, ಮೂಲೆ ಸೇರಿದ ಗಾಂಧಿ ಪ್ರತಿಮೆ. ಒಂದು ವರ್ಷದಿಂದ ಸಂಬಳ ಇಲ್ಲದೇ ದುಡಿಯುವ ಕೆಲಸಗಾರರು. ಇಂತದ್ದೊಂದು ಸ್ಥಿತಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕ್ಷೇತ್ರದಲ್ಲಿದೆ. ಅಲ್ಲಿನ ಸ್ಥಿತಿ ನೋಡಿದರೆ ಎಂತವರೂ ತಲೆತಗ್ಗಿಸುವಂತಿದೆ.

    ಉತ್ತರ ಕನ್ನಡ ಜಿಲ್ಲೆಯ ಅಂಕೋಲ ನಗರದ ಹೃದಯ ಭಾಗದಲ್ಲಿರುವ ಗಾಂಧಿ ಸ್ವತಂತ್ರ್ಯ ಸಂಗ್ರಾಮ ಸ್ಮಾರಕ ಭವನ ಹಾಗೂ ವಸ್ತು ಸಂಗ್ರಹಾಲಯ ಇದೀಗ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ ಹಾಳು ಕೊಂಪೆಯಾಗಿ ಮಾರ್ಪಟ್ಟಿದೆ.

    ಹೀಗಿದೆ ಅಲ್ಲಿನ ಸ್ಥಿತಿ
    ಎಲ್ಲಿ ನೋಡಿದರಲ್ಲಿ ಕಸದ ರಾಶಿ ,ಮುರಿದು ಬಿದ್ದ ಕಿಟಕಿ, ಮೂಲೆ ಸೇರಿದ ಗಾಂಧಿ ಪ್ರತಿಮೆ, ಟಾಯ್ಲೆಟ್ ನಲ್ಲಿ ಸಂಗ್ರಹಿಸಿಟ್ಟ ಪುಸ್ತಕ. ವಿದ್ಯುತ್ ಇಲ್ಲದ ಬಲ್ಪುಗಳು, ಮುರಿದ ಫ್ಯಾನ್ ಗಳು ಹೀಗೆ ಎದುರು ನೋಡುತ್ತಿದ್ದಂತೆ ಹಳೆಯ ಸಿನಿಮಾದಲ್ಲಿ ಬರುವ ಭೂತ ಬಂಗಲೆಯಂತೆ ಭಾಸವಾಗುತ್ತದೆ.

    2017ರಲ್ಲಿ ಕೋಟಿ ಮೊತ್ತದ ಅನುದಾನದಲ್ಲಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಅಂಕೋಲದಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮದ ನೆನಪಿಗಾಗಿ ಸ್ಮಾರಕ ಭವನ ಹಾಗೂ ಗಾಂಧಿಜೀ ವಸ್ತು ಸಂಗ್ರಾಲಯವನ್ನು ನಿರ್ಮಾಣ ಮಾಡಲಾಗಿತ್ತು. ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಜಿಲ್ಲೆಯಲ್ಲೇ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಸ್ಮಾರಕ ಭವನವನ್ನು ಲೋಕಾರ್ಪಣೆ ಮಾಡಿದ್ದರು.

    ಇದನ್ನು ನೋಡಿಕೊಳ್ಳಲು ಕಂದಾಯ ಇಲಾಖೆಯಿಂದ ಇಬ್ಬರು ಹಾಗೂ ಪುರಸಭೆ ಯಿಂದ ಓರ್ವ ನೌಕರನನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಯಿತು. ಕಳೆದ ಒಂದು ವರ್ಷದ ವರೆಗೆ ಚೆನ್ನಾಗಿಯೇ ಇದ್ದ ಈ ಭವನ ಇದೀಗ ಜಿಲ್ಲಾಡಳಿತದ ದಿವ್ಯ ನಿರ್ಲಕ್ಷದಿಂದ ಹಾಳು ಕೊಂಪೆಯಾಗಿದೆ.

    ವಸ್ತು ಸಂಹ್ರಹಾಲಯ ಹಾಗೂ ಗ್ರಂಥಾಲಯದಲ್ಲಿ ಇರುವ ವಸ್ತುಗಳನ್ನು ಇರಿಸಲು ವ್ಯವಸ್ತೆ ಇಲ್ಲದೇ ಬೇಕಾಬಿಟ್ಟಿ ಇಡಲಾಗಿದೆ. ಓದುಗರ ಕೈಯಲ್ಲಿ ಇರಬೇಕಾದ ಪುಸ್ತಕಗಳು ಟಾಯ್ಲೆಟ್ ಸೇರಿದೆ. ಇನ್ನು ವಿದ್ಯಾರ್ಥಿಗಳ ಅಧ್ಯಯನಕ್ಕೆ ನಿರ್ಮಿಸಿದ ಕಟ್ಟಡ ಹೊಸದಾಗಿದ್ದರೂ ಯಾರೂ ಒಳಗೆ ಹೋಗದಷ್ಟು ಕೆಟ್ಟದಾಗಿದ್ದು ವಿದ್ಯುತ್ ಸಂಪರ್ಕ ಸಹ ಕಡಿತವಾಗಿದ್ದು ಇಲಿ ಹೆಗ್ಗಣದ ಗೂಡಾಗಿದೆ. ಇದನ್ನೂ ಓದಿ: ಮೈಸೂರು ಕೇಸಲ್ಲಿ ಪೊಲೀಸರ ಪಾಲಿಗೆ ಬೆಳಕಾಗಿದ್ದೇ ಬಸ್ ಟಿಕೆಟ್ ಕೊಟ್ಟ ಸುಳಿವು, ಆ ಮೊಬೈಲ್ ನಂಬರ್!

    ಇನ್ನು ಇಲ್ಲಿನ ಗುತ್ತಿಗೆ ಆಧಾರದಲ್ಲಿ ನಿಯೋಜನೆ ಗೊಂಡ ಲೈಬ್ರರಿಯನ್ ಗೆ ಐದು ಸಾವಿರ ಕನಿಷ್ಟ ಕೂಲಿ ಹಾಗೂ ಇಲ್ಲಿನ ಕೆಲಸಗಾರನಿಗೆ 2500 ರೂ.ಗಳ ಕನಿಷ್ಟ ವೇತನ ನಿಗದಿ ಮಾಡಿದ್ದು ಕಾರ್ಮಿಕ ನಿಯಮಗಳ ಪ್ರಕಾರ ಇವರಿಗೆ ಸಿಗಬೇಕಾದ ಯಾವ ಸೌಲಭ್ಯವೂ ಈವರೆಗೂ ದೊರೆತಿಲ್ಲ. ಕಳೆದ ಒಂದು ವರ್ಷದಿಂದ ಇಲ್ಲಿನ ಇಬ್ಬರು ನೌಕರರಿಗೆ ಸಂಬಳ ಸಹ ಸಿಗದೇ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್

    ಕೋಟಿಗಟ್ಟಲೇ ಗಾಂಧೀಜಿ ಹೆಸರಲ್ಲಿ ಸ್ವಾತಂತ್ರ್ಯ ಚಳುವಳಿಗಾರರ ನೆನಪಿಗೆ ನಿರ್ಮಿಸಿದ ಈ ಭವನ ಈಗ ಹಾಳು ಕೊಂಪೆಯಾಗಿದೆ. ಅಧ್ಯಯನಕ್ಕೆ ಬರುವ ವಿದ್ಯಾರ್ಥಿಗಳಿಗೆ ಯಾವ ಪುಸ್ತಕಗಳು ಸಿಗದಂತ ಸ್ಥಿತಿ ಇದೆ. ಪ್ರತಿ ದಿನ ಗ್ರಂಥಾಲಯಕ್ಕೆ ಬರುವವರಿಗೆ ಮೂಲ ಸೌಕರ್ಯ ಸಹ ಇಲ್ಲ. ಇದನ್ನೂ ಓದಿ: ಮೈಸೂರು ರೇಪ್ ಪ್ರಕರಣ ಬೆನ್ನತ್ತಿದ ಆ ಸೂಪರ್ ಕಾಪ್ಸ್ ಇವರೇ ನೋಡಿ!

    ಇಲ್ಲಿನ ನೌಕರರು ಕೊರೊನಾ ಸಂದರ್ಭದಲ್ಲಿ ಸಹ ಕರ್ತವ್ಯ ನಿರ್ವಹಿಸಿದ್ದರೂ ಒಂದು ವರ್ಷದಿಂದ ಸಂಬಳ ಸಹ ನೀಡಿಲ್ಲ. ಇನ್ನು ಜನಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ. ಪುಸ್ತಕಗಳನ್ನು ಓದಲು ಬರುವ ಜನರು ಪುಸ್ತಕಗಳು ಸಿಗದೇ ಮರಳಿ ಹೋಗುವಂತಾಗಿದೆ. ಹೀಗಿರುವಾಗ ಅಧಿಕಾರಿಗಳು ಮಾತ್ರ ಎಲ್ಲಾ ಸರಿಮಾಡುತ್ತೇವೆ ಎನ್ನುವ ಭರವಸೆಗೆ ಸೀಮಿತವಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕೊಂಚ ಇಳಿಕೆಯಾದ ಕೊರೊನಾ – ಇಂದು 1,229 ಹೊಸ ಪ್ರಕರಣ

    ಉತ್ತರ ಕನ್ನಡ ಜಿಲ್ಲೆಯಲ್ಲೇ ಅಂಕೋಲ ತಾಲೂಕಿನಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಚಳುವಳಿ ತೀವ್ರಗೊಂಡಿತ್ತು. ಹಲವರು ಬ್ರಿಟೀಷರ ಚಡಿಏಟು ತಿಂದು ಪ್ರಾಣವನ್ನು ಕಳೆದುಕೊಂಡಿದ್ದರು. ಕರ ಅಸಹಕಾರ ಚಳುವಳಿಯಿಂದ ಹಿಡಿದು ಉಪ್ಪಿನ ಸತ್ಯಾಗ್ರಹದವರೆಗೂ ಇಲ್ಲಿನ ಜನರು ಗಾಂಧೀಜಿಯವರ ಆದರ್ಶದೊಂದಿಗೆ ಜೊತೆಯಾಗಿದ್ದರು. ಅವರ ಹೋರಾಟದ ಫಲ ಇಂದು ನಾವು ಅನುಭವಿಸುತಿದ್ದೇವೆ. ಇಂತವರಿಗೆ ಗೌರವ ಸಲ್ಲಿಸುವ ನೆಪದಲ್ಲಿ ಇದೀಗ ಗಾಂಧೀಜಿಯವರ ಹೆಸರಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಡೆದುಕೊಳ್ಳುವ ರೀತಿ ಮಾತ್ರ ಎಂತವರಲ್ಲೂ ಹೇಸಿಗೆ ಹುಟ್ಟಿಸುತ್ತದೆ. ಇನ್ನಾದರೂ ಇಲ್ಲಿನ ವ್ಯವಸ್ಥೆಯನ್ನು ಸರಿಪಡಿಸಿ ಜನರಿಗೆ ಇದರ ಸೌಲಭ್ಯ ದೊರಕುವಂತಾಗಲಿ ಎಂಬುದೇ ನಮ್ಮ ಆಶಯವಾಗಿದೆ. ಇದನ್ನೂ ಓದಿ: ಸಚಿವೆಯಾದರೂ ಹೆಣ್ಣು ಹೆಣ್ಣೇ ಅಲ್ವಾ? ಅವರ ಮನೆಯಲ್ಲೇ ಹಾಗಾದ್ರೆ?: ಹೆಚ್.ಎಂ.ರೇವಣ್ಣ

  • ಬಾಕಿ ವೇತನ ಪಾವತಿಗೆ ಒತ್ತಾಯ: ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಂದ ಪ್ರತಿಭಟನೆ

    ಬಾಕಿ ವೇತನ ಪಾವತಿಗೆ ಒತ್ತಾಯ: ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಂದ ಪ್ರತಿಭಟನೆ

    ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಕಂಪನಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಬಾಕಿ ವೇತನ ಪಾವತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

    ಹಟ್ಟಿ ಚಿನ್ನದ ಗಣಿ ಕಂಪನಿಯ ಹೊರಗುತ್ತಿಗೆ ಕಾರ್ಮಿಕರಿಗೆ ಮೂರು ತಿಂಗಳಿಂದ ವೇತನ ನೀಡದೆ ಇರುವುದರಿಂದ ಕೆಲಸಕ್ಕೆ ಗೈರಾಗಿ ಪ್ರತಿಭಟನೆ ನಡೆಸಿದ್ದಾರೆ. ಗುತ್ತಿಗೆ ಪಡೆದ ಸಿಐಎಸ್ ಬಿ ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾರ್ಮಿಕರು ಸಂಬಳಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ದಶಪಥ ರಸ್ತೆ ಕಾಮಗಾರಿ ವೀಡಿಯೋ ಇಷ್ಟು ಜನರ ಹೊಟ್ಟೆಗೆ ಬೆಂಕಿ ಬೀಳಿಸುತ್ತೆ ಅಂತಾ ಗೊತ್ತಿರಲಿಲ್ಲ: ಪ್ರತಾಪ್ ಸಿಂಹ ತಿರುಗೇಟು

    ಮೂಲ ಸೌಕರ್ಯಗಳು, ಅಗತ್ಯ ಸಲಕರಣೆಗಳಿಲ್ಲದೆ ಕಂಪನಿ ಕಾರ್ಮಿಕರನ್ನ ದುಡಿಸಿಕೊಳ್ಳುತ್ತಿದೆ ಅಂತ ಗುತ್ತಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ಉತ್ತರಾರಾಧನೆ

  • ಹೊರ ರಾಜ್ಯದ ಕೂಲಿ ಕಾರ್ಮಿಕರಿಂದ ಕೊಡಗಿಗೆ ಕೊರೊನಾ ಕಂಟಕ

    ಹೊರ ರಾಜ್ಯದ ಕೂಲಿ ಕಾರ್ಮಿಕರಿಂದ ಕೊಡಗಿಗೆ ಕೊರೊನಾ ಕಂಟಕ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇದೀಗ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಜಿಲ್ಲೆಯಲ್ಲಿ ಪಾಸಿಟಿವ್ ರೇಟ್ ನಲ್ಲೂ ಏರಿಳಿತ ಅಗುತ್ತಿದೆ. ಅಷ್ಟೇ ಅಲ್ಲದೇ ಕೊಡಗಿನ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿವೆ. ರಾತ್ರೋ ರಾತ್ರಿ ಬೇರೆ ಬೇರೆ ರಾಜ್ಯಗಳಿಂದ ಕೂಲಿ ಕಾರ್ಮಿಕರು ಕೊಡಗು ಜಿಲ್ಲೆಗೆ ಲಗ್ಗೆ ಇಡುತ್ತಿದ್ದಾರೆ. ಹೀಗಾಗಿ ಮತ್ತೆ ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗುವ ಲಕ್ಷಣಗಳು ಕಂಡುಬರುತ್ತಿದ್ದು. ಜನರಲ್ಲಿ ಅತಂಕ ಮನೆ ಮಾಡುತ್ತಿದೆ.

    ಪಕ್ಕದ ರಾಜ್ಯ ಕೇರಳದಲ್ಲಿ ಸೋಂಕು ಅಬ್ಬರಿಸುತ್ತಿರುವಾಗಲೇ ಕರ್ನಾಟಕದ ಗಡಿಭಾಗದ ಜಿಲ್ಲೆ ಕೊಡಗಿನಲ್ಲೂ ಸೋಂಕಿನ ಪ್ರಕರಣಗಳು ದಿನ ಕಳೆದಂತೆ ಏರಿಳಿತ ಕಾಣುತ್ತಿದೆ. ಅಷ್ಟೇ ಅಲ್ಲದೆ ಕೇರಳ-ಅಸ್ಸಾಂ-ಬಾಗ್ಲಾದೇಶದಿಂದ ಬರುತ್ತಿರುವ ಕೂಲಿ ಕಾರ್ಮಿಕರಿಂದ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಕೇರಳದಿಂದ ಕೊಡಗಿಗೆ ಎಂಟ್ರಿಯಾಗಬೇಕಾದರೆ 72 ಗಂಟೆಯೊಳಗೆ ಪಡೆದ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಅದನ್ನು ಜಿಲ್ಲೆಯ ಎಲ್ಲಾ ಚೆಕ್‍ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ಪರಿಶೀಲಿಸಲಾಗುತ್ತಿದೆ. ಆದರೆ ತಪಾಸಣೆ ನಡೆಯುವುದು ಮಾತ್ರ ಹಗಲಿನಲ್ಲಿ ರಾತ್ರಿ ವೇಳೆಯಲ್ಲಿ ತಪಾಸಣೆ ನಡೆಸದೇ ಇರುವುದರಿಂದ ಹೆಚ್ಚಾಗಿ ಕೂಲಿ ಕಾರ್ಮಿಕರು ಜಿಲ್ಲೆಗೆ ರಾತ್ರಿವೇಳೆಯಲ್ಲಿ ಲಗ್ಗೆ ಇಡುತ್ತಿದ್ದಾರೆ. ಗುಂಪು ಗುಂಪಾಗಿ ವಲಸೆ ಕಾರ್ಮಿಕರು ಕಾಫಿ ತೋಟಗಳಿಗೆ ಮುಖ ಮಾಡುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸ್ಫೋಟಗಳುವ ಲಕ್ಷಣಗಳು ಕಂಡುಬರುತ್ತಿದೆ.

    ಕೊಡಗು ಜಿಲ್ಲೆಯಲ್ಲಿ ಕೊರೊನಾ ಹರಡುವ ಆತಂಕ ಎದುರಾಗಿದೆ. ಕಾರಣ ಕೊಡಗು ಗಡಿ ಭಾಗಗಳಿಂದ ಚೆಕ್ ಪೋಸ್ಟ್ ದಾಟಿ ಬರುವ ಟಿಟಿ, ಬಸ್, ಟೆಂಪೋ, ಟ್ರಾವೆಲ್ ಗಳಿಂದ ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು ಅಗಮಿಸುತ್ತಿದ್ದಾರೆ. ಅದು ಕೊರೊನಾ ಟೆಸ್ಟ್ ವರದಿ ಇಲ್ಲದೆ ಕೇರಳ, ಅಸ್ಸಾಂ, ತಮಿಳುನಾಡಿನಿಂದ ಕೂಲಿ ಅರಸಿ ಬರುತ್ತಿರುವುದೇ ಜಿಲ್ಲೆಗೆ ಕಂಟಕವಾಗಿದೆ.

    ಈಗಾಗಲೇ ಕೊಡಗಿನ ನೆಲ್ಯಹುದಿಕೇರಿ, ಸಿದ್ದಾಪುರ, ಕರಡಿಗೋಡು, ನರಿಯದಂಡ ಗ್ರಾಮಗಳಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಕಾಫಿ ತೋಟಗಳಲ್ಲಿ ಲೈನ್ ಮನೆ ಇರುವುದರಿಂದ ಎಲ್ಲಾ ಕೂಲಿ ಕಾರ್ಮಿಕರು ಗುಂಪು ಗುಂಪಾಗಿ ಒಟ್ಟಿಗೆ ಇರುವುದರಿಂದ ಸೋಂಕು ಮತಷ್ಟು ಹರಡುವ ಸಾದ್ಯತೆ ಇದೆ. ಇದನ್ನೂ ಓದಿ: ಕೊಡಗಿನ ಬೆಟ್ಟ ಪ್ರದೇಶದಲ್ಲಿ ಮತ್ತೆ ಬಾಯ್ದೆರೆದ ಭೂಮಿ- ಗ್ರಾಮಸ್ಥರಲ್ಲಿ ಅತಂಕ

    ಈ ಬಗ್ಗೆ ಜಿಲ್ಲಾಧಿಕಾರಿ ಅವರನ್ನು ಕೇಳಿದ್ರೆ, ಈಗಾಗಲೇ ಚಕ್ ಪೋಸ್ಟ್ ಗಳಲ್ಲಿ ಸಾಕಷ್ಟು ಬೀಗಿ ಮಾಡಲಾಗಿದೆ. ಕೂಲಿ ಕಾರ್ಮಿಕರನ್ನು ತೋಟದ ಮಾಲೀಕರು ಕರೆಸಿಕೊಳ್ಳುತ್ತಿದ್ದಾರೆ ಅವರೇ ಜವಾಬ್ದಾರಿ ತೆಗೆದುಕೊಂಡು ವರದಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸುತ್ತಾರೆ. ಇದನ್ನೂ ಓದಿ: ಮರ ಕಡಿದು ಪರಿಸರ ಶಾಲೆ ಮಾಡುತ್ತಿದೆ ಖಾಸಗಿ ಸಂಸ್ಥೆ- ಗ್ರಾಮಸ್ಥರ ಅಕ್ರೋಶ

    ಒಟ್ಟಿನಲ್ಲಿ ಕೊಡಗು ಜಿಲ್ಲೆಗೆ ಹೋರ ರಾಜ್ಯದ ಕೂಲಿ ಕಾರ್ಮಿಕರು ಕೋವಿಡ್ ಟೆಸ್ಟ್ ಮಾಡಿಸದೇ ರಾತ್ರೋ ರಾತ್ರಿ ಜಿಲ್ಲೆಗೆ ಅಗಮಿಸುತ್ತಿದ್ದಾರೆ. ಇದರಿಂದ ಮತ್ತಷ್ಟು ಕಂಟಕ ಜಿಲ್ಲೆಗೆ ಎದುರಾಗುವ ಲಕ್ಷಣಗಳು ಕಂಡುಬರುತ್ತಿದೆ. ಇದನ್ನೂ ಓದಿ: ಸೋಮವಾರಪೇಟೆಯಲ್ಲಿ ‘ಸೂರಿಗಾಗಿ ಸಮರ’ ಪ್ರತಿಭಟನೆ

  • ಜಿಲ್ಲೆಯ 1.7 ಲಕ್ಷ ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೆರವು: ಕೆ.ಎಸ್.ಈಶ್ವರಪ್ಪ

    ಜಿಲ್ಲೆಯ 1.7 ಲಕ್ಷ ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೆರವು: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಕೋವಿಡ್ ಲಾಕ್‍ಡೌನ್‍ನಿಂದ ಆರ್ಥಿಕ ಸಂಕಷ್ಟಕ್ಕೀಡಾದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೆರವು ಒದಗಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 1,07,286 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ನಗದು ವರ್ಗಾವಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

    ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ 72,065 ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಒಟ್ಟು 21.61 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಇವರ ಪೈಕಿ 11,040 ಕಾರ್ಮಿಕರಿಗೆ ಜಮಾಗೊಳಿಸಲಾದ ಮೊತ್ತ ಅವರ ಖಾತೆಗಳು ನಿಷ್ಕ್ರಿಯವಾಗಿರುವುದರಿಂದ ಹಾಗೂ ಬ್ಯಾಂಕ್ ಖಾತೆ ಆಧಾರ್ ಸಂಖ್ಯೆಗೆ ಜೋಡಣೆಯಾಗದಿರುವ ಕಾರಣ 3.31 ಕೋಟಿ ರೂ. ಇನ್ನೂ ಜಮಾ ಆಗಿಲ್ಲ. ಕಾರ್ಮಿಕರು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿಕೊಳ್ಳಲು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

    ಆಹಾರ ಕಿಟ್ ವಿತರಣೆ
    ಕಾರ್ಮಿಕ ಇಲಾಖೆ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ನೆರವಿಗೆ ಹಲವು ಸೌಲಭ್ಯ ಒದಗಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ನಿರ್ಮಾಣ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 32 ವಾರ್ಡ್‍ಗಲ್ಲಿರುವ 10,850 ಫಲಾನುಭವಿಗಳಿಗೆ ಸೋಮವಾರದಿಂದ ಆಯಾ ವಾರ್ಡ್ ನಲ್ಲಿ ಆಹಾರ ಕಿಟ್ ಒದಗಿಸಲಾಗುವುದು. ಫಲಾನುಭವಿಗಳು ಕಾರ್ಮಿಕ ಕಾರ್ಡ್ ಮತ್ತು ಆಧಾರ್ ಕಾರ್ಡ್ ತಂದು ಬೆಳಗ್ಗೆ ವಿತರಣಾ ಕೇಂದ್ರದಲ್ಲಿ ಟೋಕನ್ ಪಡೆಯಬೇಕು. ಮರುದಿನ ಆಹಾರ ಕಿಟ್ ವಿತರಣೆ ಮಾಡಲಾಗುವುದು. ಆಹಾರ ಕಿಟ್ ಕಾರ್ಮಿಕರಿಗೆ ವಿತರಿಸಲು ಅನುಕೂಲವಾಗುವಂತೆ 9 ತಂಡಗಳನ್ನು ರಚಿಸಲಾಗಿದ್ದು, 32 ಕೇಂದ್ರಗಳಲ್ಲಿ ನೋಡಲ್ ಅಧಿಕಾರಿಗಳ ತಂಡದ ನೇತೃತ್ವದಲ್ಲಿ ವಿತರಣೆ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಈ ವೇಳೆ ಮೇಯರ್ ಸುನಿತಾ ಅಣ್ಣಪ್ಪ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್ ಮತ್ತಿತರರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ರಾಯಚೂರು ಜಿಲ್ಲೆಯಲ್ಲಿ ಜೋರು ಮಳೆ – ನೂರಾರು ಎಕರೆ ಜಮೀನಿಗೆ ನುಗ್ಗಿದ ನೀರು

  • ಫುಡ್ ಕಿಟ್‍ಗಾಗಿ ಕಾರ್ಮಿಕರ ನೂಕುನುಗ್ಗಲು – ವಿವಿಧ ಗ್ರಾಮಗಳಿಂದ ಬಂದ ಸಾವಿರಾರು ಜನ

    ಫುಡ್ ಕಿಟ್‍ಗಾಗಿ ಕಾರ್ಮಿಕರ ನೂಕುನುಗ್ಗಲು – ವಿವಿಧ ಗ್ರಾಮಗಳಿಂದ ಬಂದ ಸಾವಿರಾರು ಜನ

    – ಮಧ್ಯಾಹ್ನದ ಕಾರ್ಯಕ್ರಮಕ್ಕೆ ಬೆಳಗ್ಗೆಯೇ ಬಂದ ಕಾರ್ಮಿಕರು

    ರಾಯಚೂರು: ನಗರದಲ್ಲಿ ಕಾರ್ಮಿಕ ಇಲಾಖೆ ಫುಡ್ ಕಿಟ್ ಗಾಗಿ ಬೆಳಗ್ಗೆ ನಾಲ್ಕು ಗಂಟೆಯಿಂದ ಜನ ಮುಗಿಬಿದ್ದಿದ್ದಾರೆ. ನಗರದ ಬಾಲಕಿಯರ ವಸತಿ ನಿಲಯದ ಮುಂದೆ ಸಾವಿರಾರು ಕಾರ್ಮಿಕರು ಗುಂಪು ಸೇರಿದ್ದಾರೆ. ಕೋವಿಡ್ ನಿಯಮ ಮರೆತು ಕಿಟ್ ಗಾಗಿ ಚಿಕ್ಕ ಮಕ್ಕಳು, ವೃದ್ಧರೊಂದಿಗೆ ಕಾರ್ಮಿಕರು ಕಾಯುತ್ತಿದ್ದಾರೆ.

    ಕಾರ್ಮಿಕ ಇಲಾಖೆಯಿಂದ ಮಧ್ಯಾಹ್ನ 3-30 ರ ಬಳಿಕ ಕಿಟ್ ವಿತರಿಸುವುದಾಗಿ ಸೂಚನೆ ನೀಡಲಾಗಿದೆ. ಆದ್ರೆ ಮಾಹಿತಿಯಿಲ್ಲದೆ ಕಿಟ್ ಪಡೆಯಲು 12 ಗಂಟೆಗಳ ಮುಂಚೆಯೇ ಬಂದು ಕಾರ್ಮಿಕರು ಕಾದು ಕುಳಿತಿದ್ದಾರೆ. ರಾಯಚೂರು ತಾಲೂಕಿನಲ್ಲಿ ಒಟ್ಟು 25 ಸಾವಿರ ನೋಂದಾಯಿತ ಕಾರ್ಮಿಕರಿದ್ದು ಎಲ್ಲರಿಗೂ ಒಂದೇ ಕಡೆ ಕಿಟ್ ವಿತರಿಸಲಾಗುತ್ತಿದೆ. ಹೀಗಾಗಿ ವಿವಿಧ ಗ್ರಾಮಗಳಿಂದ ಬಂದಿರೋ ಕಟ್ಟಡ ಕಾರ್ಮಿಕರು ಕಿಟ್ ಗಾಗಿ ಕಾಯುತ್ತಿದ್ದಾರೆ.

    ವಸತಿನಿಲಯದ ಮುಂದೆ ಜನಜಾತ್ರೆಯೇ ಆಗಿದ್ದರೂ ಕಾರ್ಮಿಕ ಇಲಾಖೆ ಅಧಿಕಾರಿಗಳಾಗಲಿ, ಪೊಲೀಸ್ ಅಧಿಕಾರಿಗಳಾಗಲಿ ಇತ್ತ ಸುಳಿದಿಲ್ಲ. ಹೀಗಾಗಿ ಕಾರ್ಮಿಕರು ಹೆಚ್ಚಾಗುತ್ತಿದ್ದಂತೆ ನೂಕುನುಗ್ಗಲು ಶುರುವಾಗಿದೆ. ಕಿಟ್ ವಿತರಣೆ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಹಿನ್ನೆಲೆ ಗೊಂದಲ ಉಂಟಾಗಿದೆ. ಇತ್ತ ಕಿಟ್ಟು ಇಲ್ಲದೇ, ಅತ್ತ ದಿನ ಕೆಲಸವೂ ಇಲ್ಲದೇ ಕಾರ್ಮಿಕರು ಕಾದು ಕುಳಿತಿದ್ದಾರೆ. ಗ್ರಾಮ ಪಂಚಾಯತಿ, ವಾರ್ಡ್ ಗಳ ಮಟ್ಟದಲ್ಲೇ ಕಿಟ್ ಗಳನ್ನ ವಿತರಿಸಿದರೆ ಎಲ್ಲರಿಗೂ ಅನುಕೂಲವಾಗುತ್ತದೆ ಅಂತ ಕಾರ್ಮಿಕರು ಮನವಿ ಮಾಡಿದ್ದಾರೆ.

  • ಪದವಿ ಕಾಲೇಜಿನ ಶೇ.65.14 ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ

    ಪದವಿ ಕಾಲೇಜಿನ ಶೇ.65.14 ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ

    ಬೆಂಗಳೂರು: ಪದವಿ ವಿದ್ಯಾರ್ಥಿಗಳ ಲಸಿಕೆ ಅಭಿಯಾನಕ್ಕೆ ಇಂದಿನಿಂದಲೇ ಮತ್ತಷ್ಟು ಚುರುಕು ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲೇ ಎಲ್ಲ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಗುವುದು. ಅಲ್ಲದೆ ಇದುವರೆಗೆ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಶೇ.65.14ರಷ್ಟು ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗೆ ಲಸಿಕೆ ಕೊಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ ತಿಳಿಸಿದರು.

    ಡಾ.ಸಿ.ಎನ್ ಅಶ್ವಥ್ ನಾರಾಯಣ ಫೌಂಡೇಷನ್ ಹಾಗೂ ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್ ವತಿಯಿಂದ ಮಲ್ಲೇಶ್ವರ ಕ್ಷೇತ್ರದ ಮತ್ತಿಕೆರೆಯ 3ನೇ ಮುಖ್ಯರಸ್ತೆಯಲ್ಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪದವಿ ವಿದ್ಯಾರ್ಥಿಗಳಿಗೆ ಲಸಿಕೆ ಅಭಿಯಾನ ರಾಜ್ಯಾದ್ಯಂತ ಚುರುಕುಗೊಳಿಸಲು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್‍ ನಾಯಕ್ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ ಅವರು ಇಂದು ಎಲ್ಲ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಸರ್ಕಾರ ಈ ಬಗ್ಗೆ ವಿಶೇಷ ಒತ್ತು ನೀಡಿ ಆದ್ಯತಾ ಗುಂಪಿನಡಿಯಲ್ಲಿ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜುಲೈ 19ರಿಂದ ಪದವಿ ಕಾಲೇಜುಗಳು ಪ್ರಾರಂಭ?

    ಖಾಸಗಿ ಕಾಲೇಜುಗಳಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ ಎಂಬ ಬಗ್ಗೆ ಅಂಕಿ-ಅಂಶ ಪಡೆದುಕೊಳ್ಳುತ್ತಿದ್ದೇವೆ. ಆ ಮಾಹಿತಿ ಸಿಕ್ಕಿದ ಕೂಡಲೇ ಉಳಿದ ಎಷ್ಟು ವಿದ್ಯಾರ್ಥಿಗಳಿಗೆ ಇನ್ನೆಷ್ಟು ದಿನದಲ್ಲಿ ಲಸಿಕೆ ನೀಡಲಾಗುವುದು ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡರು.

    ವಿದ್ಯಾರ್ಥಿಗಳಿಗೆ ಲಸಿಕೆ ಅಂಕಿ-ಅಂಶ
    ರಾಜ್ಯದ ಆರು ಶೈಕ್ಷಣಿಕ ವಲಯಗಳ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ 4,90,799 ವಿದ್ಯಾರ್ಥಿಗಳಿದ್ದು, ಈವರೆಗೆ 3,13,898 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ಕೊಡಲಾಗಿದ್ದು, 63.96% ಗುರಿ ತಲುಪಲಾಗಿದೆ. ಅದೇ ರೀತಿ ಒಟ್ಟು 29,241 ಸಿಬ್ಬಂದಿ ಇದ್ದು, ಈ ಪೈಕಿಗೆ 24,875 ಸಿಬ್ಬಂದಿಗೆ ಲಸಿಕೆ ನೀಡಲಾಗಿದ್ದು, 85.07% ಗುರಿ ಸಾಧಿಸಲಾಗಿದೆ. ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 65.14% ಗುರಿ ತಲುಪಲಾಗಿದೆ ಎಂದು ಮಾಹಿತಿ ನೀಡಿದರು.