Tag: World Cup 2023 Final

  • ವಿರಾಟ್‌ ಕೊಹ್ಲಿ ಹಾಡಿ ಹೊಗಳಿದ ಸಲ್ಮಾನ್‌ ಖಾನ್‌

    ವಿರಾಟ್‌ ಕೊಹ್ಲಿ ಹಾಡಿ ಹೊಗಳಿದ ಸಲ್ಮಾನ್‌ ಖಾನ್‌

    ನವದೆಹಲಿ: ವಿಶ್ವಕಪ್‌ 2023ರ ಟೂರ್ನಿಯಲ್ಲಿ ಹಲವು ದಾಖಲೆಗಳನ್ನು ಬರೆದ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿಯನ್ನು (Virat Kohli) ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಹಾಡಿ ಹೊಗಳಿದ್ದಾರೆ.

    ವಿರಾಟ್ ಕೊಹ್ಲಿ ಹೊಂದಿರುವ ಸಮರ್ಪಣೆ ಮತ್ತು ಉತ್ಸಾಹವು ಅಜೇಯವಾಗಿದೆ. ಸಮರ್ಪಣೆ ಮತ್ತು ಕಠಿಣ ಪರಿಶ್ರಮವಿಲ್ಲದೆ ಈ ಸ್ಥಾನವನ್ನು ತಲುಪಲು ಸಾಧ್ಯವಿಲ್ಲ. ವಿಶೇಷವಾಗಿ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ದಾಖಲೆಯನ್ನು ಮುರಿಯಲು ಅಸಾಧ್ಯವೆಂದು ಪರಿಗಣಿಸಲಾಗಿತ್ತು ಎಂದು ಸಲ್ಮಾನ್‌ ಹೇಳಿದ್ದಾರೆ. ಇದನ್ನೂ ಓದಿ: World Cup Final: ಆಸೀಸ್‌ಗೆ 241 ರನ್‌ಗಳ ಗುರಿ – ವಿಶ್ವಕಪ್‌ಗಾಗಿ ಶತಕೋಟಿ ಭಾರತೀಯರ ಪ್ರಾರ್ಥನೆ

    ಕೊಹ್ಲಿ ಅವರು ಈ ಸ್ಥಾನವನ್ನು ತಲುಪಲು ಅನೇಕ ತ್ಯಾಗಗಳನ್ನು ಮಾಡಿದ್ದಾರೆ. ಇದು ನಿಜವಾಗಿಯೂ ಶ್ಲಾಘನೀಯ ಎಂದು ಖಾನ್‌ ಬಣ್ಣಿಸಿದ್ದಾರೆ.

    ತಂಡದ ಕುರಿತು ಮಾತನಾಡಿದ ಬಾಲಿವುಡ್‌ ನಟ, ವಿಶ್ವಕಪ್‌ ಟ್ರೋಫಿಗೆ ಭಾರತ ತಂಡ 100 ಪ್ರತಿಶತ ಅರ್ಹ. ಈ ಟ್ರೋಫಿ ಭಾರತದಲ್ಲಿ ಮಾತ್ರ ಉಳಿಯುತ್ತದೆ ಎಂದು ನಾನು ಭಾವಿಸುತ್ತೇನೆ. ಇದು ನನ್ನ ಅಭಿಪ್ರಾಯ. ಭಾರತ ತಂಡ ಇದುವರೆಗೂ ಉತ್ತಮ ಪ್ರದರ್ಶನ ತೋರಿದ್ದು, ಫೈನಲ್‌ ಪಂದ್ಯವನ್ನು ಕಳೆದುಕೊಳ್ಳಲು ಯಾವುದೇ ಅವಕಾಶವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಫೈನಲ್‌ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಪ್ಯಾಲೆಸ್ತೀನ್‌ ಬೆಂಬಲಿಗ ಅರೆಸ್ಟ್‌

    ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ (49) ಬಾರಿಸಿದ ದಾಖಲೆ ಸಚಿನ್‌ ಅವರದ್ದಾಗಿತ್ತು. ಆದರೆ ನ್ಯೂಜಿಲೆಂಡ್‌ ವಿರುದ್ಧ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಕೊಹ್ಲಿ, ಸಚಿನ್‌ ದಾಖಲೆಯನ್ನು ಮುರಿದಿದ್ದಾರೆ.

    ಗುಜರಾತ್‌ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್‌ ಟೂರ್ನಿಯ ಫೈನಲ್‌ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣಸುತ್ತಿವೆ. ಟಾಸ್‌ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್‌ ಆಯ್ದುಕೊಂಡಿದೆ. ಬ್ಯಾಟಿಂಗ್‌ ಮಾಡಿದ ಭಾರತ 50 ಓವರ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 240 ರನ್‌ ಗಳಿಸಿದೆ. ಆ ಮೂಲಕ ಆಸ್ಟ್ರೇಲಿಯಾಗೆ 241 ರನ್‌ಗಳ ಗುರಿ ನೀಡಿದೆ.

  • ವಿಶ್ವಕಪ್‌ ಪಂದ್ಯಕ್ಕೂ ಮುನ್ನ ರಂಗೇರಲಿದೆ ಮೋದಿ ಕ್ರೀಡಾಂಗಣ – ಕಾರ್ಯಕ್ರಮಗಳ ಪಟ್ಟಿ ರಿಲೀಸ್‌

    ವಿಶ್ವಕಪ್‌ ಪಂದ್ಯಕ್ಕೂ ಮುನ್ನ ರಂಗೇರಲಿದೆ ಮೋದಿ ಕ್ರೀಡಾಂಗಣ – ಕಾರ್ಯಕ್ರಮಗಳ ಪಟ್ಟಿ ರಿಲೀಸ್‌

    ಅಹಮದಾಬಾದ್: ವಿಶ್ವದಲ್ಲೇ ಅತ್ಯಂತ ಶ್ರೀಮಂತ ಕ್ರಿಕೆಟ್‌ ಮಂಡಳಿ ಎನಿಸಿಕೊಂಡಿರುವ ಬಿಸಿಸಿಐ (BCCI) ಸಮಾರೋಪ ಸಮಾರಂಭವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಅದಕ್ಕೆ ತಕ್ಕಂತೆ ಕಾರ್ಯಕ್ರಮಗಳನ್ನೂ ರೂಪಿಸಿದ್ದು, ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಸೂಪರ್‌ ಸಂಡೇ ನಡೆಯಲಿರುವ ಆಸ್ಟ್ರೇಲಿಯಾ ಮತ್ತು ಭಾರತ (Ind vs Aus) ನಡುವಣ ಫೈನಲ್‌ ಪಂದ್ಯದ ವೇಳೆ ಹಲವು ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತ ಮಾಹಿತಿಯನ್ನು ಬಿಸಿಸಿಐ ತನ್ನ ಅಧಿಕೃತ X ಖಾತೆಯಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: ಆಸೀಸ್‌ ಫಾರ್ಮ್‌ ಬಗ್ಗೆ ನೋ ಟೆನ್ಷನ್‌, ನಮ್ಮ ಶಕ್ತಿ ಏನೆಂಬುದು ನಾಳೆ ಗೊತ್ತಾಗುತ್ತೆ: ರೋಹಿತ್‌ ಶರ್ಮಾ

    ಲೋಹದ ಹಕ್ಕಿಗಳ ಕಲರವ:
    ಪಂದ್ಯದ ಟಾಸ್​ ಆದ 5 ನಿಮಿಷದಲ್ಲಿ ಅಂದರೆ 1.35ರಿಂದ 1.50ರ ವರೆಗೆ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಲಿದೆ. ನರೇಂದ್ರ ಮೋದಿ ಸ್ಟೇಡಿಯಂನ (Narendra Modi Stadium) ಬಾನಂಗಳದಲ್ಲಿ ಲೋಹದ ಹಕ್ಕಿಗಳು ತಮ್ಮ ಚಮತ್ಕಾರ ತೋರಿಸಲಿವೆ. ಆಗಸದಲ್ಲೇ ವಿವಿಧ ಬಣ್ಣಗಳ ಚಿತ್ತಾರ ಬಿಡಿಸಿ ಗಣ್ಯರು ಹಾಗೂ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ. ಎರಡೂ ದಿನಗಳಿಂದಲೂ ರಿಹರ್ಸಲ್‌ ನಡೆಸಿರುವ ಸೂರ್ಯಕಿರಣ್ ತಂಡ ಫೈನಲ್‌ ಶೋಗೆ ಸನ್ನದ್ಧವಾಗಿದೆ.

    ಡ್ರಿಂಕ್ಸ್ ಬ್ರೇಕ್ ವೇಳೆ ಸಂಗೀತ ರಸಮಂಜರಿ:
    ಪಂದ್ಯದ ಮೊದಲ ಇನ್ನಿಂಗ್ಸ್​ನ ಡ್ರಿಂಕ್ಸ್ ಬ್ರೇಕ್ ವೇಳೆ ಆದಿತ್ಯ ಗಧ್ವಿ ಅವರಿಂದ ಗಾಯನ ಪ್ರದರ್ಶನ ನಡೆಯಲಿದೆ. ಮೊದಲ ಇನ್ನಿಂಗ್ಸ್‌ ಮುಗಿದ ಬಳಿಕ ಸಿಗುವ ಸುಮಾರು 30 ನಿಮಿಷಗಳ ಸಮಯದಲ್ಲಿ ಪ್ರೀತಮ್ ಚಕ್ರವರ್ತಿ, ಜೋನಿತಾ ಗಾಂಧಿ, ನಕಾಶ್ ಅಜೀಜ್, ಅಮಿತ್ ಮಿಶ್ರಾ, ಅಕಾಸ ಸಿಂಗ್ ಮತ್ತು ತುಷಾರ್ ಜೋಶಿ ಇವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಇರಲಿದೆ. ಇದನ್ನೂ ಓದಿ: ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    2ನೇ ಇನ್ನಿಂಗ್ಸ್‌ ಡ್ರಿಂಕ್ಸ್ ಬ್ರೇಕ್ ವೇಳೆ ಲೇಸರ್ ಶೋ:
    ಫೈನಲ್​ ಪಂದ್ಯದ 2ನೇ ಇನ್ನಿಂಗ್ಸ್‌ನ ಡ್ರಿಂಗ್ಸ್‌ ಬ್ರೇಕ್‌ ವೇಳೆ ವಿಶಿಷ್ಠ ಶೈಲಿಯ ಲೇಸರ್ ಮತ್ತು ಲೈಟ್ ಶೋ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.

    2023ರ ಐಸಿಸಿ ಏಕದಿನ ವಿಶ್ವಕಪ್‌ ಉದ್ಘಾಟನೆ ವೇಳೆ ಬಿಸಿಸಿಐ ಯಾವುದೇ ಸಮಾರಂಭ ಮಾಡಿರಲಿಲ್ಲ. ಇದರಿಂದ ವಿಶ್ವದ ಶ್ರೀಮಂತರ ಕ್ರಿಕೆಟ್‌ ಮಂಡಳಿ ವಿರುದ್ಧ ಭಾರೀ ಟೀಕೆಗಳು ಕೇಳಿಬಂದಿತ್ತು. ಇದನ್ನೂ ಓದಿ: 1.30 ಲಕ್ಷ‌ ಅಭಿಮಾನಿಗಳನ್ನ ದಿಗ್ಭ್ರಮೆಗೊಳಿಸುತ್ತೇವೆ – ಟೀಂ ಇಂಡಿಯಾ ಸೋಲಿಸುವ ಎಚ್ಚರಿಕೆ ನೀಡಿದ ಪ್ಯಾಟ್‌ ಕಮ್ಮಿನ್ಸ್

  • 1.30 ಲಕ್ಷ‌ ಅಭಿಮಾನಿಗಳನ್ನ ದಿಗ್ಭ್ರಮೆಗೊಳಿಸುತ್ತೇವೆ – ಟೀಂ ಇಂಡಿಯಾ ಸೋಲಿಸುವ ಎಚ್ಚರಿಕೆ ನೀಡಿದ ಪ್ಯಾಟ್‌ ಕಮ್ಮಿನ್ಸ್

    1.30 ಲಕ್ಷ‌ ಅಭಿಮಾನಿಗಳನ್ನ ದಿಗ್ಭ್ರಮೆಗೊಳಿಸುತ್ತೇವೆ – ಟೀಂ ಇಂಡಿಯಾ ಸೋಲಿಸುವ ಎಚ್ಚರಿಕೆ ನೀಡಿದ ಪ್ಯಾಟ್‌ ಕಮ್ಮಿನ್ಸ್

    ಅಹಮದಾಬಾದ್‌: 13ನೇ ಆವೃತ್ತಿಯ ಏಕದಿನ ವಿಶ್ವಕಪ್‌ (World Cup) ಟೂರ್ನಿಗೆ ಕ್ಷಣಗಣನೆ ಬಾಕಿಯಿದ್ದು, ಸೂಪರ್‌ ಸಂಡೇ ಕದನಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದೆ. ಈ ಬಗ್ಗೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌ (Pat Cummins) ಟೀಂ ಇಂಡಿಯಾ (Team India) ತಂಡವನ್ನು ಸೋಲಿಸುವ ಎಚ್ಚರಿಕೆ ನೀಡಿದ್ದಾರೆ.

    ವಿಶ್ವಕಪ್‌ ಪಂದ್ಯಕ್ಕೂ ಮುನ್ನ ನಡೆದ ಪ್ರೀ ಮ್ಯಾಚ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿರುವ ಕಮ್ಮಿನ್ಸ್‌, ಫೈನಲ್‌ (World Cup Final) ಪಂದ್ಯದಲ್ಲಿ 1.30 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಷ್ಟೂ ಆತಿಥೇಯ ಪ್ರೇಕ್ಷಕರ ಬಾಯಿ ಮುಚ್ಚಿಸುವುದೇ ತಂಡದ ಬಹುದೊಡ್ಡ ಗುರಿ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    ಆತಿಥೇಯರ ಎದುರು ಫೈನಲ್‌ ಆಡುತ್ತಿರುವ ಕಾರಣ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಬೆಂಬಲ ನೂರರಷ್ಟು ಆತಿಥೇಯರ ತಂಡದ ಪರವಾಗಿಯೇ ಇರಲಿದೆ. ಅಂತೆಯೇ ಈ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಜಯದ ನಾಗಾಲೋಟದಲ್ಲಿ ಫೈನಲ್‌ಗೆ ತಲುಪಿದೆ. ಸಹಜವಾಗಿಯೇ ಅಭಿಮಾನಿಗಳ ಬೆಂಬಲ ಭಾರತ ತಂಡದ ಪರವಾಗಿ ಇರುತ್ತದೆ. ಹೀಗಾಗಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಬಾಯಿ ಮುಚ್ಚಿಸುವಂತಹ ಆಟವಾಡಿದರೆ ಅದಕ್ಕಿಂತಲೂ ತೃಪ್ತಿಕರ ಅನುಭವ ಮತ್ತೊಂದು ಇರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

    ಟೀಂ ಇಂಡಿಯಾ ಇಲ್ಲಿಯವರೆಗೆ ಅಜೇಯವಾಗಿ ಉತ್ತಮ ಕ್ರಿಕೆಟ್‌ ಆಡುತ್ತಾ ಬಂದಿದೆ. ಆದ್ರೆ ನಾವು ಅವರಿಗೆ ಹೇಗೆ ಶಾಕ್‌ ನೀಡಬೇಕೆಂಬುದು ತಿಳಿದಿದೆ. ಕಳೆದ 2 ವರ್ಷಗಳಲ್ಲಿ ಅವರೊಂದಿಗೆ ಸಾಕಷ್ಟು ಬಾರಿ ಸರಣಿ ಆಡಿದ್ದೇವೆ ಎಂದು ಹೇಳಿದ್ದಾರೆ.

    ಶಮಿ ದೊಡ್ಡ ಶಕ್ತಿ: ಇದೇ ವೇಳೆ ಮೊಹಮ್ಮದ್‌ ಶಮಿ ಬೌಲಿಂಗ್‌ ಪ್ರದರ್ಶನದ ಕುರಿತು ಮಾತನಾಡಿರುವ ಪ್ಯಾಟ್‌ ಕಮ್ಮಿನ್ಸ್‌, ಶಮಿ ಟೀಂ ಇಂಡಿಯಾದ ದೊಡ್ಡ ಶಕ್ತಿ ಎಂದು ಹೊಗಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲೇ ಮೊಹಮ್ಮದ್‌ ಶಮಿ ಒಟ್ಟು 23 ವಿಕೆಟ್‌ಗಳನ್ನ ಪಡೆದುಕೊಂಡಿದ್ದಾರೆ. ಈ ಪೈಕಿ ಒಂದೇ ವಿಶ್ವಕಪ್‌ನಲ್ಲಿ 3 ಬಾರಿ 5 ವಿಕೆಟ್‌ ಪಡೆದ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಮತ್ತೆ ಮಾತಿನಲ್ಲೇ ತಿವಿದ ವಿಚ್ಛೇದಿತ ಪತ್ನಿ – ತೆರೆಯ ಹಿಂದೆ ಶಮಿಯ ಬದುಕು ಘೋರ!

    5 ಬಾರಿ ಚಾಂಪಿಯನ್ಸ್‌ ಆಸ್ಟ್ರೇಲಿಯಾ ತಂಡದ ರೋಚಕ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನ 3 ವಿಕೆಟ್‌ಗಳಿಂದ ಮಣಿಸಿ ದಾಖಲೆಯ 8ನೇ ಬಾರಿ ಫೈನಲ್‌ಗೆ ಕಾಲಿಟ್ಟಿದೆ. ಇನ್ನೂ ಲೀಗ್‌ ಹಂತದಲ್ಲಿ ಆರಂಭಿಕ ಎರಡು ಪಂದ್ಯಗಳಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಎದುರು ಸೋತಿದ್ದ ಆಸ್ಟ್ರೇಲಿಯಾ, ಇನ್ನುಳಿದ 7 ಪಂದ್ಯಗಳಲ್ಲೂ ಗೆಲುವು ಸಾಧಿಸಿತ್ತು. ಆದ್ರೆ ಆರಂಭದಿಂದಲೂ ಭಾರತ ಒಂದೂ ಪಂದ್ಯವನ್ನೂ ಸೋಲದೇ ಸತತ 10 ಪಂದ್ಯಗಳನ್ನೂ ಗೆದ್ದಿರುವ ಹಿಟ್‌ಮ್ಯಾನ್‌ ಸೈನ್ಯ ಫೈನಲ್‌ ಪಂದ್ಯವನ್ನೂ ಗೆದ್ದು ಟ್ರೋಫಿ ಎತ್ತಿ ಹಿಡಿಯುವ ಗುರಿ ಹೊಂದಿದೆ.

  • ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    ವಿಶ್ವ ಮಹಾಸಮರಕ್ಕೆ ಕ್ಷಣಗಣನೆ – ಅಡಾಲಾಜ್ ಸ್ಟೆಪ್‌ವೆಲ್‌ನಲ್ಲಿ ನಾಯಕರ ಪ್ರೀ ಫೋಟೋಶೂಟ್

    ಅಹ್ಮದಾಬಾದ್: ದೇಶವೇ ಎದುರು ನೋಡುತ್ತಿರುವ ವಿಶ್ವಕಪ್ ಮಹಾಸಮರಕ್ಕೆ (World Cup Final) ಕ್ಷಣಗಣನೆ ಬಾಕಿಯಿದೆ. ಟೀಂ ಇಂಡಿಯಾ (Team India) ವಿಶ್ವ ಸಾಮ್ರಾಟನಾಗಿ ಮೆರೆದಾಡುವುದನ್ನು ಕಣ್ತುಂಬಿಕೊಳ್ಳಲು 140 ಕೋಟಿ ಭಾರತೀಯರು ಕಾದು ಕುಳಿತಿದ್ದಾರೆ.

    ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಭಾನುವಾರ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ನ.18) ಗುಜರಾತ್‌ನ ಗಾಂಧಿನಗರಕ್ಕೆ ಸಮೀಪವಿರುವ ಅಡಾಲಾಜ್ ಸ್ಟೆಪ್‌ವೆಲ್‌ (Adalaj Stepwell) ಪ್ರವಾಸಿ ತಾಣದಲ್ಲಿ ಸಾಂಪ್ರದಾಯಿಕವಾಗಿ ವಿಶ್ವಕಪ್‌ನೊಂದಿಗೆ ಪ್ರೀ ಫೋಟೋಶೂಟ್‌ ನಡೆಸಲಾಗಿದೆ. ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಮತ್ತು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌ ಅವರನ್ನು ವಿಶ್ವಕಪ್‌ನೊಂದಿಗೆ ಫೋಟೋಶೂಟ್‌ ಮಾಡಿಸಲಾಗಿದೆ. ಈ ಫೋಟೋಗಳು ಜಾಲತಾಣದಲ್ಲಿ ಸಖತ್‌ ಸದ್ದು ಮಾಡುತ್ತಿದ್ದು, ಅಭಿಮಾನಿಗಳು ಟೀಂ ಇಂಡಿಯಾ ಗೆಲುವಿಗೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಇಂಡೋ-ಆಸೀಸ್‌ ರೋಚಕ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ – ಸೂಪರ್‌ ಸಂಡೇ ಏನೆಲ್ಲಾ ಸ್ಪೆಷಲ್‌ ಇದೆ ಗೊತ್ತಾ..?

    ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ಆರಂಭಕ್ಕೂ ಮುನ್ನವೇ 2 ಗಂಟೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಹಲವು ನೃತ್ಯಪಟುಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೀಡುಬಿಟ್ಟಿದ್ದು, ಸ್ಫೂರ್ತಿ ಗೀತೆಗಳಿಗೆ ನೃತ್ಯ ಅಭ್ಯಾಸ ನಡೆಸುತ್ತಿದ್ದಾರೆ. ಅದಕ್ಕಾಗಿ ʻಜೀತೇಗ ಇಂಡಿಯಾ ಜೀತೇಗ’ ವಿಶೇಷ ಗೀತೆಯನ್ನೂ ಸಿದ್ಧಪಡಿಸಲಾಗಿದೆ. ಅಲ್ಲದೇ ಬಾಲಿವುಡ್ ತಾರೆಯರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮಗಳೂ ನಡೆಯಲಿವೆ. ಇದಕ್ಕೂ ಮುನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯ ಫೈನಲ್ ಸಮಾರಂಭದಲ್ಲಿ ಭಾರತೀಯ ವಾಯುಪಡೆಯಿಂದ ವಿಶೇಷ ಏರ್‌ಶೋ ಪ್ರದರ್ಶನ ನಡೆಸಿಕೊಡಲಿದೆ. ಇದು ಕ್ರಿಕೆಟ್ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ.

    ಮೋದಿಯೇ ಮುಖ್ಯ ಆಕರ್ಷಣೆ: ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್‌ ಶಾ ಹಾಜರಾಗಲಿದ್ದಾರೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನದಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್ ಪಂದ್ಯ ವೀಕ್ಷಿಸಲಿದ್ದಾರೆ. ಇದನ್ನೂ ಓದಿ: ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ

    ಏನೇನು ವಿಶೇಷ..?
    ನವೆಂಬರ್ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

  • ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

    ಜೀತೇಗ ಇಂಡಿಯಾ ಜೀತೇಗ – ವಿಶ್ವ ಮಹಾಸಮರಕ್ಕೆ ಮೋದಿ ಅಂಗಳ ಸಜ್ಜು, ಕೋಟ್ಯಂತರ ಅಭಿಮಾನಿಗಳ ಕಾತರ!

    ಅಹ್ಮದಾಬಾದ್: ದೇಶವೇ ಎದುರು ನೋಡುತ್ತಿರುವ ವಿಶ್ವಕಪ್‌ ಮಹಾಸಮರಕ್ಕೆ ಇನ್ನೊಂದು ದಿನ ಬಾಕಿಯಿದೆ. ಕೋಟ್ಯಂತರ ಅಭಿಮಾನಿಗಳು ಫೈನಲ್‌ (World Cup Final) ಪಂದ್ಯ ವೀಕ್ಷಣೆ ಮಾಡಲು ಕಾದು ಕುಳಿತಿದ್ದಾರೆ. ಲೀಗ್‌ ಸುತ್ತಿನಿಂದಲೂ ಒಂದೇ ಒಂದು ಪಂದ್ಯ ಸೋಲದ ಭಾರತ ಸರಿಸಾಟಿಯೇ ಇಲ್ಲದಂತೆ ಮುನ್ನುಗ್ಗುತ್ತಿದೆ.

    ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ (Ind vs Aus) ತಂಡಗಳ ನಡುವೆ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ. ನವೆಂಬರ್‌ 19 ರಂದು ಮಧ್ಯಾಹ್ನ 2 ಗಂಟೆ ವೇಳೆಗೆ ಪಂದ್ಯ ಆರಂಭವಾಗಲಿದ್ದು, 20 ವರ್ಷಗಳ ಬಳಿಕ ಭಾರತ ಕಾಂಗರೂ ಪಡೆ ವಿರುದ್ಧ ಸೇಡು ತೀರಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. ಆದ್ರೆ ಪಂದ್ಯ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ (Team India) ಸ್ಫೂರ್ತಿ ತುಂಬಲು ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಹಲವು ನೃತ್ಯಪಟುಗಳು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೀಡುಬಿಟ್ಟಿದ್ದು, ನೃತ್ಯ ಅಭ್ಯಾಸ ನಡೆಸುತ್ತಿದ್ದಾರೆ.

    ಟೀಂ ಇಂಡಿಯಾವನ್ನು ಮತ್ತಷ್ಟು ಹುರಿದುಂಬಿಸಲು ʻಜೀತೇಗ ಇಂಡಿಯಾ ಜೀತೇಗʼ (Jeetega, India Jeetega) ವಿಶೇಷ ಗೀತೆಯೊಂದಿಗೆ ನೃತ್ಯ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಅಲ್ಲದೇ ಬಾಲಿವುಡ್‌ ತಾರೆಯರಿಂದ ನೃತ್ಯ ಪ್ರದರ್ಶನ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಇದಕ್ಕೂ ಮುನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವಕಪ್‌ ಟೂರ್ನಿಯ ಫೈನಲ್‌ ಸಮಾರಂಭದಲ್ಲಿ ಭಾರತೀಯ ವಾಯುಪಡೆಯಿಂದ ವಿಶೇಷ ಏರ್‌ಶೋ ಪ್ರದರ್ಶನ ನಡೆಯಲಿದೆ. ಇದು ಕ್ರಿಕೆಟ್‌ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಲಿದೆ. ಇಂದು ಮೊದಲ ಹಂತದ ರಿಹರ್ಸಲ್‌ ಕೂಡ ನಡೆದಿದೆ. ಇದನ್ನೂ ಓದಿ: ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತೆ, ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯುತ್ತೆ – ಮಿಚೆಲ್‌ ಮಾರ್ಷ್‌ ಭವಿಷ್ಯವಾಣಿ ವೈರಲ್‌

    ಮೋದಿ ಮುಖ್ಯ ಆಕರ್ಷಣೆ: ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಜರಾಗಲಿದ್ದಾರೆ. ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನದಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್ ಪಂದ್ಯ ವೀಕ್ಷಿಸಲಿದ್ದಾರೆ.

    ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ನಂತ್ರ ಆಸ್ಟ್ರೇಲಿಯಾ 8ನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇದನ್ನೂ ಓದಿ: 2023 World Cup Final – 20 ವರ್ಷದ ಹಿಂದಿನ ಸೇಡನ್ನು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?

    ಏನೇನು ವಿಶೇಷ..?
    ನವೆಂಬರ್ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

  • ಇಂಡೋ-ಆಸೀಸ್‌ ರೋಚಕ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ – ಸೂಪರ್‌ ಸಂಡೇ ಏನೆಲ್ಲಾ ಸ್ಪೆಷಲ್‌ ಇದೆ ಗೊತ್ತಾ..?

    ಇಂಡೋ-ಆಸೀಸ್‌ ರೋಚಕ ಫೈನಲ್‌ ವೀಕ್ಷಿಸಲಿದ್ದಾರೆ ಮೋದಿ – ಸೂಪರ್‌ ಸಂಡೇ ಏನೆಲ್ಲಾ ಸ್ಪೆಷಲ್‌ ಇದೆ ಗೊತ್ತಾ..?

    ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನವೆಂಬರ್ 19ರಂದು ನಡೆಯಲಿರುವ ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಜರಾಗುವ ನಿರೀಕ್ಷೆಯಿದೆ.

    ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಕ್ಕೆ ಪ್ರಧಾನಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ನರೇಂದ್ರ ಮೋದಿ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿದ್ದು, ರೋಚಕ ಪಂದ್ಯ ವೀಕ್ಷಿಸಲು 1.30 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ. ಈ ವೇಳೆ ಹಲವಾರು ಗಣ್ಯರು ಮೈದಾನಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗಣ್ಯರೊಂದಿಗೆ ಫೈನಲ್‌ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಹೇಳಲಾಗಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೂ ಮುನ್ನ ನಡೆದ ಬಾರ್ಡರ್‌ ಗವಾಸ್ಕರ್‌ ಸರಣಿಯ 4ನೇ ಟೆಸ್ಟ್‌ ಪಂದ್ಯವನ್ನು ಪ್ರಧಾನಿ ಮೋದಿ ವೀಕ್ಷಿಸಿದ್ದರು.

    ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ (Australia) 8ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ರೋಚಕ ಕದನ ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಅಂದು ವಿಶ್ವಕಪ್‌ಗೆ (ICC World Cup) ಮತ್ತಷ್ಟು ರಂಗು ತರಲು ಹಲವು ವಿಶೇಷ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದೆ.

    ಏನೇನು ವಿಶೇಷ..?
    ನವೆಂಬರ್‌ 19ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್‌ ಫೈನಲ್‌ (World Cup Final) ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆಯು ವಿಶೇಷ ಏರ್‌ ಶೋ ಪ್ರದರ್ಶನ ನಡೆಸಿಕೊಡಲಿದೆ. ಇದರೊಂದಿಗೆ ಖ್ಯಾತ ಬಾಲಿವುಡ್‌ ತಾರೆಯರು ಮೋದಿ ಕ್ರೀಡಾಂಗಣಕ್ಕೆ ಮತ್ತಷ್ಟು ರಂಗು ತರಲಿದ್ದಾರೆ. ನೃತ್ಯ, ಸಂಗೀತ, ವಿಶೇಷ ಲೈಟಿಂಗ್‌ ಶೋ ಕಾರ್ಯಕ್ರಮಗಳು ನಡೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.