Tag: World Cup Final

  • ಸಮುದ್ರದಾಳದಲ್ಲಿ ಟೀಂ ಇಂಡಿಯಾಕ್ಕೆ ಆಲ್‌ ದಿ ಬೆಸ್ಟ್‌ ಹೇಳಿದ ಸಾಹಸಿಗರು

    ಸಮುದ್ರದಾಳದಲ್ಲಿ ಟೀಂ ಇಂಡಿಯಾಕ್ಕೆ ಆಲ್‌ ದಿ ಬೆಸ್ಟ್‌ ಹೇಳಿದ ಸಾಹಸಿಗರು

    ಕಾರವಾರ: 13ನೇ ಆವೃತ್ತಿಯ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯವು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯುತ್ತಿದ್ದು, ಟೀಂ ಇಂಡಿಯಾ (Team India) ಗೆಲುವಿಗೆ ಕೋಟ್ಯಂತರ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಆದ್ರೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಮುರುಡೇಶ್ವರ ನೇತ್ರಾಣಿ ಅಡ್ವೆಂಚರ್ಸ್ ಸಂಸ್ಥೆಯ ಸಾಹಸಿಗರು ಸಮುದ್ರದಾಳದಲ್ಲಿ ವಿಶೇಷ ಪೋಸ್ಟರ್‌ ಹಿಡಿದು ವಿಭಿನ್ನವಾಗಿ ಶುಭ ಹಾರೈಸಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಮುರುಡೇಶ್ವರ ನೇತ್ರಾಣಿ ಅಡ್ವೆಂಚರ್ಸ್ (Netrani Adventures) ಸಂಸ್ಥೆ ನೇತ್ರಾಣಿ ಸಮುದ್ರದಾಳದ ನಡುಗಡ್ಡೆಯಲ್ಲಿ ಸ್ಕೂಬಾ ಡೈವ್ (‎Scuba Diving) ಮಾಡುವ ಮೂಲಕ ಟೀಂ ಇಂಡಿಯಾ ವಿಶ್ವಕಪ್‌ ಗೆಲ್ಲಲಿ ಎಂದು ಶುಭ ಹಾರೈಸಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ 32 ಓವರ್‌ಗಳಲ್ಲಿ4 ವಿಕೆಟ್‌ ಕಳೆದುಕೊಂಡು 162 ರನ್‌ ಗಳಿಸಿದೆ. ಇದನ್ನೂ ಓದಿ: World Cup 2023- ಬ್ಯಾಟಿಂಗ್ ಮಾಡ್ತಿರೋ ಪತಿಗಳನ್ನು ಹುರಿದುಂಬಿಸ್ತಿರೋ ಅನುಷ್ಕಾ, ಅಥಿಯಾ

    ರೋಹಿತ್‌ ಶರ್ಮಾ 47 ರನ್‌ (31 ಎಸೆತ, 3 ಸಿಕ್ಸರ್‌, 4 ಬೌಂಡರಿ), ಶುಭಮನ್‌ ಗಿಲ್‌ 4 ರನ್‌, ವಿರಾಟ್‌ ಕೊಹ್ಲಿ 54 ರನ್‌ (63 ಎಸೆತ, 4 ಬೌಂಡರಿ) ಮತ್ತು ಶ್ರೇಯಸ್‌ ಅಯ್ಯರ್‌ 4 ರನ್‌ ಗಳಿಸಿದ್ದಾರೆ.

    ಆಸ್ಟ್ರೇಲಿಯಾ ಪರ ಮಾರಕ ಬೌಲಿಂಗ್‌ ದಾಳಿ ನಡೆಸುತ್ತಿರುವ ನಾಯಕ ಪ್ಯಾಟ್‌ ಕಮ್ಮಿನ್ಸ್‌ 2 ವಿಕೆಟ್‌ ಕಿತ್ತರೆ, ಮಿಚೆಲ್‌ ಸ್ಟಾರ್ಕ್‌ ಮತ್ತು ಗ್ಲೇನ್‌ ಮ್ಯಾಕ್ಸ್‌ವೆಲ್‌ ತಲಾ ಒಂದೊಂದು ವಿಕೆಟ್‌ ಪಡೆದಿದ್ದಾರೆ. ಇದನ್ನೂ ಓದಿ: ದಾಖಲೆಗಾಗಿ ಆಡದೇ ಇದ್ದರೂ ವಿಶ್ವದಾಖಲೆ ನಿರ್ಮಿಸಿದ ರೋಹಿತ್‌ ಶರ್ಮಾ 

  • ಲೆದರ್ ಬಾಲ್ ಮೇಲೆ ಸಹಿ ಮಾಡಿ ಭಾರತ ತಂಡಕ್ಕೆ ಶುಭಕೋರಿದ ಬಿ.ವೈ ರಾಘವೇಂದ್ರ

    ಲೆದರ್ ಬಾಲ್ ಮೇಲೆ ಸಹಿ ಮಾಡಿ ಭಾರತ ತಂಡಕ್ಕೆ ಶುಭಕೋರಿದ ಬಿ.ವೈ ರಾಘವೇಂದ್ರ

    ಬೆಂಗಳೂರು: ಇಂದು ಭಾರತ (India) ಮತ್ತು ಆಸ್ಟ್ರೇಲಿಯಾ (Australia) ನಡುವಿನ ವಿಶ್ವಕಪ್ ಫೈನಲ್‌ಗೆ (World Cup Final) ಕ್ಷಣಗಣನೆ ಆರಂಭವಾಗಿದ್ದು, ಪಂದ್ಯ ವೀಕ್ಷಣೆಗಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಹಿನ್ನೆಲೆ ರಾಜ್ಯದ ಅನೇಕ ಜಿಲ್ಲೆಯ ಅಭಿಮಾನಿಗಳು ವಿವಿಧ ರೀತಿಯಲ್ಲಿ ಟೀಂ ಇಂಡಿಯಾಗೆ ಶುಭಕೋರಿದ್ದಾರೆ.

    ವಿಶ್ವಕಪ್ ಹಿನ್ನೆಲೆ ಸಂಸದ ಬಿವೈ ರಾಘವೇಂದ್ರ (BY Raghavendra) ಶಿವಮೊಗ್ಗದ (Shivamogga) ನೆಹರು ಕ್ರೀಡಾಂಗಣದಲ್ಲಿ ಲೆದರ್ ಬಾಲ್ ಮೇಲೆ ಸಹಿ ಮಾಡಿ ಭಾರತ ತಂಡಕ್ಕೆ ಶುಭ ಕೋರಿದ್ದಾರೆ. ಮೂರನೇ ಬಾರಿ ಭಾರತ ತಂಡ ವಿಶ್ವಕಪ್ ಗೆಲ್ಲುವ ವಿಶ್ವಾಸ ಹೊಂದಿದ್ದು, ಮೋದಿ ಅವರ ತವರಿನಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ರೋಚಕ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ವಿಶ್ವಕಪ್ 2023- ಜೀತೆಗಾ ಹಿಂದೂಸ್ತಾನ್ ಜೀತೆಗಾ ಎಂದ ಜಿಲ್ಲೆಯ ಕ್ರೀಡಾಭಿಮಾನಿಗಳು

    ಇನ್ನು ಏಕದಿನ ವಿಶ್ವಕಪ್ ಮ್ಯಾಚ್‌ನಲ್ಲಿ ಭಾರತದ ಗೆಲುವಿಗಾಗಿ ಅಯ್ಯಪ್ಪ ಮಾಲಾಧಾರಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೇರಳದ ಗುರುವಾಯೂರಿನಲ್ಲಿ ಕರ್ನಾಟಕದ ಅಯ್ಯಪ್ಪ ಭಕ್ತರು ಟೀಂ ಇಂಡಿಯಾ ಗೆಲುವಿಗೆ ಪಾರ್ಥನೆ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನ ಅಯ್ಯಪ್ಪ ಭಕ್ತರು ಶಬರಿಮಲೆ ಯಾತ್ರೆ ಹೊರಟಿದ್ದು, ಗುರುವಾಯೂರು ಕೃಷ್ಣ ಚೋಟಾನಿಕೆರೆ ಭಗವತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ಭಾರತ ಗೆದ್ದರೆ ಟೀಂ ಇಂಡಿಯಾ ಹೆಸರಿನಲ್ಲಿ ಶಬರಿಮಲೆಯಲ್ಲಿ ವಿಶೇಷ ಪೂಜೆ ಮಾಡಿಸುವುದಾಗಿ ಹರಕೆ ಹೊತ್ತಿದ್ದಾರೆ. ಇದನ್ನೂ ಓದಿ: World Cup 2023 – ಚಿನ್ನದಲ್ಲಿ ವಿಶ್ವಕಪ್ ತಯಾರಿಸಿದ ಬೆಂಗಳೂರಿನ ಅಕ್ಕಸಾಲಿಗ

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಅವಜೀಕರ ಮಠದಲ್ಲಿ ಮಠದ ಕಿರಿಯ ಪೀಠಾಧಿಪತಿ ಅಭಿನವ ಶ್ರೀಗಳು ವಿಶೇಷ ಪೂಜೆ ಮಾಡಿದ್ದಾರೆ. ಟೀಂ ಇಂಡಿಯಾ ಗೆಲುವಿಗಾಗಿ ಅವಜೀಕರ ಗದ್ದುಗೆ ಹಾಗೂ ಆಂಜನೇಯನಿಗೆ ಶ್ರೀಗಳು ವಿಶೇಷ ಪೂಜೆ ಸಲ್ಲಿಸಿದ್ದು, ಭಾರತ ಗೆದ್ದು ಬರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆಯುವ ಹಿನ್ನೆಲೆ ಕೋಲಾರದಲ್ಲಿ ಯುವಕರು ಟೀಂ ಇಂಡಿಯಾಗೆ ಶುಭಾಶಯ ಕೋರಿದ್ದಾರೆ. ಯುವಕರಿಂದ ಚಿಯರ್ ಅಪ್, ಕ್ರಿಕೆಟ್ ಅಭಿಮಾನಿಗಳಿಂದ ರೋಹಿತ್ ಪಡೆಗೆ ಶುಭಾಶಯ ಕೋರಿದ್ದು, ಫೈನಲ್ ಕ್ರಿಕೆಟ್ ಮ್ಯಾಚ್ ವೀಕ್ಷಣೆಗೆ ಸಜ್ಜಾಗಿದ್ದಾರೆ. ಇದನ್ನೂ ಓದಿ: 13 ವಿಶ್ವಕಪ್‍ನಲ್ಲಿ 8ನೇ ಬಾರಿ ಫೈನಲ್- 5 ಬಾರಿ ಚಾಂಪಿಯನ್ ಆಗಿರೋ ಆಸ್ಟ್ರೇಲಿಯಾ

    ಇನ್ನು ದಾವಣಗೆರೆಯ ಆಂಜನೇಯ ದೇವಸ್ಥಾನದಲ್ಲಿ ಸ್ಕೂಲ್ ಮಕ್ಕಳು ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಾಮನೂರು ತಿಮ್ಮಾರೆಡ್ಡಿ ಶಾಲಾ ಮಕ್ಕಳು ದೇವರ ಮೊರೆ ಹೋಗಿದ್ದು, ಶಾಲಾ ಆಡಳಿತ ಮಂಡಳಿ ಮತ್ತು ಮಕ್ಕಳು ಆಂಜನೇಯ ಪಾದದ ಬಳಿ ವರ್ಲ್ಡ್ಕಪ್ ಇಟ್ಟು ಪೂಜೆ ಸಲ್ಲಿಸಿದ್ದಾರೆ. ತಂಡ ಸತತವಾಗಿ 10 ಮ್ಯಾಚ್ ಗೆದ್ದು ಪೈನಲ್ ತಲುಪಿದೆ. ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡ ಭಾರತ. ಆದರು ಕೂಡ ದೈವದ ಅನುಗ್ರಹ ಇರಲಿ ಅಂತ ವಿಶೇಷ ಪೂಜೆ ಸಲ್ಲಿಸಲಾಗಿದೆ. ಇನ್ನು ದಾವಣಗೆರೆಯಲ್ಲಿ ಕ್ರಿಕೆಟ್ ಕ್ರೇಜ್ ಜೋರಾಗಿದ್ದು, ತಿಮ್ಮಾರೆಡ್ಡಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ 30 ಅಡಿ ಎತ್ತರದ ದೊಡ್ಡ ಎಲ್‌ಇಡಿ ಪರದೆ ಅಳವಡಿಸುವ ಮೂಲಕ ಇಂದು ಫೈನಲ್ ಫೈಟ್ ವೀಕ್ಷಿಸಲು ಶಾಲಾ ಆಡಳಿತ ಮಂಡಳಿಯಿಂದ ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: World Cup 2023: ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ

    ಅದೇ ರೀತಿ ಭಾರತ ವಿಶ್ವಕಪ್ ಗೆಲುವಿಗಾಗಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂಧೂರು ಚೌಡೇಶ್ವರಿ ದೇವಾಲಯದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಚಂಡಿಕಾ ಹೋಮ ನಡೆಸಿದ್ದು, ಭಾರತದ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ಇದನ್ನೂ ಓದಿ: ಶಮಿ ಕೈಯಲ್ಲಿ ಬೆಂಕಿ ಚೆಂಡು- ಕಾಂಗರೂಗಳ ನಿದ್ದೆಗೆಡಿಸಿರೋ ಸ್ವಿಂಗ್ ಮಾಸ್ಟರ್

  • ಈ ಅವಮಾನ ತಪ್ಪಿಸಲು ಭಾರತ ವಿಶ್ವಕಪ್‌ ಗೆಲ್ಲಲೇಬೇಕು: 2006ರ ಚಾಂಪಿಯನ್ಸ್‌ ಟ್ರೋಫಿ ವೇಳೆ ಆಗಿದ್ದೇನು?

    ಈ ಅವಮಾನ ತಪ್ಪಿಸಲು ಭಾರತ ವಿಶ್ವಕಪ್‌ ಗೆಲ್ಲಲೇಬೇಕು: 2006ರ ಚಾಂಪಿಯನ್ಸ್‌ ಟ್ರೋಫಿ ವೇಳೆ ಆಗಿದ್ದೇನು?

    ಅಹಮದಾಬಾದ್‌: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಏಕದಿನ ವಿಶ್ವಕಪ್​ ಟೂರ್ನಿಯ ಫೈನಲ್​ ಪಂದ್ಯದಲ್ಲಿ 20 ವರ್ಷಗಳ ಬಳಿಕ ಮುಖಾಮುಖಿಯಾಗುತ್ತಿವೆ. ಇತ್ತಂಡಗಳ ಈ ಫೈನಲ್​ ಫೈಟ್‌ ಭಾನುವಾರ ವಿಶ್ವದ ಅತಿ ದೊಡ್ಡ ಕ್ರಿಕೆಟ್​ ಸ್ಟೇಡಿಯಂ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯಲಿದೆ. ಈಗಾಗಲೇ ಈ ಪಂದ್ಯಕ್ಕೆ ಉಭಯ ತಂಡಗಳ ಆಟಗಾರರು ಭರ್ಜರಿ ತಯಾರಿ ನಡೆಸಿದ್ದಾರೆ.

    ಈ ನಡುವೆ 2006ರ ಚಾಂಪಿಯನ್ಸ್‌ ಟ್ರೋಫಿ (2006 Champions Trophy) ವೇಳೆ ಅಂದಿನ ಬಿಸಿಸಿಐ ಅಧ್ಯಕ್ಷ ಶರದ್‌ ಪವಾರ್‌ (Sharad Pawar) ಅವರೊಂದಿಗೆ ಆಸೀಸ್‌ ಕ್ರಿಕೆಟಿಗರು ನಡೆದುಕೊಂಡ ರೀತಿಯ ವೀಡಿಯೋ ದೃಶ್ಯಗಳು ಜಾಲತಾಣದಲ್ಲಿ ವೈರಲ್‌ ಆಗಿದೆ. ಪ್ಯಾಟ್‌ ಕಮ್ಮಿನ್ಸ್ ಜಯ್ ಶಾಗೆ ಈ ರೀತಿ ಮಾಡುವುದನ್ನು ತಪ್ಪಿಸಲು ಭಾರತ ವಿಶ್ವಕಪ್ ಫೈನಲ್‌ನಲ್ಲಿ (World Cup Final) ಗೆಲ್ಲಬೇಕಾಗಿದೆ ಎಂದು ಅಭಿಮಾನಿಗಳು ಆಶಿಸಿದ್ದಾರೆ. ಇದನ್ನೂ ಓದಿ: 1.30 ಲಕ್ಷ‌ ಅಭಿಮಾನಿಗಳನ್ನ ದಿಗ್ಭ್ರಮೆಗೊಳಿಸುತ್ತೇವೆ – ಟೀಂ ಇಂಡಿಯಾ ಸೋಲಿಸುವ ಎಚ್ಚರಿಕೆ ನೀಡಿದ ಪ್ಯಾಟ್‌ ಕಮ್ಮಿನ್ಸ್

    2006ರ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಆಗಿದ್ದೇನು?
    2006ರ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯವು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಿತು. ಅಂದು ವೆಸ್ಟ್‌ ಇಂಡೀಸ್‌ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಬೌಲಿಂಗ್‌ನಲ್ಲಿ ಬಿಗಿ ಹಿಡಿತ ಸಾಧಿಸಿದ್ದ ಆಸ್ಟ್ರೇಲಿಯಾ ತಂಡ ಎದುರಾಳಿ ತಂಡವನ್ನು 138 ರನ್‌ಗಳಿಗೆ ಕಟ್ಟಿಹಾಕಿತು. ಆದ್ರೆ ಮಳೆ ಕಾರಣದಿಂದ ಚೇಸಿಂಗ್‌ನಲ್ಲಿದ್ದ ಆಸ್ಟ್ರೇಲಿಯಾ ಡಕ್ವರ್ತ್‌ ಲೂಯಿಸ್‌ ನಿಯಮದನ್ವಯ 35 ಓವರ್‌ಗಳಲ್ಲಿ 116 ರನ್‌ ಗಳಿಸುವ ಗುರಿ ಪಡೆದಿತ್ತು.

    ಶೇನ್‌ ವಾಟ್ಸನ್‌ ಮತ್ತು ಡೇಮಿಯನ್ ಮಾರ್ಟಿನ್ ಅವರ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನದಿಂದ ಆಸೀಸ್‌ ತಂಡವು 28.1 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 116 ರನ್‌ ಗಳಿಸಿ ಗೆಲುವು ಸಾಧಿಸಿತ್ತು. ಆ ನಂತರ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆಸೀಸ್‌ ತಂಡ ಅಂದು ಬಿಸಿಸಿಐ ಅಧ್ಯಕ್ಷರಾಗಿದ್ದ ಶರದ್ ಪವಾರ್ ಅವರಿಗೆ ವೇದಿಕೆಯಲ್ಲಿ ಮುಜುಗರ ತರಿಸಿತ್ತು. ಅಂದಿನ ನಾಯಕ ರಿಕಿ ಪಾಂಟಿಂಗ್‌, ಶರದ್‌ ಪಾವರ್‌ ಅವರ ಕೈಯಲ್ಲಿದ್ದ ಟ್ರೋಫಿ ಕಸಿದುಕೊಂಡು ಅವರನ್ನು ವೇದಿಕೆಯಿಂದ ಹೊರಹೋಗುವಂತೆ ತಳ್ಳಿದ್ದರು. ಇದು ಭಾರತೀಯ ಇತರ ನಾಯಕರಿಗೂ ಮುಜುಗರ ತರಿಸಿತ್ತು. 17 ವರ್ಷಗಳ ಹಿಂದಿನ ಈ ವೀಡಿಯೋ ಈಗ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಶಾಲೆಗೆ ಸೇರಿಸಲು ಶರ್ಮಾ ಪೋಷಕರಲ್ಲಿ 275 ರೂ. ಫೀಸ್‌ ಕೂಡ ಇರ್ಲಿಲ್ಲ – ಬಾಲ್ಯದಲ್ಲಿ ಹಿಟ್‌ಮ್ಯಾನ್‌ ಕಷ್ಟದ ಜೀವನ!

    ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರಿಗೆ ಆಸೀಸ್‌ ನಾಯಕ ಪ್ಯಾಟ್‌ ಕಮ್ಮಿನ್ಸ್‌ ಈ ರೀತಿ ಮಾಡಬಾರದು ಅಂದ್ರೆ ಭಾರತ ಟ್ರೋಫಿ ಗೆಲ್ಲಲೇಬೇಕು ಎಂದು ಅಭಿಮಾನಿಗಳು ಎಚ್ಚರಿಸಿದ್ದಾರೆ. ಪ್ರಸಕ್ತ ವಿಶ್ವಕಪ್‌ ಟೂರ್ನಿಯಲ್ಲಿ ಒಂದೂ ಪಂದ್ಯದಲ್ಲೂ ಸೋಲಿನ ಮುಖವನ್ನೇ ನೋಡದ ಭಾರತ 11ನೇ ಪಂದ್ಯವನ್ನು ಗೆಲ್ಲುವ ಉತ್ಸಾಹದಲ್ಲಿದೆ. ಆರಂಭಿಕ ಎರಡು ಪಂದ್ಯಗಳಲ್ಲಿ ಸೋತಿದ್ದ ಆಸ್ಟ್ರೇಲಿಯಾ ಇನ್ನುಳಿದ 8 ಪಂದ್ಯಗಳಲ್ಲೂ ಜಯ ಸಾಧಿಸಿದೆ. ಇತ್ತಂಡಗಳ ನಡುವೆ ಜಿದ್ದಾ-ಜಿದ್ದಿ ನಡೆಯಲಿದ್ದು, ಪಂದ್ಯದ ಫಲಿತಾಂಶ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ವಿಶ್ವಕಪ್‌ ಪಂದ್ಯಕ್ಕೂ ಮುನ್ನ ರಂಗೇರಲಿದೆ ಮೋದಿ ಕ್ರೀಡಾಂಗಣ – ಕಾರ್ಯಕ್ರಮಗಳ ಪಟ್ಟಿ ರಿಲೀಸ್‌

    ಟೀಂ ಇಂಡಿಯಾ ಅಜೇಯ ಓಟ!

    • ಮ್ಯಾಚ್ 1: ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಗೆಲುವು
    • ಮ್ಯಾಚ್ 2: ಆಫ್ಘಾನಿಸ್ತಾನ ವಿರುದ್ಧ 8 ವಿಕೆಟ್ ಗೆಲುವು
    • ಮ್ಯಾಚ್ 3: ಪಾಕಿಸ್ತಾನ ವಿರುದ್ಧ 7 ವಿಕೆಟ್ ಗೆಲುವು
    • ಮ್ಯಾಚ್ 4: ಬಾಂಗ್ಲಾದೇಶದ ವಿರುದ್ಧ 7 ವಿಕೆಟ್ ಗೆಲುವು
    • ಮ್ಯಾಚ್ 5: ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ ಗೆಲುವು
    • ಮ್ಯಾಚ್ 6: ಇಂಗ್ಲೆಂಡ್ ವಿರುದ್ಧ 100 ರನ್ ಗೆಲುವು
    • ಮ್ಯಾಚ್ 7: ಶ್ರೀಲಂಕಾ ವಿರುದ್ಧ 302 ರನ್ ಗೆಲುವು
    • ಮ್ಯಾಚ್ 8: ದಕ್ಷಿಣ ಆಫ್ರಿಕಾ ವಿರುದ್ಧ 243 ರನ್ ಗೆಲುವು
    • ಮ್ಯಾಚ್ 9: ನೆದರ್ಲೆಂಡ್ ವಿರುದ್ಧ 160 ರನ್ ಗೆಲುವು
    • ಮ್ಯಾಚ್‌ 10: ನ್ಯೂಜಿಲೆಂಡ್‌ ವಿರುದ್ಧ 70 ರನ್‌ಗಳ ಗೆಲುವು
  • ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತೆ, ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯುತ್ತೆ – ಮಿಚೆಲ್‌ ಮಾರ್ಷ್‌ ಭವಿಷ್ಯವಾಣಿ ವೈರಲ್‌

    ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತೆ, ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿಯುತ್ತೆ – ಮಿಚೆಲ್‌ ಮಾರ್ಷ್‌ ಭವಿಷ್ಯವಾಣಿ ವೈರಲ್‌

    ಅಹಮದಾಬಾದ್‌: 2023ರ ಐಪಿಎಲ್‌ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ ಆಡುತ್ತಿದ್ದ ಮಿಚೆಲ್‌ ಮಾರ್ಷ್‌ (Mitchell Marsh) 6 ತಿಂಗಳ ಹಿಂದೆ ವಿಶ್ವಕಪ್‌ ಫೈನಲ್‌ (World Cup Final) ಕುರಿತು ನುಡಿದಿದ್ದ ಭವಿಷ್ಯವಾಣಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವೀಡಿಯೋ ಸದ್ದು ಮಾಡುತ್ತಿದ್ದಂತೆ, ಟೀಂ ಇಂಡಿಯಾ ಫ್ಯಾನ್ಸ್‌ (Team India Fans) ಆಸ್ಟ್ರೇಲಿಯಾ ಸ್ಟಾರ್‌ ಕ್ರಿಕೆಟಿಗನ ವಿರುದ್ಧ ಕೆಂಡಕಾರಿದ್ದಾರೆ.

    ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (South Africa) ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದ ಆಸ್ಟ್ರೇಲಿಯಾ ತಂಡವು ದಾಖಲೆಯ 8ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ. 20 ವರ್ಷಗಳ ಬಳಿಕ ಮತ್ತೆ ಭಾರತ-ಆಸ್ಟ್ರೇಲಿಯಾ (Australia) ವಿಶ್ವಕಪ್‌ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದು, ಸೂಪರ್‌ ಸಂಡೇ (ನ.19) ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಸೆಣಸಲಿವೆ.

    ಈ ಮಧ್ಯೆ ಆಸ್ಟ್ರೇಲಿಯಾ ಸ್ಟಾರ್‌ ಪ್ಲೇಯರ್‌ ಮಿಚೆಲ್‌ ಮಾರ್ಷ್‌ 2023ರ ಐಪಿಎಲ್‌ (IPL 2023) ಟೂರ್ನಿ ವೇಳೆ ಡೆಲ್ಲಿ ಕ್ಯಾಪಿಟಲ್ಸ್‌ ಡೆಲ್ಲಿ ಫ್ರಾಂಚೈಸಿಯ ಪಾಡ್‌ಕಾಸ್ಟ್‌ನೊಂದಿಗೆ ಮಾತನಾಡಿದ್ದ ಸಂದರ್ಶನ ವೈರಲ್‌ ಆಗಿದೆ. ಸಂದರ್ಶನದಲ್ಲಿ ಮಿಚೆಲ್‌ ಮಾರ್ಷ್‌ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋಲುತ್ತದೆ ಮತ್ತು ಆಸ್ಟ್ರೇಲಿಯಾ ತಂಡ ಅತ್ಯಧಿಕ ರನ್‌ಗಳಿಂದ ಜಯ ಸಾಧಿಸಿ, 6ನೇ ಬಾರಿಗೆ ಚಾಂಪಿಯನ್‌ ಟ್ರೋಫಿ ಎತ್ತಿಹಿಡಿಯಲಿದೆ ಎಂದು ಭವಿಷ್ಯ ನುಡಿದಿದ್ದರು.

    ಭಾರತವನ್ನು ಭಾರೀ ಅಂತರದಿಂದ ಸೋಲಿಸಿ, ಆಸ್ಟ್ರೇಲಿಯಾ 6ನೇ ಬಾರಿಗೆ ಟ್ರೋಫಿ ಎತ್ತಿಹಿಡಿಯಲಿದೆ. ಆಸ್ಟ್ರೇಲಿಯಾ ತಂಡ 2 ವಿಕೆಟ್‌ ನಷ್ಟಕ್ಕೆ 450 ರನ್‌ ಸಿಡಿಸಿ, ಭಾರತವನ್ನು 65 ರನ್‌ಗಳಿಗೆ ಆಲೌಟ್‌ ಮಾಡುವುದಾಗಿ ವೀಡಿಯೋದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಪುರುಷರು ಕೆಲಸ ಮಾಡೋ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗ್ಬಾರ್ದು: ಮುಫ್ತಿ ಅಸದ್ ಕಾಸ್ಮಿ

    2023ರ ವಿಶ್ವಕಪ್‌ ಟೂರ್ನಿಯಲ್ಲಿ ಆಸೀಸ್‌ ಪರ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿರುವ ಮಿಚೆಲ್‌ ಮಾರ್ಷ್‌ 9 ಪಂದ್ಯಗಳಲ್ಲಿ 426 ರನ್‌ ಗಳಿಸಿದ್ದಾರೆ. ಇದರಲ್ಲಿ 20 ಸಿಕ್ಸರ್‌, 42 ಬೌಂಡರಿ, 2 ಶತಕ, 1 ಅರ್ಧಶತಕಗಳೂ ಸೇರಿವೆ. ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ಗೂ ಮುನ್ನ ನಡೆದಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಮಾರ್ಷ್‌ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು. ಇದನ್ನೂ ಓದಿ: ಬಿಜೆಪಿ ಒಂದು ಕುಟುಂಬದ ಪಕ್ಷ ಆಗಬಾರದು, ಹುದ್ದೆಗಾಗಿ ಬ್ಲ್ಯಾಕ್‌ಮೇಲ್‌ ಮಾಡಲ್ಲ: ಯತ್ನಾಳ್‌ ರೆಬೆಲ್‌

  • ಇತಿಹಾಸ ಸೃಷ್ಟಿಸಿದ ಧೋನಿ ಸಿಕ್ಸರ್ ಬಾರಿಸಿದ ಬ್ಯಾಟ್

    ಇತಿಹಾಸ ಸೃಷ್ಟಿಸಿದ ಧೋನಿ ಸಿಕ್ಸರ್ ಬಾರಿಸಿದ ಬ್ಯಾಟ್

    ಮುಂಬೈ: ಭಾರತದ ಮಾಜಿ ಕ್ರಿಕೆಟ್ ನಾಯಕ ಎಂ.ಎಸ್.ಧೋನಿ 2011 ರ ವಿಶ್ವಕಪ್ ಫೈನಲ್-ಗೆಲುವಿನ ಸಿಕ್ಸರ್ ಬಾರಿಸಲು ಬಳಸಿದ ಬ್ಯಾಟ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಕ್ರಿಕೆಟ್ ಬ್ಯಾಟ್ ಎಂಬ ದಾಖಲೆಯನ್ನು ಸೃಷ್ಟಿಸಿದೆ.

    2011ರ ವಿಶ್ವಕಪ್ ಫೈನಲ್‍ನಲ್ಲಿ ಭಾರತದಕ್ಕೆ ಧೋನಿ ಅವರು ಸಿಕ್ಸರ್ ಬಾರಿಸಲು ಮೂಲಕ ಗೆಲುವು ತಂದುಕೊಟ್ಟಿದ್ದರು. ಈ ಬ್ಯಾಟ್‍ಗಾಗಿ ಅಭಿಮಾನಿಗಳು ಬೇಡಿಕೆಯನ್ನು ಇಟ್ಟಿದ್ದರು. ಇದನ್ನು ಅತೀ ಹೆಚ್ಚು ಬೆಲೆಗೆ ಪಡೆದ ಧೋನಿ ಅಭಿಮಾನಿಗಳು ಇತಿಹಾಸವನ್ನೆ ಸೃಷ್ಟಿಸಿದ್ದಾರೆ.  ಇದನ್ನೂ ಓದಿ: 3 ತಿಂಗಳ ನಂತರ ಕಾಳಿಚರಣ್ ಮಹಾರಾಜ್‍ಗೆ ಸಿಕ್ತು ಜಾಮೀನು ಭಾಗ್ಯ

    ವಿಶ್ವಕಪ್ ಫೈನಲ್ ಆಗಿ ಮೂರು ತಿಂಗಳ ನಂತರ ಲಂಡನ್‍ನಲ್ಲಿ ನಡೆದ ಚಾರಿಟಿ ಡಿನ್ನರ್‍ನಲ್ಲಿ ಧೋನಿಯ ಬ್ಯಾಟ್ ಅನ್ನು ಮುಂಬೈ ಮೂಲದ ಬ್ರೋಕರೇಜ್ ಸಂಸ್ಥೆ ಆರ್‌ಕೆ ಗ್ಲೋಬಲ್ 100,000 ಡಾಲರ್ (75 ಲಕ್ಷ)ಗೆ ಖರೀದಿಸಿತು. ಈ ಪ್ರಕ್ರಿಯೆಯಲ್ಲಿ ಬಂದ ಹಣ ಧೋನಿ ಪತ್ನಿಯ ಚಾರಿಟಬಲ್ ಸಂಸ್ಥೆಗೆ ಹೋಗಿದೆ.

  • ಇತಿಹಾಸ ಸೃಷ್ಟಿಸಿದ ಭಾರತ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ಫೈನಲ್

    ಇತಿಹಾಸ ಸೃಷ್ಟಿಸಿದ ಭಾರತ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ಫೈನಲ್

    ಮೆಲ್ಬರ್ನ್: ಭಾನುವಾರ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಿಂದ ಇತಿಹಾಸ ಸೃಷ್ಟಿಯಾಗಿದೆ.

    ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ವೀಕ್ಷಿಸಲು 86,174 ಮಂದಿ ಆಗಮಿಸಿದ್ದರು. ಈ ಮೂಲಕ ಅತಿ ಹೆಚ್ಚು ಮಂದಿ ವೀಕ್ಷಿಸಿದ ಮಹಿಳಾ ಕ್ರಿಕೆಟ್ ಪಂದ್ಯ ಎಂಬ ದಾಖಲೆಯನ್ನು ಬರೆದಿದೆ. ಇದರ ಜೊತೆಗೆ ಆಸ್ಟ್ರೇಲಿಯಾದಲ್ಲಿ ಅತಿ ಹೆಚ್ಚು ಅಭಿಮಾನಿಗಳು ವೀಕ್ಷಿಸಿದ ಮಹಿಳಾ ಪಂದ್ಯ ಎಂಬ ಮತ್ತೊಂದು ದಾಖಲೆಯನ್ನು ಬರೆದಿದೆ.

    ಮೆಲ್ಬರ್ನ್ ಸ್ಟೇಡಿಯಂ 1,00,024 ಆಸನ ಸಾಮರ್ಥ್ಯ ಹೊಂದಿದ್ದು ಇಲ್ಲಿಯವರೆಗೆ ವಿಶ್ವದ ಅತಿ ದೊಡ್ಡ ಸ್ಟೇಡಿಯಂ ಎಂಬ ಹೆಗ್ಗಳಿಕೆ ಪಡೆದುಕೊಂಡಿತ್ತು. ಈಗ ಗುಜರಾತಿನ ಅಹಮದಾಬಾದಿನ ಮೊಟೆರಾ ಸ್ಟೇಡಿಯಂ ವಿಶ್ವದ ನಂಬರ್ ಒನ್ ಸ್ಟೇಡಿಯಂ ಆಗಿದ್ದು, 1.10 ಲಕ್ಷ ಮಂದಿ ಕುಳಿತು ಪಂದ್ಯ ವೀಕ್ಷಿಸಬಹುದಾಗಿದೆ.

    185 ರನ್ ಗಳ ಗುರಿಯನ್ನು ಬೆನ್ನಟ್ಟಿದ ಭಾರತ 19.1 ಓವರಿನಲ್ಲಿ 99 ರನ್‍ಗಳಿಗೆ ಸರ್ವಪತನ ಕಂಡಿತು. 85 ರನ್ ಗಳಿಂದ ಗೆಲ್ಲುವ ಮೂಲಕ ಆಸ್ಟ್ರೇಲಿಯಾ 5ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ ಭಾರತ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.

    ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ಆರಂಭಿಕ ಆಟಗಾರ್ತಿಯಾರದ ಅಲೀಸಾ ಹೀಲಿ ಮತ್ತು ಬೆಥ್ ಮೂನಿ ಶತಕದ ಜೊತೆಯಾಟವಾಡಿದಿಂದ 4 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತ್ತು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಹೀಲಿ 30 ಎಸೆತಗಳಲ್ಲಿ ಅರ್ಧಶತಕ ಹೊಡೆದರು. ಹೀಲಿ 75 ರನ್ (39 ಎಸೆತ, 7 ಬೌಂಡರಿ, 5 ಸಿಕ್ಸರ್) ಹೊಡೆದು ಔಟಾದರೆ ನಾಯಕಿ ಮೆಗ್ ಲ್ಯಾನಿಂಗ್ 16 ರನ್ ಗಳಿಸಿದಾಗ ದೀಪ್ತಿ ಶರ್ಮಾ ಬೌಲಿಂಗ್‍ನಲ್ಲಿ ಕ್ಯಾಚ್ ನೀಡಿ ಔಟಾದರು.

    ನಂತರ ಬಂದ ಆಶ್ಲೆ ಗಾರ್ಡ್‍ನರ್ 2 ರನ್, ರೇಚಲ್ ಹೇನ್ಸ್ 4 ರನ್ ಗಳಿಸಿ ಔಟಾದರು. ಒಂದು ಕಡೆ ವಿಕೆಟ್ ಉರುಳಿದರೂ ಗಟ್ಟಿ ನಿಂತು ಆಟವಾಡಿದ ಬೆಥ್ ಮೂನಿ ಔಟಾಗದೇ 78 ರನ್ (54 ಎಸೆತ, 10 ಬೌಂಡರಿ) ಹೊಡೆದು ರನ್ ಏರಿಸಲು ಸಹಾಯ ಮಾಡಿದರು.

    ಆಸ್ಟ್ರೇಲಿಯಾ ನೀಡಿದ್ದ 185 ರನ್‍ಗಳ ಬೃಹತ್‍ವನ್ನು ಬೆನ್ನಟ್ಟಿದ ಭಾರತ ಮೊದಲ ಓವರಿನಲ್ಲೇ 2 ರನ್ ಬಾರಿಸಿದ್ದ ಶಫಾಲಿ ವರ್ಮಾ ವಿಕೆಟ್ ಕಳೆದುಕೊಂಡು ಆಘಾತಕ್ಕೆ ತುತ್ತಾಯಿತು. ಈ ಬೆನ್ನಲ್ಲೇ ಮೈದಾನಕ್ಕಿಳಿದ ತಾನಿಯಾ ಭಾಟಿಯಾ ಗಾಯಗೊಂಡು ನಿವೃತ್ತಿ ಆದರು. ಆಗ ಬ್ಯಾಟಿಂಗ್ ಇಳಿದ ಜೆಮಿಮಾ ರೊಡ್ರಿಗಸ್ ಯಾವುದೇ ರನ್ ಗಳಿಸದೇ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು. ಜೊತೆಗೆ ಅನುಭವಿ ಆಟಗಾರ್ತಿ ಸ್ಮೃತಿ ಮಂದಾನ 11 ರನ್ (8 ಎಸೆತ, 2 ಬೌಂಡರಿ) ಗಳಿಸಿ ಔಟಾದರು.

    ಕೇವಲ 18 ರನ್‍ಗಳಿಗೆ 3ನೇ ವಿಕೆಟ್ ಕಳೆದುಕೊಂಡ ಭಾರತ ಸೋಲಿನ ಭೀತಿಗೆ ಸಿಲುಕಿತು. ಈ ಟೂರ್ನಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ತೋರಿದ ಭಾರತದ ನಾಯಕಿ ಹರ್ಮನ್‍ಪ್ರೀತ್ ಕೌರ್ ಫೈನಲ್ ಪಂದ್ಯದಲ್ಲೂ ತಂಡಕ್ಕೆ ಆಸರೆಯಾಗುವಲ್ಲಿ ವಿಫಲರಾದರು. ಕೌರ್ 4 ರನ್ (7 ಎಸೆತ, 1 ಬೌಂಡರಿ) ಗಳಿಸಿ ವಿಕೆಟ್ ಒಪ್ಪಿಸಿದರು. ಈ ವೇಳೆಗೆ ತಂಡದ ಸೋಲು ಖಚಿತವಾಯಿತು.

    ಕನ್ನಡತಿ ವೇದಾ ಕೃಷ್ಣಮೂರ್ತಿ ಹಾಗೂ ದೀಪ್ತಿ ಶರ್ಮಾ 5ನೇ ವಿಕೆಟ್‍ಗೆ 28 ರನ್‍ಗಳ ಜೊತೆಯಾಟವಾಡಿದರು. ಬಿರುಸಿನ ಹೊಡೆತಕ್ಕೆ ಮುಂದಾದ ವೇದಾ ಕೃಷ್ಣಮೂರ್ತಿ 19 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. 11 ರನ್ ಗಳಿಗೆ ಕೊನೆಯ ನಾಲ್ಕು ವಿಕೆಟ್ ಕಳೆದುಕೊಳ್ಳುವುದರೊಂದಿಗೆ ಭಾರತ ಸರ್ವಪತನ ಕಂಡಿತು.

    ಅಲೀಸಾ ಹೀಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ ಬೆಥ್ ಮೂನಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.