Tag: World Health Organization

  • ಮತ್ತೊಮ್ಮೆ ಬೂಸ್ಟರ್ ಡೋಸ್ ನೀಡಲು ವಿಶ್ವ ಆರೋಗ್ಯ ಸಂಸ್ಥೆ ಸಲಹೆ

    ಮತ್ತೊಮ್ಮೆ ಬೂಸ್ಟರ್ ಡೋಸ್ ನೀಡಲು ವಿಶ್ವ ಆರೋಗ್ಯ ಸಂಸ್ಥೆ ಸಲಹೆ

    ಬರ್ನ್/ ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವವರಿಗೆ, ಆರೋಗ್ಯಕಾರ್ಯಕರ್ತರಿಗೆ 6 ಅಥವಾ 12 ತಿಂಗಳ ಬಳಿಕ ಮತ್ತೊಂದು ಬೂಸ್ಟರ್ ಡೋಸ್ (Booster dose) ನೀಡುವಂತೆ ವಿಶ್ವ ಆರೋಗ್ಯ ಸಂಸ್ಥೆಯ (World Health Organization) ತಜ್ಞರ ಸಮಿತಿ ಸಲಹೆ ನೀಡಿದೆ.

    ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳು, ರಕ್ಷಣಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರಿಗೆ ಮತ್ತೊಂದು ಬೂಸ್ಟರ್ ಡೋಸ್ ನೀಡಬೇಕು. ಒಂದು ವೇಳೆ ಇವರು ಕೋವಿಡ್‍ಗೆ (COVID-19) ತುತ್ತಾದರೆ ಹೆಚ್ಚಿನ ತೊಂದರೆ ಎದುರಿಸ ಬೇಕಾಗಬಹುದು ಎಂದು ಸಮಿತಿ ಮುನ್ನೆಚ್ಚರಿಕೆ ನೀಡಿದೆ.

    ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದ ಯುವಕರಿಗೆ ಈಗಾಗಲೇ ನೀಡಿರುವ ಬೂಸ್ಟರ್ ಡೋಸ್ ಸಾಕಾಗುತ್ತದೆ ಎಂಬ ಅಭಿಪ್ರಾಯವನ್ನು ಸಮಿತಿ ವ್ಯಕ್ತಪಡಿಸಿದೆ.

    9 ಮಂದಿ ಬಲಿ:
    ಕೋವಿಡ್ ಸೋಂಕು ಮತ್ತೆ ಹೆಚ್ಚಳವಾಗುತ್ತಿದ್ದು ಶನಿವಾರ 2994 ಪ್ರಕರಣಗಳು ದಾಖಲಾಗಿವೆ. 9 ಮಂದಿ ಸಾವಿಗೀಡಾಗಿದ್ದಾರೆ. ಕೋವಿಡ್‍ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಕಡಿಮೆ ಇರುವ ಕಾರಣ ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆ. ಪಾಸಿಟಿವಿಟಿ ದರ ಅಪಾಯಕಾರಿ ಮಟ್ಟ ಶೇ.2.09ರಷ್ಟು ದಾಖಲಾಗಿದೆ. ಈ ನಡುವೆ ದೆಹಲಿಯಲ್ಲಿ (Delhi) 416 ಪ್ರಕರಣ ದಾಖಲಾಗಿದ್ದು, 7 ತಿಂಗಳಲ್ಲಿ ಗರಿಷ್ಠ ಪ್ರಮಾಣವಾಗಿದೆ. ಮುಂಬೈನಲ್ಲಿ (Mumbai) 669 ಪ್ರಕರಣಗಳು ದಾಖಲಾಗಿವೆ.

  • ಉಜ್ಬೇಕಿಸ್ತಾನದಲ್ಲಿ ಭಾರತದ ಕೆಮ್ಮಿನ ಸಿರಪ್‌ ಬಳಸಬೇಡಿ: WHO

    ಉಜ್ಬೇಕಿಸ್ತಾನದಲ್ಲಿ ಭಾರತದ ಕೆಮ್ಮಿನ ಸಿರಪ್‌ ಬಳಸಬೇಡಿ: WHO

    ತಾಷ್ಕೆಂಟ್: ನೋಯ್ಡಾ (Noida) ಮೂಲದ ಮರಿಯನ್ ಬಯೋಟೆಕ್ (Marion Biotech) ಕಂಪನಿ ತಯಾರಿಸಿದ 2 ಕೆಮ್ಮಿನ ಸಿರಪ್‍ಗಳನ್ನು ಉಜ್ಬೇಕಿಸ್ತಾನದಲ್ಲಿರುವ (Uzbekistan) ಮಕ್ಕಳಿಗೆ (Child) ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಶಿಫಾರಸು ಮಾಡಿದೆ.

    ಮೆರಿಯನ್ ಬಯೋಟೆಕ್‍ನಿಂದ ತಯಾರಿಸಲ್ಪಟ್ಟ ಗುಣ್ಣಮಟ್ಟದ ವೈದ್ಯಕೀಯ ಉತ್ಪನ್ನಗಳನ್ನು ಪೂರೈಸಲು ವಿಫಲವಾಗಿದೆ. ಇದರಿಂದಾಗಿ ಮರಿಯನ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ತಯಾರಿಸಿರುವ ಅಬ್ರೊನಾಲ್ ಮತ್ತು ಡಾಕ್-1 ಮ್ಯಾಕ್ಸ್ ಕೆಮ್ಮು ಸಿರಪ್ ತೆಗೆದುಕೂಳ್ಳದಂತೆ ಡಬ್ಲ್ಯುಎಚ್‍ಒ ಸೂಚಿಸಿದೆ.

    ಇಲ್ಲಿಯವರೆಗೆ ಔಷಧಿಯ ಗುಣಮಟ್ಟ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಮರಿಯನ್ ಬಯೋಟೆಕ್ ಯಾವುದೇ ಖಾತ್ರಿಯನ್ನು ನೀಡಿಲ್ಲ ಎಂದು ಉಲ್ಲೇಖಿಸಿದೆ.

    ಡಿಸೆಂಬರ್‌ನಲ್ಲಿ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ ದೇಶದಲ್ಲಿ ಕನಿಷ್ಠ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ ಹೇಳಿಕೊಂಡಿತ್ತು. ಸಾವನ್ನಪ್ಪಿದ 18 ಮಕ್ಕಳು ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಡಾಕ್-1 ಮ್ಯಾಕ್ಸ್ ಅನ್ನು ಸೇವಿಸಿದ್ದಾರೆ ಎಂದು ಉಜ್ಬೇಕಿಸ್ತಾನದ ಆರೋಗ್ಯ ಸಚಿವಾಲಯ ತಿಳಿಸಿತ್ತು. ಇದನ್ನೂ ಓದಿ: ಮೀನು ಹಿಡಿಯಲು ಹೋಗಿದ್ದವರ ಮೇಲೆ ಫೈರಿಂಗ್ ಪ್ರಕರಣ- ಮರಳಿನ ವಿಚಾರವೇ ಕೊಲೆಗೆ ಕಾರಣ

    ಸಿರಪ್‍ಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿ ಎಥಿಲೀನ್ ಗ್ಲೈಕೋಲ್ ಎಂಬ ವಿಷಕಾರಿ ಅಂಶ ಪತ್ತೆಯಾಗಿದೆ ಎಂದು ಸಚಿವಾಲಯ ತಿಳಿಸಿತ್ತು. ವೈದ್ಯರ ಸಲಹೆಗಳನ್ನು ತೆಗೆದುಕೊಳ್ಳದೇ ಪೋಷಕರು ಮಕ್ಕಳಿಗೆ ಕೆಮ್ಮಿನ ಸಿರಪ್ ಅನ್ನು ಅಗತ್ಯ ಪ್ರಮಾಣಕ್ಕಿಂತಲೂ ಹೆಚ್ಚಿನ ಡೋಸ್ ನೀಡಿದ್ದಾರೆ ಎಂದು ಆರೋಪಿಸಿತ್ತು. ಇದನ್ನೂ ಓದಿ: NEP ನೇಮಕಾತಿ ಮಾನದಂಡ – ಸರ್ಕಾರದ ವಿರುದ್ಧ ಸಿಡಿದ್ದೆದ್ದ ಅಂಗನವಾಡಿ ಕಾರ್ಯಕರ್ತೆಯರು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಓಮಿಕ್ರಾನ್ ರೂಪಾಂತರಿಯಿಂದ ಜಾಗತಿಕ ಅಪಾಯ ಹೆಚ್ಚು-WHO

    ಓಮಿಕ್ರಾನ್ ರೂಪಾಂತರಿಯಿಂದ ಜಾಗತಿಕ ಅಪಾಯ ಹೆಚ್ಚು-WHO

    ಜಿನೀವಾ: ಓಮಿಕ್ರಾನ್(Omicron) ಕೊರೊನಾ ವೈರಸ್ ರೂಪಾಂತರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡುವ ಸಾಧ್ಯತೆಯಿದೆ. ಕೆಲವು ದೇಶಗಳಿಗೆ ಇದು ಹೆಚ್ಚು ಅಪಾಯವನ್ನು ಉಂಟುಮಾಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಹೇಳಿದೆ.

    ಓಮಿಕ್ರಾನ್ ಸೋಂಕಿನಿಂದ ಇದುವರೆಗೆ ಯಾವುದೇ ಸಾವು ಸಂಭವಿಸಿಲ್ಲ. ಆದರೆ ಲಸಿಕೆ ಇದರ ವಿರುದ್ಧ ಹೋರಾಡುವ ಸಾಮಥ್ರ್ಯ ಹೊಂದಿದೆಯೇ, ಇದು ನಮಗೆ ರಕ್ಷಣೆ ನೀಡುತ್ತದೆಯೇ ಎಂಬುದನ್ನು ಅರಿಯಲು ಸಂಶೋಧನೆಯ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(World Health Organization) ಹೇಳಿದೆ.

    ಕಳೆದ ವಾರ ಮೊದಲ ಓಮಿಕ್ರಾನ್ ಪ್ರಕರಣ ವರದಿಯಾಯಿತು. ಅಲ್ಲಿಂದ ಇಲ್ಲಿಯವರೆಗೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ವಿಶ್ವ ಸಂಸ್ಥೆಯು ತನ್ನ 194 ಸದಸ್ಯ ರಾಷ್ಟ್ರಗಳಿಗೆ ವ್ಯಾಕ್ಸಿನೇಷನ್‍ನನ್ನು ವೇಗಗೊಳಿಸಲು ಮತ್ತು ಆರೋಗ್ಯ ಸೇವೆಗಳನ್ನು ನೀಡಲು ಯೋಜನೆಗಳನ್ನು ಜಾರಿಗೊಳಿಸಿ. ಓಮಿಕ್ರೋನ್ ರೂಪಾಂತರಿ ವ್ಯಕ್ತಿ ಪ್ರತಿರಕ್ಷಣಾ ಸಾಮರ್ಥ್ಯದಿಂದ ತಪ್ಪಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ. ಡೆಲ್ಟಾದಿಂದಲೂ ಅತಿ ಹೆಚ್ಚು ವೇಗವಾಗಿ ಹರಬಡಲ್ಲುದು. ಜಾಗತಿಕ ಮಟ್ಟದಲ್ಲಿ ಹೆಚ್ಚು ಹರಡುವ ಸಂಭವನೀಯತೆ ಇದೆ. ತೀವ್ರ ಪರಿಣಾಮ ಉಂಟಾಗಬಹುದು ಎಂದು ಮುನ್ಸೂಚನೆ ಕೊಟ್ಟಿದೆ. ಹೊಸ ರೂಪಾಂತರಕ್ಕೆ ಸಂಬಂಧಿಸಿದಂತೆ ಒಟ್ಟಾರೆ ಜಾಗತಿಕ ಅಪಾಯ ಅತಿ ಹೆಚ್ಚು ಎಂದು ವಿಶ್ವ ಸಂಸ್ಥೆ ಹೇಳಿದೆ. ಇದನ್ನೂ ಓದಿ: ಗುರುದ್ವಾರದಲ್ಲಿ ಫೋಟೋಶೂಟ್ – ಮಾಡೆಲ್ ವಿರುದ್ಧ ನೆಟ್ಟಿಗರು ಗರಂ 

    ಕೋವಿಡ್ ರೂಪಾಂತರಿ ತಳಿ ಒಮಿಕ್ರೋನ್ ಹರಡುವಿಕೆ ಸಾಮಥ್ರ್ಯದ ಬಗ್ಗೆ ಹೆಚ್ಚಿನ ನಿಖರತೆ ಇಲ್ಲ. ಅತಿ ಹೆಚ್ಚು ಅಪಾಯ ಉಂಟುಮಾಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಹೇಳಿದ್ದಾರೆ.  ಇದನ್ನೂ ಓದಿ: 62 ನಿವಾಸಿಗಳಿಗೆ ಕೋವಿಡ್ ಪಾಸಿಟಿವ್ – ಕಂಟೈನ್ಮೆಂಟ್ ಝೋನ್ ಆಯ್ತು ವೃದ್ಧಾಶ್ರಮ

    ಓಮಿಕ್ರಾನ್ ಪ್ರಕರಣ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್ 24 ರಂದು ವರದಿಯಾಗಿದೆ. ಅಲ್ಲಿ ಸೋಂಕುಗಳು ತೀವ್ರವಾಗಿ ಏರಿಕೆಯಾಗಿವೆ. ಅಂದಿನಿಂದ ಇದು 12ಕ್ಕೂ ಹೆಚ್ಚು ದೇಶಗಳಿಗೆ ಹರಡಿದೆ.

  • ಪಾಕಿಸ್ತಾನದಲ್ಲಿ ಕಾಡುತ್ತಿದೆ ನಿಗೂಢ ವೈರಲ್ ಜ್ವರ

    ಪಾಕಿಸ್ತಾನದಲ್ಲಿ ಕಾಡುತ್ತಿದೆ ನಿಗೂಢ ವೈರಲ್ ಜ್ವರ

    ಇಸ್ಲಾಮಾಬಾದ್: ನಿಗೂಢ ವೈರಲ್ ಜ್ವರವು ಪಾಕಿಸ್ತಾನದ ಕರಾಚಿಯಲ್ಲಿ ಕಾಡುತ್ತಿದ್ದು, ವೈದ್ಯರು ಇದು ಯಾವ ಜ್ವರವೆಂದು ತಿಳಿಯದೆ ತತ್ತರಿಸುತ್ತಿದ್ದಾರೆ.

    ಪಾಕಿಸ್ತಾನದ ಕರಾಚಿಯಲ್ಲಿ ‘ನಿಗೂಢ ವೈರಲ್ ಜ್ವರ’ ಪ್ರಕರಣಗಳು ಪತ್ತೆಯಾಗುತ್ತಿದ್ದು, ಈ ವೈರಲ್ ಜ್ವರವನ್ನು ಮೊದಲು ಡೆಂಗ್ಯೂ ಎಂದು ಪರಿಗಣಿಸಿ ಪರೀಕ್ಷಿಸಿದಾಗ, ರಿಪೋರ್ಟ್ ನೆಗೆಟಿವ್ ಬಂತು ಎಂದು ವೈದ್ಯರು ಮತ್ತು ರೋಗಶಾಸ್ತ್ರಜ್ಞರು ತಿಳಿಸಿದರು. ಈ ರೋಗದಿಂದ ರೋಗಿಗಳ ಪ್ಲೇಟ್‍ಲೆಟ್‍ಗಳು ಮತ್ತು ಬಿಳಿ ರಕ್ತ ಕಣಗಳನ್ನು ಕಡಿಮೆ ಮಾಡುತ್ತಿದ್ದು, ಡೆಂಗ್ಯೂ ರೋಗದ ಲಕ್ಷಣವನ್ನು ಹೊಂದಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಇದನ್ನೂ ಓದಿ: ಪ್ರವಾಸೋದ್ಯಮ ಕ್ಷೇತ್ರದ 3 ವಿಭಾಗಳಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಉತ್ತರಾಖಂಡ್

    ಡೌ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್‍ನ ಆಣ್ವಿಕ ರೋಗಶಾಸ್ತ್ರದ ಮುಖ್ಯಸ್ಥ ಪ್ರೊ.ಸಯೀದ್ ಖಾನ್ ಈ ಕುರಿತು ಮಾತನಾಡಿದ್ದು, ಒಂದೆರಡು ವಾರಗಳಿಂದ, ನಾವು ಈ ವೈರಲ್ ಜ್ವರದ ಪ್ರಕರಣಗಳನ್ನು ನೋಡುತ್ತಿದ್ದೇವೆ. ಈ ಜ್ವರದಿಂದ ರೋಗಿಗಳಲ್ಲಿ ಪ್ಲೇಟ್‍ಲೆಟ್‍ಗಳು ಮತ್ತು ಬಿಳಿ ರಕ್ತ ಕಣಗಳು ಕುಸಿಯುತ್ತಿವೆ. ಈ ರೋಗಲಕ್ಷಣಗಳು ಡೆಂಗ್ಯೂ ಜ್ವರಕ್ಕೆ ಹೋಲುತ್ತವೆ. ಆದರೆ ಈ ಕುರಿತು ಪರೀಕ್ಷೆಸಿದಾಗ ರಿಪೋರ್ಟ್ ನೆಗೆಟಿವ್ ಬರುತ್ತಿದೆ ಎಂದು ಹೇಳಿದರು.

    ಜಿಲ್ಲಾ ಆರೋಗ್ಯ ಅಧಿಕಾರಿ(ಡಿಎಚ್‍ಒ) ಈ ಕುರಿತು, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‍ನಲ್ಲಿ ಶುಕ್ರವಾರ 45 ಜನರಿಗೆ ಹೊಸ ಡೆಂಗ್ಯೂ ಜ್ವರ ಪ್ರಕರಣಗಳು ವರದಿಯಾಗಿವೆ. ಈ ನಿಗೂಢ ವೈರಸ್ ಕಾಯಿಲೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುವುದರ ಜೊತೆಗೆ ನಗರದಲ್ಲಿ ಪ್ಲೇಟ್‍ಲೆಟ್‍ಗಳ ಮೆಗಾ ಯೂನಿಟ್‍ಗಳು ಮತ್ತು ಯಾದೃಚ್ಛಿಕ ಘಟಕಗಳ ತೀವ್ರ ಕೊರತೆಯಿದೆ. ಈ ಹಿನ್ನೆಲೆ ಇಲ್ಲಿನ ಜನರು ತುಂಬಾ ಕಷ್ಟ ಪಡುತ್ತಿದ್ದಾರೆ ಎಂದು ತಿಳಿಸಿದರು.

    ನಗರದ ವಿವಿಧ ಆಸ್ಪತ್ರೆಗಳ ವೈದ್ಯರು ಮತ್ತು ಹೆಮಟೋ-ರೋಗಶಾಸ್ತ್ರಜ್ಞರು ಸೇರಿದಂತೆ ಇತರ ತಜ್ಞರು, ಕರಾಚಿಯಲ್ಲಿ ಡೆಂಗ್ಯೂ ವೈರಸ್ ತರಹದ ಇನ್ನೊಂದು ರೋಗ ಕಾಣಿಸಿಕೊಂಡಿದೆ ಎಂದು ದೃಢಪಡಿಸಿದ್ದಾರೆ. ಇದು ಡೆಂಗ್ಯೂ ಜ್ವರದಂತೆಯೇ ಕಾರ್ಯನಿರ್ವಹಿಸುವ ಮತ್ತು ಅದೇ ಚಿಕಿತ್ಸಾ ಫ್ರೋಟೋಕಾಲ್ಸ್ ಗಳ ಅಗತ್ಯವಿರುವ ರೋಗವನ್ನು ಉಂಟುಮಾಡುತ್ತದೆ. ಆದರೆ ಇದು ಡೆಂಗ್ಯೂ ಜ್ವರವಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಾಗಿದ ಯೋಗಾನರಸಿಂಹ ಸ್ವಾಮಿ ಗೋಪುರದ ಕಳಶ – ಆತಂಕದಲ್ಲಿ ಭಕ್ತರು

    ಗುಲ್ಯನ್-ಎ-ಇಕ್ಬಾಲ್‍ನ ಮಕ್ಕಳ ಆಸ್ಪತ್ರೆಯ ಆಣ್ವಿಕ ವಿಜ್ಞಾನಿ ಡಾ.ಮುಹಮ್ಮದ್ ಜೊಹೈಬ್ ಅವರು, ಈ ವೈರಸ್ ಡೆಂಗ್ಯೂ ಅಲ್ಲ. ಆದರೆ ಡೆಂಗ್ಯೂ ತರಹದ ರೋಗಲಕ್ಷಣಗಳನ್ನು ಹೊಂದಿರುವ ವೈರಲ್ ಜ್ವರವಾಗಿದೆ ಎಂದು ದೃಢಪಡಿಸಿದರು.

    ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಡೆಂಗ್ಯೂ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು. ಇದು ಬೆಚ್ಚಗಿನ, ಉಷ್ಣವಲಯದ ಹವಾಮಾನದಲ್ಲಿ ಸಾಮಾನ್ಯವಾಗಿದೆ ಮತ್ತು ಮಳೆಗಾಲದಲ್ಲಿ ಸಾಮಾನ್ಯವಾಗಿ ಹೆಚ್ಚಾಗುತ್ತೆ ಎಂದು ತಿಳಿಸಿದರು.

  • ಅಕ್ಟೋಬರ್ ಮೊದಲ ವಾರದಲ್ಲಿ ಕೊವ್ಯಾಕ್ಸಿನ್ ಲಸಿಕೆಗೆ WHO ಮಾನ್ಯತೆ?

    ಅಕ್ಟೋಬರ್ ಮೊದಲ ವಾರದಲ್ಲಿ ಕೊವ್ಯಾಕ್ಸಿನ್ ಲಸಿಕೆಗೆ WHO ಮಾನ್ಯತೆ?

    ನವದೆಹಲಿ: ಅಕ್ಟೋಬರ್ ಮೊದಲ ವಾರದಲ್ಲಿ ಭಾರತೀಯ ದೇಸಿ ಲಸಿಕೆ ಕೊವ್ಯಾಕ್ಸಿನ್‍ಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಸಿಗುವ ಸಾಧ್ಯತೆಗಳಿವೆ. ಅಕ್ಟೋಬರ್ 5ರಂದು WHO ಸಮಿತಿಯ ತಜ್ಞರ ಸಭೆ ನಡೆಯಲಿದ್ದು, ಈ ಸಭೆಯ ಬಳಿಕ ಮಾನ್ಯತೆ ಸಿಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ.

    ಐಸಿಎಂಆರ್ ಮತ್ತು ಭಾರತ್ ಬಯೋಟೆಕ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ಈಗಾಗಲೇ ಭಾರತದಲ್ಲಿ ಬಳಕೆ ಮಾಡಲಾಗುತ್ತಿದೆ. ಇದಕ್ಕೆ ಜಾಗತಿಕ ಮಾನ್ಯತೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆಯ ಅವಶ್ಯಕತೆ ಇದ್ದು, ಇದಕ್ಕಾಗಿ ಭಾರತ್ ಬಯೋಟೆಕ್ ಅರ್ಜಿ ಸಲ್ಲಿಸಿದೆ. ಇದನ್ನೂ ಓದಿ: ಜನತೆಗೆ ಸಿಹಿಸುದ್ದಿ – ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳೋದು ಅನುಮಾನ

    ಭಾರತ್ ಬಯೋಟೆಕ್ ಮನವಿ ಸ್ವೀಕರಿಸಿರುವ ವಿಶ್ವ ಆರೋಗ್ಯ ಸಂಸ್ಥೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ಸೂಚಿಸಿತ್ತು. ಹೆಚ್ಚುವರಿ ದಾಖಲೆಗಳನ್ನು ಈಗಾಗಲೇ ಭಾರತ್ ಬಯೋಟೆಕ್ ಸಲ್ಲಿಸಿದ್ದು, ಈ ವರದಿಗಳನ್ನು ತಜ್ಞರು ಪರಿಶೀಲನೆ ನಡೆಸಲಿದ್ದಾರೆ.

    ತಜ್ಞರ ಸಮಿತಿ ಕೊವ್ಯಾಕ್ಸಿನ್ ಲಸಿಕೆಯ ಪರಿಣಾಮಕಾರಿತ್ವ, ಅಡ್ಡ ಪರಿಣಾಮ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಿ, ಬಳಿಕ ಮಾನ್ಯತೆ ನೀಡುವ ಸಾಧ್ಯತೆಗಳಿದೆ. ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ಭಾರತದ ದೇಶಿಯ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ನೀಡಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಸದ್ಯಕ್ಕಿಲ್ಲ ಮೂರನೇ ಅಲೆಯ ಆತಂಕ – ತಜ್ಞರ ಅಭಿಪ್ರಾಯ ಏನು ಗೊತ್ತಾ?

  • ಯಾವುದೇ ಪುರಾವೆಗಳಿಲ್ಲ – ರೆಮಿಡಿಸಿವಿರ್ ಔಷಧಿಯನ್ನು ಕೈಬಿಟ್ಟ ಡಬ್ಲ್ಯೂಎಚ್‍ಒ

    ಯಾವುದೇ ಪುರಾವೆಗಳಿಲ್ಲ – ರೆಮಿಡಿಸಿವಿರ್ ಔಷಧಿಯನ್ನು ಕೈಬಿಟ್ಟ ಡಬ್ಲ್ಯೂಎಚ್‍ಒ

    ಜಿನೀವಾ: ಕೋವಿಡ್ 19 ಸೋಂಕಿತರಿಗೆ ರೆಮೆಡಿಸಿವಿರ್ ಔಷಧಿ ನೀಡುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಕೈಬಿಟ್ಟಿದೆ.

    ಈ ಸಂಬಂಧ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿದ ಡಬ್ಯೂಎಚ್‍ಒ ವಕ್ತಾರ ತಾರಿಕ್ ಜಸರೆವಿಕ್, ರೆಮಿಡಿಸಿವಿರ್ ಔಷಧಿಯನ್ನು ಕೊರೊನಾಗೆ ನೀಡುವ ಔಷಧಿಗಳ ಪಟ್ಟಿಯಿಂದ ಅಮಾನತಿನಲ್ಲಿಟ್ಟಿದ್ದೇವೆ. ಅನಾರೋಗ್ಯದಲ್ಲಿರುವ ರೋಗಿಗಳ ಮೇಲೆ ಈ ಔಷಧ ಪರಿಣಾಮಕಾರಿಯಾಗಿ ಬಳಕೆಯಾಗುತ್ತದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ತಿಳಿಸಿದ್ದಾರೆ.

    ಪ್ರಪಂಚಾದ್ಯಂತ ಕೊರೋನಾ 2, 3ನೇ ಅಲೆ ತಾಂಡವ ಆಡ್ತಿದೆ. ಅದರಲ್ಲೂ ಭಾರತದಲ್ಲಿ 2ನೇ ಅಲೆಯಲ್ಲಿ ಅಪಾರ ಪ್ರಮಾಣದಲ್ಲಿ ಸಾವು-ನೋವಾಗ್ತಿರೋದಕ್ಕೆ ವಿಶ್ವದ ರಾಷ್ಟ್ರಗಳು ಆತಂಕ ವ್ಯಕ್ತಪಡಿಸಿವೆ. ಈ ಹೊತ್ತಲ್ಲೇ, ಡೆಡ್ಲಿ ವೈರಸ್‍ನಿಂದ ಐಸಿಯು ಸೇರಿ ಜೀವನ್ಮರಣದ ಹೋರಾಟ ನಡೆಸೋ ಸೋಂಕಿತರಿಗೆ ಸಂಜೀವಿನಿ, ಲೈಫ್‍ಲೈನ್ ಅಂತಲೇ ಬಿಂಬಿತವಾಗಿದ್ದ ರೆಮ್‍ಡಿಸಿವಿರ್ ಇಂಜೆಕ್ಷನ್‍ಗೆ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‍ಒ) ಬ್ರೇಕ್ ಹಾಕಿದೆ. ಕರ್ನಾಟಕದಲ್ಲಿ ಕಳೆದ ತಿಂಗಳಿಂದ ರೆಮ್‍ಡಿಸಿವಿರ್ ದಂಧೆಯೇ ನಡೆದಿತ್ತು. ಆಸ್ಪತ್ರೆಗೆ ದಾಖಲಾದ ಎಲ್ಲಾ ಸೋಂಕಿತರಿಗೂ ರೆಮ್‍ಡಿಸಿವಿರ್ ಕೊಡಬೇಕು ಅನ್ನೋ ಮಟ್ಟಿಗೆ ಚರ್ಚೆ ಆಗಿತ್ತು. ಆದರೀಗ, ಡಬ್ಲ್ಯೂಎಚ್‍ಒ ಆದೇಶ ಆತಂಕ ಹೆಚ್ಚಿಸಿದೆ.

    ಸೋಂಕಿತರಿಗೆ ರೆಮ್‍ಡಿಸಿವಿರ್ ಪರಿಣಾಮಕಾರಿ ಎಂಬ ಬಗ್ಗೆ ದಾಖಲೆ ಇಲ್ಲ ಎಂದು ಡಬ್ಲ್ಯೂಎಚ್‍ಒ ತಿಳಿಸಿದೆ. ಮೊದಲಿಗೆ ಪ್ಲಾಸ್ಮಾ ಥೆರಪಿಯನ್ನು ಕೈಬಿಡಲಾಗಿತ್ತು. ಬಳಿಕ ಬ್ಲಾಕ್ ಫಂಗಸ್‍ನಿಂದಾಗಿ ಸ್ಟಿರಾಯ್ಡ್ ಕಡಿಮೆ ಬಳಕೆಗೆ ಸೂಚಿಸಿದೆ. ಆದರೆ ಕೊರೊನಾಗೆ ಪರ್ಯಾಯ ಚಿಕಿತ್ಸಾ ವಿಧಾನವನ್ನು ಡಬ್ಲ್ಯೂಎಚ್‍ಓ ಸೂಚಿಸಿಲ್ಲ. ಹೀಗಾಗಿ ಕೊರೊನಾ ಸೋಂಕಿತರಿಗೆ ಯಾವ ಚಿಕಿತ್ಸೆ ನೀಡಬೇಕು ಎಂಬ ಆತಂಕ ಕಾಡುತ್ತಿದೆ. ಡಬ್ಲ್ಯೂಎಚ್‍ಓ ಸೂಚನೆ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

    ಕೊರೊನಾ ವೈರಸ್ ವಿರುದ್ಧದ ಪ್ರಗತಿ ‘ದುರ್ಬಲ’ವಾಗಿದೆ. ಹೀಗಾಗಿ ಅಂತರಾಷ್ಟ್ರೀಯ ಪ್ರಯಾಣವನ್ನು ತಪ್ಪಿಸಬೇಕು. ಆದರೆ ಕೊರೊನಾ ವಿರುದ್ಧದ ಅಧಿಕೃತ ಲಸಿಕೆಗಳು ರೂಪಾಂತರಿ ವೈರಸ್ ವಿರುದ್ಧ ಸಹ ಪರಿಣಾಮಕಾರಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯುರೋಪ್ ನಿರ್ದೇಶಕ ಹ್ಯಾನ್ಸ್ ಕ್ಲುಗೆ ತಿಳಿಸಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿಯಲ್ಲಿ ತಿಳಿಸಿರುವ ಅವರು, ನಿರಂತರ ಹೆದರಿಕೆ ಹಾಗೂ ಹೊಸ ಅನಿಶ್ಚಿತತೆಯ ಹಿನ್ನೆಲೆಯಲ್ಲಿ ನಾವು ಎಚ್ಚರಿಕೆಯಿಂದ ಮುಂದುವರಿಯಬೇಕು. ಅಂತರಾಷ್ಟ್ರೀಯ ಪ್ರಯಾಣ ಮಾಡುವಾಗ ಆಲೋಚಿಸಬೇಕು, ಇಲ್ಲವೇ ಸ್ಥಗಿತಗೊಳಿಸಬೇಕು. ಕೊರೊನಾ ಪ್ರಕರಣಗಳು ಹೆಚ್ಚಿರುವುದರಿಂದ ಬೇಗ ಹರಡುತ್ತದೆ ಎಂದು ಅವರು ತಿಳಿಸಿದ್ದಾರೆ.

    ಭಾರತದಲ್ಲಿರುವ ವೈರಸ್ ಬಹುಬೇಗ ಹರಡುತ್ತಿದೆ. ಡಬ್ಲ್ಯೂಎಚ್‍ಒ ಯುರೋಪ್ ಪ್ರದೇಶದ 53 ದೇಶಗಳ ಪೈಕಿ ಕನಿಷ್ಠ 26 ದೇಶಗಳಲ್ಲಿ ಈ ವೈರಸ್ ಪತ್ತೆಯಾಗಿದೆ. ಆದರೆ ಅಧಿಕೃತ ಲಸಿಕೆಗಳು ರೂಪಾಂತರಿ ವಿರುದ್ಧ ಪರಿಣಾಮಕಾರಿಯಾಗಿವೆ. ಎಲ್ಲ ರೂಪಾಂತರಿ ವೈರಸ್ ವಿರುದ್ಧ ಸಹ ವ್ಯಾಕ್ಸಿನ್ ಗಳು ಪ್ರಬಲ ಪರಿಣಾಮ ಬೀರುತ್ತವೆ. ಅಲ್ಲದೆ ಸಾರ್ವಜನಿಕ ಆರೋಗ್ಯ ಹಾಗೂ ಸಾಮಾಜಿಕ ಕ್ರಮಗಳಿಂದ ಎಲ್ಲ ರೂಪಾಂತರಿ ವೈರಸ್‍ನ್ನು ನಿಯಂತ್ರಿಸಬಹುದು ಎಂದು ಕ್ಲುಗೆ ಹೇಳಿದ್ದಾರೆ.

    ಲಸಿಕೆಗಳು ಸುರಂಗದ ಕೊನೆಯಲ್ಲಿನ ಬೆಳಕಾಗಿರಬಹುದು, ಆ ಬೆಳಕಿನಿಂದ ನಾವು ಕುರುಡಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ಲಸಿಕೆ ಮಹತ್ವವನ್ನು ವಿವರಿಸಿದ್ದು, ಎಲ್ಲ ರೂಪಾಂತರಿ ವೈರಸ್‍ಗಳಿಗೆ ಲಸಿಕೆಗಳು ಪರಿಣಾಮಕಾರಿ ಎಂದು ಒತ್ತಿ ಹೇಳಿದ್ದಾರೆ.

  • ಭಾರತದ ಕೊರೊನಾ ಪರಿಸ್ಥಿತಿ ಭೀಕರವಾಗುತ್ತಿದೆ: ವಿಶ್ವ ಆರೋಗ್ಯ ಸಂಸ್ಥೆ

    ಭಾರತದ ಕೊರೊನಾ ಪರಿಸ್ಥಿತಿ ಭೀಕರವಾಗುತ್ತಿದೆ: ವಿಶ್ವ ಆರೋಗ್ಯ ಸಂಸ್ಥೆ

    ನವದೆಹಲಿ: ಭಾರತದ ಕೊರೊನಾ ಪರಿಸ್ಥಿತಿ ಭೀಕರವಾಗುತ್ತಿದ್ದು, ಹಲವು ರಾಜ್ಯಗಳಲ್ಲಿ ಇನ್ನೂ ಪತ್ತೆಯಾಗುತ್ತಿರುವ ಕೊರೊನಾ ಪ್ರಕರಣಗಳು ಚಿಂತಿಗೀಡು ಮಾಡಿವೆ. ಇದೆಲ್ಲವನ್ನು ಗಮನಿಸಿದರೆ ಎರಡನೇ ವರ್ಷ ಇನ್ನೂ ಭಯನಕವಾಗಿರುವ ಬಗ್ಗೆ ಎಚ್ಚರಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‍ಒ) ಆತಂಕ ವ್ಯಕ್ತಪಡಿಸಿದೆ.

    ಈ ಬಗ್ಗೆ ಡಬ್ಲ್ಯೂಎಚ್‍ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಭಾರತದಲ್ಲಿನ ಕೊರೊನಾ ಪರಿಸ್ಥಿತಿಗೆ ವಿಶ್ವ ಆರೋಗ್ಯ ಸಂಸ್ಥೆ ಸ್ಪಂದಿಸಿದ್ದು, ಸಾವಿರಾರು ಆಕ್ಸಿಜನ್ ಕಾನ್ಸಟ್ರೇಟರ್‍ಗಳು, ಮೊಬೈಲ್ ಫೀಲ್ಡ್ ಹಾಸ್ಪಿಟಲ್‍ಗಳಿಗಾಗಿ ಟೆಂಟ್‍ಗಳು, ಮಾಸ್ಕ್ ಹಾಗೂ ಇತರೆ ವೈದ್ಯಕೀಯ ಪರಿಕರಗಳನ್ನು ಪೂರೈಕೆ ಮಾಡಿದೆ ಎಂದು ಮಾಹಿತಿ ನೀಡಿದ್ದಾರೆ.

    ಭಾರತದ ಬಗ್ಗೆ ಇನ್ನೂ ಕಾಳಜಿ ವಹಿಸುವ ಅಗತ್ಯವಿದ್ದು, ಹಲವು ರಾಜ್ಯಗಳಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಚಿಂತೆಗೀಡು ಮಾಡಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವುದು ಹಾಗೂ ಸಾವುಗಳನ್ನು ನೋಡಿದರೆ ಭಯವಾಗುತ್ತಿದೆ. ಭಾರತಕ್ಕೆ ಬೆಂಬಲ ನೀಡುತ್ತಿರುವ ಸ್ಟೇಕ್‍ಹೋಲ್ಡರ್ಸ್ ಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

    ತುರ್ತುಪರಿಸ್ಥಿತಿಯಂತಹ ಸಂದರ್ಭ ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ನೇಪಾಳ, ಶ್ರೀಲಂಕಾ, ವಿಯಟ್ನಾಂ, ಕಾಂಬೋಡಿಯಾ, ಥೈಲ್ಯಾಂಡ್ ಹಾಗೂ ಈಜಿಪ್ಟ್ ದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

  • ಇನ್ನೆರಡು ವರ್ಷದಲ್ಲಿ ಕೊರೊನಾ ಕಾಣೆಯಾಗುತ್ತೆ: WHO

    ಇನ್ನೆರಡು ವರ್ಷದಲ್ಲಿ ಕೊರೊನಾ ಕಾಣೆಯಾಗುತ್ತೆ: WHO

    ಲಂಡನ್: ಇನ್ನೆರಡು ವರ್ಷದಲ್ಲಿ ಕೊರೊನಾ ಕೊನೆಯಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ.

    ಈ ಕುರಿತು ಸುದ್ದಿಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಅಧಾನೊಮ್, ಎರಡು ವರ್ಷದೊಳಗೆ ಕೊರೊನಾ ಮಾಯವಾಗುವ ಎಲ್ಲ ಲಕ್ಷಣಗಳು ಇದ್ದು, ಎಚ್1ಎನ್1 ಗಿಂದ ಕಡಿಮೆ ಅವಧಿಯಲ್ಲಿ ಕೊನೆಯಾಗಲಿದೆ. ಕೊರೊನಾ ವೈರಸ್ ಶತಮಾನಗಳ ನಂತರದ ಆರೋಗ್ಯ ಬಿಕ್ಕಟ್ಟಾಗಿದೆ. ಜಾಗತೀಕರಣದಿಂದಾಗಿ ಕೊರೊನಾ ಎಚ್1ಎನ್1 ಗಿಂತ ಅತೀ ವೇಗವಾಗಿ ಹೆಚ್ಚು ದೇಶಗಳಿಗೆ ಹರಡಿದೆ. ವೈರಸ್ ತಡೆಯಲು ಶತಮಾನಗಳ ಹಿಂದೆ ಇಷ್ಟು ತಂತ್ರಜ್ಞಾನ ಇರಲಿಲ್ಲ. ಆದರೆ ಈಗ ವಿವಿಧ ಬಗೆಯ ತಂತ್ರಜ್ಞಾನಗಳಿವೆ ಎಂದು ತಿಳಿಸಿದ್ದಾರೆ.

    ನಮ್ಮ ಪ್ರಯತ್ನಗಳೆಲ್ಲ ಒಟ್ಟುಗೂಡಿದರೆ ಕೇವಲ ಇನ್ನು ಎರಡು ವರ್ಷಗಳಲ್ಲಿ ಕೊರೊನಾ ಇಲ್ಲದಂತಾಗುತ್ತದೆ ಎಂಬ ವಿಶ್ವಾಸವನ್ನು ಹೊಂದಿದ್ದೇವೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

    ಡಬ್ಲ್ಯುಎಚ್‍ಒ ನ ತುರ್ತು ವಿಭಾಗದ ಮುಖ್ಯಸ್ಥ ಡಾ.ಮೈಕಲ್ ರ್ಯಾನ್ ಈ ಕುರಿತು ವಿವರಿಸಿ, ಎಚ್1ಎನ್1 ಸಾಂಕ್ರಾಮಿಕ ರೋಗವು ಮೂರು ವಿಭಿನ್ನ ಹಂತಗಳಲ್ಲಿ ಭೂಗೋಳವನ್ನು ಅಪ್ಪಳಿಸಿತ್ತು. ಎರಡನೇ ಹಂತದಲ್ಲಿ ಎಚ್1ಎನ್1 ಭಾರೀ ವಿನಾಶಕಾರಿಯಾಗಿತ್ತು. ಆದರೆ ಕೊರೊನಾ ವೈರಸ್ ಸಹ ಅದೇ ರೀತಿ ಕಾಡುತ್ತದೆ ಎಂದು ತೋರುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಕೊರೊನಾ ವೈರಸ್ ಎಚ್1ಎನ್1 ರೀತಿಯಲ್ಲೇ ಅಲೆ ಎಬ್ಬಿಸಲಿದೆ ಎಂಬ ಕುರಿತು ಯಾವುದೇ ಸೂಚನೆ ಸಿಗುತ್ತಿಲ್ಲ. ವೈರಸ್ ನಿಯಂತ್ರಣದಲ್ಲಿಲ್ಲವಾದಾಗ ನೇರವಾಗಿ ಹಿಂದಕ್ಕೆ ಹೋಗುತ್ತದೆ. ಸಾಂಕ್ರಾಮಿಕ ವೈರಸ್‍ಗಳು ಕಾಲೋಚಿತ ಮಾದರಿಯಲ್ಲಿ ನೆಲೆಗೊಳ್ಳುತ್ತವೆ. ಆದರೆ ಆ ರೀತಿಯ ಯಾವುದೇ ಸೂಚನೆ ಕೊರೊನಾ ವೈರಸ್ ವಿಚಾರದಲ್ಲಿ ಕಂಡು ಬರುತ್ತಿಲ್ಲ ಎಂದು ರ್ಯಾನ್ ವಿವರಿಸಿದ್ದಾರೆ.

    ದೇಶದಲ್ಲಿ ಸೋಂಕಿತರ ಸಂಖ್ಯೆ 29.76 ಲಕ್ಷಕ್ಕೆ ಏರಿಕೆ:
    ಕೊರೊನಾ ತನ್ನ ರೌದ್ರನರ್ತನ ಮುಂದುವರಿಸಿದ್ದು ಕಳೆದ 24 ಗಂಟೆಯಲ್ಲಿ 69,878 ಹೊಸ ಪ್ರಕರಣಗಳು ವರದಿಯಾಗಿವೆ. ನಿನ್ನೆ ಒಂದೇ ದಿನ 945 ಜನರು ಕೊರೊನಾ ಬಲಿ ಪಡೆದುಕೊಂಡಿದ್ದು, ಸಾವನ್ನಪ್ಪಿದವರ ಸಂಖ್ಯೆ 55,794ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,75,702ಕ್ಕೆ ಏರಿಕೆ ಕಂಡಿದ್ದು, 6,97,330 ಸಕ್ರಿಯ ಪ್ರಕರಣಗಳಿವೆ. ಇನ್ನು ಗುಣಮುಖ ಪ್ರಮಾಣ ಶೇ.74.69ರಷ್ಟಿರೋದು ಸಮಾಧಾನಕರ ವಿಷಯ. ಶುಕ್ರವಾರ 10.23,836 ಜನರು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆ.

    ಕೊರೊನಾ ಪೀಡಿತ ರಾಷ್ಟ್ರಗಳ ಪೈಕಿ ಭಾರತ ಮೂರನೇ ಸ್ಥಾನದಲ್ಲಿದೆ. ಅಮರಿಕ ಮತ್ತು ಬ್ರೆಜಿಲ್ ಮೊದಲು ಮತ್ತು ಎರಡನೇ ಸ್ಥಾನದಲ್ಲಿವೆ. ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ, ಕರ್ನಾಟಕ ಮತ್ತು ಉತ್ತರ ಪ್ರದೇಶ ರಾಜ್ಯಗಳು ದೇಶದಲ್ಲಿ ಕೊರೊನಾ ಸಂಖ್ಯೆಯಲ್ಲಿ ಮೊದಲ ಐದು ಸ್ಥಾನದಲ್ಲಿವೆ.

  • ಕೊರೊನಾ ಮೂಲ ಹುಡುಕಲು ಹೊರಟ ಡಬ್ಲ್ಯೂಹೆಚ್‍ಓ- ಚೀನಾಕ್ಕೆ ಸಂಕಷ್ಟ ಶುರು

    ಕೊರೊನಾ ಮೂಲ ಹುಡುಕಲು ಹೊರಟ ಡಬ್ಲ್ಯೂಹೆಚ್‍ಓ- ಚೀನಾಕ್ಕೆ ಸಂಕಷ್ಟ ಶುರು

    ನವದೆಹಲಿ: ವಿಶ್ವಾದ್ಯಂತ ಐದು ಲಕ್ಷ ಮಂದಿಯನ್ನು ಬಲಿ ಪಡೆದಿರುವ ಕೊರೊನಾ ಸೋಂಕಿನ ಮೂಲ ಪತ್ತೆ ಹಚ್ಚಲು ವಿಶ್ವ ಆರೋಗ್ಯ ಸಂಸ್ಥೆ ಮುಂದಾಗಿದೆ. ಈ ಬಗ್ಗೆ ತನಿಖೆ ನಡೆಸಲು ವಿಶೇಷ ತಂಡವೊಂದು ಮುಂದಿನ ವಾರ ಚೀನಾಕ್ಕೆ ತೆರಳುವುದಾಗಿ ಡಬ್ಲ್ಯೂಹೆಚ್‍ಓ ಹೇಳಿದೆ.

    ಕೊರೊನಾ ಸೋಂಕು ಕಾಣಿಸಿಕೊಂಡು ವಿಶ್ವಕ್ಕೆ ಹರಡಿದ ಆರು ತಿಂಗಳು ಬಳಿಕ ಅಧ್ಯಯನಕ್ಕೆ ಮುಂದಾಗಿರುವ ವಿಶ್ವ ಆರೋಗ್ಯ ಸಂಸ್ಥೆಯ ತಂಡ ವುಹಾನ್‍ಗೆ ಭೇಟಿ ನೀಡಲಿದೆ. ಅಲ್ಲಿ ಕೊರೊನಾ ವೈರಸ್ ಹುಟ್ಟಿದ್ದೇಗೆ ಹಾಗೂ ಅದನ್ನು ಮಾನವನಿಗೆ ಹರಡಿದ್ದೇಗೆ ಎನ್ನುವ ಮಾಹಿತಿಯನ್ನು ಕಲೆ ಹಾಕುವ ಪ್ರಯತ್ನ ಮಾಡುತ್ತಿದೆ.

    ಸೋಂಕು ನಿಫಾ ವೈರಸ್ ಮಾದರಿಯಲ್ಲೇ, ಬಾವುಲಿಗಳ ಮೂಲಕ ಹರಡಿತೆ ಅಥವಾ ಇನ್ಯಾವ ಪ್ರಾಣಿಗಳ ಮಾರುಕಟ್ಟೆಯಿಂದ ಸೋಂಕು ಹಬ್ಬಿರಬಹುದ ಎನ್ನುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೂಲಂಕಷವಾಗಿ ಅಧ್ಯಯನ ನಡೆಸಲಿದೆ.

    ಕೊರೊನಾ ವೈರಸ್ ಚೀನಾ ನಿರ್ಮಿತ, ಉದ್ದೇಶ ಪೂರ್ವಕವಾಗಿ ವೈರಸ್ ಹರಡುವ ಕಾರ್ಯ ಮಾಡಿದೆ ಎಂದು ಅಮೆರಿಕಾ ಸೇರಿದಂತೆ ವಿಶ್ವದ ಹಲವು ದೇಶಗಳು ಆರೋಪಿಸಿದ್ದಾವೆ. ಅಲ್ಲದೇ ವಿಶ್ವ ಆರೋಗ್ಯ ಸಂಸ್ಥೆ ಸಭೆಯಲ್ಲಿ ಈ ಬಗ್ಗೆ ಚೀನಾ ವಿವರಣೆ ನೀಡಬೇಕು ಎಂದು ಒತ್ತಾಯಿಸಿತ್ತು.

    ಸಾಕಷ್ಟು ದೇಶಗಳು ಒತ್ತಾಯದ ಬಳಿಕ ಮಧ್ಯಂತರ ವರದಿ ನೀಡಿದ್ದ ಚೀನಾ ಪೂರ್ಣ ಪ್ರಮಾಣದ ವರದಿ ನೀಡುವ ಪ್ರಯತ್ನ ಮಾಡಿರಲಿಲ್ಲ. ಪ್ರಾಣಿಗಳ ಮಾರುಕಟ್ಟೆಯಿಂದ ವೈರಸ್ ಮಾನವನಿಗೆ ಹರಡಿದೆ ಎಂದು ತನ್ನ ವರದಿಯಲ್ಲಿ ಸಮರ್ಥಿಸಿಕೊಂಡಿತ್ತು.

    ಆರು ತಿಂಗಳ ವ್ಯಾಪ್ತಿ ಮೀರಿ ಸೋಂಕು ಹಬ್ಬುತ್ತಿದೆ. ಒಂದು ಕೋಟಿ ಹನ್ನೇಡು ಲಕ್ಷಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಐದು ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿಗೆ ಲಸಿಕೆ ಇಲ್ಲದ ಕಾರಣ ಇದು ಮತ್ತಷ್ಟು ವೇಗವಾಗಿ ಹರಡುವ ಸಾಧ್ಯತೆಗಳಿದೆ ಎನ್ನಲಾಗಿದೆ.

  • WHO ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಲಿದ್ದಾರೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್

    WHO ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಲಿದ್ದಾರೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್

    ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷ ವರ್ಧನ್ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಮೇ 22ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

    ಪ್ರಸ್ತುತ ಜಪಾನ್ ನ ಡಾ. ಹಿರೊಕಿ ನಕಟನಿ ಅವರು ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಸ್ಥಾನವನ್ನು ಡಾ. ಹರ್ಷವರ್ಧನ್ ವಹಿಸಿಕೊಳ್ಳಿದ್ದು, 34 ಮಂದಿ ಸದಸ್ಯರನ್ನು ಈ ಕಾರ್ಯಕಾರಿ ಮಂಡಳಿ ಹೊಂದಿದೆ. ಭಾರತದ ಪ್ರತಿನಿಧಿಯನ್ನು ಕಾರ್ಯಕಾರಿ ಮಂಡಳಿಯ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಪ್ರಸ್ತಾವನೆಗೆ 194 ದೇಶಗಳು ಮಂಗಳವಾರದ ಸಭೆಯಲ್ಲಿ ಸಹಿ ಮಾಡಿದೆ.

    ಇದು ಪೂರ್ಣ ಪ್ರಮಾಣದ ಹುದ್ದೆಯಲ್ಲ, ಅಧ್ಯಕ್ಷರಾದವರು ಕಾರ್ಯಕಾರಿ ಮಂಡಳಿಯ ಸಭೆಗಳಲ್ಲಿ ಭಾಗವಹಿಸಬೇಕಾಗುತ್ತದೆ. ಮೇ 22ರಿಂದ 3 ವರ್ಷಗಳವರೆಗೆ ಭಾರತದ ಪ್ರತಿನಿಧಿಯನ್ನು ನಾಮಾಂಕಿತ ಮಾಡುವುದಕ್ಕೆ ಕಳೆದ ವರ್ಷ ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ-ಪೂರ್ವ ಏಷ್ಯಾ ಗ್ರೂಪ್ ಅವಿರೋಧವಾಗಿ ತೀರ್ಮಾನಿಸಿತ್ತು.

    ಸ್ಥಳೀಯ ಗುಂಪಿನಲ್ಲಿ ರೊಟೇಶನ್ ಮಾದರಿಯಲ್ಲಿ ಒಂದು ವರ್ಷದವರೆಗೆ ಅಧ್ಯಕ್ಷರನ್ನು ನಾಮಾಂಕಿತ ಮಾಡಲಾಗುತ್ತದೆ. ಇನ್ನು ಉಳಿದ ಎರಡು ವರ್ಷ ಬೇರೆ ರಾಷ್ಟ್ರಗಳಿಗೆ ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.