Tag: World Heart Day

  • ಹೃದಯ ಪರೀಕ್ಷೆ ನಡೆಸಲು ನಿಮ್ಮ ಮನೆ ಬಾಗಿಲಿಗೇ ಬರಲಿದೆ ಮೊಬೈಲ್ ವಾಹನ

    ಹೃದಯ ಪರೀಕ್ಷೆ ನಡೆಸಲು ನಿಮ್ಮ ಮನೆ ಬಾಗಿಲಿಗೇ ಬರಲಿದೆ ಮೊಬೈಲ್ ವಾಹನ

    ಬೆಂಗಳೂರು: ಫೋರ್ಟಿಸ್ ಆಸ್ಪತ್ರೆಯು ವಿಶ್ವ ಹೃದಯ ದಿನದ ಅಂಗವಾಗಿ “ರೂಟ್‍ನಂ-15” ಎಂಬ ಶೀರ್ಷಿಕೆಯಡಿಯಲ್ಲಿ, ಹಾರ್ಟ್ ಚೆಕಪ್ ಮೊಬೈಲ್ ವ್ಯಾನ್‍ನನ್ನು ರಸ್ತೆಗಿಳಿಸಿದೆ. ಈ ವಾಹವನ್ನು ಬುಧವಾರ ಕಾರ್ಡಿಯಾಕ್ ಸೈಸನ್ ವಿಭಾಗದ ಮುಖ್ಯಸ್ಥರಾದ ಡಾ.ವಿವೇಕ್ ಜವಳಿ ಅವರು ಇಂದು ಉದ್ಘಾಟಿಸಿದರು.

    ನಂತರ ಮಾತನಾಡಿದ ಅವರು, ಪ್ರತಿ ವರ್ಷ ವಿಶ್ವದಲ್ಲಿ 2 ಕೋಟಿಗೂ ಅಧಿಕ ಮಂದಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಇದರಲ್ಲಿ ಭಾರತದಲ್ಲಿಯೇ ಶೇ.60 ರಷ್ಟು ಪ್ರಮಾಣ ಇರುವುದು ಆತಂಕಕಾರಿ ವಿಷಯ. ಬಹುತೇಕರಿಗೆ ಹೃದಯಾಘಾತದ ಬಗ್ಗೆ ಅರಿವಿನ ಕೊರತೆಯಿಂದ ಹೃದಯ ಪರೀಕ್ಷೆ ಮಾಡಿಸಿಕೊಳ್ಳುವ ಗೋಜಿಗೇ ಹೋಗುವುದಿಲ್ಲ. ಇದರಿಂದ ಹೃದಯಾಘಾತದ ಪ್ರಮಾಣ ಹೆಚ್ಚಳವಾಗುತ್ತಿದೆ. ಜೊತೆಗೆ ಬದಲಾದ ಜೀವನ ಶೈಲಿ ಹಾಗೂ ಆಹಾರ ಕ್ರಮದಿಂದಲೂ ಹೃದಯಾಘಾತದ ಪ್ರಮಾಣ ಹೆಚ್ಚಳವಾಗಿದೆ. ಅದರಲ್ಲೂ ಶೇ.25 ರಷ್ಟು ಹೃದಯಾಘಾತ ಮಹಿಳೆಯರಲ್ಲಿ ಹೆಚ್ಚಳವಾಗುತ್ತಿದೆ. ಹೀಗಾಗಿ ನಮ್ಮ ಆಸ್ಪತ್ರೆ ವತಿಯಿಂದ ಹೃದಯದ ಸಮಸ್ಯೆ ಇರುವರಿಗೆ ಅವರ ಮನೆ ಬಾಗಿಲಲ್ಲೇ ಪರೀಕ್ಷೆ ನಡೆಸಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಮೊಬೈಲ್ ವಾಹನವನ್ನು ರಸ್ತೆಗಿಳಿಸಿದ್ದೇವೆ ಎಂದರು. ಇದನ್ನೂ ಓದಿ: 70 ವರ್ಷದಿಂದ ದೇಶ ಅಭಿವೃದ್ಧಿಯಾಗಿಲ್ಲ ಎಂದು ಹೇಳಿಲ್ಲ, ಒಂದೇ ಕುಟುಂಬಕ್ಕೆ ಅಭಿವೃದ್ಧಿ ಸಮರ್ಪಣೆ ತಪ್ಪು: ಸಿಂಹ

    ಇಂದಿನಿಂದ ಈ ವಾಹನ ಸಂಚರಿಸಲಿದೆ. ವಾರದ ಎಲ್ಲಾ ದಿನ ಈ ವಾಹನ ನಗರದ ಅಪಾರ್ಟ್‍ಮೆಂಟ್, ಎಲ್ಲಾ ರೆಸಿಡೆನ್ಸಿಯಲ್ ಪ್ರದೇಶದಲ್ಲಿ ಓಡಾಡಲಿದೆ. ಪರೀಕ್ಷೆಗೆ ಆಸ್ಪತ್ರೆಗೆ ಬರಲು ಭಯವಾದರೆ ನಿಮ್ಮ ಮನೆ ಬಾಗಿಲಿಗೆ ಮೊಬೈಲ್ ವಾಹನ ಬರಲಿದೆ. ನೀವು ಅಲ್ಲೆ ಚೆಕಪ್ ಮಾಡಿಸಿಕೊಳ್ಳಿ ಎಂದರು. ಇದನ್ನೂ ಓದಿ: ರೌಡಿಗಳಿಗೆ ಕಾನೂನಿನ ಭಯವಿಲ್ಲದೆ ಅಟ್ಟಹಾಸ ತೋರಿಸುತ್ತಿದ್ದಾರೆ: ಯು.ಟಿ.ಖಾದರ್

    ವಾಹನದಲ್ಲಿ ಏನಿದೆ?
    ಈ ವಾಹನದಲ್ಲಿಯೇ ಎಕೋಕಾರ್ಡಿಯೋಗ್ರಫಿ ಹಾಗೂ ಇಸಿಜಿ ಯಂತ್ರವನ್ನು ಅಳವಡಿಸಲಾಗಿದೆ. ಹೀಗಾಗಿ ಹೃದಯದ ಸಂಪೂರ್ಣ ಪರೀಕ್ಷೆ ವಾಹನದಲ್ಲಿಯೇ ಮಾಡುವ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಈ ವಾಹನದಲ್ಲಿ 1500 ತಪಾಸಣೆ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

  • ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ: ಬೊಮ್ಮಾಯಿ

    ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ: ಬೊಮ್ಮಾಯಿ

    ಬೆಂಗಳೂರು: ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

    ವಿಶ್ವ ಹೃದಯ ದಿನಾಚರಣೆ ಅಂಗವಾಗಿ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಇಂದು ಆಯೋಜಿಸಿದ್ದ ಹೃದಯದಿಂದ ಬಾಂಧವ್ಯ ಬೆಳೆಸೋಣ ವಾಕಥಾನ್ ಗೆ ಬೊಮ್ಮಾಯಿ ಅವರು ಚಾಲನೆ ನೀಡಿ ಮಾತನಾಡಿದರು. ಇದನ್ನೂ ಓದಿ: 10 ತಿಂಗಳ ಶಿಕ್ಷೆ ತಪ್ಪಿಸಲು 9 ವರ್ಷದಿಂದ ತಲೆ ಮರೆಸಿಕೊಂಡ ಆರೋಪಿ ಅಂದರ್

    ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯ ಸ್ನೇಹಿ ಚಟುವಟಿಕೆಯಾದ ಬಿರುಸಿನ ನಡಿಗೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಬಿರುಸಿನ ನಡಿಗೆ ಸಹಾಯಕ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಹೃದಯ ಮನುಷ್ಯನ ಅಂಗಗಳ ಪೈಕಿ ಅತ್ಯಂತ ಪ್ರಮುಖ ಅಂಗ ಎಂದ ಅವರು ಹೃದಯಾಘಾತವಾದಾಗ ಪ್ರಾಥಮಿಕ ಚಿಕಿತ್ಸೆ ಕುರಿತಂತೆ ಮಾಹಿತಿ ಪ್ರತಿಯೊಬ್ಬರಿಗೂ ಅತ್ಯಗತ್ಯ ಎಂದು ತಿಳಿಸಿದರು.

    ಶೇ.60 ರಷ್ಟು ಸಂಭವಿಸುವ ಅಕಾಲಿಕ ಮರಣಗಳಲ್ಲಿ ಶೇ.25 ರಷ್ಟು ಸಾವುಗಳು ಹೃದಯರೋಗದಿಂದ ಸಂಭವಿಸುತ್ತಿದೆ. ಇದನ್ನು ತಡೆಗಟ್ಟಲು ಬಿರುಸಿನ ನಡಿಗೆ ಅತ್ಯುತ್ತಮ ವ್ಯಾಯಾಮವಾಗಿದೆ. ರಾಜ್ಯದ ಜನತೆ ಪ್ರತಿದಿನ ಶ್ರಮಜೀವನಕ್ಕೆ ಬದ್ಧರಾಗಿರಬೇಕು. ಕನಿಷ್ಠ ಅರ್ಧ ಗಂಟೆಯಾದರೂ ಬಿರುಸಿನ ನಡಿಗೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಕಾರಲ್ಲೇ ಕೂರಿಸಿ ಯುವಕ, ಯುವತಿಯ ವೀಡಿಯೋ ರೆಕಾರ್ಡ್ – 5 ಲಕ್ಷಕ್ಕೆ ಬೆದರಿಕೆ

    ಬಿರುಸಿನ ನಡಿಗೆಗೆ ಸ್ಫೂರ್ತಿ ತುಂಬಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದಿನಿಂದ ನಿಯಮಿತವಾಗಿ ವಾಕಿಂಗ್ ಮಾಡುವ ಪ್ರತಿಜ್ಞೆಯನ್ನು ಮುಖ್ಯಮಂತ್ರಿಗಳು ಕೈಗೊಂಡರು. ವ್ಯಕ್ತಿ ಹಾಗೂ ಸಮುದಾಯದ ಆರೋಗ್ಯ ಬಹಳ ಮುಖ್ಯ. ಹೃದಯ ಸದಾ ಬಡಿಯುವ ಅಂಗ, ಇದನ್ನು ಆರೋಗ್ಯಕರವಾಗಿಡುವ ಮೂಲಕ ಆರೋಗ್ಯವಂತ ರಾಜ್ಯವನ್ನು ಕಟ್ಟೋಣ ಎಂದು ತಿಳಿಸಿದರು.

    ಈ ವೇಳೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಂಸದ ಪಿ.ಸಿ ಮೋಹನ್, ಜಿಲ್ಲಾಧಿಕಾರಿ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

     

  • ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯದ ಆರೋಗ್ಯಕ್ಕಾಗಿ ನಡಿಗೆ

    ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯದ ಆರೋಗ್ಯಕ್ಕಾಗಿ ನಡಿಗೆ

    ಬೆಂಗಳೂರು: ವಿಶ್ವ ಹೃದಯ ದಿನಾಚರಣೆ ಅಂಗವಾಗಿ ನಗರದ ತಥಾಗತ್ ಹೃದ್ರೋಗ ಆಸ್ಪತ್ರೆ ವಾಕ್‍ಥಾನ್ ಮೂಲಕ ಅರಿವು ಮೂಡಿಸುವ ಅಭಿಯಾನ ನಡೆಸಿತು.

    ನಗರದ ಫ್ರೀಡಂ ಪಾರ್ಕ್ ನಿಂದ ಮಂತ್ರಿ ಮಾಲ್ ವರೆಗೂ ಕಾಲ್ನಡಿಗೆ ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಫ್ರೀಡಂ ಪಾರ್ಕ್ ನಲ್ಲಿ ಶಾಸಕಿ ಸೌಮ್ಯ ರೆಡ್ಡಿ, ತಥಾಗತ್ ಹಾರ್ಟ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಿ.ಆರ್. ಮಹಾಂತೇಶ್ ವಾಕ್‍ಥಾನ್‍ಗೆ ಚಾಲನೆ ನೀಡಿದರು.

    ಸೆಪ್ಟೆಂಬರ್ 29 ರಂದು ವಿಶ್ವದಾದ್ಯಂತ ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಅದರ ಭಾಗವಾಗಿ ವಾಕ್ ಥಾನ್ ಹಾಗೂ ಉಚಿತವಾಗಿ ಹೃದಯ ಪರೀಕ್ಷೆ ಹಾಗೂ ಮಧುಮೇಹ ಪರೀಕ್ಷೆ ಮಾಡಲಾಗುತ್ತಿದೆ. ಆರೋಗ್ಯಕ್ಕೆ ಪೂರಕವಾಗಿರುವ ಆಹಾರ ಸೇವಿಸುವುದು, ಚೆನ್ನಾಗಿ ನೀರು ಕುಡಿಯುವುದು, ದಿನನಿತ್ಯ ವ್ಯಾಯಾಮ, ಧೂಮಪಾನ ನಿಲ್ಲಿಸುವುದು, ಸೇರಿದಂತೆ ಕೆಲ ಸಣ್ಣ ಸಣ್ಣ ಬದಲಾವಣೆಗಳು ಪ್ರತಿ ನಿತ್ಯ ಮಾಡಿದರೆ ಸಾಕು ನಮ್ಮ ಆರೋಗ್ಯ ನಾವು ಕಾಪಾಡಬಹದು ಎಂಬ ಸಂದೇಶವನ್ನು ವಿದ್ಯಾರ್ಥಿಗಳು ಅರಿವು ಮೂಡಿಸುತ್ತಿದರು.

    ಈ ವೇಳೆ ಮಾತನಾಡಿದ ಶಾಸಕಿ ಸೌಮ್ಯಾರೆಡ್ಡಿ, ಯುವಪೀಳಿಗೆಯಲ್ಲೆ ಅತಿಹೆಚ್ಚು ಹೃದಯದ ಸಮಸ್ಯೆ ಹೆಚ್ಚಾಗುತ್ತಿದೆ. ಈ ಕುರಿತು ಜನರಿಗೆ ಅರಿವು ಮೂಡಿಸಬೇಕು. ಜೀವನ ಕ್ರಮವನ್ನು ಉತ್ತಮಪಡಿಸಬೇಕು. ದೇಹ ದೇಗುಲ ಇದ್ದ ಹಾಗೆ, ಹೃದಯವೇ ಕೆಲಸ ನಿಲ್ಲಿಸಿಬಿಟ್ಟರೆ ಮನುಷ್ಯನಿಲ್ಲ. ಹೀಗಾಗಿ ವಾಯುಮಾಲಿನ್ಯವೂ ಹೃದಯದ ಸಮಸ್ಯೆಗೆ ಕಾರಣವಾಗುತ್ತೆ, ಪರಿಸರ ರಕ್ಷಣೆಯೂ ಜೊತೆ ಜೊತೆಗೆ ನಡೆಯಬೇಕು ಎಂದರು.

    ತಥಾಗತ್ ಆಸ್ಪತ್ರೆ ಮುಖ್ಯಸ್ಥರಾದ ಡಾ. ಮಹಂತೇಷ್ ಹಿರೇಮಠ್ ಮಾತನಾಡಿ, ಪ್ರತಿ ವರ್ಷ ವಿಶ್ವ ಹೃದಯ ದಿನದಂದು ಈ ವಾಕ್ ಥಾನ್ ಆಯೋಜಿಸುತ್ತೇವೆ. ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ದೇಶದಲ್ಲಿ ನೂರಕ್ಕೆ ನಲ್ವತ್ತು ಶೇಕಡಾದಷ್ಟು ಜನರು ಹೃದಯ ಸಂಬಂಧಿ ಕಾಯಿಲೆಯಿಂದ ಮೃತಪಡುತ್ತಿದ್ದಾರೆ. ಹೀಗಾಗಿ ಜನರಿಗೆ ಹೃದಯದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜನಜಾಗೃತಿಗಾಗಿ ಈ ವಾಕ್‍ಥಾನ್ ಆಯೋಜಿಸಿದ್ದು, ಮಂತ್ರಿಮಾಲ್ ಮುಂಭಾಗ ಉಚಿತವಾಗಿ ಹೃದಯದ ಪರೀಕ್ಷೆ ನಡೆಸಲಾಗುವುದು ಎಂದರು.