Tag: World Tiger Day

  • ವಿಶ್ವ ಹುಲಿ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದ ಮಕ್ಕಳು

    ವಿಶ್ವ ಹುಲಿ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದ ಮಕ್ಕಳು

    ಬೆಂಗಳೂರು: ಇಂದು ವಿಶ್ವಾದ್ಯಂತ ಹುಲಿ ದಿನಾಚರಣೆಯನ್ನು ಆಚರಿಸಲಾಗಿತ್ತು. ಅದೇ ರೀತಿ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಹ ವಿಶ್ವ ಹುಲಿ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಅರಿವಿನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

    ಬನ್ನೇರುಘಟ್ಟದಲ್ಲಿ ಹುಲಿ ದಿನಾಚರಣೆ ವೈವಿಧ್ಯಮಯವಾಗಿ ಆಚರಣೆ ಮಾಡಲಾಯಿತು. ಲಯನ್ಸ್ ಕ್ಲಬ್ ಹಾಗೂ ಎಸ್‍ಒಎಸ್ ಚಿಲ್ಡ್ರನ್ಸ್ ವಿಲೇಜಸ್ ಇಂಡಿಯಾದ 55ಕ್ಕೂ ಹೆಚ್ಚು ಮಕ್ಕಳಿಗೆ ಹುಲಿ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಪಡಿಸಲಾಗಿತ್ತು. ಮಕ್ಕಳು ಹುಲಿ ಮುಖವಾಡ ಧರಿಸಿ ಉದ್ಯಾನದಲ್ಲಿ ಜಾಥಾ ಮಾಡುವ ಮೂಲಕ ಸಂಭ್ರಮಿಸಿದರು. ಹಾಗೆ ಪಾರ್ಕಿಗೆ ಬಂದಿದ್ದ ಸಾರ್ವಜನಿಕರು ಸಹ ಭಾಗವಹಿಸಿ ಹುಲಿಗಳು ಹಾಗೂ ಅವುಗಳ ವಾಸಸ್ಥಾನ ಎಂಬ ವಿಷಯವನ್ನು ಆಧರಿಸಿ ನಡೆಸಿದ ಕಾರ್ಯಕ್ರಮದಲ್ಲಿ ಅನೇಕ ಬಗೆಯ ಮಾಹಿತಿಯನ್ನು ಪಡೆದುಕೊಂಡರು.  ಇದನ್ನೂ ಓದಿ: ಬನ್ನೇರುಘಟ್ಟದಲ್ಲಿದೆ ಆರು ತಿಂಗಳ ‘ಹಿಮಾದಾಸ್’ ಹುಲಿಮರಿ

    ಹುಲಿಗಳ ಚಲನ, ವಲನಗಳ ಬಗ್ಗೆ ಸಾರ್ವಜನಿಕರಿಗೆ ಅರಣ್ಯ ಅಧಿಕಾರಿಗಳು ಶಿಬಿರದಲ್ಲಿ ಮಾಹಿತಿಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಓರ್ವ ವಿದ್ಯಾರ್ಥಿ ನಾವು ಹುಲಿ ಬಗ್ಗೆ ಸಾಕಷ್ಟು ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಜೊತೆಗೆ ಹುಲಿ ಚಲನವಲನ ಬಗ್ಗೆ ಮತ್ತು ಎಷ್ಟು ಆಹಾರ ಸೇವಿಸುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ನಮಗೆ ಮಾಹಿತಿ ಕೊಟ್ಟಿದ್ದಾರೆ. ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದಕ್ಕೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಅರ್ಚನಾ ಎಂಬವರು ಹಿಮ ಎಂಬ ಹುಲಿಯನ್ನು ಒಂದು ವರ್ಷಕ್ಕೆ ದತ್ತು ಪಡೆದಿದ್ದಾರೆ.

  • ಸಾಕು ಮಗನನ್ನ ಭೇಟಿ ಮಾಡಿದ್ರು ದರ್ಶನ್

    ಸಾಕು ಮಗನನ್ನ ಭೇಟಿ ಮಾಡಿದ್ರು ದರ್ಶನ್

    ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನಲ್ಲಿರುವ ತಮ್ಮ ಸಾಕು ಮಗನನ್ನ ಭೇಟಿ ಮಾಡಿದ್ದಾರೆ.

    ಸಾಕು ಮಗ ಅಂದರೆ ದರ್ಶನ್ ದತ್ತು ಪಡೆದಿರುವ ಹುಲಿ. ಸುಮಾರು ಆರೇಳು ವರ್ಷದಿಂದ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ದರ್ಶನ್ ಹುಲಿಯನ್ನ ದತ್ತು ಪಡೆದಿದ್ದಾರೆ. ಮಗ ವಿನೀಶ್ ಜೊತೆ ಮೃಗಾಲಯಕ್ಕೆ ತೆರಳಿರುವ ದರ್ಶನ್ ಹುಲಿಯನ್ನ ಪ್ರೀತಿಯಿಂದ ಮಾತನಾಡಿಸಿದ್ದಾರೆ.

    ತಮ್ಮ ಮಗನ ಬಳಿ ನಿನಗಿಂತ ನಾಲ್ಕು ವರ್ಷ ಚಿಕ್ಕವನು ಇವನು ಎಂದು ಹೇಳುತ್ತಾ ಹುಲಿಯನ್ನ ನೋಡ್ತಾ ಸ್ವಲ್ಪ ಸಮಯ ಮೃಗಾಲಯದಲ್ಲೇ ಕಾಲ ಕಳೆದಿದ್ದಾರೆ. ವಿಶ್ವ ಹುಲಿ ದಿನಾಚರಣೆ ಪ್ರಯುಕ್ತ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ದರ್ಶನ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

    ಕಾಡು ಉಳಿಸಿದರೆ ನಾಡು ಸುರಕ್ಷಿತವಾಗಿರಲಿದೆ. ಇತ್ತೀಚಿನ ವರ್ಷಗಳಲ್ಲಿ ಗುಬ್ಬಚ್ಚಿಗಳು ಕಾಣಿಸುತ್ತಿಲ್ಲ ಅತಿಯಾದ ಮೊಬೈಲ್ ವಿಕಿರಣದಿಂದ ಹೀಗಾಗಿದೆ ಎಂದು ವಿಶ್ಲೇಷಿಸಿದರು. ಮನೆಯಲ್ಲಿ ಪ್ರಾಣಿಗಳನ್ನು ಸಾಕಿದ ಮಾತ್ರ ಪ್ರಾಣಿ ಪ್ರಿಯರಾಗುವುದಿಲ್ಲ. ಪ್ಲಾಸ್ಟಿಕ್ ಮುಕ್ತ ಮಾಡಿ ಪರಿಸರ ಉಳಿಸಿ. ವನ್ಯ ಜೀವಿಗಳ ಸಂತತಿ ದಿನೇ ದಿನೇ ನಶಿಸುತ್ತಿದೆ. ಡೈನೋಸಾರ್ ಗಳು ಇದ್ದ ಬಗ್ಗೆ ನಾವೀಗ ಅಂತೆ ಕಂತೆಗಳನ್ನು ಕೇಳುತ್ತಿದ್ದೇವೆ. ಮುಂದಿನ ಕನಿಷ್ಠ 50 ವರ್ಷಗಳಲ್ಲಿ ಹುಲಿ, ಸಿಂಹ ಇತ್ತಂತೆ ಎಂದು ಹೇಳುವ ಪರಿಸ್ಥಿತಿ ಬರಲಿದೆ ಎಂದು ದರ್ಶನ್ ಕಳವಳ ವ್ಯಕ್ತಪಡಿಸಿದ್ದರು.

    https://www.youtube.com/watch?v=tgKPdAVizK8

  • ಮನೆಯಲ್ಲಿ ಪ್ರಾಣಿಗಳನ್ನು ಸಾಕಿದರೆ ಮಾತ್ರ ಪ್ರಾಣಿ ಪ್ರಿಯರಾಗಲ್ಲ: ದರ್ಶನ್

    ಮನೆಯಲ್ಲಿ ಪ್ರಾಣಿಗಳನ್ನು ಸಾಕಿದರೆ ಮಾತ್ರ ಪ್ರಾಣಿ ಪ್ರಿಯರಾಗಲ್ಲ: ದರ್ಶನ್

    ಮೈಸೂರು: ವಿಶ್ವ ಹುಲಿ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹುಲಿ ದಿನಾಚರಣೆ ಮತ್ತು ಯುವ ಸಂಘಟನೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಸಮಾರಂಭದಲ್ಲಿ ಅರಣ್ಯ ಇಲಾಖೆಯ ರಾಯಭಾರಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿಯಾಗಿದ್ದರು.

    ಸಮಾರಂಭದಲ್ಲಿ ಮಾತನಾಡಿದ ದರ್ಶನ್, ಕಾಡು ಉಳಿಸಿದರೆ ನಾಡು ಸುರಕ್ಷಿತವಾಗಿರಲಿದೆ. ಇತ್ತೀಚಿನ ವರ್ಷಗಳಲ್ಲಿ ಗುಬ್ಬಚ್ಚಿಗಳು ಕಾಣಿಸುತ್ತಿಲ್ಲ ಅತಿಯಾದ ಮೊಬೈಲ್ ವಿಕಿರಣದಿಂದ ಹೀಗಾಗಿದೆ ಎಂದು ವಿಶ್ಲೇಷಿಸಿದರು. ಮನೆಯಲ್ಲಿ ಪ್ರಾಣಿಗಳನ್ನು ಸಾಕಿದ ಮಾತ್ರ ಪ್ರಾಣಿ ಪ್ರಿಯರಾಗುವುದಿಲ್ಲ. ಪ್ಲಾಸ್ಟಿಕ್ ಮುಕ್ತ ಮಾಡಿ ಪರಿಸರ ಉಳಿಸುವ ಮೂಲಕ ಪ್ರಾಣಿ ಪ್ರಿಯರಾಗುವಂತೆ ಕರೆ ನೀಡಿದರು.

    ವನ್ಯ ಜೀವಿಗಳ ಸಂತತಿ ದಿನೇ ದಿನೇ ನಶಿಸುತ್ತಿದೆ. ಡೈನೋಸಾರ್ ಗಳು ಇದ್ದ ಬಗ್ಗೆ ನಾವೀಗ ಅಂತೆ ಕಂತೆಗಳನ್ನು ಕೇಳುತ್ತಿದ್ದೇವೆ. ಮುಂದಿನ ಕನಿಷ್ಠ 50 ವರ್ಷಗಳಲ್ಲಿ ಹುಲಿ, ಸಿಂಹ ಇತ್ತಂತೆ ಎಂದು ಹೇಳುವ ಪರಿಸ್ಥಿತಿ ಬರಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ಕಾರ್ಯಕ್ರಮದ ನಂತರ ನಟ ದರ್ಶನ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದು ಪೈಪೋಟಿ ನಡೆಸಿದರು. ಅಭಿಮಾನಿಗಳಿಗೆ ನಿರಾಸೆ ಮಾಡದೇ ನಗು ಮೊಗದೊಂದಲೇ ಸೆಲ್ಫಿಗೆ ನಟ ದರ್ಶನ್ ಪೋಸ್ ಕೊಟ್ಟರು.