Tag: Writer

  • ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

    ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

    ನ್ನಡ ಖ್ಯಾತ ಕವಿ, ಸಾಹಿತಿ, ನಾಟಕ ರಚನೆಕಾರರು ಹಾಗೂ ಹೆಚ್‌ಎಸ್‌ವಿ ಎಂದೇ ಚಿರಪರಿಚಿತರಾಗಿರುವ ಹೆಚ್.ಎಸ್ ವೆಂಕಟೇಶಮೂರ್ತಿ (HS Venkatesh Murty) ಇಂದು ವಿಧಿವಶರಾಗಿದ್ದಾರೆ.

    ಮೂಲತಃ ದಾವಣಗೆರೆ (Davanagere) ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಗ್ರಾಮದ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದರು.

    ನಂತರ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. ಕನ್ನಡದಲ್ಲಿ `ಕಥನ ಕವನಗಳು’ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ (PH.D) ಪದವಿ ಪಡೆದಿದ್ದಾರೆ. 2000ರಲ್ಲಿ ನಿವೃತ್ತರಾದ ಅವರು ಈಗ ಬೆಂಗಳೂರಿನಲ್ಲಿ (Bengaluru) ನೆಲೆಸಿದ್ದರು.

    ಕನ್ನಡದಲ್ಲಿ 100ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಅವರು, ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಜೊತೆಗೆ ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನು ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ಋತುಸಂಹಾರ ಕಾವ್ಯಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪುರಸ್ಕಾರವನ್ನು ನೀಡಿ ಗೌರವಿಸಿದೆ.

    ಕೃತಿಗಳು:
    ಇವರ ಪ್ರಮುಖ ನಾಟಕಗಳು : ಕ್ರಿಯಾಪರ್ವ, ಎಷ್ಟೊಂದು ಮುಗಿಲು, ನದೀತೀರದಲ್ಲಿ, ಉತ್ತರಾಯಣ, ಅಗ್ನಿವರ್ಣ, ಚಿತ್ರಪಟ, ಉರಿಯ ಉಯ್ಯಾಲೆ, ಮಂಥರೆ, ಕಂಸಾಯಣ ಮೊದಲಾದವು.
    ಇವರ ಮುಖ್ಯ ಕಾವ್ಯಕೃತಿಗಳು; ಅಗ್ನಿವರ್ಣ, ಚಿತ್ರಪಟ, ಉರಿಯ ಉಯ್ಯಾಲೆ, ಮಂಥರೆ ಮೊದಲಾದವು.
    ಕವನ ಸಂಕಲನಗಳು: ಸಿಂದಬಾದನ ಆತ್ಮಕಥೆ, ಕ್ರಿಯಾಪರ್ವ, ಒಣಮರದ ಗಿಳಿಗಳು, ಎಷ್ಟೊಂದು ಮುಗಿಲು
    ನದೀತೀರದಲ್ಲಿ, ಉತ್ತರಾಯಣ.
    ಮಕ್ಕಳ ಕೃತಿಗಳು: ಹಕ್ಕಿಸಾಲು, ಅಳಿಲು ರಾಮಾಯಣ, ಅಜ್ಜೀ ಕಥೆ ಹೇಳು, ಚಿನ್ನಾರು ಮುತ್ತ

    85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಇವರು ಅನುವಾದಿಸಿದ ಕಾಳಿದಾಸನ ಋತುಸಂಹಾರ ಕಾವ್ಯಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪುರಸ್ಕಾರವನ್ನು ನೀಡಿ ಗೌರವಿಸಿದೆ. ಜೊತೆಗೆ ರಾಜ್ಯೋತ್ಸವ ಪ್ರಶಸ್ತಿ, ಆಕಾಶವಾಣಿ ರಾಷ್ಟ್ರೀಯ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿವೆ.

    ಇಂದು ಹೆಚ್.ಎಸ್ ವೆಂಕಟೇಶಮೂರ್ತಿ ಅವರು ನಮ್ಮನ್ನಗಲಿರುವುದು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

  • ಗೋಲ್ವಾಳ್ಕರ್, ಸಾವರ್ಕರ್ ಇತ್ಯಾದಿ ಹುಸಿ ದೇಶ ಭಕ್ತರ ಪಾಠ ತೆಗೆಯಬೇಕು: ಸಾಹಿತಿ ಕುಂ.ವೀರಭದ್ರಪ್ಪ

    ಗೋಲ್ವಾಳ್ಕರ್, ಸಾವರ್ಕರ್ ಇತ್ಯಾದಿ ಹುಸಿ ದೇಶ ಭಕ್ತರ ಪಾಠ ತೆಗೆಯಬೇಕು: ಸಾಹಿತಿ ಕುಂ.ವೀರಭದ್ರಪ್ಪ

    ಚಾಮರಾಜನಗರ: ಗೋಲ್ವಾಳ್ಕರ್ (Golwalkar), ಸಾವರ್ಕರ್ (Savarkar) ಇತ್ಯಾದಿ ಹುಸಿ ದೇಶ ಭಕ್ತರ ಪಾಠ ತೆಗೆಯಬೇಕು. ಈ ಪಾಠಗಳನ್ನು ಮಕ್ಕಳಿಗೆ ಬೋಧಿಸಬಾರದು. ಸರ್ಕಾರ ಈ ಬಗ್ಗೆ ಸುತ್ತೋಲೆ ಹೊರಡಿಸಬೇಕು ಎಂದು ಸಾಹಿತಿ ಕುಂ.ವೀರಭದ್ರಪ್ಪ (Kum Veerabhadrappa) ಆಗ್ರಹಿಸಿದರು.

    ಚಾಮರಾಜನಗರದಲ್ಲಿ (Chamarajanagara) ಮಾತನಾಡಿದ ಅವರು, ಹಿಂದಿನ ಸರ್ಕಾರ ಮನುಷ್ಯ ವಿರೋಧಿ, ದೇಶ ವಿರೋಧಿ, ಸಮಾಜ ವಿರೋಧಿ ಪಠ್ಯ ಅಳವಡಿಸಿದ್ದು ತಪ್ಪು. ಇದು ನಮ್ಮ ಸಂವಿಧಾನಕ್ಕೆ ಮಾಡಿದ ಅಪಮಾನ. ಹೊಸ ಸರ್ಕಾರ ಇದನ್ನು ಬದಲಿಸಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

    ಬರಗೂರು ರಾಮಚಂದ್ರಪ್ಪ ನೇತೃತ್ವ ಸಮಿತಿಯ ಪಠ್ಯಕ್ರಮ ಮುಂದುವರಿಸಲಿ. ಭಾರತ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಬಸವಣ್ಣನ ತತ್ವ ಪಾಲಿಸಬೇಕು. ಇದು ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದರು.

    ನನಗೆ ಈಗ್ಲೂ ಬೆದರಿಕೆ ಪತ್ರ ಬರುತ್ತಿವೆ. ಇದೀಗ 16 ನೇ ಬೆದರಿಕೆ ಪತ್ರ ಬಂದಿದೆ. ಸನಾತನ ಮೌಲ್ಯ, ಹಿಂದುತ್ವ ವಿರೋಧಿಸಿದಾಗ ಈ ರೀತಿಯ ಪ್ರೇಮ ಪತ್ರಗಳು ಬರುತ್ತವೆ. ನಾನು ಇವುಗಳನ್ನು ಬೆದರಿಕೆ ಪತ್ರ ಅಂದುಕೊಂಡಿಲ್ಲ, ಪ್ರೇಮ ಪತ್ರ ಅಂದ್ಕೊಡಿದ್ದೀನಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಬಹುಕೋಟಿ ವೆಚ್ಚದ BRTS ಬಸ್‌ಗಳಲ್ಲಿ ಇಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ

    ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಜಾರಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೋದಿ ಸರ್ಕಾರ ಕಾರ್ಪೋರೇಟ್ ಕುಳಗಳಿಗೆ 10 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದೆ. ಬಡವರಿಗೆ 10 ಕೆಜಿ ಅಕ್ಕಿ ಕೊಟ್ರೆ ಪ್ರಳಯವಾಗುತ್ತಾ? ರಾಜ್ಯದಲ್ಲಿ ಬಡವರಿಗೆ 50 ಸಾವಿರ ಕೋಟಿ ಅಷ್ಟೇ ಖರ್ಚಾಗುತ್ತೆ. ಇದು ದೊಡ್ಡದಲ್ಲ. ಬಡವರು, ಮಹಿಳೆಯರಿಗೆ ಕೊಡ್ತಿದ್ದಾರೆ. ಎಲ್ಲಾ ಲೇಖಕರು ಕೂಡಾ ಇದನ್ನು ಬೆಂಬಲಿಸಬೇಕು ಎಂದರು.

  • ನಿನ್ನ ಅಂತ್ಯ ನಿಶ್ಚಿತ – ಸಾಹಿತಿ ಬಂಜಗೆರೆ ಜಯಪ್ರಕಾಶ್‍ಗೆ ಜೀವ ಬೆದರಿಕೆ

    ನಿನ್ನ ಅಂತ್ಯ ನಿಶ್ಚಿತ – ಸಾಹಿತಿ ಬಂಜಗೆರೆ ಜಯಪ್ರಕಾಶ್‍ಗೆ ಜೀವ ಬೆದರಿಕೆ

    ರಾಮನಗರ: ಪಠ್ಯ ಪರಿಷ್ಕರಣೆ ಕುರಿತು ಮಾತನಾಡಿದ್ದ ಸಾಹಿತಿ ಹಾಗೂ ಚಿಂತಕ ಬಂಜಗೆರೆ ಜಯಪ್ರಕಾಶ್‍ (Banjagere Jayaprakash) ಗೆ ಜೀವ ಬೆದರಿಕೆ ಪತ್ರ ಬಂದಿದೆ.

    ಪೋಸ್ಟ್ ಮೂಲಕ ಅನಾಮಧೇಯ ಪತ್ರವೊಂದರಲ್ಲಿ “ಬಂಜೆಗೆರೆ ಜಯಪ್ರಕಾಶ್ ಅಂತ್ಯ ನಿಶ್ಚಿತ” ಎಂದು ಬೆದರಿಕೆ (Life Threat) ಹಾಕಲಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧ ಧ್ವನಿ ಎತ್ತಿದ್ದ ಬಂಜಗೆರೆ ಜಯಪ್ರಕಾಶ್‍ಗೆ ಕಳೆದ ಜುಲೈನಿಂದ ನಿರಂತರ ಬೆದರಿಕೆ ಪತ್ರಗಳು ಬಂದಿವೆ. ಇದನ್ನೂ ಓದಿ: ಆಡಳಿತ ಮಂಡಳಿಯವರು ಮಾಡಿದ ಸಾಲಕ್ಕೆ ಶಾಲೆಯನ್ನೇ ಸೀಜ್ ಮಾಡಿದ ಬ್ಯಾಂಕ್ ಸಿಬ್ಬಂದಿ!

    ಜೀವ ಬೆದರಿಕೆ ಹಾಕಿ ಅನಾಮಧೇಯ ವ್ಯಕ್ತಿಯೋರ್ವ ಪತ್ರ ಬರೆದಿದ್ದಾನೆ. “ಕರ್ನಾಟಕ ರಾಜ್ಯದಲ್ಲಿ ಕಂಪನ ಆಡಳಿತ ಪ್ರಾರಂಭ. ಹಿಂದೂ ಸಜ್ಜನರಿಗೆ ಇದು ಸಂಕಷ್ಟದ ಸರ್ಕಾರ. ನಿಮ್ಮಂತಹವರಿಗೆ, ದುರ್ಜನ ದೇಶ ದ್ರೋಹಿಗಳಿಗೆ, ಮತಾಂದ, ಮುಸ್ಲಿಂ, ಮತಾಂತರಿ ಕ್ರೈಸ್ತರಿಗೆ ಪ್ರಿಯ ಸರ್ಕಾರ. ನಿಮ್ಮ ಜೀವ ಎಂಬ ಅಜ್ಞಾನದ ದೀಪ ಆರುವುದು ನಿಶ್ಚಿತ. ಬಂಜಗೆರೆ ಜಯಪ್ರಕಾಶ್ ನಿನ್ನ ಅಂತ್ಯ ನಿಶ್ಚಿತ” ಎಂಬ ಸಾಲುಗಳೊಂದಿಗೆ ಸಹಿಷ್ಟು ಹಿಂದೂ ಎಂದು ಬರೆಯಲಾಗಿದೆ.

    ಬೆದರಿಕೆ ಪತ್ರ ಸಂಬಂಧ ಸಾಹಿತಿ ಬಂಜಗೆರೆ ಜಯಪ್ರಕಾಶ್ ಹಾರೋಹಳ್ಳಿ ಪೊಲೀಸ್ ಠಾಣೆ(Harohalli Police Station) ಗೆ ದೂರು ನೀಡಿದ್ದಾರೆ. ಪ್ರಕರಣದ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

     

  • ಟ್ರಂಪ್ ನನ್ನ ರೇಪ್ ಮಾಡಿದ್ದರು: ಅಮೆರಿಕನ್ ಬರಹಗಾರ್ತಿ ಆರೋಪ

    ಟ್ರಂಪ್ ನನ್ನ ರೇಪ್ ಮಾಡಿದ್ದರು: ಅಮೆರಿಕನ್ ಬರಹಗಾರ್ತಿ ಆರೋಪ

    ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸುಮಾರು 30 ವರ್ಷಗಳ ಹಿಂದೆ ನನ್ನ ಮೇಲೆ ಅತ್ಯಾಚಾರವೆಸಗಿದ್ದರು (Rape) ಎಂದು ಅಮೆರಿಕದ (America) ಬರಹಗಾರ್ತಿ ಇ ಜೀನ್ ಕ್ಯಾರೋಲ್ (E Jean Carroll) ಆರೋಪಿಸಿದ್ದಾರೆ. ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

    ಪ್ರತಿಷ್ಠಿತ ಎಲ್ಲೆ ಮ್ಯಾಗಜಿನ್‌ನಲ್ಲಿ ಅಂಕಣಗಾರ್ತಿಯಾಗಿರುವ ಇ ಜೀನ್ ಕ್ಯಾರೋಲ್ (79), ಡೊನಾಲ್ಡ್ ಟ್ರಂಪ್ ನನ್ನ ಮೇಲೆ ಅತ್ಯಾಚಾರವೆಸಗಿದ್ದು, ಈ ಹಿನ್ನೆಲೆ ನಾನು ನ್ಯಾಯಾಲಯದ ಮೊರೆಹೋಗಿದ್ದೇನೆ. ಈ ಬಗ್ಗೆ ನಾನು ಬರೆದಿದ್ದಾಗ ಟ್ರಂಪ್ ನನ್ನ ಆರೋಪಗಳನ್ನು ಸುಳ್ಳು, ಇಂತಹುದು ಯಾವುದೂ ನಡೆದೇ ಇಲ್ಲ ಎಂದು ಹೇಳಿದ್ದರು. ಅವರು ನನ್ನ ಖ್ಯಾತಿಯನ್ನು ಛಿದ್ರಗೊಳಿಸಿದ್ದಾರೆ. ನನ್ನ ಮಾನವನ್ನು ಮರಳಿ ಪಡೆಯುವ ಸಲುವಾಗಿ ನಾನಿಲ್ಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

    ನನ್ನ ಮೇಲೆ 1995-1996ರ ವೇಳೆಯಲ್ಲಿ ಅತ್ಯಾಚಾರ ನಡೆದಿದೆ. ಬರ್ಗ್ಡಾರ್ಪ್ ಗುಡ್‌ಮ್ಯಾನ್ ಡಿಪಾರ್ಟ್ಮೆಂಟ್ ಸ್ಟೋರ್‌ನ ಡ್ರೆಸ್ಸಿಂಗ್ ರೂಮ್‌ನಲ್ಲಿ ಟ್ರಂಪ್ ನನ್ನ ಮೇಲೆ ಅತ್ಯಾಚಾರವೆಸಗಿದ್ದರು. ಆ ಸಂದರ್ಭ ನಾನು ಅಲ್ಲಿಂದ ಓಡಿಹೋಗಲು ಪ್ರಯತ್ನಿಸಿದ್ದೆ. ಆ ಘಟನೆಯ ಬಳಿಕ ನನ್ನ ಜೀವನದ ಮೇಲೆ ನನಗೆ ಜಿಗುಪ್ಸೆ ಉಂಟಾಯಿತು ಎಂದು ಕ್ಯಾರೊಲ್ ಆರೋಪಿಸಿದ್ದಾರೆ. ಇದನ್ನೂ ಓದಿ: ಬಲವಂತದಿಂದ ಮಕ್ಕಳಿಗೆ ಹಚ್ಚೆ, ಚರ್ಮ ಕಿತ್ತು ಅಳಿಸುವ ಪ್ರಯತ್ನ – ಯುಎಸ್ ದಂಪತಿಗಳು ಅರೆಸ್ಟ್

    ನನ್ನ ಆರೋಪಗಳನ್ನು ಟ್ರಂಪ್ ವಂಚನೆ, ಸುಳ್ಳು ಹಾಗೂ ಕುತಂತ್ರವೆಂದು ಸಾಮಾಜಿಕ ಜಾಲತಾಣವಾದ ಟ್ರೂತ್‌ನಲ್ಲಿ ಬರೆದುಕೊಂಡಿದ್ದಾರೆ. ಆದರೆ ನಾನು ಅಂತಹ ಕೆಳಮಟ್ಟದ ವ್ಯಕ್ತಿಯಲ್ಲ. ಸುಳ್ಳು ಹೇಳಿಕೆಗಳನ್ನು ನೀಡಿ ನನ್ನನ್ನು ನಾನು ಮಾರಿಕೊಳ್ಳುವುದಿಲ್ಲ ಎಂದು ಕ್ಯಾರೋಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಳೆದ ಕೆಲ ದಿನಗಳ ಹಿಂದಷ್ಟೇ ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಅನೈತಿಕ ಸಂಬಂಧದ ಬಗ್ಗೆ ಎಲ್ಲಿಯೂ ಬಾಯಿ ಬಿಡದಂತೆ ನೀಲಿ ಚಿತ್ರ ತಾರೆಯೊಬ್ಬರಿಗೆ ಹಣ ನೀಡಿದ ಆರೋಪವನ್ನು ಹೊತ್ತಿದ್ದರು. ಈ ಬಗ್ಗೆಯೂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ನಮ್ಮ ಬ್ಲಡ್‌ ಗ್ರೂಪ್‌ RCB ಪಾಸಿಟಿವ್‌ – ಫ್ಯಾನ್ಸ್‌ ಪೋಸ್ಟರ್‌ ವೈರಲ್‌

  • ಕನ್ನಡದ ಹಿರಿಯ ಸಾಹಿತಿ ಮಲೆಯೂರು ಗುರುಸ್ವಾಮಿ ವಿಧಿವಶ

    ಕನ್ನಡದ ಹಿರಿಯ ಸಾಹಿತಿ ಮಲೆಯೂರು ಗುರುಸ್ವಾಮಿ ವಿಧಿವಶ

    ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಚಿಂತಕ ಪ್ರೋ. ಮಲೆಯೂರು ಗುರುಸ್ವಾಮಿ (Maleyur Guruswamy) ಅವರು ಬುಧವಾರ ತಡರಾತ್ರಿ ವಿಧಿವಶರಾದರು.

    ಹಿರಿಯ ಸಾಹಿತಿ ಗುರುಸ್ವಾಮಿ (75) ಅವರು ಕಳೆದ ಹಲವು ದಿನಗಳಿಂದ ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿನ (Mysuru) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದೊಂದು ವಾರದಿಂದ ತೀವ್ರ ನಿಗಾ ಘಟಕದಲ್ಲಿದ್ದರು. ಆದರೆ ಬುಧವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇದನ್ನೂ ಓದಿ: ಕೆಎಂಎಫ್ ಹಾಲು ವಿತರಣೆಯಲ್ಲಿ ತೊಂದರೆ- ನಂದಿನಿ ಬೂತ್‍ಗಳಿಗೆ ಅರ್ಧಕರ್ಧ ಸಪ್ಲೈ

    ಗುರುಸ್ವಾಮಿಯವರು 5ಕ್ಕೂ ಹೆಚ್ಚು ಕಾದಂಬರಿ ರಚನೆ ಮತ್ತು 10ಕ್ಕೂ ಹೆಚ್ಚು ಕೃತಿಗಳನ್ನ ಬರೆದಿದ್ದು, ಇವರು ರಾಜೋತ್ಸವ ಪ್ರಶಸ್ತಿ, ಮಹಾಕವಿ ಷಡಕ್ಷರ ದೇವ ಸ್ಮಾರಕ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜಿನರಾಗಿದ್ದರು. ಇವರ ಅಂತಿಮ ಸಂಸ್ಕಾರವನ್ನು ಸ್ವಗೃಹ ಚಾಮರಾಜನಗರ ಜಿಲ್ಲೆಯ ಮಲೆಯೂರಿನಲ್ಲಿ ಇಂದೇ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಕಾರಿನಲ್ಲಿ ಫಾಲೋ ಮಾಡ್ತಾರೆ, ಟ್ರಕ್ ಹತ್ತಿಸಲು ಬರ್ತಾರೆ- ಶಾಸಕಿ ರೂಪಾಲಿ ನಾಯ್ಕ್‌ಗೆ ಜೀವ ಬೆದರಿಕೆ

  • ಸಂಭಾಷಣೆಗಾರ ಪ್ರಶಾಂತ್ ರಾಜಪ್ಪ ಇದೀಗ ರಿಷಿ ಸಿನಿಮಾದ ನಿರ್ದೇಶಕ

    ಸಂಭಾಷಣೆಗಾರ ಪ್ರಶಾಂತ್ ರಾಜಪ್ಪ ಇದೀಗ ರಿಷಿ ಸಿನಿಮಾದ ನಿರ್ದೇಶಕ

    ಚಂದನವನದಲ್ಲಿ ಡೈಲಾಗ್ ರೈಟರ್ ಆಗಿ ಗುರುತಿಸಿಕೊಂಡಿರುವ ಪ್ರಶಾಂತ್ ರಾಜಪ್ಪ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ. ‘ವಿಕ್ಟರಿ’, ‘ಅಧ್ಯಕ್ಷ’, ‘ರನ್ನ’, ‘ಪೊಗರು’, ‘ಹೊಂದಿಸಿ ಬರೆಯಿರಿ’ ಸೇರಿದಂತೆ 25ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ ಪ್ರಶಾಂತ್ ರಾಜಪ್ಪ. ಸಹ ನಿರ್ದೇಶಕನಾಗಿಯೂ ಕೆಲಸ ಮಾಡಿದ ಅನುಭವ ಇವರಿಗಿದೆ. ಇದೀಗ ಅವೆಲ್ಲ ಅನುಭವವನ್ನು ಇಟ್ಟುಕೊಂಡು ನಿರ್ದೇಶಕನಾಗಿ ಚಂದನವನದಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಹೊರಟಿದ್ದಾರೆ.

    ನಿರ್ದೇಶಕನಾಗಬೇಕು ಎಂಬುದು ಪ್ರಶಾಂತ್ ರಾಜಪ್ಪ ಅವರ ಬಹಳ ವರ್ಷದ ಕನಸು. ಆ ಕನಸೀಗ ನನಸಾಗುವ ಹಂತಕ್ಕೆ ಬಂದಿದೆ. ಸಿನಿಮಾ ಬರಹಗಾರನಾಗಿ, ನಿರ್ದೇಶಕರಾದ ಗುರು ಪ್ರಸಾದ್, ಪಿ.ಸಿ. ಶೇಖರ್, ಹೆಚ್. ಪಿ. ದಾಸ್ ಜೊತೆ ಸಹ ನಿರ್ದೇಶಕನಾಗಿ ಚಿತ್ರರಂಗದಲ್ಲಿ ದುಡಿದ ಅನುಭವವನ್ನು ತಮ್ಮ ಮೊದಲ ಚಿತ್ರಕ್ಕೆ ಧಾರೆ ಎರೆಯುತ್ತಿದ್ದಾರೆ. ಕಥೆ, ಚಿತ್ರಕಥೆ, ಡೈಲಾಗ್ ಬರೆದು ನಿರ್ದೇಶನ ಮಾಡುವುದರ ಮೂಲಕ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ. ಇದನ್ನೂ ಓದಿ:`ಕಾಂತಾರ’ ಮುಂದೆ ಬೆದರಿದ ಬಾಲಿವುಡ್: ಥಿಯೇಟರ್‌ಗೆ `ಗುಡ್ ಬೈ’ ಹೇಳಿದ ರಶ್ಮಿಕಾ ಚಿತ್ರ

    ‘ಆಪರೇಷನ್ ಅಲಮೇಲಮ್ಮ’, ‘ಕವಲು ದಾರಿ’ ಸಿನಿಮಾ ಖ್ಯಾತಿಯ ನಟ ರಿಷಿ ಪ್ರಶಾಂತ್ ರಾಜಪ್ಪ ಮೊದಲ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕಾಮಿಡಿ ಎಮೋಷನಲ್ ಡ್ರಾಮಾ ಸಿನಿಮಾ ಇದಾಗಿದ್ದು, ಸಿನಿಮಾದ ಪ್ರಿಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಡಿಸೆಂಬರ್ ನಲ್ಲಿ ಸಿನಿಮಾ ಸೆಟ್ಟೇರಲಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಸದ್ಯದಲ್ಲೇ ಸಿನಿಮಾ ಟೈಟಲ್, ತಾರಾಬಳಗ ಎಲ್ಲವನ್ನೂ ರಿವೀಲ್ ಮಾಡೋದಾಗಿ ಪ್ರಶಾಂತ್ ರಾಜಪ್ಪ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಾಲಿವುಡ್ ಖ್ಯಾತ ಬರಹಗಾರ-ನಿರ್ದೇಶಕ ರಾಬರ್ಟ್ ವಿನ್ಸೆಂಟ್ ಓ’ನೀಲ್ ವಿಧಿವಶ

    ಹಾಲಿವುಡ್ ಖ್ಯಾತ ಬರಹಗಾರ-ನಿರ್ದೇಶಕ ರಾಬರ್ಟ್ ವಿನ್ಸೆಂಟ್ ಓ’ನೀಲ್ ವಿಧಿವಶ

    ನ್ಯೂಯಾರ್ಕ್: ಹಾಲಿವುಡ್ ಚಿತ್ರರಂಗದ ಖ್ಯಾತ ಬರಹಗಾರ ಮತ್ತು ಎಂಜಲ್ ಚಿತ್ರದ ನಿರ್ದೇಶಕ ವಿನ್ಸೆಂಟ್ ಓ’ನೀಲ್ (91) ನಿಧನರಾಗಿದ್ದಾರೆ. ರಾಬರ್ಟ್ ನಿದ್ರಾವಸ್ಥೆಯಲ್ಲಿ ಇದ್ದಾಗಲೇ ಪ್ರಾಣ ಬಿಟ್ಟಿದ್ದಾರೆ ಎಂದು ಸ್ಥಳಿಯ ಮಾಧ್ಯಮಗಳು ವರದಿ ಮಾಡಿವೆ.

    ಓ’ನೀಲ್ ಅವರಿಗೆ ಲಾರಿ ಮತ್ತು ನಿಕೋಲ್ ಲಾಯ್ಡ್ ಇಬ್ಬರು ಅವಳಿ ಹೆಣ್ಣುಮಕ್ಕಳಿದ್ದು, ಲಾರಿ ಅವರ ಪತಿ ಆಂಡ್ರ್ಯೂ ಮತ್ತು ಮೊಮ್ಮಗಳು ಲಿಸಾ ಬಿಲ್, ಸಹೋದರ ರಾನ್ ಇವಿ, ಹಾಗೂ ಜೆಸ್ಸಿಕಾ, ಕ್ವಿನ್, ಸಾರಾ, ರಸ್ಸೆಲ್, ಜೆಸ್ ಏಳು ಮೊಮ್ಮಕ್ಕಳು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಇದನ್ನೂ ಓದಿ: ಆರ್.ಆರ್.ಆರ್ ಸಿನಿಮಾದಲ್ಲಿ ಹೀರೋ ಯಾರು? ವಿಲನ್ ಯಾರು? : ರಾಜಮೌಳಿ ಕೊಟ್ಟರು ಉತ್ತರ

    ಹಾಲಿವುಡ್-ಸೆಟ್ ವೈಸ್ ಸ್ಕ್ವಾಡ್ (1982), ದಿ ಬಾಲ್ಟಿಮೋರ್ ಬುಲೆಟ್ (1980), ಲೈಕ್ ಮದರ್ ಲೈಕ್ ಡಾಟರ್ (1969), ದಿ ಸೈಕೋ ಲವರ್ (1970), ಬ್ಲಡ್ ಮೇನಿಯಾ (1970), ವಂಡರ್ ವುಮೆನ್ (1973) ಮತ್ತು ಪ್ಯಾಕೊ (1975) ಹೀಗೆ ಹಾಲಿವುಡ್‍ನಲ್ಲಿ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದ ಕೀರ್ತಿ ಇವರದ್ದು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ಮಾದರಿಯಲ್ಲಿ ಯಾವೆಲ್ಲ ಚಿತ್ರಗಳು ಬರಬೇಕು : ಪ್ರಕಾಶ್ ರೈ ಲಿಸ್ಟ್ ನೋಡಿ

  • ಬಳ್ಳಾರಿ ಟು ಬೆಂಗಳೂರು – ರವಿ ಬೆಳಗೆರೆ ಜೀವನ ಪಯಣ ಹೇಗಿತ್ತು..?

    ಬಳ್ಳಾರಿ ಟು ಬೆಂಗಳೂರು – ರವಿ ಬೆಳಗೆರೆ ಜೀವನ ಪಯಣ ಹೇಗಿತ್ತು..?

    ಬೆಂಗಳೂರು: ಕನ್ನಡದ ಪ್ರಸಿದ್ಧ ಪತ್ರಕರ್ತ, ಪತ್ರಿಕೋದ್ಯಮಿ ರವಿ ಬೆಳಗೆರೆಯವರ ಬದುಕೇ ವರ್ಣರಂಜಿತವಾಗಿದೆ. ರವಿ ಬೆಳಗೆರೆ ಪತ್ರಕರ್ತ, ನಿರೂಪಕ, ನಟ, ಲೇಖಕ, ಕಾದಂಬರಿಕಾರ, ಚಿತ್ರಕಥೆ ಬರಹಗಾರ, ‘ಕ್ರೈಂ ಡೈರಿ’ ಕಾರ್ಯಕ್ರಮ ನಿರೂಪಕ, ಹಾಯ್ ಬೆಂಗಳೂರು ಹಾಗೂ ಓ ಮನಸೇ ಪತ್ರಿಕೆಯ ಸಂಪಾದಕರಾಗಿದ್ದಾರೆ. ಅಲ್ಲದೆ ‘ಪ್ರಾರ್ಥನಾ ಶಾಲೆ’ಯ ಸಂಸ್ಥಾಪಕ ಕೂಡ ಆಗಿದ್ದಾರೆ. ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿರುವ ರವಿ ಬೆಳಗೆರೆ, ತನ್ನ ಬರಹದಿಂದಲೇ ಅಸಂಖ್ಯಾತ ಓದುಗ ಬಳಗವನ್ನು ಸೃಷ್ಟಿಸಿಕೊಂಡಿದ್ದ ಮಾಂತ್ರಿಕರಾಗಿದ್ದಾರೆ.

    ಬಳ್ಳಾರಿ ಟು ಬೆಂಗಳೂರು:
    ಬೆಂಗಳೂರು: ಖ್ಯಾತ ಬರಹಗಾರ, ಪತ್ರಕರ್ತ ರವಿ ಬೆಳಗೆರೆ ಅವರು ಬಳ್ಳಾರಿಯ ಸತ್ಯನಾರಾಯಣಪೇಟೆಯಲ್ಲಿ 1958 ಮಾರ್ಚ್ 15ರಂದು ಜನಿಸಿದ್ದಾರೆ. ಬಳ್ಳಾರಿಯಲ್ಲೇ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಕರ್ನಾಟಕ ವಿವಿಯಲ್ಲಿ ಇತಿಹಾಸ, ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ ಮಾಡಿ, ಇತಿಹಾಸ ಉಪನ್ಯಾಸಕರಾಗಿ ರವಿ ಬೆಳಗೆರೆ ವೃತ್ತಿಜೀವನ ಪ್ರಾರಂಭಿಸಿದರು. ಓದಿದ ವಿಶ್ವವಿದ್ಯಾಲಯ ಧಾರವಾಡ ವಿವಿಯಲ್ಲೇ ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದರು. ಕ್ರಮೇಣ ಉಪನ್ಯಾಸಕ ವೃತ್ತಿ ತೊರೆದು ಬರಹದತ್ತ ವಾಲಿದರು.

    ಉಪನ್ಯಾಸಕ ವೃತ್ತಿಗೆ ರಾಜೀನಾಮೆ, ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಮಾಡಲು ಆರಂಭಿಸಿದರು. ಕರ್ಮವೀರ, ಕಸ್ತೂರಿ, ಸಂಯುಕ್ತ ಕರ್ನಾಟಕದಲ್ಲಿ ಕೆಲಸ ಮಾಡಿದ್ದಾರೆ. 1995ರಲ್ಲಿ ಬೆಂಗಳೂರಿನಲ್ಲಿ ‘ಹಾಯ್ ಬೆಂಗಳೂರ್’ ಪತ್ರಿಕೆಯನ್ನು ಪ್ರಾರಂಭಿಸಿ ಜನಮೆಚ್ಚುಗೆ ಗಳಿಸಿದರು. ಜನಪ್ರಿಯ ‘ಕ್ರೈಂ ಡೈರಿ’ ಕಾರ್ಯಕ್ರಮದ ನಿರೂಪಕ ಕೂಡ ಆಗಿದ್ದರು. ಜನಶ್ರೀ ವಾಹಿನಿಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದರು. ಕ್ರೈಂ, ದೇಶ, ಯುದ್ಧ, ಇತಿಹಾಸ, ಭೂಗತ ಇತಿಹಾಸದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದರು.

    ರವಿ ಬೆಳಗೆರೆಯ ‘ಪ್ರೀತಿ ಪತ್ರಗಳು’ ‘ಲವ್ ಲವಿಕೆ’ ಯುವ ಮನಸುಗಳಿಗೆ ಸ್ಫೂರ್ತಿ ನೀಡಿತ್ತು. ಬದುಕು ಬಗೆಗಿನ ‘ಖಾಸ್ ಬಾತ್’ 1996ರಿಂದ 2003ರವರೆಗೆ ಪ್ರಕಟವಾಗಿತ್ತು. `ಓ ಮನಸೇ’ ಅತೀ ಹೆಚ್ಚು ಪ್ರೇಮ ಬರಹಗಳಿಂದ ಪ್ರಸಿದ್ಧಿ ಪಡೆದಿತ್ತು. ‘ಹಿಮಾಲಯನ್ ಬ್ಲಂಡರ್’ ರವಿ ಬೆಳಗೆರೆಯ ತುಂಬಾ ಬೇಡಿಕೆಯ ಪುಸ್ತಕವಾಗಿದೆ. ಇದನ್ನೂ ಓದಿ:  ನಾನು ನಿಮ್ಮ ಜೊತೆ ಇದ್ದೀನಿ ಕಣೋ ಅಂದಿದ್ರು: ರವಿ ಪುತ್ರ ಕಣ್ಣೀರು

    ‘ಬೆಳಗೆರೆ’ಗೊಲಿದ ಸಮ್ಮಾನ:
    1984ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1990 ರಲ್ಲಿ ಮಾಸ್ತಿ ಕಥಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, 1997 ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ಪಾ.ವೆಂ. ಹೇಳಿದ ಕತೆ) (ಸಣ್ಣ ಕತೆ), 2004 ರಲ್ಲಿ `ನೀ ಹಿಂಗೆ ನೀಡಬ್ಯಾಡ..’ ಕಾದಂಬರಿಗೆ ಶಿವರಾಮ ಕಾರಂತ ಪುರಸ್ಕಾರ, 2005 ರಲ್ಲಿ ಕೇಂದ್ರ ಸರ್ಕಾರದಿಂದ ಕಂಪ್ಯೂಟರ್ ಎಕ್ಸಲೆನ್ಸಿ ಅವಾರ್ಡ್ (ಪ್ರಾರ್ಥನಾ ಶಾಲೆ), 2008 ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ (ಜೀವಮಾನದ ಸಾಧನೆ) ಹಾಗೂ 2011 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದರು.

    ರವಿ ಬೆಳಗೆರೆ ಕಾದಂಬರಿಗಳು:
    ಗೋಲಿಬಾರ್ (1983), ಅರ್ತಿ (1990), ಮಾಂಡೋವಿ (1996), ಮಾಟಗಾತಿ (1998), ಒಮರ್ಟಾ (1999), ಸರ್ಪಸಂಬಂಧ (2000), ಹೇಳಿ ಹೋಗು ಕಾರಣ (2003), ನೀ ಹಿಂಗ ನೋಡಬ್ಯಾಡ ನನ್ನ (2003), ಗಾಡ್‍ಫಾದರ್ (2005), ಕಾಮರಾಜ ಮಾರ್ಗ (2010), ಹಿಮಾಗ್ನಿ (2012).

    ಅನುವಾದ:
    ವಿವಾಹ (1983), ನಕ್ಷತ್ರ ಜಾರಿದಾಗ (1984), ಹಿಮಾಲಯನ್ ಬ್ಲಂಡರ್ (1999), ಕಂಪನಿ ಆಫ್ ವಿಮೆನ್ (2000), ಟೈಂಪಾಸ್ (2001), ರಾಜ ರಹಸ್ಯ (2002), ಹಂತಕಿ ಐ ಲವ್ ಯೂ (2007), ದಂಗೆಯ ದಿನಗಳು (2008). ಇದನ್ನೂ ಓದಿ: ಖ್ಯಾತ ಬರಹಗಾರ, ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ

    ಲೇಖನಿಯಲ್ಲಿ..:
    ಕಾರ್ಗಿಲ್‍ನಲ್ಲಿ ಹದಿನೇಳು ದಿನ (1999), ಬ್ಲ್ಯಾಕ್ ಫ್ರೈಡೆ (2005), ರೇಷ್ಮೆ ರುಮಾಲು (2007), ಇಂದಿರೆಯ ಮಗ ಸಂಜಯ (2002), ಗಾಂಧೀ ಹತ್ಯೆ ಮತ್ತು ಗೋಡ್ಸೆ (2003), ಡಯಾನಾ (2007), ನೀನಾ ಪಾಕಿಸ್ತಾನ, ಅವನೊಬ್ಬನಿದ್ದ ಗೋಡ್ಸೆ, ಮೇಜರ್ ಸಂದೀಪ್ ಹತ್ಯೆ, ಅನಿಲ್ ಲಾಡ್ ಮತ್ತು ನಲವತ್ತು ಕಳ್ಳರು, ಮುಸ್ಲಿಂ.

    ಜೀವನ ಕಥನ:
    ಪ್ಯಾಸಾ, 1991, ಪಾಪದ ಹೂವು ಫೂಲನ್, ಆಗಸ್ಟ್ 2001, ಸಂಜಯ 2000, ಚಲಂ (ಅನುವಾದ) ಮಾರ್ಚ್ 2008.

    ಹತ್ಯಾಕಥನ:
    ರಾಜೀವ್ ಹತ್ಯೆ ಏಕಾಯಿತು? ಹೇಗಾಯಿತು? 1991, ಮೈಸೂರಿನ ಸೀರಿಯಲ್ ಕಿಲ್ಲರ್ ರವೀಂದ್ರ ಪ್ರಸಾದ್, 1998, ರಂಗವಿಲಾಸ್ ಬಂಗಲೆಯ ಕೊಲೆಗಳು, ಬಾಬಾ ಬೆಡ್‍ರೂಂ ಹತ್ಯಾಕಾಂಡ (ತನಿಖಾ ವರದಿ) ಜನವರಿ 2007, ಪ್ರಮೋದ್ ಮಹಾಜನ್ ಹತ್ಯೆ (ಅನುವಾದ) ಅಕ್ಟೋಬರ್ 2012.

    ಭೂಗತ ಇತಿಹಾಸ:
    ಪಾಪಿಗಳ ಲೋಕದಲ್ಲಿ ಭಾಗ -1 (1995), ಪಾಪಿಗಳ ಲೋಕದಲ್ಲಿ ಭಾಗ 2 (ಸೆಪ್ಟಂಬರ್ 1997), ಭೀಮಾ ತೀರದ ಹಂತಕರು (ಮೇ 2001), ಪಾಪಿಗಳ ಲೋಕದಲ್ಲಿ (2005), ಡಿ ಕಂಪನಿ (2008).

    ಬದುಕು:
    ಖಾಸ್‍ಬಾತ್ 96, 1997, ಖಾಸ್‍ಬಾತ್ 97, ಸೆಪ್ಟಂಬರ್ 1997, ಖಾಸ್‍ಬಾತ್ 98, ಸೆಪ್ಟಂಬರ್ 1998, ಖಾಸ್‍ಬಾತ್ 99, ಅಕ್ಟೋಬರ್ 2003, ಖಾಸ್‍ಬಾತ್ 2000, ಅಕ್ಟೋಬರ್ 2003, ಖಾಸ್‍ಬಾತ್ 2001, ಜನವರಿ 2007, ಖಾಸ್‍ಬಾತ್ 2002, ಜನವರಿ 2008, ಖಾಸ್‍ಬಾತ್ 2003.

    ಅಂಕಣ ಬರಹಗಳ ಸಂಗ್ರಹ:
    ಜೀವನ ಪಾಠ, ಬಾಟಮ್ ಐಟಮ್ ಭಾಗ 1, ಫೆಬ್ರವರಿ2002, ಬಾಟಮ್ ಐಟಮ್ 2, ಅಕ್ಟೋಬರ್2003, ಬಾಟಮ್ ಐಟಮ್ ಭಾಗ 3, ಡಿಸೆಂಬರ್ 2006, ಬಾಟಂ ಐಟಮ್ 4 ಹಾಗೂ ಬಾಟಂ ಐಟಮ್ 5.

    ಪ್ರೀತಿ ಪತ್ರಗಳು:
    ಲವಲವಿಕೆ -1, ಡಿಸೆಂಬರ್ 1998, ಲವಲವಿಕೆ -2, ಸೆಪ್ಟಂಬರ್ 2004, ಲವಲವಿಕೆ -3, ಲವಲವಿಕೆ -4.

    ಕವನ ಸಂಕಲನ:
    ಅಗ್ನಿಕಾವ್ಯ, 1983, ಇತರೆ. ಹೀಗೆ ತಮ್ಮ ಬರಹದಿಂದಲೇ ಅಂಖ್ಯಾತ ಅಭಿಮಾನಿಗಳು ಹೊಂದಿರುವ ಮಾಂತ್ರಿಕರಾಗಿದ್ದರು.

  • ನಾನು ನಿಮ್ಮ ಜೊತೆ ಇದ್ದೀನಿ ಕಣೋ ಅಂದಿದ್ರು: ರವಿ ಪುತ್ರ ಕಣ್ಣೀರು

    ನಾನು ನಿಮ್ಮ ಜೊತೆ ಇದ್ದೀನಿ ಕಣೋ ಅಂದಿದ್ರು: ರವಿ ಪುತ್ರ ಕಣ್ಣೀರು

    ಬೆಂಗಳೂರು: ನಾನು ನಿಮ್ಮ ಜೊತೆ ಇದ್ದೀನಿ ಕಣೋ. ನೀನು ಚೆನ್ನಾಗಿ ಬೆಳೆಯಬೇಕು ಎಂದು ಹೇಳಿದ್ದರು. ಆದರೆ ಅವರ ಸಾವಿನ ಸುದ್ದಿ ನಮಗೆ ಶಾಕ್ ಆಗಿದೆ ಎಂದು ರವಿಬೆಳಗೆರೆ ಪುತ್ರ ಕರ್ಣ ಕಣ್ಣೀರು ಹಾಕಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರವಿಬೆಳಗೆರೆ ರಾತ್ರಿ ಪದ್ಮನಾಭ ಕಚೇರಿಯಲ್ಲಿ ಸಾವನ್ನಪ್ಪಿದ್ದಾರೆ. ರಾತ್ರಿ ಸುಮಾರು 12.15ರ ವೇಳೆಗೆ ಎದೆ ನೋವು ಕಾಣಿಸಿಕೊಂಡಿತ್ತು. ನಾನು ಹೋಗುವಷ್ಟರಲ್ಲಿ ಆಸ್ಪತ್ರೆಗೆ ಸಾಗಿಸಲೆಂದು ತಯಾರಾಗಿದ್ದರು. ಆದರೆ ಅದಾಗಲೇ ಅವರ ಸಾವು ಕೂಡ ಆಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

    ಅವರು ನಮ್ಮ ಜೊತೆ ಇನ್ನೂ ಬಹಳ ದಿನಗಳ ಕಾಲ ಬದುಕಿರುತ್ತಿದ್ದರು ಅಂತ ಭಾವಿಸಿದ್ವಿ. ಪ್ರಾರ್ಥನಾ ಶಾಲೆ ಮತ್ತಷ್ಟು ಎತ್ತರಕ್ಕೆ ಬೆಳಸಬೇಕು ಅನ್ನೋ ಬಹುದೊಡ್ಡ ಆಸೆ ಅವರಿಗಿತ್ತು. ಅವರಿಗೆ ಡಯಾಬಿಟಿಸ್ ಇತ್ತು, ಕಾಲುಗಳ ನೋವಿತ್ತು. ಕಳೆದ ಮೂರು ದಿನಗಳ ಹಿಂದೆಯಷ್ಟೇ ನಾನು ಅವರ ಜೊತೆ ಮಾತನಾಡಿದ್ದರು. ನಾನು ನಿಮ್ಮ ಜೊತೆ ಇದ್ದೀನಿ ಕಣೋ ಅಂದಿದ್ದರು ಎಂದು ತಿಳಿಸಿದರು.

    ನೀನು ಚೆನ್ನಾಗಿ ಬೆಳಯಬೇಕು ಅಂತ ಕೂಡ ಹೇಳಿದ್ದರು. ಆದರೆ ಅವರ ದಿಢೀರ್ ಸಾವಿನ ಸುದ್ದಿ ನಮಗೆ ಶಾಕ್ ಆಗಿದೆ. ಬೆಳಗ್ಗೆ 9 ಗಂಟೆಗೆ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುತ್ತೇವೆ. ಸಂಜೆ 4 ಗಂಟೆ ಒಳಗೆ ಬನಶಕಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.

    ತನ್ನ ಬರಹದಿಂದಲೇ ಸಾಕಷ್ಟು ಮಂದಿ ಅಭಿಮಾನಿಗಳನ್ನು ಹೊಂದಿದ್ದ ರವಿ ಬೆಳಗೆರೆ ಅವರು ಇಂದು ಬೆಳಗ್ಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯ ಕರಿಷ್ಮಾ ಹಿಲ್ಸ್ ಮನೆಯಲ್ಲಿ ಹೃದಯಾಘಾತದಿಂದ ಅಸ್ತಂಗತರಾಗಿದ್ದಾರೆ.

  • ಅಂದು ವೇಶ್ಯೆ ಆಗಿದ್ದಾಕೆ ಇಂದು ಬಾಲಿವುಡ್‍ನ ಸ್ಟಾರ್ ಬರಹಗಾರ್ತಿ

    ಅಂದು ವೇಶ್ಯೆ ಆಗಿದ್ದಾಕೆ ಇಂದು ಬಾಲಿವುಡ್‍ನ ಸ್ಟಾರ್ ಬರಹಗಾರ್ತಿ

    ಮುಂಬೈ: ಬಾಲಿವುಡ್‍ನ ಖ್ಯಾತ ಬರಹಗಾರ್ತಿ ಒಬ್ಬರ ಕತೆ ಕೇಳಿದರೆ ಯಾವ ಸಿನಿಮಾ ಕತೆಗಳಿಗಿಂತಲೂ ಕಡಿಮೆಯಿಲ್ಲ ಎನಿಸುತ್ತೆ. ಆದರೆ ಇದು ಸಿನಿಮಾ ಕತೆಯಲ್ಲ ಖ್ಯಾತ ಬರಹಗಾರ್ತಿಯ ನಿಜ ಜೀವನದ ವ್ಯಥೆ. ಹಿಂದೆ ಜೀವನ ನಡೆಸಲು ಮುಂಬೈನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಇಂದು ಬಾಲಿವುಡ್‍ನಲ್ಲಿ ತಮ್ಮ ಪ್ರತಿಭೆ ಮೂಲಕ ಖ್ಯಾತಿ ಗಳಿಸಿದ್ದಾರೆ. ಇವರು ಬರೆದ ಕತೆಗಳು ಇಂದು ಬಿಟೌನ್‍ನಲ್ಲಿ ಹಿಟ್ ಸಿನಿಮಾಗಳಾಗಿವೆ.

    ಅಂದು ಜೀವನ ನಿರ್ವಹಣೆಗಾಗಿ ವೇಶ್ಯೆ ಆಗಿದ್ದವರು ಇಂದು ಬಾಲಿವುಡ್‍ನಲ್ಲಿ ಖ್ಯಾತಿ ಗಳಿಸಿದವರ ಹೆಸರು ಶಗುಫ್ತಾ ರಫಿಕಿ. ಕುಟುಂಬ ನಿರ್ವಹಣೆಗಾಗಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಶಗುಫ್ತಾ ಇಂದು ಬಾಲಿವುಡ್‍ನ ಸ್ಟಾರ್ ಬರಹಗಾರ್ತಿ ಆಗಿದ್ದಾರೆ. ಇವರು ಬರೆದ ಕತೆಗಳು ಸಿನಿಮಾ ಆಗಿ ಬಾಕ್ಸ್ ಆಫೀಸ್‍ನಲ್ಲಿ ಕೋಟಿ-ಕೋಟಿ ಹಣ ಗಳಿಸಿದೆ. ಬಾಲಿವುಡ್‍ನ ಖ್ಯಾತ ನಿರ್ದೇಶಕ, ನಿರ್ಮಾಪಕ ಮಹೇಶ್ ಭಟ್ ಅವರು ನಿರ್ಮಿಸಿರುವ ಬಹುತೇಕ ಸಿನಿಮಾಗಳಿಗೆ ಶಗುಫ್ತಾ ಅವರೇ ಮುಖ್ಯ ಬರಹಗಾರ್ತಿ. ‘ವೋಹ್ ಲಮ್ಹೆ’, ‘ರಾಜ್2 ಮತ್ತು 3’, ಮ್ಯೂಸಿಕಲ್ ಹಿಟ್ ಸಿನಿಮಾ ‘ಆಶಿಕಿ 2’, ‘ಮರ್ಡರ್ 2′, ಅಂಕುರ್ ಅರೋರಾ ಮರ್ಡರ್ ಕೇಸ್’ ಹೀಗೆ ಸಾಕಷ್ಟು ಸಿನಿಮಾಗಳಿಗಾಗಿ ಶಗುಫ್ತಾ ಕೆಲಸ ಮಾಡಿದ್ದಾರೆ.

    ತಂದೆ-ತಾಯಿ ಬಗ್ಗೆ ತಿಳಿಯದ ಶಗುಫ್ತಾರನ್ನು ಚಿಕ್ಕ ವಯಸ್ಸಿನಿಂದಲೇ ಯಾವುದೋ ಮಹಿಳೆ ಸಾಕಿದರು. ಆ ಮಹಿಳೆಗೆ ಕೊಲ್ಕತ್ತದ ವ್ಯಕ್ತಿಯೊಬ್ಬನ ಜೊತೆ ಅಕ್ರಮ ಸಂಬಂಧವಿತ್ತು. ಆದರೆ ಆತ ಮೃತಪಟ್ಟ ಬಳಿಕ ಶಗುಫ್ತಾ ಮತ್ತು ಅವರ ಸಾಕು ತಾಯಿಯ ಜೀವನ ನಡೆಸಲು ಕಷ್ಟವಾಯ್ತು. ಹೀಗಾಗಿ ತಮ್ಮ 11 ವರ್ಷದ ವಯಸ್ಸಿನಲ್ಲಿಯೇ ಶಗುಫ್ತಾ ಡಾನ್ಸ್ ಬಾರ್ ನಲ್ಲಿ ಕುಣಿದು ರಂಜಿಸಿ ಹಣ ದುಡಿಯುತ್ತಿದ್ದರು. ಜೀವನ ನಡೆಸಲು ತಮ್ಮ 17ನೇ ವಯಸ್ಸಿನಲ್ಲಿಯೇ ಕಾರಣಾಂತರಗಳಿಂದ ಶಗುಫ್ತಾ ವೇಶ್ಯಾವಾಟಿಕೆಯಲ್ಲಿ ತೊಡಗಿಬಿಟ್ಟರು.

    ಶಗುಫ್ತಾ ಮುಂಬೈನಲ್ಲಿ ವೇಶ್ಯಾವಾಟಿಕೆಯಿಂದ ಸ್ವಲ್ಪ ಹಣ ಗಳಿಸಿದಳು. ನಂತರ ಮುಂಬೈನಲ್ಲಿಯೇ ಕೆಲ ದಿನ ಡಾನ್ಸ್ ಬಾರ್ ನಲ್ಲಿ ದುಡಿದ ಶಗುಫ್ತಾ, ತನ್ನ 25ನೇ ವಯಸ್ಸಿನಲ್ಲಿ ವೇಶ್ಯಾವಾಟಿಕೆಗೆಂದೇ ದುಬೈಗೆ ಹಾರಿದ್ದರು. ಶಗುಫ್ತಾ ಹೊಟ್ಟೆಪಾಡಿಗಾಗಿ ಡಾನ್ಸ್ ಬಾರ್ ನಲ್ಲಿ ಕುಣಿಯುವುದನ್ನು ಮುಂದುವರೆಸಿದರು. ಈ ಮಧ್ಯೆಯೇ ಕತೆಗಳನ್ನು ಬರೆಯಲು ಆರಂಭಿಸಿದರು. ತಾವು ಕಂಡ ಕತ್ತಲ ಸಾಮ್ರಾಜ್ಯದ ಕತೆಗಳನ್ನು ಬರೆಯುತ್ತಿದ್ದರು.

    ಸಿನಿಮಾಗಳಲ್ಲಿ ಅವಕಾಶಕ್ಕಾಗಿ ಶಗುಫ್ತಾ ಪ್ರಯತ್ನಿಸುವಾಗ ವಿನೇಶ್ ಸ್ಟುಡಿಯೋಸ್‍ನ ಮಹೇಶ್ ಭಟ್ ಅವರು ಶಗುಫ್ತಾ ಅವರ ಪ್ರತಿಭೆ ಗುರುತಿಸಿ, ಕೆಲಸಕೊಟ್ಟರು. ಈವರೆಗೆ ಸುಮಾರು 19 ಸಿನಿಮಾಗಳಿಗೆ ಶಗುಫ್ತಾ ಕತೆ, ಚಿತ್ರಕತೆ ಬರೆದಿದ್ದಾರೆ. ಕತೆ ಬರೆಯುವುದು ಮಾತ್ರವಲ್ಲ ಹಲವು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಪಂಜಾಬಿಯಲ್ಲಿ ‘ದುಶ್ಮನ್’, ಬಂಗಾಳಿ ಭಾಷೆಯಲ್ಲಿ ‘ಮೋನ್ ಜಾನೆ ನಾ’ ಸಿನಿಮಾ ನಿರ್ದೇಶಿಸಿದ್ದು, ಶಗುಫ್ತಾ ರಫಿಕಿ ಅವರ ನಿರ್ದೇಶನದ ‘ಸೆವೆನ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.