Tag: Yadgiri

  • ಯಾದಗಿರಿಯಲ್ಲಿ ಗುಡುಗು ಸಹಿತ ಬಾರಿ ಮಳೆ : ಸಿಡಿಲು ಬಡಿದು ನಾಲ್ವರು ಸಾವು

    ಯಾದಗಿರಿಯಲ್ಲಿ ಗುಡುಗು ಸಹಿತ ಬಾರಿ ಮಳೆ : ಸಿಡಿಲು ಬಡಿದು ನಾಲ್ವರು ಸಾವು

    ಯಾದಗಿರಿ: ಸಿಡಿಲು ಬಡಿದು ಒಂದೇ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜೀನಕೇರ ತಾಂಡದಲ್ಲಿ ನಡೆದಿದೆ.

    ಮೃತರನ್ನು ಜೀನಕೇರ ತಾಂಡದ ನಿವಾಸಿಗಳಾದ ಒಂದೇ ಕುಟುಂಬದ ಚೇನು (22), ಕಿಶನ್ (30), ಸುಮಿ ಬಾಯಿ (30) ಸಾವನ್ನಪ್ಪಿದ್ದು, ಇನ್ನೊಬ್ಬ ಮೃತ ಬಾಲಕನ ಗುರುತು ಪತ್ತೆಯಾಗಿಲ್ಲ.ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ತುಪ್ಪ ಪೂರೈಸುತ್ತಿದ್ದ ಎಆರ್ ಡೈರಿಗೆ ನೋಟಿಸ್

    ಕುಟುಂಬಸ್ಥರು ಸೇರಿ ಈರುಳ್ಳಿ ಹಚ್ಚಲು ಜಮೀನಿಗೆ ತೆರಳಿದ್ದರು. ಈ ವೇಳೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ರಕ್ಷಿಸಿಕೊಳ್ಳಲು ತಾಂಡಾದ ದುರ್ಗಮ್ಮ ದೇವಸ್ಥಾನದೊಳಗೆ ತೆರಳಿದ್ದರು. ಇದೇ ವೇಳೆ ಸಿಡಿಲು ಬಡಿದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.

    ಅವಘಡ ಸಂಭವಿಸಿದ ತಕ್ಷಣವೇ ಸ್ಥಳೀಯ ಆಸತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದೇ ವೇಳೆ ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ.

    ಯಾದಗಿರಿ (Yadagiri) ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿಡಿಲು ಬಡಿದು ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.ಇದನ್ನೂ ಓದಿ: ಬಿಗ್ ಬಾಸ್ ಆರಂಭಕ್ಕೂ ಮೊದಲೇ ಕಂಟೆಸ್ಟೆಂಟ್ ಅನೌನ್ಸ್- ಯಾರದು?

  • ಯಾದಗಿರಿ| ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

    ಯಾದಗಿರಿ| ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

    ಯಾದಗಿರಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (71) ಚಿಕಿತ್ಸೆ ಫಲಕಾರಿಯಾಗದೇ ಇಂದು (ಮಂಗಳವಾರ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟರೆಡ್ಡಿ (Venkatreddy Mudnal) ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಮೋದಿ ಜನ್ಮದಿನದಂದೇ ಜನನ – ಪುತ್ರನಿಗೆ ‘ನರೇಂದ್ರ’ ಎಂದು ಹೆಸರಿಟ್ಟ ಕೊಡಗಿನ ದಂಪತಿ

     

    ವೆಂಕಟರೆಡ್ಡಿ ಅವರು 2018ರಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧೆ ಮಾಡಿ ಯಾದಗಿರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದರು. ಇವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತರಾಗಿದ್ದು, ಯಾದಗಿರಿಯ ಪುರಸಭೆಯ ಅಧ್ಯಕ್ಷರಾಗಿದ್ದರು. ಅಲ್ಲದೇ ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷರಾಗಿದ್ದರು. ಇದನ್ನೂ ಓದಿ: ವಿಎಓ/ಜಿಟಿಟಿಸಿ ಪರೀಕ್ಷೆ ಹೊಸದಾಗಿ ಅರ್ಜಿ ಸಲ್ಲಿಸಲು ಸೆ.19ರಿಂದ ಅವಕಾಶ: ಕೆಇಎ

    ಮೃತರ ಪಾರ್ಥಿವ ಶರೀರವನ್ನು ಇಂದು ರಾತ್ರಿ ಯಾದಗಿರಿಗೆ ತರಲಾಗುತ್ತದೆ. ನಾಳೆ (ಬುಧವಾರ) ಸಂಜೆ ಯಾದಗಿರಿ ತಾಲೂಕಿನಲ್ಲಿರುವ ಸ್ವಗ್ರಾಮದ ಜಮೀನಿನಲ್ಲಿ ವೆಂಕಟರೆಡ್ಡಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ – ನಾಳೆಗೆ ಅರ್ಜಿ ವಿಚಾರಣೆ

    ವಿಜಯೇಂದ್ರ ಸಂತಾಪ:
    ಇನ್ನು ವೆಂಕಟರೆಡ್ಡಿ ಮುದ್ನಾಳ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ. ನೇರನುಡಿ, ಜನಾನುರಾಗಿಯಾಗಿದ್ದ ವೆಂಕಟರೆಡ್ಡಿ ಮುದ್ನಾಳ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ತುಂಬಾ ದುಃಖವಾಗಿದೆ. ಕಲ್ಯಾಣ ಕರ್ನಾಟಕದ ಹಿರಿಯ ರಾಜಕಾರಣಿಗಳಾದ ಮುದ್ನಾಳ ಅವರು, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಗಣನೀಯ ಸೇವೆ ಸಲ್ಲಿಸಿದವರು. ಶಾಸಕರಾಗಿ ಸಾಮಾಜಿಕ, ರಾಜಕೀಯವಾಗಿ ತಮ್ಮ ಜಿಲ್ಲೆಯ ಅಭಿವೃದ್ಧಿಗೆ ಕಾರಣಕರ್ತರು. ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಮಹಿಳಾ ವೈದ್ಯರಿಗೆ ನೈಟ್ ಶಿಫ್ಟ್ ತೆಗೆದು ಅಧಿಸೂಚನೆ – ಮಮತಾ ಸರ್ಕಾರಕ್ಕೆ ಸುಪ್ರೀಂ ಚಾಟಿ

  • ಜನರನ್ನ ಕಾಪಾಡಬೇಕಾದ ಶಾಸಕರೇ ನರಭಕ್ಷಕರಾದ್ರೆ ನಮ್ಮ ಗತಿಯೇನು?: ಮೃತ ಪಿಎಸ್‌ಐ ಪರಶುರಾಮ್ ಮಾವ ಕಿಡಿ

    ಜನರನ್ನ ಕಾಪಾಡಬೇಕಾದ ಶಾಸಕರೇ ನರಭಕ್ಷಕರಾದ್ರೆ ನಮ್ಮ ಗತಿಯೇನು?: ಮೃತ ಪಿಎಸ್‌ಐ ಪರಶುರಾಮ್ ಮಾವ ಕಿಡಿ

    ರಾಯಚೂರು: ಯಾದಗಿರಿ ((Yadgiri) ಪಿಎಸ್‌ಐ ಪರಶುರಾಮ್‌ (PSI Parshuram) ಸಾವಿನ ಪ್ರಕರಣವನ್ನ ಸಿಐಡಿಗೆ ಒಪ್ಪಿಸಿರುವುದನ್ನ ಪರಶುರಾಮ್ ಮಾವ ಎನ್ ವೆಂಕಟಸ್ವಾಮಿ ಸ್ವಾಗತಿಸಿದ್ದಾರೆ. ರಾಯಚೂರಿನಲ್ಲಿ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿರುವ ಎನ್ ವೆಂಕಟಸ್ವಾಮಿ, ಪ್ರಕರಣ ಸಿಐಡಿಗೆ ಕೊಟ್ಟಿರುವುದು ಸ್ವಾಗತ. ಆದರೆ ನನ್ನ ಅಳಿಯನ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

    ಜನರಿಗೆ ಒಳ್ಳೆಯದಾಗಲಿ ಎಂದು ಶಾಸಕರನ್ನ ಆಯ್ಕೆ ಮಾಡುತ್ತೇವೆ. ಆದರೆ ಜನರನ್ನು ಕಾಪಾಡಬೇಕಾದ ಇಂಥವರು ನರಭಕ್ಷಕರಾಗಿಬಿಟ್ಟರೆ ಗತಿಯೇನು? ಇಂತಹ ಸಂದರ್ಭದಲ್ಲಿ ಸರ್ಕಾರ ಸುಮ್ಮನೆ ಕೂತರೆ ಸರಿಯಲ್ಲ. ನಮ್ಮ ಅಳಿಯನ ಸಾವಿಗೆ ನ್ಯಾಯ ಕೊಡಲೇಬೇಕು ಎಂದು ಮನವಿ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಆಪ್‌ಗೆ ಹಿನ್ನಡೆ, ಎಂಸಿಡಿಗೆ ಸದಸ್ಯರ ನಾಮನಿರ್ದೇಶನದ ಅಧಿಕಾರ ಎಲ್‌ಜಿಗಿದೆ – ಸುಪ್ರೀಂ

    ಯಾದಗಿರಿ ಶಾಸಕ ಹಾಗೂ ಅವರ ಪುತ್ರನ ಹಿಂಸೆಯಿಂದ ನನ್ನ ಅಳಿಯ ಸಾವನ್ನಪ್ಪಿದ್ದಾನೆ. 30 ಲಕ್ಷ ಕೊಡದಿದ್ದರೆ ಯಾದಗಿರಿಯಲ್ಲಿ ಇರಬಾರದು ಎಂದು ಹಿಂಸೆ ಕೊಟ್ಟಿದ್ದಾರೆ. ಜಾತಿ ನಿಂದನೆ ಮಾಡಿದ್ದಾರೆ. ಅದಕ್ಕೆ ನೊಂದು ಬಿಪಿ ಹೆಚ್ಚಾಗಿ ನನ್ನ ಅಳಿಯ ಮೃತಪಟ್ಟಿದ್ದಾರೆ ಎಂದಿದ್ದಾರೆ. ಸಿಐಡಿ ಅಧಿಕಾರಿಗಳ ಕರೆಗೆ ಕಾಯುತ್ತಿದ್ದೇವೆ. ಬರಲು ಹೇಳುತ್ತೇವೆ ಎಂದಿದ್ದಾರೆ. ಸರ್ಕಾರದ ಮೇಲೆ ಗೃಹ ಸಚಿವರ ಮೇಲೆ ಭರವಸೆ ಇಡುತ್ತೇವೆ. ನಮ್ಮ ಅಳಿಯನ ಸಾವಿಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ ಎಂದು ಹೇಳಿದರು. ಇದನ್ನೂ ಓದಿ: 1 ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆ – ಈಗ ಇನ್ಸ್‌ಪೆಕ್ಟರ್‌ ನೇಣಿಗೆ ಶರಣು

    ಪರಶುರಾಮ ತನ್ನ ಮೇಲಿನ ಒತ್ತಡದ ಬಗ್ಗೆ ಹೇಳಿದ್ದ. ನಾವು ಮನವೊಲಿಸುವ ಪ್ರಯತ್ನ ಮಾಡಿದ್ದೆವು. ವೃತ್ತಿಯಲ್ಲಿ ಇದು ಸಾಮಾನ್ಯ. ರಾಜಕೀಯ ಒತ್ತಡಗಳು ಇದ್ದೆ ಇರುತ್ತದೆ. ಎಲ್ಲಿ ಕೊಡುತ್ತಾರೆ ಎಂಬುದನ್ನು ಕೇಳಿ, ಐಜಿ ಆಫೀಸ್‌ಗೆ ಹೋಗಿ ರಿಕ್ವೆಸ್ಟ್ ಮಾಡಿ ಮುಂದೆ ಜನರಲ್ ಟ್ರಾನ್ಸ್ಫರ್ ಟೈಮಲ್ಲಿ ನೋಡೋಣ ಎಂದು ಮನವರಿಕೆ ಮಾಡಿದ್ದೆವು. ಆದರೆ ಪರಶುರಾಮ್ ತುಂಬಾ ಒತ್ತಡದಲ್ಲಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಸಿಎಂ ಪರ ನಿಲ್ಲುವಂತೆ ಸುರ್ಜೇವಾಲ, ವೇಣುಗೋಪಾಲ್ ಸೂಚನೆ: ಪರಮೇಶ್ವರ್

  • ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರದಿಂದ ಉದ್ಯೋಗ: ಪರಮೇಶ್ವರ್

    ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರದಿಂದ ಉದ್ಯೋಗ: ಪರಮೇಶ್ವರ್

    ಬೆಂಗಳೂರು: ಯಾದಗಿರಿ (Yadgiri) ಮೃತ ಪಿಎಸ್‌ಐ ಪರಶುರಾಮ್ (PSI Parashuram) ಪತ್ನಿಗೆ ಸರ್ಕಾರದಿಂದ ಉದ್ಯೋಗ ನೀಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಘೋಷಣೆ ಮಾಡಿದ್ದಾರೆ.

    ಯಾದಗಿರಿ ಪಿಎಸ್‌ಐ ಸಾವು ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,ಪಿಎಸ್‌ಐ ಸಾವು ಪ್ರಕರಣ ಸಿಐಡಿಗೆ ನೀಡಲಾಗಿದೆ. ಅದರ ತನಿಖೆ ಮಾಡುತ್ತಿದ್ದಾರೆ. ಪೋಸ್ಟ್ ಮಾರ್ಟಮ್ ರಿಪೋರ್ಟ್ ನಿರೀಕ್ಷೆ ಮಾಡುತ್ತಿದ್ದೇವೆ. ಅದು ಬಂದ ಮೇಲೆ ಯಾಕೆ ಸಾವಾಗಿದೆ ಎಂದು ಗೊತ್ತಾಗುತ್ತದೆ. ನಾನು ನಾಡಿದ್ದು ಅವರ ಮನೆಗೆ ಹೋಗಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಅವರ ಶ್ರೀಮತಿಗೆ ಕೆಲಸ ಕೊಡಬೇಕು ಎಂದು ನಾವು ತೀರ್ಮಾನ ಮಾಡಿದ್ದೇವೆ. ಅವರಿಗೆ ಪರಿಹಾರ ಮತ್ತು ಉದ್ಯೋಗ ನೀಡುವ ಕೆಲಸ ಮಾಡುತ್ತೇವೆ. ಉದ್ಯೋಗ ಕೊಡಲು ಸಿಎಂ ಮತ್ತು ನಾನು ಚರ್ಚೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೆ ಕಾನೂನು ಹೋರಾಟ: ಪರಮೇಶ್ವರ್

    ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಮತ್ತು ಶಾಸಕನ ಪುತ್ರನ ಮೇಲೆ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸಿಐಡಿ ತನಿಖೆಗೆ ಕೊಡಲಾಗಿದೆ. ತನಿಖೆಯ ವರದಿ ಬರಲಿ. ತನಿಖೆಯಲ್ಲಿ ಶಾಸಕರು ಮತ್ತು ಅವರ ಪುತ್ರನ ಪಾತ್ರವಿದ್ದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬ್ರಿಟನ್‌ನಲ್ಲಿ ಸ್ಥಳೀಯರು Vs ವಲಸಿಗ ಮುಸ್ಲಿಮರ ಮಧ್ಯೆ ಸಂಘರ್ಷ – 148 ಮಂದಿ ಬಂಧನ

  • ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ 9 ಮಂದಿ ಅಸ್ವಸ್ಥ – ಕಾಕಲವಾರ ಗ್ರಾಪಂ ಪಿಡಿಒ ಅಮಾನತು

    ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ 9 ಮಂದಿ ಅಸ್ವಸ್ಥ – ಕಾಕಲವಾರ ಗ್ರಾಪಂ ಪಿಡಿಒ ಅಮಾನತು

    ಯಾದಗಿರಿ: ಜಿಲ್ಲೆಯ ಕಾಕಲವಾರ (Kakalwar) ಗ್ರಾಮದಲ್ಲಿ ಕಲುಷಿತ ನೀರು (Contaminated Water) ಸೇವಿಸಿ 9 ಮಂದಿ ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆ ಪಿಡಿಒ (PDO) ಅಮಾನತು (Suspension) ಮಾಡಿ ಸಿಇಓ ಗರೀಮಾ ಪನ್ವಾರ್ ಆದೇಶಿಸಿದ್ದಾರೆ.

    ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಾಕಲವಾರ ಗ್ರಾಮ ಪಂಚಾಯತ್ ಪಿಡಿಒ ಮಲ್ಲರೆಡ್ಡಿಯನ್ನು ಅಮಾನತು ಮಾಡಲಾಗಿದೆ. ಕುಡಿಯಲು ಯೋಗ್ಯವಲ್ಲದ ನೀರು ಎಂದು ವರದಿ ಬಂದರೂ ನೀರು ಪೂರೈಕೆ ಮಾಡಿದ್ದು, ಕಲುಷಿತ ನೀರನ್ನು ಸೇವಿಸಿದ 9 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗ್ರಾಮದ ಮೂರು ಬೋರ್‌ವೆಲ್‌ಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿತ್ತು. ಆದರೂ ಪಿಡಿಒ ಮಲ್ಲರೆಡ್ಡಿ ಯೋಗ್ಯವಲ್ಲದ ನೀರನ್ನೇ ಗ್ರಾಮಸ್ಥರಿಗೆ ಕುಡಿಯಲು ಪೂರೈಸಿದ್ದರು. ಈ ಹಿನ್ನೆಲೆ ಕರ್ತವ್ಯಲೋಪ ಆಧಾರದ ಮೇಲೆ ಸಸ್ಪೆಂಡ್ ಮಾಡಿ ಸಿಇಒ ಆದೇಶ ನೀಡಿದ್ದಾರೆ. ಇದನ್ನೂ ಓದಿ: ನನ್ನ ಸ್ನೇಹಿತ ಟ್ರಂಪ್‌ ಮೇಲಿನ ದಾಳಿಯಿಂದ ಕಳವಳಗೊಂಡಿದ್ದೇನೆ: ದಾಳಿಗೆ ಪ್ರಧಾನಿ ಮೋದಿ ಖಂಡನೆ

    ಘಟನೆ ಆದ ಕೂಡಲೇ ಸಿಇಒ ಗರೀಮಾ ಪನ್ವಾರ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ. ನಂತರ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದರು. ಪಿಡಿಒ ನಿರ್ಲಕ್ಷ್ಯವೇ ಪ್ರಕರಣಕ್ಕೆ ಕಾರಣ ಎಂಬುದನ್ನು ಅರಿತು ಅಮಾನತು ಮಾಡಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಬೈಕ್‌ಗೆ ಕಾರು ಡಿಕ್ಕಿ – ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

  • ದೇವೇಗೌಡರು ಪ್ಲಾನ್ ಮಾಡಿ ಪ್ರಜ್ವಲ್‌ನನ್ನು ವಿದೇಶಕ್ಕೆ ಕಳುಹಿಸಿದ್ದಾರೆ: ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

    ದೇವೇಗೌಡರು ಪ್ಲಾನ್ ಮಾಡಿ ಪ್ರಜ್ವಲ್‌ನನ್ನು ವಿದೇಶಕ್ಕೆ ಕಳುಹಿಸಿದ್ದಾರೆ: ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

    -ಎಸ್‌ಐಟಿಯಿಂದ ಪಾರದರ್ಶಕ ತನಿಖೆ ಆಗುತ್ತೆ ಎಂದ ಸಿಎಂ

    ಯಾದಗಿರಿ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವೀಡಿಯೋ ವೈರಲ್ ಬಳಿಕ ವಿದೇಶಕ್ಕೆ ಹಾರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿಯ (Yadgiri) ಸುರಪುರ (Surapura) ತಾಲೂಕಿನ ದೇವತ್ಕಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ದೇವೇಗೌಡ (HD Deve Gowda) ಅವರೇ ಪ್ಲಾನ್ ಮಾಡಿ ಪ್ರಜ್ವಲ್ ಅನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವ ಕುರಿತು ಮಾತನಾಡಿದ ಅವರು, ಪ್ರಜ್ವಲ್ ಸಿ.ಡಿ ಕೇಸ್‌ಗೂ ಡಿಸಿಎಂ ಡಿಕೆ ಶಿವಕುಮಾರ್‌ಗೂ (DK Shivakumar) ಸಂಬಂಧವಿಲ್ಲ. ಸೂರಜ್ ರೇವಣ್ಣ ಜೊತೆ ಪೋಟೋ ಇರೋದಕ್ಕೆ ಏನಾಗುತ್ತೆ? ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಪೋಟೋ ಇದೆ. ಹಾಗಾದ್ರೆ ನಂದು ರೇವಣ್ಣನ ಜೊತೆ ಪೋಟೋ ಇದ್ದರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥನಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮುಸ್ಲಿಮರು ಮಾತ್ರ ಹೆಚ್ಚು ಮಕ್ಕಳನ್ನು ಹೊಂದುತ್ತಾರೆಯೇ? ನನಗೂ ಐದು ಜನ ಮಕ್ಕಳು: ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

    ಪೆನ್‌ಡ್ರೈವ್ ಹಿಂದೆ (Pendrive Case) ಡಿಕೆಶಿ ಕೈವಾಡ ಇದೆ ಎನ್ನುವ ಹೆಚ್‌ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾರ್ತಿಕ್ ಯಾರ ಡ್ರೈವರ್? ಪ್ರಜ್ವಲ್ ಡ್ರೈವರ್. ಪೆನ್‌ಡ್ರೈವ್ ಬಿಜೆಪಿ ಮುಖಂಡನ ಕೈಯಲ್ಲಿ ಕೊಟ್ಟಿದ್ದು. ಕುಮಾರಸ್ವಾಮಿ ರಾಜಕೀಯವಾಗಿ ಡಿಕೆಶಿ ಮೇಲೆ ಆರೋಪ ಮಾಡುತ್ತಾರೆ. ಅಮಿತ್ ಶಾ ಅವರಿಗೆ ಗೊತ್ತಿದ್ದರೂ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್‌ಗೆ ಟಿಕೆಟ್ ಯಾಕೆ ಕೊಟ್ಟರು? ಸೆಕ್ಸ್ ಸ್ಕ್ಯಾಂಡಲ್‌ನಲ್ಲಿ ಸಿಲುಕಿಕೊಂಡವನಿಗೆ ಯಾಕೆ ಟಿಕೆಟ್ ಕೊಟ್ಟರು? ಎಸ್‌ಐಟಿಯಿಂದ ಪಾರದರ್ಶಕವಾಗಿ ತನಿಖೆ ಆಗುತ್ತೆ ಎಂದರು. ಇದನ್ನೂ ಓದಿ: 10 ಲಕ್ಷದಲ್ಲಿ ಎಂಟು ಮಂದಿಯಲ್ಲಿ ಮಾತ್ರ ಅಡ್ಡ ಪರಿಣಾಮ: ಕೋವಿಶೀಲ್ಡ್ ಬಗ್ಗೆ ಸ್ಪಷ್ಟನೆ ನೀಡಿದ ICMR ನಿವೃತ್ತ ವಿಜ್ಞಾನಿ

  • ತೀವ್ರ ಬರ – ಯಾದಗಿರಿ ಜಿಲ್ಲೆಯ 65 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

    ತೀವ್ರ ಬರ – ಯಾದಗಿರಿ ಜಿಲ್ಲೆಯ 65 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

    – 36 ಗ್ರಾಮಗಳಿಗೆ ಖಾಸಗಿ ಬೋರ್ವೆಲ್‌ಗಳಿಂದ ನೀರು ಪೂರೈಕೆ
    – ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ ಮಾಹಿತಿ

    ಯಾದಗಿರಿ: ತೀವ್ರ ಬರದಿಂದಾಗಿ ಯಾದಗಿರಿ (Yadgiri) ಜಿಲ್ಲೆಯಲ್ಲಿ 65 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಿತ್ತಿವೆ. ಆದ್ದರಿಂದ ಜನ – ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ ಸುಶೀಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿದ್ದ ಮಾತನಾಡಿದ ಡಿಸಿ, ಜಿಲ್ಲೆಯಲ್ಲಿ ಸದ್ಯ 65 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಿತ್ತಿವೆ. 36 ಗ್ರಾಮಗಳಿಗೆ ಖಾಸಗಿ ಬೋರ್ವೆಲ್‌ಗಳಿಂದ ನೀರು ಪೂರೈಸಲಾಗುತ್ತಿದೆ. 28 ಗ್ರಾಮಗಳಿಗೆ ಹೊಸದಾಗಿ ಕೊಳವೆಬಾವಿ ಕೊರೆಯಿಸಿ ನೀರು ಪೂರೈಸಲಾಗುತ್ತಿದೆ. 1 ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲೂ ನೀರಿನ ಅಭಾವ ಹೆಚ್ಚಾಗುವ ಸಾಧ್ಯತೆಗಳಿದ್ದು, ಈಗಲೇ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿ ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ವಿರಾಟ್ ಕೊಹ್ಲಿ ನೋಡಿದ ಖುಷಿಯಲ್ಲಿ ಏಟುಗಳು ಬಿದ್ರು ನೋವಾಗಲಿಲ್ಲ: ಕೊಹ್ಲಿ ಅಭಿಮಾನಿ ಮಾತು

    ಈಗಾಗಲೇ ನಾವು ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದ್ದೇವೆ. ನೀರಿನ ಸಮಸ್ಯೆ ಎದುರಿಸಬಹುದಾದ ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಗುರುತಿಸಿ, ಮಾಲೀಕರೊಂದಿಗೆ ಎಸ್.ಡಿ.ಆರ್.ಎಫ್ ನಿಯಮಾವಳಿ ಅನ್ವಯ ಒಡಂಬಡಿಕೆ ಮಾಡಿಕೊಳ್ಳಬೇಕು. ತೀವ್ರ ಬರ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಟೆಂಡರ್ ಪ್ರಕ್ರಿಯೆಗಳ ಸಮಸ್ಯೆ ತಕ್ಷಣ ಬಗೆಹರಿಸಿಕೊಳ್ಳಬೇಕು. ಅದಕ್ಕೆ ಸೂಕ್ತ ಟಾಸ್ಕ್‌ ಫೋರ್ಸ್‌ ರಚಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಕೈಯಲ್ಲಿದೆ 55,000 ಕ್ಯಾಶ್‌ – ‘ಕೈ’ ಸಂಸದನ ಆಸ್ತಿ ಎಷ್ಟು ಗೊತ್ತಾ?

    ಅಲ್ಲದೇ ದುರಸ್ತಿ ಇರುವ ಪೈಪ್‌ಲೈನ್‌ಗಳನ್ನು ತಕ್ಷಣವೇ ದುರಸ್ತಿಗೊಳಿಸಿ, ನೀರು ಪೋಲಾಗದಂತೆ ಎಚ್ಚಕೆ ವಹಿಸಬೇಕು. ವಿವಿಧ ಜಲಾಶಯ ಹಾಗೂ ನದಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪಂಪ್‌ಸೆಟ್‌ಗಳ ಮೂಲಕ ನೀರು ಎತ್ತುವುದನ್ನು ತಡೆಯಬೇಕು. ಆಯಾ ತಹಸಿಲ್ದಾರರು, ವಿದ್ಯುತ್ ಇಲಾಖೆಯ ಅಧಿಕಾರಿಗಳು ತಕ್ಷಣ ಹಾಗೂ ತೀವ್ರ ನಿಗಾ ಇಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ, ಯಾವುದೇ ಪರಿಸ್ಥಿತಿಯಲ್ಲೂ ಜನ ಜಾನವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: 2ನೇ ಬಾರಿಗೆ ಆರ್‌ಸಿಬಿ ದಾಖಲೆ ನುಚ್ಚುನೂರು – ಐಪಿಎಲ್‌ ಇತಿಹಾಸದಲ್ಲಿ ಮತ್ತೊಂದು ವಿಶೇಷ ಸಾಧನೆ

  • ಕುಡಿಯುವ ನೀರಿಗಾಗಿ ಸಹೋದರ ಸಂಬಂಧಿಗಳ ಜಗಳ – ಕೊಲೆಯಲ್ಲಿ ಅಂತ್ಯ

    ಕುಡಿಯುವ ನೀರಿಗಾಗಿ ಸಹೋದರ ಸಂಬಂಧಿಗಳ ಜಗಳ – ಕೊಲೆಯಲ್ಲಿ ಅಂತ್ಯ

    ಯಾದಗಿರಿ: ಕುಡಿಯುವ ನೀರಿನ ವಿಚಾರಕ್ಕೆ ಸಹೋದರ ಸಂಬಂಧಿಗಳ ನಡುವೆ ಶುರುವಾದ ಜಗಳ ಯುವಕನ ಹತ್ಯೆಯಲ್ಲಿ ಅಂತ್ಯವಾಗಿರುವುದು ಹುಣಸಗಿಯಲ್ಲಿ (Hunasagi) ನಡೆದಿದೆ.

    ನಗರದ ನಂದಕುಮಾರ್ ಕಟ್ಟಿಮನಿ (21) ಕೊಲೆಯಾದ ಯುವಕ. ನಂದಕುಮಾರ್‌ನ ಚಿಕ್ಕಪ್ಪನ ಮಗ ಹನುಮಂತ ಹಾಗೂ ಆತನ ತಾಯಿ ಹನುಮವ್ವ ಕೊಲೆಗೈದ ಆರೋಪಿಗಳಾಗಿದ್ದಾರೆ. ಇಬ್ಬರ ಮನೆಯ ಬಳಿ ಸರ್ಕಾರದ ಕುಡಿಯುವ ನೀರಿನ ನಲ್ಲಿ ಇದೆ. ಈ ನೀರನ್ನು ಎರಡೂ ಕುಟುಂಬದವರೂ ಬಳಸಿಕೊಳ್ಳುತ್ತಿದ್ದರು. ಎಂದಿನಂತೆ ಇಂದು ಸಹ ಹತ್ಯೆಯಾದ ನಂದಕುಮಾರ್‌ನ ಅಜ್ಜಿ ನೀರಿಗೆ ಹೋಗಿದ್ದಾಗ ಎರಡೂ ಕುಟುಂಬದ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಭರ್ಜರಿ ಕಾರ್ಯಾಚರಣೆಯಲ್ಲಿ 5 ಕೆಜಿ ಚಿನ್ನಾಭರಣ ಜಪ್ತಿ!

    ಹತ್ಯೆಯಾದ ನಂದಕುಮಾರ್, ಪದವಿ ಪರೀಕ್ಷೆ ಮುಗಿಸಿ ಬಂದ ಬಳಿಕ ಆತನ ಅಜ್ಜಿ ಜಗಳದ ವಿಚಾರ ತಿಳಿಸಿದ್ದು, ಇದನ್ನು ಪ್ರಶ್ನಿಸಲು ಹೋಗಿದ್ದಾಗ ಬಟನ್ ಚಾಕುವಿನಿಂದ ಆರೋಪಿಗಳು ಇರಿದಿದ್ದಾರೆ ಎಂದು ತಿಳಿದು ಬಂದಿದೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ನಂದಕುಮಾರ್‍ನನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಸಾವಿಗೀಡಾಗಿದ್ದಾನೆ.

    ಸ್ಥಳಕ್ಕೆ ಎಸ್‍ಪಿ ಜಿ.ಸಂಗೀತಾ, ಡಿವೈಎಸ್‍ಪಿ ಜಾವೇದ್ ಇನಾಮ್ದಾರ್, ಹುಣಸಗಿ ಸಿಪಿಐ ಸಚಿನ್ ಛಲವಾದಿ, ಪಿಎಸ್‍ಐ ಸಂಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು ಕೆಫೆ ಬ್ಲಾಸ್ಟ್‌ ಕೇಸ್‌ – NIAಯಿಂದ ಮತ್ತಿಬ್ಬರು ವಶಕ್ಕೆ

  • ಸುರಪುರ ಉಪಚುನಾವಣೆ; ಬಿಜೆಪಿಯಿಂದ ಮಾಜಿ ಶಾಸಕ ರಾಜುಗೌಡ ಕಣಕ್ಕೆ

    ಸುರಪುರ ಉಪಚುನಾವಣೆ; ಬಿಜೆಪಿಯಿಂದ ಮಾಜಿ ಶಾಸಕ ರಾಜುಗೌಡ ಕಣಕ್ಕೆ

    ಯಾದಗಿರಿ: ಜಿಲ್ಲೆಯ ಸುರಪುರ (Surapura) ವಿಧಾನಸಭೆಗೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ (BJP) ಇಂದು ತನ್ನ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿದೆ. ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹನಾಯಕ ರಾಜುಗೌಡ (Raju Gowda) ಅವರಿಗೆ ಟಿಕೆಟ್ ನೀಡಿದೆ.

    ನಿರೀಕ್ಷೆಯಂತೆ ರಾಜುಗೌಡಗೆ ಬಿಜೆಪಿ ಪಕ್ಷ ಸುರಪುರ ಉಪಚುನಾವಣೆ ಟಿಕೆಟ್ ನೀಡಿದೆ. ಕಾಂಗ್ರೆಸ್‌ನ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆ ಸುರಪುರಕ್ಕೆ ಉಪಚುನಾವಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮೋದಿ.. ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಿರಿ: ಕಾಂಗ್ರೆಸ್‌ ಸಚಿವರ ಹೇಳಿಕೆಗೆ ಬಿಜೆಪಿ ಕಿಡಿ

    ಫೆಬ್ರವರಿ 25ರಂದು ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದು, ಕಾಂಗ್ರೆಸ್‌ನಿಂದ ರಾಜಾ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದಾರೆ. ಇತ್ತ ಬಿಜೆಪಿಯಿಂದ ಮಾಜಿ ಶಾಸಕ ರಾಜುಗೌಡ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಮೇ 7ರಂದು ಮತದಾನ ನಡೆಯಲಿದೆ. ಇದನ್ನೂ ಓದಿ: ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ – ಅಧಿಕೃತ ಘೋಷಣೆ ಮಾತ್ರ ಬಾಕಿ

  • ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನದ ಸುದ್ದಿ ಕೇಳಿ ಹೃದಯಾಘಾತದಿಂದ ಅಭಿಮಾನಿ ಸಾವು

    ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನದ ಸುದ್ದಿ ಕೇಳಿ ಹೃದಯಾಘಾತದಿಂದ ಅಭಿಮಾನಿ ಸಾವು

    ಯಾದಗಿರಿ: ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Naik) ಅವರ ನಿಧನದ ಸುದ್ದಿ ಕೇಳುತ್ತಲೇ ಅವರ ಅಭಿಮಾನಿಯೊಬ್ಬರು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಸುರಪುರದ ಮಂಗಳೂರು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಹಣಮಂತ, ರಾಜಾ ವೆಂಕಟಪ್ಪ ಅವರ ಅಭಿಮಾನಿಯಾಗಿದ್ದರು. ಮೃತ ಹಣಮಂತ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕರ ಅಪ್ಪಟ ಅಭಿಮಾನಿಯಾಗಿದ್ದರು. ಇನ್ನೂ ಶಾಸಕರ ಸಾವಿನ ಸುದ್ದಿ ಕೇಳುತ್ತಲೇ ಅವರಿಗೆ ಹೃದಯಾಘಾತವಾಗಿದೆ. ಇದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಾಲಿವುಡ್ ನಿರ್ಮಾಪಕ ಕುಮಾರ್ ಶಹಾನಿ ನಿಧನ

    ಶಾಸಕ ರಾಜಾ ವೆಂಕಟಪ್ಪ ನಾಯಕ (67) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣದಿಂದ ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಫೆಬ್ರವರಿ 1 ರಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ಅವರು, ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದರು. ಎಸ್‍ಟಿ ಮೀಸಲು ವಿಧಾನಸಭಾ ಕ್ಷೇತ್ರವಾದ ಸುರಪುರದಿಂದ ಒಟ್ಟು 7 ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿ, 4 ಬಾರಿ ಗೆದ್ದಿದ್ದರು. ಇದನ್ನೂ ಓದಿ: ನಂಬಿ ಬಂದವಳ ಬಿಟ್ಟು ಮತ್ತೊಬ್ಬಳ ಕೈಹಿಡಿದ ಪತಿ – ಅಂತರ್ಜಾತಿ ವಿವಾಹವಾಗಿದ್ದ ಮಹಿಳೆ ‌ನೇಣಿಗೆ ಶರಣು