Tag: Yamunotri

  • ಉತ್ತರಾಖಂಡದಲ್ಲಿ 250 ರೂ. ತಲುಪಿದ ಟೊಮೆಟೋ ದರ- ಗ್ರಾಹಕರು ಕಂಗಾಲು

    ಉತ್ತರಾಖಂಡದಲ್ಲಿ 250 ರೂ. ತಲುಪಿದ ಟೊಮೆಟೋ ದರ- ಗ್ರಾಹಕರು ಕಂಗಾಲು

    ಡೆಹ್ರಾಡೂನ್: ದೇಶದಲ್ಲಿ ಟೊಮೆಟೋ (Tomato)  ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಅದೇ ರೀತಿ ಉತ್ತರಾಖಂಡದಲ್ಲಿ (Uttarakhand) ಟೊಮೆಟೋ ಕೆಜಿಗೆ 200-250 ರೂ. ಆಗಿದ್ದು, ಬೆಲೆ ಏರಿಕೆಯಿಂದ ಗ್ರಾಹಕರು ಹೈರಾಣಾಗಿದ್ದಾರೆ.

    ಉತ್ತರಕಾಶಿಯಲ್ಲಿ ಟೊಮೆಟೋ ಅತ್ಯಂತ ದುಬಾರಿಯಾಗಿದ್ದು, ಗಂಗೋತ್ರಿ (Gangotri) ಮತ್ತು ಯಮುನೋತ್ರಿಯಲ್ಲಿ (Yamunotri) ಕೆಜಿಗೆ 200-250 ರೂ. ಇದೆ. ಇದರಿಂದ ಗ್ರಾಹಕರು (Customers) ಸಂಕಷ್ಟಕ್ಕೆ ಸಿಲುಕಿದ್ದು, ಟೊಮೆಟೋ ಖರೀದಿಸಲು ಮುಂದಾಗುತ್ತಿಲ್ಲ ಎಂದು ತರಕಾರಿ ಮಾರಾಟಗಾರ ರಾಕೇಶ್ ತಿಳಿಸಿದ್ದಾರೆ. ಇದನ್ನೂ ಓದಿ: ಧಾರಾಕಾರ ಮಳೆಗೆ ಉಡುಪಿಯಲ್ಲಿ ಮತ್ತೊಂದು ಬಲಿ

    ಕಳೆದ ವರ್ಷ ಸುರಿದ ಭಾರೀ ಮಳೆಯ ಪರಿಣಾಮ ಹಲವೆಡೆ ಟೊಮೆಟೋ ಬೆಳೆಗಳು ನಾಶವಾಗಿದ್ದವು. ಇದರಿಂದ ಪೂರೈಕೆ ಸರಪಳಿಯಲ್ಲಿ ಅಡಚಣೆಗಳು ಉಂಟಾಗಿದ್ದು, ತರಕಾರಿಗಳ ದರ ತೀವ್ರ ಏರಿಕೆಯಾಗಿದೆ ಎಂದು ಹಲವರು ಹೇಳುತ್ತಾರೆ. ಅಲ್ಲದೇ ಟೊಮೆಟೋ ಅಲ್ಪಾವಧಿಯ ತರಕಾರಿಯಾದ್ದರಿಂದ ಪ್ರತಿ ವರ್ಷ ಈ ಸಮಯದಲ್ಲಿ ಬೆಲೆ ಏರಿಕೆಯಾಗುತ್ತದೆ. ಇದನ್ನೂ ಓದಿ: ರಾಯಚೂರಿನಲ್ಲಿ ಮಳೆಯಿಲ್ಲದೆ ಒಣಗುತ್ತಿರೋ ಬೆಳೆ- ಜಾನುವಾರು ಬಿಟ್ಟು ಬೆಳೆ ತಿನ್ನಿಸಿದ ರೈತರು

    ಚೆನ್ನೈನಲ್ಲಿ (Chennai) ಟೊಮೆಟೋ ಬೆಲೆ ಕೆಜಿಗೆ 110-130 ರೂ. ಇದೆ. ಬೆಲೆ ಏರಿಕೆಯ ನಡುವೆ ತಮಿಳುನಾಡು (Tamil Nadu) ಸರ್ಕಾರ ಗ್ರಾಹಕರಿಗೆ ಸಹಾಯ ಮಾಡುವ ಸಲುವಾಗಿ ಚೆನ್ನೈನ ಪಡಿತರ ಅಂಗಡಿಗಳಲ್ಲಿ ಪ್ರತಿ ಕೆಜಿಗೆ 60 ರೂ. ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಾಟ ಮಾಡಲು ಪ್ರಾರಂಭಿಸಿದೆ. ಇದನ್ನೂ ಓದಿ: ಉತ್ತರಕನ್ನಡದಲ್ಲಿ ಮಳೆಯಬ್ಬರಕ್ಕೆ ನಡೆದುಕೊಂಡು ಹೋಗ್ತಿದ್ದ ಇಬ್ಬರು ನೀರುಪಾಲು

    ಕರ್ನಾಟಕದಲ್ಲೂ (Karnataka) ಟೊಮೆಟೋ ಬೆಲೆ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ (Bengaluru) ಪ್ರಸ್ತುತ ಟೊಮೆಟೋ ದರ ಕೆಜಿಗೆ 101-121 ರೂ.ಗೆ ಮಾರಾಟವಾಗುತ್ತಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ತಾಪಮಾನ ಏರಿಕೆಯಾಗುವುದರಿಂದ ತರಕಾರಿಗಳ ದರ ಹೆಚ್ಚಾಗುತ್ತದೆ. ಅಲ್ಲದೇ ಟೊಮೆಟೋ ಬೆಳೆಗಳನ್ನು ಕ್ರಿಮಿ ಕೀಟಗಳು ನಾಶಪಡಿಸಿದರೆ ಸಾಮಾನ್ಯವಾಗಿ ಬೆಲೆ ಏರಿಕೆಯಾಗುತ್ತದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಟೊಮೆಟೊ ಆಯ್ತು.. ಈಗ ಶುಂಠಿ, ಹಸಿರು ಮೆಣಸಿನಕಾಯಿ ಬೆಲೆಯಲ್ಲೂ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಮುನೋತ್ರಿಗೆ ತೆರಳುತ್ತಿದ್ದ ಬಸ್ ಪಲ್ಟಿ – 17 ಯಾತ್ರಾರ್ಥಿಗಳ ಸಾವು

    ಯಮುನೋತ್ರಿಗೆ ತೆರಳುತ್ತಿದ್ದ ಬಸ್ ಪಲ್ಟಿ – 17 ಯಾತ್ರಾರ್ಥಿಗಳ ಸಾವು

    ಡೆಹರಾಡೂನ್: ಬಸ್ಸೊಂದು ಆಯಾತಪ್ಪಿ ಕಂದಕಕ್ಕೆ ಉರುಳಿದ್ದು, ಬಸ್‍ನಲ್ಲಿ ಸಂಚರಿಸುತ್ತಿದ್ದ 17 ಮಂದಿ ಸಾವನ್ನಪ್ಪಿ, 6 ಜನ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ದಮ್ಟಾ ಬಳಿ ನಡೆದಿದೆ.

    ಬಸ್‍ನಲ್ಲಿ ಮಧ್ಯಪ್ರದೇಶದ 40 ಯಾತ್ರಾರ್ಥಿಗಳು ತೆರಳುತ್ತಿದ್ದರು. 17 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಪೊಲೀಸರು ಮತ್ತು ಎಸ್‍ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿವೆ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಿಂದ ಉತ್ತರಕಾಶಿಗೆ ತೆರಳುತ್ತಿದ್ದ ಬಸ್ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ದಮ್ತಾ ಬಳಿ ಹಳ್ಳಕ್ಕೆ ಬಿದ್ದಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಟೋಲ್ ಪ್ಲಾಜಾ ನೌಕರರ ಮೇಲೆ ಬಿಜೆಪಿ ಮುಖಂಡನ ಗೂಂಡಾ ವರ್ತನೆ

    ಅಪಘಾತದ ನಂತರ ಸ್ಥಳದಲ್ಲಿ ಎಲ್ಲರೂ ಭಯಭೀತರಾಗಿದ್ದರು. ಬಸ್ಸೊಂದು ಕಂದಕಕ್ಕೆ ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ತರಾತುರಿಯಲ್ಲಿ ಸ್ಥಳಕ್ಕೆ ತಲುಪಿದರು. ಇದಾದ ನಂತರ ರಕ್ಷಣಾ ಕಾರ್ಯ ಆರಂಭವಾಯಿತು. ಪ್ರಾಥಮಿಕ ಮಾಹಿತಿ ಪ್ರಕಾರ ಅಪಘಾತದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ. ಎಲ್ಲಾ ಯಾತ್ರಾರ್ಥಿಗಳು ಯಮುನೋತ್ರಿಗೆ ತೆರಳಿದ್ದರು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಸಂಬಂಧದ ವಿಚಾರ ಗೊತ್ತಾಗಿ ನೋವಿನಿಂದ ಗಲಾಟೆ ಮಾಡಿದ್ದು ನಿಜ, ಆದ್ರೆ ಕೊಲೆ ಮಾಡಿಲ್ಲ: ಅನಂತರಾಜು ಪತ್ನಿ