Tag: Yash pal suvarna

  • ಶಿಕ್ಷಣದ ಪರ ತೀರ್ಪು ಬರಬಹುದು: ಯಶ್ ಪಾಲ್ ಸುವರ್ಣ ವಿಶ್ವಾಸ

    ಶಿಕ್ಷಣದ ಪರ ತೀರ್ಪು ಬರಬಹುದು: ಯಶ್ ಪಾಲ್ ಸುವರ್ಣ ವಿಶ್ವಾಸ

    ಉಡುಪಿ: ಹಿಜಬ್ ಕುರಿತಂತೆ ಕಾಲೇಜು ಆಡಳಿತ ಮಂಡಳಿ ಪರವಾಗಿ ತೀರ್ಪು ಬರಬಹುದು. ಯಾವುದೇ ಧಾರ್ಮಿಕ ಆಚರಣೆಗೆ ಶಿಕ್ಷಣ ಸಂಸ್ಥೆಯಲ್ಲಿ ಅವಕಾಶ ಇಲ್ಲ. ಕೆಲ ಮತಾಂದ ಶಕ್ತಿಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಮಸ್ಯೆ ಆಯ್ತು ಎಂದು ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು.

    ಉಡುಪಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್‍ನ ಮಧ್ಯಂತರ ತೀರ್ಪಿನಲ್ಲಿ ಉಲ್ಲೇಖ ಆಗಿದೆ. ಮತಾಂಧ ಶಕ್ತಿಗಳ, ದೇಶದ್ರೋಹಿ ಸಂಘಟನೆಯ ಕುಮ್ಮಕ್ಕಿನಿಂದ ವಿವಾದ ವ್ಯಾಪಿಸಿತು. ಒಂದು ಕಾಲೇಜಿನ ವಿಚಾರ ದೇಶ ಮಟ್ಟದಲ್ಲಿ ಚರ್ಚೆ ಆಯಿತು. ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಿಜಾಬ್ ವಿವಾದದಿಂದ ಸಮಸ್ಯೆಯಾಗಿದೆ. ಹೈಕೋರ್ಟ್ ಶಿಕ್ಷಣಕ್ಕೆ ಒತ್ತು ಕೊಡುವ ತೀರ್ಪು ಕೊಡುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಧಾರ್ಮಿಕ ಆಚರಣೆ ಶಿಕ್ಷಣಕ್ಕಿಂತ ಮುಖ್ಯ ಅಲ್ಲ: ಕೋರ್ಟ್ ತೀರ್ಪು ಏನೇ ಬಂದರೂ ನಾವು ಅದನ್ನು ಸ್ವೀಕರಿಸುತ್ತೇವೆ. ಎಲ್ಲರೂ ನಮ್ಮ ಸಂವಿಧಾನಬದ್ಧ ಕಾನೂನನ್ನ ಗೌರವಿಸಬೇಕು. ಧಾರ್ಮಿಕ ಆಚರಣೆಗಳು ಶಿಕ್ಷಣಕ್ಕಿಂತ ಮುಖ್ಯ ಅಲ್ಲ. ದೇಶದ ಅಭಿವೃದ್ಧಿ ಚಿಂತನೆಯಲ್ಲಿ ಶಿಕ್ಷಣ ಅತಿಮುಖ್ಯ. ಧಾರ್ಮಿಕ ಆಚರಣೆಗೆ ಶಿಕ್ಷಣ ಸಂಸ್ಥೆಯಲ್ಲಿ ಸೀಮಿತ ಅವಕಾಶ ಇರಬೇಕು. ನಮಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಎಲ್ಲಾ ಅವಕಾಶಗಳು ಇವೆ. ಸಂವಿಧಾನಾತ್ಮಕ ವಿಚಾರ ಆಗಿರುವುದರಿಂದ ರಾಜ್ಯದಲ್ಲೇ ಸೂಕ್ತ ತೀರ್ಪು ಬರಬಹುದು. ಸುಪ್ರೀಂಕೋರ್ಟ್ ಮೆಟ್ಟಿಲೇರಿದರೂ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಎತ್ತಿ ಹಿಡಿಯುವ ಸಾಧ್ಯತೆ ಹೆಚ್ಚು ಎಂದರು. ಇದನ್ನೂ ಓದಿ:  ಹಿಜಬ್ ವಿವಾದ- ಈ ಹಿಂದೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಹೇಗಿತ್ತು ವಾದ-ಪ್ರತಿವಾದ..?

    ಹಿಜಬ್ ವಿವಾದ ಶಿಕ್ಷಣ ವ್ಯವಸ್ಥೆಗೆ ಕೊಳ್ಳಿ ಇಡುವ ಬೆಳವಣಿಗೆ. ಆರು ಜನ ವಿದ್ಯಾರ್ಥಿನಿಯರು ಬಲಿಪಶುವಾಗಿದ್ದಾರೆ. ದೇಶದ್ರೋಹಿ ಸಂಘಟನೆಗಳು ವಿದ್ಯಾರ್ಥಿಗಳ ಶಿಕ್ಷಣವನ್ನು ಕಸಿದಿವೆ. ಕ್ಷುಲ್ಲಕ ಕಾರಣಕ್ಕೆ ಇಡೀ ರಾಜ್ಯದಲ್ಲಿ ಗೊಂದಲ ಸೃಷ್ಟಿಯಾಯಿತು ಎಂದು ಕಿಡಿಕಾರಿದರು. ಇದನ್ನೂ ಓದಿ: ತೀರ್ಪು ಏನೇ ಬಂದ್ರೂ ಗೌರವಿಸಿ, ಶಾಂತಿ ಕಾಪಾಡಿ: ಗೃಹ ಸಚಿವರ ಮನವಿ

    ಹಿಜಬ್ ವಿಚಾರದ ತೀರ್ಪು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಂದ ಪೋನ್ ಕರೆ ಬಂದಿದ್ದು, ಯಶ್ ಪಾಲ್ ಸುವರ್ಣ ಬೆಂಗಳೂರಿಗೆ ಹೊರಟಿದ್ದಾರೆ.

  • ಉಡುಪಿ- ಚಿಕ್ಕಮಗಳೂರು ಲೋಕಸಭಾ ಟಿಕೆಟ್ ಮೀನುಗಾರ ಮುಖಂಡ ಯಶ್ ಪಾಲ್‍ಗೆ ನೀಡಿ..!

    ಉಡುಪಿ- ಚಿಕ್ಕಮಗಳೂರು ಲೋಕಸಭಾ ಟಿಕೆಟ್ ಮೀನುಗಾರ ಮುಖಂಡ ಯಶ್ ಪಾಲ್‍ಗೆ ನೀಡಿ..!

    – ಬಿಜೆಪಿ ಕಾರ್ಯಕರ್ತರ ಒತ್ತಾಯ

    ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಹೊಸ ಅಭ್ಯರ್ಥಿಯ ಹೆಸರು ಕೇಳಿಬಂದಿದೆ. ತೀವ್ರ ವಿರೋಧದ ನಡುವೆಯೂ ಶೋಭಾ ಕರಂದ್ಲಾಜೆ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದರೂ ಕೂಡ ಮೀನುಗಾರ ಸಮುದಾಯದ ಮುಖಂಡರ ಹೆಸರು ಬಿಜೆಪಿ ವಲಯದಲ್ಲಿ ಓಡಾಡುತ್ತಿದೆ.

    ಉಡುಪಿ-ಚಿಕ್ಕಮಗಳೂರಿಗೆ ಜಯಪ್ರಕಾಶ್ ಹೆಗ್ಡೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸಬೇಕು ಎಂಬ ಒತ್ತಾಯವೂ ಇಲ್ಲಿ ಜೋರಾಗಿ ಕೇಳಿಬರುತ್ತಿದೆ. ಎರಡೂ ಬಣಗಳ ಲಾಬಿಯೂ ಜೋರಾಗಿರುವಾಗಲೇ ಯಶ್ ಪಾಲ್ ಸುವರ್ಣ ಹೆಸರು ಈ ನಡುವೇ ಪ್ರಸ್ತಾಪವಾಗುತ್ತಿದೆ. ಮೊಗವೀರ ಮುಖಂಡ ಯಶಪಾಲ್ ಸುವರ್ಣ ಅವರು ಸಂಘ ಪರಿವಾರದ ಹಿನ್ನೆಲೆ ಇರುವ ಮೀನುಗಾರಿಕಾ ಫೆಡರೇಷನ್‍ನ ನಾಯಕನಾಗಿದ್ದಾರೆ. ಹಾಗೆಯೇ ಮೀನುಗಾರ ಸಮುದಾಯದ ಮುಂಚೂಣಿ ಮುಖಂಡ ಎನಿಸಿದ್ದಾರೆ.

    ಶೋಭಾ ಕರಂದ್ಲಾಜೆ ಅವರು ರಾಜ್ಯ ರಾಜಕಾರಣಕ್ಕೆ ಮರಳಲು ಬಯಸಿದರೆ, ಯಶಪಾಲ್ ಹೆಸರನ್ನು ಮುಂಚೂಣಿಗೆ ತರಲು ಕಾರ್ಯಕರ್ತರು ಉತ್ಸುಕತೆ ತೋರಿದ್ದಾರೆ. ಆರ್.ಎಸ್.ಎಸ್ ನಾಯಕ ಬಿ.ಎಲ್.ಸಂತೋಷ್ ಅವರ ಮೂಲಕ ಒತ್ತಾಯ ಹೇರಲು ತಯಾರಿಗಳು ನಡೆಯುತ್ತಿವೆ. ಜಯಪ್ರಕಾಶ್ ಹೆಗ್ಡೆಯನ್ನು ಒಪ್ಪದ ಬಿಜೆಪಿ ಮುಖಂಡರು ಶೋಭಾ ಕರಂದ್ಲಾಜೆ ಬದಲಾಗಿ ಯಶ್ ಪಾಲ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿ ಎಂದು ಜನರು ಹೇಳಿದ್ದಾರೆ. ಶೋಭಾ ಕರಂದ್ಲಾಜೆಗೆ ರಾಜ್ಯ ರಾಜಕಾರಣದಲ್ಲಿ ಉನ್ನತ ಸ್ಥಾನ ಕೊಡುವ ಮೂಲಕ ಸ್ಪರ್ಧೆಯಿಂದ ಹಿಂದಕ್ಕೆ ಸರಿಯಲು ಸೂಚಿಸುವ ಸಾಧ್ಯತೆ ಇದೆ ಎಂದು ಕರಾವಳಿಯ ಬಿಜೆಪಿ ವಲಯದಲ್ಲಿ ಚರ್ಚೆಯಾಗುತ್ತಿದೆ. ವಾಟ್ಸಾಪ್, ಫೇಸ್‍ಬುಕ್‍ನಲ್ಲಿ ಇಂತಹ ಸಂದೇಶ ಹರಿದಾಡುತ್ತಿದೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಯಶ್ ಪಾಲ್ ಸುವರ್ಣ, ನಾನೊಬ್ಬ ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಹೋರಾಟದಿಂದ ಬಂದವನು. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡು ಪಕ್ಷ ಬಲವರ್ಧನೆಗೆ ಹಗಲು ರಾತ್ರಿ ದುಡಿದಿದ್ದೇನೆ. ದೇಶ ಸೇವೆ, ಜನಸೇವೆ ಮಾಡಬೇಕೆಂಬ ಉದ್ದೆಶದಿಂದ ಮದುವೆಯಾಗದೆ ಬ್ರಹ್ಮಚಾರಿಯಾಗಿದ್ದೇನೆ. ಜೀವದ ಕೊನೆಯ ಉಸಿರು ಇರೋವರೆಗೆ ಜನರ ಕಷ್ಟ ಸುಖದ ಜೊತೆ ಇರುತ್ತೇನೆ. ಪಕ್ಷ, ನಾಯಕರು ಅವಕಾಶ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv