Tag: Yashwant Sinha

  • ದ್ರೌಪದಿ ಮುರ್ಮುಗೆ ಗೆಲುವು – ಯಾರಿಗೆ ಎಷ್ಟು ಮತ?

    ದ್ರೌಪದಿ ಮುರ್ಮುಗೆ ಗೆಲುವು – ಯಾರಿಗೆ ಎಷ್ಟು ಮತ?

    ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ ಅಧಿಕೃತವಾಗಿದೆ. ಈ ಮೂಲಕ ಭಾರತದ ಬುಡಕಟ್ಟು ಜನಾಂಗದ ಮೊದಲ ರಾಷ್ಟ್ರಪತಿಯಾಗಿದ್ದಾರೆ. ದೇಶದ ದ್ವಿತೀಯ ಮಹಿಳಾ ರಾಷ್ಟ್ರಪತಿ ಎಂಬ ಖ್ಯಾತಿಗೂ ಒಳಗಾಗಿದ್ದಾರೆ.

    ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲಲು 5,43,000 ಮತಗಳ ಅಗತ್ಯವಿತ್ತು. ಆದರೆ ಮುರ್ಮು ಪರವಾಗಿ 6,76,803 ಮತ ಅಂದರೆ ಶೇ.64ರಷ್ಟು ಮತಗಳು ಚಲಾವಣೆಯಾಗಿದ್ದರೆ ಯಶವಂತ್‌ ಸಿನ್ಹಾ ಪರವಾಗಿ 3,80,177 ಮತಗಳು ಅಂದರೆ ಶೇ.35.97 ರಷ್ಟು ಮತಗಳು ಚಲಾವಣೆಯಾಗಿದೆ.

    ಗೆಲುವು ಖಚಿತ ಪಡೆಸಿಕೊಂಡ ಮುರ್ಮು, ಭಾರತ ಸ್ವತಂತ್ರ್ಯ ನಂತರ ಜನಿಸಿ ರಾಷ್ಟ್ರಪತಿ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಇದೇ ಜುಲೈ 25ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಯಾರಿಗೂ ಭಯಪಡದೆ ಸಂವಿಧಾನದ ಪಾಲಕರಾಗಬೇಕು: ದ್ರೌಪದಿ ಮುರ್ಮುಗೆ ಅಭಿನಂದಿಸಿದ ಯಶವಂತ್ ಸಿನ್ಹಾ

    ದ್ರೌಪದಿ ಮುರ್ಮ ಗೆಲುವಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ಕೇಂದ್ರ ಸಚಿವರು ಅಭಿನಂದನೆ ತಿಳಿಸಿದ್ದಾರೆ. ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು, ಮಹಿಳಾ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು.

    64 ವರ್ಷದ ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಗೆಲ್ಲುವುದು ಮೊದಲೇ ಖಚಿತವಾಗಿದ್ದ ಕಾರಣ ಅವರ ಹುಟ್ಟೂರು ಒಡಿಶಾದ ಉಪರ್ಪೇಡ ಗ್ರಾಮದಲ್ಲಿ ಗುರುವಾರ ಬೆಳಗ್ಗೆಯಿಂದಲೇ ಸಂಭ್ರಮ ಮನೆ ಮಾಡಿತ್ತು. ಸಂತಾಲ್ ಸಮುದಾಯದ ಸಾಂಪ್ರದಾಯಿಕ ನೃತ್ಯ ಕೋಯಾ ಶೈಲಿಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಪಟಾಕಿ ಹಚ್ಚಿ ಸಂಭ್ರಮಿಸಿದ್ದಾರೆ. ಮುರ್ಮು ಅವರು ವಾಸವಿರುವ ರಾಯ್‍ರಂಗಪುರದಲ್ಲಿಯೂ ಸಂಭ್ರಮ ಮನೆ ಮಾಡಿದೆ.

    ದ್ರೌಪದಿ ಮುರ್ಮು ಯಾರು?
    1958ರ ಜೂನ್‌ 20 ರಂದು ಒಡಿಶಾದ ಉಪರ್ಪೆಡದಲ್ಲಿ ಜನಿಸಿದ ದ್ರೌಪದಿ ಮುರ್ಮು ಆರಂಭದಲ್ಲಿ ಶಾಲಾ ಶಿಕ್ಷಕಿ ಮತ್ತು ನೀರಾವರಿ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದರು. ಬಿಜೆಪಿ ಮೂಲಕ ರಾಜಕೀಯ ಪ್ರವೇಶ ಮಾಡಿದ ಇವರು 1997ರಲ್ಲಿ ರಾಯ್‍ರಂಗಪುರ ಪುರಸಭೆ ಸದಸ್ಯೆಯಾದರು. ಬಳಿಕ ಬಿಜೆಪಿ ಬುಡಕಟ್ಟು ಮೋರ್ಚಾ ಉಪಾಧ್ಯಕ್ಷೆಯಾಗಿದ್ದ ಮುರ್ಮು ಒಡಿಶಾದ ಬಿಜೆಪಿ-ಬಿಜೆಡಿ ಮೈತ್ರಿ ಸರ್ಕಾರದಲ್ಲಿ ಸಚಿವೆಯಾಗಿದ್ದರು. 6 ವರ್ಷ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಪತಿ ಶ್ಯಾಂ ಚರಣ್ ಮುರ್ಮು ಮತ್ತು ಇಬ್ಬರು ಗಂಡು ಮಕ್ಕಳು ವಿಧಿವಶರಾಗಿದ್ದು ಪುತ್ರಿ ಇತಿಶ್ರೀ ಮುರ್ಮು ಇದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯಾರಿಗೂ ಭಯಪಡದೆ ಸಂವಿಧಾನದ ಪಾಲಕರಾಗಬೇಕು: ದ್ರೌಪದಿ ಮುರ್ಮುಗೆ ಅಭಿನಂದಿಸಿದ ಯಶವಂತ್ ಸಿನ್ಹಾ

    ಯಾರಿಗೂ ಭಯಪಡದೆ ಸಂವಿಧಾನದ ಪಾಲಕರಾಗಬೇಕು: ದ್ರೌಪದಿ ಮುರ್ಮುಗೆ ಅಭಿನಂದಿಸಿದ ಯಶವಂತ್ ಸಿನ್ಹಾ

    ನವದೆಹಲಿ: ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆ ಸೋಲಿನ ಬೆನ್ನಲ್ಲೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದರು.

    ಪ್ರಕಟಣೆಯಲ್ಲಿ ಏನಿದೆ?
    2022ರ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ದ್ರೌಪದಿ ಮುರ್ಮು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಭಾರತದ 15ನೇ ರಾಷ್ಟ್ರಪತಿಯಾಗಿ ಅವರು ಭಯಪಡದೆ ಸಂವಿಧಾನದ ಪಾಲಕರಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ನಿಜವಾಗಿ, ಪ್ರತಿಯೊಬ್ಬ ಭಾರತೀಯನೂ ಇದನ್ನೇ ಆಶಿಸುತ್ತಾರೆ. ನಾನು ದ್ರೌಪದಿ ಮುರ್ಮು ಅವರಿಗೆ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ಇದನ್ನೂ ಓದಿ: 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ – ದೇಶದ ಪ್ರಥಮ ಪ್ರಜೆಯಾದ ಬುಡಕಟ್ಟು ಮಹಿಳೆ

    Presidential Polls 2022: Yashwant Sinha says 'no personal fight with Droupadi Murmu', but... | India News | Zee News

    ಈ ಚುನಾವಣೆಯಲ್ಲಿ ನನ್ನನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ವಿರೋಧ ಪಕ್ಷದ ರಾಜಕೀಯ ಪಕ್ಷಗಳ ನಾಯಕರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ. ನನಗೆ ಮತ ಹಾಕಿದ ಎಲೆಕ್ಟೋರಲ್ ಕಾಲೇಜಿನ ಎಲ್ಲ ಸದಸ್ಯರಿಗೂ ನಾನು ಧನ್ಯವಾದ ಹೇಳುತ್ತೇನೆ. ಭಗವದ್ಗೀತೆಯಲ್ಲಿ ಭಗವಾನ್ ಕೃಷ್ಣನು ಬೋಧಿಸಿದ ಕರ್ಮಯೋಗದ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ‘ಫಲವನ್ನು ನಿರೀಕ್ಷಿಸದೆ ನಿಮ್ಮ ಕರ್ತವ್ಯವನ್ನು ಮಾಡಿ’ ವಿರೋಧ ಪಕ್ಷಗಳ ಪ್ರಸ್ತಾಪವನ್ನು ನಾನು ಸ್ವೀಕರಿಸಿದೆ. ನನ್ನ ದೇಶದ ಮೇಲಿನ ಪ್ರೀತಿಯಿಂದ ನಾನು ನನ್ನ ಕರ್ತವ್ಯವನ್ನು ಆತ್ಮಸಾಕ್ಷಿಯಾಗಿ ನಿರ್ವಹಿಸಿದ್ದೇನೆ.

    ಚುನಾವಣೆಯ ಫಲಿತಾಂಶದ ಹೊರತಾಗಿಯೂ, ಇದು ಭಾರತೀಯ ಪ್ರಜಾಪ್ರಭುತ್ವಕ್ಕೆ ಎರಡು ಪ್ರಮುಖ ರೀತಿಯಲ್ಲಿ ಪ್ರಯೋಜನವನ್ನು ನೀಡಿದೆ ಎಂದು ನಾನು ನಂಬುತ್ತೇನೆ. ಮೊದಲನೆಯದಾಗಿ, ಇದು ಹೆಚ್ಚಿನ ವಿರೋಧ ಪಕ್ಷಗಳನ್ನು ಸಾಮಾನ್ಯ ವೇದಿಕೆಗೆ ತಂದಿತು. ಅಧ್ಯಕ್ಷೀಯ ಚುನಾವಣೆಯ ಆಚೆಗೆ ಪ್ರತಿಪಕ್ಷಗಳ ಏಕತೆಯನ್ನು ಮುಂದುವರಿಸಲು – ವಾಸ್ತವವಾಗಿ, ಮತ್ತಷ್ಟು ಬಲಪಡಿಸಲು ನಾನು ಅವರಿಗೆ ಶ್ರದ್ಧೆಯಿಂದ ಮನವಿ ಮಾಡುತ್ತೇನೆ. ಉಪಾಧ್ಯಕ್ಷರ ಚುನಾವಣೆಯಲ್ಲೂ ಅದು ಸ್ಪಷ್ಟವಾಗಿ ಗೋಚರಿಸಬೇಕು.


    ಎರಡನೆಯದಾಗಿ, ನನ್ನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ರಾಷ್ಟ್ರ ಮತ್ತು ಸಾಮಾನ್ಯ ಜನರ ಮುಂದೆ ಪ್ರಮುಖ ವಿಷಯಗಳ ಬಗ್ಗೆ ವಿರೋಧ ಪಕ್ಷಗಳ ಅಭಿಪ್ರಾಯಗಳು, ಕಾಳಜಿಗಳು ಮತ್ತು ಬದ್ಧತೆಗಳನ್ನು ಎತ್ತಿ ತೋರಿಸಲು ನಾನು ಪ್ರಯತ್ನಿಸಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ವಿರೋಧ ಪಕ್ಷಗಳು ಮತ್ತು ಅವರ ನಾಯಕರ ವಿರುದ್ಧ ಇಡಿ, ಸಿಬಿಐ, ಆದಾಯ ತೆರಿಗೆ ಇಲಾಖೆ ಮತ್ತು ರಾಜ್ಯಪಾಲರ ಕಚೇರಿಯ ಅಬ್ಬರದ ಮತ್ತು ಅತಿರೇಕದ ಶಸ್ತ್ರಾಸ್ತ್ರಗಳ ಬಗ್ಗೆ ನಾನು ತೀವ್ರ ಕಳವಳ ವ್ಯಕ್ತಪಡಿಸಿದೆ. ಇದನ್ನೂ ಓದಿ: ನೆರೆ ರಾಜ್ಯ ಕೇರಳದಲ್ಲಿ ಮಂಕಿಪಾಕ್ಸ್‌ ಪ್ರಕರಣ; ಕರ್ನಾಟಕದಲ್ಲಿ ಹೈ ಅಲರ್ಟ್‌ – ಮಾರ್ಗಸೂಚಿ ಪ್ರಕಟ

    ಈ ಸಂಸ್ಥೆಗಳನ್ನು ಇಂಜಿನಿಯರ್‌ಗಳ ಪಕ್ಷಾಂತರ ಮತ್ತು ಪ್ರತಿಪಕ್ಷಗಳ ಆಡಳಿತದಲ್ಲಿರುವ ರಾಜ್ಯ ಸರ್ಕಾರಗಳನ್ನು ಉರುಳಿಸಲು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಷ್ಟು ಪ್ರಮಾಣದ ರಾಜಕೀಯ ಭ್ರಷ್ಟಾಚಾರವನ್ನು ಭಾರತ ಎಂದೂ ಕಂಡಿರಲಿಲ್ಲ. ಇದು, ಧ್ರುವೀಕರಣದ ವಿಷಪೂರಿತ ರಾಜಕೀಯದೊಂದಿಗೆ ಸೇರಿಕೊಂಡು, ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಕೋಮು ಸೌಹಾರ್ದಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತದೆ.

    ನಾನು ಭೇಟಿ ನೀಡಿದ ಎಲ್ಲ ರಾಜ್ಯಗಳ ಸಿಎಂ, ನಾಯಕರು, ಸಂಸದರು ಮತ್ತು ವಿರೋಧ ಪಕ್ಷಗಳಿಗೆ ಸೇರಿದ ಶಾಸಕರಲ್ಲಿ ನನ್ನ ಅಭಿಪ್ರಾಯಗಳು ಬಲವಾದ ಅನುರಣನವನ್ನು ಕಂಡುಕೊಂಡಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಸಾಮಾನ್ಯ ಜನರು ಕೂಡ ಈ ಅಭಿಪ್ರಾಯಗಳನ್ನು ಬೆಂಬಲಿಸಿದ್ದಾರೆ.

    ಅಂತಿಮವಾಗಿ, ನನ್ನ ದೇಹದಲ್ಲಿ ಕೊನೆಯ ಉಸಿರು ಇರುವವರೆಗೂ, ನಾನು ನಂಬಿದ ಉದ್ದೇಶಕ್ಕಾಗಿ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ – ದೇಶದ ಪ್ರಥಮ ಪ್ರಜೆಯಾದ ಬುಡಕಟ್ಟು ಮಹಿಳೆ

    15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ – ದೇಶದ ಪ್ರಥಮ ಪ್ರಜೆಯಾದ ಬುಡಕಟ್ಟು ಮಹಿಳೆ

    ನವದೆಹಲಿ: ದೇಶದ ಪ್ರಥಮ ಪ್ರಜೆಯಾಗಿ ಇದೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ. ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನಿರೀಕ್ಷೆಗಿಂತ ಹೆಚ್ಚು ಮತ ಪಡೆದು 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

    ಪ್ರತಿಸ್ಪರ್ಧಿ, ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಿರೀಕ್ಷೆಯಂತೆ ಸೋಲು ಕಂಡಿದ್ದಾರೆ. ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ, ವಿಪಕ್ಷ ನಾಯಕರು ಸೇರಿ ಹಲವರು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಗುಜರಾತ್‍ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ವಿದ್ಯುತ್ ಉಚಿತ ಪೂರೈಕೆ ಭರವಸೆ ನೀಡಿದ ಕೇಜ್ರಿವಾಲ್

    ಜುಲೈ 24ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರಾವಧಿ ಅಂತ್ಯಗೊಳ್ಳಲಿದ್ದು, ಜುಲೈ 25 ರಂದು ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ರೈಸಿನಾ ಹಿಲ್ ಪ್ರದೇಶದಲ್ಲಿರುವ ರಾಷ್ಟ್ರಪತಿ ಭವನವನ್ನು ಪ್ರವೇಶ ಮಾಡಲಿದ್ದಾರೆ. ಈ ಮೂಲಕ ದೇಶದ ಚರಿತ್ರೆಯಲ್ಲಿಯೇ ರಾಷ್ಟ್ರಪತಿಯಾದ ಎರಡನೇ ಮಹಿಳೆ ಎಂಬ ಗರಿಮೆಗೆ ದ್ರೌಪದಿ ಮುರ್ಮು ಅವರು ಭಾಜನರಾಗಿದ್ದಾರೆ. ಫಲಿತಾಂಶಕ್ಕೆ ಮೊದಲೇ ಮುರ್ಮು ಗೆಲುವು ಖಚಿತವಾಗಿತ್ತು. 44 ಪಕ್ಷಗಳು ಮುರ್ಮುರನ್ನು ಬೆಂಬಲಿಸಿದ್ದವು. ವಿಪಕ್ಷಗಳ ಹಲವು ಶಾಸಕರು, ಸಂಸದರು ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿದ್ದರು. ಗೆಲುವಿಗೆ ಶೇ.50ಕ್ಕಿಂತ ಹೆಚ್ಚಿನ ಮತಗಳನ್ನು ಪಡೆದು ಗೆಲುವು ದಾಖಲಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಇದನ್ನೂ ಓದಿ: ಗುಜರಾತ್‍ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ವಿದ್ಯುತ್ ಉಚಿತ ಪೂರೈಕೆ ಭರವಸೆ ನೀಡಿದ ಕೇಜ್ರಿವಾಲ್

    ದ್ರೌಪದಿ ಮುರ್ಮು ಪಡೆದ ಮತ:
    ಮೊದಲ ಸುತ್ತು (ಸಂಸದರ ಮತಮೌಲ್ಯ 700) ಚಲಾವಣೆಯಾದ ಸಂಸದರ ಮತ – 763 – ಮತ ಮೌಲ್ಯ – 5,34,100
    ದ್ರೌಪದಿ ಮುರ್ಮು – 540 – ಮತ ಮೌಲ್ಯ – 3,78,000
    ಯಶವಂತ್‌ ಸಿನ್ಹಾ – 208 – ಮತ ಮೌಲ್ಯ – 1,45,600
    ಅನರ್ಹ ಮತ – 15 – ಮತ ಮೌಲ್ಯ – 10,500

    2ನೇ ಸುತ್ತು (ಶಾಸಕರ ಮತ ಮೌಲ್ಯ 130.56) ಚಲಾವಣೆಯಾದ ಶಾಸಕರ ಮತ – 1,138 – ಮತ ಮೌಲ್ಯ – 1,49,575
    ದ್ರೌಪದಿ ಮುರ್ಮು – 809 – ಮತ ಮೌಲ್ಯ – 1,05,299
    ಯಶವಂತ್ ಸಿನ್ಹಾ – 329 – ಮತ ಮೌಲ್ಯ – 44,276
    ಅನರ್ಹ ಮತ – 00 – ಮತ ಮೌಲ್ಯ – 00

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಚುನಾವಣೆ ಇಂದು ಫಲಿತಾಂಶ ಪ್ರಕಟ – ದ್ರೌಪದಿ ಮುರ್ಮು ಗ್ರಾಮದಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ

    ರಾಷ್ಟ್ರಪತಿ ಚುನಾವಣೆ ಇಂದು ಫಲಿತಾಂಶ ಪ್ರಕಟ – ದ್ರೌಪದಿ ಮುರ್ಮು ಗ್ರಾಮದಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ

    ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು ಮಧ್ಯಾಹ್ನದ ಹೊತ್ತಿಗೆ ಪ್ರಕಟಗೊಳ್ಳಲಿದೆ. ಜುಲೈ 18ರಂದು ಮತದಾನ ನಡೆದಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಮತದಾನ ಎಣಿಕೆ ಕಾರ್ಯ ಆರಂಭವಾಗಲಿದೆ.

    ರಾಷ್ಟ್ರಪತಿ ಹುದ್ದೆಗೆ ಎನ್‍ಡಿಎಯಿಂದ ದ್ರೌಪದಿ ಮುರ್ಮು, ವಿಪಕ್ಷಗಳಿಂದ ಯಶವಂತ್‌ ಸಿನ್ಹಾ ಅವರನ್ನ ಕಣಕ್ಕಿಳಿಸಲಾಗಿತ್ತು. ಲೆಕ್ಕಾಚಾರದ ಪ್ರಕಾರ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಬಹುತೇಕ ವಿಜಯಶಾಲಿ ಆಗಲಿದ್ದಾರೆ.

    ಮುರ್ಮು ಅವರಿಗೆ ಎನ್‍ಡಿಎ ಪಕ್ಷಗಳಲ್ಲದೇ, ಬಿಜೆಡಿ, ಟಿಡಿಪಿ, ವೈಎಸ್‍ಆರ್‌ಪಿ, ಜೆಡಿಎಸ್, ಬಿಎಸ್‍ಪಿ, ಅಕಾಲಿದಳ, ಶಿವಸೇನೆ, ಜೆಎಂಎಂ ಬೆಂಬಲ ನೀಡಿವೆ. ಅಲ್ಲದೇ, ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಕೆಲ ಸದಸ್ಯರಿಂದ ಅಡ್ಡಮತದಾನ ಕೂಡ ಆಗಿದೆ ಎನ್ನಲಾಗಿದೆ. ಅಲ್ಲದೆ ಬುಡಕಟ್ಟು ಜನಾಂಗದ ಮಹಿಳೆಯೊರ್ವರನ್ನ ಎನ್‍ಡಿಎ ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿಯನ್ನಾಗಿಸಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌- ಇಂದು ಇಡಿ ಮುಂದೆ ಹಾಜರಾಗಲಿದ್ದಾರೆ ಸೋನಿಯಾ

    ಒಡಿಶಾದ ಮಯೂರ್‍ಭಂಜ್ ಜಿಲ್ಲೆಯ ಉಪರ್‍ಬೇಡಾ ಗ್ರಾಮದಲ್ಲಿ ಸಮುದಾಯದವರು ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇಡೀ ಗ್ರಾಮವನ್ನು ಸ್ವಚ್ಛಗೊಳಿಸಿ, ಮನೆ ಮನೆಗಳನ್ನು ತಳಿರು-ತೋರಣಗಳಿಂದ ಸಿಂಗಾರ ಮಾಡಲಾಗಿದೆ. ಫಲಿತಾಂಶ ಬಳಿಕ ಸಾಂಪ್ರದಾಯಿಕ ನೃತ್ಯವೂ ನಡೆಯಲಿದೆ.

    ಬುಡಕಟ್ಟು ಸಮುದಾಯದ ಮೊದಲ, ಅತಿಕಿರಿಯ ವಯಸ್ಸಿನ ಹಾಗೂ ಸ್ವಾತಂತ್ರ್ಯಾ ನಂತರ ಜನಿಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ದ್ರೌಪದಿ ಮುರ್ಮು ಪಾತ್ರರಾಗಲಿದ್ದಾರೆ. ಇದೇ 24ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರವಧಿ ಕೊನೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಈ ಚುನಾವಣೆ ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ನಿರ್ಧರಿಸುತ್ತೆ: ಯಶವಂತ್ ಸಿನ್ಹಾ

    ಈ ಚುನಾವಣೆ ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ನಿರ್ಧರಿಸುತ್ತೆ: ಯಶವಂತ್ ಸಿನ್ಹಾ

    ನವದೆಹಲಿ: ಈ ಚುನಾವಣೆ ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ನಿರ್ಧರಿಸುತ್ತೆ ಎಂದು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಹೇಳಿದರು.

    ಭಾರತದ 15ನೇ ರಾಷ್ಟ್ರಪತಿಯಾಗಲು ಚುನಾವಣೆ ರೇಸ್‍ನಲ್ಲಿ ದ್ರೌಪದಿ ಮುರ್ಮು ಮತ್ತು ಯಶವಂತ್ ಸಿನ್ಹಾ ಅವರು ಇದ್ದಾರೆ. ಇಂದು ರಾಷ್ಟ್ರಪತಿ ಚುನಾವಣೆ ನಡೆಯುತ್ತಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ. ಜುಲೈ 25 ರಂದು ನೂತನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಚುನಾವಣೆ ವೇಳೆ ಯಶವಂತ್ ಸಿನ್ಹಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಈ ಚುನಾವಣೆಯು ಅತ್ಯಂತ ಮಹತ್ವದ್ದಾಗಿದೆ. ದೇಶದ ಪ್ರಜಾಪ್ರಭುತ್ವಕ್ಕೆ ಈ ಚುನಾವಣೆ ಮಾರ್ಗವಾಗಿದೆ. ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ಸಂವಿಧಾನವನ್ನು ರಕ್ಷಿಸಲು ಎಲ್ಲ ರಾಜಕೀಯ ಪಕ್ಷಗಳು ನನ್ನ ಪರವಾಗಿ ಮತ ಚಲಾಯಿಸುತ್ತವೆ ಎಂದು ನಾನು ಭಾವಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ 

    ನಾನು ಕೇವಲ ರಾಜಕೀಯ ಯುದ್ಧದಲ್ಲಿ ಹೋರಾಡುತ್ತಿಲ್ಲ. ಆದರೆ ಸರ್ಕಾರಿ ಸಂಸ್ಥೆಗಳ ವಿರುದ್ಧವೂ ಹೋರಾಟ ಮಾಡುತ್ತಿದ್ದೇನೆ. ಅವರು ತುಂಬಾ ಶಕ್ತಿಶಾಲಿಯಾಗಿದ್ದಾರೆ, ಹಣದಿಂದ ಎಲ್ಲರನ್ನು ಆಟವಾಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ನಮ್ಮ ಸಂವಿಧಾನದ ಪೂರ್ವ ಸ್ತಂಭವಾದ ಜಾತ್ಯತೀತತೆಯನ್ನು ರಕ್ಷಿಸಲು ನಾನು ನಿಂತಿದ್ದೇನೆ. ನನ್ನ ಪ್ರತಿಸ್ಪರ್ಧಿ ಅಭ್ಯರ್ಥಿಯು ಈ ಸ್ತಂಭವನ್ನು ನಾಶಪಡಿಸುವ ಮತ್ತು ಬಹುಮತದ ಪ್ರಾಬಲ್ಯವನ್ನು ಸಾಧಿಸಲು ನಿಂತಿದ್ದಾರೆ ಎಂದು ಟೀಕಿಸಿದರು.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಚುನಾವಣೆ- ವ್ಹೀಲ್ ಚೇರ್‌ನಲ್ಲಿ ಬಂದು ಮತ ಹಾಕಿದ ಮನಮೋಹನ್ ಸಿಂಗ್

    ರಾಷ್ಟ್ರಪತಿ ಚುನಾವಣೆ- ವ್ಹೀಲ್ ಚೇರ್‌ನಲ್ಲಿ ಬಂದು ಮತ ಹಾಕಿದ ಮನಮೋಹನ್ ಸಿಂಗ್

    ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವ್ಹೀಲ್ ಚೇರ್‌ನಲ್ಲಿ ಆಗಮಿಸಿ ಮತ ಚಲಾಯಿಸಿದರು.

    ಭಾರತದ ನೂತನ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಇಂದು ದೇಶಾದ್ಯಂತ ಸಂಸತ್ತಿನಲ್ಲಿ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ರಹಸ್ಯ ಮತದಾನದ ಮೂಲಕ ಮತದಾನ ನಡೆಯಿತು. ಈ ಸಂದರ್ಭದಲ್ಲಿ 89 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಂಸತ್ ಭವನಕ್ಕೆ ವ್ಹೀಲ್ ಚೇರ್ ಮೂಲಕ ಬಂದು ಮತವನ್ನು ಹಾಕಿದರು. ಅವರಿಗೆ ಮತ ಚಲಾಯಿಸಲು ನಾಲ್ವರು ಅಧಿಕಾರಿಗಳು ಸಹಾಯ ಮಾಡಿದರು.

    ಈ ವೀಡಿಯೋವನ್ನು ಕಾಂಗ್ರೆಸ್‍ನ ಅನೇಕ ನಾಯಕರು ಹಂಚಿಕೊಂಡಿದ್ದು, ಮನಮೋಹನ್ ಸಿಂಗ್ ಅವರು ಆದಷ್ಟು ಬೇಗ ಉತ್ತಮ ಆರೋಗ್ಯವನ್ನು ಮರಳಿ ಪಡೆಯಲಿ. ಅವರನ್ನು ಈ ರೀತಿ ನೋಡಲು ಬೇಸರವಾಗಿದೆ ಎಂದಿದ್ದಾರೆ.

    ಆರೋಗ್ಯ ಹದಗೆಟ್ಟಿದ್ದರೂ ಪ್ರಜಾಸತ್ತಾತ್ಮಕ ಜವಾಬ್ದಾರಿಯನ್ನು ಪೂರೈಸಲು ಸಂಸತ್ತನ್ನು ತಲುಪಿದ ಮನಮೋಹನ್ ಸಿಂಗ್ ಅವರು ನಮಗೆಲ್ಲ ಸ್ಫೂರ್ತಿಯಾಗಿದ್ದಾರೆ. ದೇವರು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ.ಶ್ರೀನಿವಾಸ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಿಗೂ ವೋಟು ಹಾಕಲ್ಲ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ ಅಕಾಲಿ ದಳ ಶಾಸಕ

    ರಾಷ್ಟ್ರಪತಿ ಆಯ್ಕೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿದ್ದಾರೆ. ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇ.60ರಷ್ಟು ಮತಗಳೊಂದಿಗೆ ಗೆಲ್ಲುವುದು ಬಹುತೇಕ ಖಚಿತವಾಗಿದೆ. ದ್ರೌಪದಿ ಮುರ್ಮು ಅವರ ಅಭ್ಯರ್ಥಿಗೆ ಹಲವಾರು ಪ್ರಾದೇಶಿಕ ಪಕ್ಷಗಳು ತಮ್ಮ ಬೆಂಬಲವನ್ನು ಘೋಷಿಸಿರುವುದರಿಂದ ಒಟ್ಟು ಮತಗಳಲ್ಲಿ ಸುಮಾರು 62 ಪ್ರತಿಶತದಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ಮತ ಚಲಾಯಿಸಿದ ಪ್ರಧಾನಿ ಮೋದಿ

    Live Tv
    [brid partner=56869869 player=32851 video=960834 autoplay=true]

  • ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಿಗೂ ವೋಟು ಹಾಕಲ್ಲ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ ಅಕಾಲಿ ದಳ ಶಾಸಕ

    ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಿಗೂ ವೋಟು ಹಾಕಲ್ಲ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ ಅಕಾಲಿ ದಳ ಶಾಸಕ

    ಚಂಡೀಗಢ: ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಅಕಾಲಿ ದಳ ಪಕ್ಷ ತನ್ನ ಸದಸ್ಯರಿಗೆ ಸೂಚಿಸಿತ್ತು. ಆದರೆ ಪಕ್ಷದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಶಾಸಕರೊಬ್ಬರು ರಾಷ್ಟ್ರಪತಿ ಚುನಾವಣೆಯನ್ನೇ ಬಹಿಷ್ಕರಿಸಿದ್ದಾರೆ.

    ಅಕಾಲಿ ದಳ ಪಕ್ಷದ ಶಾಸಕ ಮನ್‌ಪ್ರೀತ್‌ ಸಿಂಗ್‌ ಆಯಲಿ ಚುನಾವಣೆ ಬಹಿಷ್ಕರಿಸಿದ್ದು, ನಾನು ದ್ರೌಪದಿ ಮುರ್ಮು ಹಾಗೂ ಯಶವಂತ್‌ ಸಿನ್ಹಾ ಇಬ್ಬರಿಗೂ ವೋಟು ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ಮತ ಚಲಾಯಿಸಿದ ಪ್ರಧಾನಿ ಮೋದಿ

    ಈ ಕುರಿತು ಫೇಸ್‌ಬುಕ್‌ನಲ್ಲಿ ವೀಡಿಯೋ ಹಂಚಿಕೊಂಡಿರುವ ಶಾಸಕ, 1984ರ ಸಿಖ್ ಹತ್ಯಾಕಾಂಡದ ಹೊಣೆ ಹೊತ್ತಿರುವ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ಸಾಧ್ಯವಿಲ್ಲ. ಪಂಜಾಬ್‌ನ ಸಮಸ್ಯೆಗಳನ್ನು ಬಗೆಹರಿಸುವ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ನನಗೆ ನಂಬಿಕೆ ಇಲ್ಲ ಎಂದು ಅಯಾಲಿ ಹೇಳಿದ್ದಾರೆ.

    ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಅವರು ಪಂಜಾಬ್‌ನ ಸಮಸ್ಯೆಗಳನ್ನು ಪರಿಹರಿಸಲಿಲ್ಲ. ಇದು ಸ್ವಾರ್ಥವೋ ಅಥವಾ ಇನ್ನೇನೋ ಗೊತ್ತಿಲ್ಲ ಎಂದು ಬಿಜೆಪಿ ವಿರುದ್ಧವೂ ಕಿಡಿಕಾರಿದ್ದಾರೆ.

    ಸಿಖ್ ಸಮುದಾಯದ ಭಾವನೆಗಳು, ಪಂಜಾಬ್‌ನ ಸಮಸ್ಯೆಗಳು ಮತ್ತು ನನ್ನ ಆತ್ಮಸಾಕ್ಷಿಯ ಧ್ವನಿಯನ್ನು ಆಲಿಸಿ ನಾನು ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗೆ ಮತ ಹಾಕುತ್ತಿಲ್ಲ ಎಂದು ಆಯಲಿ ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ರಾಷ್ಟ್ರಪತಿ ಚುನಾವಣೆ – ಜು.25ಕ್ಕೆ ಪ್ರಮಾಣವಚನ

    ದ್ರೌಪದಿ ಮುರ್ಮು ಅವರು ಬುಡಕಟ್ಟು ಸಮುದಾಯದಿಂದ ಬಂದವರು. ಅವರ ವಿಚಾರವಾಗಿ ನನಗೆ ಯಾವುದೇ ಸಮಸ್ಯೆಯಿಲ್ಲ. ಆದರೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಸಿಖ್‌ ಕೈದಿಗಳ ಬಿಡುಗಡೆ, ಚಂಡೀಗಢದ ಮೇಲೆ ಪಂಜಾಬ್‌ನ ಹಕ್ಕುಗಳು ಮತ್ತು ಸಟ್ಲೇಜ್-ಯಮುನಾ ಜೋಡಣೆ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇಂದು ರಾಷ್ಟ್ರಪತಿ ಚುನಾವಣೆ – ಜು.25ಕ್ಕೆ ಪ್ರಮಾಣವಚನ

    ಇಂದು ರಾಷ್ಟ್ರಪತಿ ಚುನಾವಣೆ – ಜು.25ಕ್ಕೆ ಪ್ರಮಾಣವಚನ

    ನವದೆಹಲಿ/ಬೆಂಗಳೂರು: ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ ನಡೆಯಲಿದೆ. 4,800 ಚುನಾಯಿತ ಸಂಸದರು ಮತ್ತು ಶಾಸಕರು ಮತದಾನ ಮಾಡಲಿದ್ದಾರೆ.

    ಸಂಸತ್ ಭವನ ಮತ್ತು ರಾಜ್ಯ ವಿಧಾನಸೌಧಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಜುಲೈ 21ಕ್ಕೆ ಫಲಿತಾಂಶ ಪ್ರಕಟವಾಗಲಿದ್ದು, ಜುಲೈ 25ಕ್ಕೆ ಹೊಸ ರಾಷ್ಟ್ರಪತಿ ಪ್ರಮಾಣ ಸ್ವೀಕರಿಸಲಿದ್ದಾರೆ.

    ಎನ್‍ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿದ್ದಾರೆ. ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇ.60ರಷ್ಟು ಮತಗಳೊಂದಿಗೆ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಇದನ್ನೂ ಓದಿ: ಬುಡಕಟ್ಟು ವಿರೋಧಿ ಎಂದು ಬ್ಯಾನರ್ಜಿ ವಿರುದ್ಧ 50,000 ಪೋಸ್ಟರ್‌ ಹಾಕಿದ ಬಿಜೆಪಿ

    ಎನ್‍ಡಿಎ ಜೊತೆಗೆ ಬುಡಕಟ್ಟು ಮಹಿಳೆ ಎನ್ನುವ ಕಾರಣಕ್ಕೆ ಪ್ರಾದೇಶಿಕ ಪಕ್ಷಗಳಾದ ಬಿಜೆಡಿ, ವೈಎಸ್‍ಆರ್‌ಪಿಸಿ, ಬಿಎಸ್‍ಪಿ, ಎಐಎಡಿಎಂಕೆ, ಟಿಡಿಪಿ, ಜೆಡಿಎಸ್, ಶಿರೋಮಣಿ ಅಕಾಲಿದಳ, ಶಿವಸೇನೆ ಬೆಂಬಲ ನೀಡಿವೆ. ಒಟ್ಟು 10,86,431 ಮತಗಳ ಪೈಕಿ ವಿವಿಧ ಪ್ರಾದೇಶಿಕ ಪಕ್ಷಗಳ ಬೆಂಬಲದ ನಂತರ ಎನ್‍ಡಿಎ ಅಭ್ಯರ್ಥಿ ಪರ 6.67 ಲಕ್ಷಕ್ಕೂ ಹೆಚ್ಚು ಮತಗಳಿವೆ.

    ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ರಾಜ್ಯದ 224 ಜನ ಶಾಸಕರು ಹಾಗೂ 28 ಜನ ಲೋಕಸಭಾ ಸದಸ್ಯರು ಮತದಾನ ಮಾಡಲಿದ್ದಾರೆ. ಬಿಜೆಪಿ ಶಾಸಕರು ಒಟ್ಟಾಗಿ ನೇರವಾಗಿ ವಿಧಾನಸೌಧಕ್ಕೆ ಬಂದು ಮತದಾನ ಮಾಡಲಿದ್ದಾರೆ.

    ಕಾಂಗ್ರೆಸ್ ಶಾಸಕರಿಗೆ ನಿಗದಿತ ಸಮಯದೊಳಗೆ ಬಂದು ಮತದಾನ ಮಾಡುವಂತೆ ಸೂಚನೆ ನೀಡಲಾಗಿದೆ. ಈ ಮಧ್ಯೆ, ಆಗಸ್ಟ್ 6ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕ ಮೂಲದ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾರನ್ನು ಆಯ್ಕೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸೋಮವಾರ ದೇಶದ 15ನೇ ರಾಷ್ಟ್ರಪತಿ ಚುನಾವಣೆ – ಜುಲೈ 21ಕ್ಕೆ ಮತ ಎಣಿಕೆ

    ಸೋಮವಾರ ದೇಶದ 15ನೇ ರಾಷ್ಟ್ರಪತಿ ಚುನಾವಣೆ – ಜುಲೈ 21ಕ್ಕೆ ಮತ ಎಣಿಕೆ

    ನವದೆಹಲಿ: ದೇಶದ ಪ್ರಥಮ ಪ್ರಜೆ ಆಯ್ಕೆ ರಾಷ್ಟ್ರಪತಿ ಚುನಾವಣೆ ನಾಳೆ ನಡೆಯಲಿದೆ. ನಾಳೆ 15ನೇ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆಯೋಗ ಎಲ್ಲಾ ತಯಾರಿ ನಡೆಸಿದೆ.

    ರಾಷ್ಟ್ರಪತಿ ಚುನಾವಣೆ ಘೋಷಣೆ ಆಗುವುದಕ್ಕಿಂತ ಮೊದಲು ಎನ್‍ಡಿಎ ಮತ್ತು ವಿಪಕ್ಷಗಳ ಮಧ್ಯೆ ಬಿಗ್ ಫೈಟ್ ನಡೆಯಬಹುದು ಎಂದು ಅಂದಾಜಿಸಲಾಗಿತ್ತು. ಆದ್ರೆ ಆದಿವಾಸಿ ಮಹಿಳೆ ದ್ರೌಪದಿ ಮುರ್ಮುರನ್ನು ಎನ್‍ಡಿಎ ಅಭ್ಯರ್ಥಿ ಆದ ಮೇಲೆ ಪರಿಸ್ಥಿತಿ ಸಂಪೂರ್ಣ ಬದಲಾಗಿ ಹೋಯ್ತು. ಬಿಜೆಪಿ ಮಾತ್ರವಲ್ಲ ಪ್ರಾದೇಶಿಕ ಪಕ್ಷಗಳಲ್ಲಿ ಬಹುತೇಕ ಪಕ್ಷಗಳು ಮುರ್ಮು ಅವರಿಗೆ ಜೈ ಎಂದಿರುವ ಕಾರಣ, ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಕಣದಲ್ಲಿದ್ದರೂ ಚುನಾವಣೆ ಏಕಪಕ್ಷೀಯ ಆಗಲಿದೆ ಎಂಬ ಮಾತು ಕೇಳಿಬಂದಿವೆ. ಇದನ್ನೂ ಓದಿ: ಉಪರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಂಗಳೂರು ಮೂಲದ ಮಾರ್ಗರೇಟ್ ಆಳ್ವ ಆಯ್ಕೆ

    ದ್ರೌಪದಿ ಮುರ್ಮು ಜೊತೆ 44 ಪಕ್ಷಗಳಿದ್ರೆ, ಸಿನ್ಹಾ ಜೊತೆ 34 ಪಕ್ಷಗಳು ನಿಂತಿವೆ. ಎನ್‍ಡಿಎ ಕೂಟದಲ್ಲಿಲ್ಲದ ಬಿಜೆಡಿ, ವೈಎಸ್‍ಆರ್ ಕಾಂಗ್ರೆಸ್, ಶಿವಸೇನೆ, ಜೆಎಂಎಂ, ಟಿಡಿಪಿ, ಬಿಎಸ್‍ಪಿಯಂತಹ ಪಕ್ಷಗಳು ಕೂಡ ಮುರ್ಮುಗೆ ಬೆಂಬಲ ಪ್ರಕಟಿಸಿವೆ. ಇದರೊಂದಿಗೆ ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆ ರಾಷ್ಟ್ರಪತಿ ಆಗುವುದು ಖಚಿತವಾಗಿದೆ. ಮುರ್ಮು ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಳ್ಳುವುದು ಅಧಿಕೃತವಾಗಿ ತಿಳಿಸುವುದೊಂದು ಬಾಕಿ ಇದೆ. ಇದನ್ನೂ ಓದಿ: ಬುಡಕಟ್ಟು ವಿರೋಧಿ ಎಂದು ಬ್ಯಾನರ್ಜಿ ವಿರುದ್ಧ 50,000 ಪೋಸ್ಟರ್‌ ಹಾಕಿದ ಬಿಜೆಪಿ

    ನಾಳೆ ಮತದಾನ ನಡೆಯಲಿದ್ದು, ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ಶಾಸಕರು ಸೇರಿ ಒಟ್ಟು 4,896 ಜನಪ್ರತಿನಿಧಿಗಳು ಈ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಎಲೆಕ್ಟರೋಲ್ ಕಾಲೇಜಿನ ಒಟ್ಟು ಮೌಲ್ಯ 10,86,431 ಇದ್ದು, ಅದ್ರಲ್ಲಿ ಅರ್ಧಕ್ಕಿಂತ ಹೆಚ್ಚು ಮತಗಳನ್ನು ಪಡೆದವರು ವಿಜೇತರಾಗಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮುರ್ಮು ಆರೂವರೆ ಲಕ್ಷಕ್ಕೂ ಹೆಚ್ಚು ಮತ, ಯಶವಂತ ಸಿನ್ಹಾಗೆ ಮೂರೂವರೆ ಲಕ್ಷ ಮತಗಳು ಸಿಗುವ ನಿರೀಕ್ಷೆ ಇದೆ. ಜೂನ್ 21ಕ್ಕೆ ಮತ ಎಣಿಕೆ ನಡೆಯಲಿದೆ. ಪ್ರಸ್ತುತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರಾವಧಿ ಜುಲೈ 24ಕ್ಕೆ ಮುಗಿಯಲಿದೆ. ಜುಲೈ 25ಕ್ಕೆ ನೂತನ ರಾಷ್ಟ್ರಪತಿಗಳು ಅಧಿಕಾರ ಸ್ವೀಕರಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿನ್ಹಾ ಧ್ವನಿ ಕೇಳಿದ್ದೇವೆ, ಆದರೆ ಮುರ್ಮು ಧ್ವನಿಯನ್ನು ಇಲ್ಲಿವರೆಗೂ ಕೇಳಿಲ್ಲ: ತೇಜಸ್ವಿ ಯಾದವ್ ಕಿಡಿ

    ಸಿನ್ಹಾ ಧ್ವನಿ ಕೇಳಿದ್ದೇವೆ, ಆದರೆ ಮುರ್ಮು ಧ್ವನಿಯನ್ನು ಇಲ್ಲಿವರೆಗೂ ಕೇಳಿಲ್ಲ: ತೇಜಸ್ವಿ ಯಾದವ್ ಕಿಡಿ

    ನವದೆಹಲಿ: ನೀವು ಯಶವಂತ್ ಸಿನ್ಹಾ ಅವರ ಧ್ವನಿಯನ್ನು ಕೇಳಿರಬೇಕು. ಆದರೆ ಆಡಳಿತ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯ ಧ್ವನಿಯನ್ನು ನಾವು ಎಂದಿಗೂ ಕೇಳಿಲ್ಲ ಎಂದು ರಾಷ್ಟ್ರೀಯ ಜನತಾ ದಳ(RJD) ನಾಯಕ ತೇಜಸ್ವಿ ಯಾದವ್, ದ್ರೌಪದಿ ಮುರ್ಮು ಅವರನ್ನು ತರಾಟೆಗೆ ತೆಗೆದುಕೊಂಡರು.

    ರಾಷ್ಟ್ರಪತಿ ಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ರಾಷ್ಟ್ರಪತಿ ಭವನದಲ್ಲಿ ಯಾವುದೇ ಪ್ರತಿಮೆ ಬೇಡ. ರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತಿದ್ದೇವೆ. ನೀವು ಯಾವಾಗಲೂ ಯಶವಂತ್ ಸಿನ್ಹಾ ಅವರ ಧ್ವನಿಯನ್ನು ಕೇಳಿರಬೇಕು. ಆದರೆ ಆಡಳಿತ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯ ಧ್ವನಿಯನ್ನು ನಾವು ಎಂದಿಗೂ ಕೇಳಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ದ್ರೌಪದಿ ಮುರ್ಮು ಗೌರವಿಸುತ್ತೇವೆ, ಸಿನ್ಹಾರನ್ನು ಬೆಂಬಲಿಸುತ್ತೇವೆ: ಎಎಪಿ

    ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‍ಡಿಎ ಅಭ್ಯರ್ಥಿಯಾಗಿ ಆಯ್ಕೆಯಾದ ನಂತರ ದ್ರೌಪದಿ ಮುರ್ಮು ಅವರು ಒಂದೇ ಒಂದು ಸುದ್ದಿಗೋಷ್ಠಿ ನಡೆಸಿಲ್ಲ. ನನ್ನ ಪ್ರಕಾರ ನೀವು ಕೂಡ ಅವರ ಧ್ವನಿಯನ್ನು ಕೇಳಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಮಾಧ್ಯಮದವರಿಗೆ ಪ್ರಶ್ನೆ ಕೇಳಿದರು.

    ರಾಷ್ಟ್ರಪತಿ ಚುನಾವಣೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗೆ RJD ಬೆಂಬಲ ಘೋಷಿಸಿದೆ. ಬಿಹಾರದ ಎಡಪಕ್ಷಗಳು ಮತ್ತು ಕಾಂಗ್ರೆಸ್ ಕೂಡ ಅವರಿಗೆ ಬೆಂಬಲ ನೀಡಿವೆ. RJDಯ ಮಿತ್ರ ಪಕ್ಷ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ), ಚುನಾವಣೆಯಲ್ಲಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಹೇಳಿದೆ. ಇದನ್ನೂ ಓದಿ:  ಭಾರೀ ಮಳೆಗೆ ಬೆಳಗಾವಿಯ 13 ಸೇತುವೆಗಳು ಜಲಾವೃತ – ಮತ್ತೆ ಪ್ರವಾಹ ಭೀತಿ 

    Live Tv
    [brid partner=56869869 player=32851 video=960834 autoplay=true]