Tag: yedeyurappa

  • ಕರ್ನಾಟಕ ಬಂದ್ ಕರೆ ನೀಡಿರೋದು ಬಿಜೆಪಿಗೆ ಶೋಭೆ ತರುವಂತದ್ದಲ್ಲ: ಯು.ಟಿ.ಖಾದರ್

    ಕರ್ನಾಟಕ ಬಂದ್ ಕರೆ ನೀಡಿರೋದು ಬಿಜೆಪಿಗೆ ಶೋಭೆ ತರುವಂತದ್ದಲ್ಲ: ಯು.ಟಿ.ಖಾದರ್

    ಮಂಗಳೂರು: ಮೇ28 ರಂದು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವುದು ಬಿಜೆಪಿ ಗೆ ಶೋಭೆ ತರುವಂತದ್ದಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

    ಸಚಿವ ಸಂಪುಟ ಇನ್ನೂ ರಚನೆಯಾಗಿಲ್ಲ. ಸಚಿವ ಸಂಪುಟ ರಚನೆ ಆದ ನಂತರವೇ ಸಾಲ ಮನ್ನಾ ಕುರಿತು ನಿರ್ಧರಿಸಲು ಸಾಧ್ಯವಾಗುವುದು. ಇದು ರಾಜಕೀಯ ಪ್ರೇರಿತ ಬಂದ್ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನನಗೆ ಸಚಿವ ಸ್ಥಾನ ಕೊಡುವ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಐದು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ಇರುತ್ತದೆ. ಯಾವುದೇ ಭಿನ್ನಾಭಿಪ್ರಾಯಗಳು ಎರಡೂ ಪಕ್ಷದಲ್ಲಿ ಇಲ್ಲ ಅಂತಾ ಸ್ಪಷ್ಟಪಡಿಸಿದ್ರು.

    ಜೆಡಿಎಸ್ ಜನತೆಗೆ ನೀಡಿದ ಆಶ್ವಾಸನೆಯಂತೆ ಮುಂದಿನ 24 ಗಂಟೆಯೊಳಗೆ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿರುವ 1 ಲಕ್ಷದ ವರೆಗಿನ ರೈತರ ಸಾಲವನ್ನು ಮನ್ನಾ ಮಾಡಬೇಕು ಇಲ್ಲದಿದ್ದಲ್ಲಿ ಮೇ 28, ಸೋಮವಾರದಂದು ಕರ್ನಾಟಕ ಬಂದ್ ಗೆ ಕರೆ ಕೊಡಲಾಗುವುದು ಎಂದು ಬಿಜೆಪಿ ಪ್ರಕಟಿಸಿದೆ.

    ಶುಕ್ರವಾರ ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೋಮವಾರ ಕರ್ನಾಟಕ ಬಂದ್ ಕರೆ ನೀಡಿ ಹೊರ ಬಂದಿದ್ದರು. ವಿಧಾನಸೌಧದ ಹೊರಗೆ ಬಂದ ನಂತರವೂ ಕರ್ನಾಟಕ ಬಂದ್ ಗೆ ಕರೆ ನೀಡಲಾಗುವುದು ಅಂತಾ ತಿಳಿಸಿದ್ದರು. ಆದ್ರೆ ಇಂದು ಬೆಳಗ್ಗೆ ಬಂದ್ ಗೆ ಕರೆ ನೀಡಿರೋದು ಬಿಜೆಪಿ ಅಲ್ಲ, ರೈತರು. ನಾಡಿನ ರೈತರಿಗೆ ನಾವೆಲ್ಲ ಬೆಂಬಲ ನೀಡುತ್ತಿದ್ದೇವೆ ಅಂತಾ ಮಾತು ಬದಲಿಸಿದ್ದಾರೆ.

  • ಕೋಮುವಾದಿ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಡಲ್ಲ: ಸಿದ್ದರಾಮಯ್ಯ

    ಕೋಮುವಾದಿ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಡಲ್ಲ: ಸಿದ್ದರಾಮಯ್ಯ

    ಬೆಂಗಳೂರು: ಕೋಮುವಾದಿ ಪಕ್ಷವನ್ನು ಅಧಿಕಾರಕ್ಕೆ ತರಲು ನಾವು ಬಿಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಬಿಎಸ್‍ವೈ ರಾಜೀನಾಮೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಾಮ ಮಾರ್ಗದಲ್ಲಿ ಅಧಿಕಾರವನ್ನು ಹಿಡಿಯಲು ಬಿಜೆಪಿಯವರು ಪ್ರಯತ್ನಿಸಿದರೂ ಸೋತಿದ್ದಾರೆ ಎಂದರು.

    ಮೋದಿ ಮತ್ತು ಅಮಿತ್ ಶಾ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡದೇ ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿದ್ದರು. ಕೇಂದ್ರದಲ್ಲಿ ಅಧಿಕಾರ ಇದೆ ಎಂದು ಭಾವಿಸಿ ಇಲ್ಲೂ ಅಧಿಕಾರ ಏರಲು ಪ್ರಯತ್ನಿಸಿದರು. ಆದರೆ ನ್ಯಾಯಾಲಯ ಬಿಡಲಿಲ್ಲ. ಸಿಬಿಐ, ಇಡಿ, ಐಟಿಯನ್ನು ದುರಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು.

    ಬಹುಮತ ಇಲ್ಲದೆ ಇದ್ದರೂ ನಾವೇ ಸರ್ಕಾರ ರಚಿಸುತ್ತೇವೆ ಎಂದು ಹೇಳುವ ಮೂಲಕ ಶಾಸಕರ ಖರೀದಿ ವ್ಯಾಪಾರಕ್ಕೆ ದೇಶದ ಪ್ರಧಾನಿಯೇ ಚಾಲನೆ ನೀಡಿರುವುದು ಪ್ರಜಾಪ್ರಭುತ್ವದ ಕಪ್ಪುಚುಕ್ಕೆ. ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಗೆ ನಡೆದ ಪ್ರಯತ್ನದ ಪ್ರಮುಖ ಆರೋಪಿಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಹಾ. ಒಬ್ಬರು ಹಿಟ್ಲರ್, ಇನ್ನೊಬ್ಬರು ಗೋಬೆಲ್ಸ್. ಇವರ ಆಟ ಕರ್ನಾಟಕದ ನೆಲದಲ್ಲಿ ನಡೆಯದು ಎಂದರು.

    ಬಿಜೆಪಿ ನಾಯಕರ ಸಾಮ-ದಾನ-ಭೇದ-ದಂಡ ಪ್ರಯೋಗಳನ್ನು ಧೈರ್ಯದಿಂದ ಎದುರಿಸಿ ಜನಾದೇಶದ ಗೌರವ ಉಳಿಸಿದ ರಾಜ್ಯದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಅಭಿನಂದನೆಗಳು. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ. ಸಂವಿಧಾನ ವಿರೋಧಿ ಕ್ರಮಗಳಿಂದ ಅಧಿಕಾರ ಪಡೆಯಲು ಬಿಜೆಪಿ ಮಾಡಿದ ಸಂಚು ವಿಫಲಗೊಂಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

     

     

     

  • ಸಿಎಂ ಬಹಿರಂಗ ಚರ್ಚೆ ಸವಾಲು ಸ್ವೀಕರಿಸಿದ ಬಿಎಸ್‍ವೈ: ಚರ್ಚೆಗೆ ಟಾಪಿಕ್ ಟ್ವೀಟ್ ಮಾಡಿ ತಿರುಗೇಟು

    ಸಿಎಂ ಬಹಿರಂಗ ಚರ್ಚೆ ಸವಾಲು ಸ್ವೀಕರಿಸಿದ ಬಿಎಸ್‍ವೈ: ಚರ್ಚೆಗೆ ಟಾಪಿಕ್ ಟ್ವೀಟ್ ಮಾಡಿ ತಿರುಗೇಟು

    ಬೆಂಗಳೂರು: ಬಹಿರಂಗ ಚರ್ಚೆಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಎಸೆದಿದ್ದ ಸವಾಲನ್ನು ಬಿಎಸ್ ಯಡಿಯೂರಪ್ಪ ಸ್ವೀಕರಿಸಿದ್ದಾರೆ.

    ಪ್ರಧಾನಿ ಮೋದಿಯವರು ತಮ್ಮ ಆಧಾರ ರಹಿತ ಹೇಳಿಕೆಗಳ ಮೂಲಕ ಜನರನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನನ್ನ ಪ್ರತಿಸ್ಪರ್ಧಿ ಯಡಿಯೂರಪ್ಪ.ರಾಜ್ಯದ ಅಭಿವೃದ್ಧಿಗಾಗಿ ನಾವುಗಳು ಮಾಡಿರುವ ಕೆಲಸಗಳ ಬಗ್ಗೆ ಜನರ ಸಮ್ಮುಖದಲ್ಲಿ ಬಹಿರಂಗ ಚರ್ಚೆ ಮಾಡೋಣ. ಯಾರು ಉತ್ತಮ ಕೆಲಸ ಮಾಡಿದ್ದೇವೆ ಎನ್ನುವುದನ್ನು ಜನರು ನಿರ್ಧರಿಸಲಿ ಸಿಎಂ ಇಂದು ಟ್ವೀಟ್ ಮಾಡಿ ಸವಾಲು ಎಸೆದಿದ್ದರು.

    ಚರ್ಚೆಗಾಗಿ ನೀವು ತಿಳಿಸಿದ ದಿನ, ಸಮಯ ಮತ್ತು ಸ್ಥಳಕ್ಕೆ ಬರಲು ನಾನು ಸಿದ್ಧ. ಮೋದಿಯವರನ್ನು ಸ್ವಾಗತಿಸುತ್ತೇನೆ. ನಿಮ್ಮ ಕರೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

    ಈ ಸವಾಲಿಗೆ ಟ್ವೀಟ್ ಮಾಡಿರುವ ಬಿಎಸ್ ಯಡಿಯೂರಪ್ಪನವರು ಹ್ಯೂಬ್ಲೊಟ್ ವಾಚ್ ಚರ್ಚೆಗೆ ಒಳ್ಳೆಯ ಸಮಯವನ್ನು ಆಯ್ಕೆ ಮಾಡಿದ್ದೀರಿ. ನಿಮ್ಮ ದೇಶಭ್ರಷ್ಟ ಸ್ನೇಹಿತ ವಿಜಯ್ ಈಶ್ವರನ್ ಅನ್ನು ಕರೆದುಕೊಂಡು ಬನ್ನಿ, ಜೊತೆಗೆ ಎಲ್ ಗೋವಿಂದರಾಜು ಅವರ ಡೈರಿಯನ್ನು ತೆಗೆದುಕೊಂಡು ಬನ್ನಿ ಎಂದು ಬರೆದು ಸವಾಲು ಸ್ವೀಕರಿಸಿದ್ದಾರೆ.

    ಲೋಕಾಯುಕ್ತ ಸಂಸ್ಥೆಯನ್ನು ಹಲ್ಲು ಕಿತ್ತ ಹಾವಿನಂತೆ ಮಾಡಿರುವುದು. ರೈತರ ಆತ್ಮಹತ್ಯೆ, ಮರಳು ಮಾಫಿಯಾ, ನಿಷ್ಠಾವಂತ ಅಧಿಕಾರಿಗಳ ವರ್ಗಾವಣೆ ಬಗ್ಗೆ ಚರ್ಚಿಸಲು ಆಸಕ್ತನಾಗಿದ್ದೇನೆ ಎಂದು ಬಿಎಸ್‍ವೈ ಟ್ವೀಟ್ ಮಾಡಿದ್ದಾರೆ.

    ಸಮುದಾಯಗಳನ್ನು ಒಡೆಯುವ ಮತ್ತು ಓಲೈಕೆ ರಾಜಕಾರಣ. ಸರ್ಕಾರದಲ್ಲಿ ಕೆಂಪಯ್ಯನವರ ಹಸ್ತಕ್ಷೇಪ, ಬೆಂಗಳೂರು ಅಭಿವೃದ್ಧಿ ಕುಂಠಿತಗೊಂಡಿರುವುದು, ಕಸದ ಸಮಸ್ಯೆ, ಮಹಿಳೆಯರ ಸುರಕ್ಷತೆ, ಕೆರೆಗಳಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದು. ಆಯ್ದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿರುವುದು. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು, ಐದು ವರ್ಷದ ಆಡಳಿತದಲ್ಲಿ ಅಭಿವೃದ್ಧಿಗೆ ಮಾರಕವಾದ ಸಾಲ, ಭ್ರಷ್ಟಾಚಾರ, ಕ್ರೈಂ ಹೆಚ್ಚಿರುವುದರ ಕುರಿತು ನಿಮ್ಮಿಂದ ತಿಳಿಯಲು ಕಾದಿರುವುದಾಗಿ ಟ್ವೀಟ್ ಮಾಡಿದ್ದಾರೆ.

     

     

     

  • ವಿಧಾನಸೌಧದಲ್ಲಿ ದೇವೇಗೌಡರ ಫೋಟೋವನ್ನು ತೆಗೆಸಿದ್ದು ಯಾಕೆ? ಜಾತಿ ಸಮೀಕ್ಷೆ ಇನ್ನೂ ಬಿಡುಗಡೆ ಅಗಿಲ್ಲ ಯಾಕೆ? – ಪಬ್ಲಿಕ್ ಟಿವಿಯಲ್ಲಿ ಸಿಎಂ ಸಂದರ್ಶನ

    ವಿಧಾನಸೌಧದಲ್ಲಿ ದೇವೇಗೌಡರ ಫೋಟೋವನ್ನು ತೆಗೆಸಿದ್ದು ಯಾಕೆ? ಜಾತಿ ಸಮೀಕ್ಷೆ ಇನ್ನೂ ಬಿಡುಗಡೆ ಅಗಿಲ್ಲ ಯಾಕೆ? – ಪಬ್ಲಿಕ್ ಟಿವಿಯಲ್ಲಿ ಸಿಎಂ ಸಂದರ್ಶನ

    ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿಲ್ಲ. ಆದ್ದರಿಂದ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರ ಪಡೆಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಳೆದ ಚುನಾವಣೆಯ ಬಳಿಕ ತಾನು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ, ಆದರೆ ಮುಖ್ಯಮಂತ್ರಿಯಾಗಿ ಕಳೆದ 5 ವರ್ಷ ಮಾಡಿದ ಕೆಲಸದ ಬಳಿಕ ಹೇಗೆ ಬಿಟ್ಟುಹೋಗುತ್ತಿರಾ ಎಂದು ಪ್ರಶ್ನಿಸಿದರು. ಈ ಕಾರಣಕ್ಕೆ ನಾನು ನಿರ್ಧಾರ ಬದಲಿಸಿದೆ ಎಂದು ತಿಳಿಸಿದ್ದಾರೆ. ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಸಿಎಂ ನೀಡಿದ ಉತ್ತರಗಳನ್ನು ಇಲ್ಲಿ ನೀಡಲಾಗಿದೆ.

    ಉಪಚುನಾವಣೆಯ ಬಳಿಕ ನೀವು ಅಗ್ರೆಸ್ಸೀವ್ ಆಗಿದ್ದು ಯಾಕೆ?
    ದೇಶದ ಪ್ರಧಾನಿಯೊಬ್ಬರು ರಾಜ್ಯದಲ್ಲಿರುವ ಆಡಳಿತ ಪಕ್ಷದ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಆದ್ರೆ ತಮ್ಮ ಕೊಡುಗೆ ಏನು ಎಂಬುವುದನ್ನು ಮಾತನಾಡಿಲ್ಲ. ಕೇಂದ್ರದಲ್ಲಿ ಅಧಿಕಾರ ಪಡೆದು 4 ವರ್ಷಗಳು ಕಳೆದಿದೆ. ಆದರೆ ಇದುವರೆಗೂ ಲೋಕಾಪಾಲರನ್ನು ನೇಮಕ ಮಾಡಿಲ್ಲ. ಯುಪಿಎ ಅಧಿಕಾರ ಅವಧಿಯಲ್ಲಿ ಮಂಡನೆಯಾದ ಮಸೂದೆಯನ್ನು ಇನ್ನು ಜಾರಿಗೆ ತಂದಿಲ್ಲ. ಮೋದಿ ಸಿಎಂ ಆಗಿದ್ದಾಗಲೂ ಲೋಕಾಯುಕ್ತವನ್ನು ನೇಮಕ ಮಾಡಿಲ್ಲ. ಆದರೆ ಸಿದಾರುಪಯ್ಯ ಸರ್ಕಾರ ಎಂದು ಆರೋಪ ಮಾಡುತ್ತಾರೆ. ನೀರವ್ ಮೋದಿ, ವಿಜಯ್ ಮಲ್ಯ, ಲಲಿತ್ ಮೋದಿ, ಕೋತಾರಿ ಬಗ್ಗೆ ಇದುವರೆಗೂ ಮಾತನಾಡಿಲ್ಲ. ಆದರೆ ನಮ್ಮ ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಾರೆ.

    ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಏಕಾಂಗಿ ಆಗಿದ್ದರಾ?
    ನಾನು ಏಕಾಂಗಿಯಾಗಿಲ್ಲ. ನನ್ನ ಪ್ರಕಾರ ಬಿಎಸ್‍ವೈ ಆರ್‍ಎಸ್‍ಎಸ್ ಹಾಗೂ ಬಿಜೆಪಿ ನಾಯಕರಿಂದ ಏಕಾಂಗಿಯಾಗಿದ್ದಾರೆ. ಇದಕ್ಕೆ ಉದಾಹರಣೆ ವರುಣಾದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಸಂಸದೆ ಶೋಭಾ ಕರಂದ್ಲಾಜೆ ಅವರಿಗೂ ಟಿಕೆಟ್ ನೀಡಲು ಸಾಧ್ಯವಾಗಿಲ್ಲ. ಸಂಸದ ಶ್ರೀರಾಮುಲು ಅವರಿಗೆ ಮಾತ್ರ ಟಿಕೆಟ್ ನೀಡಿದ್ದು ಯಾಕೆ? ಶ್ರೀರಾಮುಲುಗೆ ಕನ್ನಡವೇ ಬರುವುದಿಲ್ಲ, ಅವರ ಮಾತೃ ಭಾಷೆ ತೆಲುಗು ಇರಬಹುದು. ಬಿಜೆಪಿ ನಾಯಕರು ಏನು ಹೇಳಿದರೋ ಗೊತ್ತಿಲ್ಲ. ದಲಿತ ಮತಗಳನ್ನು ಸೆಳೆಯಲು ಶ್ರೀರಾಮುಲುರನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ.

    ಮೋದಿ ಅವರು ರಾಹುಲ್ ವಿರುದ್ಧ ನಮ್ಮ ಸರ್ಕಾರದ ಸಾಧನೆಯ ಬಗ್ಗೆ 15 ನಿಮಿಷ ಭಾಷಣ ಮಾಡುವಂತೆ ಸವಾಲು ಹಾಕುತ್ತಾರೆ. ನಾನು ಮೋದಿಯವರಿಗೆ ಸವಾಲು ಹಾಕುತ್ತೇನೆ. ಬಿಎಸ್‍ವೈ ಅವಧಿ ವೇಳೆ ಸಾಧನೆಯನ್ನು ಮಾತನಾಡಲಿ. ಬಳ್ಳಾರಿಯಲ್ಲಿ ನಡೆದ ಭ್ರಷ್ಟಚಾರ ನಡೆದ ಬಗ್ಗೆ ತಿಳಿಯಲು ಹೋದ ವೇಳೆ ನಮ್ಮ ಮೇಲೆ ರೌಡಿಗಳನ್ನು ಬಿಟ್ಟು ಹೆದರಿಸಲು ಯತ್ನಿಸಿದರು. ಆ ವೇಳೆ ರೆಡ್ಡಿ ದಿನಕ್ಕೆ 10 ಕೋಟಿ ಸಂಪಾದನೆ ಮಾಡುತ್ತಿದ್ದರು. ಅವರನ್ನು ರಿಪಬ್ಲಿಕ್ ಆಫ್ ಬಳ್ಳಾರಿ ಎಂದೇ ಸಂತೋಷ್ ಹೆಗಡೆ ವರದಿ ನೀಡಿದ್ದಾರೆ. ಇವರು ನಮ್ಮ ಸರ್ಕಾರದ ಮೇಲೆ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುತ್ತಾರೆ ನಾಚಿಕೆಯಾಗಬೇಕು.

    ಆನಂದ್ ಸಿಂಗ್ ಅವರ ಮೇಲೆ ಆರೋಪ ಇದೆಯಲ್ಲ, ಅವರನ್ನು ನೀವು ಪಕ್ಷಕ್ಕೆ ಸೇರಿಸಿಕೊಂಡಿದ್ದೀರಿ ಅಲ್ಲವೇ?
    ನಾವು ಆನಂದ್ ಸಿಂಗ್ ವಿರುದ್ಧ ಹೋರಾಟ ನಡೆಸಿಲ್ಲ. ನಾವು ಹೋರಾಟ ನಡೆಸಿದ್ದು ರೆಡ್ಡಿ ಸಹೋದರರ ವಿರುದ್ಧ. ಅಲ್ಲಿ ರೆಡ್ಡಿ ಸಹೋದದರು ಆಡಳಿತ ನಡೆಸುತ್ತಿದ್ದರು. ನಮಗೇ ರೋಡ್ ಶೋ ನಡೆಸಲು ಬಿಡಲಿಲ್ಲ. ಎಲ್ಲರಿಗೂ ಹೆದರಿಕೆ ಇತ್ತು. ಯಡಿಯೂರಪ್ಪ ಅವರಿಗೆ ರಾಜಕೀಯದಲ್ಲಿ ಇರಲು ನಾಚಿಕೆ ಆಗಬೇಕು. ರೆಡ್ಡಿ ಸಹೋದರರು ನನ್ನ ಮೇಲೆ ಸವಾಲು ಎಸೆದಿದ್ದರು. ಈ ಕಾರಣಕ್ಕೆ ನಾವು ಪಾದಯಾತ್ರೆ ನಡೆಸಿದ್ದೆವು. ನಾವು ಎಲ್ಲರನ್ನು ಸಮಾನವಾಗಿ ಕಾಣುತ್ತೇವೆ. ಆದರೆ ಬಿಜೆಪಿಯಲ್ಲಿ ಇದು ಸಾಧ್ಯವಿಲ್ಲ, ಇದಕ್ಕೆ ಉತ್ತಮ ಉದಾಹರಣೆ ಬಿಜೆಪಿ ಅವರು ಈ ಬಾರಿ ಒಂದು ಟಿಕೆಟ್ ಕೂಡ ಅಲ್ಪಸಂಖ್ಯಾತರಿಗೆ ನೀಡಿಲ್ಲ.

    ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಏಕೆ, ಸಿದ್ದರಾಮಯ್ಯ ಹೆದರಿಕೊಂಡ್ರಾ?
    ನಾನು ಯಾರಿಗೂ ಹೆದರಿಕೊಳ್ಳುವ ಪ್ರಮೇಯ ಇಲ್ಲ. ಈ ಹಿಂದೆ ಮೋದಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು. ಈ ಬಾರಿ ಕುಮಾರಸ್ವಾಮಿ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಅವರು ಮಾಡಿದರೆ ಅದು ರಾಜಕೀಯ ತಂತ್ರ, ನಾನು ಮಾಡಿದರೆ ಮಾತ್ರ ಹೆದರಿಕೆ ಎಂದು ಹೇಳುತ್ತಾರೆ ಅಷ್ಟೇ.

    ಕಾಂಗ್ರೆಸ್ ಸರ್ಕಾರ ಇರುವ ಏಕೈಕ ರಾಜ್ಯ ಕರ್ನಾಟಕ ಒಂದು ರೀತಿ ಎಟಿಎಮ್ ಅಂತ ಬಿಜೆಪಿಯವರು ಹೇಳ್ತಾರೆ?
    ಕಾಂಗ್ರೆಸ್ 133 ವರ್ಷ ಇತಿಹಾಸ ಇರುವ ಹಳೆಯ ಪಕ್ಷ. ಎಂದಿಗೂ ಹಣ ಕಳಿಸಿ ಅಂತ ಹೇಳಿಲ್ಲ. ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಬಿಜೆಪಿ,ಕಾಂಗ್ರೆಸ್ ಪಕ್ಷದಲ್ಲಿ ಅಸೆಟ್ ಯಾರ ಬಳಿ ಜಾಸ್ತಿ ಇದೆ. ನಮ್ಮ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ ಆಗಿದೆ. ಐಟಿ ದಾಳಿ ಮಾಡಿ ನಮ್ಮ ಪಕ್ಷವನ್ನು ಕುಗ್ಗಿಸುವಂತಹ ಪ್ರಯತ್ನ ನಡೆಯುತ್ತಿದೆ. ಬಿಜೆಪಿ ಅವರ ಬಳಿ ಹೆಚ್ಚು ಆಸ್ತಿ ಇಲ್ವಾ ಅವರ ಮನೆ ಮೇಲೆ ಯಾಕೆ ಐಟಿ ದಾಳಿ ಮಾಡಲ್ಲ. ನಮ್ಮ ಪಕ್ಷದ ನಾಯಕರ ಮೇಲೆ ದಾಳಿ ಮಾಡಿ ಹೆದರಿಸುವ ಕಾರ್ಯ ಮಾಡುತ್ತಿದ್ದಾರೆ. ಚುನಾವಣಾ ಸಮಯದಲ್ಲೇ ಐಟಿ ದಾಳಿ ಮಾಡುತ್ತಿದ್ದಾರೆ. ಇದು ದ್ವೇಷದ ರಾಜಕಾರಣ.

    2+1 ಸೂತ್ರ ಏನು?
    ನಾನು 2 ಕಡೆ ಮತ್ತೆ ನಮ್ಮ ಮಗ ಒಂದು ಕಡೆಯಿಂದ ಸ್ಪರ್ಧಿಸಿರುವುದಕ್ಕೆ ಹೀಗೆ ಹೇಳುತ್ತಾರೆ. ಯಡಿಯೂರಪ್ಪ ಮಗ ಹಾಲಿ ಶಾಸಕ ಗೋವಿಂದ ಕಾರಜೋಳ ಅವರ ಮಗ, ಉದಾಸಿಯವರ ಮಗ, ಶಶಿಕಲಾ ಜೊಲ್ಲೆ ಅವರ ಗಂಡ, ಉಮೇಶ್ ಕತ್ತಿ ಅವರ ತಮ್ಮ, ಯಡಿಯೂರಪ್ಪ ಅವರ ಮಗ ರಾಘವೇಂದ್ರ ಇವರೆಲ್ಲ ಚುನಾವಣೆಗೆ ಸ್ಪರ್ಧಿಸಿಲ್ಲವೇ ಇದಕ್ಕೆ ಸೂತ್ರ ಅವರೇ ಹೇಳಬೇಕು.

    ಸಿದ್ದರಾಮಯ್ಯನವರು ಸಮಾಜವಾದಿಯಾಗಿ ಉಳಿದಿಲ್ಲ ದುಬಾರಿ ಬೆಲೆಯ ವಾಚ್ ಕಟ್ಟುತ್ತಾರೆ?
    ನರೇಂದ್ರ ಮೋದಿಯವರು ಹಾಕೋ ಕೋಟ್ ಬೆಲೆ ಎಷ್ಟು ಅದಕ್ಕೆಲ್ಲಾ ಆದಾಯ ತೆರಿಗೆ ಕಟ್ಟಿದ್ದಾರಾ. ನನ್ನ ಸ್ನೇಹಿತ ವಾಚ್ ಕೊಟ್ಟ ಕಟ್ಟಿಕೊಂಡಿದ್ದೆ. ನನ್ನ ಮೇಲೆ ಆರೋಪ ಮಾಡುವ ದೇವೇಗೌಡರು ಶಾಸಕರಾಗಿದ್ದಾಗ ಎಷ್ಟು ಆಸ್ತಿ ಇತ್ತು ಈಗ ಎಷ್ಟು ಆಸ್ತಿಯಾಗಿದೆ. ಕುಮಾರಸ್ವಾಮಿ ಅವರ ಮಗನ ಬಳಿ ಕಾರು ಇಲ್ಲವೇ?. ನಾನೇ ಯಾರ ಮೇಲೂ ಆರೋಪ ಮಾಡಿಲ್ಲ. ಅವರ ಆರೋಪಗಳಿಗೆ ಪ್ರತಿಕ್ರಿಯಿಸಿದ್ದೇನೆ.

     

    ಕಳೆದ 5 ವರ್ಷಗಳಲ್ಲಿ ಹಿಂದೂ ಕಾರ್ಯಕರ್ತರ ಕೊಲೆಗಳು ಜಾಸ್ತಿಯಾಗಿದೆ?
    23 ಜನರ ಕೊಲೆ ಆಗಿದೆ ಅದರಲ್ಲಿ 11 ಜನ ಬಿಜೆಪಿ ಕಾರ್ಯಕರ್ತರಲ್ಲ. ಉಳಿದ 12 ಜನ ಆರ್‍ಎಸ್‍ಎಸ್, ಭಜರಂಗ ದಳ, ಶ್ರೀರಾಮ ಸೇನೆಗೆ ಸೇರಿದೋರು. ಕೋಮು ಗಲಭೆಗಳಿಂದ, ಇನ್ನು ಕೆಲವು ಕಾರಣಗಳಿಗೆ ಸತ್ತಿದ್ದಾರೆ. ಬಿಜೆಪಿಯವರು ಹೆಚ್ಚಾಗಿ ಹೇಳುತ್ತಿದ್ದಾರೆ ಅಷ್ಟೆ. ಇದು ಮೊದಲಲ್ಲ ಗಲಭೆ ಏಳಿಸೋದು, ಕೋಮು ಗಲಭೆ ಅನ್ನೋದು ಬಿಜೆಪಿಯವರ ಹಿಂದಿನ ಉದ್ದೇಶ. ಎಲ್ಲಾ ಪ್ರಕರಣಗಳಲ್ಲೂ ದೂರು ದಾಖಲಾಗಿ ಆರೋಪಿಗಳ ಬಂಧನ ಆಗಿದೆ. ಕೆಲವು ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಕೂಡ ಆಗಿದೆ.

    ಜೆಡಿಎಸ್ ಮುಗಿಸಬೇಕು ಅಂತ ಹೊರಟಿದ್ದೀರಾ?
    ಯಾರು ಯಾರನ್ನು ಮುಗಿಸಲು ಸಾಧ್ಯ ಇಲ್ಲ. ಜೆಡಿಎಸ್ ಶಕ್ತಿ ಎಷ್ಟಿದೆ ಅಂತ ಹೇಳುತ್ತಿದ್ದೇನೆ ಅಷ್ಟೆ. ಪ್ರತೀ ಜಿಲ್ಲೆಯಲ್ಲಿ ಕಾಂಗ್ರೆಸ್ ಬೇರು ಇದೆ ಬಿಜೆಪಿ, ಜೆಡಿಎಸ್ ಇದೆಯಾ? 8 ಜಿಲ್ಲೆ ಅಲ್ಲಿ ಬಿಜೆಪಿ ಗೆ ಸೀಟ್ ಇಲ್ಲ. ದೇವೇಗೌಡ ಹಿರಿಯ ರಾಜಕಾರಣಿ ನನಗೆ ಕೋಪ ಇಲ್ಲ. ವೈಯಕ್ತಿಕವಾಗಿ ಯಾರನ್ನು ದ್ವೇಷಿಸಲ್ಲ ಈಗಲೂ ಚೆನ್ನಾಗಿದ್ದೀನಿ ಅವರು ಟೀಕೆ ಮಾಡಿದರೆ ಟೀಕೆ ಮಾಡುತ್ತೇನೆ. ಅವರು ನೀಚ ರಾಜಕಾರಣ ಮಾಡುತ್ತಾನೆ ಅಂದಾಗ ನಾನು ಸುಮ್ಮನೇ ಇರಬೇಕೇ?

    ರಾಕೇಶ್ ಇದ್ದಿದ್ದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದರಾ?
    ಖಂಡಿತಾ

    ಅವರಪ್ಪನಾಣೆ ಅಂತ ಹೆಚ್ಚು ಬಳಸುತ್ತೀರ?
    ಅದು ಹಳ್ಳಿ ಭಾಷೆ. ನಮ್ಮ ಹಳ್ಳಿಗಳಲ್ಲಿ ಹಾಗೆ ಬಳಸುತ್ತೇವೆ.

    ಜೆಡಿಎಸ್ ಬಿಜೆಪಿಯ ಬಿ ಟೀಮ್ ಅಂತ ಹೇಳುತ್ತೀರ?
    ಕೆಲವು ಕಡೆ ಒಪ್ಪಂದ ಮಾಡಿಕೊಂಡಿದ್ದಾರೆ. ಚಾಮುಂಡೇಶ್ವರಿಯಲ್ಲಿ ಬಿಜೆಪಿ ತುಂಬಾ ವೀಕ್ ಅಭ್ಯರ್ಥಿ ಹಾಕಿದೆ ಏನರ್ಥ?

    ಒಕ್ಕಲಿಗರನ್ನು ಎದುರು ಹಾಕಿಕೊಂಡಿದ್ದೀರಾ?
    ನಮ್ಮಲ್ಲಿ ಡಿಕೆ ಶಿವಕುಮಾರ್, ಕೃಷ್ಣಪ್ಪ ಒಕ್ಕಲಿಗ ನಾಯಕರು ಇಲ್ವಾ. ಕೆಂಪೇಗೌಡರ ಜಯಂತಿ ಮಾಡಿದವರು ಯಾರು? ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಸರು ಇಟ್ಟಿದು ಯಾರು? ದೇವೇಗೌಡರು, ಕುಮಾರ ಸ್ವಾಮಿ ಯಾಕೆ ಮಾಡಲಿಲ್ಲ?

    ವಿಧಾನಸೌಧದಲ್ಲಿ ದೇವೇಗೌಡರ ಫೋಟೋವನ್ನು ನೀವು ತೆಗೆಸಿದ್ದೀರಿ?
    ಸ್ವಚ್ಛ ಮಾಡುವ ಸಮಯದಲ್ಲಿ ಫೋಟೋವನ್ನು ತೆಗೆಯಲಾಗಿತ್ತು. ಬಳಿಕ ಹಾಕಲಾಗಿದೆ.

    ಅತಂತ್ರ ಪರಿಸ್ಥಿತಿ ಬಂದಲ್ಲಿ ಜೆಡಿಎಸ್ ಬಿ ಟೀಂ ಎಂದು ಹೇಳಿ ತಪ್ಪು ಮಾಡಿದ್ದೇನೆ ಅಂತ ಅನಿಸುತ್ತಾ?
    ಆ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಂಪೂರ್ಣ ಬಹುಮತ ಬರಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ನಾನೇ ಸಿಎಂ ಯಾರು ಏನಾದರು ಹೇಳಿಕೊಳ್ಳಲಿ.

    ಯತೀಂದ್ರ ಅವರನ್ನು ಯಾವಾಗ ಅಧಿಕಾರಕ್ಕೆ ತರಬೇಕು ಅಂತಾ ಅನ್ನಿಸಿತು?
    ನನ್ನ ಕ್ಷೇತ್ರವನ್ನು ರಾಕೇಶ್ ನೋಡಿಕೊಳ್ಳುತ್ತಿದ್ದ. ನಾನು ಹೆಚ್ಚು ಹೋಗುತ್ತಿರಲಿಲ್ಲ. ಅವನು ಸತ್ತು ಹೋದ ಮೇಲೆ ನನಗೆ ಹೋಗಲಿಕ್ಕೆ ಆಗುತ್ತಿರಲಿಲ್ಲ. ಹಾಗಾಗಿ ನೋಡಿಕೊಳ್ಳಪ್ಪ ಎಂದು ಯತೀಂದ್ರಗೆ ಹೇಳಿದೆ. ಮೊದಲ ಮಗ ರಾಕೇಶ್ ಇದ್ದಿದ್ದರೆ ನಾನು ಯೋಚನೆ ಮಾಡುವ ಹಾಗೆ ಇರುತ್ತಿರಲಿಲ್ಲ.

    ಲಿಂಗಾಯತ, ನಾಡ ಧ್ವಜ ವಿಚಾರ ಸಮಸ್ಯೆ ಸೃಷ್ಟಿ ಮಾಡಿತಾ?
    ಹಿರಿಯ ಪತ್ರಕರ್ತರು ಪಾಟಿಲ್ ಪುಟ್ಟಪ್ಪನವರು ನಾಡ ಧ್ವಜ ಬೇಕು ಎಂದು ಅರ್ಜಿ ಕೊಟ್ಟರು. ಅದಕ್ಕಾಗಿ ಒಂದು ಸಮಿತಿ ರಚನೆ ಮಾಡಿದೆವು. ಸಮಿತಿ ವರದಿ ಕೊಟ್ಟಿತು. ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆವು. ಇದು ನಾನಾಗೆ ಶಿಫಾರಸ್ಸು ಮಾಡಿದ್ದಲ್ಲ ಸುಮ್ಮನೆ ಆರೋಪ ಮಾಡುತ್ತಾರೆ. ಯಡಿಯೂರಪ್ಪ ಕಾಲದಲ್ಲೂ ಆಗಿದೆ ಇದು ಹೊಸದಲ್ಲ.

    ಜಾತಿ ಸಮೀಕ್ಷೆ ಇನ್ನೂ ಬಿಡುಗಡೆ ಅಗಿಲ್ಲ ಯಾಕೆ?
    ಇನ್ನು ಪೂರ್ಣ ಆಗಿಲ್ಲ. ಹಿಂದುಳಿದ ವರ್ಗದ ಆಯೋಗದಲ್ಲಿ ಸಾಂವಿಧಾನಿಕ ಸಾಧ್ಯತೆಗಳನ್ನು ನೋಡಬೇಕು. ಸುಪ್ರೀಂ ಆದೇಶ ನೋಡಬೇಕು. ಎಲ್ಲವನ್ನು ನೋಡಿ ವರದಿ ಕೊಡಿ ಎಂದು ಹೇಳಿದ್ದೇನೆ ನೋಡಬೇಕು.

    ಸಿದ್ದರಾಮಯ್ಯನವರು ಹಿಂದು ವಿರೋಧಿನಾ?
    ನಾನು ಹಿಂದು. ಜನರನ್ನು ಪ್ರೀತಿಸುತ್ತೇನೆ. ಯಾವುದೇ ಜಾತಿ ಮತಕ್ಕೆ ಸೇರಿರಲಿ.

    ಕಾಂಗ್ರೆಸ್ ಜೊತೆ ಹೊಂದಿಕೊಳ್ಳಲು ಕಷ್ಟ ಆಯ್ತಾ?
    ಕಾಂಗ್ರೆಸ್ ಅಲ್ಲಿ ಎಲ್ಲರೂ ಗೌರವ, ಪ್ರೀತಿಯಿಂದ ಕಂಡರು ಹೈಕಮಾಂಡ್ ಬೆಂಬಲ ನೀಡಿತು. ಹಾಗಾಗಿ ಕಷ್ಟ ಆಗಲಿಲ್ಲ.

    ಒಂದು ಬಾರಿ ಮುಖ್ಯಮಂತ್ರಿ ಆಗಿದ್ದೀರಿ ಇನ್ನೊಮ್ಮೆ ನಿಮ್ಮನ್ನೇ ಏನಕ್ಕೆ ಮಾಡಬೇಕು?
    ಒಳ್ಳೆ ಕೆಲಸ ಮಾಡುವವರನ್ನು ಮುಂದುವರೆಸುತ್ತಾರೆ.

    ದೇವರಾಜು ಅರಸು ಅವರನ್ನು ಹಿಂದುಳಿದೋರು, ದಲಿತ ವರ್ಗಗಳಿಗೆ ಹೋರಾಟ ಮಾಡಿದರು ಎಂದು ನೆನೆಪಿಸಿಕೊಳ್ಳುತ್ತಾರೆ. ನಿಮ್ಮನ್ನು?
    ಬಡವರು ಹೆಚ್ಚಿರುವುದು ಅಹಿಂದ ವರ್ಗದಲ್ಲಿ ಹಾಗಂತಾ ಬೇರೆ ವರ್ಗಗಳಲ್ಲಿ ಇಲ್ಲಾ ಅಂತ ಅಲ್ಲ. ಅವರಿಗಾಗಿ ಒಳ್ಳೆಯ ಉಪಯುಕ್ತ ಯೋಜನೆಗಳನ್ನು ಕೊಟ್ಟಿದ್ದೇನೆ.

    https://www.youtube.com/watch?v=_ypk54eV3Ig

  • ಬಿಜೆಪಿಯವ್ರು ನಮ್ಮ ಪ್ರಣಾಳಿಕೆ ಕಾಪಿ ಮಾಡಿದ್ದಾರೆ – ಸಿದ್ದರಾಮಯ್ಯ ವ್ಯಂಗ್ಯ

    ಬಿಜೆಪಿಯವ್ರು ನಮ್ಮ ಪ್ರಣಾಳಿಕೆ ಕಾಪಿ ಮಾಡಿದ್ದಾರೆ – ಸಿದ್ದರಾಮಯ್ಯ ವ್ಯಂಗ್ಯ

    ದಾವಣಗೆರೆ: ಬಿಜೆಪಿಯವರು ನಮ್ಮ ಪ್ರಣಾಳಿಕೆಯನ್ನು ಕಾಪಿ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರು ಚನ್ನಗಿರಿ ವಿಧಾನಸಭಾ ಕ್ಷೇತ್ರದ ಸಂತೆಬೆನ್ನೂರಿನಲ್ಲಿ ಹೇಳಿದ್ದಾರೆ.

    2008 ರಲ್ಲಿ ಬಿಜೆಪಿ ಪ್ರಣಾಳಿಕೆಯ ಭರವಸೆಯನ್ನು ಪೂರ್ಣಗೊಳಿಸಿರಲಿಲ್ಲ. ನಾವು ಇಂದಿರಾ ಕ್ಯಾಂಟಿನ್ ಆರಂಭ ಮಾಡಿದ್ದೇವೆ. ಅವರು ಹೊಸ ಪ್ರಣಾಳಿಕೆಯಲ್ಲಿ ಅನ್ನಪೂರ್ಣ ಕ್ಯಾಂಟಿನ್ ತೆಗೆಯುತ್ತೇವೆ ಅಂದಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಸಾಲಾ ಮನ್ನಾ ಮಾಡಲಿಲ್ಲ. ಈಗ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ನಾಟಕ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

    ಕುಮಾರಸ್ವಾಮಿ ಸಹ ಇದೇ ರೀತಿ ಸುಳ್ಳು ಹೇಳುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಏನು ಮಾಡದವರು ಈಗ ಏನು ಮಾಡುತ್ತಾರೆ. ಪ್ರಧಾನಿಯವರೇ ರೈತರ ಸಾಲ ಮನ್ನಾ ಮಾಡಲಿಲ್ಲ. ವೋಟ್ ಗಾಗಿ ಸಾಲ ಮನ್ನಾ ಮಾಡುವುದಾಗಿ ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ನಾಚಿಕೆ ಆಗಬೇಕು ಎಂದು ಕಿಡಿಕಾರಿದರು.

    ಯಡಿಯೂರಪ್ಪ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಬರೀ ಸೈಕಲ್ ಕೂಟ್ವಿ, ಸೀರೆ ಕೊಟ್ವಿ ಅಂತ ಹೇಳುತ್ತಾರೆ. ನಾವು ಕೊಟ್ಟ ಪ್ರಣಾಳಿಕೆಯ 165 ಭರವಸೆಗಳನ್ನು ಪೂರೈಸಿದ್ದೇವೆ. ಇದರ ಬಗ್ಗೆ ಯಡಿಯೂರಪ್ಪ ಚರ್ಚೆಗೆ ಬರಲಿ ಎಂದು ಆಹ್ವಾನ ನೀಡಿದರು.

    ಕೇಂದ್ರ ಬಿಜೆಪಿ ನಾಯಕರು ಸೇರಿದಂತೆ ಬೇರೆ ರಾಜ್ಯಗಳಲ್ಲಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಮೊದಲು ಈಡೇರಿಸಲಿ. ನಮ್ಮ ಸರ್ಕಾರ ಎಲ್ಲರಿಗೂ ರಕ್ಷಣೆ ನೀಡುತ್ತಿದೆ. ಜಿಹಾದ್ ಗೆ ಬೆಂಬಲ ಕೊಡುತ್ತಿಲ್ಲ. ಬಿಜೆಪಿ ನಡೆ ದಲಿತರ ಕಡೆಗೆ ಎಂದು ಹೇಳಿ ನಾಟಕ ಮಾಡುತ್ತಿದ್ದಾರೆ. ಹೋಟೆಲ್ ನಿಂದ ತರಿಸಿದ ಊಟವನ್ನು ದಲಿತರ ಮನೆಯಲ್ಲಿ ತಿನ್ನುತ್ತಾರೆ. ಕಾಂಗ್ರೆಸ್ ಸರ್ಕಾರ ಎಸ್‍ಟಿ, ಎಸ್‍ಸಿ ಅಭಿವೃದ್ಧಿಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿಸಿದರು.

    ತಮಿಳುನಾಡಿಗೆ ನೀರು ಹರಿಸುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು ರಾಜ್ಯದಲ್ಲೇ ನೀರಿಗೆ ಸಮಸ್ಯೆ ಇದೆ. ವಾಸ್ತವ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿ ಕೊಡುತ್ತೇವೆ ಎಂದು ಹೇಳಿದರು.

    ನಟ ಸುದೀಪ್ ಹಾಗೂ ನಾನು ಉತ್ತಮ ಸ್ನೇಹಿತರು. ಅವರ ಅಪ್ಪ, ಚಿಕ್ಕಪ್ಪನ ಕಾಲದಿಂದಲೂ ಆತ್ಮೀಯ ಸಂಬಂಧವಿದೆ. ಮೊನ್ನೆ ಅವರ ಜೊತೆ ಮಾತನಾಡುವಾಗ ಒಮ್ಮೆ ನಿಮ್ಮ ಕ್ಷೇತ್ರಕ್ಕೆ ಬರುತ್ತೇನೆ ಎಂದು ಹೇಳಿದರು. ರಾಜಕೀಯದ ಬಗ್ಗೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು.

  • ಬಿಎಸ್‍ವೈ ಹುಟ್ಟಿದ್ದಾಗ ಅವರ ನಾಲಿಗೆ ಮೇಲಿಂದ ವಿಷ ತೆಗೆದಿಲ್ಲ: ಖರ್ಗೆ

    ಬಿಎಸ್‍ವೈ ಹುಟ್ಟಿದ್ದಾಗ ಅವರ ನಾಲಿಗೆ ಮೇಲಿಂದ ವಿಷ ತೆಗೆದಿಲ್ಲ: ಖರ್ಗೆ

    ಕಲಬುರಗಿ: ಹುಟ್ಟಿದ ಮಗುವಿಗೆ ಹೊಟ್ಟೆಯೊಳಗೆ ವಿಷ ಹೋಗಬಾರದು ಅಂತಾ ನಾಲಿಗೆ ಮೇಲಿನ ವಿಷ ತೆಗೆಯುತ್ತಾರೆ. ಬಿಎಸ್ ಯಡಿಯೂರಪ್ಪ ಹುಟ್ಟಿದ್ದಾಗ ಅವರ ನಾಲಿಗೆ ಮೇಲಿಂದ ವಿಷ ತೆಗೆದಿರಲಿಕ್ಕಿಲ್ಲ. ಅದಕ್ಕೆ ಹೋದಕಡೆಯಲ್ಲ ಸುಳ್ಳು ಹೇಳುತ್ತಾ ತಿರುಗಾಡುತ್ತಿರುತ್ತಾರೆ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವ್ಯಂಗ್ಯವಾಡಿದ್ದಾರೆ.

    ಅಫಜಲ್ಪುರದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಬಗ್ಗೆ ಬಿಎಸ್‍ವೈ ಕೀಳಾಗಿ ಮಾತನಾಡುತ್ತಾರೆ. ಆರ್ ಎಸ್‍ ಎಸ್ ಹಿನ್ನೆಲೆಯುಳ್ಳವರ ಬಾಯಲ್ಲಿ ಇದೆಂಥ ಮಾತು, ಇದೆನಾ ಶಿಸ್ತಿನ ಪಕ್ಷ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

    ಅಹಿಂದ ವರ್ಗದ ಜನರ ಬಗ್ಗೆ ಕಾಳಜಿಯುಳ್ಳ ಏಕೈಕ ಪಕ್ಷ ಕಾಂಗ್ರೆಸ್. ಸಿದ್ದರಾಮಯ್ಯ ಮತ್ತೆ ಸಿಎಂ ಆಗಿ ನಿಮಗೆ ಎಲ್ಲಾ ಸೌಲಭ್ಯ ಕೊಡುತ್ತಾರೆ. ಈಗಿರುವ ಸೌಲಭ್ಯಗಳು ಮುಂದುವರೆಯುತ್ತವೆ. ಮಂತ್ರಿ ಸ್ಥಾನ ಸಿಕ್ಕಿಲ್ಲ ಅಂತಾ ಗುತ್ತೇದಾರ್ ನನ್ನ ಮೇಲೆ ಸಿಟ್ಟು ಮಾಡಿಕೊಂಡರು. ಸಿಎಂ ಸಿದ್ದರಾಮಯ್ಯ ಮೇಲೆ ಯಾಕೆ ಅವರು ಸಿಟ್ಟು ಮಾಡಿಕೊಳ್ಳಬೇಕಿತ್ತು ಎಂದು ಪ್ರಶ್ನಿಸಿದರು.

    ಬಿಜೆಪಿಯವರು ಕುತಂತ್ರ ರಾಜಕಾರಣ ಮಾಡುತ್ತಿದ್ದಾರೆ. ಅಂಬೇಡ್ಕರ್ ನೀಡಿದ ಹಕ್ಕುಗಳನ್ನ ಕಿತ್ತುಕೊಳ್ಳಲು ಬಿಜೆಪಿಯವರು ಹೊರಟಿದ್ದಾರೆ. ಮೋದಿ, ಶಾ ಹೋದ ಕಡೆಯಲ್ಲ ಸುಳ್ಳು ಹೇಳೋದೆ ಮಾಡುತ್ತಿದ್ದಾರೆ. ಹರ್ ಏಕ್ ಜೇಬ್‍ಮೆ ಪಂದ್ರ ಪಂದ್ರ ಲಾಕ್ ಜಮಾ ಕರ್ತೆ ಅಂತಾ ಮೋದಿ ಹೇಳಿದ್ದರು. ಲೇಕಿನ್ ಏಕ್ ಪೈಸೆಬಿ ಜಮಾ ನಹಿ ಹುವಾ ರೈತರಿಗಾಗಿ ಸಿದ್ದರಾಮಯ್ಯ ಸಾಲ ಮನ್ನಾ ಮಾಡಿದ್ದಾರೆ. ಆದರೆ ಕೇಂದ್ರ ಮಾಡಲಿಲ್ಲ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.

  • ಸಿಎಂ ಗೆಲುವಿಗೆ ಬಾದಾಮಿಯಲ್ಲಿ 11 ನಾಮಪತ್ರ ವಾಪಸ್

    ಸಿಎಂ ಗೆಲುವಿಗೆ ಬಾದಾಮಿಯಲ್ಲಿ 11 ನಾಮಪತ್ರ ವಾಪಸ್

    ಬಾಗಲಕೋಟೆ: ರೆಸಾರ್ಟ್ ನಲ್ಲಿ ಸಿ.ಎಂ ಇಬ್ರಾಹಿಂ, ಎಸ್.ಆರ್ ಪಾಟೀಲ್, ಆರ್.ಬಿ ತಿಮ್ಮಾಪುರ ನಡೆಸಿದ ಸಂಧಾನದ ಸಭೆ ಯಶಸ್ವಿಯಾಗಿದ್ದು, ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಬಾದಾಮಿಯಲ್ಲಿ 24 ಪಕ್ಷೇತರರ ಪೈಕಿ 11 ಮಂದಿ ನಾಮಪತ್ರ ಹಿಂಪಡೆದಿದ್ದಾರೆ.

    ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಬಾದಾಮಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಬೆಂಬಲಿಸಿ 11 ಮಂದಿ ನಾಮಪತ್ರ ವಾಪಾಸ್ ಪಡೆದಿದ್ದಾರೆ. ನಾಮಪತ್ರ ವಾಪಸ್ ಪಡೆದ ಎಲ್ಲರಿಗೂ ಧನ್ಯವಾದ ತಿಳಿಸಿದರು.

    ನಾಳೆಯಿಂದ ಯುದ್ದೋಪಾದಿಯಲ್ಲಿ ಪ್ರಚಾರ ಮಾಡಲಿದ್ದೇವೆ. ಸಿಎಂ ಸಿದ್ದರಾಮಯ್ಯ ಅಭೂತಪೂರ್ವ ಗೆಲವು ಸಾಧಿಸಲಿದ್ದಾರೆ. ಹಳ್ಳಿಗಳಲ್ಲಿ ಸಿದ್ದರಾಮಯ್ಯ ನವರ ಪರ ಒಲವು ವ್ಯಕ್ತವಾಗಿದೆ. ಎಲ್ಲ ಸಮುದಾಯದ ಜನರ ಬೆಂಬಲ ಸಿಗಲಿದೆ. ನಮ್ಮ ಎದುರಾಳಿಗಳು ಶಕ್ತಿಶಾಲಿಗಳಾಗಿದ್ರು ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿಎಂ ಗೆ ಬಾದಾಮಿಯಲ್ಲಿ ಗೋಡಂಬಿ, ದ್ರಾಕ್ಷಿನೂ ಸಿಗಲ್ಲ ಎಂಬ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಶೆಟ್ಟರ್ ಹುಬ್ಬಳ್ಳಿಯಲ್ಲಿ ಗೆಲ್ಲುವುದೇ ಕಷ್ಟವಾಗಿದೆ. ಮೊದಲು ಅವರು ಗೆಲ್ಲುವುದನ್ನು ನೋಡಿಕೊಳ್ಳಲಿ. ಬಾದಾಮಿ ಚಿಂತೆ ಬಿಡಲಿ. ನಾವು ಬಾದಾಮಿ ಗೋಡಂಬಿ ತಿನ್ನಲು ಇಲ್ಲಿಗೆ ಬಂದಿಲ್ಲ ಜನರಿಂದ ಮತ ಪ್ರಸಾದವನ್ನು ಬೇಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು.

    ಬಿಜೆಪಿ ಆಡಳಿತ ದಲ್ಲಿ ಯಾರೂ ಬಳ್ಳಾರಿಗೆ ಕಾಲಿಡದ ಪರಿಸ್ಥಿತಿ ಬಂದಿತ್ತು. ಯಡಿಯೂರಪ್ಪ ಬಳ್ಳಾರಿಗೆ ಹೋಗಬೇಕಾದ್ರು ಗಣಿಧಣಿಗಳ ಸಮ್ಮತಿ ಬೇಕಿತ್ತು. ಸಿದ್ದರಾಮಯ್ಯ ಪಾದ ಯಾತ್ರೆ ಯಿಂದ ಗಣಿಧಣಿಗಳ ಆರ್ಭಟ ನಿಂತಿದೆ. ನಿರ್ಭಯವಾಗಿ ಬಳ್ಳಾರಿಗೆ ಹೋಗಿ ಬರಬಹುದಾಗಿದೆ. ಅದಕ್ಕಾಗಿ ಬಿಎಸ್‍ವೈ ಸಿದ್ದರಾಮಯ್ಯನವರಿಗೆ ಧನ್ಯವಾದ ಹೇಳಬೇಕು ಎಂದು ಟಾಂಗ್ ನೀಡಿದರು.

    ಬಿಜೆಪಿಯ ಮಹಾಂತೇಶ್ ಮಮದಾಪೂರ್, ಎಂ.ಕೆ. ಪಟ್ಟಣಶೆಟ್ಟಿ ನಾಮಪತ್ರವನ್ನು ಹಿಂಪಡೆದಿದ್ದಾರೆ.