Tag: Yediyurppa

  • ಬೆಂಗಳೂರು ಅಲ್ಲ, ರಾಜ್ಯದಲ್ಲಿ ಎಲ್ಲೂ ಲಾಕ್‌ಡೌನ್‌ ಇರಲ್ಲ: ಸಿಎಂ ಬಿಎಸ್‌ವೈ

    ಬೆಂಗಳೂರು ಅಲ್ಲ, ರಾಜ್ಯದಲ್ಲಿ ಎಲ್ಲೂ ಲಾಕ್‌ಡೌನ್‌ ಇರಲ್ಲ: ಸಿಎಂ ಬಿಎಸ್‌ವೈ

    – ಕೊರೊನಾ ನಿಯಂತ್ರಿಸಲು ಲಾಕ್‌ಡೌನ್‌ ಪರಿಹಾರವಲ್ಲ
    – ಸಾಮಾಜಿಕ ಅಂತರ, ಮಾಸ್ಕ್‌ ಧರಿಸುವಂತೆ ಮನವಿ

    ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್‌ಡೌನ್‌ ಒಂದೇ ಪರಿಹಾರವಲ್ಲ, ಸಾಮಾಜಿಕ ಅಂತರ ಮತ್ತು ಮಾಸ್ಕ್‌ ಧರಿಸುವ ಮೂಲಕ ಕೊರೊನಾ ನಿಯಂತ್ರಿಸಲು ಜನರು ಸಹಕಾರ ನೀಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.

    ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಇರುವುದಿಲ್ಲ. ಜನರ ರಕ್ಷಣೆಯ ಜೊತೆ ಸರ್ಕಾರಕ್ಕೆ ಆರ್ಥಿಕ ಸಂಪನ್ಮೂಲ ಅಗತ್ಯವಿದೆ. ಹೀಗಾಗಿ ಬೆಂಗಳೂರು ಮಾತ್ರ ಅಲ್ಲ ರಾಜ್ಯದ ಎಲ್ಲೂ ಲಾಕ್‌ಡೌನ್‌ ಮಾಡುವುದಿಲ್ಲ. ಆದರೆ ಕಂಟೈನ್ಮೆಂಟ್‌ ವಲಯದಲ್ಲಿ ನಿಯಮ ಬಿಗಿ ಇರುತ್ತದೆ ಎಂದು ಸ್ಪಷ್ಟಪಡಿಸಿದರು.

    ಎಲ್ಲೇ ಹೋದರೂ ಮಾಸ್ಕ್‌ ಧರಿಸುವ ಬಿಗಿ ನಿಲುವನ್ನು ತೆಗೆದುಕೊಳ್ಳಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜೀವ ಉಳಿಸೋಣ ಎಂದು ವಿನಂತಿಸಿಕೊಂಡರು.

    ಆರಂಭದಲ್ಲಿ ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಮುಂಚೂಣಿಯಲ್ಲಿತ್ತು. ಆದರೆ ಲಾಕ್‌ಡೌನ್‌ ತೆರವಾದ ನಂತರ ಮಹಾರಾಷ್ಟ್ರ, ತಮಿಳುನಾಡು ಬೇರೆ ರಾಜ್ಯಗಳಿಂದ ಜನ ಬಂದ ಬಳಿಕ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಈಗ ನಿಯಂತ್ರಣ ಮಾಡಲು ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

    ಪೊಲೀಸರು ಬಹಳ ಕಷ್ಟಪಡುತ್ತಿದ್ದಾರೆ. ಮನೆಯಿಂದ ಹೊರಗಡೆ ಬಂದಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಮಾಸ್ಕ್‌ ಧರಿಸದೇ ಇದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

  • ಬ್ರಾಹ್ಮಣ ಸಮುದಾಯವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆದೇಶ

    ಬ್ರಾಹ್ಮಣ ಸಮುದಾಯವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆದೇಶ

    ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

    ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.

     

    ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿಯ ಹಿತದೃಷ್ಠಿಯಿಂದ ಆದೇಶ ಹೊರಡಿಸಿತ್ತು. ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಈ ಆದೇಶದ ಅನುಷ್ಟಾನಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಕಲ್ಯಾಣ ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.

    ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಕರ್ಯಗಳನ್ನೊಳಗೊಂಡಂತೆ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದೆ. ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸೂಕ್ತ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಸಿಎಂ ತಿಳಿಸಿದ್ದಾರೆ.

  • 3 ಗಂಟೆಯ ಅವಧಿಯಲ್ಲಿ 12 ಕಾಲ್‌ – ಲಾಕ್‌ಡೌನ್‌ ನಿರ್ಧಾರದ ಇನ್‌ಸೈಡ್‌ ಸ್ಟೋರಿ

    3 ಗಂಟೆಯ ಅವಧಿಯಲ್ಲಿ 12 ಕಾಲ್‌ – ಲಾಕ್‌ಡೌನ್‌ ನಿರ್ಧಾರದ ಇನ್‌ಸೈಡ್‌ ಸ್ಟೋರಿ

    ಬೆಂಗಳೂರು: ಮೂರು ಗಂಟೆಯ ಅವಧಿಯ ಒಳಗಡೆ ಮುಖ್ಯಮಂತ್ರಿ ಯಡಿಯೂರಪ್ಪ 12 ಬಾರಿ ಕರೆ ಮಾಡಿ ಅಂತಿಮವಾಗಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್‌ಡೌನ್‌ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

    ಹೌದು. ಶನಿವಾರ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಿಎಂ 12 ಬಾರಿ ದೂರವಾಣಿ ಕರೆ ಮಾಡಿ ಅಂತಿಮವಾಗಿ ಒಂದು ವಾರಗಳ ಕಾಲ ಲಾಕ್‌ಡೌನ್‌ ಘೋಷಣೆ ಮಾಡಿದ್ದಾರೆ. ಲಾಕ್‌ಡೌನ್‌ ಮಾಡಲು ಕಾರಣ ಏನು? ಯಾರಿಗೆಲ್ಲ ಕರೆ ಮಾಡಿದ್ದಾರೆ ಈ ಎಲ್ಲ ವಿಚಾರಗಳು ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಮತ್ತೆ ಲಾಕ್‌ ಯಾಕೆ?
    ಎರಡು ತಿಂಗಳ ಹಿಂದೆ ದೇಶಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಈಗ ಒಂದೇ ಬಾರಿಗೆ ಕೊರೊನಾ ಸ್ಫೋಟಗೊಳ್ಳುತ್ತಿರುವುದು ಸಿಎಂ ಯಡಿಯೂರಪ್ಪನವರ ಆತಂಕಕ್ಕೆ ಕಾರಣವಾಗಿತ್ತು. ಅಷ್ಟೇ ಅಲ್ಲದೇ ಈ ಹಿಂದೆ ತಜ್ಞರು ಬೆಂಗಳೂರಿನಲ್ಲಿ ಒಂದು ಸಾವಿರ ಪ್ರಕರಣಗಳು ದಿನ ನಿತ್ಯ ದಾಖಲಾದರೆ ಲಾಕ್‌ಡೌನ್ ಮಾಡುವುದು ಸೂಕ್ತ ಎಂದು ಸಲಹೆ ನೀಡಿದ್ದರು.

    ತಜ್ಞರು ಈ ಸಲಹೆ ನೀಡಿದ್ದರೂ ಲಾಕ್‌ಡೌನ್ ಮಾಡಿದರೆ ಆರ್ಥಿಕತೆಗೆ ಭಾರೀ ಸಮಸ್ಯೆಯಾಗಲಿದೆ. ಹೀಗಾಗಿ ಲಾಕ್‌ಡೌನ್‌ ಮಾಡದೇ ಇರಲು ಸಿಎಂ ನಿರ್ಧರಿಸಿದ್ದರು. ಕಳೆದ ವಾರ ಬೆಂಗಳೂರಿನ ಶಾಸಕರ ಜೊತೆಗಿನ ಸಭೆಯಲ್ಲೂ ಈ ವಿಚಾರವನ್ನು ಪ್ರಸ್ತಾಪ ಮಾಡಿ ಲಾಕ್‌ಡೌನ್ ‌ಬಿಟ್ಟು ಬೇರೆ ಯಾವುದಾದರೂ ಸಲಹೆ ಇದ್ದರೆ ತಿಳಿಸಿ ಎಂದು ಕೇಳಿದ್ದರು.

    ಈ ನಡುವೆ ಒಂದು ವಾರದಲ್ಲಿ ಕೊರೊನಾ ರಾಕೆಟ್‌ ವೇಗದಲ್ಲಿ ಬೆಂಗಳೂರಿನಲ್ಲಿ ಹರಡುತ್ತಿರುವುದು ಸಿಎಂ ಆತಂಕಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಮುಖ್ಯ ಕಾರ್ಯದರ್ಶಿ ವಿಜಯ್‌ ಭಾಸ್ಕರ್‌ ಅವರು ಕರೆ ಮಾಡಿ ಕೊರೊನಾ ವರದಿ ತರಿಸಿಕೊಂಡಿದ್ದಾರೆ. ಇದರ ಜೊತೆ ಬೆಂಗಳೂರಿನ ಉಸ್ತುವಾರಿ ಹೊತ್ತುಕೊಂಡಿರುವ 8 ಮಂದಿ ನಾಯಕರಿಂದ ಮೌಖಿಕ ವರದಿ ಪಡೆದಿದ್ದಾರೆ.

    ಎಲ್ಲ ವರದಿ ನೋಡಿ “ಆರ್ಥಿಕತೆ ಲೆಕ್ಕ ಹಾಕಿದ್ರೆ ನಮ್ಮ ಮೇಲೆ ಗೂಬೆ ಕೂರಿಸುತ್ತಾರೆ. ಹೀಗಾಗಿ ಲಾಕ್‍ಡೌನ್ ಮಾಡೋಣ. ಕೊರೊನಾ ಹರಡುವ ವೇಗ ಕಡಿಮೆಯಾಗುತ್ತದೆ” ಎಂದು ಸಿಎಂ ಮುಖ್ಯ ಕಾರ್ಯದರ್ಶಿ‌ ಅವರಲ್ಲಿ ಹೇಳಿದ್ದಾರೆ. ಬಳಿಕ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌, ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಅವರ ಬಳಿ ಲಾಕ್‌‌‌‌ಡೌನ್‌ ನಿರ್ಧಾರದ ಬಗ್ಗೆ ಚರ್ಚೆ‌ ನಡೆಸಿದ್ದಾರೆ. ಕೊನೆಗೆ ಕೇಂದ್ರದ ಪ್ರತಿನಿಧಿಯ ಜೊತೆ ಈ ಬಗ್ಗೆ ಮಾತನಾಡಿ ಅಂತಿಮವಾಗಿ ಲಾಕ್‌ಡೌನ್‌ ನಿರ್ಧಾರ ಪ್ರಕಟಿಸಿದರು.

    ರಾತ್ರಿ 8.11ಕ್ಕೆ ಟ್ವೀಟ್‌ ಮಾಡಿದ ಸಿಎಂ, ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಸೋಂಕು ನಿಯಂತ್ರಣದ ದೃಷ್ಟಿಯಿಂದ, ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8:00 ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಅಧಿಕೃತವಾಗಿ ರಾಜ್ಯದ ಜನತೆಗೆ ತಿಳಿಸಿದರು.

    ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು. ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಲು ಕೋರಿದೆ ಎಂದು ಎರಡನೇ ಟ್ವೀಟ್‌ ನಲ್ಲಿ ಹೇಳಿದರು.

    ತಜ್ಞರು ನೀಡಿದ್ದ ಸಲಹೆ ಏನು?
    ಎರಡು ವಾರಗಳ ಹಿಂದೆ ಸಿಎಂ ತಜ್ಞ ವೈದ್ಯರುಗಳಾದ ಡಾ.ದೇವಿಶೆಟ್ಟಿ, ಡಾ.ಮಂಜುನಾಥ್, ಡಾ.ಗಿರೀಶ್, ಡಾ.ಸುದರ್ಶನ್ ಅವರ ಜೊತೆ ಸಭೆ ನಡೆಸಿದ್ದರು. ಈ ವೇಳೆ ವೈದ್ಯರು ಹಲವು ಸಲಹೆಗಳನ್ನು ನೀಡಿದ್ದರು.
    1. ಬೆಂಗಳೂರಿಗೆ ಅಂತರ್ ಜಿಲ್ಲಾ ವಾಹನ ಓಡಾಟವನ್ನು 3 ವಾರ ಸಂಪೂರ್ಣ ಬಂದ್ ಮಾಡಿ. ಹೀಗೆ ಮಾಡಿದ್ದಲ್ಲಿ ಬೆಂಗಳೂರಿನಿಂದ ಹಳ್ಳಿಗೆ ಕೊರೊನಾ ವ್ಯಾಪಿಸುವುದನ್ನು ತಡೆಯಬಹುದು.
    2. ಬೆಂಗಳೂರಿನಲ್ಲಿ 2 ವಾರ ಪರಿಸ್ಥಿತಿ ಮಾನಿಟರ್ ಮಾಡಿ


    3. ದಿನಕ್ಕೆ ಸಾವಿರ ಪ್ರಕರಣ ಬಂದಾಗ ಬಹುತೇಕ ಲಾಕ್‍ಡೌನ್ ನಿರ್ಧಾರ ಮಾಡೋಣ
    4. ಬೆಂಗಳೂರಿನಲ್ಲಿ ಸಮುದಾಯಕ್ಕೆ ಹಬ್ಬುತ್ತಿರುವ ಆತಂಕ ಎದುರಾಗಿದೆ. ಇದನ್ನು ಈಗಲೇ ತಡೆಯಬೇಕು.
    5. ಮನೆಗಳು ದೊಡ್ಡದಾಗಿದ್ದರೆ, ಅಲ್ಲಿಯೇ ಚಿಕಿತ್ಸೆ ನೀಡಲು ಮುಂದಾಗಿ
    6. ಕೊರೋನಾ ಪರೀಕ್ಷೆಯನ್ನು ಹೆಚ್ಚಳ ಮಾಡಿ ನಿರ್ಲಕ್ಷ್ಯ ಮಾಡಬೇಡಿ
    7. ಕಂಟೈನ್ಮೆಂಟ್ ಝೋನ್ ಕಟ್ಟುನಿಟ್ಟಾಗಿ ಪಾಲನೆ ಆಗ್ತಿಲ್ಲ, ಇದನ್ನು ಬಿಗಿಗೊಳಿಸಿ

     

  • ಬೆಂಗಳೂರಿನಿಂದ ಅಂತರ್‌ ಜಿಲ್ಲಾ ವಾಹನ ಓಡಾಟ ಬಂದ್‌ ಮಾಡಿ – ಸಿಎಂಗೆ ತಜ್ಞರು ನೀಡಿದ್ದಾರೆ 7 ಸಲಹೆ

    ಬೆಂಗಳೂರಿನಿಂದ ಅಂತರ್‌ ಜಿಲ್ಲಾ ವಾಹನ ಓಡಾಟ ಬಂದ್‌ ಮಾಡಿ – ಸಿಎಂಗೆ ತಜ್ಞರು ನೀಡಿದ್ದಾರೆ 7 ಸಲಹೆ

    ಬೆಂಗಳೂರು: ಸರ್ವಪಕ್ಷ ಶಾಸಕರ ಸಭೆ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿ ತಜ್ಞ ವೈದ್ಯರ ಜೊತೆ ಸಭೆ ನಡೆಸಿದ್ದಾರೆ. ಬೆಂಗಳೂರನ್ನು ರಕ್ಷಿಸಲು ಮಾಡಲು ತಜ್ಞರು ಕೆಲವೊಂದು ಸಲಹೆ ಕೊಟ್ಟಿದ್ದಾರೆ.

    ತಜ್ಞ ವೈದ್ಯರುಗಳಾದ ಡಾ.ದೇವಿಶೆಟ್ಟಿ, ಡಾ.ಮಂಜುನಾಥ್, ಡಾ.ಗಿರೀಶ್, ಡಾ.ಸುದರ್ಶನ್, ಮುಖ್ಯಕಾರ್ಯದರ್ಶಿ ಶ್ರೀ ವಿಜಯಭಾಸ್ಕರ್ ಸಭೆಯಲ್ಲಿ ಭಾಗವಹಿಸಿದ್ದರು.

    ತಜ್ಞರ ಸಲಹೆ ಏನು?
    1. ಬೆಂಗಳೂರಿಗೆ ಅಂತರ್ ಜಿಲ್ಲಾ ವಾಹನ ಓಡಾಟವನ್ನು 3 ವಾರ ಸಂಪೂರ್ಣ ಬಂದ್ ಮಾಡಿ. ಬೆಂಗಳೂರಿನಿಂದ ಹಳ್ಳಿಗೆ ಕೊರೊನಾ ವ್ಯಾಪಿಸುವುದನ್ನು ತಡೆಯಬಹುದು.
    2. ಬೆಂಗಳೂರಿನಲ್ಲಿ 2 ವಾರ ಪರಿಸ್ಥಿತಿ ಮಾನಿಟರ್ ಮಾಡಿ
    3. ದಿನಕ್ಕೆ ಸಾವಿರ ಪ್ರಕರಣ ಬಂದಾಗ ಬಹುತೇಕ ಲಾಕ್‍ಡೌನ್ ನಿರ್ಧಾರ ಮಾಡೋಣ
    4. ಬೆಂಗಳೂರಿನಲ್ಲಿ ಸಮುದಾಯಕ್ಕೆ ಹಬ್ಬುತ್ತಿರುವ ಆತಂಕ ಎದುರಾಗಿದೆ. ಇದನ್ನು ಈಗಲೇ ತಡೆಯಬೇಕು.

    5. ಮನೆಗಳು ದೊಡ್ಡದಾಗಿದ್ದರೆ, ಅಲ್ಲಿಯೇ ಚಿಕಿತ್ಸೆ ನೀಡಲು ಮುಂದಾಗಿ
    6. ಕೊರೋನಾ ಪರೀಕ್ಷೆಯನ್ನು ಹೆಚ್ಚಳ ಮಾಡಿ ನಿರ್ಲಕ್ಷ್ಯ ಮಾಡಬೇಡಿ
    7. ಕಂಟೈನ್ಮೆಂಟ್ ಝೋನ್ ಕಟ್ಟುನಿಟ್ಟಾಗಿ ಪಾಲನೆ ಆಗ್ತಿಲ್ಲ, ಇದನ್ನು ಬಿಗಿಗೊಳಿಸಿ

  • ಅಧಿಕಾರಿಗಳಿಗೆ ಸಿಎಂ ಖಡಕ್‌ ವಾರ್ನಿಂಗ್‌ – ಕೋವಿಡ್‌ ನಿಯಂತ್ರಣ ಸಭೆಯ ಇನ್‌ಸೈಡ್‌ ಸ್ಟೋರಿ

    ಅಧಿಕಾರಿಗಳಿಗೆ ಸಿಎಂ ಖಡಕ್‌ ವಾರ್ನಿಂಗ್‌ – ಕೋವಿಡ್‌ ನಿಯಂತ್ರಣ ಸಭೆಯ ಇನ್‌ಸೈಡ್‌ ಸ್ಟೋರಿ

    ಬೆಂಗಳೂರು: ಕೋವಿಡ್‌ 19 ನಿಯಂತ್ರಣ ಸಂಬಂಧ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಖಡಕ್‌ ಎಚ್ಚರಿಕೆ ನೀಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ನಮ್ಮ ಸರ್ಕಾರ ಉತ್ತಮ ಕೆಲಸ ಮಾಡಿದೆ ಎಂದು ಕೇಂದ್ರ ಸರ್ಕಾರವೇ ಪ್ರಶಂಸೆ ನೀಡಿದೆ. ನಾವು ಕೈಗೊಂಡ ನಿಯಂತ್ರಣ ಕ್ರಮ ದೇಶಕ್ಕೆ ಮಾದರಿಯಾಗಿದೆ ಎಂಬ ಮೆಚ್ಚುಗೆ ಸಿಕ್ಕಿದೆ. ಹೀಗಿರುವಾಗ ಕಳೆದ ವಾರದಿಂದ ಕೊರೊನಾ ಗಣನೀಯವಾಗಿ ಯಾಕೆ ಏರಿಕೆ ಆಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

    ಕೇಂದ್ರ ಸರ್ಕಾರವೇ ಪ್ರಶಂಸೆ ವ್ಯಕ್ತಪಡಿಸಿರುವಾಗ ನೀವು ಈಗ ನಿರ್ಲಕ್ಷ್ಯ ವಹಿಸಿದ್ರೆ ಹೇಗೆ? ಮಾಧ್ಯಮಗಳಲ್ಲಿ ಬರುವ ಪ್ರತಿ ವರದಿಯನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಫಾಲೋ ಮಾಡಬೇಕು ಎಂದು ಸೂಚಿಸಿದರು. ಈ ವೇಳೆ ಪಬ್ಲಿಕ್ ಟಿವಿಯ ರಿಯಾಲಿಟಿ ಚೆಕ್‌ ವರದಿ ಬಗ್ಗೆ ಸಿಎಂ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂಬ ವಿಚಾರ ತಿಳಿದು ಬಂದಿದೆ. ಇದನ್ನೂ ಓದಿ: ಕೊರೊನಾ ನಿಯಂತ್ರಣ – ಕರ್ನಾಟಕದ ಸಾಧನೆ ಬೆಸ್ಟ್

    ಬೆಡ್ ಇಲ್ಲ ಎಂದು ವಾಪಸ್ ಕಳುಹಿಸಿದ ಪ್ರಕರಣ ವರದಿಯಾಗ್ತಿವೆ. ಕೂಡಲೇ ಆ ಪ್ರಕರಣಗಳ ಬಗ್ಗೆ ಗಮನಹರಿಸಿ‌ ಸಮಸ್ಯೆ ಬಗೆಹರಿಸಿ. ಸರ್ಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ಬೆಡಡ್‌ಗಳ‌ ಮಾನಿಟರಿಂಗ್ ಮಾಡಲು ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಬೇಕು. ಮಾನಿಟರ್ ಮಾಡಿದ್ದನ್ನು ಅಪ್ಲಿಕೇಶನ್ ಮೂಲಕ ಡಿಸ್ಪ್ಲೇ ಮಾಡಲು‌ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.  ಇದನ್ನೂ ಓದಿ: ರಿಯಾಲಿಟಿ ಚೆಕ್‌.. ಚಿಕಿತ್ಸೆ ನೀಡುವ ಆಸ್ಪತ್ರೆಗಳಿಂದ್ಲೇ ಕೊರೊನಾ- ಸೋಂಕಿತರ ಜೊತೆ ಶಂಕಿತರು ಮಿಕ್ಸ್!

    ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್‌ ರೋಗಿಗಳಿಗೆಂದೇ ನಿಗದಿತ ಬೆಡ್ ಗಳು ಇರಬೇಕು. ಆ ಬೆಡ್ ಸಂಖ್ಯೆಯನ್ನ ವರದಿ ಸಲ್ಲಿಸಿ. ಕೋವಿಡ್ ರೋಗಿಗಳಿಗೆ ಊಟದ ವ್ಯವಸ್ಥೆ ಸರಿ ಇಲ್ಲ ಎಂಬ ಆರೋಪಗಳು ಬರುತ್ತಿದೆ. ಊಟ ಚೆನ್ನಾಗಿ ಕೊಡಿ, ದುಡ್ದಿನ ಲೆಕ್ಕ ನೋಡಬೇಡಿ ಎಂದು ಸೂಚಿಸಿದ್ದಾರೆ.

    ಏರಿಯಾಗಳಲ್ಲಿ ಸೀಲ್ ಡೌನ್ ಮಾಡುವುದು ಸ್ಥಳೀಯ ಮಟ್ಟದಲ್ಲಿಯೇ ಕ್ರಮ ಕೈಗೊಳ್ಳಿ. ಇಡೀ ವಾರ್ಡ್‌ಗಳನ್ನೇ ಲಾಕ್ ಡೌನ್ ಮಾಡುವ ಬದಲು ಆಯಾ ರಸ್ತೆಗಳನ್ನು ಸೀಲ್ ಡೌನ್ ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಖಡಕ್‌ ವಾರ್ನಿಂಗ್‌ ಮಾಡಿದ್ದಾರೆ.

    ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್, ಪೊಲೀಸ್ ಆಯುಕ್ತ ಭಾಸ್ಕರ ರಾವ್ ಮತ್ತು ಇತರ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು.

    ಸರ್ಕಾರ ನೀಡಿದ ಸಭೆಯ ಮುಖ್ಯಾಂಶಗಳು:
    ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಹದಿನೈದು ದಿನಗಳಲ್ಲಿ ಅತಿ ಹೆಚ್ಚು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸಿದರೆ ಮಾತ್ರ, ಸೋಂಕು ಹರಡುವ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಶ್ರಮವಹಿಸಬೇಕೆಂದು ಆದೇಶಿಸಿದರು.

    ಬೆಂಗಳೂರು ನಗರದಲ್ಲಿ ಹಾಗೂ ಇತರ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಪ್ರಕ್ರಿಯೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಲಾಗಿದೆ. ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ಕೆ.ಆರ್. ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ಸಿದ್ದಾಪುರ ವಾರ್ಡ್, ವಿವಿಪುರಂ, ಕಲಾಸಿ ಪಾಳ್ಯಗಳಲ್ಲಿ, ಪ್ರಕರಣ ವರದಿಯಾದ ಅಕ್ಕಪಕ್ಕದ ಬೀದಿಗಳು ಸೇರಿದಂತೆ ಸೀಲ್ ಡೌನ್ ಮಾಡಲು ನಿರ್ಧರಿಸಲಾಯಿತು.

    ಕ್ವಾರಂಟೈನ್ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು. ಅಗತ್ಯ ಬಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಲಾಯಿತು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿಗದಿ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಯಿತು. ಅಲ್ಲದೆ ಪ್ರತಿ ವಾರ್ಡಿನಲ್ಲಿ ಫೀವರ್ ಕ್ಲಿನಿಕ್ ಸ್ಥಾಪಿಸಲು ನಿರ್ಧರಿಸಲಾಯಿತು.

    ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಮತ್ತಿತರ ಸರ್ಕಾರಿ ಸಂಸ್ಥೆಗಳಲ್ಲಿ ಇರುವವರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವಂತೆ ತಿಳಿಸಲಾಯಿತು. ಬೆಂಗಳೂರು ನಗರದಲ್ಲಿ ಯಾವುದೇ ಪರಿಸ್ಥಿತಿಯಲ್ಲೂ ಕೋವಿಡ್ 19 ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಬೆಂಗಳೂರಿನಲ್ಲಿ ಆರ್ಥಿಕ ಚಟುವಟಿಕೆಗಳು ಪುನರಾರಂಭವಾಗಿದ್ದು, ಈ ಚಟುವಟಿಕೆಗಳಿಗೆ ಧಕ್ಕೆಯಾಗದಂತೆ ಕೋವಿಡ್ 19 ನಿಯಂತ್ರಿಸುವುದು ನಮ್ಮ ಕರ್ತವ್ಯ ಎಂದು ಅಧಿಕಾರಿಗಳಿಗೆ ತಿಳಿಸಿದರು.

    ಕ್ವಾರಂಟೈನ್ ಉಲ್ಲಂಘನೆ ಮತ್ತು ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮತ್ತು ಸ್ವಯಂ ಸೇವಕರನ್ನೊಳಗೊಂಡ ತಂಡಗಳು ಕಾರ್ಯನಿರ್ವಹಿಸುತ್ತಿವೆ. ವಾರ್ ರೂಂ ನಲ್ಲಿ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಕುರಿತು ಕ್ಷಣ ಕ್ಷಣದ ಮಾಹಿತಿ ಲಭ್ಯವಿರಬೇಕು. ಸೋಂಕಿತರಿಗೆ ವಿಳಂಬವಿಲ್ಲದೆ ಚಿಕಿತ್ಸೆ ಒದಗಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

  • ಆರಂಭದಲ್ಲೇ ಖಡಕ್ ಸೂಚನೆ ಕೊಟ್ಟು ಕ್ಯಾಬಿನೆಟ್ ಸಭೆ ಆರಂಭಿಸಿದ ಸಿಎಂ

    ಆರಂಭದಲ್ಲೇ ಖಡಕ್ ಸೂಚನೆ ಕೊಟ್ಟು ಕ್ಯಾಬಿನೆಟ್ ಸಭೆ ಆರಂಭಿಸಿದ ಸಿಎಂ

    ಬೆಂಗಳೂರು: ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಆರಂಭದಲ್ಲೇ ಎಲ್ಲ ಸಚಿವರಿಗೆ ಖಡಕ್ ಸೂಚನೆ ನೀಡಿದ್ದಾರೆ.

    ಎಲ್ಲೇ ಹೋದರೂ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಈಗಾಗಲೇ ನಾಲ್ವರು ಸಚಿವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಆಹಾರ ವಿತರಣೆ, ದಿನಸಿ ವಿತರಣೆ ಎನ್ನುವ ನೆಪದಲ್ಲಿ ಗುಂಪು ಸೇರಿಸಬಾರದು. ಕ್ಷೇತ್ರದ ಪ್ರವಾಸದ ಸಂದರ್ಭದಲ್ಲಿ ಕೂಡಾ ಎಚ್ಚರದಿಂದಿರಿ ಎಂದು ಸೂಚಿಸಿದ್ದಾರೆ.

    ಒಂದೊಮ್ಮೆ ಸಚಿವರಿಗೆ ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ಕಷ್ಟ ಆಗಲಿದೆ. ಇಲ್ಲಿ ತನಕ ಮಾಡಿದ್ದ ಪ್ರಯತ್ನ ಎಲ್ಲವೂ ವ್ಯರ್ಥವಾಗಲಿದೆ. ನೀವು ಜನರಿಗೆ ಮಾದರಿ ಆಗಬೇಕು ಎಂದು ಸಿಎಂ ಕಿವಿಮಾತನ್ನು ಎಲ್ಲ ಸಚಿವರಿಗೆ ಹೇಳಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ವಾಹಿನಿಯ ಕ್ಯಾಮೆರಾಮನ್‍ಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆತನ ಸಂಪರ್ಕಕ್ಕೆ ಬಂದಿದ್ದರಿಂದ ಡಿಸಿಎಂ ಅಶ್ವಥ್ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಸುಧಾಕರ್ ಹಾಗೂ ಸಿ.ಟಿ.ರವಿ ಹೋಮ್ ಕ್ವಾರಂಟೈನ್ ನಲ್ಲಿದ್ದು ಇಂದಿನ ಕ್ಯಾಬಿನೆಟ್ ಸಭೆಗೆ ಗೈರಾಗಿದ್ದರು.

    ಕೊರೊನಾ ಸೋಂಕಿತ ಕ್ಯಾಮೆರಾಮನ್ 24ರಂದೇ ಆಸ್ಪತ್ರೆಗೆ ದಾಖಲಾಗಿದ್ದು, ಆ ದಿನದಿಂದಲೇ ಸಚಿವರ ಕ್ವಾರಂಟೈನ್ ಆಗಬೇಕಿತ್ತು. ಹೋಮ್ ಕ್ವಾರಂಟೈನ್ ಆಗುವ ಅವಧಿ 14 ದಿನ ಅಂತ ಮಾರ್ಗಸೂಚಿಯಲ್ಲಿದೆ. ಬುಧವಾರ ಸುಧಾಕರ್ ಮಂಡ್ಯದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಕ್ವಾರಂಟೈನ್‍ನಲ್ಲಿ ಇರಬೇಕಾದವರು ಎಲ್ಲಂದರಲ್ಲಿ ಓಡಾಡಬಹುದೇ? ಜನರಿಗೊಂದು ನ್ಯಾಯ? ಸಚಿವರಿಗೊಂದು ನ್ಯಾಯವೇ ಎಂಬ ಪ್ರಶ್ನೆ ಎದ್ದಿತ್ತು.

    ಡಿಕೆಶಿ ಪ್ರಶ್ನೆ: ಕ್ಯಾಮೆರಾಮನ್ ಜೊತೆ ಸಿಎಂ, ಡಿಸಿಎಂ, ಸಚಿವರು ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದಾರೆ. ಆದರೆ ಅವರು ಯಾಕೆ ಕ್ವಾರಂಟೈನ್ ಆಗಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವಿಟ್ಟರ್‍ನಲ್ಲಿ ಪ್ರಶ್ನೆ ಕೇಳಿದ್ದರು. ಈ ಟ್ವೀಟ್ ಬೆನ್ನಲ್ಲೇ ಸುಧಾಕರ್ ಟ್ವೀಟ್ ಮಾಡಿ ನಾನು ಹೋಮ್ ಕ್ವಾರಂಟೈನ್‍ನಲ್ಲಿದ್ದೇನೆ ಎಂದು ತಿಳಿಸಿದ್ದರು.

    ಸೆಲ್ಫ್ ಕ್ವಾರಂಟೈನ್: ಕ್ಯಾಮೆರಾಮನ್ ಸಂಪರ್ಕಕ್ಕೆ ಬಂದ ಬೊಮ್ಮಾಯಿ, ಅಶ್ವಥ್ ನಾರಾಯಣ, ಸಿಟಿ ರವಿ, ಸುಧಾಕರ್ ಅವರ ಪರೀಕ್ಷೆ ನಡೆದಿದ್ದು, ನೆಗೆಟಿವ್ ಬಂದಿದೆ. ಸೋಮಣ್ಣ ಅವರ ಪರೀಕ್ಷಾ ವರದಿ ಬರಬೇಕಿದೆ.

    ಪತ್ರಕರ್ತರು ಕ್ವಾರಂಟೈನ್: ಕ್ಯಾಮೆರಾಮನ್ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಪತ್ರಕರ್ತರು ಈಗಾಗಲೇ ಕ್ವಾರಂಟೈನ್ ನಲ್ಲಿದ್ದಾರೆ. ಏ.20 ರಿಂದ 22ರವರೆಗೆ ಸೋಂಕಿತ ಕ್ಯಾಮೆರಾಮನ್ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ, ವಿಧಾನಸೌಧಕ್ಕೆ ಭೇಟಿ ನೀಡಿದ್ದಾರೆ. ಡಿಸಿಎಂ ಅಶ್ವಥ್ ನಾರಾಯಣ, ಸಿಟಿ ರವಿ, ಸೋಮಣ್ಣ, ಸುಧಾಕರ್ ಅವರ ಸಂದರ್ಶನವನ್ನು ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಕಾರಿನಲ್ಲೇ ಕುಳಿತುಕೊಂಡು ಮಾತನಾಡಿದ್ದಾರೆ.

    ನೆಗೆಟಿವ್ ಬಂದಿದೆ: ಡಿಕೆ ಶಿವಕುಮಾರ್ ಟ್ವೀಟ್ ಬೆನ್ನಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿಟಿ ರವಿ ಟ್ವೀಟ್ ಮಾಡಿ, ಪಾಸಿಟಿವ್ ಬಂದ ಕ್ಯಾಮೆರಾಮೆನ್ ಜೊತೆ ಸಭೆಯಲ್ಲಿ ಹತ್ತಿರದಿಂದ ಯಾವುದೇ ಸಂಪರ್ಕ ಆಗದೇ ಇದ್ದರೂ ನಾನು ಏ.28ರಂದು ಪರೀಕ್ಷೆ ಎದುರಿಸಿದ್ದು, ಫಲಿತಾಂಶ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾರೆ.

  • ಸಂಘದ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‍ವೈ ಶಿಸ್ತಿನ ಕಾರ್ಯಕರ್ತ

    ಸಂಘದ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‍ವೈ ಶಿಸ್ತಿನ ಕಾರ್ಯಕರ್ತ

    ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ ಅಂದ್ರೇನೆ ಶಿಸ್ತು. ಪ್ರಧಾನಿಯೇ ಆಗಿರಲಿ, ಮುಖ್ಯಮಂತ್ರಿಗಳೇ ಆಗಿರಲಿ ಸಂಘದ ಕಾರ್ಯಕ್ರಮ ಅಂದ್ರೆ ಅಲ್ಲಿ ಶಿಸ್ತಿನ ಸಿಪಾಯಿಯಂತೆ ಸಾಮಾನ್ಯ ಕಾರ್ಯಕರ್ತನಂತೆ ಇರಬೇಕು. ಹುದ್ದೆ, ಹೆಸರು ಯಾವುದು ಇಲ್ಲಿ ಮುಖ್ಯ ಅಲ್ಲ. ಕಾರ್ಯಕರ್ತ ಅನ್ನೋದು ಮಾತ್ರ ಇಲ್ಲಿ ಮುಖ್ಯ. ಇವತ್ತು ಸಿಎಂ ಯಡಿಯೂರಪ್ಪ ಇಂತಹದ್ದೇ ಪ್ರಸಂಗಕ್ಕೆ ಸಾಕ್ಷಿಯಾದ್ರು. ಸಂಘದ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಸಂಘದ ಕಾರ್ಯಕರ್ತನಂತೆ ಸಾಮಾನ್ಯರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಮಾಗಡಿ ರಸ್ತೆಯ ಚನ್ನೇನಹಳ್ಳಿಯ ಜನಸೇವಾ ವಿದ್ಯಾಲಯದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಭಾಗಿಯಾಗಿದ್ದರು. ಕಟ್ಟಡ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗವಹಿಸಿದ್ರು. ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಸೇರಿ 5 ಜನರಿಗೆ ಮಾತ್ರ ವೇದಿಕೆ ಮೇಲೆ ಅವಕಾಶ ನೀಡಲಾಗಿತ್ತು. ಸಿಎಂ ಯಡಿಯೂರಪ್ಪಗೆ ವೇದಿಕೆ ಮೇಲೆ ಅವಕಾಶ ನೀಡಿರಲಿಲ್ಲ. ಹೀಗಾಗಿ ಸಿಎಂ ಯಡಿಯೂರಪ್ಪ ಸಾಮಾನ್ಯ ಕಾರ್ಯಕರ್ತನಂತೆ ವೇದಿಕೆಯ ಮುಂಭಾಗದಲ್ಲಿ ಕುಳಿತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು.

    ಸುಮಾರು ಒಂದು ಗಂಟೆಗಳ ಕಾಲ ಕಾರ್ಯಕ್ರಮ ನಡೆಯಿತು. ಸಿಎಂ ಯಡಿಯೂರಪ್ಪ ಸಂಪೂರ್ಣ ಕಾರ್ಯಕ್ರಮ ಮುಗಿಯುವರೆಗೆ ಇದ್ದರು. ಸಿಎಂ ಜೊತೆ ಸಚಿವರಾದ ಸೋಮಣ್ಣ, ಭೈರತಿ ಬಸವರಾಜ್, ಸೋಮಶೇಖರ್ ಸೇರಿ ಹಲವರು ಭಾಗವಹಿಸಿದ್ರು. ಎಲ್ಲರೂ ವೇದಿಕೆ ಮುಂಭಾಗದಲ್ಲಿ ಕುಳಿತು ಆರ್‌ಎಸ್‌ಎಸ್ ಕಾರ್ಯಕರ್ತರಂತೆ ಶಿಸ್ತಿನ ಸಿಪಾಯಿಗಳಾಗಿದ್ದರು.

    ವಿಜಯೇಂದ್ರ ಭಾಗಿ: ಒಂದು ಕಡೆ ಸಿಎಂ ಯಡಿಯೂರಪ್ಪ ಸಂಘದ ಕಾರ್ಯಕರ್ತನಂತೆ ವೇದಿಕೆ ಮುಂಭಾಗದಲ್ಲಿ ಕುಳಿತಿದ್ರೆ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೂಡಾ ಕಾರ್ಯಕ್ರಮ ವೀಕ್ಷಣೆಗೆ ಆಗಮಿಸಿ ವಿದ್ಯಾರ್ಥಿಯಾಗಿದ್ದರು. ವಿಜಯೇಂದ್ರ ತಮ್ಮ 8-10 ನೇ ತರಗತಿ ವ್ಯಾಸಂಗವನ್ನ ಇದೇ ಶಾಲೆಯಲ್ಲಿ ಮುಗಿಸಿದ್ರು. ಹೀಗಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಸಿಎಂ ಮಗ ಅನ್ನೊ ಹಮ್ಮು ಬಿಟ್ಟು ಶಾಲೆಯ ಹಳೆ ವಿದ್ಯಾರ್ಥಿತರಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು. ಹಳೆ ವಿದ್ಯಾರ್ಥಿಗಳ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಣೆ ಮಾಡಿದ್ರು.

  • ಮುಖ್ಯಮಂತ್ರಿಗಳ 1 ಲಕ್ಷ ಮನೆ ಯೋಜನೆಗೆ ಬಿಎಸ್‍ವೈ ಶಂಕುಸ್ಥಾಪನೆ

    ಮುಖ್ಯಮಂತ್ರಿಗಳ 1 ಲಕ್ಷ ಮನೆ ಯೋಜನೆಗೆ ಬಿಎಸ್‍ವೈ ಶಂಕುಸ್ಥಾಪನೆ

    ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿಗಳ ಒಂದು ಲಕ್ಷ ಬಹು ಮಹಡಿ ಕಟ್ಟಡ ಯೋಜನೆಗೆ ಸಿಎಂ ಯಡಿಯೂರಪ್ಪ ಮೊದಲ ಬಾರಿಗೆ ಶಂಕು ಸ್ಥಾಪನೆ ಮಾಡಿದರು. ಬೆಂಗಳೂರಿನಲ್ಲಿ ಬಡವರಿಗಾಗಿ ಮನೆ ನಿರ್ಮಾಣ ಮಾಡುವ ಯೋಜನೆ ಇದಾಗಿದ್ದು, ಮುಂದಿನ ವರ್ಷದ ವೇಳೆಗೆ ಫಲಾನುಭವಿಗಳಿಗೆ ಮನೆಗಳು ಲಭ್ಯವಾಗಲಿದೆ.

    ದಾಸರಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಗಾಣಿಗರಹಳ್ಳಿಯ ಸರ್ವೆ ನಂಬರ್ 74 ರಲ್ಲಿ ಸುಮಾರು 932 ಬಹುಮಹಡಿ ಮನೆಗಳಿಗೆ ಶಂಕು ಸ್ಥಾಪನೆ ಮಾಡಲಾಯ್ತು. ರಾಜೀವ್ ಗಾಂಧಿ ವಸತಿ ನಿಗಮದಿಂದ ಈ ಬಹುಮಹಡಿ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದೆ.

    ಬೆಂಗಳೂರಿನಲ್ಲಿ ಆರ್ಥಿಕವಾಗಿ ಹಿಂದುಳಿದ, ಬಡವರಿಗಾಗಿ ಸೂರು ನೀಡುವ ಯೋಜನೆ ಇದಾಗಿದೆ. ಕಡಿಮೆ ಹಣದಲ್ಲಿ ಮನೆಗಳನ್ನ ಬಡವರಿಗೆ ಈ ಯೋಜನೆಯಲ್ಲಿ ನೀಡಲಾಗುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆ ಘೋಷಣೆ ಮಾಡಿದ್ದರು. ಬೆಂಗಳೂರಿನ ಹಲವೆಡೆ ಜಾಗಗಳನ್ನ ಗುರುತಿಸಿ ಅಲ್ಲಿ ನಿರ್ಮಾಣ ಮಾಡಿ ಬಡವರಿಗೆ ಹಂಚಿಕೆ ಮಾಡಲಾಗುತ್ತದೆ. ಈಗಾಗಲೇ 4-5 ಕಡೆ ಮನೆಗಳ ನಿರ್ಮಾಣ ಕೆಲಸ ಪ್ರಾರಂಭವಾಗಿದ್ದು, ಮೊದಲ ಹಂತದ ಮನೆಗಳು ಇನ್ನೊಂದು ವರ್ಷದಲ್ಲಿ ಪೂರ್ಣವಾಗುವ ಸಾಧ್ಯತೆಇದೆ.

    ಶಂಕು ಸ್ಥಾಪನೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆಯಂತೆ ಬಡವರಿಗೆ ಮನೆ ಕಟ್ಟಿಕೊಡುತ್ತಿದ್ದೇವೆ. ಎಲ್ಲಾ ಬಡವರಿಗೂ ಮನೆ ಕೊಡ್ತೀವಿ ಅಂತ ತಿಳಿಸಿದರು. ಬೆಂಗಳೂರಿನಲ್ಲಿ ಸರ್ಕಾರ ಭೂಮಿ ಅನೇಕ ಕಡೆ ಒತ್ತುವರಿ ಆಗಿದೆ. ಒತ್ತುವರಿ ಆಗಿರುವ ಜಾಗವನ್ನು ತೆರವು ಮಾಡಿ ಅಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.