Tag: Yelahanka

  • ಹಣ ಉಳಿಸಲು ಕಾಂಟ್ರ್ಯಾಕ್ಟರ್‌ಗಳು ಮುಂಜಾಗ್ರತ ಕ್ರಮಕೈಗೊಂಡಿಲ್ಲ: ಏರೋ ಶೋ ಹಿಂದಿನ ಕಾಂಟ್ರ್ಯಾಕ್ಟರ್

    ಹಣ ಉಳಿಸಲು ಕಾಂಟ್ರ್ಯಾಕ್ಟರ್‌ಗಳು ಮುಂಜಾಗ್ರತ ಕ್ರಮಕೈಗೊಂಡಿಲ್ಲ: ಏರೋ ಶೋ ಹಿಂದಿನ ಕಾಂಟ್ರ್ಯಾಕ್ಟರ್

    -ಬೆಂಕಿ ಅವಘಡಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣನಾ?

    ಬೆಂಗಳೂರು: ಏರೋ ಶೋ ಕಾಂಟ್ರ್ಯಾಕ್ಟರ್ ಗಳು ಹಣ ಉಳಿಸಲು ಮುಂಜಾಗ್ರತಾ ಕ್ರಮಕೈಗೊಂಡಿಲ್ಲ. ಹೀಗಾಗಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ ಎಂದು ಏರೋ ಶೋ ಹಿಂದಿನ ಕಾಂಟ್ರ್ಯಾಕ್ಟರ್ ಮಂಜುನಾಥ್ ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಮಂಜುನಾಥ್, ಫ್ಯಾಬ್ರಿಕಾನಾ ಎಕ್ಸಿಬ್ಯುಷನ್ 1994ರಿಂದ 2007 ವರೆಗೂ ಆಫೀಸಿಯಲ್ ಕಾಂಟ್ರ್ಯಾಕ್ಟರ್ ಪಡೆದಿತ್ತು. ಆಗ ಅಗ್ನಿಶಾಮಕ ದಳವನ್ನು ಪ್ರತ್ಯೇಕವಾಗಿ ಸರ್ಕಾರದಿಂದ ನಿಯೋಜನೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ನಮ್ಮ ಕಾಂಟ್ರ್ಯಾಕ್ಟ್ ಕೈ ತಪ್ಪಿತ್ತು ಎಂದು ತಿಳಿಸಿದರು.

    ಏರೋ ಶೋ ಆರಂಭಕ್ಕೂ ಎರಡು ತಿಂಗಳ ಮುನ್ನವೇ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಕೊಳ್ಳಬೇಕು. ಈ ನಿಟ್ಟಿನಲ್ಲಿ ಏರೋ ಶೋ ನಡೆಯುವ ಸುತ್ತಮುತ್ತಲಿನ ಜಾಗದಲ್ಲಿರುವ ಒಣ ಹುಲ್ಲನ್ನು ತೆಗೆದು ಹಾಕಬೇಕು. ಮಣ್ಣು ಕಾಣುವವರೆಗೂ ನೆಲವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಬೇಕು. ಆದರೆ ಈ ಬಾರಿ ಏರೋ ಶೋ ನಡೆಸುತ್ತಿರುವವರು ಒಣ ಹುಲ್ಲನ್ನು ಹಾಗೆ ಬಿಟ್ಟಿದ್ದಾರೆ. ಇದರಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಎಂದು ದೂರಿದರು.

    ಏರೋ ಶೋ ನಡೆಯುವ ಸುತ್ತಲಿನ ಪ್ರದೇಶಕ್ಕೆ ದಿನವೂ ಸುಮಾರು 50 ಲಕ್ಷ ಲೀಟರ್ ನೀರು ಹಾಕಬೇಕು. ಇಂತಹ ಎಕ್ಸಿಬಿಷನ್‍ಗಳನ್ನು ಕೇವಲ ಒಬ್ಬರಿಗೆ ಕಾಂಟ್ರ್ಯಾಕ್ಟ್ ನೀಡಬಾರದು. ಏಕೆಂದರೆ ನಿರ್ವಹಣೆ ಕಷ್ಟವಾಗುತ್ತದೆ. ಇಂತಹ ನಿರ್ಧಾರಗಳನ್ನು ಕೇಂದ್ರ ರಕ್ಷಣಾ ಸಚಿವಾಲಯ ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

    ಹಣ ಉಳಿಸುವ ಉದ್ದೇಶದಿಂದ ಅನೇಕ ಮುಂಜಾಗ್ರತಾ ಕ್ರಮಗಳ ಬಗ್ಗೆ ನಿರ್ಲಕ್ಷಿಸಿದ್ದಾರೆ. ರಕ್ಷಣಾ ಸಚಿವಾಲಯವು ಕಾಂಟ್ರ್ಯಾಕ್ಟ್ ನೀಡಲು ಟೆಂಡರ್ ಕರೆಯುತ್ತದೆ. ಹೀಗಾಗಿ ನಾನು ಕಳೆದ ಹತ್ತು ವರ್ಷಗಳಿಂದ ಕಾಂಟ್ರ್ಯಾಕ್ಟ್ ಪಡೆದು ಅಚ್ಚುಕಟ್ಟಾಗಿ ಕೆಲಸ ಮಾಡಿದ್ದೆ. ಆದರೆ ಈ ಬಾರಿ ತಾಂತ್ರಿಕ ಸಮಸ್ಯೆ ನೆಪವೊಡ್ಡಿ ಎಚ್‍ಎಎಲ್ ನನಗೆ ಕಾಂಟ್ರ್ಯಾಕ್ಟ್ ಕೈ ತಪ್ಪಿಸಿತು ಎಂದು ಹೇಳಿದರು.

    ಈ ಬಾರಿ ಕಾಂಟ್ರ್ಯಾಕ್ಟರ್ ಪಡೆದವರು ಯಾರು ಯಾವ ಕೆಲಸ ಮಾಡುತ್ತಿದ್ದಾರೆ ಎನ್ನುವುದೇ ಅರ್ಥವಾಗುತ್ತಿಲ್ಲ. ಅಷ್ಟೇ ಅಲ್ಲದೆ ಕಾಂಟ್ರ್ಯಾಕ್ಟ್ ಕೊಟ್ಟ ಬಳಿಕ ಎಚ್‍ಎಎಲ್ ಅಧಿಕಾರಿಗಳು ಬಂದು ಕಾಮಗಾರಿಯನ್ನು ಪರಿಶೀಲನೆ ಮಾಡಬೇಕು. ಆದರೆ ಹುಲ್ಲು ಇದ್ದರೂ ಏರೋ ಶೋ ಹೇಗೆ ನಡೆಸಿದರು ಎನ್ನುವುದೇ ಅರ್ಥವಾಗುತ್ತಿಲ್ಲ ಎಂದು ದೂರಿದರು.

    https://www.youtube.com/watch?v=1MBmvHvh1bU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 100ಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ-ಏರ್ ಶೋ ಸ್ಥಗಿತ

    100ಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ-ಏರ್ ಶೋ ಸ್ಥಗಿತ

    -ಏರೋ ಇಂಡಿಯಾ ಶೋನಲ್ಲಿ ಅಗ್ನಿದೇವನ ರುದ್ರ ನರ್ತನ

    ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 100ಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ ಹತ್ತಿಕೊಂಡಿದ್ದರಿಂದ ಏರ್ ಶೋ ಸ್ಥಗಿತಗೊಳಿಸಲಾಗಿದೆ. ಸ್ಥಳಕ್ಕೆ 10ಕ್ಕೂ ಹೆಚ್ಚು ಅಗ್ನಿಶಾಮಕದಳದ ವಾಹನಗಳು ಆಗಮಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

    ಪಾರ್ಕಿಂಗ್ ಗೇಟ್ ನಂಬರ್ 5ರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಯಲಹಂಕ ವಾಯುನೆಲೆಯಲ್ಲಿಯ ಏರ್ ಶೋ ಸ್ಥಗಿತಗೊಂಡಿದೆ. ಪಾರ್ಕಿಂಗ್ ಲಾಟ್ ಬಳಿ ಒಣಹುಲ್ಲು ಹೆಚ್ಚಾಗಿದ್ದು, ಸಿಗರೇಟ್ ಹಾಕಿದ್ದರಿಂದ ಬೆಂಕಿ ಹತ್ತಲು ಕಾರಣ ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ವಾಹನದ ಮಾಲೀಕರು ಪಾರ್ಕಿಂಗ್ ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರು ಯಾರನ್ನು ಒಳಗಡೆ ಬಿಡುತ್ತಿಲ್ಲ.

    ಯಲಹಂಕದ ಬಳಿ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಯಲಹಂಕ ಮತ್ತು ಹೆಬ್ಬಾಳದ ಕಡೆ ಪ್ರಯಾಣ ಬೆಳೆಸುವವರು ಮಾರ್ಗ ಬದಲಿಸಿಕೊಳ್ಳುವುದು ಉತ್ತಮ. ಇಂದು ಮತ್ತು ನಾಳೆ ಸಾರ್ವಜನಿಕರಿಗೆ ಏರ್ ಶೋ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ವೀಕೆಂಡ್ ಎಂದು ಸಾವಿರಾರು ಸಂಖ್ಯೆಯಲ್ಲಿ ಜನರು ಏರ್ ಶೋ ಕಣ್ತುಂಬಿಕೊಳ್ಳಲು ಆಗಮಿಸಿದ್ದರು.

    ಬೆಂಕಿ ಅವಘಡ ಸಂಭವಿಸಿದ ವೇಳೆ ಸ್ಥಳದಲ್ಲಿ ಸಾರ್ವಜನಿಕರು ಇಲ್ಲದ ಕಾರಣ ಪ್ರಾಣಹಾನಿ ಸಂಭವಿಸಿಲ್ಲ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ತಮ್ಮ ಮುಂದೆಯೇ ನೆಚ್ಚಿನ ಕಾರು ಅಗ್ನಿದೇವನಿಗೆ ಆಹುತಿ ಆಗುತ್ತಿರೋದನ್ನು ಕಂಡು ಕೆಲವರು ಕಣ್ಣೀರು ಹಾಕುತ್ತಿದ್ದಾರೆ. ಮತ್ತೆ ಕೆಲವರು ನಮ್ಮ ಕಾರುಗಳನ್ನು ತೆಗೆದುಕೊಳ್ಳಲು ಒಳಗೆ ಬಿಡಿ ಎಂದು ಭದ್ರತಾ ಸಿಬ್ಬಂದಿ ಜೊತೆಗೆ ವಾಗ್ವಾದಕ್ಕೆ ಇಳಿಯುತ್ತಿದ್ದಾರೆ.

    https://www.youtube.com/watch?v=lVsSt2_gisQ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಏರೋ ಇಂಡಿಯಾ ಏರ್ ಶೋ ವೇಳೆ ಅಗ್ನಿ ಅವಘಡ

    ಏರೋ ಇಂಡಿಯಾ ಏರ್ ಶೋ ವೇಳೆ ಅಗ್ನಿ ಅವಘಡ

    ಬೆಂಗಳೂರು: ಏರೋ ಇಂಡಿಯಾ 2019ರ ಏರ್ ಶೋ ವೇಳೆ ಮತ್ತೆ ಅಗ್ನಿ ಅವಘಢ ಸಂಭವಿಸಿದೆ.

    ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ನಡೆಯುತ್ತಿದ್ದು, ಏರ್ ಪೋರ್ಸ್ ರಸ್ತೆಯ ಗೇಟ್ ನಂಬರ್ 5ರ ಬಳಿ ಬೆಂಕಿ ಕಾಣಿಸಿಕೊಂಡಿದೆ. ಐದು ಕಾರು ಮತ್ತು ಒಂದು ಬೈಕಿಗೆ ಬೆಂಕಿ ಹತ್ತಿಕೊಂಡಿದೆ ಎಂಬ ಮಾಹಿತಿಗಳು ಲಭ್ಯವಾಗಿದೆ.

    ಮೊದಲನೇ ಹಂತದ ವಿಮಾನ ಹಾರಾಟ ಮುಕ್ತಾಯಗೊಂಡಿದ್ದು, ಇಂದು ಮತ್ತು ನಾಳೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಹುಲ್ಲಿಗೆ ಕೆಲ ಕಿಡಿಗೇಡಿಗಳು ಸಿಗರೇಟ್ ಹಾಕಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಯಲಹಂಕದ ಮೈದಾನದಲ್ಲಿ ದಟ್ಟಹೊಗೆ ಕಾಣಿಸಿಕೊಂಡಿದ್ದು, ಈಗಾಗಲೇ ಅಗ್ನಿಶಾಮಕದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ತಲುಪಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

    ಇತ್ತೀಚೆಗಷ್ಟೇ ಏರ್ ಶೋದ ಅಂಗವಾಗಿ ನಡೆದ ತಾಲೀಮು ವೇಳೆ ಸೂರ್ಯ ಕಿರಣ್ ಎಂಬ ಎರಡು ವಿನಾನಗಳು ಹಾರಾಡುತ್ತಿದ್ದಾಗಲೇ ಪರಸ್ಪರ ಡಿಕ್ಕಿಯಾಗಿ ನೆಲಕ್ಕುರುಳಿತ್ತು. ಈ ಘಟನೆಯಲ್ಲಿ ಓರ್ವ ಪೈಲಟ್ ಸಾವನ್ನಪ್ಪಿದ್ದರು.

    https://www.youtube.com/watch?v=S8anwX84c_8

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 1 ಸಾವಿರ ಅಡಿಯಿಂದ ಬಿದ್ದರೂ ಇಬ್ಬರು ಪೈಲಟ್‍ಗಳು ಬಚಾವ್ – ಮತ್ತೊಬ್ಬ ಪೈಲಟ್ ಸಾವಿಗೆ ಕಾರಣವೇನು?

    1 ಸಾವಿರ ಅಡಿಯಿಂದ ಬಿದ್ದರೂ ಇಬ್ಬರು ಪೈಲಟ್‍ಗಳು ಬಚಾವ್ – ಮತ್ತೊಬ್ಬ ಪೈಲಟ್ ಸಾವಿಗೆ ಕಾರಣವೇನು?

    ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಏರ್ ಶೋ 12ನೇ ಆವೃತ್ತಿಯ ಏರೋ ಇಂಡಿಯಾಗೆ ಬುಧವಾರ ಅಧಿಕೃತ ಚಾಲನೆ ಸಿಗಲಿದೆ. ಆದರೆ ಅದಕ್ಕೂ ಮುನ್ನವೇ ಮಂಗಳವಾರ ನಡೆದ ತಾಲೀಮಿನಲ್ಲಿ ಅವಘಡ ಸಂಭವಿಸಿದ್ದು ಸೂರ್ಯಕಿರಣ್ ಪೈಲಟ್ ಸಾಹಿಲ್ ಗಾಂಧಿ ದುರಂತದಲ್ಲಿ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಪೈಲಟ್‍ಗಳಾದ ವಿಟಿ ಶೆಲ್ಕೆ ಹಾಗೂ ಸ್ಕ್ವಾಡ್ರನ್ ಲೀಡರ್ ತೇಜೇಶ್ವರ್ ಸಿಂಗ್ ಗಂಭೀರವಾಗಿ ಗಾಯಗೊಂಡಿದ್ದಾರೆ.

    ನಡೆದಿದ್ದೇನು?
    ಯಲಹಂಕ ವಾಯುನೆಲೆಯಲ್ಲಿ ಬೆಳಗ್ಗೆ 11.30ರ ಸುಮಾರಿಗೆ ಸೂರ್ಯ ಕಿರಣ್ ವಿಮಾನಗಳ ತಾಲೀಮು ಆರಂಭವಾಗಿತ್ತು. ಆಗಸದಲ್ಲಿ ಶಿಸ್ತು ಬದ್ಧವಾಗಿ ತಾಲೀಮು ನಡೆಯುತ್ತಿದ್ದಾಗ 11.35ರ ಸುಮಾರಿಗೆ ವಿಮಾನಗಳು ಮುಖಾಮುಖಿಯಾಗಿ ಡಿಕ್ಕಿಯಾಗಿತ್ತು. ಇದರ ಪರಿಣಾಮ ನಿಯಂತ್ರಣ ತಪ್ಪಿದ ವಿಮಾನಗಳು ನೆಲದತ್ತ ಉರುಳತೊಡಗಿತು.

    ವಿಮಾನದಲ್ಲೇ ಸಾವನ್ನಪ್ಪಿದ ಪೈಲಟ್:
    ಎರಡು ವಿಮಾನದಲ್ಲಿ 3 ಮಂದಿ ಪೈಲಟ್‍ಗಳು ಇದ್ದರು. ವಿಮಾನ ಡಿಕ್ಕಿಯಾಗುತ್ತಿದಂತೆ ಇಬ್ಬರು ಪೈಲಟ್‍ಗಳು ಪ್ಯಾರಾಚೂಟ್ ಸಹಾಯದಿಂದ ವಿಮಾನದಿಂದ ಕೆಳಗಡೆ ಹಾರಿದ್ದಾರೆ. ಆದರೆ ಕಾಕ್‍ಪಿಟ್ ಹಿಂದೆ ಕುಳಿತಿದ್ದ ಸಾಹಿದ್ ಗಾಂಧಿಗೆ ಮಾತ್ರ ವಿಮಾನದಿಂದ ಹೊರ ಬರಲು ಸಾಧ್ಯವಾಗಿರಲಿಲ್ಲ. ಅಂತಿಮ ಕ್ಷಣದವರೆಗೂ ಕಾಕ್ ಪಿಟ್ ಓಪನ್ ಮಾಡಲು ಎಷ್ಟೇ ಪ್ರಯತ್ನ ನಡೆಸಿದರೂ ಕೂಡ ವಿಮಾನ ಓಪನ್ ಆಗದ ಕಾರಣ ವಿಮಾನ ನೆಲಕ್ಕೆ ಉರುಳುತ್ತಿದಂತೆ ಸಾವನ್ನಪ್ಪಿದ್ದಾರೆ.

    ವಿಮಾನದ ಒಂದು ಭಾಗ ಸ್ಥಳೀಯ ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮನೆ ಭಾಗಶಃ ಹಾನಿಯಾಗಿತ್ತು. ನೋಡ ನೋಡುತ್ತಿದಂತೆ ಧರೆಗುರುಳಿದ ವಿಮಾನ ಹೊತ್ತಿ ಉರಿಯತೊಡಗಿತು. ಇದಕ್ಕೂ ಮುನ್ನ ವಿಮಾನ ದಿಕ್ಕು ತಪ್ಪುತ್ತಿದ್ದಂತೆ ಎಚ್ಚೆತ್ತ ಇಬ್ಬರು ಪೈಲಟ್‍ಗಳು ಪ್ಯಾರಾಚೂಟ್ ಬಳಸಿ ಸಾವಿರ ಅಡಿ ಮೇಲಿನಿಂದ ಜಿಗಿದಿದ್ದರು. ಪ್ಯಾರಾಚೂಟ್ ಸಹಾಯವಿದ್ದರೂ ಕೂಡ 1 ಸಾವಿರ ಅಡಿ ಎತ್ತರದಿಂದ ಜಿಗಿದ ಪರಿಣಾಮ ಇಬ್ಬರು ಪೈಲಟ್‍ಗಳು ಗಂಭೀರವಾಗಿ ಗಾಯಗೊಂಡಿದ್ದರು. ಕ್ಷಣ ಮಾತ್ರದಲ್ಲಿ ನಡೆದ ಘಟನೆಯಿಂದ ಎಚ್ಚೆತ್ತ ಅಧಿಕಾರಿಗಳು ಏರ್ ಅಂಬುಲೆನ್ಸ್ ಹೆಲಿಕಾಪ್ಟರ್ ನಲ್ಲಿ ಇಬ್ಬರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿದರು. ಬಹುಬೇಗ ಚಿಕಿತ್ಸೆ ಲಭಿಸಿದ ಕಾರಣ ಇಬ್ಬರು ಪೈಲಟ್‍ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಬಡವಾಣೆಯ ಜನ ಕಂಗಾಲು:
    ವಾಯುನೆಲೆಯ ಪಕ್ಕದ ದಂಡಿಗೆನಹಳ್ಳಿಯಲ್ಲಿ ಎರಡು ವಿಮಾನಗಳು ಧರೆಗೆ ಅಪ್ಪಳಿಸಿದವು. ಒಂದು ವಿಮಾನ ಬಡಾವಣೆಯ ಮನೆಗೆ ತಾಗಿಬಿದ್ದರೆ, ಮತ್ತೊಂದು ವಿಮಾನ 300 ಮೀಟರ್ ದೂರದ ಶೆಡ್ ಪಕ್ಕದಲ್ಲಿ ಬಿದ್ದಿದೆ. ಭಾರೀ ಶಬ್ಧ ಕೇಳಿ ಮನೆಯಿಂದ ಹೊರ ಬಂದ ಬಡಾವಣೆಯ ಜನ ಚೆಲ್ಲಾಪಿಲ್ಲಿಯಾಗಿ ಓಡಿ ಹೋಗಿದ್ದರು. ಕೂಡಲೇ 15ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದವು. ಘಟನೆ ಕುರಿತು ಸಂಜೆ ವೇಳೆಗೆ ಅಧಿಕೃತ ಮಾಹಿತಿ ನೀಡಿದ ವಾಯುಪಡೆ ಪೈಲಟ್ ಸಾವನ್ನಪ್ಪಿದ್ದನ್ನು ಖಚಿತ ಪಡಿಸಿತ್ತು.

    ಶೋದಲ್ಲಿ ಸೂರ್ಯಕಿರಣ್ ಇರಲ್ಲ:
    ಈ ಬಾರಿ ಏರೋ ಶೋ ನಲ್ಲಿ ಸೂರ್ಯ ಕಿರಣ್ ಹಾರಾಟ ಇರುವುದಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ವಿಮಾನವನ್ನೂ ನಾವು ತಪಾಸಣೆ ಮಾಡಿ ಹಾರಾಟ ನಡೆಸುತ್ತೇವೆ. ಇಂದಿನ ಘಟನೆ ದುರದೃಷ್ಟಕರವಾಗಿದ್ದು, ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಈ ಬಗ್ಗೆ ಈಗಲೇ ಏನೂ ಹೇಳಲು ಆಗುವುದಿಲ್ಲ. ತನಿಖೆ ನಡೆದ ಬಳಿಕವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗಳೂರಿಗೆ ಬಂದಿಳಿಯಿತು ರಫೇಲ್ ವಿಮಾನಗಳು – ವಿಶೇಷತೆ ಏನು? ವಿಡಿಯೋ ನೋಡಿ

    ಬೆಂಗಳೂರಿಗೆ ಬಂದಿಳಿಯಿತು ರಫೇಲ್ ವಿಮಾನಗಳು – ವಿಶೇಷತೆ ಏನು? ವಿಡಿಯೋ ನೋಡಿ

    ಬೆಂಗಳೂರು: ಸದ್ಯ ದೇಶದ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿರುವ ರಫೇಲ್ ವಿಮಾನ ಭಾರತದಲ್ಲಿ ಲ್ಯಾಂಡ್ ಆಗಿದೆ. ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಫ್ರಾನ್ಸಿನ ಡಸಾಲ್ಟ್ ಕಂಪನಿಯ 3 ರಫೇಲ್ ವಿಮಾನಗಳು ಯಲಹಂಕ ವಾಯುನೆಲೆಗೆ ಆಗಮಿಸಿವೆ.

    ಮೂರು ವಿಮಾನಗಳ ಪೈಕಿ 2 ವಿಮಾನಗಳು ವೈಮಾನಿಕ ಪ್ರದರ್ಶನ ನೀಡಿದರೆ ಒಂದು ವೀಕ್ಷಣೆಗೆ ಇರಿಸಲಾಗುತ್ತದೆ. ಹಾರಾಟ ಪ್ರದರ್ಶನ ನೀಡಲಿರುವ ವಿಮಾನಗಳ ಅಧಿಕೃತ ಪೂರ್ವಸಿದ್ಧತೆಯ ಹಾರಾಟ ಗುರುವಾರದಿಂದ ಆರಂಭವಾಗಲಿದೆ. 12ನೇ ಆವೃತ್ತಿಯ ಏರೋ ಇಂಡಿಯಾ ವೈಮಾನ ನಿಕ ಪ್ರದರ್ಶನ ಫೆ.20 ರಿಂದ ಫೆ.24ರವರೆಗೆ ನಡೆಯಲಿದೆ. ಇದನ್ನೂ ಓದಿ: ರಫೇಲ್ ಡೀಲ್ – ಯಾವುದು ಅಗ್ಗ? ಯಾವುದು ದುಬಾರಿ?

    ಇದುವರೆಗೆ ದೇಶ- ವಿದೇಶಗಳ 365 ಕಂಪನಿಗಳು ಪ್ರದರ್ಶನದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದು, ಆಕಾಶದಲ್ಲಿ ಪ್ರದರ್ಶನ ನೀಡಲು 31 ವಿಮಾನಗಳು ಒಪ್ಪಿಗೆ ನೀಡಿವೆ. 22 ವಿಮಾನಗಳನ್ನು ಪ್ರದರ್ಶನಕ್ಕಿಡಲಾಗುತ್ತಿದ್ದು, ದೇಶೀಯ ಸಾರಂಗ್, ಸೂರ್ಯಕಿರಣ್ ವಿಮಾನಗಳು ಭಾಗವಹಿಸಲಿವೆ.

    ರಫೇಲ್ ವಿಶೇಷತೆ ಏನು?
    ಎರಡು ಎಂಜಿನ್, ಎರಡು ಸೀಟ್ ಗಳನ್ನು ಹೊಂದಿರುವ ವಿಮಾನ ಗಂಟೆಗೆ ಗರಿಷ್ಟ 2 ಸಾವಿರ ಕಿ.ಮೀ ವೇಗದಲ್ಲಿ ಹಾರಾಟ ನಡೆಸಬಲ್ಲದು. 9,500 ಕೆಜಿ ತೂಕದ ಈ ವಿಮಾನ 9,500 ಕೆಜಿ ತೂಕದ ಶಸ್ರ್ತಾಸ್ತ್ರಗಳನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ. ಈ ವಿಮಾನ ಇಳಿಯಲು ಮತ್ತು ಹಾರಾಟಕ್ಕೆ 400 ಮೀಟರ್ ಉದ್ದದ ರನ್‍ವೇ ಅಗತ್ಯವಿಲ್ಲ.

    ವೈರಿಗಳನ್ನು ಗುರುತಿಸಲು ರಫೇಲ್ ವಿಮಾನದಲ್ಲಿ ಸ್ಪೆಕ್ಟ್ರಾ ಸಿಸ್ಟಂ ಇದೆ. ಥೇಲ್ಸ್ ಗ್ರೂಪ್ ಈ ಸ್ಪೆಕ್ಟ್ರಾ ಸಿಸ್ಟಂ ಅನ್ನು ಅಭಿವೃದ್ಧಿ ಪಡಿಸಿದೆ. ರೇಡಿಯೋ ಫಿಕ್ವೆನ್ಸಿ, ರೇಡಾರ್ ವಾರ್ನಿಂಗ್ ರಿಸೀವರ್, ಲೇಸರ್ ವಾರ್ನಿಂಗ್, ಮಿಸೈಲ್ ವಾರ್ನಿಂಗ್, ರೇಡಾರ್ ಜಾಮರ್ ಗಳನ್ನು ಸ್ಪೆಕ್ಟ್ರಾ ಸಿಸ್ಟಂ ನಲ್ಲಿರುವ ಸೆನ್ಸರ್ ಗಳು ಗ್ರಹಿಸುತ್ತವೆ. 1800 ಕಿ.ಮಿ ವ್ಯಾಪ್ತಿ ವಿರೋಧಿಗಳ ಕಾರ್ಯ ಚಟುವಟಿಕೆಯನ್ನು ಗ್ರಹಿಸುವ ಸಾಮರ್ಥ್ಯ ಹೊಂದಿದೆ. ಈ ಕಾರಣಕ್ಕಾಗಿಯೇ ರಫೇಲ್ ವಿಮಾನ ಬೇರೆ ಯುದ್ಧ ವಿಮಾನಗಳಿಗಿಂತ ಭಿನ್ನವಾಗಿ ಗುರುತಿಸಿಕೊಂಡಿದೆ.

    ಡಸಾಲ್ಟ್ ಕಂಪನಿ 1986ರಲ್ಲಿ ಮೊದಲ ರಫೇಲ್ ವಿಮಾನವನ್ನು ನಿರ್ಮಿಸಿದ್ದು, ಭಾರತ ಅಲ್ಲದೇ ಈಜಿಪ್ಟ್, ಕತಾರ್ ದೇಶಗಳು ರಫೇಲ್ ಖರೀದಿ ಸಂಬಂಧ ಡಸಾಲ್ಟ್ ಕಂಪನಿಯ ಜೊತೆ ಮಾತುಕತೆ ನಡೆಸಿವೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?

    ಯಾವ ದೇಶ ಏನು ಬೇಡಿಕೆ ಇಡುತ್ತದೋ ಆ ಬೇಡಿಕೆಗೆ ಅನುಗುಣವಾಗಿ ಡಸಾಲ್ಟ್ ಕಂಪನಿ ರಫೇಲ್ ವಿಮಾನವನ್ನು ಅಭಿವೃದ್ಧಿ ಪಡಿಸುತ್ತದೆ. ಲೋ ಬ್ಯಾಂಡ್ ಜಾಮರ್, 10 ಗಂಟೆಗಳ ಹಾರಾಟ ಮಾಹಿತಿ ಸಂಗ್ರಹ, ಇಸ್ರೇಲಿ ಹೆಲ್ಮೆಟ್ ಮೌಂಟೆಡ್ ಡಿಸ್ಪ್ಲೇ, ರೆಡಾರ್ ವಾರ್ನಿಂಗ್ ಇನ್ಫ್ರಾರೆಡ್ ಶೋಧ ಮತ್ತು ಟ್ರ್ಯಾಕಿಂಗ್ ಸೇರಿದಂತೆ ಹಲವು ಅತ್ಯಾಧುನಿಕ ಉಪಕರಣಗಳ ಹಾಗೂ ಸೌಲಭ್ಯಗಳನ್ನು  ಅಳವಡಿಸಬೇಕೆಂದು ಭಾರತ ಬೇಡಿಕೆ ಇಟ್ಟಿದ್ದು, ಈ ಬೇಡಿಕೆಗೆ ಅನುಗುಣವಾಗಿ ರಫೇಲ್ ವಿಮಾನ ತಯಾರಾಗುತ್ತಿದೆ.

  • ಯಲಹಂಕ ವಾಯುನೆಲೆಯಲ್ಲಿ 2 ದಿನ ಮೊಕ್ಕಾಂ ಹಾಕಿದ್ದ ನಕಲಿ ಐಎಎಸ್ ಅಧಿಕಾರಿ ಅರೆಸ್ಟ್!

    ಯಲಹಂಕ ವಾಯುನೆಲೆಯಲ್ಲಿ 2 ದಿನ ಮೊಕ್ಕಾಂ ಹಾಕಿದ್ದ ನಕಲಿ ಐಎಎಸ್ ಅಧಿಕಾರಿ ಅರೆಸ್ಟ್!

    ಬೆಂಗಳೂರು: ಐಎಎಸ್ ಅಧಿಕಾರಿ ಎಂದು ನಕಲಿ ದಾಖಲೆ ಸೃಷ್ಟಿಸಿ ನಗರದ ಯಲಹಂಕ ವಾಯುನೆಲೆಯಲ್ಲಿ 2 ದಿನಗಳ ಕಾಲ ಮೊಕ್ಕಾಂ ಹೂಡಿದ್ದ ವ್ಯಕ್ತಿಯನ್ನ ಯಲಹಂಕ ಪೊಲೀಸರು ಬಂಧಿಸಿದ್ದಾರೆ.

    ಪೂರ್ಣಚಂದ್ರ ದಾಸ್ ಬಂಧಿತ ಆರೋಪಿಯಾಗಿದ್ದು, ಸೆಪ್ಟೆಂಬರ್ 25ರಂದು ಯಲಹಂಕ ವಾಯನೆಲೆಯ ಒಳಗೆ ಪತ್ನಿಯೊಂದಿಗೆ ಪ್ರವೇಶ ಪಡೆದಿದ್ದ. ತಾನು ದೆಹಲಿ ಮೂಲದ ಐಎಎಸ್ ಅಧಿಕಾರಿ ಎಂದು ಗುರುತಿನ ಚೀಟಿ ನೀಡಿದ್ದ. ಅಲ್ಲದೇ ತಾನು ಡೈರೆಕ್ಟರೇಟ್ ಪರ್ಸನಲ್ ಆಂಡ್ ಟ್ರೈನಿಂಗ್‍ನಲ್ಲಿ ಅಧಿಕಾರಿ ಎಂದು ಹೇಳಿದ್ದ. ಅಲ್ಲದೇ ಸೆ. 25 ರಿಂದ 26ರವರೆಗೆ ಮೆಸ್ ನಲ್ಲಿ ರೂಮ್ ನೀಡುವಂತೆ ಕೇಳಿದ್ದ. ಇದರ ಅನ್ವಯ ಆಫೀಸರ್ಸ್ ಮೆಸ್‍ನಲ್ಲಿ ರೂಮ್ ವ್ಯವಸ್ಥೆ ಮಾಡಲಾಗಿತ್ತು ಎಂಬ ಮಾಹಿತಿ ಲಭಿಸಿದೆ.

    ಸಿಕ್ಕಿ ಬಿದ್ದಿದ್ದು ಹೇಗೆ?
    ಐಎಎಸ್ ಅಧಿಕಾರಿ ಎಂದು ಹೇಳಿದ್ದ ಪೂರ್ಣಚಂದ್ರ ದಾಸ್ ನೀಡಿದ್ದ ಗುರುತಿನ ಚೀಟಿ ಹಾಗೂ ಸಹಿ ಮಾಡುವ ವೇಳೆ ಬರೆದಿದ್ದ ಹೆಸರಿನಲ್ಲಿ ಅಕ್ಷರ ದೋಷ ಇರುವುದನ್ನು ಅಧಿಕಾರಿಗಳು ಗಮನಿಸಿದ್ದು, ಇದರಿಂದ ಅನುಮಾನಗೊಂಡು ದೆಹಲಿ ಕಚೇರಿಗೆ ಸಂಪರ್ಕ ಮಾಡಿದ್ದಾರೆ. ಈ ವೇಳೆ ಪೂರ್ಣಚಂದ್ರ ದಾಸ್ ನಕಲಿ ಐಎಎಸ್ ಅಧಿಕಾರಿ ಎಂದು ತಿಳಿದುಬಂದಿದೆ.

    ಸದ್ಯ ಆರೋಪಿಯ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐಪಿಸಿ ಸೆಕ್ಷನ್ 419 ಮತ್ತು 420ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸದ್ಯ ಬಂಧಿಸಲಾಗಿರುವ ಪೂರ್ಣಚಂದ್ರ ದಾಸ್ 2017 ರಲ್ಲೂ ನ್ಯಾಷನಲ್ ಏರೋಸ್ಪೇಸ್ ಲ್ಯಾಬ್‍ನಲ್ಲಿ ತಂಗಿದ್ದ ಕುರಿತು ಮಾಹಿತಿ ಲಭಿಸಿದ್ದು, 5 ದಿನಗಳ ಕಾಲ ಐಎಎಸ್ ಅಧಿಕಾರಿ ಎಂದು ರೂಮ್ ಪಡೆದಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಪೂರ್ಣಚಂದ್ರ ದಾಸ್‍ನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ನಕಲಿ ಅಧಿಕಾರಿಯ ಹೆಸರಿನಲ್ಲಿ ಗೂಢಾಚಾರಿಕೆ ನಡೆಸುತ್ತಿರುವ ಕುರಿತು ಅನುಮಾನ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕಡೆ ಗಮನ ನೀಡಬೇಕು- ರಾಜ್ಯಪಾಲ ವಿ.ಆರ್.ವಾಲಾ

    ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕಡೆ ಗಮನ ನೀಡಬೇಕು- ರಾಜ್ಯಪಾಲ ವಿ.ಆರ್.ವಾಲಾ

    – ರೇವಾ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವ
    – ಸಾವಿರಾರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

    ಬೆಂಗಳೂರು: ವಿದ್ಯಾರ್ಥಿಗಳು ಫ್ಯಾಷನ್ ವ್ಯಾಮೋಹ ಮತ್ತು ವ್ಯಸನ ಮುಕ್ತರಾಗಿ ಮುಂದಿನ ಭವಿಷ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ರಾಜ್ಯಪಾಲ ಶ್ರೀ ವಿ.ಆರ್.ವಾಲಾ ಹೇಳಿದರು.

    ಯಲಹಂಕದಲ್ಲಿರುವ ರೇವಾ ವಿಶ್ವವಿದ್ಯಾಲಯ 3ನೇ ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ಕೇವಲ ಫ್ಯಾಷನ್ ಕಡೆಗೆ ಹೆಚ್ಚಿನ ಕಾಳಜಿವಹಿಸುತ್ತಾರೆ. ಮುಂದೆ ಮದ್ಯಪಾನ, ಡ್ರಗ್ಸ್‍ಗಳಿಗೆ ವ್ಯಸನಿಗಳಾಗಿ ತಮ್ಮ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ಹಾಳುಮಾಡುಕೊಳ್ಳುವುದು ಬಿಟ್ಟು ವ್ಯಾಸಂಗದ ಕಡೆಗೆ ಹೆಚ್ಚಿನ ಗಮಹನರಿಸಬೇಕೆಂದು ಕರೆ ನೀಡಿದರು.

    ಅಮೆರಿಕ, ಯುರೋಪ್ ದೇಶಗಳು ಮಾತ್ರ ಅವಿಷ್ಕಾರಗಳನ್ನು ಮಾಡಲು ಸಾಧ್ಯ ಎಂದು ನಾವು ಸುಮ್ಮನೆ ಕುಳಿತುಕೊಳ್ಳುವುದು ಮೂರ್ಖತನ. ನಮ್ಮಲ್ಲಿ ಆಪಾರ ಮಾನವ ಸಂಪನ್ಮೂಲವಿದೆ. ಯುವಶಕ್ತಿಯನ್ನೇ ಅಸವಾಗಿ ಬಳಕೆ ಮಾಡಿಕೊಂಡು ನೂತನ ಕ್ಷೇತ್ರಗಳಲ್ಲಿ ಅವಿಷ್ಕಾರ ಮಾಡಬೇಕು. ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದರು.

    ರೇವಾ ವಿಶ್ವವಿದ್ಯಾಲಯ ವಿಶಾಲ ಕ್ಯಾಂಪಸ್ ಹೊಂದಿದ್ದು, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣ ನೀಡುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

    ಇಂಡಿಯನ್ ನ್ಯಾಷನಲ್ ಅಕಾಡೆಮಿ ಆಫ್ ಇಂಜಿನಿಯರಿಂಗ್ ಅಧ್ಯಕ್ಷ ಶ್ರೀ ಪದ್ಮಭೂಷಣ ಡಾ.ಆರ್.ಎನ್.ಸುರೇಶ್ ಮಾತನಾಡಿ, ಪದವಿ ಸ್ವೀಕರಿಸಿದ ಬಹುತೇಕ ವಿದ್ಯಾರ್ಥಿಗಳು ವ್ಯಾಸಂಗದ ವಾತಾವರಣದಿಂದ ವೃತ್ತಿ ಜೀವನಕ್ಕೆ ಹೆಜ್ಞೆ ಹಾಕುತ್ತಿದ್ದೀರಿ. ನಿಮ್ಮ ಮುಂದೆ ಸ್ಪಧಾತ್ಮಕ ಜಗತ್ತು ಇದೆ. ಇಲ್ಲಿ ನೀವು ಸ್ಪರ್ಧಿಸಬೇಕಾಗುತ್ತದೆ. ಶಿಕ್ಷಣದ ಜತೆಗೆ ಕೌಶಲ್ಯ ಆಧಾರಿತ ಶಿಕ್ಷಣ ಇದ್ದರೆ, ನೀವು ಉದ್ಯೋಗಗಿಟ್ಟಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

    ನಾವು ಚಂದ್ರಯಾನ ಉಪಗ್ರಹ ಉಡಾವಣೆಯಲ್ಲಿ ಯಶಸ್ವಿಯಾಗಿದ್ದೇವೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟ ಅಭಿವೃದ್ಧಿಯನ್ನು ಸಾಧಿಸುವ ಸಾಮಥ್ರ್ಯಗನಲ್ಲಿದೆ. ಇತ್ತೀಚಿಗೆ ಹಿಮಾಲಯನ್ ಎಂಬ ಅತಿ ಉದ್ದದ ಸೇತುವೇ ನಿರ್ಮಾಣ ಮಾಡಿದ್ದೇವೆ. ಮಾಹಿತಿ ತಂತ್ರಜ್ಞಾನದಲ್ಲಿ ವಿಶ್ವದಲ್ಲೇ ಗುರುತಿಸಿಕೊಂಡಿತ್ತೆವೆ. ಹೀಗಾಗಿ ನಮ್ಮಲ್ಲಿ ಸಾಧಿಸುವ ಛಲ ಇಟ್ಟುಕೊಂಡರೆ ಎಲ್ಲವೂ ಸಾಧ್ಯವಿದೆ. ರೇವಾ ವಿವಿ ನೋಡಿ ನನಗೆ ಖುಷಿಯಾಗುತ್ತಿದೆ. ಇಲ್ಲಿನ ಶಿಸ್ತು, ಸ್ವಚ್ಛ ಮತ್ತು ಸುಂದರ ಕ್ಯಾಂಪಸ್ ಎಲ್ಲರನ್ನು ಮೆಚ್ಚಿಸುತ್ತದೆ ಎಂದರು.

    ನಮ್ಮ ಅನುಭವವೇ ನಮ್ಮ ಭವಿಷ್ಯವನ್ನು ಉತ್ತಮಗೊಳಿಸುತ್ತದೆ. ಭಾರತದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನೇ ನಾವು ಅವಕಾಶಗಳಾಗಿ ಪರಿವರ್ತಿಸಿಕೊಂಡು ಅವುಗಳಿಗೆ ಪರಿಹಾರ ಕಂಡುಹಿಡಿಯುವ ಮೂಲಕ ನಾವು ಮುಂದೆ ಹೋಗಬೇಕಿದೆ ಎಂದರು.

    ಇದು ನಮ್ಮ ಮೂರನೇ ವರ್ಷದ ಘಟಿಕೋತ್ಸವಾಗಿದೆ. ನಾವು ವಿದ್ಯಾರ್ಥಿಗಳ ಸರ್ವೋತಮುಖ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಬೇಕು ಎಂದು ರೇವಾ ವಿಶ್ವವಿದ್ಯಾಲಯ ಕುಲಾಧಿಪತಿ ಡಾ.ಪಿ.ಶ್ಯಾಮರಾಜು ಹೇಳಿದರು.

    ಈ ಘಟಿಕೋತ್ಸವದಲ್ಲಿ 7 ಪಿಎಚ್.ಡಿ, 1201 ಪದವಿ ಮತ್ತು 525 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ರೇವಾ ವಿಶ್ವವಿದ್ಯಾಲಯ ಕುಲಾಧಿಪತಿ ಡಾ.ಪಿ.ಶ್ಯಾಮರಾಜು, ಕುಲಪತಿ ಡಾ.ಎಸ್.ವೈ.ಕುಲಕರ್ಣಿ, ಕುಲಸಚಿವ ಡಾ.ಎಂ.ಧನಂಜಯ ಮತ್ತಿತರರು ಇದ್ದರು. 27 ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಅಭಿನಂದಿಸಲಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಫುಟ್‍ ಪಾತಲ್ಲೇ ನಂದಿನಿ ಪಾರ್ಲರ್ ಇಟ್ಟ ಶಾಸಕರ ಪಿಎ

    ಫುಟ್‍ ಪಾತಲ್ಲೇ ನಂದಿನಿ ಪಾರ್ಲರ್ ಇಟ್ಟ ಶಾಸಕರ ಪಿಎ

    ಬೆಂಗಳೂರು: ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಪ್ರತಿನಿಧಿಸುವ ಬೆಂಗಳೂರಿನ ಯಲಹಂಕದಲ್ಲಿ ಫುಟ್‍ ಪಾತ್‍ ನಲ್ಲೇ ಅಂಗಡಿಗಳು ಉದ್ಭವವಾಗಿದೆ.

    ಡೈರಿ ಸರ್ಕಲ್ ಬಳಿಯಿರುವ ಪಾದಾಚಾರಿ ಮಾರ್ಗದಲ್ಲಿ ಶಾಸಕರ ಪಿಎ ಮಲ್ಲಿಕಾರ್ಜುನ್ ನಂದಿನಿ ಮಿಲ್ಕ್ ಪಾರ್ಲರ್ ತೆರೆದಿದ್ದಾರೆ. ಅದೇ ಫುಟ್ ಪಾತ್‍ನಲ್ಲಿ ಶುದ್ಧ ನೀರಿನ ಘಟಕ ಕೂಡ ಸ್ಥಾಪಿಸಿದ್ದಾರೆ. ನಿಯಮಗಳಿಗೆ ವಿರುದ್ಧವಾಗಿಯೇ ಸ್ವತಃ ಶಾಸಕರು ಮತ್ತು ಅಟ್ಟೂರು ವಾರ್ಡ್‍ನ ಕಾರ್ಪೋರೇಟರ್ ನೇತ್ರಾ ಪಲ್ಲವಿ ಅನುಮತಿ ದಯಪಾಲಿಸಿದ್ದಾರೆ.

    ಇವರ ಈ ಆಟದಿಂದಾಗಿ ರಸ್ತೆಯ ಪಕ್ಕದಲ್ಲಿ ಹೋಗೋಕೆ ಜಾಗವಿಲ್ಲದೇ ಜನಸಾಮಾನ್ಯರು ಒದ್ದಾಡುತ್ತಿದ್ದಾರೆ. ಆದರೆ ಘನವೆತ್ತ ಬಿಜೆಪಿ ಕಾರ್ಪೊರೇಟರ್ ಯಾಕ್ ಮೇಡಂ ಈ ರೀತಿ ಅಂದರೆ ಉತ್ತರಿಸೋಕೆ ಸಿದ್ಧರಿಲ್ಲ. ರಸ್ತೆಯಲ್ಲಿ ಓಡಾಡಲು ತುಂಬಾ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಬುಧವಾರ ರೇವಾ ವಿವಿಯಲ್ಲಿ ಸ್ಟೇಟ್ ಆಫ್ ದಿ ಆರ್ಟ್ ಸೆಕ್ಯೂರಿಟಿ ಸರ್ವಿಸ್ ಸಿಸ್ಟಂ ಕಾರ್ಯಕ್ರಮ

    ಬುಧವಾರ ರೇವಾ ವಿವಿಯಲ್ಲಿ ಸ್ಟೇಟ್ ಆಫ್ ದಿ ಆರ್ಟ್ ಸೆಕ್ಯೂರಿಟಿ ಸರ್ವಿಸ್ ಸಿಸ್ಟಂ ಕಾರ್ಯಕ್ರಮ

    ಬೆಂಗಳೂರು: ರೇವಾ ವಿಶ್ವವಿದ್ಯಾಲಯ “ಸ್ಟೇಟ್ ಆಫ್ ದಿ ಆರ್ಟ್ ಸೆಕ್ಯೂರಿಟಿ ಸರ್ವಿಸ್ ಸಿಸ್ಟಂ” ಹೆಸರಿನಲ್ಲಿ ಬುಧವಾರ ಕಾರ್ಯಕ್ರಮವನ್ನು ಆಯೋಜಿಸಿದೆ.

    ಬುಧವಾರ ಬೆಳಗ್ಗೆ 10.30ಕ್ಕೆ ಇಲ್ಲಿನ ಯಲಹಂಕದ ಕಟ್ಟಿಗೆನಹಳ್ಳಿಯ ರುಕ್ಮಿಣಿ ನಾಲೆಡ್ಜ್ ಪಾರ್ಕ್ ಸಮೀಪದ ರೇವಾ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮವು ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಭಾಗವಹಿಸಲಿದ್ದಾರೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೇವಾ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಶ್ಯಾಮ ರಾಜು ವಹಿಸಲಿದ್ದಾರೆ. ರೇವಾ ವಿಶ್ವವಿದ್ಯಾಲಯದ ಉಪ ಕುಲಸಚಿವರಾದ ಡಾ.ಎಸ್.ವೈ.ಕುಲಕರ್ಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿಲಿದ್ದಾರೆ.

  • ಟಾಟಾ ಏಸ್ ಗೆ ಹಿಂಬದಿಯಿಂದ ಇಟಿಯೋಸ್ ಕಾರ್ ಡಿಕ್ಕಿ- ಇಬ್ಬರ ಸಾವು

    ಟಾಟಾ ಏಸ್ ಗೆ ಹಿಂಬದಿಯಿಂದ ಇಟಿಯೋಸ್ ಕಾರ್ ಡಿಕ್ಕಿ- ಇಬ್ಬರ ಸಾವು

    ಬೆಂಗಳೂರು: ಟಾಟಾ ಏಸ್ ಗೆ ಹಿಂಬದಿಯಿಂದ ಇಟಿಯೋಸ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಪ್ರಯಾಣಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಬೆಂಗಳೂರಿನ ಯಲಹಂಕ ಬಳಿಯ ವೆಂಕಟಾಲ ಫ್ಲೈಓವರ್ ಮೇಲೆ ನಡೆದಿದೆ.

    ಚಾಲಕ ಪ್ರವೀಣ್(30) ಮತ್ತು ನಾರಾಯಣ ರಾವ್(40) ಮೃತ ದುದೈವಿಗಳು. ಮೃತ ನಾರಾಯಣ ರಾವ್ ಪತ್ನಿ ಮೀನಾಕ್ಷಿ ಮತ್ತು ಸಂಬಂಧಿ ಮಲ್ಲಿಕಾರ್ಜುನರ ಸ್ಥಿತಿ ಚಿಂತಾಜನಕವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಮಗ ಮಂಜುನಾಥ್ ಪ್ರಾಣಾಪಯದಿಂದ ಪಾರಾಗಿದ್ದಾನೆ.

    ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನಾರಾಯಣ ರಾವ್ ಕುಟುಂಬ ಮಂಗಳವಾರ ಸಂಜೆ ಚಂದ್ರಲೇಔಟ್‍ನಲ್ಲಿರುವ ಸಂಬಂಧಿ ಮಲ್ಲಿಕಾರ್ಜುನ್ ರಾವ್ ಮನೆಗೆ ಬಂದಿದ್ದು, ಅಲ್ಲಿಂದ ಶಿರಡಿಗೆ ಪ್ರಯಾಣ ಬೆಳೆಸಿದ್ದರು. ಓಲಾ ಕ್ಯಾಬ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ್ಟಿದ್ದರು.

    ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಸ್ಟೀಲ್ ಪೈಪ್‍ಗಳಿದ್ದ ಟಾಟಾ ಏಸ್ ಗಾಡಿಗೆ ಹಿಂಬದಿಯಿಂದ ಇಟಿಯೋಸ್ ಕಾರ್ ಡಿಕ್ಕಿ ಹೊಡೆದಿದೆ. ಆಗ ಸ್ಟೀಲ್ ಪೈಪ್‍ಗಳು ನುಗ್ಗಿದ್ದರಿಂದ ಮುಂದಿನ ಸೀಟಿನಲ್ಲಿ ಕುಳಿತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಚಾಲಕ ಪ್ರವೀಣ್ ಮೂಲತಃ ಮಂಡ್ಯ ಜಿಲ್ಲೆಯ ಪಾಂಡವಪುರದವರಾಗಿದ್ದು, ಇತ್ತೀಚಿಗಷ್ಟೆ ಮದುವೆಯಾಗಿ ಬೆಂಗಳೂರಿನ ನಾಗರಭಾವಿಯಲ್ಲಿ ವಾಸವಾಗಿದ್ದರು.

    ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಟ್ಟಿದ್ದು, ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.