Tag: Yeshu Statue

  • ಏಸು ಪ್ರತಿಮೆ ನಿರ್ಮಾಣ ವಿವಾದ – ಸರ್ಕಾರಕ್ಕೂ ಮುನ್ನ ಕ್ರೈಸ್ತ ಮುಖಂಡರ ಸತ್ಯ ಶೋಧನ ವರದಿ ಬಿಡುಗಡೆ

    ಏಸು ಪ್ರತಿಮೆ ನಿರ್ಮಾಣ ವಿವಾದ – ಸರ್ಕಾರಕ್ಕೂ ಮುನ್ನ ಕ್ರೈಸ್ತ ಮುಖಂಡರ ಸತ್ಯ ಶೋಧನ ವರದಿ ಬಿಡುಗಡೆ

    ಬೆಂಗಳೂರು: ಸದ್ಯಕ್ಕೆ ತಣ್ಣಗಾಗಿದ್ದ ಕನಕಪುರದ ಕಪಾಲ ಬೆಟ್ಟದಲ್ಲಿ ಉದ್ದೇಶಿತ ಏಸು ಪ್ರತಿಮೆ ನಿರ್ಮಾಣ ವಿವಾದಕ್ಕೆ ಮತ್ತೆ ಜೀವ ಬಂದಿದೆ. ಏಸು ಪ್ರತಿಮೆ ನಿರ್ಮಾಣ ಸಂಬಂಧ ವಿವಾದಿತ ಗೋಮಾಳ ಭೂಮಿ ವಾಪಸ್ ಬಗ್ಗೆ ನಿರ್ಧರಿಸಲು ಸರ್ಕಾರ ಈಗಾಗಲೇ ರಾಮನಗರ ಜಿಲ್ಲಾಡಳಿತದಿಂದ ವರದಿ ಕೇಳಿರೋದು ಹಳೆಯ ಸುದ್ದಿ. ಆದರೆ ರಾಮನಗರ ಜಿಲ್ಲಾಡಳಿತವು ಪ್ರಕರಣ ಸಂಬಂಧ ವರದಿ ಸಿದ್ಧಪಡಿಸಿದ್ದ ಬಹಳ ದಿನಗಳಾಗಿದ್ದರೂ ಆ ವರದಿಯನ್ನು ಬಿಡುಗಡೆ ಮಾಡಲು ಸರ್ಕಾರ ಸೂಕ್ತ ಸಮಯಕ್ಕಾಗಿ ಕಾಯುತ್ತಿದೆ ಎನ್ನಲಾಗಿದೆ. ಈ ಮಧ್ಯೆ ಸರ್ಕಾರದ ವರದಿಗೂ ಮುನ್ನವೇ ಕ್ರೈಸ್ತ ಮುಖಂಡರ ಸತ್ಯಶೋಧನಾ ಸಮಿತಿಯೊಂದು ವಿವಾದ ಸಂಬಂಧ ವರದಿ ಸಿದ್ಧಪಡಿಸಿ ಇವತ್ತು ಬಿಡುಗಡೆಗೊಳಿಸಿದೆ. ಆ ಮೂಲಕ ಸಮಿತಿಯು ಸರ್ಕಾರಕ್ಕೆ ಸೆಡ್ಡು ಹೊಡೆದಿದೆ.

    ಮಕ್ಕಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷ ಮರಿಸ್ವಾಮಿ ಅಧ್ಯಕ್ಷತೆಯ ಈ ಸತ್ಯ ಶೋಧನಾ ಸಮಿತಿಯಲ್ಲಿ ಐದು ಮಂದಿ ಕ್ರೈಸ್ತ ಸದಸ್ಯರಿದ್ದರು. ವರದಿ ಬಂದ ಬಳಿಕವೂ ವಿಧಾನಪರಿಷತ್ ಸದಸ್ಯ ಐವಾನ್ ಡಿಜೋಜಾ ನೇತೃತ್ವದ ನಿಯೋಗವು ನಿನ್ನೆ ಕಪಾಲ ಬೆಟ್ಟಕ್ಕೆ ಭೇಟಿ ಕೊಟ್ಟು ವರದಿಯ ಸತ್ಯಾಂಶಗಳನ್ನು ಪರಿಶೀಲಿಸಿತು. ಇಂದು ಐವಾನ್ ಡಿಸೋಜಾ ಅವರು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವರದಿಯನ್ನು ಬಿಡುಗಡೆಗೊಳಿಸಿದರು. ಈ ವೇಳೆ ಮಾತಾಡಿದ ಐವಾನ್ ಡಿಸೋಜಾ, ಈ ವರದಿಯ ಪ್ರಕಾರ ಕಪಾಲಬೆಟ್ಟ ಅಭಿವೃದ್ಧಿ ಟ್ರಸ್ಟ್ ಗೆ ಸರ್ಕಾರ 2018 ರಲ್ಲಿ 10 ಎಕರೆ ಭೂಮಿ ಮಂಜೂರು ಮಾಡಿತ್ತು. ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗಾಗಿ ಅಂತಲೇ ಸ್ಪಷ್ಟವಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಾಗಾಗಿ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ವಿರೋಧಿಸದಂತೆ ಮನವಿ ಮಾಡಿಕೊಂಡರು.

    ರಾಜಕೀಯ ದುರುದ್ದೇಶಕ್ಕಾಗಿ ಪ್ರಕರಣಕ್ಕೆ ವಿವಾದ ಬಣ್ಣ ಬಳಿಯಲಾಗಿದೆ. ವಿಷಬೀಜ ಬಿತ್ತುವ ಪ್ರಯತ್ನಗಳು ನಡೆದಿವೆ. ಗೋಮಾಳ ಭೂಮಿಯನ್ನು ಹಿಂದೂ, ಮುಸ್ಲಿಂ, ಕ್ರೈಸ್ತ ಇತರೇ ಸಮುದಾಯಗಳಿಗೆ ಸರ್ಕಾರ ಮೊದಲಿಂದಲೂ ಮಂಜೂರು ಮಾಡುತ್ತಾ ಬಂದಿದೆ. ಹಾಗೆಯೇ ಕಪಾಲ ಬೆಟ್ಟದಲ್ಲಿ ಕ್ರೈಸ್ತರಿಗೂ ಭೂಮಿ ಮಂಜೂರು ಮಾಡಲಾಗಿದೆ. ಹಾಗಾಗಿ ಸರ್ಕಾರ ಏಸುಪ್ರತಿಮೆ ನಿರ್ಮಿಸಲು ಅವಕಾಶ ಕೊಡಬೇಕೆಂದು ಐವಾನ್ ಡಿಸೋಜಾ ಮನವಿ ಮಾಡಿಕೊಂಡರು. ಇದೇ ವೇಳೆ ಸಕಾಧರದ ಆದೇಶ ಪ್ರತಿಯನ್ನೂ ಬಿಡುಗಡೆಗೊಳಿಸಲಾಯ್ತು.

    ಕ್ರೈಸ್ತ ಮುಖಂಡರ ಸತ್ಯ ಶೋಧನಾ ಸಮಿತಿ ವರದಿಯ ಪ್ರಮುಖ ಅಂಶಗಳು ಹೀಗಿವೆ :

    1. ಹಾರೋಬೆಲೆಯಲ್ಲಿ 1662ರಿಂದಲೂ ಕ್ರೈಸ್ತರ ವಾಸ ಇದೆ.
    2. 26/02/2018 ರಂದು ರಾಜ್ಯ ಸರ್ಕಾರವು ಕಪಾಲ ಬೆಟ್ಟ ಅಭಿವೃದ್ಧಿ ಟ್ರಸ್ಟ್ ಗೆ ಸರ್ವೆ ನಂ.283 ರಲ್ಲಿ 10 ಎಜತೆ ಗೋಮಾಳ ಜಾಗ ಮಂಜೂರು.
    3. ಕಾನೂನಾತ್ಮಕವಾಗಿ ಜಮೀನು ಮಂಜೂರು. ಪಹಣಿ ಮತ್ತು ಮ್ಯೂಟೇಷನ್ ದಾಖಲೆಗಳಲ್ಲೂ ನಮೂದು.
    4. ಆದೇಶ ಪ್ರತಿಯಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಅಂತ ಸ್ಪಷ್ಟವಾಗಿ ಉಲ್ಲೇಖ.

    5. ಹಾರೋಬೆಲೆ ಮತ್ತು ಸುತ್ತಮುತ್ತಲ ಗ್ರಾಮಗಳ ಜನರಿಗೆ ಕುಡಿಯಲು ರಾಮನಗರ ಜಿ.ಪಂ.ಯಿಂದ ಬೋರ್ ವೆಲ್ ಹಾಕಿಸಿಕೊಡಲಾಗಿದೆ. ಪ್ರತಿಮೆಗಾಗಿ ಹಾಕಿಸಿದ ಬೋರ್ ವೆಲ್ ಅಲ್ಲ.
    6. ಏಸುಪ್ರತಿಮೆ ನಿರ್ಮಾಣಕ್ಕೆ ಬಂದಿರುವ ಕಾರ್ಮಿಕರಿಗಾಗಿ ಕ್ರಮಬದ್ಧವಾಗಿ, ಶುಲ್ಕ ಪಾವತಿಸಿ ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ವಿದ್ಯುತ್ ಸಂಪರ್ಕ ಅನಧಿಕೃತ ಅನ್ನುವ ಆರೋಪ ಸುಳ್ಳು.
    7. ಬೆಟ್ಟದ ಮೇಲೆ ಬೃಹತ್ ವಾಟರ್ ಟ್ಯಾಂಕ್ ಕಟ್ಟಲಾಗಿದೆ. ಆ ಟ್ಯಾಂಕ್ ನಿರ್ಮಾಣಕ್ಕೆ ಅಗತ್ಯ ಪರಿಕರ, ಸಾಮಾಗ್ರಿ ತೆಗೆದುಕೊಂಡು ಹೋಗಲು ಅದರ ಗುತ್ತಿಗೆದಾರ ರಸ್ತೆ ನಿರ್ಮಿಸಿದ್ದಾನೆ. ಅದು ಏಸುಪ್ರತಿಮೆಗಾಗಿ ನಿರ್ಮಿಸಿದ ರಸ್ತೆ ಅಲ್ಲ.

  • ಡಿಕೆಶಿ ಕನಕಪುರದ ಎಂಎಲ್‍ಎ ಅಷ್ಟೇ ಎಂದು ಗುಡುಗಿದ ಆರ್.ಅಶೋಕ್

    ಡಿಕೆಶಿ ಕನಕಪುರದ ಎಂಎಲ್‍ಎ ಅಷ್ಟೇ ಎಂದು ಗುಡುಗಿದ ಆರ್.ಅಶೋಕ್

    ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿವಾದ ರಾಜಕೀಯಯಕ್ಕೆ ತಿರುಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆಗೆ ಬಿಜೆಪಿ ಸಾಥ್ ನೀಡಿದ್ದು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ಬಾಣಗಳ ಸುರಿಮಳೆ ಜೋರಾಗಿದೆ. ಕನಕಪುರ ಡಿಕೆಶಿಗೆ ಸಂಬಂಧಿಸಿದ್ದಲ್ಲ, ಡಿಕೆಶಿ ಕನಕಪುರ ಎಂಎಲ್‍ಎ ಅಷ್ಟೇ ಅಂತಾ ಕಂದಾಯ ಸಚಿವ ಆರ್.ಅಶೋಕ್ ಗುಡುಗಿದ್ದಾರೆ.

    ಬೆಂಗಳೂರಿನ ಪದ್ಮನಾಭನಗರದಲ್ಲಿ ಮಾತನಾಡಿದ ಆರ್.ಅಶೋಕ್, ಗಲಾಟೆ ಮಾಡಬೇಡಿ ಅಂತಾ ಡಿಕೆಶಿ ಅವರ ಕಾರ್ಯಕರ್ತರಿಗೆ ಹೇಳಿದ್ರೆ ಗಲಾಟೆ ಮಾಡಿ ಅಂತಾ ಅರ್ಥ. ನಮ್ಮ ಸರ್ಕಾರ ಗಲಾಟೆ ಮಾಡಿಸಲ್ಲ, ಗಲಾಟೆ ಮಾಡಿಸಲು ಡಿಕೆಶಿಯಿಂದ ಸಾಧ್ಯ ಅಂತಾ ಟಾಂಗ್ ಕೊಟ್ಟರು.

    ಶಿವಕುಮಾರ್ ಪ್ರಚೋದಿಸುವ ಹೇಳಿಕೆ ಕೊಡಬಾರದು. ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರ ಸ್ವಾಮೀಜಿ ರಾಮನಗರ ಜಿಲ್ಲೆಯವರು. ಶಿವಕುಮಾರ್ ಅವರಿಗೆ ಇವರು ಯಾರೂ ನೆನಪಾಗಿಲ್ವಾ? ಮೊದಲು ಹೆತ್ತ ತಾಯಿಯನ್ನು ಪೂಜಿಸೋಣ, ನಂತರ ಪಕ್ಕದ ಮನೆ ತಾಯಿಯನ್ನು ಪೂಜಿಸೋಣ ಎಂದರು.

    ಇನ್ನು ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿಚಾರವಾಗಿ ಡಿಸಿ ಮೌಖಿಕ ವರದಿ ನೀಡಿದ್ದು, ಸಮಗ್ರವಾಗಿ ಲಿಖಿತ ವರದಿ ನೀಡುವಂತೆ ಸೂಚಿಸಿರುವುದಾಗಿ ಅಶೋಕ್ ಸ್ಪಷ್ಟಪಡಿಸಿದ್ದಾರೆ. ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣಕ್ಕೆ ಡಿಸೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತಿಯಿಂದ ಅನುಮತಿ ಪಡೆದಿದ್ದಾರೆ. ಆದರೆ ಎರಡು ವರ್ಷಗಳಿಂದ ಕೆಲಸ ನಡೆಯುತ್ತಿದೆ. ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕಕ್ಕೆ ಅನುಮತಿಯನ್ನೇ ಪಡೆದಿಲ್ಲ ಅನ್ನೋದು ಆರ್. ಅಶೋಕ್ ವಾದ. ಹಾಗಾಗಿ ಸರ್ಕಾರ ಕಾನೂನಾತ್ಮಕವಾಗಿ ಹೋಗುತ್ತಿದೆ ಅಷ್ಟೇ. ಸಮಯಕ್ಕೆ ಸರಿಯಾದ ಕ್ರಮ ತೆಗೆದುಕೊಳ್ಳುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

  • ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ – ವಿವಾದಿತ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ

    ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ – ವಿವಾದಿತ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡ

    ರಾಮನಗರ: ಮಾಜಿ ಸಚಿವ ಹಾಗೂ ಕನಪುರ ಶಾಸಕ ಡಿ.ಕೆ ಶಿವಕುಮಾರ್ ಸ್ವಕ್ಷೇತ್ರ ಕನಕಪುರದ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ನಿರ್ಮಿಸಲು ಮುಂದಾಗಿರೋ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರತಿಮೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಬಿಜೆಪಿ ನಾಯಕರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದರೆ. ಇತ್ತ ಕಂದಾಯ ಸಚಿವರ ಸೂಚನೆ ಮೇರೆಗೆ ರಾಮನಗರ ಜಿಲ್ಲೆಯ ಅಧಿಕಾರಿಗಳ ತಂಡ ಪ್ರತಿಮೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲ ಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿರುವ ಏಸುವಿನ 114 ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿವೆ. ಈ ವಿಚಾರವಾಗಿ ಸಂಪೂರ್ಣ ವರದಿ ನೀಡಲು ಕಂದಾಯ ಸಚಿವ ಆರ್ ಆಶೋಕ್ ಅವರು ರಾಮನಗರ ಜಿಲ್ಲಾಧಿಕಾರಿ ಎಮ್ ಎಸ್ ಅರ್ಚನಾ ಅವರಿಗೆ ಸೂಚಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಕಪಾಲ ಬೆಟ್ಟದ ಏಸು ಪ್ರತಿಮೆ ನಿರ್ಮಾಣ ಸ್ಥಳಕ್ಕೆ ರಾಮನಗರ ಉಪವಿಭಾಗಧಿಕಾರಿ ದಾಕ್ಷಾಯಿಣಿ, ಕನಕಪುರ ತಹಶೀಲ್ದಾರ್ ಅನಂದಯ್ಯ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಅಧಿಕಾರಿಗಳ ಭೇಟಿ ಬಗ್ಗೆ ಕನಕಪುರ ತಾಲೂಕಿನ ರಸ್ತೆ ಜಕ್ಕಸಂದ್ರದ ಜೈನ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಕ್ರಿಸಿದ ಡಿಕೆಶಿ, ಅಧಿಕಾರಿಗಳು ಭೇಟಿ ನೀಡೋದ್ರಲ್ಲಿ ತಪ್ಪೇನಿಲ್ಲ, ಕಂದಾಯ ಸಚಿವರಾದ ಅಶೋಕ್ ಬೇಕಾದರೆ ಭೇಟಿ ನೀಡಲಿ. ರಾಜ್ಯದ ಸಿಎಂ ಮತ್ತು ಮಂತ್ರಿಗಳಿಗೆ ಗವರ್ನರ್ ಪ್ರತಿಜ್ಞಾ ವಿಧಿ ಹೇಳಿದ್ದಾರೆ. ಏನ್ ಪ್ರತಿಜ್ಞೆ ಭೋದಿಸಿದ್ದಾರೆ ಎಂದು ರಿಪೀಟ್ ಮಾಡಿಕೊಳ್ಳಲಿ. ಆ ಜಾಗಕ್ಕೆ 1600 ಇಸವಿಯಿಂದಲೂ ಇತಿಹಾಸ ಇದೆ. ನಾನೇನು ಹೊಸದಾಗಿ ಮಾಡಲು ಆಗುವುದಿಲ್ಲ ಎಂದರು.

    ಡಿಕೆಶಿ ತಮ್ಮ ಹಳ್ಳವನ್ನು ತಾವೇ ತೋಡಿಕೊಳ್ಳುತ್ತಿದ್ದಾರೆ ಎಂಬ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ್‍ರವರು ಹೇಳಿಕೆಗೆ ಹಳ್ಳ ತೋಡಿಕೊಂಡಿದ್ದೀನಿ ಅವರು ಬಂದು ಸಮಾಧಿ ಮಾಡಲಿ. ನಾನು ಸಾಕಷ್ಟು ದೇವಸ್ಥಾನಗಳ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಅವರು ನೋಡಲಿ ತೋರಿಸಿ ಎಂದರು. ಅಲ್ಲದೇ ನಮಸ್ತೇ ಸದಾ ವತ್ಸಲೇ ಮಾತೃಭೂಮಿ ಎಂಬ ವಾಕ್ಯ ನನಗೂ ಕೂಡಾ ಗೊತ್ತಿದೆ. ಯಾವ ದೇವರು, ಯಾವ ಧರ್ಮ, ಯಾರನ್ನು ಆಚರಣೆ ಮಾಡಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.