Tag: Yeshwantpur Police

  • ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

    ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

    ಬೆಂಗಳೂರು: ಇಲ್ಲಿನ ಯಶವಂತಪುರ (Yeshwantpur) ಯಾರ್ಡ್ ಬಳಿ ನಡೆದ ಬಿಎಂಡಬ್ಲ್ಯೂ ಬೈಕ್ ಅಪಘಾತದಲ್ಲಿ (Bike Accident) ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.

    ಮನಮೋಹನ್ (31) ನಿಖಿಲ್ (25) ಮೃತ ದುರ್ದೈವಿಗಳು. ಮುಂಜಾನೆ 3:30ರ ಸಮಯದಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರಾಜ್ಯಸಭೆಯಲ್ಲಿ ಐತಿಹಾಸಿಕ ನಿರ್ಣಯ – ಸರ್ವಾನುಮತದಿಂದ ಮಹಿಳಾ ಮೀಸಲಾತಿ ಬಿಲ್‌ ಪಾಸ್‌

    ಅತಿವೇಗವಾಗಿ ಬಿಎಂಡಬ್ಲೂ ಬೈಕ್ (BMW Bike) ಚಾಲನೆ ಮಾಡುತ್ತಿದ್ದ ಯುವಕರು ಯಶವಂತಪುರದಿಂದ ಆರ್‌ಎಂಸಿ ಯಾರ್ಡ್ ರೋಡ್ ಕಡೆಗೆ ಡ್ರೈವ್‌ ಮಾಡಿಕೊಂಡು ಬರುತ್ತಿದ್ದರು. ಮದ್ಯ ಸೇವಿಸಿ ಬೈಕ್ ಚಲಾಯಿಸುತ್ತಿದ್ದದ್ದು ಮಾತ್ರವಲ್ಲದೇ ಹೆಲ್ಮೆಟ್ ಸಹ ಧರಿಸಿರಲಿಲ್ಲ. ಕೊನೆಗೆ ಬೈಕ್ ನಿಯಂತ್ರಣಕ್ಕೆ ಸಿಗದೇ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಬೈಕ್‌ನಿಂದ ಕೆಳಗೆ ಬಿದ್ದು ತೀವ್ರ ರಕ್ತಸ್ರಾವವಾಗಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಓಲಾ ಬೈಕ್ ನಿಲ್ಲಿಸುವಂತೆ ಸಾರಿಗೆ ಆಯುಕ್ತರಿಗೆ ಮನವಿ

    ಮೋಹನ್ ಮತ್ತು ನಿಖಿಲ್ ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ಇಬ್ಬರ ಮೃತದೇಹವನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಯಶವಂತಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತ್ನಿಯನ್ನ ಕೊಲೆ ಮಾಡಿ, ಮಾತೇ ಆಡ್ತಿಲ್ಲ ಅಂತಾ ಗೋಳಾಡ್ತಿದ್ದ ಪತಿ – ಖತರ್ನಾಕ್‌ ಸಿಕ್ಕಿ ಬಿದ್ದದ್ದು ಹೇಗೆ?

    ಪತ್ನಿಯನ್ನ ಕೊಲೆ ಮಾಡಿ, ಮಾತೇ ಆಡ್ತಿಲ್ಲ ಅಂತಾ ಗೋಳಾಡ್ತಿದ್ದ ಪತಿ – ಖತರ್ನಾಕ್‌ ಸಿಕ್ಕಿ ಬಿದ್ದದ್ದು ಹೇಗೆ?

    ಬೆಂಗಳೂರು: ಪತ್ನಿಯನ್ನ ಕೊಲೆ ಮಾಡಿ ಆಕೆ ಮಾತೇ ಆಡ್ತಿಲ್ಲ ಅಂತಾ ಗೋಳಾಡುತ್ತಿದ್ದ ಪತಿ, ನಂತರ ಪೊಲೀಸರಿಗೆ ತಗಲಾಕಿಕೊಂಡಿರುವ ಘಟನೆ ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ (Yeshwantpur Police) ನಡೆದಿದೆ.

    ಪ್ರಿಯಾ ಕೊಲೆಯಾದ ಮಹಿಳೆ (Women), ಶರತ್‌ ಕೊಲೆ ಆರೋಪಿಯಾಗಿದ್ದಾನೆ. ಪತ್ನಿಯನ್ನ ಕೊಲೆಗೈದ ಶರತ್‌ ನಂತರ ಪತ್ನಿ ಮಾತನಾಡ್ತಿಲ್ಲ ಅಂತಾ ಗೋಳಾಡುತ್ತಾ ಮೃತದೇಹವನ್ನ ಆಸ್ಪತ್ರೆಗೆ (Hospital) ಹೊತ್ತೊಯ್ದಿದ್ದಾನೆ. ಗಂಡನ ಗೋಳಾಟ ಕಂಡು ವೈದ್ಯರು ಮೊದಲು ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ತಪಾಸಣೆ ನಡೆಸಿದ ಬಳಿಕ ಮಹಿಳೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಪತ್ನಿ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಕಣ್ಣೀರು ಹಾಕಿ ಪತಿ ಶರತ್‌ ಹೈಡ್ರಾಮ ಮಾಡಿದ್ದಾನೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತ; ಸಂಚಾರ ರದ್ದಾಗಿ ಬೆಂಗ್ಳೂರಲ್ಲೇ ನಿಂತ ಬೆಂಗಳೂರು-ಗುವಾಹಟಿ ರೈಲು

    ಯಶವಂತಪುರ ಪೊಲೀಸರು ಮೊದಲು ಇದನ್ನ ಅನುಮಾನಾಸ್ಪದ ಸಾವು ಎಂದು ಕೇಸ್‌ ದಾಖಲಿಸಿದ್ದರು. ಬಳಿಕ ತನಿಖೆಯಲ್ಲಿ ಗಂಡನ ಅಸಲಿ ಮುಖವಾಡ ಬಯಲಾಗಿದೆ. ಪತ್ನಿಯನ್ನ ತಾನೇ ಕೊಲೆ ಮಾಡಿ ಶವದೊಂದಿಗೆ ಆಸ್ಪತ್ರೆಗೆ ಬಂದು ನಾಟಕವಾಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬ್ರಿಜ್‌ಭೂಷಣ್‌ ಬಂಧನಕ್ಕೆ ಜೂನ್‌ 9 ಗಡುವು – ಕುಸ್ತಿಪಟುಗಳ ಪ್ರತಿಭಟನೆಗೆ ರೈತಸಂಘ ಬೆಂಬಲ

    ಗಂಡ-ಹೆಂಡತಿ ನಡುವೆ ನಡೆದಿದ್ದೇನು?
    ಶರತ್‌ ಎಂಬಾತ ಮೊದಲೇ ಮದುವೆಯಾಗಿದ್ದರೂ ಪ್ರಿಯಾಳನ್ನ 2ನೇ ಮದುವೆಯಾಗಿದ್ದ. ಪ್ರಿಯಾ ಮೊದಲ ಪತ್ನಿ ಮನೆಗೆ ಹೋಗ್ತೀಯಾ ಅಂತಾ ಪದೇ ಪದೇ ಜಗಳವಾಡುತ್ತಿದ್ದಳು. ಇದೇ ವಿಚಾರಕ್ಕೆ ಆಗಾಗ್ಗೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಇಬ್ಬರ ನಡುವೆ ವಾಗ್ವಾದ ಶುರುವಾಗಿ ಶರತ್‌ ಪ್ರಿಯಾಳಿಗೆ ಥಳಿಸಿದ್ದಾನೆ. ಹೊಡೆದ ರಭಸಕ್ಕೆ ಕೆಳಗೆ ಬಿದ್ದು ಪ್ರಿಯಾ ಮೃತಪಟ್ಟಿದ್ದಾಳೆ. ನಂತರ ಶರತ್‌ ಈ ಪ್ರಕರಣವನ್ನ ಮುಚ್ಚಿಡಲು ಆಸ್ಪತ್ರೆಗೆ ಕರೆದೊಯ್ದು ನಾಟಕವಾಡಿದ್ದಾನೆ. ಎರಡು ದಿನಗಳ ಬಳಿಕ ಅಸಲಿ ಸಂಗತಿ ಬಯಲಾಗಿದೆ.

    ಶರತ್‌ ಹೈಡ್ರಾಮ ಕಂಡು ಮೊದಲೇ ಪೊಲೀಸರು ಅನುಮಾನಗೊಂಡಿದ್ದರು. ಮೃತದೇಹವನ್ನ ವೈದ್ಯರಿಂದ ಪರಿಶೀಲನೆ ನಡೆಸಿದಾಗ ಕುತ್ತಿಗೆ ಬಳಿ ಪಕ್ಕೆಲುಬು ಮುರಿದಿರುವುದು ಕಂಡುಬಂದಿತ್ತು. ಪ್ರಿಯಾ ಮೇಲೆ ಹಲ್ಲೆಯಾಗಿರುವುದಾಗಿಯೂ ವೈದ್ಯರು ತಿಳಿಸಿದ್ದರು. ಇದರಿಂದ ಕೊಲೆ ಮಾಡಿರುವುದು ಸ್ಪಷ್ಟವಾಗಿ ಯಶವಂತಪುರ ಪೊಲೀಸರು ಆರೋಪಿ ಶರತ್‌ನನ್ನ ಬಂಧಿಸಿ ಕೊಲೆ ಕೇಸ್‌ ದಾಖಲಿಸಿದ್ದಾರೆ. ತನಿಖೆ ಮುಂದುವರಿದಿದೆ.