Tag: yoga guru

  • ಸುಳ್ಳು ಜಾಹೀರಾತು ನೀಡಿದರೆ ಪತಂಜಲಿ ಉತ್ಪನ್ನಕ್ಕೆ 1 ಕೋಟಿ ದಂಡ ಹಾಕಬೇಕಾಗುತ್ತೆ: ಸುಪ್ರೀಂ ಎಚ್ಚರಿಕೆ

    ಸುಳ್ಳು ಜಾಹೀರಾತು ನೀಡಿದರೆ ಪತಂಜಲಿ ಉತ್ಪನ್ನಕ್ಕೆ 1 ಕೋಟಿ ದಂಡ ಹಾಕಬೇಕಾಗುತ್ತೆ: ಸುಪ್ರೀಂ ಎಚ್ಚರಿಕೆ

    ನವದೆಹಲಿ: ಪತಂಜಲಿ ಆಯುರ್ವೇದ (Patanjali Ayurved) ಉತ್ಪನ್ನಗಳ ಬಗ್ಗೆ ಸುಳ್ಳು ಮತ್ತು ಜನರ ದಾರಿ ತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸಿ. ಹಾಗೇನಾದರು ಮಾಡಿದರೆ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂ. ದಂಡ ವಿಧಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ (Supreme Court) ಎಚ್ಚರಿಸಿದೆ.

    ಯೋಗ ಗುರು ರಾಮ್‌ದೇವ್ (Ramdev) ಸ್ಥಾಪಿಸಿರುವ ಪತಂಜಲಿ ಆಯುರ್ವೇದ್ ಕಂಪನಿಯು ಗಿಡಮೂಲಿಕೆ ಉತ್ಪನ್ನಗಳ ವಿಚಾರದಲ್ಲಿ ವ್ಯವಹರಿಸುತ್ತಿದೆ. ಹಲವಾರು ರೋಗಗಳಿಗೆ ಚಿಕಿತ್ಸೆ ನೀಡುವ ಔಷಧಿಗಳ ಕುರಿತು ಜಾಹೀರಾತುಗಳಲ್ಲಿ ಸುಳ್ಳು ಮತ್ತು ದಾರಿ ತಪ್ಪಿಸುವ ಅಂಶಗಳೇ ಇವೆ ಎಂದು ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ಸದ್ದು ಮಾಡಲಿದೆ ಪತಂಜಲಿ – 5 ವರ್ಷದಲ್ಲಿ 4 IPO ಲಿಸ್ಟ್‌

    ಪತಂಜಲಿ ಆಯುರ್ವೇದದ ಇಂತಹ ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ತಕ್ಷಣವೇ ನಿಲ್ಲಿಸಬೇಕು. ಅಂತಹ ಯಾವುದೇ ಉಲ್ಲಂಘನೆಯನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ಪೀಠವು ಹೇಳಿದೆ.

    ಕೊರೊನಾ ಲಸಿಕೆ ಮತ್ತು ಆಧುನಿಕ ಔಷಧಿಗಳ ವಿರುದ್ಧ ರಾಮ್‌ದೇವ್ ಅವರ ಅಭಿಯಾನ ನಡೆಸಿದ್ದಾರೆ ಎಂದು ಆರೋಪಿಸಿ ಐಎಂಎ ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್, 2022 ರ ಆಗಸ್ಟ್ 23 ರಂದು ಕೇಂದ್ರ ಆರೋಗ್ಯ ಸಚಿವಾಲಯ, ಆಯುಷ್ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್‌ಗೆ ನೋಟಿಸ್ ಜಾರಿ ಮಾಡಿತ್ತು. ಇದನ್ನೂ ಓದಿ: ರಿಲಯನ್ಸ್‌, ಪತಂಜಲಿ, ಟಾಟಾ, ಇನ್ಫೋಸಿಸ್‌ ಸೇರಿ 11 ಖಾಸಗಿ ಸಂಸ್ಥೆಗಳಿಗೆ ಸಿಐಎಸ್‌ಎಫ್‌ ಭದ್ರತೆ

    ಪತಂಜಲಿ ಆಯುರ್ವೇದ್‌ಗೆ ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಬಾರದು. ಒಂದು ನಿರ್ದಿಷ್ಟ ಕಾಯಿಲೆಯನ್ನು ಗುಣಪಡಿಸಬಹುದು ಎಂದು ಸುಳ್ಳು ಹೇಳಿಕೆ ನೀಡಿದರೆ ಪ್ರತಿ ಉತ್ಪನ್ನಕ್ಕೆ 1 ಕೋಟಿ ರೂ. ದಂಡ ವಿಧಿಸಬೇಕಾಗುತ್ತದೆ ಎಂದು ಪೀಠವು ಎಚ್ಚರಿಸಿದೆ.

  • ಜನರನ್ನು ದಾರಿ ತಪ್ಪಿಸಬೇಡಿ: ಬಾಬಾ ರಾಮದೇವ್‌ ವಿರುದ್ಧ ದೆಹಲಿ ಹೈಕೋರ್ಟ್‌ ಕಿಡಿ

    ಜನರನ್ನು ದಾರಿ ತಪ್ಪಿಸಬೇಡಿ: ಬಾಬಾ ರಾಮದೇವ್‌ ವಿರುದ್ಧ ದೆಹಲಿ ಹೈಕೋರ್ಟ್‌ ಕಿಡಿ

    ನವದೆಹಲಿ: ಅಧಿಕೃತ ಎನ್ನುವುದಕ್ಕಿಂತ ಹೆಚ್ಚಿನದ್ದನ್ನು ಅಥವಾ ಅಧಿಕೃತವಲ್ಲದ್ದನ್ನು ಹೇಳಿ ಜನರ ದಾರಿ ತಪ್ಪಿಸಬೇಡಿ ಎಂದು ಯೋಗ ಗುರು ಬಾಬಾ ರಾಮದೇವ್‌ ಅವರನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

    ಈ ಹಿಂದೆ ಅಲೋಪತಿ ವಿರುದ್ಧ ರಾಮದೇವ್‌ ಹೇಳಿಕೆ ನೀಡಿದ್ದರು. ವಿವಿಧ ವೈದ್ಯರ ಸಂಘಗಳು ಅವರ ವಿರುದ್ಧ ಮೊಕದ್ದಮೆ ಸಲ್ಲಿಸಿವೆ. ಇದರ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಭಂಬಾನಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಲಸಿಕೆ ಹಾಕಿಸಿಕೊಂಡಿದ್ದರೂ ಕೋವಿಡ್-19 ಪಾಸಿಟಿವ್ ಬಂದಿದೆ. ಇದು ವೈದ್ಯಕೀಯ ವಿಜ್ಞಾನದ ವೈಫಲ್ಯವಾಗಿದೆ ಎಂಬ ಯೋಗ ಗುರು ಬಾಬಾ ರಾಮದೇವ್ ಅವರ ಇತ್ತೀಚಿನ ಹೇಳಿಕೆ ನೀಡಿದ್ದರು. ಇದನ್ನು ದೆಹಲಿ ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ. ಇದನ್ನೂ ಓದಿ: ಪತ್ನಿಯನ್ನು ಇತರ ಮಹಿಳೆಯರಿಗೆ ಹೋಲಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮ: ಹೈಕೋರ್ಟ್

    ಆಯುರ್ವೇದಕ್ಕಿದ್ದ ಒಳ್ಳೆಯ ಹೆಸರು ಈಗ ಕುಂದುತ್ತಿರುವ ಬಗ್ಗೆ ನನಗೆ ಕಾಳಜಿ ಇದೆ. ನಾನು ಅದರ ಬಗ್ಗೆ ಚಿಂತಿಸುತ್ತಿದ್ದೇನೆ. ಆಯುರ್ವೇದವು ಪ್ರಾಚೀನ ವೈದ್ಯಕೀಯ ಪದ್ಧತಿಯಾಗಿದೆ. ಆಯುರ್ವೇದದ ಒಳ್ಳೆಯ ಹೆಸರಿಗೆ ಧಕ್ಕೆ ತರುವಂತಹ ಕೆಲಸವನ್ನು ನಾವು ಮಾಡಬಾರದು ಎಂದು ನ್ಯಾಯಮೂರ್ತಿ ಅನುಪ್ ಜೈರಾಮ್ ಭಂಬಾನಿ ಹೇಳಿದ್ದಾರೆ.

    ಕೆಲವೊಮ್ಮೆ ವಿದೇಶಿ ನಾಯಕರ ಹೆಸರುಗಳನ್ನು ಉಲ್ಲೇಖಿಸಲಾಗುತ್ತಿದೆ. ಇದು ವಿದೇಶಗಳೊಂದಿಗಿನ ಸಂಬಂಧದ ಮೇಲೆ ಪರಿಣಾಮ ಬೀರಬಹುದು ಎಂದಿದ್ದಾರೆ. ಇದನ್ನೂ ಓದಿ: ರೋಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್‌ : ಯೂಟರ್ನ್‌ ಹೊಡೆದ ಕೇಂದ್ರ

    Live Tv
    [brid partner=56869869 player=32851 video=960834 autoplay=true]