Tag: Yogeshgowda

  • ಮಾವನ ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟ ವಿನಯ್ ಕುಲಕರ್ಣಿ

    ಮಾವನ ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟ ವಿನಯ್ ಕುಲಕರ್ಣಿ

    ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಮಾವ ಗಂಗಪ್ಪ ಶಿಂತ್ರಿ ಹೃದಾಯಾಘಾತದಿಂದ ಸಾವನ್ನಪ್ಪಿದ ಹಿನ್ನೆಲೆ, ಬೆಳಗಾವಿ ಜಿಲ್ಲೆಯ ಸವದತ್ತಿಗೆ ಆಗಮಿಸಿ ಅಂತಿಮ ದರ್ಶನ ಪಡೆದರು. ಈ ವೇಳೆ ಅಲ್ಲಿದ್ದ ತಮ್ಮ ಮಗ ಹೇಮಂತ್ ಹಾಗೂ ಮಗಳನ್ನು ತಬ್ಬಿಕೊಂಡು ಕಣ್ಣೀರು ಹಾಕಿದರು.

     

     

    ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಸಿಬಿಐ ನ್ಯಾಯಾಲಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಿತ್ತು. ಸವದತ್ತಿಗೆ ಆಗಮಿಸಿ ಮಾವನ ಅಂತಿಮ ದರ್ಶನ ಪಡೆದರು. ಈ ವೇಳೆ ತಮ್ಮ ಮಕ್ಕಳನ್ನು ಕಂಡು ಭಾವುಕರಾದ ವಿನಯ್ ಕುಲಕರ್ಣಿ ನಂತರ ಕುಟುಂಬಸ್ಥರಿಗೆ ಸಮಾಧಾನ ಹೇಳಿ ಮನೆಯಿಂದ ಹೊರಗೆ ಆಗಮಿಸಿದರು.

    ವಿನಯ್ ಸವದತ್ತಿಗೆ ಆಗಮಿಸುತ್ತಿದ್ದಂತೆ ಸಾವಿರಾರು ಬೆಂಬಲಿಗರು ಸ್ಥಳಕ್ಕೆ ಜಾಮಾಯಿಸಿದರು. ಅಪಾರ ಪ್ರಮಾಣದ ಬೆಂಬಲಿಗರು ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಮನೆಯಿಂದ ಹೊರಬರುತ್ತಲೇ ನೆರೆದಿದ್ದ ಅಭಿಮಾನಿಗಳಿಗೆ ವಿನಯ್ ಕುಲಕರ್ಣಿ ಕೈ ಮುಗಿದು ನಮಸ್ಕರಿಸಿದರು. ಮಾವನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಧಾರವಾಡ ಸಿಬಿಐ ನ್ಯಾಯಾಲಯ ಕೇವಲ ಮೂರು ಗಂಟೆ ಅವಕಾಶ ನೀಡಿತ್ತು. ಸಮಯದ ಅಭಾವ ಇದ್ದ ಕಾರಣ ಅಂತ್ಯಕ್ರಿಯೆ ಮುಗಿಯುವ ಮುನ್ನವೇ ಹಿಂಡಲಗಾ ಜೈಲಿಗೆ ಹಿಂದಿರುಗಿದರು. ವಿನಯ್ ಕುಲಕರ್ಣಿ ಅವರ ಮಾವ 2019 ರಲ್ಲಿ ಧಾರವಾಡದಲ್ಲಿ ನಡೆದ ಕಟ್ಟಡ ದುರಂತದ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆ ಹೊಂದಿದ್ದರು.

  • ಜಿಲ್ಲಾ ಪಂಚಾಯಿತಿ ಸದಸ್ಯನ ಕೊಲೆ ಪ್ರಕರಣ- ಸಿಬಿಐನಿಂದ ವಿನಯ್ ಕುಲಕರ್ಣಿ ಪಿಎ ತೀವ್ರ ವಿಚಾರಣೆ

    ಜಿಲ್ಲಾ ಪಂಚಾಯಿತಿ ಸದಸ್ಯನ ಕೊಲೆ ಪ್ರಕರಣ- ಸಿಬಿಐನಿಂದ ವಿನಯ್ ಕುಲಕರ್ಣಿ ಪಿಎ ತೀವ್ರ ವಿಚಾರಣೆ

    ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‍ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯಲ್ಲಿ ಭಾರೀ ಮಹತ್ವದ ಬೆಳವಣಿಗೆಯಾಗಿದ್ದು, ಸಿಬಿಐ ಅಧಿಕಾರಿಗಳು ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಸಹಾಯಕನಿಗೆ ಡ್ರಿಲ್ ನಡೆಸಿದ್ದಾರೆ.

    ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕೇಕರೆಯನ್ನು ಧಾರವಾಡ ಉಪನಗರ ಠಾಣೆಗೆ ಕರೆ ತಂದಿದ್ದ ಸಿಬಿಐ ಅಧಿಕಾರಿಗಳು, ಮಧ್ಯಾಹ್ನದವರೆಗೂ ಭಾರೀ ಡ್ರಿಲ್ ನಡೆಸಿದ ಬಳಿಕ ಆತನನ್ನು ಬಿಟ್ಟಿದ್ದಾರೆ. ಶನಿವಾರದಿಂದ ಸಿಬಿಐ ತನಿಖೆ ರಾಜಕೀಯ ಆಯಾಮದ ಮೇಲೆ ನಡೆಯುತ್ತಿದ್ದು, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶಿವಾನಂದ ಕರಿಗಾರ ಸೇರಿ ಪ್ರಮುಖ ಕೈ ನಾಯಕರಿಗೆ ಡ್ರಿಲ್ ನಡೆಸಿದ್ದರು.

    ಮುಂದುವರಿದ ಭಾಗವಾಗಿಯೇ ಇಂದು ವಿನಯ್ ಕುಲಕರ್ಣಿ ಆಪ್ತ ಸಹಾಯಕನನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೆ ಇಂದು ಕೂಡ ಕೆಲ ರಾಜಕೀಯ ಮುಖಂಡರು ಸಿಬಿಐ ವಿಚಾರಣೆ ಎದುರಿಸಿದ್ದಾರೆ. ಭೂ ಸ್ವಾಧೀನ ಇಲಾಖೆ ಕಚೇರಿಯ ಗ್ರಾಮ ಲೆಕ್ಕಾಧಿಕಾರಿ ವಿರೇಶ ಬ್ಯಾಹಟ್ಟಿಯವರನ್ನು ಸಹ ಸಿಬಿಐ ಅಧಿಕಾರಿಗಳು ಪುನಃ ವಿಚಾರಣೆಗೊಳಪಡಿಸಿದ್ದು, ಪೊಲೀಸ್ ತನಿಖೆಯ ಆರೋಪಿ ಬಸವರಾಜ ಮುತ್ತಗಿ ಭೂ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದ ಮಾಹಿತಿ ಪಡೆದಿದ್ದಾರೆ. ಅಲ್ಲದೆ ಇತ್ತೀಚೆಗೆ ಬೆಂಡೀಗೇರಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಬಾಬು ಕಟಗಿಯವರನ್ನೂ ವಿಚಾರಣೆಗೆ ಒಳಪಡಿಸಿದ್ದರು.

    2017 ಜೂನ್ 15ರಂದು ಯೋಗೇಶ್ ಗೌಡನ ಕೊಲೆಯಾಗಿತ್ತು. ಅಂದು ಬೆಳಗ್ಗೆ ಧಾರವಾಡ ನಗರದ ಸಪ್ತಾಪುರ ಜಿಮ್‍ಗೆ ಎಂಟ್ರಿ ಕೊಟ್ಟಿದ್ದ ದುಷ್ಕರ್ಮಿಗಳು ಯೋಗೇಶ್ ಗೌಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿದ್ದರು. ಈ ದೃಶ್ಯವು ಜಿಮ್ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳನ್ನಾಧರಿಸಿ ಪೊಲೀಸರು ಮಾಜಿ ಸಚಿವ, ಸ್ಥಳೀಯ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಐವರನ್ನು ಬಂಧಿಸಿದ್ದರು.