ಬೆಂಗಳೂರು: ಕೇವಲ 1 ಅಂಕದಿಂದ ಫಸ್ಟ್ ರ್ಯಾಂಕ್ ಕಳೆದುಕೊಂಡಿದ್ದ ಮಿಥುನ್ ಯುಪಿ ಸಿಎಂ ಆದಿತ್ಯನಾಥ್ ಅವರಂತೆ ರಾಜಕಾರಣಿಯಾಗಬೇಕು ಎಂಬ ವಿಶೇಷ ಆಸೆಯನ್ನು ಬಿಚ್ಚಿಟ್ಟಿದ್ದಾರೆ.
ಬನಶಂಕರಿಯ (Banashankari) ಹೋಲಿ ಚೈಲ್ಡ್ ಇಂಗ್ಲಿಷ್ ಕಾನ್ವೆಂಟ್ ಶಾಲೆಯ ಮಿಥುನ್ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ (SSLC exam) 624 ಅಂಕ ಗಳಿಸಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ವಿದ್ಯಾರ್ಥಿಯ ಆಸಕ್ತಿ ನೋಡಿ ಶಾಲೆಯ ಶಿಕ್ಷಕರೇ ಆಶ್ಚರ್ಯರಾಗಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ಡಿಸಿ ಕಚೇರಿ ಸ್ಫೋಟಿಸುತ್ತೇವೆ – ಬೆದರಿಕೆ ಸಂದೇಶ, ಎಫ್ಐಆರ್ ದಾಖಲು
ನನಗೆ ರಾಜಕೀಯ ಕ್ಷೇತ್ರ ಅಂದರೆ ಇಷ್ಟ. ನಾನೊಬ್ಬ ರಾಜಕಾರಣಿ ಆಗಬೇಕು. ಉತ್ತರ ಪ್ರದೇಶದ (UttaraPradesh) ಸಿಎಂ ಯೋಗಿ ಆದಿತ್ಯನಾಥ್ (Yogi Adithyanath) ಅವರು ಅಂದ್ರೆ ತುಂಬಾ ಇಷ್ಟ. ಅವರ ಧೈರ್ಯ, ನಿರ್ಣಯಗಳು ತುಂಬಾ ಇಷ್ಟ ಎಂದು ರಾಜಕೀಯ ಆಸಕ್ತಿಯ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಹಂಚಿಕೊಂಡಿದ್ದಾರೆ.
ಲಕ್ನೋ: ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 40 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬಾಗ್ಪತ್ನಲ್ಲಿ (Baghpat) ನಡೆದಿದೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸಲು ನೂರಾರು ಭಕ್ತರು ಇಂದು ಬೆಳಗ್ಗೆ ಸ್ಥಳಕ್ಕೆ ತಲುಪಿದರು. ಭಕ್ತರಿಗಾಗಿ ಸಿದ್ಧಪಡಿಸಲಾದ ತಾತ್ಕಾಲಿಕ ವೇದಿಕೆಯು ಅತಿಯಾದ ಭಾರದಿಂದ ಕುಸಿದಿದ್ದು, ಹತ್ತಾರು ಜನರು ಅದರ ಕೆಳಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: Microfinance | ಮನೆ, ಶಾಲೆಗೆ ಬಂದು ಟಾರ್ಚರ್ – ಶಿಕ್ಷಕಿಯ ಶವ ಎರಡು ದಿನದ ನಂತರ ಪತ್ತೆ
ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಹೆಚ್ಚಿನ ಪೊಲೀಸ್ ಬಂದೋಬಸ್ತ್ನೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಜಿಲ್ಲಾಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಸ್ಥಳದಲ್ಲಿ ಈಗಾಗಲೇ ಅಂಬುಲೆನ್ಸ್ ಇದ್ದ ಕಾರಣ ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದನ್ನೂ ಓದಿ: Tumakuru| 4.66 ಲಕ್ಷಕ್ಕೆ 7.20 ಲಕ್ಷ ಬಡ್ಡಿ – ಹೃದಯಾಘಾತದಿಂದ ವ್ಯಕ್ತಿ ಸಾವು
ಸುಮಾರು 30 ವರ್ಷಗಳಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಘಟನೆಯಲ್ಲಿ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಥಮ ಚಿಕಿತ್ಸೆ ನೀಡಿದ ನಂತರ ಇಪ್ಪತ್ತು ಜನರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಬಾಗ್ಪತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಸ್ಮಿತಾ ಲಾಲ್ ಹೇಳಿದ್ದಾರೆ. ಇದನ್ನೂ ಓದಿ: MUDA Scam| ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ: ಬೈರತಿ ಸುರೇಶ್
ಲಕ್ನೋ: ಶ್ರೀರಾಮ ಜನ್ಮಭೂಮಿಯಲ್ಲಿ ಬಾಲರಾಮನ ಮೂರ್ತಿ (Ram Idol) ಪ್ರತಿಷ್ಠಾಪನೆಯಾಗಿ 1 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ 3 ದಿನಗಳ ಕಾಲ ಹತ್ತು ಹಲವು ಕಾರ್ಯಕ್ರಮಗಳು ನಡೆಯಲಿವೆ. ಇಡೀ ನಗರವನ್ನು ಹೂವಿನಿಂದ ಅಲಂಕರಿಸಲಾಗಿದ್ದು, ಬಾಲರಾಮನ ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.
ಅಯೋಧ್ಯೆಯಲ್ಲಿ ಕನ್ನಡಿಗ ಅರುಣ್ ಯೋಗಿರಾಜ್ (Arun Yogiraj) ಅವರ ಕೆತ್ತನೆಯಲ್ಲಿ ಮೂಡಿಬಂದಿರುವ ಈ ಶಿಲ್ಪವನ್ನು ʻರಾಮಲಲ್ಲಾʼ ಅಂತಲೂ ಕರೆಯುತ್ತಾರೆ. ಅಷ್ಟಕ್ಕೂ ಆ ಹೆಸರಿನಿಂದ ಕರೆಯುವುದು ಏಕೆ ಅನ್ನೋ ಚುಟುಕು ಮಾಹಿತಿ ಇಲ್ಲಿದೆ….
ಉತ್ತರ ಭಾರತದ ಆಡುಭಾಷೆಯಲ್ಲಿ ಎಳೆಯ ಗಂಡು ಮಕ್ಕಳನ್ನು ಮುದ್ದಾಗಿ ಲಲ್ಲಾ (Ramlalla), ಲಲ್ಲನ್ ಎಂದು ಕರೆಯುತ್ತಾರೆ. ಶ್ರೀರಾಮ ಅಯೋಧ್ಯೆಯಲ್ಲಿ (Ayodhya) ಹುಟ್ಟಿ ಬೆಳೆದವನು. ಅಯೋಧ್ಯೆಯಲ್ಲಿರುವ ಮೂರ್ತಿ ಕೂಡ ಎಳೆಯ ವಯಸ್ಸಿನ ಶ್ರೀರಾಮನದ್ದು ಎಂದು ಹೇಳಲಾಗಿದೆ. ಹೀಗಾಗಿ ಈ ಬಾಲರೂಪಿ ರಾಮನನ್ನು ಭಕ್ತರು ಪ್ರೀತಿಯಿಂದ ಕರೆಯುವ ಹೆಸರು ʻರಾಮಲಲ್ಲಾʼ.
ಇಂದಿನಿಂದ 3 ದಿನ ಏನೇನು ಕಾರ್ಯಕ್ರಮ?
* ಜ.11ರ ಮೊದಲ ದಿನ ಪ್ರತಿಷ್ಠಾ ದ್ವಾದಶಿಯ ಆರಂಭಿಕ ದಿನ, ಕಳೆದ ವರ್ಷದ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದಂತೆಯೇ ಕಾರ್ಯಕ್ರಮ ಆರಂಭ
* ‘ಪಂಚಾಮೃತ’ ಮತ್ತು ಸರಯೂ ಜಲದ ಅಭಿಷೇಕವನ್ನು ಒಳಗೊಂಡಂತೆ ಅಭಿಷೇಕ ಸಮಾರಂಭ ಬೆಳಗ್ಗೆ 10 ಗಂಟೆಗೆ ಶುರು
* ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ರಾಮಲಲ್ಲಾಗೆ ಅಭಿಷೇಕ
* ಮಧ್ಯಾಹ್ನ 12.20ಕ್ಕೆ ಪ್ರಾಥಮಿಕ ಆರತಿ
* ಚಿನ್ನದ ಮತ್ತು ಬೆಳ್ಳಿಯ ಎಳೆಗಳಿಂದ ದೆಹಲಿಯಲ್ಲಿ ತಯಾರಿಸಿದ ವಿಶಿಷ್ಟ ಪೀತಾಂಬರಿಯಿಂದ ರಾಮಲಲ್ಲಾ ಮೂರ್ತಿಯ ಅಲಂಕಾರ
* ಬಳಿಕ 3 ದಿನ ಕಾಲ ಮಂಟಪ ಮತ್ತು ಯಜ್ಞಶಾಲೆಯಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಹೋಮಗಳು, ಶಾಸ್ತ್ರೀಯ ಸಾಂಸ್ಕೃತಿಕ ಪ್ರದರ್ಶನಗಳು, ವಿವಿಧ ಆಚರಣೆಗಳು ಮತ್ತು ದೈನಂದಿನ ರಾಮಕಥಾ ಪ್ರವಚನಗಳು ಏರ್ಪಾಡು
* 110 ಗಣ್ಯರು, ಜನಸಾಮಾನ್ಯರು ಸೇರಿ 5,000 ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ
ವಾರ್ಷಿಕೋತ್ಸವ ಇಂದೇ ಏಕೆ?
2024ರಲ್ಲಿ ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆಯನ್ನು ಜನವರಿ 22ರಂದು ನಡೆಸಲಾಯಿತು. ಆದರೆ, ಈ ವರ್ಷ ಅಂದರೆ 2025ರಲ್ಲಿ ಅಯೋಧ್ಯೆ ರಾಮ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವವನ್ನು ಜನವರಿ 11 ರಂದು ಶನಿವಾರ ಆಚರಿಸಲಾಗುತ್ತಿದೆ. ಯಾಕೆಂದರೆ, ವೈದಿಕ ಸನಾತನ ಸಂಸ್ಕೃತಿಯ ಕ್ಯಾಲೆಂಡರ್ ಪ್ರಕಾರ, 2025ರಲ್ಲಿ ಪುಷ್ಯ ಮಾಸದ ಕೂರ್ಮ ದ್ವಾದಶಿಯು ಜನವರಿ 11 ರಂದು ಬರಲಿದೆ. ಕೂರ್ಮ ದ್ವಾದಶಿಯ ಆಧಾರದ ಮೇಲೆ ಅಯೋಧ್ಯೆ ರಾಮ ಮಂದಿರದ ಪ್ರತಿಷ್ಠಾಪನಾ ಮಹೋತ್ಸವವನ್ನು ಆಚರಿಸಲಾಗುವುದು. ಈ ವರ್ಷ ಅಂದರೆ 2025ರ ಅಯೋಧ್ಯೆ ರಾಮನ ಪ್ರಾಣ ಪ್ರತಿಷ್ಠಾಪನೆಯು ಸಂಪೂರ್ಣವಾಗಿ ಒಂದು ವರ್ಷವನ್ನು ಪೂರೈಸಲಿದೆ.
2025ರ ಜನವರಿ 11ರಂದು ಶನಿವಾರ ಪುಷ್ಯ ಮಾಸದ ಶುಕ್ಲ ಪಕ್ಷದ ದ್ವಾದಶಿ ತಿಥಿಯು ಇರಲಿದೆ. ಈ ದಿನ ಅಯೋಧ್ಯೆ ರಾಮನ ಪ್ರಾಣ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವ ಆಚರಿಸಲಾಗುವುದು. ಈ ಶುಭ ದ್ವಾದಶಿ ತಿಥಿಯಂದು ಹತ್ತು ಶುಭ ಯೋಗಗಳು ಏಕಕಾಲದಲ್ಲಿ ರೂಪುಗೊಳ್ಳುತ್ತಿವೆ.
ಲಕ್ನೋ: ಅಯೋಧ್ಯೆಯನ್ನು ಪ್ರಭು ಶ್ರೀರಾಮನ ಜನ್ಮಸ್ಥಳವೆಂದು ಹಿಂದೂ ಧಾರ್ಮಿಕ ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ. 2024ರಲ್ಲಿ ಅಂದರೆ, ಕಳೆದ ವರ್ಷವಷ್ಟೇ ಅಯೋಧ್ಯೆಯಲ್ಲಿ ರಾಮ ದೇವಾಲಯದ (Ayodhya Ram temple) ನಿರ್ಮಾಣ ಕಾರ್ಯ ಪೂರ್ಣಗೊಂಡು ಲಕ್ಷಾಂತರ ಜನರು ಇಲ್ಲಿನ ರಾಮನ ದರ್ಶನ ಪಡೆದುಕೊಂಡಿದ್ದಾರೆ. ಅಯೋಧ್ಯೆಯಲ್ಲಿನ ರಾಮ ಮಂದಿರವು ಹಿಂದೂ ಧರ್ಮೀಯರ ಜೀವಾಳವಾಗಿದೆ. ಇದೀಗ ಅಯೋಧ್ಯೆಯ ಬಾಲ ರಾಮನ ಪ್ರತಿಷ್ಠಾಪನೆಯಾಗಿ ವರ್ಷ ತುಂಬಿದೆ. ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂಭ್ರಮ ಇಂದಿನಿಂದ ಮೂರು ದಿನಗಳ ಕಾಲ ಜರುಗಲಿದೆ.
#WATCH | Uttar Pradesh: Devotees arrive at Ayodhya Ram temple on the occasion of the first anniversary of ‘Pran Pratishtha’ pic.twitter.com/G7fUpjpnaB
ಶುಭ ಯೋಗಗಳು ಹಾಗೂ ದ್ವಾದಶಿ ತಿಥಿಯು 2025ರಲ್ಲಿ ಜನವರಿ 11 ರಂದು ಬಂದಿರುವುದರಿಂದ ಅಯೋಧ್ಯೆ ರಾಮ ಮಂದಿರದ ವಾರ್ಷಿಕ ಪ್ರಾಣ ಪ್ರತಿಷ್ಠಾಪನೆಯನ್ನು ಜನವರಿ 22ರ ಬದಲಾಗಿ ಜನವರಿ 11ರಂದು ಆಚರಿಸಲಾಗುತ್ತಿದೆ. ಈಗಾಗಲೇ ಅಯೋಧ್ಯೆಯ ರಾಮ ಮಂದಿರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಒಂದೊಂದೇ ಕಾರ್ಯಕ್ರಮಗಳು ನೆರವೇರುತ್ತಿವೆ. ಇದನ್ನೂ ಓದಿ: ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗಳಿಗೆ ಬಾಂಬ್ ಬೆದರಿಕೆ – ವಿದ್ಯಾರ್ಥಿ ಅರೆಸ್ಟ್
ಇಂದಿನಿಂದ 3 ದಿನ ಏನೇನು ಕಾರ್ಯಕ್ರಮ?
* ಜ.11ರ ಮೊದಲ ದಿನ ಪ್ರತಿಷ್ಠಾ ದ್ವಾದಶಿಯ ಆರಂಭಿಕ ದಿನ, ಕಳೆದ ವರ್ಷದ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದಂತೆಯೇ ಕಾರ್ಯಕ್ರಮ ಆರಂಭ
* ‘ಪಂಚಾಮೃತ’ ಮತ್ತು ಸರಯೂ ಜಲದ ಅಭಿಷೇಕವನ್ನು ಒಳಗೊಂಡಂತೆ ಅಭಿಷೇಕ ಸಮಾರಂಭ ಬೆಳಗ್ಗೆ 10 ಗಂಟೆಗೆ ಶುರು
* ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ರಾಮಲಲ್ಲಾಗೆ ಅಭಿಷೇಕ
* ಮಧ್ಯಾಹ್ನ 12.20ಕ್ಕೆ ಪ್ರಾಥಮಿಕ ಆರತಿ
* ಚಿನ್ನದ ಮತ್ತು ಬೆಳ್ಳಿಯ ಎಳೆಗಳಿಂದ ದೆಹಲಿಯಲ್ಲಿ ತಯಾರಿಸಿದ ವಿಶಿಷ್ಟ ಪೀತಾಂಬರಿಯಿಂದ ರಾಮಲಲ್ಲಾ ಮೂರ್ತಿಯ ಅಲಂಕಾರ
* ಬಳಿಕ 3 ದಿನ ಕಾಲ ಮಂಟಪ ಮತ್ತು ಯಜ್ಞಶಾಲೆಯಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಹೋಮಗಳು, ಶಾಸ್ತ್ರೀಯ ಸಾಂಸ್ಕೃತಿಕ ಪ್ರದರ್ಶನಗಳು, ವಿವಿಧ ಆಚರಣೆಗಳು ಮತ್ತು ದೈನಂದಿನ ರಾಮಕಥಾ ಪ್ರವಚನಗಳು ಏರ್ಪಾಡು
* 110 ಗಣ್ಯರು, ಜನಸಾಮಾನ್ಯರು ಸೇರಿ 5,000 ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ
ವಾರ್ಷಿಕೋತ್ಸವ ಇಂದೇ ಏಕೆ?
2024ರಲ್ಲಿ ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆಯನ್ನು ಜನವರಿ 22ರಂದು ನಡೆಸಲಾಯಿತು. ಆದರೆ, ಈ ವರ್ಷ ಅಂದರೆ 2025ರಲ್ಲಿ ಅಯೋಧ್ಯೆ ರಾಮ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವವನ್ನು ಜನವರಿ 11 ರಂದು ಶನಿವಾರ ಆಚರಿಸಲಾಗುತ್ತಿದೆ. ಯಾಕೆಂದರೆ, ವೈದಿಕ ಸನಾತನ ಸಂಸ್ಕೃತಿಯ ಕ್ಯಾಲೆಂಡರ್ ಪ್ರಕಾರ, 2025ರಲ್ಲಿ ಪುಷ್ಯ ಮಾಸದ ಕೂರ್ಮ ದ್ವಾದಶಿಯು ಜನವರಿ 11 ರಂದು ಬರಲಿದೆ. ಕೂರ್ಮ ದ್ವಾದಶಿಯ ಆಧಾರದ ಮೇಲೆ ಅಯೋಧ್ಯೆ ರಾಮ ಮಂದಿರದ ಪ್ರತಿಷ್ಠಾಪನಾ ಮಹೋತ್ಸವವನ್ನು ಆಚರಿಸಲಾಗುವುದು. ಈ ವರ್ಷ ಅಂದರೆ 2025ರ ಅಯೋಧ್ಯೆ ರಾಮನ ಪ್ರಾಣ ಪ್ರತಿಷ್ಠಾಪನೆಯು ಸಂಪೂರ್ಣವಾಗಿ ಒಂದು ವರ್ಷವನ್ನು ಪೂರೈಸಲಿದೆ.
ಪ್ರಾಣ ಪ್ರತಿಷ್ಠಾಪನೆಯ ದಿನ ರೂಪುಗೊಂಡ ಶುಭ ಯೋಗಗಳು:
2025ರ ಜನವರಿ 11ರಂದು ಶನಿವಾರ ಪುಷ್ಯ ಮಾಸದ ಶುಕ್ಲ ಪಕ್ಷದ ದ್ವಾದಶಿ ತಿಥಿಯು ಇರಲಿದೆ. ಈ ದಿನ ಅಯೋಧ್ಯೆ ರಾಮನ ಪ್ರಾಣ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವ ಆಚರಿಸಲಾಗುವುದು. ಈ ಶುಭ ದ್ವಾದಶಿ ತಿಥಿಯಂದು ಹತ್ತು ಶುಭ ಯೋಗಗಳು ಏಕಕಾಲದಲ್ಲಿ ರೂಪುಗೊಳ್ಳುತ್ತಿವೆ. ಇದನ್ನೂ ಓದಿ: ಕುಂಭಮೇಳದಲ್ಲಿ ಭಾಗಿಯಾಗ್ತಾರೆ ಆ್ಯಪಲ್ ಸಹ-ಸಂಸ್ಥಾಪಕ ಸ್ವೀವ್ ಜಾಬ್ಸ್ ಪತ್ನಿ
* ಈ ದಿನದ ನಕ್ಷತ್ರ – ಮೃಗಶಿರ ನಕ್ಷತ್ರ ಈ ದಿನದ ಶುಭ ಯೋಗಗಳು
* ಶುಕ್ಲಯೋಗ
* ಬ್ರಹ್ಮ ಯೋಗ
* ಬಾಲವ ಯೋಗ
* ಕೌಲವ ಯೋಗ
* ತೈತಿಲ ಯೋಗ
* ರೋಹಿಣಿ ಯೋಗ
* ಸರ್ವಾರ್ಥ ಸಿದ್ಧಿ ಯೋಗ
* ಅಮೃತ ಸಿದ್ಧಿ ಯೋಗ
* ಕೈಲಾಸ ಯೋಗ
* ನಂದಿ ಯೋಗ
ಲಕ್ನೋ: ಪ್ರಯಾಗ್ರಾಜ್ನ ಮಹಾ ಕುಂಭಮೇಳ (Maha Kumbh Mela) ನಡೆಯುವ ಪ್ರದೇಶವನ್ನು ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರ ಹೊಸ ಜಿಲ್ಲೆಯನ್ನಾಗಿ ಘೋಷಿಸಿದೆ. 2025ರ ಜನವರಿಯಲ್ಲಿ ನಡೆಯಲಿರುವ ಮಹಾ ಕುಂಭಮೇಳಕ್ಕೂ ಮೊದಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಹೊಸ ಜಿಲ್ಲೆಯನ್ನು ಮಹಾ ಕುಂಭಮೇಳ ಜಿಲ್ಲೆ ಎಂದು ಕರೆಯಲಾಗುತ್ತದೆ. ಮುಂದಿನ ವರ್ಷ ನಡೆಯುವ ಮಹಾ ಕುಂಭಮೇಳವನ್ನು ಸಮರ್ಥವಾಗಿ ನಿರ್ವಹಿಸುವ ಸಲುವಾಗಿ ಈ ನಿರ್ಧಾರ ಮಾಡಲಾಗಿದೆ. ಭಕ್ತಾದಿಗಳಿಗೆ ಅನುಭವವನ್ನು ಹೆಚ್ಚಿಸುವ ಮತ್ತು ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸರ್ಕಾರದ ಬದ್ಧತೆಯನ್ನು ಈ ಕ್ರಮವು ಪ್ರತಿಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ. ಈ ಆದೇಶ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ರೆಫ್ರಿ ವಿವಾದಿತ ತೀರ್ಪಿನಿಂದ ಫುಟ್ಬಾಲ್ ಅಭಿಮಾನಿಗಳ ನಡುವೆ ಘರ್ಷಣೆ – 100ಕ್ಕೂ ಹೆಚ್ಚು ಮಂದಿ ಸಾವು
ಮಹಾ ಕುಂಭಮೇಳ ಜಿಲ್ಲೆಯು ಸಂಪೂರ್ಣ ಮೆರವಣಿಗೆ ಮತ್ತು ನಾಲ್ಕು ತಹಸಿಲ್ಗಳ ಸದರ್, ಸೊರಾನ್, ಫುಲ್ಪುರ್ ಮತ್ತು ಕರ್ಚನಾಗಳ 67 ಗ್ರಾಮಗಳನ್ನು ಒಳಗೊಂಡಿದೆ. ಮಹಾಕುಂಭಮೇಳವನ್ನು 2025ರಲ್ಲಿ ಆಯೋಜಿಸಲಾಗಿದ್ದು, ಸಕಲ ಸಿದ್ಧತೆಗಳು ನಡೆಯುತ್ತಿದೆ. ಮಹಾಕುಂಭ 2025ರ ಸಿದ್ಧತೆಗಳನ್ನು ಪರಿಶೀಲಿಸಲು, ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಡಿಸೆಂಬರ್ 13ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳವು ಜನವರಿ 13ರಿಂದ ಫೆಬ್ರವರಿ 26ರವರೆಗೆ ನಡೆಯಲಿದೆ. ಇದನ್ನೂ ಓದಿ: ಯತ್ನಾಳ್ಗೆ ಶಾಕ್ – ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಶೋಕಾಸ್ ನೋಟಿಸ್
ಲಕ್ನೋ: ಜ್ಞಾನವಾಪಿ (Gyanvapi) ಮಸೀದಿ ಮಸೀದಿಯಾಗಿದ್ದರೇ ಅದರ ಆವರಣದಲ್ಲಿ ತ್ರಿಶೂಲ ಏನು ಮಾಡುತ್ತಿದೆ ಎಂದು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adithyanath) ಪ್ರಶ್ನಿಸಿದ್ದಾರೆ.
ಖಾಸಗಿ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಐತಿಹಾಸಿಕ ಪ್ರಮಾದವನ್ನು ಸರಿಪಡಿಸಲು ಮುಸ್ಲಿಂ ಅರ್ಜಿದಾರರು ಒಂದು ನಿರ್ಣಯಕ್ಕೆ ಮುಂದಾಗಬೇಕು. ಸರ್ಕಾರವು ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸಲು ಬಯಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಎಎಸ್ಐ ಸಮೀಕ್ಷೆ – ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್
“ज्ञानवापी को अगर मस्जिद कहेंगे, तो विवाद होगा. भगवान ने जिसको दृष्टि दी है, वह देखे न. त्रिशूल मस्जिद के अंदर क्या कर रहा है ? हमने तो नहीं रखे. वहां ज्योतिर्लिंग हैं, देवप्रतिमाएं हैं. दीवारें चिल्ला चिल्ला कर क्या कह रही हैं ?”#YogiAdityanath#YogiKaNayaUP#Gyanvapipic.twitter.com/FOkUjGUuts
ನಾವು ಅದನ್ನು ಮಸೀದಿ ಎಂದು ಕರೆದರೆ ಅದು ಸಮಸ್ಯೆಯಾಗುತ್ತದೆ. ಹಾಗಿದ್ದರೆ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? ತ್ರಿಶೂಲವನ್ನು ನಾವು ಇಟ್ಟಿಲ್ಲ. ಮಸೀದಿಯ ಪಕ್ಕದಲ್ಲಿ ಜ್ಯೋತಿರ್ಲಿಂಗವಿದೆ, ದೇವತೆಗಳಿದ್ದಾರೆ. ಐತಿಹಾಸಿಕ ಪ್ರಮಾದವನ್ನು ಸರಿಪಡಿಸಲು ಮುಸ್ಲಿಂ ಕಡೆಯಿಂದ ಪ್ರಸ್ತಾವನೆ ಬರಬೇಕು ಎಂದು ನಾನು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ – ಪ್ರಧಾನಿ ಮೋದಿ ತಯಾರಿ ಏನು?
ಲಕ್ನೋ: ಕಸದ ಗಾಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಫೋಟೋವನ್ನು ತುಂಬಿಕೊಂಡು ಹೋಗುತ್ತಿದ್ದಕ್ಕೆ ವಜಾಗೊಳಿಸಿದ್ದ ಪೌರ ಕಾರ್ಮಿಕನನ್ನು ಮರು ನೇಮಕ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಪೌರ ಕಾರ್ಮಿಕನೊಬ್ಬ ಕಸದ ಗಾಡಿಯಲ್ಲಿ ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಫೋಟೋವನ್ನು ತುಂಬಿಕೊಂಡು ಹೋಗುತ್ತಿದ್ದ. ಈ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದ ಹಾಗೇ ಆ ಸಿಬ್ಬಂದಿಯನ್ನು ಮುನ್ಸಿಪಲ್ ಕಾರ್ಪೋರೇಷನ್ ಕೆಲಸದಿಂದ ವಜಾಗೊಳಿಸಲಾಗಿತ್ತು. ಆದರೆ ಈ ನಿರ್ಧಾರವು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿತ್ತು.
ತೀವ್ರ ಟೀಕೆಯ ಹಿನ್ನೆಲೆಯಲ್ಲಿ ಕಾರ್ಮಿಕನ ಮತ್ತು ಅವರ ಕುಟುಂಬದವರ ಬೇಡಿಕೆಗಳನ್ನು ಗಮನಿಸಿ ಆ ಸಿಬ್ಬಂದಿಯನ್ನು ಕೆಲಸಕ್ಕೆ ವಾಪಸ್ ತೆಗೆದುಕೊಳ್ಳಲಾಗಿದೆ ಎಂದು ಮಥುರಾ-ವೃಂದಾವನ ನಗರ ನಿಗಮದ ಮುನ್ಸಿಪಲ್ ಕಮಿಷನರ್ ಅನುಯ್ಯಾ ಝಾ ತಿಳಿಸಿದ್ದಾರೆ. ಇದನ್ನೂ ಓದಿ: ಕಸದ ಗಾಡಿಯಲ್ಲಿ ಮೋದಿ, ಯೋಗಿ ಆದಿತ್ಯನಾಥ್ ಫೋಟೋ – ಕೆಲಸದಿಂದ ಪೌರಕಾರ್ಮಿಕ ವಜಾ
ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಜೀವ ಬೆದರಿಕೆ ಪೋಸ್ಟ್ ಹಾಕಿದ್ದ ಆರೋಪದಡಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನಂತರ ಬಿಟ್ಟು ಕಳುಹಿಸಿದ್ದಾರೆ.
ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಉಚ್ಚಾಟಿತ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಆರೋಪಿ ಪೋಸ್ಟ್ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೈದರಾಬಾದ್ನ ಮೊಘಲ್ಪುರ ಪೊಲೀಸರು, ಪ್ರಚೋದನಕಾರಿ ಪೋಸ್ಟ್ಗಾಗಿ ಅಬ್ದುಲ್ ಮಜೀದ್ ವಿರುದ್ಧ ಪ್ರಕರಣ ದಾಖಲಿಸಿ ಬುಧವಾರ ಬಂಧಿಸಿದ್ದಾರೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಆರ್ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ನೋಟಿಸ್ ನೀಡುವಂತೆ ಪೊಲೀಸರಿಗೆ ಸೂಚಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕನ್ಹಯ್ಯಾ ಲಾಲ್ ಕುಟುಂಬಕ್ಕೆ ನೆರವು – 24 ಗಂಟೆಯಲ್ಲಿ ಬಂತು 1 ಕೋಟಿ
ಅದರಂತೆ ಅಬ್ದುಲ್ ಮಜೀದ್ಗೆ ನೋಟಿಸ್ ಜಾರಿ ಮಾಡಿದ್ದು, ನಂತರ ಆತನನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ʼಸೂಪರ್ ಚೀಫ್ ಜಸ್ಟಿಸ್ʼನಂತೆ ವರ್ತಿಸುತ್ತಿದ್ದಾರೆ. ತನ್ನ ನ್ಯಾಯಾಲಯದಲ್ಲಿ ಯಾರನ್ನು ಬೇಕಾದರೂ ಅಪರಾಧಿ ಮಾಡ್ತಾರೆ ಎಂದು ಯೋಗಿ ಆದಿತ್ಯನಾಥ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಗುಡುಗಿದ್ದಾರೆ.
ಅಫ್ರೀನ್ ಫಾತಿಮಾ ಅವರ ಮನೆ ಆಕೆಯ ತಾಯಿಯ ಹೆಸರಿನಲ್ಲಿದೆ. 5 ಜನರನ್ನು ಕೊಂದ ಆರೋಪದ ಮೇಲೆ ಅಜಯ್ ಮಿಶ್ರಾ (ಪುತ್ರ ಆಶಿಶ್ ಮಿಶ್ರಾ) ಅವರ ಮನೆಯನ್ನು ಬಿಜೆಪಿ ಏಕೆ ಕೆಡವುತ್ತಿಲ್ಲ? ಭಾರತೀಯ ಮುಸ್ಲಿಮರಿಗೆ ಬಿಜೆಪಿ ಸಾಮೂಹಿಕ ಶಿಕ್ಷೆ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಉದ್ಯೋಗ ಕಲ್ಪಿಸುವ ಕುರಿತು ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಓವೈಸಿ, ಮೋದಿ ಸರ್ಕಾರ ಕಳೆದ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗಗಳನ್ನು ನೀಡಬೇಕಿತ್ತು. ಬದಲಿಗೆ 2024 ರ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದೆ ಎಂಬ ಕಾರಣಕ್ಕಾಗಿ ಅವರು 10 ಲಕ್ಷ ಉದ್ಯೋಗಗಳನ್ನು ನೀಡುವ ಬಗ್ಗೆ ಮಾತನಾಡುತ್ತಿದ್ದಾರೆ. ಕೇಂದ್ರ ಸರ್ಕಾರ 55 ಲಕ್ಷ ಮಂಜೂರಾದ ಹುದ್ದೆಗಳನ್ನು ಹೊಂದಿದ್ದರೂ ಕೇವಲ 10 ಲಕ್ಷ ಉದ್ಯೋಗಗಳನ್ನು ನೀಡುತ್ತಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಎದೆ ಮೇಲೆ ಯೋಗಿ ಟ್ಯಾಟೂ ಹಾಕಿಸಿಕೊಂಡ ಮುಸ್ಲಿಂ ಫ್ಯಾನ್
ಲಕ್ನೋ: ಉತ್ತರಪ್ರದೇಶದ ಬಾಂದಾ ಜಿಲ್ಲೆಗೆ ನಿನ್ನೆ ಭೇಟಿ ನೀಡಿದ್ದ ವೇಳೆ ಇಲ್ಲಿನ ಸರ್ಕೀಟ್ ಹೌಸ್ನಲ್ಲಿ ತಂಗಿದ್ದ ಸಚಿವರಿಗೆ ಇಲಿ ಕಚ್ಚಿದ್ದರಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ.
ಯುವಜನ ಅಭಿವೃದ್ಧಿ ಮತ್ತು ಕ್ರೀಡಾ ಸಚಿವ ಗಿರೀಶ್ಚಂದ್ರ ಯಾದವ್ ಅವರು ಬಾಂದಾ ಜಿಲ್ಲೆಗೆ ತೆರಳಿದ್ದರು. ರಾತ್ರಿ ಮಾವೈ ಬೈಪಾಸ್ನಲ್ಲಿರುವ ಒಂದು ಸರ್ಕಿಟ್ ಹೌಸ್ನಲ್ಲಿ ಉಳಿದುಕೊಂಡಿದ್ದರು. ರಾತ್ರಿ ಮಲಗಿದ್ದ ವೇಳೆ ಅವರಿಗೆ ಇಲಿಕಚ್ಚಿದೆ. ಸ್ವಲ್ಪ ಸಮಯ ಕಳೆದ ಬಳಿಕ ಅವರು ಕೊಂಚ ಅಸ್ವಸ್ಥರಾಗಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಟ್ವೀಟ್ ಬಯೋದಿಂದ ‘ಕೈ’ ಚಿಹ್ನೆ ಬಿಟ್ಟ ಹಾರ್ದಿಕ್ ಪಟೇಲ್
ಇದು ಅಲ್ಲಿನ ಸಿಬ್ಬಂದಿಯ ಗಮನಕ್ಕೆ ಬಂದಿದ್ದು, ಕೆಲವೇ ಕ್ಷಣಗಳಲ್ಲಿ ಅವರನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ, ಡಿಸ್ಚಾರ್ಜ್ ಮಾಡಲಾಗಿದೆ. ಸಧ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ.
ಸಚಿವರ ಬಲಗೈ ಬೆರಳಿಗೆ ಏನೋ ಕಚ್ಚಿರುವ ಗುರುತು ಪತ್ತೆಯಾಗಿದ್ದು, ಹಾವು, ಚೇಳು ಕಚ್ಚಿದೆ ಎಂದು ಗಾಬರಿಗೊಂಡಿದ್ದರು. ಸ್ಥಳ ಪರಿಶೀಲನೆ ಮಾಡಿದಾಗ ಇಲಿ ಇದ್ದಿದ್ದು ಕಂಡುಬಂದಿದೆ. ಸೋಮವಾರ ಮುಂಜಾನೆ 3 ಗಂಟೆಯಲ್ಲಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಚಿಕಿತ್ಸೆ ನೀಡಲಾಗಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ಡಾ.ಎಸ್.ಎನ್.ಮಿಶ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಆಸ್ಪತ್ರೆಗೆ ದಾಖಲು – ಪರಿಸ್ಥಿತಿ ಗಂಭೀರ
ಭೇಟಿ ನೀಡಿದ್ದು ಏಕೆ? : ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆಯ ಮೇರೆಗೆ ಬಾಂದಾ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದರು. ಸರ್ಕಾರದ ಆಡಳಿತದ ಬಗ್ಗೆ ಅಲ್ಲಿನ ಜನರಿಗೆ ಇರುವ ಅಭಿಪ್ರಾಯವೇನು? ಜನರ ಫೀಡ್ಬ್ಯಾಕ್ ಏನು ಎಂಬುದನ್ನು ತಿಳಿದು, ಕುಂದುಕೊರತೆ ಆಲಿಸಲು ಅವರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದರು. ಹಾಗೇ, ಜಿಲ್ಲೆಗಳಿಗೆ, ಯಾವುದೇ ಹಳ್ಳಿಗಳಿಗೆ ಭೇಟಿಕೊಡುವ ಸಚಿವರು, ಸರ್ಕಾರಿ ಅಧಿಕಾರಿಗಳು ಅಲ್ಲಿಯೇ ತಂಗುವ ಸಂದರ್ಭ ಬಂದಾಗ ಹೋಟೆಲ್ಗಳ ಬದಲಿಗೆ ಸರ್ಕಾರಿ ವ್ಯವಸ್ಥೆಯಲ್ಲೇ ಇರಬೇಕು ಎಂದು ಸಿಎಂ ತಿಳಿಸಿದ್ದರು. ಹಾಗಾಗಿ ಅವರು ಸರ್ಕೀಟ್ ಹೌಸ್ನಲ್ಲಿ ತಂಗಿದ್ದರು.