Tag: Young businessman

  • ಐ ಲವ್ ಯು ನೀಲಂ- ಆತ್ಮಹತ್ಯೆಗೆ ಶರಣಾದ ಯುವ ಉದ್ಯಮಿ

    ಐ ಲವ್ ಯು ನೀಲಂ- ಆತ್ಮಹತ್ಯೆಗೆ ಶರಣಾದ ಯುವ ಉದ್ಯಮಿ

    – ನಾಲ್ಕು ಕಂಪನಿ ಹೊಂದಿದ್ದ ಯುವಕ

    ಭೋಪಾಲ್: 28 ವರ್ಷದ ಯುವ ಉದ್ಯಮಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿ ಉದ್ಯಮಿಯ ಡೈರಿ ಲಭ್ಯವಾಗಿದ್ದು, ಅದರಲ್ಲಿ ಐ ಲವ್ ಯು ನೀಲಂ ಎಂದು ಬರೆಯಲಾಗಿದೆ.

    28 ವರ್ಷದ ಪಂಕಜ್ ಆತ್ಮಹತ್ಯೆಗೆ ಶರಣಾದ ಯುವ ಉದ್ಯಮಿ. ಇಂದೋರ್ ನಗರದ ಕನಾಡಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಹೋಟೆಲ್ ನಲ್ಲಿ ಪಂಕಜ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಪಂಕಜ್ ಮುಂಬೈನಲ್ಲಿ ನಾಲ್ಕು ಇವೆಂಟ್ ಮ್ಯಾನೇಜ್‍ಮೆಂಟ್ ಕಂಪನಿ ಮಾಲೀಕರಾಗಿದ್ದು, ಇವರ ಹೆಸರು ಗಿನ್ನಿಸ್ ಬುಕ್ ನಲ್ಲಿ ದಾಖಲಾಗಿದೆ ಎಂದು ವರದಿಯಾಗಿದೆ.

    ಪಂಕಜ್ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಕೋಣೆಯಲ್ಲಿ ಲಭ್ಯವಿದ್ದ ಡೈರಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಡೈರಿಯಲ್ಲಿ ಐ ಲವ್ ಯು ನೀಲಂ ಎಂದು ಬರೆಯಲಾಗಿದ್ದ, ಕೆಲ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾಹಿತಿ ಇದೆ.

    ರಾಜಕೀಯ ಮುಖಂಡ ಸಂಜಯ್ ಶುಕ್ಲಾ ಮಗನ ಮದುವೆ ಆಯೋಜಿಸಲು ಪಂಕಜ್ ಇಂದೋರ್ ಗೆ ಆಗಮಿಸಿದ್ದರು. ಮಂಗಳವಾರ ರಾತ್ರಿ ಮದುವೆ ಕೆಲಸ ಮಾಡಿದ್ದ ಪಂಕಜ್, ಸುಸ್ತಾಗಿದೆ ಎಂದು ಹೋಟೆಲ್ ಗೆ ತೆರಳಿದ್ದರು. ಬೆಳಗ್ಗೆ ಬಂದ ಸಿಬ್ಬಂದಿ ಕೋಣೆಯ ಬಾಗಿಲು ತೆಗೆದಾಗ ನೇಣು ಬಿಗಿದು ಸ್ಥಿತಿಯಲ್ಲಿ ಪಂಕಜ್ ಶವ ಪತ್ತೆಯಾಗಿತ್ತು.

  • ಬೀದರ್‌ನಲ್ಲಿ ಯುವ ಉದ್ಯಮಿ ಕಿಡ್ನಾಪ್

    ಬೀದರ್‌ನಲ್ಲಿ ಯುವ ಉದ್ಯಮಿ ಕಿಡ್ನಾಪ್

    ಬೀದರ್: ನಗರದ ಯುವ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಣ ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದ್ದು, ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

    ನಗರದ ನಿವಾಸಿ ಅಭಿಷೇಕ್ ಇನಾನಿ ಅಪಹರಣವಾದ ಯುವ ಉದ್ಯಮಿ. ಅಭಿಷೇಕ್ ಅವರು ಬುಧವಾರ ಸಂಜೆ ಕಂಪನಿ ಕೆಲಸ ಮುಗಿಸಿ ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಕೋಳಾರದ ಕೈಗಾರಿಕಾ ಪ್ರದೇಶದಲ್ಲಿರುವ ಆಂಜನೇಯ ದೇವಸ್ಥಾನ ಸಮೀಪದ ನಿರ್ಜನ ಪ್ರದೇಶದಲ್ಲಿ ಅಪಹರಣ ಮಾಡಿದ್ದಾರೆ.

    ಅಭಿಷೇಕ್ ಅವರು ಕೋಳಾರ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ದಾಲ್ ಮಿಲ್ ಫ್ಯಾಕ್ಟರಿ ನಡೆಸುತ್ತಿದ್ದರು. ಅಪಹರಣಕ್ಕೂ ಎರಡು ದಿನ ಮುಂಚೆ ಅಭಿಷೇಕ್ ಅವರಿಗೆ ದುಷ್ಕರ್ಮಿಗಳು ಕರೆ ಮಾಡಿ, ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಅಭಿಷೇಕ್ ಅವರು ಬೀದರ್ ಜಿಲ್ಲಾ ವರಿಷ್ಠಾಧಿಕಾರಿ ಟಿ.ಶ್ರೀಧರ್ ಅವರಿಗೆ ದೂರು ನೀಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ದುಷ್ಕರ್ಮಿಗಳು ಹಣದಾಸೆಗೆ ಅಭಿಷೇಕ್ ಅವರನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಬುಧವಾರ ರಾತ್ರಿಯಿಂದಲೇ ಶೋಧ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.