Tag: youth group

  • ಮಂಗ್ಳೂರು ಗಲಭೆಗೆ ಮೊದಲೇ ಪ್ಲಾನ್- ಗೂಡ್ಸ್ ಆಟೋದಲ್ಲಿ ಕಲ್ಲು ತಂದಿದ್ದ ಪ್ರತಿಭಟನಾಕಾರರು

    ಮಂಗ್ಳೂರು ಗಲಭೆಗೆ ಮೊದಲೇ ಪ್ಲಾನ್- ಗೂಡ್ಸ್ ಆಟೋದಲ್ಲಿ ಕಲ್ಲು ತಂದಿದ್ದ ಪ್ರತಿಭಟನಾಕಾರರು

    – ಗಲಭೆಗೆ ತಯಾರಿ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಮಂಗಳೂರು: ಜಿಲ್ಲೆಯಲ್ಲಿ ಗಲಭೆ ಮಾಡಲು ಪ್ರತಿಭಟನಾಕಾರರು ಮೊದಲೇ ಪ್ಲಾನ್ ಮಾಡಿದ್ದರು. ಗಲಭೆಗೂ ಮುನ್ನ ಗೂಡ್ಸ್ ಆಟೋದಲ್ಲಿ ಗೋಣಿಚೀಲಗಳಲ್ಲಿ ಕಲ್ಲುಗಳನ್ನು ತರೆಸಿಟ್ಟುಕೊಂಡಿದ್ದರು ಎನ್ನುವುದಕ್ಕೆ ಸಿಸಿಟಿವಿ ದೃಶ್ಯಾವಳಿವೊಂದು ಸಾಕ್ಷಿಯಾಗಿದೆ.

    ಮಂಗಳೂರು ಗೊಲಿಬಾರ್ ನಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಪೊಲೀಸ್ ಸಿಬ್ಬಂದಿ ಹಾಗೂ ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಆದರೆ ಈ ಗಲಭೆ ನಡೆಸಲು ಕೆಲ ಪ್ರತಿಭಟನಾಕಾರರ ಗುಂಪು ಮೊದಲೇ ಪ್ಲಾನ್ ಮಾಡಿಕೊಂಡಿತ್ತು. ಗಲಭೆಗೂ ಮುನ್ನ ಕೆಲ ಗುಂಪು ಗೂಡ್ಸ್ ಆಟೋದಲ್ಲಿ ಕಲ್ಲುಗಳನ್ನು ತರೆಸಿಕೊಂಡಿದ್ದರು. ಗೋಣಿಚೀಲಗಳಲ್ಲಿ ಈ ಕಲ್ಲುಗಳನ್ನು ತುಂಬಿಸಿಡಲಾಗಿತ್ತು. ಈ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಕೆಲ ಪ್ರತಿಭಟನಾಕಾರರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಲ್ಲು ತೂರಾಟ ನಡೆಸಲಾರಂಭಿಸಿದ್ದರು. ಬಳಿಕ ಸಿಸಿ ಕ್ಯಾಮೆರಾಗಳನ್ನು ಒಡೆದು ಹಾಕಿದ್ದರು. ಹೀಗಾಗಿ ಕೆಲವರು ಮೊದಲೇ ಗಲಭೆಗೆ ತಯಾರಿ ನಡೆಸಿಕೊಂಡೇ ಬಂದಿದ್ದರು ಎಂದು ಸಿಸಿಟಿವಿ ದೃಶ್ಯಗಳು ಬಯಲು ಮಾಡಿದೆ.

    ಯುವಕರಿದ್ದ ಒಂದು ಗುಂಪು ಪ್ರತಿಭಟನೆ ವೇಳೆ ಗಲಭೆ ನಡೆಸಲೆಂದೆ ಕಲ್ಲು ತಂದು ಹಾಕಿದರೆ, ಇನ್ನೊಂದು ಗುಂಪು ಸಿಸಿಟಿವಿಗಳನ್ನು ಒಡೆದು ಹಾಕಿ ಗಲಭೆ ಮಾಡಲು ಯತ್ನಿಸಿದ ದೃಶ್ಯಗಳು ಕೂಡ ಲಭ್ಯವಾಗಿದೆ. ಕಲ್ಲು ತೂರಾಟ ನಡೆಸುತ್ತಿದ್ದ ವೇಳೆ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪ್ರತಿಭಟನಾಕಾರರು ಒಡೆಯಲು ಯತ್ನಿಸಿರುವುದು, ಮನೆಗಳ ಮುಂದಿದ್ದ ಕ್ಯಾಮೆರಾಗಳನ್ನು ತಿರುಗಿಸಿ ಹೋಗಿರುವ ದೃಶ್ಯಗಳು ಸೆರೆಯಾಗಿವೆ. ಅಷ್ಟೇ ಅಲ್ಲದೆ ಪೊಲೀಸ್ ವ್ಯಾನ್ ಬರುವುದನ್ನು ಗಮನಿಸಿ ರಸ್ತೆಗೆ ಅಡ್ಡವಾಗಿ ಕಬ್ಬಿಣದ ಕಂಬಗಳನ್ನು ಹಾಕಿ ಓಡಿಹೋಗಿರುವ ದೃಶ್ಯಾವಳಿಗಳು ಕೂಡ ಲಭ್ಯವಾಗಿದೆ.

  • ಗೆಳೆಯನ ಜೊತೆಗಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕರು

    ಗೆಳೆಯನ ಜೊತೆಗಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕರು

    -ಗೆಳತಿಯನ್ನು ಬಿಟ್ಟು ಕಾಲ್ಕಿತ್ತ ಗೆಳೆಯ

    ದಿಸ್ಪುರ್: ತನ್ನ ಮುಸ್ಲಿಂ ಪ್ರಿಯಕರನೊಂದಿಗೆ ಪಾರ್ಕ್ ನಲ್ಲಿ ಕುಳಿತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವಕರ ಗುಂಪೊಂದು ದೌರ್ಜನ್ಯ ನಡೆಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

    ಬಾಲಕಿ ಪಾರ್ಕ್ ನಲ್ಲಿ ಪ್ರಿಯಕರನ ಜೊತೆ ಕುಳಿತುಕೊಂಡಿದ್ದಳು. ಬಾಲಕಿ ಮತ್ತು ಯುವಕ ಸಾರ್ವಜನಿಕವಾಗಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಯುವಕರ ಗುಂಪೊಂದು ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಯುವಕರ ಗುಂಪು ಹಲ್ಲೆಗೆ ಮುಂದಾಗುತ್ತಿದ್ದಂತೆ ಭಯಬೀತನಾದ ಪ್ರಿಯಕರ ಬಾಲಕಿಯನ್ನು ಬಿಟ್ಟು ಓಡಿ ಹೋಗಿದ್ದಾನೆ.

    ಬಾಲಕಿಯ ಮೇಲೆ ಮುಗಿಬಿದ್ದ ಯುವಕರ ಗುಂಪು ಆಕೆಯೊಂದಿಗೆ ಅಸಭ್ಯಬಾಗಿ ವರ್ತಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ. ಬಾಲಕಿ ಎಷ್ಟೇ ಮನವಿ ಮಾಡಿಕೊಂಡರು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಎಲ್ಲ ದೃಶ್ಯಗಳು ಕೆಲ ಯುವಕರ ಮೊಬೈಲಿನಲ್ಲಿ ಸೆರೆಯಾಗಿವೆ. ಸದ್ಯ ಈ ವಿಡಿಯೋ ಅಸ್ಸಾಂನಲ್ಲಿ ವೈರಲ್ ಆಗಿದ್ದು, ಘಟನೆ ನಡೆದ ಸ್ಥಳದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

    ಕೆಲವು ತಿಂಗಳ ಹಿಂದೆ ಎಂಟು ಮಂದಿ ಯುವತಿಯೊಬ್ಬಳಿಗೆ ಕಿರುಕುಳವನ್ನು ನೀಡಿದ್ದ ಘಟನೆ ಬಿಹಾರದ ಯೆಹಾನಾಬಾದನಲ್ಲಿ ನಡೆದಿತ್ತು. ಕಿರುಕುಳವನ್ನು ನೀಡಿದ್ದಲ್ಲದೇ ವೀಡಿಯೊವನ್ನು ಸಾಮಾಜಿಕ ಜಾಲಾತಾಣಗಳಲ್ಲಿ ಅಪ್ಲೋಡ್ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೈಕ್ ಓವರ್‌ಟೇಕ್ ಮಾಡಿದ್ದಕ್ಕೆ ಯುವಕರ ಮಧ್ಯೆ ಜಗಳ- ಬಿಡಿಸಲು ಬಂದವರ ಮೇಲೆ ಹಲ್ಲೆಗೈದು ಪರಾರಿ

    ಬೈಕ್ ಓವರ್‌ಟೇಕ್ ಮಾಡಿದ್ದಕ್ಕೆ ಯುವಕರ ಮಧ್ಯೆ ಜಗಳ- ಬಿಡಿಸಲು ಬಂದವರ ಮೇಲೆ ಹಲ್ಲೆಗೈದು ಪರಾರಿ

    ಯಾದಗಿರಿ: ಬೈಕ್ ಹಿಂದಿಕ್ಕಿದ್ದಕ್ಕೆ ಸುರಪುರ ತಾಲೂಕಿನ ಕಕ್ಕೇರಾ ಪಟ್ಟಣದಲ್ಲಿ ಯುವಕರು ಜಗಳವಾಡಿದ್ದು, ಇದನ್ನು ಬಿಡಿಸಲು ಹೋದವರ ಮೇಲೆಯೇ ಅವರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

    ಇಂದು ಬೆಳಗ್ಗೆ ಕಕ್ಕೇರಾ ಪಟ್ಟಣದ ಸವಾರನೊಬ್ಬ ಮತ್ತೊಂದು ಬೈಕ್ ಹಿಂದಿಕ್ಕಿ ಮುಂದೆ ಹೋಗಿದ್ದನು. ಮಧ್ಯಾಹ್ನ ಈ ಇಬ್ಬರು ಯುವಕರು ಈ ವಿಚಾರಕ್ಕೆ ಸಂಬಂಧಿಸಿದಂತೆ ಪಟ್ಟಣದ ಮಧ್ಯೆ ಜಗಳವಾಡಿದ್ದಾರೆ. ಈ ವೇಳೆ ಇಬ್ಬರ ಸಹಚರರು ಆಗಮಿಸಿ ಬಡಿದಾಡಿಕೊಂಡಿದ್ದಾರೆ.

    ಈ ಜಗಳವನ್ನು ನೋಡಿದ ಕೆಲವು ಸ್ಥಳೀಯರು ಜಗಳ ಬಿಡಿಸಲು ಹೋಗಿದ್ದರು. ಯಾರ ಮಾತಿಗೂ ಬಗ್ಗದ ಯುವಕರು ಜಗಳ ಬಿಡಿಸಲು ಬಂದವರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಹೀಗಾಗಿ ಅಂಬರೀಶ್ ಸೋಲಾಪುರ ಸೇರಿದಂತೆ ಕೆಲವರಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದುಬಾರಿ ಕಾರೊಂದರ ಮೇಲೆ ಕಲ್ಲು ಬಿದ್ದ ಪರಿಣಾಮ ಮುಂಬದಿಯ ಗಾಜು ಜಖಂಗೊಂಡಿದೆ.

    ವ್ಯಕ್ತಿಯೊಬ್ಬರು ತಕ್ಷಣವೇ ಕೊಡೇಕಲ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇತ್ತ ಪೊಲೀಸರು ಬರುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಯುವಕರು ತಮ್ಮ ಬೈಕ್‍ಗಳನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಪಟ್ಟಣದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಪರಾರಿಯಾದ ಯುವಕರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದ ಕುರಿತು ಮಾಹಿತಿ ನೀಡಲು ಸ್ಥಳದಲ್ಲಿದ್ದ ಅನೇಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv