Tag: youth

  • ಬೀದಿ ಕಾಮುಕರ ಬಟ್ಟೆ ಬಿಚ್ಚಿ, ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಗೂಸ

    ಬೀದಿ ಕಾಮುಕರ ಬಟ್ಟೆ ಬಿಚ್ಚಿ, ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಗೂಸ

    ಬೆಂಗಳೂರು: ಗ್ರಾಮದ ಯುವತಿಯರಿಗೆ ಚುಡಾಯಿಸುತ್ತಿದ್ದ ಬೀದಿ ಕಾಮುಕರಿಗೆ ಗ್ರಾಮಸ್ಥರು ಹಿಡಿದು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಗೆದ್ದಲಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಸಾಕಷ್ಟು ಬಾರಿ ಈ ಬಗ್ಗೆ ಎಚ್ಚರಿಕೆ ನೀಡಿದ್ದರೂ ಸಹ, ಮೂವರು ಪುಂಡರು ತಮ್ಮ ಚೇಷ್ಟೆಯನ್ನ ಮುಂದುವರಿಸಿದ್ದರು. ಇವರ ಆಟಕ್ಕೆ ಕಡಿವಾಣ ಹಾಕಲೇಬೇಕೆಂದು ನಿರ್ಧರಿಸಿದ ಗ್ರಾಮಸ್ಥರು ಈ ಬೀದಿ ಕಾಮುಕರನ್ನ ಹಿಡಿದು ಬಟ್ಟೆ ಬಿಚ್ಚಿ, ಗ್ರಾಮದ ದೇವಾಲಯದ ಕಂಬಕ್ಕೆ ಕಟ್ಟಿ ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಇನ್ನೂ ಈ ಮೂವರು ಯುವಕರು ನೆಲಮಂಗಲ ಪಟ್ಟಣದವರಾಗಿದ್ದು, ಕಾಲೇಜಿಗೆ ಹೋಗುವ ಯುವತಿಯರನ್ನ ಚುಡಾಯಿಸುತ್ತಿದ್ದರು. ಹೀಗಾಗಿ ಗ್ರಾಮಕ್ಕೆ ಬಸ್ಸಿನಲ್ಲಿ ಪುಂಡ ಯುವಕರು ಬರುತ್ತಿರುವ ಮಾಹಿತಿಯನ್ನ ಕೂಡಲೇ ಯುವತಿಯರು ತಮ್ಮ ಪೋಷಕರಿಗೆ ತಿಳಿಸಿದ್ದಾರೆ.

    ಮಾಹಿತಿ ತಿಳಿದು ಆಕ್ರೋಶಗೊಂಡ ಪೋಷಕರು ಪುಂಡ ಕಾಮುಕರು ಬರುತ್ತಿದ್ದಂತೆ ಹಿಡಿದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಷ್ಟೇ ಅಲ್ಲದೇ ಪೋಲಿ ಪುಂಡರಿಗೆ ಎಚ್ಚರಿಕೆಯನ್ನ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಅನ್ಯ ಸಮುದಾಯದ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಮನೆಗೆ ಬೆಂಕಿ!

    ಅನ್ಯ ಸಮುದಾಯದ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಮನೆಗೆ ಬೆಂಕಿ!

    ದಾವಣಗೆರೆ: ಅನ್ಯ ಸಮುದಾಯದಯ ಬಾಲಕಿಯನ್ನು ಪ್ರೀತಿಸಿದ ತಪ್ಪಿಗೆ ಯುವಕನ ಮನೆಗೆ ಬೆಂಕಿ ಇಟ್ಟು ಮತ್ತೊಂದು ಮನೆಯ ವಸ್ತುಗಳನ್ನು ಧ್ವಂಸ ಮಾಡಿದ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ.

    ಯಲ್ಲಪುರ ಗ್ರಾಮದ ಸುನೀಲ್ ಅದೇ ಗ್ರಾಮದ ಬೇರೆ ಸಮುದಾಯದ ಅಪ್ರಾಪ್ತ ಬಾಲಕಿಯನ್ನ ಪ್ರೀತಿಸುತ್ತಿದ್ದನು. ಮನೆಯವರ ವಿರೋಧದ ನಡುವೆಯೂ ಶನಿವಾರ ಅಪ್ರಾಪ್ತ ಬಾಲಕಿಯೊಂದಿಗೆ ಸುನೀಲ್ ಓಡಿ ಹೋಗಿದ್ದನು.

    ಬಾಲಕಿ ಪೋಷಕರು ಸುನೀಲ್ ವಿರುದ್ಧ ಹರಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಹಾಗೂ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದರು. ಪೊಸ್ಕೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸುನೀಲ್ ನನ್ನು ಬಂಧಿಸಿದ್ದರು.

    ಕಳೆದ ರಾತ್ರಿ ಸುನೀಲ್ ಮನೆ ಮೇಲೆ ಬಾಲಕಿಯ ಪೋಷಕರು ದಾಳಿ ಮಾಡಿ ಮನೆಗೆ ಬೆಂಕಿ ಇಟ್ಟಿದ್ದಲ್ಲದೆ, ಮತ್ತೊಂದು ಮನೆಯ ಬಾಗಿಲು ಸಾಮಾಗ್ರಿಗಳನ್ನು ಧ್ವಂಸ ಮಾಡಿದ್ದಾರೆ. ಈ ಸಂಬಂಧ ಸುನೀಲ್ ಪೋಷಕರಿಂದ ಯುವತಿಯ ಮನೆಯವರ 10 ಜನರ ಮೇಲೆ ಹರಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಯುವಕನ ತಲೆ ಬೋಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ರು!

    ಯುವಕನ ತಲೆ ಬೋಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ರು!

    ಲಕ್ನೋ: ಯುವಕನೋರ್ವನ ತಲೆ ಬೋಳಿಸಿ ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸಹಾರಖರ್ಡ್ ಎಂಬ ಹಳ್ಳಿಯಲ್ಲಿ ನಡೆದಿದೆ. ಗ್ರಾಮಸ್ಥರು ಯುವಕ ತಲೆ ಬೋಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ನವೆಂಬರ್ 5ರಂದು ಘಟನೆ ನಡೆದಿದ್ದು, ಯುವಕ ಗ್ರಾಮದ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸುವ ಮೂಲಕ ಕಿರುಕುಳ ನೀಡುತ್ತಿದ್ದನಂತೆ.

    ವಾಖೀಲ್ ಎಂಬಾತನ ತಲೆಯ ಕೂದಲು ಕಟ್ ಮಾಡಿದ ಗ್ರಾಮಸ್ಥರು ಮುಖಕ್ಕೆ ಮಸಿ ಬಳೆದಿದ್ದಾರೆ. ವಾಖೀಲ್ ಗ್ರಾಮದ ಯುವತಿಯರ ಫೋಟೋ ಜೊತೆಗೆ ತನ್ನ ಭಾವಚಿತ್ರವನ್ನು ಎಡಿಟ್ ಮಾಡಿಕೊಂಡು ಫೇಸ್‍ಬುಕ್ ನಲ್ಲಿ ಅಪ್ಲೋಡ್ ಮಾಡಿಕೊಳ್ಳುತ್ತಿದ್ದನಂತೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಯುವಕನಿಗೆ ಬುದ್ಧಿ ಕಲಿಸಲು ಈ ರೀತಿ ಮಾಡಿದ್ದಾರೆ. ಕೊನೆಗೆ ಗ್ರಾಮಸ್ಥರು ಯುವಕನನ್ನು ಸ್ಥಳೀಯ ಪೊಲೀಸರ ವಶಕ್ಕೆ ನೀಡಿದ್ದಾರೆ.

    ವಾಖೀಲ್ ಕುಟುಂಸ್ಥರು ಮ್ಯಾಜಿಸ್ರ್ಟೇಟ್ ಕೋರ್ಟ್ ನಲ್ಲಿ ತಮ್ಮ ಮಗನ ಮೇಲೆ ಆರೋಪ ಮಾಡಿರುವುದು ಸುಳ್ಳು ಎಂದು ಹೇಳಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಎಂ ಚಂದ್ರಭೂಷಣ್ ಸಿಂಗ್, ಯುವಕನನ್ನು ಗ್ರಾಮಸ್ಥರು ಹೊಡೆಯುತ್ತಿರುವ ವಿಡಿಯೋ ಲಭ್ಯವಾಗಿದ್ದು, ಈ ವಿಡಿಯೋದಲ್ಲಿ ಯುವಕನ ತಲೆ ಬೋಳಿಸಿ, ಮಸಿ ಬಳೆಯಲಾಗಿದೆ. ಈ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸಿದ್ದು, ಈ ಸಂಬಂಧ ಸೂಕ್ತ ಕ್ರಮವನ್ನ ತೆಗೆದುಕೊಳ್ಳುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

    ವಾಖೀಲ್ ಒಬ್ಬ ಮುಗ್ಧ ಯುವಕ ಕೆಲ ಗೂಂಡಾಗಳು ಆತನನ್ನು ಮನೆಯಿಂದ ಎಳೆತಂದು, ತಲೆ ಬೋಳಿಸಿ ಮೆರವಣಿಗೆ ಮಾಡಿಸಿದ್ದಾರೆ. ಹಳ್ಳಿಯ ನಾಲೆಯ ಹತ್ತಿರ ಆತನನ್ನು ಕರೆತಂದು ಕೊಲೆ ಮಾಡಲು ಸಜ್ಜಾಗಿದ್ದ ಗೂಂಡಾಗಳನ್ನ ಕೆಲ ಗ್ರಾಮಸ್ಥರು ತಡೆದು ಅವನ ಜೀವವನ್ನ ಉಳಿಸಿದ್ದಾರೆ. ಪೊಲೀಸರು ಗೂಂಡಾಗಳನ್ನ ಬಂಧಿಸುವ ಬದಲು ಯುವಕನನ್ನು ಬಂಧಿಸಿರುವುದು ಸಮಾಜ ಘಾತುಕ ಕೆಲಸಗಳನ್ನ ಮಾಡುವ ಗೂಂಡಾಗಳಿಗೆ ಇನ್ನಷ್ಟು ಸಹಕಾರಿಯಾಗಿದೆ ಎಂದು ವಾಖೀಲ್ ಪರ ವಕೀಲ ಹಾಗು ಸಾಮಾಜಿಕ ಕಾರ್ಯಕರ್ತ ಇಫ್ರಾಹಿಂ ಹುಸೈನ್ ಆರೋಪಿಸಿದ್ದಾರೆ.

    ಯುವಕನ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ವಾಖೀಲನ ಚಾರಿತ್ಯವನ್ನ ಹಾಳು ಮಾಡಲು ಕೆಲ ಕಿಡಿಗೇಡಿಗಳು ಈ ರೀತಿ ಮಾಡಿದ್ದು, ಎಲ್ಲವನ್ನ ತಿಳಿದಿದ್ದ ಪೊಲೀಸರು ಗೂಂಡಾಗಳ ವಿರುದ್ಧ ಯಾವುದೇ ಕ್ರಮವನ್ನ ತೆಗೆದುಕೊಂಡಿಲ್ಲ ಎಂದು ಇಫ್ರಾಹಿಂ ಹುಸೈನ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಯುವತಿ ಜೊತೆ ಒಡನಾಟ – ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

    ಯುವತಿ ಜೊತೆ ಒಡನಾಟ – ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

    ಬೆಳಗಾವಿ: ಯುವತಿ ಜೊತೆ ಒಡನಾಟ ಹೊಂದಿದ್ದಕ್ಕೆ ಆಕೆಯ ಸಂಬಂಧಿಕರು ಹಣದ ಬೇಡಿಕೆಯಿಟ್ಟು ಯುವಕನಿಗೆ ಕಿರುಕುಳ ನೀಡಿದ್ದಕ್ಕೆ ಆತ ಸೆಲ್ಫಿ ವಿಡಿಯೋ ಮಾಡಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ಕೊರಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವಕ ಸಾವಿನ ನಂತರ ಈ ಸೆಲ್ಫಿ ವಿಡಿಯೋ ವೈರಲ್ ಆಗಿದೆ. ಮೃತ ಯುವಕ ಮಹಾಂತೇಶ್ ಏಣಗಿ ಅದೇ ಗ್ರಾಮದ ಯುವತಿ ಜೊತೆ ಒಡನಾಟ ಹೊಂದಿದ್ದನು.

    ನಮ್ಮ ಮಗಳ ಜೊತೆ ಹೇಗೆ ಮಾತನಾಡಿದೆ ಎಂದು ಆರೋಪಿಗಳಾದ ಗುಳಪ್ಪಾ, ವೀರಭದ್ರ ಹಾಗೂ ನಾಗಪ್ಪ ಹೊಳಿ ಮೂವರು ಸೇರಿ ಮಹಾಂತೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಯುವತಿಯ ಸಂಬಂಧಿಕರಿಂದ 7 ಲಕ್ಷ ರೂ. ದಂಡ ರೂಪವಾಗಿ ವಸೂಲಿ ಮಾಡಿದ್ದಾರೆ. ಆದಾದ ಮೇಲೆ ಮತ್ತೆ 3 ಲಕ್ಷ ರೂ. ಕೊಡುವಂತೆ ಬೆದರಿಕೆ ಹಾಕಿದ್ದಾರೆ.

    ಮಹಾಂತೇಶ್ ಬೆಳೆದ ಹತ್ತಿಯನ್ನು ಮಾರಾಟ ಮಾಡಿ ಹಣವನ್ನು ಯುವತಿಯ ಸಂಬಂಧಿಕರಿಗೆ ನೀಡಿದ್ದನು. ಇದೀಗ ಯುವತಿ ಮನೆಯವರು ಮತ್ತಷ್ಟು ಹಣದ ಬೇಡಿಕೆ ಇಟ್ಟಿದ್ದು, ಇದರಿಂದ ಬೇಸತ್ತ ಮಹಾಂತೇಶ್ ತನಗಾದ ಅನ್ಯಾಯ ಹೇಳಿಕೊಂಡು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಸದ್ಯ ಈ ಬಗ್ಗೆ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಟ್ರಾಫಿಕ್ ನಿಂದ ಪಾರಾಗಲು ತೂಗು ಸೇತುವೆ- ಜೀವಕ್ಕೆ ಕುತ್ತು ತರುತ್ತಾ ಸಿಗ್ನೇಚರ್ ಬ್ರಿಡ್ಜ್..!

    ಟ್ರಾಫಿಕ್ ನಿಂದ ಪಾರಾಗಲು ತೂಗು ಸೇತುವೆ- ಜೀವಕ್ಕೆ ಕುತ್ತು ತರುತ್ತಾ ಸಿಗ್ನೇಚರ್ ಬ್ರಿಡ್ಜ್..!

    ನವದೆಹಲಿ: ಟ್ರಾಫಿಕ್ ಸಮಸ್ಯೆಯಿಂದ ಪಾರಾಗಲು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಸಿಗ್ನೆಚರ್ ಬ್ರಿಡ್ಜ್ ತೂಗು ಸೇತುವೆ ಮೇಲೆ ಜನರು ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿರುವುದರಿಂದ ಜೀವಕ್ಕೆ ಅಪಾಯವಾಗುವ ಸಂಭವ ಜಾಸ್ತಿ ಇದೆ.

    ಹೊಸದಾಗಿ ನಿರ್ಮಾಣಗೊಂಡಿರುವ ಸೇತುವೆಯ ತುತ್ತ ತುದಿಯಲ್ಲಿ ಯುವಕರು ಸಾಹಸ ಮಾಡಿ, ತಮ್ಮ ಜೀವವನ್ನು ಒತ್ತೆಯಿಟ್ಟು ಸೆಲ್ಫಿ ತೆಗೆದುಕೊಳ್ಳುತ್ತಿರುವುರಿಂದ ಎಲ್ಲರಲ್ಲಿ ಆತಂಕ ಸೃಷ್ಠಿಯಾಗಿದೆ.

    ಸುಮಾರು 14 ವರ್ಷಗಳ ಸತತ ಪರಿಶ್ರಮದಿಂದ ಉತ್ತರ ಮತ್ತು ಈಶಾನ್ಯ ದೆಹಲಿಯನ್ನು ಸೇರಿಸಲು ಈ ತೂಗು ಸೇತುವೆಯನ್ನ ನಿರ್ಮಿಸಿದ್ದು, ಕೆಲವು ದಿನಗಳ ಹಿಂದೆಯಷ್ಟೆ ಇದನ್ನ ಲೋಕಾರ್ಪಣೆ ಮಾಡಲಾಗಿದೆ. ಟ್ರಾಫಿಕ್ ಸಮಸ್ಯೆಯನ್ನ ಬಗೆಹರಿಸಲು ಈ ಸೇತುವೆ ನಿರ್ಮಿಸಲಾಗಿದ್ದರೂ, ಈಗ ಪ್ರವಾಸಿಗರ ತಾಣವಾಗಿ ಬದಲಾಗಿದೆ.

    ಈ ಹೊಸ ಸೇತುವೆಯ ಮೇಲೆ ಜನರು ಮುಗಿಬಿದ್ದು ಫೋಟೋಗಳನ್ನ ತೆಗೆದುಕೊಳ್ಳುತ್ತಿದ್ದು, ಸೇತುವೆಗೆ ಹಾಕಲಾಗಿರುವ ಕಂಬಿಗಳ ಮೇಲೆ ನಿಂತು ಪೋಸ್ ನೀಡುವ ಮೂಲಕ ಅವರ ಪ್ರಾಣಕ್ಕೆ ಅಪಾಯವನ್ನ ತಂದುಕೊಳ್ಳುತ್ತಿದ್ದಾರೆ. ಕೆಲವರು ವಾಹನ ಚಲಾಯಿಸುವಾಗಲೇ ಫೋಟೋ ತಗೆಯುವ ಸಾಹಸಕ್ಕೆ ಕೈಹಾಕಿದ್ದು ಇದರಿಂದ ಭಾರೀ ಪ್ರಮಾಣದ ಅಪಘಾತಗಳು ಸಂಭವಿಸಬಹುದಾಗಿದೆ.

    ಈ ವಿಚಾರವಾಗಿ ಮಾತನಾಡಿದ ಅಧಿಕಾರಿಗಳು, ಮುಂದಿನ ದಿನದಲ್ಲಿ ಈ ಸೇತುವೆಯನ್ನು ಪ್ರವಾಸಿ ತಾಣವನ್ನಾಗಿ ಮಾಡಿ, ದೆಹಲಿ ನಗರದ ಸೌಂದರ್ಯ ಕಣ್ತುಂಬಿಕೊಳ್ಳಲು ಗಾಜಿನ ಕೋಣೆಗಳನ್ನು ನಿರ್ಮಿಸಲಾಗುವುದು. ಇದರೊಂದಿಗೆ ಸೆಲ್ಫಿ ಪ್ರಿಯರಿಗೆಂದೇ ಫೋಟೋ ತೆಗೆದುಕೊಳ್ಳುವುದಕ್ಕೆ ಪ್ರತ್ಯೇಕ ಸ್ಥಳಗಳನ್ನ ನಿರ್ಮಿಸಲಾಗುವುದು ಇದರಿಂದ ಅನಾಹುತಗಳನ್ನ ತಪ್ಪಿಸಬಹುದು ಎಂದು ಹೇಳಿದ್ದಾರೆ.

    ಈ ಕಾಮಗಾರಿ ಫೆಬ್ರವರಿ ಅಂತ್ಯಕ್ಕೆ ಜಾರಿಯಾಗಲಿದ್ದು, ಜನರು ಸೇತುವೆ ಮೇಲೆ ನಿಂತು ಫೋಟೋ ತೆಗೆಯುವುದರ ಬಗ್ಗೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    1997ರಲ್ಲಿ ವಜೀರಾಬಾದ್ ಸೇತುವೆಯಿಂದ ಶಾಲಾ ಬಸ್ ಉರುಳಿ, 22 ಮಕ್ಕಳು ಯಮುನಾ ನದಿಯಲ್ಲಿ ಕೊನೆಯುಸಿರೆಳೆದಿದ್ದರು. ಈ ದುರಂತ ನಡೆದ ಬಳಿಕ ಸರ್ಕಾರ ಬೃಹತ್ ತೂಗು ಸೇತುವೆ ಕಾಮಗಾರಿಯನ್ನ ಪ್ರಾರಂಭಿಸಿತ್ತು. 2010ರಲ್ಲಿ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ ಹಣಕಾಸು ತೊಂದರೆಯಿಂದ ನಿಂತುಹೋಗಿತ್ತು. ಸುಮಾರು 1594 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆಯನ್ನ ಇದೇ ತಿಂಗಳ ನವೆಂಬರ್ 5 ಕ್ಕೆ ಲೋಕಾರ್ಪಣೆ ಮಾಡಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಮಗನ ಮೇಲೆ ಮಾರಣಾಂತಿಕ ಹಲ್ಲೆ

    ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಮಗನ ಮೇಲೆ ಮಾರಣಾಂತಿಕ ಹಲ್ಲೆ

    ಚಿತ್ರದುರ್ಗ: ತಾಯಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಹೊಸದುರ್ಗ ತಾಲೂಕಿನ ಮಾಡದಕೆರೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

    ಗೊಲ್ಲರಹಟ್ಟಿ ನಿವಾಸಿ ಚಿದಾನಂದ(26) ಹಲ್ಲೆಗೊಳಗಾದ ಯುವಕ. ಆರೋಪಿಗಳಾದ ಶ್ರೀನಿವಾಸ, ಸುನಿಲ್, ಮಂಜ, ಪ್ರವೀಣ್ ಸೇರಿದಂತೆ ಏಳು ಜನರು ಹಲ್ಲೆ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ವೇಳೆ ಚಿದಾನಂದ ತಾಯಿ ಸಿದ್ದಮ್ಮ ಅವರ ಮೇಲೂ ಹಲ್ಲೆ ನಡೆದಿದೆ.

    ಆಗಿದ್ದೇನು?:
    ಚಿದಾನಂದ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದುವರಿಯುತ್ತಿದ್ದರು. ಇದನ್ನು ಸಹಿಸದ ಅದೇ ಗ್ರಾಮದ ಮತ್ತೊಂದು ಕೋಮಿನ ಯುವಕರು ಇಂದು ಮದ್ಯ ಸೇವನೆ ಮಾಡಿ ಚಿದಾನಂದ ಮನೆಗೆ ಬಂದಿದ್ದರು. ಮನೆಯ ಮುಂದೆ ನಿಂತು ಸಿದ್ದಮ್ಮ ಅವರ ಜೊತೆಗೆ ಅಸಭ್ಯ ವರ್ತಿಸಿ, ನಿಂದಿಸಿದ್ದಾರೆ. ಈ ವೇಳೆ ಚಿದಾನಂದ ಮಧ್ಯ ಪ್ರವೇಶಿಸುತ್ತಿದ್ದಂತೆ ಅವರ ತಲೆಗೆ ಇಟ್ಟಿಗೆಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ.

    ಘಟನೆಯಿಂದಾಗಿ ಚಿದಾನಂದ ಅವರ ಎದೆಗೆ ಬಲವಾದ ಪೆಟ್ಟು ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿದೆ. ಇದನ್ನು ತಡೆಯಲು ಬಂದಿದ್ದ ಸಿದ್ದಮ್ಮ ಅವರಿಗೂ ದುಷ್ಕರ್ಮಿಗಳು ಹೊಡೆದಿದ್ದಾರೆ. ಈ ವೇಳೆ ಗ್ರಾಮಸ್ಥರು ಸ್ಥಳಕ್ಕೆ ಬರುತ್ತಿದ್ದಂತೆ ಅಲ್ಲಿಂದ ಯುವಕರು ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಾಳು ಚಿದಾನಂದ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಮಗನ ಶೈಕ್ಷಣಿಕ ಹಾಗೂ ಆರ್ಥಿಕಾಭಿವೃದ್ಧಿ ಸಹಿಸಲಾಗದೇ ಈ ಕೃತ್ಯ ಎಸಗಿದ್ದಾರೆ ಎಂದು ಚಿದಾನಂದ ತಾಯಿ ಸಿದ್ದಮ್ಮ ಆರೋಪಿಸಿದ್ದಾರೆ. ಹೊಸದುರ್ಗ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/

  • ಯುವಕನ ಮರ್ಮಾಂಗವನ್ನೇ ಕತ್ತರಿಸಿ ಬಿಟ್ಳು ಆಂಟಿ!

    ಯುವಕನ ಮರ್ಮಾಂಗವನ್ನೇ ಕತ್ತರಿಸಿ ಬಿಟ್ಳು ಆಂಟಿ!

    ಭುವನೇಶ್ವರ್: ಮಹಿಳೆಯೊಬ್ಬಳು ಯುವಕನ ಮರ್ಮಾಂಗವನ್ನು ಕತ್ತರಿಸಿದ ಅಮಾನವೀಯ ಘಟನೆಯೊಂದು ಒಡಿಶಾದ ಕೆಯೊಂಜ್ಹಾರ ಜಿಲ್ಲೆಯ ಹರಿಚಂದನ್ ಪುರ್ ಪ್ರದೇಶದಲ್ಲಿ ನಡೆದಿದೆ.

    ಈ ಘಟನೆ ಕಳೆದ ರಾತ್ರಿ ನಡೆದಿದ್ದು, ಯುವಕನನ್ನು ರಾಜೇಂದ್ರ ನಾಯಕ್ ಎಂದು ಗುರುತಿಸಲಾಗಿದೆ. ಈತ ಜರಬಿದಾ ಗ್ರಾಮದ ಘತಗಾನ್ ಪ್ರದೇಶದ ನಿವಾಸಿಯಾಗಿದ್ದಾನೆ.

    ಏನಿದು ಘಟನೆ?:
    ಯುವಕ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದು, ಬುಧವಾರ ಸಂಜೆ ವಾಪಸ್ಸಾಗಿದ್ದಾನೆ. ಇನ್ನೇನೋ ಸ್ವಲ್ಪ ಹೊತ್ತಿನಲ್ಲೇ ರಾತ್ರಿಯಾಗುತ್ತೆ ಅಂತ ಯುವಕ, ಹರಿಚಂದನ್ ಪುರದಲ್ಲಿರೋ ಮಹಿಳೆಯ ಮನೆಯಲ್ಲಿ ತಂಗಿದ್ದಾನೆ. ಮರುದಿನ ಬೆಳಗ್ಗೆ ಆತ ತನ್ನ ಮನೆಗೆ ಅಲ್ಲಿಂದ ತೆರಳುವವನಿದ್ದನು.

    ರಾತ್ರಿ ಮಹಿಳೆ ತನಗೆ ಒತ್ತಾಯಪೂರ್ವಕವಾಗಿ ಮದ್ಯಪಾನ ಮಾಡಿಸಿದ್ದಾಳೆ. ಅತಿಯಾಗಿ ಮದ್ಯ ಸೇವಿಸಿದ್ದರಿಂದ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದೆನು. ಇದನ್ನೇ ಸದುಪಯೋಗಪಡಿಸಿಕೊಂಡ ಮಹಿಳೆ ಮರ್ಮಾಂಗವನ್ನು ಕಟ್ ಮಾಡಿದ್ದಾಳೆ ಅಂತ ಯುವಕ ಆರೋಪಿಸಿದ್ದಾನೆ.

    ನಾವಿಬ್ಬರು ಫೋನ್ ನಲ್ಲಿ ಮಾತನಾಡುತ್ತಿದ್ದೆವು. ಆದ್ರೆ ನಾನು ಬೇರೆಯವರ ಜೊತೆ ಮಾತನಾಡುತ್ತಿದ್ದಾಗ ಆಕೆ ಅದನ್ನು ಖಂಡಿಸಿದ್ದಳು. ಈ ವಿಚಾರಕ್ಕಾಗಿ ಇಬ್ಬರ ಮಧ್ಯೆ ಜಗಳ ನಡೆದಿದೆ. ನೀನು ನನ್ನ ಜೊತೆ ಮಾತ್ರ ಮಾತಾಡಬೇಕು, ನನ್ನ ಮನೆಗೆ ಬಂದು ಬೇರೆಯವರ ಜೊತೆ ಮಾತನಾಬೇಡ ಅಂತ ತಗಾದೆ ತೆಗೆದಿದ್ದಳು. ಇದೇ ವಿಚಾರದಿಂದ ಸಿಟ್ಟುಗೊಂಡ ಆಕೆ ಈ ಕೃತ್ಯ ಎಸಗಿದ್ದಾಳೆ ಅಂತ ಸಂತ್ರಸ್ತ ಯುವಕ ತಿಳಿಸಿದ್ದಾನೆ.

    ಸದ್ಯ ಯುವಕ ಹರಿಚಂದನ್ ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ ಅಂತ ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • 3 ವರ್ಷದ ಬಾಲಕಿಯ ಬಾಯಿಯಲ್ಲಿ ಪಟಾಕಿ ಸಿಡಿಸಿದ ಪಾಪಿ!

    3 ವರ್ಷದ ಬಾಲಕಿಯ ಬಾಯಿಯಲ್ಲಿ ಪಟಾಕಿ ಸಿಡಿಸಿದ ಪಾಪಿ!

    ಲಕ್ನೋ: ಉತ್ತರ ಪ್ರದೇಶದ ಮೀರತ್‍ನಲ್ಲಿ ಯುವಕನೊಬ್ಬ ಮೂರು ವರ್ಷದ ಬಾಲಕಿಯ ಬಾಯಿಯಲ್ಲಿ ಪಟಾಕಿ ಸಿಡಿಸಿ ವಿಕೃತಿ ಮೆರೆದಿದ್ದಾನೆ.

    ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ ಅದೇ ಗ್ರಾಮದ ಯುವಕನೊಬ್ಬ ಆಕೆಯ ಬಾಯಿಗೆ ಪಟಾಕಿಯನ್ನ ಇಟ್ಟು ಬೆಂಕಿ ಹಚ್ಚಿದ್ದಾನೆ. ಪರಿಣಾಮ ಬಾಲಕಿಯ ಬಾಯಿಯಲ್ಲಿ ಪಟಾಕಿ ಸ್ಫೋಟಗೊಂಡಿದೆ.

    ಈ ಘಟನೆಯಿಂದ ಬಾಲಕಿಯು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಕೆಯನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಬಾಲಕಿಯ ತಂದೆ ಶಶಿ ಕುಮಾರ್ ಹೇಳಿದ್ದಾರೆ.

    ಸಿಡಿದ ಪರಿಣಾಮ ಬಾಲಕಿಯ ಗಂಟಲಿಗೆ ಸೋಂಕಾಗಿದ್ದು, ಆಕೆಯ ಬಾಯಿಗೆ 50 ಕ್ಕೂ ಹೆಚ್ಚು ಹೊಲಿಗೆಗಳನ್ನ ಹಾಕಲಾಗಿದ್ದು, ಆಕೆಯ ಸದ್ಯದ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಬಾಲಕಿಯ ತಂದೆ ಶಶಿ ಕುಮಾರ್ ಪೊಲೀಸರಿಗೆ ದೂರು ನೀಡಿದ್ದು, ಅದೇ ಗ್ರಾಮದವನಾದ ಹರ್ಪಾಲ್ ಎಂಬಾತನು ಈ ಕೃತ್ಯವನ್ನ ಎಸಗಿದ್ದಾನೆ ಎಂದು ದೂರಿದ್ದಾರೆ. ಪೊಲೀಸರು ಆರೋಪಿ ಹರ್ಪಾಲ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದು, ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಾರ್ಕಿಂಗ್ ಶುಲ್ಕ ಕೊಡದಿದ್ದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ!

    ಪಾರ್ಕಿಂಗ್ ಶುಲ್ಕ ಕೊಡದಿದ್ದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ!

    ಚಿಕ್ಕಬಳ್ಳಾಪುರ: ಪಾರ್ಕಿಂಗ್ ಶುಲ್ಕ ಕೊಡದಿದ್ದಕ್ಕೆ ಯುವಕನೊಬ್ಬ ವ್ಯಕ್ತಿಯೊರ್ವನ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಡೆದಿದೆ.

    ಪಾರ್ಕಿಂಗ್ ಶುಲ್ಕ ಸಂಗ್ರಹ ಮಾಡುವ ಯುವಕ ಅಫ್ಸರ್ ಗಂಗರೆಕಾಲುವೆ ಗ್ರಾಮದ ಶ್ರೀನಿವಾಸ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಪರಿಣಾಮ ಶ್ರೀನಿವಾಸ್ ಅವರ ಕಿವಿಯಲ್ಲಿ ರಕ್ತ ಸ್ರಾವವಾಗಿದೆ.

    ಶ್ರೀನಿವಾಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಗಳನ್ನ ನೋಡಲು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಪಾರ್ಕಿಂಗ್ ಶುಲ್ಕ ಸಂಗ್ರಹ ಮಾಡುವ ಅಫ್ಸರ್ ಬೈಕ್ ಗೆ ಹತ್ತು ರೂಪಾಯಿ ಪಾರ್ಕಿಂಗ್ ಶುಲ್ಕ ನೀಡುವಂತೆ ಆಗ್ರಹಿಸಿದ್ದಾನೆ. ಈ ವೇಳೆ ಪಾರ್ಕಿಂಗ್ ಶುಲ್ಕ ಕೊಡುವುದಿಲ್ಲ ಅಂತ ಪರಸ್ಪರ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದ ಅತೀರೇಕಕ್ಕೆ ಹೋಗಿ ಅಫ್ಸರ್ ಶ್ರೀನಿವಾಸ್ ಅವರ ಮೇಲೆ ಹಲ್ಲೆ ಮಾಡಿದ್ದಾನೆ.

    ಈ ಘಟನೆಗೆ ಸಂಬಂಧಿಸಿದಂತೆ ಗಾಯಾಳು ಶ್ರೀನಿವಾಸ್ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಅಫ್ಸರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಯುವಕರ ಬೈಕ್ ವೀಲಿಂಗ್‍ಗೆ ಬ್ರೇಕ್- 37 ಬೈಕ್ ಗಳನ್ನು ಸೀಜ್ ಮಾಡಿದ ಪೊಲೀಸರು

    ಯುವಕರ ಬೈಕ್ ವೀಲಿಂಗ್‍ಗೆ ಬ್ರೇಕ್- 37 ಬೈಕ್ ಗಳನ್ನು ಸೀಜ್ ಮಾಡಿದ ಪೊಲೀಸರು

    ತುಮಕೂರು: ಜಿಲ್ಲೆಯ ಶಿರಾದಲ್ಲಿ ಯುವಕರ ಬೈಕ್ ವೀಲಿಂಗ್ ಕ್ರೇಜ್ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿತ್ತು. ವೀಲಿಂಗ್ ಪರಿಣಾಮ ಪ್ರತಿದಿನ ಒಂದಲ್ಲಾ ಒಂದು ಅಪಘಾತಗಳು ನಡೆಯುತ್ತಿತ್ತು ಈಗ ವೀಲಿಂಗ್ ಪುಂಡರಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಬೈಕ್ ವೀಲಿಂಗ್ ಮಾಡುತ್ತಿದ್ದ ಯುವಕರ ಸಹಿತ 37 ಬೈಕ್ ಗಳನ್ನ ಪೊಲೀಸರು ಸೀಜ್ ಮಾಡಿದ್ದಾರೆ.

    ಶಿರಾನಗರ ಹಾಗೂ ರಾಷ್ಟ್ರೀಯ ಹೆದ್ದಾರಿ 04ರಲ್ಲಿ ವ್ರೂಂ… ವ್ರೂಂ… ಅಂತಾ ಕ್ರೇಜಿ ಬಾಯ್ಸ್ ಪಡೆ ಬೈಕ್ ವೀಲಿಂಗ್ ನಡೆಸಿ ಹಲವರ ಪ್ರಾಣಕ್ಕೆ ಸಂಚಕಾರ ತಂದಿದ್ದರು. ವೀಲಿಂಗ್ ಮಾಡುವ ಭರದಲ್ಲಿ ಚಿಗುರು ಮೀಸೆಯ ಯುವಕರು ಹೈವೇ ಎನ್ನದೇ, ಜನನಿಬಿಡ ರಸ್ತೆ ಎನ್ನದೇ ಅಡ್ಡಾದಿಡ್ಡಿಯಾಗಿ ವೀಲಿಂಗ್ ಮಾಡುತ್ತಾ ಶೋ ಕೊಡುತ್ತಿದ್ದರು. ಇವರ ವೀಲಿಂಗ್ ಕಾಟಕ್ಕೆ ಹಲವಾರು ಅಪಘಾತಗಳು ನಡೆದು ಕೆಲ ಜೀವಗಳೂ ಬಲಿಯಾಗಿವೆ. ಇದರಿಂದ ಎಚ್ಚೆತ್ತುಕೊಂಡ ಶಿರಾನಗರ ಪೊಲೀಸರು ಬೈಕ್ ವೀಲಿಂಗ್‍ಗೆ ಬ್ರೇಕ್ ಹಾಕಿದ್ದಾರೆ. ವೀಲಿಂಗ್ ಮಾಡುತ್ತಿದ್ದ 37 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. 37 ಯುವಕರ ಮೇಲೂ ಕೇಸ್ ಹಾಕಲಾಗಿದೆ.

    ಕೇವಲ ಬೈಕ್ ವೀಲಿಂಗ್ ಶೂರರಿಗೆ ಮಾತ್ರ ಬ್ರೇಕ್ ಬಿದ್ದಿಲ್ಲ. ಅಪ್ರಾಪ್ತ ಬೈಕ್ ಸವಾರರ ಮೇಲೂ ಶಿರಾ ಪೊಲಿಸರು ಕಣ್ಣಿಟ್ಟು ಕೆಲವರಿಗೆ ದಂಡ ಹಾಕಲಾಗಿದೆ. ಅಪ್ರಾಪ್ತರ ಪೋಷಕರಿಗೆ ಕರೆದು ಸಭೆ ನಡೆಸಿ ಮಕ್ಕಳಿಗೆ ತಿಳಿ ಹೇಳುವಂತೆ ತಾಕೀತು ಮಾಡಲಾಗಿದೆ. ಬೈಕ್ ವೀಲಿಂಗ್‍ಗೆ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರಿಂದ ಶಿರಾನಗರದ ಜನತೆ ಹಾಗೂ ಹೆದ್ದಾರಿ ಸವಾರರು ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ಶಿರಾ ಪೊಲೀಸರ ಬೈಕ್ ವೀಲಿಂಗ್ ವಿರುದ್ಧ ಕಾರ್ಯಾಚರಣೆಯಿಂದಾಗಿ ನಗರದಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ. ಅಲ್ಲದೆ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv