Tag: youth

  • ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ- ಗುರುತು ಸಿಗದಷ್ಟು ಅಪ್ಪಚಿಯಾಯ್ತು ದೇಹ

    ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ- ಗುರುತು ಸಿಗದಷ್ಟು ಅಪ್ಪಚಿಯಾಯ್ತು ದೇಹ

    ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

    ಚಿತ್ರದುರ್ಗದ ದೊಡ್ಡಿಗನಹಾಲ ಗ್ರಾಮದ ಮಾರುತಿ(22) ಮೃತಪಟ್ಟ ಯುವಕ. ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಹೆನ್ನಾಗರ ಗೇಟ್ ಬಳಿ ಮುಂಜಾನೆ ಮಾರುತಿ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.

    ಡಿಕ್ಕಿಯ ರಭಸಕ್ಕೆ ಮಾರುತಿಯ ಶವ ಛಿದ್ರವಾಗಿದ್ದು, ಎನ್. ಎಚ್.ಐ ಅಂಬುಲೆನ್ಸ್ ಚಾಲಕ ಗಣಪತಿ ಶವದ ಭಾಗಗಳನ್ನು ಒಟ್ಟುಗೂಡಿಸಿ ತೆಗೆದುಕೊಂಡು ಹೋಗುತ್ತಿದ್ದ ದೃಶ್ಯ ಅಪಘಾತದ ತೀವ್ರತೆಗೆ ಸಾಕ್ಷಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಶ್ಲೀಲ ಮೆಸೇಜ್ ಮಾಡ್ತಿದ್ದ ಯುವಕನಿಗೆ ಧರ್ಮದೇಟು

    ಅಶ್ಲೀಲ ಮೆಸೇಜ್ ಮಾಡ್ತಿದ್ದ ಯುವಕನಿಗೆ ಧರ್ಮದೇಟು

    ಬೆಂಗಳೂರು: ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಯುವಕನಿಗೆ ಧರ್ಮದೇಟು ಬಿದ್ದ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ.

    ಮೈಸೂರು ಮೂಲದ ಸಿದ್ದು ಗೌಡ ಧರ್ಮದೇಟು ತಿಂದ ಯುವಕ. ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಸಿದ್ದು, ಫೇಕ್ ಐಡಿ ಕ್ರಿಯೇಟ್ ಮಾಡಿ ಮಹಿಳೆಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದನು. ಕಳೆದ ಆರು ತಿಂಗಳಿಂದ ನಿರಂತರವಾಗಿ ಅಶ್ಲೀಲವಾಗಿ ಮೆಸೇಜ್ ಮಾಡುತ್ತಿದ್ದನು.

    ಇಂದು ಬಸವೇಶ್ವರನಗರಕ್ಕೆ ಯುವಕನನ್ನು ಕರೆಸಿ ಜನರು ಧರ್ಮದೇಟು ನೀಡಿದ್ದಾರೆ. ಸದ್ಯ ಕರ್ನಾಟಕ ನವ ನಿರ್ಮಾಣ ವೇದಿಕೆಯ ಕಾರ್ಯಕರ್ತರು ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಉಡುಪಿ ಜಿಲ್ಲೆಯ ಕುಂದಾಪುರದ ಎಲ್‍ಐಸಿ ಕಾಲೋನಿಯ ಜಾವೇದ್ ಎಂಬಾತ ಪ್ರತಿ ದಿನ ಬೆಳಗ್ಗೆ ದಾರಿಯಲ್ಲಿ ಹೋಗುವ ಮಹಿಳೆಯರಿಗೆ ಚುಡಾಯಿಸುತ್ತಿದ್ದನು. ಸೀಟಿ ಹೊಡೆದು ಕಣ್ಸನ್ನೆ ಮಾಡುತ್ತಿದ್ದನು. ಕೆಲವರ ಬಳಿ ಫೋನ್ ನಂಬರ್ ಕೂಡ ಕೇಳುತ್ತಿದ್ದ. ಕೊನೆಗೆ ಜಾವೇದ್ ಕಿರುಕುಳದಿಂದ ಬೇಸತ್ತ ಮಹಿಳೆಯರು ಗುರುವಾರ ಆತನನ್ನು ನಗರದ ಮಧ್ಯೆ ಕಂಬಕ್ಕೆ ಕಟ್ಟಿ ಥಳಿಸಿ, ಕೊನೆಗೆ ಪೊಲೀಸರ ವಶಕ್ಕೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಸೆಲ್ಫಿಗಾಗಿ ತುಂಬಿ ಹರಿಯುತ್ತಿರುವ ನದಿ ಸೇತುವೆ ಕೆಳಭಾಗಕ್ಕೆ ಇಳಿದು ಯುವಕರ ದುಸ್ಸಾಹಸ

    ಸೆಲ್ಫಿಗಾಗಿ ತುಂಬಿ ಹರಿಯುತ್ತಿರುವ ನದಿ ಸೇತುವೆ ಕೆಳಭಾಗಕ್ಕೆ ಇಳಿದು ಯುವಕರ ದುಸ್ಸಾಹಸ

    ಮೈಸೂರು: ಸೆಲ್ಫಿಗಾಗಿ ಇಬ್ಬರು ಯುವಕರು ದುಸ್ಸಾಹಸಕ್ಕೆ ಕೈ ಹಾಕಿದ ಘಟನೆ ಜಿಲ್ಲೆಯ ನಂಜನಗೂಡು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೊಸ ರೈಲ್ವೆ ಸೇತುವೆ ಬಳಿ ನಡೆದಿದೆ.

    ಸೆಲ್ಫಿ ತೆಗೆದುಕೊಳ್ಳಲು ಜೀವವನ್ನೇ ಪಣಕ್ಕಿಟ್ಟಿದ್ದ ಇಬ್ಬರು ಯುವಕರು ಸೇತುವೆಯ ನಿಷೇಧಿತ ಸ್ಥಳಕ್ಕೆ ತಲುಪಿ ಅಪಾಯಕ್ಕೆ ಆಹ್ವಾನ ಒಡ್ಡಿದ್ದರು. ಸದ್ಯ ಯುವಕರು ಸೆಲ್ಫಿಗಾಗಿ ಸೇತುವೆಯ ಕೆಳಭಾಗಕ್ಕೆ ಇಳಿದು ಪೋಸ್ ಕೊಡುತ್ತಿರುವ ವಿಡಿಯೋ ಮೊಬೈಲ್ ಒಂದರಲ್ಲಿ ಸೆರೆಯಾಗಿದೆ.

    ಕಬಿನಿ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ಕಪಿಲೆ ಮೈದುಂಬಿ ಹರಿಯುತ್ತಿದ್ದಾಳೆ. ಪ್ರವಾಹದಂತೆ ರಭಸವಾಗಿ ಹರಿಯುತ್ತಿರುವ ವೇಳೆ ಯುವಕರು ಸೇತುವೆಯಿಂದ ಸುಮಾರು 15 ಅಡಿ ಕೆಳಕ್ಕೆ ಇಳಿದಿದ್ದಾರೆ. ಯುವಕರು ಇಳಿದಿರುವ ಸ್ಥಳ ನಿಷೇಧಿತ ಪ್ರದೇಶವಾಗಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬಾಜಿ ಕಟ್ಟಿಕೊಂಡ ಯುವಕರು ಸೇತುವೆಯಿಂದ ಹಾರಿದ್ದ ಪ್ರಕರಣ ಇನ್ನೂ ಮಾಸುವ ಮೊದಲೇ ಯುವಕರ ದುಃಸ್ಸಾಹಸ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

    ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪದ ಅಂಬುತೀರ್ಥದಲ್ಲಿ ಸೆಲ್ಫಿ ತೆಗೆಯುವ ವೇಳೆ ಜುಲೈ 26 ರಂದು ಮಂಗಳೂರಿನ ಟೆಕ್ಕಿ ಕಿರಣ್ ಕೋಟ್ಯಾನ್, ಕಳಸ ಸಮೀಪದ ಅಂಬುತೀರ್ಥದಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲುಜಾರಿ ಬಿದ್ದು, ನದಿಯಲ್ಲಿ ಕೊಚ್ಚಿಹೋಗಿದ್ದರು. ಕೊಚ್ಚಿಹೋಗಿದ್ದ ಕಿರಣ್ ಮೃತದೇಹ 15 ದಿನಗಳ ಬಳಿಕ ಮಾಗುಂಡಿ ಸಮೀಪದ ಭದ್ರಾ ನದಿಯಲ್ಲಿ ಪತ್ತೆಯಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಯುವತಿಯನ್ನು ಚುಡಾಯಿಸಿದ್ದಕ್ಕೆ ಲೈಟ್ ಕಂಬಕ್ಕೆ ಕಟ್ಟಿ ಮಹಿಳೆಯರಿಂದ ಗೂಸಾ!

    ಯುವತಿಯನ್ನು ಚುಡಾಯಿಸಿದ್ದಕ್ಕೆ ಲೈಟ್ ಕಂಬಕ್ಕೆ ಕಟ್ಟಿ ಮಹಿಳೆಯರಿಂದ ಗೂಸಾ!

    ಉಡುಪಿ: ಯುವತಿಯನ್ನು ಚುಡಾಯಿಸಿದವನಿಗೆ ಗ್ರಾಮದ ಯುವತಿಯರು ಹಾಗೂ ಮಹಿಳೆಯರು ಧರ್ಮದೇಟು ನೀಡಿದ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.

    ಕುಂದಾಪುರದ ಎಲ್‍ಐಸಿ ಕಾಲೋನಿಯ ಜಾವೇದ್ ಮಹಿಳೆಯರಿಂದ ಗೂಸಾ ತಿಂದ ವ್ಯಕ್ತಿ. ಜಾವೇದ್ ಪ್ರತಿ ದಿನ ಬೆಳಗ್ಗೆ ದಾರಿಯಲ್ಲಿ ಹೋಗುವ ಮಹಿಳೆಯರಿಗೆ ಚುಡಾಯಿಸುತ್ತಿದ್ದನು ಹಾಗೂ ಸೀಟಿ ಹೊಡೆದು ಕಣ್ಸನ್ನೆ ಮಾಡುತ್ತಿದ್ದನು. ಕೆಲವರ ಬಳಿ ಫೋನ್ ನಂಬರ್ ಕೂಡ ಕೇಳುತ್ತಿದ್ದ.

    ಜಾವೇದ್‍ನನ್ನು ಕೆಲವು ತಿಂಗಳಿನಿಂದ ಸಹಿಸಿಕೊಂಡಿದ್ದ ಸ್ಥಳೀಯರು ಇಂದು ಸಿಡಿದೆದ್ದಿದ್ದರು. ಜಾವೇದ್‍ನ ಕಾಟ ಜಾಸ್ತಿಯಾದಾಗ ಬೆಳಗ್ಗೆ ದಾರಿಯಲ್ಲಿ ಹೋಗುವ ಯುವತಿಯರು, ಅವರ ತಾಯಂದಿರು ಸೇರಿ ಜಾವೇದ್‍ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಜಾವೇದ್‍ನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಎರಡೇಟು ಕೊಟ್ಟಿದ್ದಾರೆ.

    ಸದ್ಯ ಮಹಿಳೆಯರಿಂದ ಪೆಟ್ಟು ತಿಂದ ಜಾವೇದ್ ಕ್ಷಮೆ ಕೇಳಿದ್ದಾನೆ. ಇನ್ನು ಚುಡಾಯಿಸಲ್ಲ, ಯಾರ ಸುದ್ದಿಗೂ ಬರಲ್ಲ ಅಂತ ಕೈಮುಗಿದು ಅಂಗಲಾಚಿದ್ದಾನೆ. ಅಷ್ಟಕ್ಕೆ ಸುಮ್ಮನಾಗದ ಮಹಿಳೆಯರು ಹಾಗೂ ಯುವತಿಯರು ಹೊಯ್ಸಳ ಪೊಲೀಸರನ್ನು ಸ್ಥಳಕ್ಕೆ ಕರೆಸಿ ಜಾವೆದ್ ನನ್ನು ಒಪ್ಪಿಸಿದ್ದಾರೆ.

    ಹೊಯ್ಸಳ ವಾಹನದಲ್ಲಿ ಕುಂದಾಪುರ ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಜಾವೇದ್‍ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಾವೇದ್ ಮನೆ ಕೂಡಾ ಎಲ್‍ಐಸಿ ರಸ್ತೆಯಲ್ಲೇ ಇದೆ. ಪರಿಚಿತರಿಗೇ ಈತ ಕಾಟ ಕೊಡುತ್ತಾನೆ ಎಂಬುದು ಸ್ಥಳೀಯರ ಆರೋಪಿಸಿದ್ದಾರೆ.

  • ರಸ್ತೆ ಮಧ್ಯೆ ಕುಡಿಯುತ್ತ ಕುಳಿತಿದ್ದವರನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ ಪುಂಡರು

    ರಸ್ತೆ ಮಧ್ಯೆ ಕುಡಿಯುತ್ತ ಕುಳಿತಿದ್ದವರನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ ಪುಂಡರು

    ಮಂಡ್ಯ: ರಸ್ತೆಯ ಮಧ್ಯದಲ್ಲಿ ಕುಡಿಯುತ್ತ ಕುಳಿತಿದ್ದನ್ನು ಪ್ರಶ್ನಿಸಿದ ಕೆಎಸ್ಆರ್‌ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹಂಪಾಪುರ ಗ್ರಾಮದ ಬಳಿ ನಡೆದಿದೆ.

    ಚಾಲಕ ಮಾದೇಗೌಡ ಮತ್ತು ನಿರ್ವಾಹಕ ಸ್ವಾಮೀಗೌಡ ಹಲ್ಲೆಗೊಳಗಾಗಿದ್ದಾರೆ. ಮಂಗಳವಾರ ರಾತ್ರಿ ಹೆಬ್ಬಾಡಿ ಮತ್ತು ಮೈಸೂರು ಮಾರ್ಗವಾಗಿ ಬಸ್ ಪ್ರಯಾಣಿಸುತ್ತಿತ್ತು, ಈ ವೇಳೆ ಹಂಪಾಪುರ ಬಳಿ ರಸ್ತೆ ಮಧ್ಯದಲ್ಲೇ ಕುಡಿಯುತ್ತ ಕುಳಿತಿದ್ದ ಯುವಕರ ಗುಂಪನ್ನು ನೋಡಿ, ದಾರಿ ಬಿಡುವಂತೆ ಚಾಲಕ ಮತ್ತು ನಿರ್ವಾಹಕರು ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕರ ತಂಡ, ಚಾಲಕ ನಿರ್ವಾಹಕ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಬಸ್‍ನ ಗಾಜಿಗೆ ಕಲ್ಲು ತೂರಿ ಒಡೆದು ಹಾಕಿದ್ದಾರೆ.

    ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಕೆರೆ ಸಬ್ ಇನ್ಸ್​ಪೆಕ್ಟರ್ ನೇತೃತ್ವದ ತಂಡ ಹಲ್ಲೆ ಮಾಡಿದ್ದ ಮೂವರು ಯುವಕರನ್ನು ವಶಕ್ಕೆ ಪಡೆದಿದ್ದು, ಪರಾರಿಯಾದ 7 ಜನ ಯುವಕರ ಪತ್ತೆಗೆ ಬಲೆ ಬೀಸಿದ್ದಾರೆ. ಹಲ್ಲೆಯಿಂದ ಗಾಯಗೊಂಡಿದ್ದ ಚಾಲಕ ಹಾಗೂ ನಿರ್ವಾಹಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಚಾಲಕ ಮಾದೇಗೌಡ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

    ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಪಾಕಿಸ್ತಾನಿ ಯುವತಿಯ ಮಾತನ್ನು ಒಪ್ಪದ ಯುವಕನಿಗೆ ಸರ್ಪ್ರೈಸ್ ಕೊಟ್ಟ ಸುಶ್ಮಿತಾ ಸೇನ್!

    ಪಾಕಿಸ್ತಾನಿ ಯುವತಿಯ ಮಾತನ್ನು ಒಪ್ಪದ ಯುವಕನಿಗೆ ಸರ್ಪ್ರೈಸ್ ಕೊಟ್ಟ ಸುಶ್ಮಿತಾ ಸೇನ್!

    ಮುಂಬೈ: ಪಾಕಿಸ್ತಾನಿ ಯುವತಿಯ ಮಾತನ್ನು ಒಪ್ಪದ ಯುವಕನಿಗೆ ಮಾಜಿ ವಿಶ್ವ ಸುಂದರಿ ಸುಶ್ಮಿತ ಸೇನ್ ಸರ್ಪ್ರೈಸ್ ನೀಡಿದ್ದಾರೆ.

    ಪಾಕಿಸ್ತಾನದ ಸೈನ್ ಎಂಬಾಕೆ ಅಮೃತಸರದ ಉದ್ಯಮಿಯಾಗಿರುವ ವರುಣ್ ಡಿಪಿ (ಡಿಸ್‍ಪ್ಲೈ ಪಿಚ್ಚರ್) ಬಗ್ಗೆ ಟ್ವೀಟ್ ಮಾಡಿದ್ದಳು. ಇಂದು ಯಾರೋ ತುಂಬಾ ಚೆನ್ನಾಗಿ ಕಾಣಿಸುತ್ತಿದ್ದಾರೆ ಎಂದು ಸೈನ್, ವರುಣ್ ಡಿಪಿ ಬಗ್ಗೆ ಟ್ವೀಟ್ ಮಾಡಿದ್ದಳು.

    ಈ ಟ್ವೀಟ್‍ಗೆ ವರುಣ್ ಪ್ರತಿಕ್ರಿಯಿಸಿ, ಧನ್ಯವಾದ ನೀವು ಹೇಳುತ್ತಿದ್ದೀರಾ ಎಂದರೆ ನಾನು ಒಪ್ಪಿಕೊಳ್ಳುತ್ತೇನೆ ಎಂದು ರೀ-ಟ್ವೀಟ್ ಮಾಡಿದ್ದರು. ಅದಕ್ಕೆ ಸೈನ್ ಅರೇ ನಿನಗೆ ನಂಬಿಕೆ ಇಲ್ಲ ಎಂದರೆ ಬೇರೆಯವರಿಗೆ ಕೇಳು ಎಂದು ಮತ್ತೆ ಟ್ವೀಟ್ ಮಾಡಿದ್ದಳು.

    ನಂತರ ಸುಶ್ಮಿತಾ ಸೇನ್ ಹೇಳಿದ್ದರೆ, ಅದು ನಿಜವಾಗುತ್ತೆ ಆಗ ನಾನು ನಂಬುತ್ತೀನಿ ಎಂದು ಸೈನ್ ಟ್ವೀಟ್‍ಗೆ ರೀ-ಟ್ವೀಟ್ ಮಾಡಿದ್ದಾರೆ. ನಂತರ ಸೈನ್ ನಟಿ ಸುಶ್ಮಿತಾ ಸೇನ್‍ಗೆ ಟ್ಯಾಗ್ ಮಾಡಿ “ಡಿಪಿ ಚೆನ್ನಾಗಿ ಇದೆ ಎಂದು ನೀವೇ ಅವನಿಗೆ ಹೇಳಿ” ಎಂದು ಟ್ವೀಟ್ ಮಾಡಿದ್ದಾಳೆ.

    ಸೈನ್ ಟ್ಯಾಗ್ ಮಾಡಿದ ಸ್ವಲ್ಪ ಸಮಯದಲ್ಲೇ ಸುಶ್ಮಿತಾ ಸೇನ್ “ಲವ್ ಯುವರ್ ಡಿಪಿ” ಎಂದು ವರುಣ್ ಡಿಪಿಗೆ ಟ್ವೀಟ್ ಮಾಡಿದ್ದಾರೆ. ಸುಶ್ಮಿತಾ ಪ್ರತಿಕ್ರಿಯೆ ನೋಡಿ ವರುಣ್ ಹಾಗೂ ಸೈನ್ ಖುಷಿಪಟ್ಟಿದ್ದಾರೆ. “ವಿಶ್ವ ಸುಂದರಿ ಲವ್ ಯುವರ್ ಡಿಪಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಇದು ನನಗೆ ಬಹಳ ಮಹತ್ವದ ಕ್ಷಣ ಹಾಗೂ ಖುಷಿಯ ವಿಷಯ” ಎಂದು ವರುಣ್ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

  • 100 ರೂ.ಗಾಗಿ ಯಮುನಾ ನದಿಗೆ ಹಾರಿ ಪ್ರಾಣಬಿಟ್ಟರು!

    100 ರೂ.ಗಾಗಿ ಯಮುನಾ ನದಿಗೆ ಹಾರಿ ಪ್ರಾಣಬಿಟ್ಟರು!

    ಚಂಡೀಗಢ್: ಸ್ನೇಹಿತನೊಂದಿಗೆ ಕೇವಲ 100 ರೂ. ಬೆಟ್ ಕಟ್ಟಿ, ಯಮುನಾ ನದಿಗೆ ಹಾರಿ ಯುವಕರಿಬ್ಬರು ಮೃತಪಟ್ಟ ಘಟನೆ ಹರಿಯಾಣದ ಬಲ್ಲಭಗಢ್ (ವಲ್ಲಭಗಢ್) ನಡೆದಿದೆ.

    ಕೃಷ್ಣ ಹಾಗೂ ರಾಹುಲ್ ಮೃತಪಟ್ಟ ಯುವಕರು. ಗುರುವಾರ ಸಂಜೆ ಇಬ್ಬರು ಸ್ನೇಹಿತ ಕಟ್ಟಿದ್ದ ಬೆಟ್‍ನಿಂದಾಗಿ, ರಭಸವಾಗಿ ಹರಿಯುತ್ತಿದ್ದ ಯಮುನಾ ನದಿಗೆ ಹಾರಿದ್ದರು. ನದಿಯ ರಭಸಕ್ಕೆ ಮೇಲೆ ಏಳಲು ಆಗದೆ ಮುಳುಗಿ, ಪ್ರವಾಹಕ್ಕೆ ಕೊಚ್ಚಿ ಹೋಗಿದ್ದರು.

    ಪೊಲೀಸರಿಗೆ ವಿಷಯ ತಿಳಿಯುತ್ತಿದ್ದಂತೆ, ಎನ್‌ಡಿಆರ್‌ಎಫ್‌ಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಎನ್‍ಡಿಆರ್‍ಎಫ್ ತಂಡ ಯುವಕರ ಮೃತ ದೇಹ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ಗುರುವಾರ ರಾತ್ರಿ ಕಾರ್ಯಚರಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿತ್ತು.

    ಶುಕ್ರವಾರ ರಾಹುಲ್ ಮೃತದೇಹವು ಪಲ್ವಲ್ ಎಂಬಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಮೊದಲು ಪ್ರೀತಿ, ಬಳಿಕ ಕಾಮ, ಆಮೇಲೆ ಅವಮಾನ: ಪ್ರಿಯಕರನ ಮೋಸಕ್ಕೆ ಗೆಳತಿ ನೇಣಿಗೆ ಶರಣು

    ಮೊದಲು ಪ್ರೀತಿ, ಬಳಿಕ ಕಾಮ, ಆಮೇಲೆ ಅವಮಾನ: ಪ್ರಿಯಕರನ ಮೋಸಕ್ಕೆ ಗೆಳತಿ ನೇಣಿಗೆ ಶರಣು

    ಬೆಂಗಳೂರು: ಹಲವು ವರ್ಷಗಳಿಂದ ಪ್ರೀತಿಯ ನಾಟಕವಾಡಿ, ಬಳಿಕ ತನ್ನನ್ನು ಉಪಯೋಗಿಸಿಕೊಂಡು ಪ್ರಿಯಕರ ನನಗೆ ಮೋಸ ಮಾಡಿದ್ದಾನೆ ಎಂದು ಯುವತಿಯೊಬ್ಬಳು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ಚಂದ್ರಲೇಔಟ್‍ನಲ್ಲಿ ನಡೆದಿದೆ.

    ಮಂಜುಳ (23) ಆತ್ಮಹತ್ಯೆಗೆ ಶರಣಾದ ಯುವತಿ. ರವಿಕಿರಣ್ ಎಂಬಾತ ತನ್ನೊಂದಿಗೆ ಪ್ರೀತಿಯ ನಾಟಕವಾಡಿ ಮೋಸ ಮಾಡಿದ್ದಾನೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿರುವ ಮಂಜುಳ ಆತ್ಮಹತ್ಯೆ ಪತ್ರ ಬರೆದಿಟ್ಟು ಸಾವಿಗೆ ಶರಣಾಗಿದ್ದಾಳೆ.

    ಆತ್ಮಹತ್ಯೆ ಪತ್ರದಲ್ಲಿ ಪೊಲೀಸರು, ಪ್ರೇಮಿ ರವಿಕಿರಣ್ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಆರೋಪ ಮಾಡಿರುವ ಮಂಜುಳ ತನ್ನ ಸಾವಿನ ಬಳಿಕವಾದರೂ ಆರೋಪಿಗೆ ಶಿಕ್ಷೆ ನೀಡಿ ಎಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾಳೆ. ಅಲ್ಲದೇ ತನ್ನ ಸಾವಿಗೆ ರವಿಕಿರಣ್ ಹಾಗೂ ಆತನ ಕುಟಂಬಸ್ಥರೇ ಕಾರಣ. ಆತ್ಮಹತ್ಯೆ ಮಾಡಿಕೊಳ್ಳುವಂತೆ ಅವಮಾನ ಮಾಡಿ ಪ್ರೇರಣೆ ನೀಡಿದ್ದಾರೆ ಎಂದು ತಿಳಿಸಿದ್ದಾಳೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಮೃತ ಯುವತಿಯ ಪೋಷಕರು, ತಮ್ಮ ಮಗಳ ಸಾವಿಗೆ ಚಂದ್ರಲೇಔಟ್ ಪೊಲೀಸ್ ಅಧಿಕಾರಿ ವೀರೇಂದ್ರ ಪ್ರಸಾದ್ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೇ ಮಗಳ ಮೃತದೇಹವನ್ನು ಪೊಲೀಸರಿಗೆ ಒಪ್ಪಿಸಲು ನಿರಾಕಸಿದ್ದು, ಯುವಕನ ಮನೆ ಮುಂದೆ ಶವವಿಟ್ಟು ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    ನಾನು ಹಾಗೂ ರವಿಕಿರಣ್ ಕೆಲ ವರ್ಷಗಳಿಂದ ಪ್ರೀತಿ ಮಾಡುತ್ತಿದ್ದೇವು. ಆದರೆ ನನ್ನ ಪ್ರೀತಿಯನ್ನು ಕಾಮತೃಷೆಗೆ ಬಳಸಿಕೊಂಡಿದ್ದ ರವಿಕಿರಣ್ ಬಳಿಕ ನನ್ನನ್ನು ದೂರ ಮಾಡಲು ಪ್ರಯತ್ನಿಸಿದ್ದ. ನಾವಿಬ್ಬರು ಸ್ನೇಹಿತರು ಅಷ್ಟೇ, ಬೇಕಾದರೆ ದುಡ್ಡು ಕೊಡುತ್ತೇನೆ. ಹಣ ಪಡೆದು ಸುಮ್ಮನಾಗುವಂತೆ ತಿಳಿಸಿದ್ದ. ತಮ್ಮ ಪ್ರೀತಿಯ ವಿಷಯವನ್ನು ರವಿಕಿರಣ್ ಪೋಷಕರಿಗೂ ತಿಳಿಸಿ ಮದುವೆ ಮಾಡಿಸುವಂತೆ ಮನವಿ ಮಾಡಿದ್ದೆ. ಆದರೆ ನನ್ನ ಮಾತನ್ನು ನಿರಾಕರಿಸಿ ಇಂತಹ ಹೆಣ್ಣು ತಮ್ಮ ಮಗನಿಗ ಬೇಡ. ನೀನು ಬದುಕಿರುವುದಕ್ಕಿಂತ ಸಾಯುವುದು ಉತ್ತಮ ಎಂದು ಅವಮಾನಿಸಿದ್ದರು.

    ತಾನು ಮೋಸ ಹೋದ ಸಂಗತಿ ತಿಳಿದ ಬಳಿಕ ರವಿಕಿರಣ್ ವಿರುದ್ಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದೆ. ಆದರೆ ಈ ಪ್ರಕರಣದಲ್ಲಿ ಹಣ ಹಾಗೂ ರಾಜಕೀಯ ಕೆಲಸ ಮಾಡಿದ್ದು, ರವಿಕಿರಣ್ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ನನಗೆ ಮೋಸ ಮಾಡಿದ ಹಾಗೂ ಸಾವಿಗೆ ಕಾರಣರಾದ ರವಿಕಿರಣ್, ಆತನ ಕುಟುಂಬಸ್ಥರು ಶಿಕ್ಷೆ ನೀಡಿ. ನನ್ನ ಸಾವಿನ ಬಳಿಕವಾದರೂ ನ್ಯಾಯ ನೀಡಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿರುವ ಮಂಜುಳ ತಂದೆ, ತಾಯಿ, ಕುಟುಂಬಸ್ಥರ ಬಳಿ ಕ್ಷಮೆ ಕೋರಿದ್ದಾಳೆ.

    ಪೋಷಕರ ಒಪ್ಪಿಗೆ: ಶನಿವಾರದ ಒಳಗೆ ರವಿಕಿರಣ್ ನ್ನು ಬಂಧಿಸುತ್ತೇವೆ ಎಂದು ಎಸಿಪಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗೆ ಮಂಜುಳ ಪೋಷಕರು ಒಪ್ಪಿದ್ದಾರೆ. ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಾಳೆ ಮರಣೋತ್ತರ ಪರೀಕ್ಷೆ ಮಾಡಲು ಮಂಜುಳ ಮೃತದೇಹವನ್ನು ಚಂದ್ರಲೇಔಟ್ ಪೊಲೀಸರು ರವಾನೆ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ನೀರಿನ ಸೆಳೆತಕ್ಕೆ ಸಿಲುಕಿದ್ದ ಯುವಕನ ರಕ್ಷಣೆ

    ನೀರಿನ ಸೆಳೆತಕ್ಕೆ ಸಿಲುಕಿದ್ದ ಯುವಕನ ರಕ್ಷಣೆ

    ಮಂಗಳೂರು: ಡ್ಯಾಂ ನಲ್ಲಿ ಈಜಾಡೋಕೆ ಹೋಗಿ ನೀರಿನ ಸೆಳೆತಕ್ಕೆ ಸಿಲುಕಿದ್ದ ಯುವಕನನ್ನು ಸ್ಥಳೀಯರು ರಕ್ಷಿಸಿದ ಘಟನೆ ನಗರದ ಮರವೂರಿನಲ್ಲಿ ನಡೆದಿದೆ.

    ಬಜ್ಪೆ ನಿವಾಸಿ ಶರತ್ ಸ್ಥಳೀಯರು ರಕ್ಷಿಸಿದ ಯುವಕ. ಫಲ್ಗುಣಿ ನದಿಗೆ ಅಡ್ಡಲಾಗಿ ಮರವೂರು ಡ್ಯಾಂ ಇದೆ. ಇತ್ತೀಚೆಗೆ ಅಧಿಕ ಮಳೆಯಾಗಿದ್ದರಿಂದ ಡ್ಯಾಂ ಭರ್ತಿಯಾಗಿತ್ತು. ಆದ್ದರಿಂದ ನೀರನ್ನು ಹೊರಬಿಡಲಾಗುತ್ತಿದೆ. ಸ್ನೇಹಿತರ ಜೊತೆ ಡ್ಯಾಂ ನೋಡೋಕೆ ಹೋಗಿದ್ದ ಶರತ್ ಈಜಾಡಲು ನೀರಿಗೆ ಇಳಿದಿದ್ದಾನೆ. ಈ ವೇಳೆ ನೀರಿನ ಸೆಳೆತ ಜಾಸ್ತಿ ಕಾರಣ ಶರತ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

    ಸ್ಥಳದಲ್ಲಿದ್ದ ಸ್ಥಳೀಯ ಜತೀನ್ ಡಿಸೋಜಾ, ಶರತ್ ನೀರಿನ ಸೆಳೆತಕ್ಕೆ ಒಳಗಾಗಿದ್ದನ್ನು ಗಮನಿಸಿ ತಕ್ಷಣ ರಕ್ಷಣೆಗೆ ಮುಂದಾಗಿದ್ದಾರೆ. ನಂತರ ಟ್ಯೂಬ್ ಮತ್ತು ಹಗ್ಗದ ಮೂಲಕ ಜೀವದ ಹಂಗು ತೊರೆದು ರಕ್ಷಣೆ ಮಾಡಿದ್ದಾರೆ. ಜೀವ ಪಣಕಿಟ್ಟು ಜತೀನ್ ಡಿಸೋಜಾ ಯುವಕನನ್ನು ರಕ್ಷಣೆ ಮಾಡಿದ್ದು, ಯುವಕನ ಪ್ರಾಣ ಉಳಿಸಿದ್ದಾರೆ.

    ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಯುವಕನೊಬ್ಬ ಡ್ಯಾಂನಲ್ಲಿ ಮುಳುಗಿ ಮೃತಪಟ್ಟಿದ್ದನು. ಮತ್ತೊಂದು ಅನಾಹುತ ನಡೆಯುವ ಮುನ್ನ ಸ್ಥಳೀಯರು ಯುವಕನನ್ನು ರಕ್ಷಣೆ ಮಾಡಿದ್ದಾರೆ.

  • ಗಣಿತವನ್ನು ಸುಲಲಿತವಾಗಿ ಅರೆದು ಕುಡಿದ ಯುವಕ- 6,000 ಮಗ್ಗಿವರೆಗೆ ಸುಲಭವಾಗಿ ಹೇಳಬಲ್ಲ

    ಗಣಿತವನ್ನು ಸುಲಲಿತವಾಗಿ ಅರೆದು ಕುಡಿದ ಯುವಕ- 6,000 ಮಗ್ಗಿವರೆಗೆ ಸುಲಭವಾಗಿ ಹೇಳಬಲ್ಲ

    ಚಿತ್ರದುರ್ಗ: ಬಹುತೇಕ ವಿದ್ಯಾರ್ಥಿಗಳ ಪಾಲಿಗೆ ಗಣಿತ ಕಬ್ಬಿಣದ ಕಡಲೆಯೇ ಆಗಿರುತ್ತದೆ. ಅದರಲ್ಲೂ ಮಗ್ಗಿಯಂತೂ ಕಷ್ಟದಾಯಕವಾಗಿರುತ್ತದೆ. ಆದರೆ ಕೋಟೆನಾಡಿನಲ್ಲಿ ವಿದ್ಯಾರ್ಥಿ ಮಾತ್ರ 6,000 ಮಗ್ಗಿವರೆಗೆ ಸುಲಭವಾಗಿ ಹೇಳಬಲ್ಲ ವಿಧಾನವನ್ನು ಕಂಡುಕೊಂಡಿದ್ದಾರೆ.

    ಚಿತ್ರದುರ್ಗ ನಗರದ ಬ್ಯಾಂಕ್ ಕಾಲೋನಿಯಲ್ಲಿನ ಹ್ಯಾಪಿ ಹೋಮ್ ಸ್ಕೂಲ್ ಮುಖ್ಯಸ್ಥರು ಹಾಗೂ ಶಿಕ್ಷಕಿಯಾಗಿರೋ ಮಾಲಾ ಅವರ ಪುತ್ರ ಸಿದ್ಧಾರ್ಥರಿಗೆ ಚಿಕ್ಕವಯಸ್ಸಿನಿಂದಲೂ ಗಣಿತದ ಬಗ್ಗೆ ಬಾರಿ ಆಸಕ್ತಿ. 6 ವರ್ಷದವನಿದ್ದಾಗಲೇ ಅಬ್ಯಾಕಸ್ ನಲ್ಲಿ ತುಂಬಾ ಫಾಸ್ಟ್ ಆಗಿದ್ದನು. ಆಗ ಓರ್ವ ವಿದ್ಯಾರ್ಥಿ 100ರ ಮಗ್ಗಿ ಹೇಳುವುದು ನೋಡಿ ಆಕರ್ಷಿತನಾಗಿದ್ದ ಈ ಯುವಕ ಕೇವಲ 1 ವಾರದ ನಂತರ 500 ವರೆಗೆ ಮಗ್ಗಿ ಹೇಳಲು ಶುರು ಮಾಡಿದ್ದಾರಂತೆ.

    ಇದೀಗ 6000 ರವರೆಗೆ ಏನೇ ಕೇಳಿದರೂ ಕ್ಷಣಾರ್ಧದಲ್ಲಿ ಫಟಾಫಟ್ ಅಂತ ಮಗ್ಗಿ ಹೇಳುತ್ತಾರೆ. ತಾನೇ ಖುದ್ದಾಗಿ 2ರಿಂದ 6,000ದವರೆಗೆ ಮಗ್ಗಿಯನ್ನು ಸುಲಭವಾಗಿ ಬರೆಯಬಲ್ಲ ವಿಧಾನವನ್ನು ಸಹ ಕಂಡು ಹಿಡಿದಿದ್ದಾರೆ. ಅದಕ್ಕೆ ಟಿಕ್ ಟ್ಯಾಕ್ ಟೂ ಅಂತ ಹೆಸರಿಟ್ಟಿದ್ದಾರೆ. ಎರಡು ಟೇಬಲ್ ಹಾಕಿ ಮಗ್ಗಿಯನ್ನು ವಿಸುವಲೇಸೇಷನ್ ನಲ್ಲಿ ಸುಲಭವಾಗಿ ಕಲಿಯುವ ವಿಧಾನವನ್ನು ಕಂಡುಕೊಂಡಿದ್ದಾರೆ. ಆ ಮೂಲಕ ಯಾವುದೇ ಮಗ್ಗಿ ಕೇಳಿದರೂ ಕ್ಷಣಾರ್ಧದಲ್ಲಿ ಹೇಳುವಂತ ಅಭ್ಯಾಸ ರೂಡಿಸಿಕೊಂಡಿದ್ದಾರೆ. ಅಂತೆಯೇ ಅದೇ ವಿಧಾನವನ್ನು ಅಮ್ಮ ಕಟ್ಟಿದ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಹೇಳಿ ಕೊಡುತ್ತಾರೆ.

    ಇದೀಗ ಬಿಬಿಎಂ ಓದುತ್ತಿರುವ ಈ ವಿದ್ಯಾರ್ಥಿಯ ಪ್ರತಿಭೆ ಕಂಡು ಖುದ್ದು ಶಿಕ್ಷಕಿ ಆಗಿರುವ ತಾಯಿಯೇ ಬೆರಗಾಗಿದ್ದಾರೆ. ಅಲ್ಲದೆ ಮಗನ ಸೂತ್ರವನ್ನೇ ಅನುಸರಿಸಿ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುತ್ತಿದ್ದಾರೆ. ಆ ಮೂಲಕ ಕಬ್ಬಿಣದ ಕಡಲೆ ಆಗಿದ್ದ ಮಗ್ಗಿಯನ್ನು ಸರಳಸೂತ್ರದಲ್ಲಿ ಮಕ್ಕಳಿಗೆ ಹೇಳಿ ಕೊಡುತ್ತಿದ್ದಾರೆ. ಇತರೆ ಶಿಕ್ಷಕರು ಸಹ ವಿದ್ಯಾರ್ಥಿಯ ಪ್ರತಿಭೆಗೆ ಶಹಬ್ಬಾಶ್ ಗಿರಿ ನೀಡಿದ್ದು, ಈ ಕ್ಷೇತ್ರದಲ್ಲಿ ಅಗಾಧವಾಗಿ ಸಾಧಿಸಿ ಐಎಎಸ್ ಅಧಿಕಾರಿ ಆಗಬೇಕು ಎಂಬ ಕನಸಿದೆ ಎಂದು ಸಿದ್ಧಾರ್ಥ್ ತಾಯಿ ಹೇಳಿದ್ದಾರೆ.

    ಒಟ್ಟಾರೆಯಾಗಿ ಕೋಟೆನಾಡಿನ ಈ ವಿದ್ಯಾರ್ಥಿಯ ಸರಳಸೂತ್ರ ಈಗ ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರವಾಗಿದೆ. ಅಪರೂಪದ ಪ್ರತಿಭೆಗೆ ವಿವಿಧ ಮಠ ಮಾನ್ಯಗಳು ಗೌರವಿಸಿ ಅಭಿನಂದಿಸುವ ಮೂಲಕ ಬೆನ್ನು ತಟ್ಟಿವೆ. ಪ್ರತಿಭಾವಂತ ಯುವಕನ ಕನಸು ಕೂಡ ನನಸಾಗಲಿ ಎಂಬುದು ದುರ್ಗದ ಜನರ ಆಶಯ.