Tag: Youths

  • ಅಳಿವಿನಂಚಿನಲ್ಲಿರುವ ಗ್ರಾಮೀಣ ರಂಗಕಲೆಗೆ ಜೀವ ತುಂಬಿದ ಜನಪ್ರತಿನಿಧಿಗಳು

    ಅಳಿವಿನಂಚಿನಲ್ಲಿರುವ ಗ್ರಾಮೀಣ ರಂಗಕಲೆಗೆ ಜೀವ ತುಂಬಿದ ಜನಪ್ರತಿನಿಧಿಗಳು

    ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೋಡಿಗೆ ಒಳಗಾಗಿರುವ ಯುವಕರನ್ನು ಪೌರಾಣಿಕತೆ ಕಡೆಗೆ ಮುಖಮಾಡಲು ನೆಲಮಂಗಲದ ಗ್ರಾಮಪಂಚಾಯತ್ ಸದಸ್ಯರ ತಂಡವೊಂದು ವಿಭಿನ್ನ ಪ್ರಯತ್ನ ಮಾಡಿದೆ.

    ಅಳಿವಿನಂಚಿನಲ್ಲಿರುವ ಗ್ರಾಮೀಣ ಪೌರಾಣಿಕ ರಂಗಕಲೆಗೆ ಯುವಕರು ಒತ್ತು ನೀಡಿದ್ದಾರೆ. ಅಲ್ಲದೆ ಮಹಾಭಾರತದ ನೀತಿಸಾರುವ ಕುರುಕ್ಷೇತ್ರ ಪೌರಾಣಿಕ ನಾಟಕವನ್ನು ಅಭಿನಯಿಸಿದ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನಾಟಕದ ನಡುವೆಯು ಶಿಕ್ಷಣದ ಮಹತ್ವ ಸಾರಿದ್ದಾರೆ. ಹಾಗೆಯೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಗ್ರಾಮೀಣ ಪ್ರತಿಭೆಗೆ ಸನ್ಮಾನ ಮಾಡಿ ಪ್ರೋತ್ಸಾಹಿಸಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಅರೇಬೊಮ್ಮನಹಳ್ಳಿ ಗ್ರಾಮ ಪಂಚಾಯತಿ ಸದಸ್ಯರು ಕುರುಕ್ಷೇತ್ರ ನಾಟಕ ಅಭಿನಯಿಸಿದ್ದಾರೆ. ರಾಮಾಯಣ ಮತ್ತು ಮಹಾಭಾರತವನ್ನು ಯುವಜನತೆಗೆ ತಿಳಿಸಲು ಈ ಮೂಲಕ ಪ್ರಯತ್ನ ಮಾಡಿದ್ದಾರೆ. ಅದರಲ್ಲೂ ಎಲ್ಲಾ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ಸೇರಿ ನಾಟಕ ಪ್ರದರ್ಶನ ಮಾಡಿದ್ದು ವಿಶೇಷವಾಗಿತ್ತು.

    ಈ ಬಗ್ಗೆ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯರು, ಆಡಳಿತ ವ್ಯವಸ್ಥೆಯ ಮೂಲವಾದ ಗ್ರಾಮ ಪಂಚಾಯತಿಯ ಆಡಳಿತದ ಜೊತೆಗೆ, ಬಿಡುವಿನ ವೇಳೆಯಲ್ಲಿ ಕಲೆಯನ್ನು ಕಲಿತಿದ್ದು ಸಂತಸವಾಗಿದೆ ಎಂದರು. ಕಲೆಯ ಜೊತೆಗೆ ಶಿಕ್ಷಣಕ್ಕೂ ಪ್ರೋತ್ಸಾಹ ನೀಡುವ ಉದ್ದೇಶದಿಂದ, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.98 ರಷ್ಟು ಫಲಿತಾಂಶ ಪಡೆದ ಗ್ರಾಮೀಣ ಪ್ರತಿಭೆ ಸಿಂಚನಾಳನ್ನು ಸನ್ಮಾನಿಸಿ ನಾಟಕ ಮಂಡಳಿಯವರು ಪ್ರಶಂಸೆಗೆ ಪಾತ್ರವಾದರು.

    ದಿನನಿತ್ಯದ ಕೆಲಸದ ಜೊತೆಗೆ ಗ್ರಾಮ ಪಂಚಾಯತಿಯಲ್ಲಿ ರಾಜಕೀಯವನ್ನು ಮರೆತು ಕೌರವ ಮತ್ತು ಪಾಂಡವರಾಗಿ ಸದಸ್ಯರು ಅಭಿನಯಿಸಿದರು. ಯುವಜನತೆ ಮೊಬೈಲನ್ನು ಅತೀಯಾಗಿ ಬಳಕೆ ಮಾಡುತ್ತಿರುವುರಿಂದ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆ ಕಡಿಮೆ ಮಾಡುವ ಸಲುವಾಗಿ ಈ ಕಲೆಯನ್ನು ಪ್ರದರ್ಶಿಸಿದ್ದೇವೆ. ನಮ್ಮ ಮುಂದಿನ ಪೀಳಿಗೆ ಈ ಬಯಲುಸೀಮೆ ಕಲೆಯನ್ನು ನೋಡಿ ಈಗ ಕಲಿಯಲು ಮುಂದಾಗಿರುವುದು ಹೆಮ್ಮೆಯ ವಿಚಾರ ಎಂದು ಪಾತ್ರಧಾರಿಗಳು ಸಂತಸ ವ್ಯಕ್ತಪಡಿಸಿದರು.

  • ವಿದ್ಯಾರ್ಥಿನಿ ಸಾವು ಪ್ರಕರಣ- ಕಪ್ಪು ಬಟ್ಟೆ ಧರಿಸಿ ಯುವಕರಿಂದ ಮತದಾನ

    ವಿದ್ಯಾರ್ಥಿನಿ ಸಾವು ಪ್ರಕರಣ- ಕಪ್ಪು ಬಟ್ಟೆ ಧರಿಸಿ ಯುವಕರಿಂದ ಮತದಾನ

    ರಾಯಚೂರು: ಜಿಲ್ಲೆಯ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಯುವಕರು ಕಪ್ಪು ಬಟ್ಟೆ ಧರಿಸಿ ಮತದಾನ ಮಾಡುತ್ತಿದ್ದಾರೆ.

    ರಾಯಚೂರಿನ ಶಕ್ತಿನಗರದಲ್ಲಿ ವಿದ್ಯಾರ್ಥಿನಿ ಸಾವಿನ ನ್ಯಾಯಕ್ಕೆ ಯುವಕರು ಆಗ್ರಹಿಸುತ್ತಿದ್ದಾರೆ. ಶಕ್ತಿನಗರದ ಡಿಎವಿ ಪಬ್ಲಿಕ್ ಶಾಲೆಯಲ್ಲಿನ ಮತಗಟ್ಟೆ ಮುಂದೆ ಯುವಕರು ಮೌನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಪ್ಪು ಬಟ್ಟೆ ಪ್ರದರ್ಶನ ಮಾಡುತ್ತಿದ್ದಾರೆ.

    ಸಿಐಡಿ ತನಿಖೆ ಬದಲು ಸಿಬಿಐಗೆ ತನಿಖೆ ವಹಿಸಲು ಆಗ್ರಹಿಸುತ್ತಿದ್ದಾರೆ. ಮತದಾನ ಬಹಿಷ್ಕಾರ ಮಾಡುವುದು ಸರಿಯಲ್ಲ ಎಂದು ಮತದಾನ ಮಾಡುತ್ತಿದ್ದೇವೆ ಎಂದು ಕಪ್ಪು ಬಟ್ಟೆ ಧರಿಸಿ ಬಂದಿರುವ ಯುವಕರು ಹೇಳಿದ್ದಾರೆ.

    ಏನಿದು ಪ್ರಕರಣ?
    ಏಪ್ರಿಲ್ 16 ರಂದು ಮೃತ ವಿದ್ಯಾರ್ಥಿನಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಪೊಲೀಸರು ಡೆತ್‍ನೋಟ್ ನೋಡಿ ಇದು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿದ್ದರು. ಬಳಿಕ ಮೃತ ವಿದ್ಯಾರ್ಥಿನಿ ತಾಯಿ ಇದು ಕೊಲೆಯಲ್ಲ. ನನ್ನ ಮಗಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಮೃತ ವಿದ್ಯಾರ್ಥಿನಿ ಗೆಳೆಯ ಸುದರ್ಶನ್‍ನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

  • ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಯುವಕ ನೀರುಪಾಲು – ಮತ್ತೊಬ್ಬನಿಗಾಗಿ ಶೋಧ ಕಾರ್ಯ

    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಯುವಕ ನೀರುಪಾಲು – ಮತ್ತೊಬ್ಬನಿಗಾಗಿ ಶೋಧ ಕಾರ್ಯ

    ಬೀದರ್: ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಯುವಕ ನೀರುಪಾಲಾಗಿದ್ದು, ಮತ್ತೊಬ್ಬನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಬಳಿ ನಡೆದಿದೆ.

    ಕಾಶಿನಾಥ್ ಪಾಟೀಲ್ (17) ಹಾಗೂ ನಾಗರಾಜ್ (16) ಸೆಲ್ಫಿ ಕ್ಲಿಕ್ಕಿಸಿಕೊಳ್ಳವ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಬೇಸಿಗೆ ರಜೆ ಇದ್ದ ಕಾರಣ ಕಾಶಿನಾಥ್ ಹಾಗೂ ನಾಗರಾಜ್ ದುಬಲಗುಂಡಿಯಿಂದ ಮಾವನ ಮನೆಗೆ ಬಂದಿದ್ದರು. ಈ ವೇಳೆ ಇಬ್ಬರು ಕಾರಂಜಾ ಡ್ಯಾಂನಲ್ಲಿ ಹತ್ತಿರ ನಿಂತುಕೊಂಡು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು.

    ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಇಬ್ಬರು ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ನೀರಿನಲ್ಲಿ ಬಿದ್ದ ಕಾಶಿನಾಥ್ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

    ಈ ಬಗ್ಗೆ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸ್ನೇಹಿತನನ್ನು ನೋಡಲು ಬಂದ ಐವರು ಯುವಕರಿಂದ ಕುಡಿದು ದಾಂಧಲೆ!

    ಸ್ನೇಹಿತನನ್ನು ನೋಡಲು ಬಂದ ಐವರು ಯುವಕರಿಂದ ಕುಡಿದು ದಾಂಧಲೆ!

    ತುಮಕೂರು: ಬಸ್ ಡಿಪೋದಲ್ಲಿ ಸ್ನೇಹಿತನನ್ನು ನೋಡಲು ಬಂದ ಐವರು ಪಾನಮತ್ತ ಯುವಕರು ದಾಂಧಲೆ ನಡೆಸಿದ್ದಾರೆ.

    ತುಮಕೂರು ಶಿರಾಗೇಟ್ ನಲ್ಲಿರುವ ಕೆಎಸ್‍ಆರ್ ಟಿಸಿ ಡಿಪೋದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ನರಸಿಂಹಮೂರ್ತಿಯನ್ನು ನೋಡಲೆಂದು ಐವರು ಸ್ನೇಹಿತರು ಕಾರಿನಲ್ಲಿ ಬಂದಿದ್ದಾರೆ. ಖಾಸಗಿ ವಾಹನ ಆಗಿದ್ದರಿಂದ ಇವರ ಕಾರು ಡಿಪೋ ಒಳಕ್ಕೆ ಬಿಟ್ಟಿಲ್ಲ.

    ಮೊದಲೇ ಕುಡಿದ ಅಮಲಿನಲ್ಲಿದ್ದ ಐವರು ಯುವಕರು ಕಾರು ಒಳಗೆ ಬಿಡುವಂತೆ ದಾಂಧಲೆ ನಡೆಸಿದ್ದಾರೆ. ಅಲ್ಲದೆ ಬಸ್ಸುಗಳು ಸಂಚರಿಸದಂತೆ ಅಡ್ಡ ನಿಂತು ತೊಂದರೆ ಮಾಡಿದ್ದಾರೆ. ಡಿಪೋ ಸಿಬ್ಬಂದಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಈ ಮೂಲಕ ಸುಮಾರು 1 ಗಂಟೆಗಳ ಕಾಲ ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.

    ಬಳಿಕ ತುಮಕೂರು ನಗರ ಪೊಲೀಸರು ಪಾನಮತ್ತ ಐವರು ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

  • ಗುಂಪುಗಳ ನಡ್ವೆ ಗಲಾಟೆ- ಮನೆಗಳ ಮೇಲೆ ಕಲ್ಲು ತೂರಾಟ

    ಗುಂಪುಗಳ ನಡ್ವೆ ಗಲಾಟೆ- ಮನೆಗಳ ಮೇಲೆ ಕಲ್ಲು ತೂರಾಟ

    ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿದ್ದು ಈ ವೇಳೆ ಪರಸ್ಪರ ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ.

    ಗ್ರಾಮದಲ್ಲಿ ಶುಕ್ರವಾರ ಸಂಜೆಯಿಂದ ಆರಂಭವಾದ ಘರ್ಷಣೆ ಕೊನೆಯಲ್ಲಿ ಕಲ್ಲು ತೂರಾಟ ಹಂತಕ್ಕೆ ತಲುಪಿದೆ. ಎರಡು ವರ್ಗದ ಯುವಕರ ನಡುವೆ ಜಗಳ ನಡೆದಿದೆ ಎನ್ನಲಾಗಿದ್ದು, ಜಗಳ ವಿಕೋಪಕ್ಕೆ ತಿರುಗಿ ಕೆಲವರು ದಲಿತರ ಹಟ್ಟಿಗೆ ನುಗ್ಗಿ ಕಲ್ಲು ತೂರಾಟ ನಡೆಸಿದ್ದಾರೆ.

    ಘಟನೆಯಲ್ಲಿ ಎರಡೂ ಕಡೆಯ ತಲಾ ಮೂವರಿಗೆ ಗಾಯಗಳಾಗಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ಸಂತೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಈ ಬಗ್ಗೆ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಎರಡು ಕಡೆಯಿಂದಲೂ ದೂರು ದಾಖಲಾಗಿದೆ.

  • ಮೋದಿಗಾಗಿ ಯುವಕರಿಂದ ಪಾದಯಾತ್ರೆ

    ಮೋದಿಗಾಗಿ ಯುವಕರಿಂದ ಪಾದಯಾತ್ರೆ

    ಕೋಲಾರ: ಮತ್ತೊಮ್ಮೆ ಮೋದಿ, ಈ ದೇಶದ ಪ್ರಧಾನಿ ಆಗಬೇಕೆಂದು ಆಶಿಸಿ ಯುವಕರ ತಂಡವೊಂದು ಕೋಲಾರ ಲೋಕಸಭಾ ಕ್ಷೇತ್ರದಾದ್ಯಂತ ಪಾದಯಾತ್ರೆಯನ್ನು ಮಾಡುತ್ತಿದ್ದಾರೆ.

    ಗುರುವಾರ ಮಾಲೂರುನಿಂದ ಪ್ರಾರಂಭಿಸಿರುವ ಆರು ಜನ ಯುವಕರ ತಂಡ ಟೇಕಲ್ ಮಾರ್ಗವಾಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು, ಕೋಲಾರ, ಶ್ರೀನಿವಾಸಪುರದಿಂದ ಚಿಂತಾಮಣಿ ಶಿಡ್ಲಘಟ್ಟ ಕ್ಷೇತ್ರಗಳವರೆಗೂ ಪಾದಯಾತ್ರೆ ಮಾಡಿದ್ದಾರೆ.

    ಇನ್ನುಳಿದ ಏಳು ದಿನಗಳವರೆಗೂ ಪಾದಯಾತ್ರೆ ನಡೆಸಲಿದ್ದು, ಯಾವುದೋ ಒಂದು ಪಕ್ಷ ಅಭ್ಯರ್ಥಿಯ ಪರ ಮತಯಾಚಿಸದೆ, ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುಲಿದ್ದಾರೆ.

    ಸ್ಥಳೀಯರೇ ಆಗಿರುವ ಇವರು ಬೆಂಗಳೂರಿನಲ್ಲಿ ಉದ್ಯೋಗ, ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಮೋದಿ ಅವರ ಆಡಳಿತಕ್ಕೆ ಮನಸೋತು ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕೆಂದು ಪಾದಯಾತ್ರೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಪಾದಯಾತ್ರೆಯುದ್ದಕ್ಕೂ ಮೋದಿ ಅವರಿಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

  • ಪಬ್‍ಜಿ ಆಡುತ್ತಾ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಯುವಕರು

    ಪಬ್‍ಜಿ ಆಡುತ್ತಾ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಯುವಕರು

    ಮುಂಬೈ: ಪಬ್‍ಜಿ ಆಡುತ್ತಿದ್ದ ಇಬ್ಬರು ಯುವಕರು ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಘಟನೆ ಭಾನುವಾರ ಸಂಜೆ ಮಹರಾಷ್ಟ್ರದ ಹಿಂಗೋಲಿಯಲ್ಲಿ ನಡೆದಿದೆ.

    ನಾಗೇಶ್ ಗೋರೆ(24) ಹಾಗೂ ಸ್ವಪ್ನಿಲ್ ಅನ್ನಪುರ್ಣೆ(22) ಪಬ್‍ಜಿ ಆಡುತ್ತಾ ಪ್ರಾಣ ಕಳೆದುಕೊಂಡ ಯುವಕರು. ನಾಗೇಶ್ ಹಾಗೂ ಸ್ವಪ್ನಿಲ್ ಪಬ್‍ಜಿ ಆಡುತ್ತಾ ರೈಲ್ವೆ ಹಳಿ ದಾಟುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ.

    ನಾಗೇಶ್ ಹಾಗೂ ಸ್ವಪ್ನಿಲ್ ಪಬ್‍ಜಿ ಗೇಮ್‍ನಲ್ಲಿ ಮಗ್ನರಾಗಿದ್ದರು. ಈ ವೇಳೆ ಅವರು ರೈಲ್ವೆ ಹಳಿ ದಾಟಲು ಮುಂದಾದಾಗ ಹೈದರಾಬಾದ್- ಅಜ್ಮೇರ್ ರೈಲು ಅವರ ಮೇಲೆ ಹರಿದಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇಬ್ಬರ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಏನಿದು ಪಬ್ ಜಿ?
    ಪಬ್ ಜಿ ಎನ್ನುವುದು ಒಂದು ಬ್ಯಾಟಲ್ ಫೀಲ್ಡ್ ಗೇಮ್ (ಯುದ್ಧ ಭೂಮಿ ಆಟ). ಈ ಆಟದ ಸಂಪೂರ್ಣ ಭೂಪಟವನ್ನು ಆಟಗಾರಿಗೆ ಮೊದಲು ತೋರಿಸಲಾಗುತ್ತದೆ. ಬಳಿಕ ಆಟಗಾರರು ತಮಗೆ ಬೇಕಾದ ಪ್ರದೇಶವನ್ನು ಆಯ್ದುಕೊಂದು ಆ ಪ್ರದೇಶಕ್ಕೆ ವಿಮಾನದಿಂದ ಕೆಳಗೆ ಹಾರಿ ಮನೆಗಳತ್ತ ಓಡ್ತಾರೆ. ಆಟಗಾರರಿದ್ದ ಪ್ರದೇಶದಲ್ಲಿ ಸಿಕ್ಕ ಶಸ್ತ್ರಾಸ್ತ್ರಗಳನ್ನು, ಮೆಡಿಕಲ್ ಕಿಟ್‍ಗಳನ್ನು, ಯುದ್ಧಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಆಯ್ದುಕೊಂಡು ಮುಂದೆ ಸಾಗುತ್ತಾರೆ. ಆಟಗಾರರು ಇಳಿದ ಪ್ರದೇಶದ ಸುತ್ತ ವೃತ್ತವೊಂದು ಸಣ್ಣದಾಗುತ್ತೆ. ಆಗ ಅಲ್ಲಿದ್ದ ನೂರಾರು ಜನರ ಜೊತೆ ಹೋರಾಡಿ ಉಳಿದರೇ ಗೆದ್ದಂತೆ, ಮೃತಪಟ್ಟರೆ ಸೋತಂತೆ. ಈ ಆಟದ ವಿಶೇಷ ಏನೆಂದರೆ ಸ್ನೇಹಿತರ ಜೊತೆ ಸೇರಿ ಆಡಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಈಡುಗಾಯಿ ವಿಚಾರದಲ್ಲಿ ಗಲಾಟೆ- ತಲೆ ಮೇಲೆಯೇ ತೆಂಗಿನಕಾಯಿ ಒಡೆದ ಯುವಕರು

    ಈಡುಗಾಯಿ ವಿಚಾರದಲ್ಲಿ ಗಲಾಟೆ- ತಲೆ ಮೇಲೆಯೇ ತೆಂಗಿನಕಾಯಿ ಒಡೆದ ಯುವಕರು

    ಮೈಸೂರು: ದೇವಸ್ಥಾನದಲ್ಲಿ ಈಡುಗಾಯಿ ವಿಚಾರದಲ್ಲಿ ಗಲಾಟೆ ನಡೆದು ವೇಳೆ ಇಬ್ಬರು ಯುವಕರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ.

    ಮಹದೇವಸ್ವಾಮಿ ಹಾಗೂ ಮಂಜು ಗಾಯಗೊಂಡ ಯುವಕರು. ಗಲಾಟೆಯ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ. ಗ್ರಾಮದಲ್ಲಿ ನಡೆದ ಮಾರಮ್ಮನ ಹಬ್ಬ ಆಚರಣೆ ವೇಳೆ ಇತ್ತೀಚೆಗೆ ನವೀಕರಣಗೊಂಡ ಮಾರಮ್ಮನ ದೇವಸ್ಥಾನದಲ್ಲಿ ಇಡುಗಾಯಿ ಹೊಡೆಯುವ ವಿಚಾರದಲ್ಲಿ ಗಲಾಟೆ ನಡೆದಿದೆ.

    ಹೊಸದಾಗಿ ಹಾಕಲಾಗಿದ್ದ ಟೈಲ್ಸ್ ಮೇಲೆ ತೆಂಗಿನಕಾಯಿ ಹೊಡೆಯಲು ಕೆಲವರು ವಿರೋಧಿಸಿದ್ದಾರೆ. ಟೈಲ್ಸ್ ಮೇಲೆ ಈಡುಗಾಯಿ ಹೊಡೆಯಲು ಬಂದಾಗ ಮಾತಿನ ಚಕಮಕಿ ಶುರುವಾಗಿ ಯುವಕರ ತಲೆ ಮೇಲೆ ಕೆಲವರು ತೆಂಗಿನಕಾಯಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರಲ್ಲಿದ್ದ ಪ್ರತಿಷ್ಠಿತ ಕರಾಚಿ ಬೇಕರಿ ಬೋರ್ಡ್ ಮುಚ್ಚಿಸಿದ ಯುವಕರು

    ಬೆಂಗ್ಳೂರಲ್ಲಿದ್ದ ಪ್ರತಿಷ್ಠಿತ ಕರಾಚಿ ಬೇಕರಿ ಬೋರ್ಡ್ ಮುಚ್ಚಿಸಿದ ಯುವಕರು

    ಬೆಂಗಳೂರು: ಪುಲ್ವಾಮಾದಲ್ಲಿ ಯೋಧರ ಮೇಲೆ ಉಗ್ರರ ದಾಳಿ ನಡೆದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿದ್ದ ಪ್ರತಿಷ್ಠಿತ ಕರಾಚಿ ಬೇಕರಿ ಬೋರ್ಡ್ ಅನ್ನು ಯುವಕರು ಮುಚ್ಚಿಸಿದ್ದಾರೆ.

    ಬೆಂಗಳೂರಿನ ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಈ ಬೇಕರಿ ಇದೆ. ಈ ಬೇಕರಿಯ ಹೆಸರು ಕರಾಚಿ ಆಗಿದ್ದು, ಈ ಹೆಸರನ್ನು ತೆಗೆಯುವಂತೆ ಯುವಕರು ಗಲಾಟೆ ಮಾಡಿದ್ದಾರೆ.

    ನಮ್ಮ ಯೋಧರ ಮೇಲೆ ದಾಳಿ ನಡೆಸಿದ ಪಾಕಿಸ್ತಾನ ನಗರದ ಹೆಸರಲ್ಲಿ ಇಲ್ಲಿ ವ್ಯಾಪಾರ ಮಾಡುವುದು ಸರಿಯಲ್ಲ. ಇದು ನಮಗೆ ಇಷ್ಟವಾಗುತ್ತಿಲ್ಲ. ನೀವು ವ್ಯಾಪಾರ ಬೇಕಾದರೆ ಮಾಡಿಕೊಳ್ಳಿ. ಆದರೆ ಕರಾಚಿ ಹೆಸರು ತೆಗೆಯಿರಿ ಎಂದು ಯುವಕರ ಗಲಾಟೆ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಮಾಲೀಕ ಖಾನ್ ಚೆಂದ್ ರಾಮಾನಿ ಯುವಕರ ಮಾತಿನಂತೆ ಕರಾಚಿ ಹೆಸರಿಗೆ ಪ್ಲೆಕ್ಸ್ ಕಟ್ಟಿ ಮುಚ್ಚಿದ್ದಾರೆ.

    1953ರಲ್ಲಿ ಈ ಬೇಕರಿ ಸ್ಥಾಪನೆಯಾಗಿದ್ದು, ಪಾಕಿಸ್ತಾನದ ರಾಜಧಾನಿ ಕರಾಚಿ ಹೆಸರಿನಲ್ಲಿ ಬೇಕರಿಯನ್ನು ನಡೆಸಲಾಗುತ್ತಿದೆ. ಇದೇ ಹೆಸರಿನಲ್ಲಿ ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಬೇಕರಿ ನಡೆಯುತ್ತಿದೆ. ಅಲ್ಲದೆ ಇಂದಿರಾನಗರ ಪೊಲೀಸರು ಬೇಕರಿಯಿದ್ದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

    1947ರಲ್ಲಿ ಭಾರತ ಮತ್ತು ಪಾಕಿಸ್ತಾನ ಬೇರೆಯಾದ ವೇಳೆ ಖಾನ್ ಚೆಂದ್ ರಾಮಾನಿ ಪಾಕಿಸ್ತಾನದಿಂದ ಹೈದರಾಬಾದ್‍ಗೆ ಬಂದು ನೆಲೆಸಿದ್ದರು. ಹೈದರಾಬಾದ್‍ನಲ್ಲಿ ಮೊದಲ ಬಾರಿಗೆ ಕರಾಚಿ ಬೇಕರಿ ಓಪನ್ ಮಾಡಿದ್ದಾರೆ. ಬಳಿಕ ಬೆಂಗಳೂರಿನ ಇಂದಿರಾ ನಗರ ಮತ್ತು ಮಹದೇವಪುರದಲ್ಲಿ ಬೇಕರಿ ಓಪನ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮಹಾರಾಷ್ಟ್ರ, ಮಧ್ಯಪ್ರದೇಶ, ಕರ್ನಾಟಕ, ಆಂಧ್ರಪ್ರದೇಶ, ಆಗ್ರಾ ಸೇರಿದಂತೆ ಹತ್ತಾರು ಬ್ರಾಂಚ್ ಗಳನ್ನು ಹೊಂದಿದ್ದಾರೆ.

    ಈ ಸಂಬಂಧ ಬೇಕರಿ ಮಾಲೀಕ ಖಾನ್ ಚೆಂದ್ ರಾಮಾನಿ ದೂರು ನೀಡಿದ್ದಾರೆ. ಹೀಗಾಗಿ ಪೊಲೀಸರು ಯುವಕರ ವಿರುದ್ಧ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮುತ್ತು ಕೊಡುವ ಚಾಲೆಂಜ್ ಮಾಡಿ ಪೊಲೀಸರ ಅತಿಥಿಯಾದ ಯುವಕರು

    ಮುತ್ತು ಕೊಡುವ ಚಾಲೆಂಜ್ ಮಾಡಿ ಪೊಲೀಸರ ಅತಿಥಿಯಾದ ಯುವಕರು

    ಮಂಡ್ಯ: ಮುತ್ತು ಕೊಡುವ ಚಾಲೆಂಜ್ ಮಾಡಿ ಯುವಕರು ಪೊಲೀಸರ ಅತಿಥಿಯಾಗಿರುವ ಘಟನೆ ಬುಧವಾರ ಸಂಜೆ ಮಂಡ್ಯದ ಗ್ರಾಮವೊಂದರಲ್ಲಿ ನಡೆದಿದೆ.

    ಪ್ರಮೋದ್(22) ಮತ್ತು ವೆಂಕಟೇಶ್(24) ಮುತ್ತು ನೀಡಲು ಮುಂದಾದ ಯುವಕರು. ಪ್ರಮೋದ್ ಹಾಗೂ ವೆಂಕಟೇಶ್ ನಡುವೆ ಗ್ರಾಮದ 10 ವರ್ಷದ ಬಾಲಕಿಗೆ ಮುತ್ತು ಕೊಡುವ ಚಾಲೆಂಜ್ ನಡೆದಿತ್ತು. ಅಲ್ಲದೇ ಬಾಲಕಿ ಶಾಲೆ ಮುಗಿಸಿಕೊಂಡು ಬರುತ್ತಿದ್ದ ವೇಳೆ ಯುವಕರು ಆಕೆಗೆ ಮುತ್ತು ನೀಡಲು ಮುಂದಾಗಿದ್ದಾರೆ.

    ಯುವಕರು ಮುತ್ತು ನೀಡಲು ಬಂದಾಗ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದಾಳೆ. ಬಾಲಕಿಯ ಚೀರಾಟ ಕೇಳಿದ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದಾರೆ. ಗ್ರಾಮಸ್ಥರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಪ್ರಮೋದ್ ಸ್ಥಳದಿಂದ ಪರಾರಿ ಆಗಿದ್ದು, ವೆಂಕಟೇಶ್‍ನನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.

    ಈ ಬಗ್ಗೆ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv