Tag: Youths

  • ಯುವ ಬ್ರಿಗೇಡ್ ಬಳ್ಳಾರಿಯಿಂದ ಸ್ವಚ್ಛತಾ ಕಾರ್ಯ – ಜನರ ಮೆಚ್ಚುಗೆಗೆ ಪಾತ್ರವಾದ ಯುವಕರ ಕೆಲಸ

    ಯುವ ಬ್ರಿಗೇಡ್ ಬಳ್ಳಾರಿಯಿಂದ ಸ್ವಚ್ಛತಾ ಕಾರ್ಯ – ಜನರ ಮೆಚ್ಚುಗೆಗೆ ಪಾತ್ರವಾದ ಯುವಕರ ಕೆಲಸ

    ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಭಿತ್ತಿ ಚಿತ್ರಗಳು ಜಾಹೀರಾತು ಫಲಕಗಳದ್ದೇ ಕಾರುಬಾರು. ಈ ಭಿತ್ತಿ ಚಿತ್ರಗಳನ್ನು ಎಲ್ಲಂದರಲ್ಲಿ ಅಂಟಿಸಿ ನಗರದ ಸೌಂದರ್ಯ ಹಾಳಾಗುತಿತ್ತು.

    ಹೀಗಾಗಿ ಬಳ್ಳಾರಿಯ ಯುವ ಬ್ರಿಗೇಡ್ ಕಾರ್ಯಕರ್ತರ ವತಿಯಿಂದ ಸ್ವಚ್ಛತಾ ಕಾರ್ಯ ಹಮ್ಮಿಕೊಂಡು, ಬಳ್ಳಾರಿ ನಗರದ ತಾಲೂಕು ಕಚೇರಿ ಬಸ್ ನಿಲ್ದಾಣದ ಹೀಗೆ ಅನೇಕ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛ ಮಾಡಿದ್ದಾರೆ. ಬ್ರಿಗೇಡ್ ಯುವಕರ ತಂಡ ಸ್ವಂತ ಖರ್ಚಿನಲ್ಲಿ ಈ ಕಲಸ ಮಾಡಿದ್ದು, ಸಾರ್ವಜನಿಕ ಬಸ್ ನಿಲ್ದಾಣಕ್ಕೆ ಪೈಂಟ್ ಮಾಡಿದ್ದಾರೆ.

    ಪ್ರತಿ ರವಿವಾರ ಈ ಯುವಕರ ಪಡೆ ಒಂದೊಂದು ಸ್ಥಳವನ್ನು ಆಯ್ಕೆ ಮಾಡಿಕೊಂಡು ಸ್ವಚ್ಛತಾ ಕಾರ್ಯ ಮಾಡುತ್ತಿದ್ದಾರೆ. ಯುವ ಬ್ರಿಗೇಡ್ ನಲ್ಲಿ ಬಹುತೇಕವಾಗಿ ವಿದ್ಯಾರ್ಥಿಗಳಿದ್ದು ಭಾನುವಾರದಲ್ಲಿ ಸಿನಿಮಾ ನೋಡಿ ಕಾಲಹರಣ ಮಾಡದೇ ನಗರವನ್ನು ಕ್ಲೀನ್ ಮಾಡುವುದನ್ನು ಹವ್ಯಾಸ ಮಾಡಿಕೊಂಡಿದ್ದಾರೆ. ಯುವಕರು ಈ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಮಂತ್ರಾಲಯ ಶ್ರೀಗಳಿಗೆ ವಿಶೇಷ ತುಲಾಭಾರ- ಬಡ ವಿದ್ಯಾರ್ಥಿಗಳಿಗೆ ಯುವಕರಿಂದ ನೆರವು

    ಮಂತ್ರಾಲಯ ಶ್ರೀಗಳಿಗೆ ವಿಶೇಷ ತುಲಾಭಾರ- ಬಡ ವಿದ್ಯಾರ್ಥಿಗಳಿಗೆ ಯುವಕರಿಂದ ನೆರವು

    ರಾಯಚೂರು: ಸ್ವಾಮೀಜಿಗಳಿಗೆ, ಹಿರಿಯರಿಗೆ ನಾನಾ ವಸ್ತುಗಳಿಂದ ತುಲಾಭಾರ ಮಾಡುವುದನ್ನು ನೋಡಿದ್ದೇವೆ. ಆದರೆ ರಾಯಚೂರಿನ ಕಾಡ್ಲೂರಿನಲ್ಲಿ ಮಂತ್ರಾಲಯ ಪೀಠಾಧಿಪತಿ ಶ್ರೀಸುಭುದೇಂದ್ರ ತೀರ್ಥ ಸ್ವಾಮಿಗೆ ಶಾಲಾ ಪಠ್ಯ ಸಾಮಗ್ರಿಗಳಿಂದ ತುಲಾಭಾರ ಮಾಡಲಾಯಿತು.

    ತುಲಾಭಾರ ಬಳಿಕ ಪಠ್ಯ ಸಾಮಗ್ರಿಗಳಾದ ಪುಸ್ತಕ, ಜಾಮೆಟ್ರಿ ಬಾಕ್ಸ್, ಡಿಕ್ಷನರಿ, ಪೆನ್, ಪೆನ್ಸಿಲ್, ಎಕ್ಸಾಂ ಪ್ಯಾಡ್ ಅನ್ನು ಕಾಡ್ಲೂರು ಗ್ರಾಮದ ಬಡ ವಿದ್ಯಾರ್ಥಿಗಳಿಗೆ ನೀಡಲಾಯಿತು. ಕಾಡ್ಲೂರು ಗ್ರಾಮದ ವನವಾಸಿ ಶ್ರೀರಾಮದೇವರು ಹಾಗೂ ಶ್ರೀ ಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನದ ನೂತನ ರಾಘವೇಂದ್ರ ಮಂಗಳ ಸಭಾಂಗಣ ಉದ್ಘಾಟನಾ ಸಮಾರಂಭ ವೇಳೆ ಶ್ರೀಗಳ ತುಲಾಭಾರ ಮಾಡಲಾಯಿತು. ಕಾಡ್ಲೂರು ಸಂಸ್ಥಾನದ ವಂಶಿಕ ಯುವಕರು ಈ ವಿಶೇಷ ಪಠ್ಯ ಸಾಮಗ್ರಿ ತುಲಾಭಾರ ನೆರವೇರಿಸಿದರು. ಈ ವೇಳೆ ಪದ್ಮಶ್ರೀ ಪುರಸ್ಕೃತ ಕನ್ನಡ ಕಬೀರ ಇಬ್ರಾಹಿಂ ಸುತಾರ್ ಅವರಿಗೆ ಸನ್ಮಾನ ಮಾಡಲಾಯಿತು.

    ತುಲಾಭಾರ ಮೂಲಕ ಬಡ ವಿದ್ಯಾರ್ಥಿಗಳಿಗೆ ಪಠ್ಯ ಸಾಮಗ್ರಿಗಳನ್ನು ನೀಡುವ ಕಾರ್ಯ ಮಾಡಿದ್ದು ಶ್ಲಾಘನೀಯ, ಪ್ರತಿಯೊಬ್ಬ ಯುವಕರು ತಮ್ಮ ಸಂಪಾದನೆಯ ಒಂದಿಷ್ಟು ಭಾಗವನ್ನು ಬಡಮಕ್ಕಳ ವಿದ್ಯಾಭ್ಯಾಸಕ್ಕೆ ವಿನಿಯೋಗಿಸುವುದು ಒಳ್ಳೆಯ ಕಾರ್ಯ ಎಂದು ಇಬ್ರಾಹಿಂ ಸುತಾರ್ ಹೇಳಿದರು. ರಾಘವೇಂದ್ರ ಮಂಗಳ ಸಭಾಂಗಣವನ್ನು ಉದ್ಘಾಟಿಸಿದ ಮಂತ್ರಾಲಯ ಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥ ಸ್ವಾಮಿ ವಿಶೇಷ ತುಲಾಭಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾಡ್ಲೂರಿನ ರಂಗರಾವ್ ದೇಸಾಯಿ, ಜಯಕುಮಾರ್ ದೇಸಾಯಿ ನೇತೃತ್ವದಲ್ಲಿ ಗ್ರಾಮದ ಹಲವಾರು ಯುವಕರು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಧಾರ್ಮಿಕ ಕಾರ್ಯಕ್ರಮದ ಜೊತೆ ವಿದ್ಯಾರ್ಥಿಗಳ ಅಗತ್ಯ ವಸ್ತುಗಳನ್ನು ತುಲಾಭಾರದ ಮೂಲಕ ಹಂಚಿದರು.

  • ಬರ್ತ್ ಡೇ ಪಾರ್ಟಿಯಲ್ಲಿ ಯುವಕರ ಸಾವು- ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಸತ್ಯ

    ಬರ್ತ್ ಡೇ ಪಾರ್ಟಿಯಲ್ಲಿ ಯುವಕರ ಸಾವು- ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಸತ್ಯ

    ಬೆಂಗಳೂರು: ಕೋದಂಡರಾಮಪುರ ಇಬ್ಬರು ಯುವಕರ ಅನುಮಾನಾಸ್ಪದ ಸಾವು ಪ್ರಕರಣದ ಬಗ್ಗೆ ಮೃತರ ಮರಣೊತ್ತರ ಪರೀಕ್ಷೆಯಲ್ಲಿ ಸತ್ಯ ಬಯಲಾಗಿದ್ದು, ಮಾದಕವಸ್ತು ಅಂಶವಿರುವ ಮಾತ್ರೆಯನ್ನು ಸೇವಿಸಿ ಯುವಕರು ಸಾವನ್ನಪ್ಪಿದ್ದಾರೆ ಎನ್ನುವುದು ತಿಳಿದು ಬಂದಿದೆ.

    ಮೃತ ಯುವಕರು ಹಾಗೂ ಅವರ ಸ್ನೇಹಿತರು ಟೈಡಾಲ್ ಎಂಬ ಮಾದಕವಸ್ತು ಅಂಶವಿರೋ ಮಾತ್ರೆಯನ್ನು ಗೆಳೆಯನ ಹುಟ್ಟುಹಬ್ಬದ ಪಾರ್ಟಿ ವೇಳೆ ಸೇವಿಸಿದ್ದರು. ಟೈಡಾಲ್ ಮಾತ್ರೆಯಲ್ಲಿ ಮಾದಕವಸ್ತು ಅಂಶವಿರುತ್ತದೆ. ಟೈಡಾಲ್ ಮಾತ್ರೆ ಸೇವನೆಯಿಂದ ನಶೆ ಏರುತ್ತದೆ ಹಾಗೆಯೇ ಯುವಕರಿಗೆ ಇದು ಸುಲಭವಾಗಿ ಸಿಗುವ ಔಷಧಿಯಾಗಿದೆ. ಹೀಗಾಗಿ ನಶೆಗಾಗಿ ಯುವಕರು ಪಾರ್ಟಿ ಮಾಡುವ ವೇಳೆ ಇದನ್ನು ಸೇವಿಸಿದ್ದಾರೆ ಎನ್ನುವುದು ಬಯಲಾಗಿದೆ. ಇದನ್ನೂ ಓದಿ:ಗೆಳೆಯನ ಬರ್ತ್ ಡೇ ಪಾರ್ಟಿ ಮಾಡಿದ್ದ ಇಬ್ಬರು ಬಲಿ, 6 ಮಂದಿ ಸ್ಥಿತಿ ಗಂಭೀರ

    ಟೈಡಾಲ್ ಮಾತ್ರೆಯನ್ನು ಡಿಸ್ಟಿಲ್ ವಾಟರ್‌ನಲ್ಲಿ ಬೆರೆಸಿ ಸಿರಿಂಜ್ ಮೂಲಕ ಯುವಕರು ತಮ್ಮ ದೇಹಕ್ಕೆ ಇಂಜೆಕ್ಟ್ ಮಾಡಿಕೊಂಡಿದ್ದಾರೆ. 17ರಂದು ಮೂರು ಮಂದಿ ಯುವಕರು ಈ ಟೈಡಾಲ್ ಮಾತ್ರೆಯನ್ನು ತೆಗೆದುಕೊಂಡಿದ್ದರು. ಆದರೆ ಅವರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಈ ಮಾತ್ರೆ ಹೇಗೆ ತಂದರು? ಈ ಹಿಂದೆ ಇದನ್ನು ಸೇವಿಸಿದ್ದರಾ ಅನ್ನೋದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮೂರು ಮಂದಿ ಸೇರಿ ಮಾತ್ರೆ ತೆಗೆದುಕೊಂಡು ಬಂದಿದ್ದರು ಅನ್ನೋದು ಗೊತ್ತಾಗಿದೆ. ಬೇರೆವರ ಬಗ್ಗೆ ಮಾಹಿತಿ ಇಲ್ಲ. ಯುವಕರು ಈ ಮಾತ್ರೆಯನ್ನು ಸಿರಿಂಜ್ ಮೂಲಕ ತೆಗೆದುಕೊಂಡಿದ್ದಾರೆ. ಆಸ್ಪತ್ರೆಗೆ ಯುವಕರು ಅಡ್ಮಿಟ್ ಆದಮೇಲೆ ಮಾತ್ರೆ ತೆಗೆದುಕೊಂಡಿರೋ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಅಕ್ರಮವಾಗಿ ಮೆಡಿಕಲ್ ಸ್ಟೋರ್‌ನಿಂದ ಮಾರಾಟವಾಗಿದ್ದರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಇದು ಹೆಚ್ಚಾಗಿ ಬಳಸಿದರೆ ಇದರ ನಶೆ ಅಡಿಟ್ ಆಗುತ್ತಾರೆ ಎಂದು ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಠೋರ್ ಹೇಳಿದ್ದಾರೆ.

    ರಾತ್ರಿ ಪಾರ್ಟಿ ಮಾಡಿದ ಬಳಿಕ ಯುವಕರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಯ್ಯಾಲಿಕಾವಲ್ ಪೊಲೀಸರು ಅಸ್ವಸ್ಥರ ಪೈಕಿ ಸುಮನ್ ಎಂಬ ಯುವಕನಿಂದ ಹೇಳಿಕೆ ಪಡೆದಿದ್ದಾರೆ. ಈ ಮಾತ್ರ ಸೇವನೆಯಿಂದ ಗೋಪಿ ಹಾಗೂ ಅಭಿಲಾಷ್ ಮೃತಪಟ್ಟಿದ್ದು, ಎರಡೂ ಶವಗಳ ಮತಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ.

    ಸದ್ಯ ಈ ಸಂಬಂಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಯುಡಿಆರ್ ಕೇಸ್ ದಾಖಲಾಗಿದೆ. ಅಲ್ಲದೆ ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

    ಮಲ್ಲೇಶ್ವರಂ ಕೋದಂಡರಾಮಪುರದಲ್ಲಿ ಈ ಘಟನೆ ನಡೆದಿದೆ. ಪಾರ್ಟಿ ಮುಗಿಸಿ ಬಂದ ಅಭಿಲಾಷ್, ಗೋಪಿ ದುರ್ಮರಣ ಹೊಂದಿದ್ದು, ಮತ್ತೊಬ್ಬ ಯುವಕ ಕೂಡ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದ ಚಿಟ್ಟೆ ಅಲಿಯಾಸ್ ಸುಮನ್ ಸೇರಿದಂತೆ 6 ಮಂದಿ ಯುವಕರ ಸ್ಥಿತಿ ಗಂಭೀರವಾಗಿದೆ.

    ಈ ಯುವಕರು ಮಂಗಳವಾರ ಗೆಳೆಯನ ಹುಟ್ಟುಹಬ್ಬದ ಪಾರ್ಟಿ ಮಾಡಿದ್ದರು. ಹುಟ್ಟುಹಬ್ಬದ ಸೆಲೆಬ್ರೇಷನ್ ಅಂತ ಯುವಕರು ಗಾಂಜಾ ಸೇವನೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ತಡರಾತ್ರಿವರೆಗೂ ಪಾರ್ಟಿ ಮಾಡಿ ಮನೆಗೆ ತೆರೆಳಿದ್ದ ಯುವಕರು ಅಸ್ವಸ್ಥಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

  • ಬೆಂಗ್ಳೂರಲ್ಲಿ ಟ್ರೆಂಡ್ ಆಗಿದೆ ಡೇಟಿಂಗ್ ಆ್ಯಪ್ – ಪರಿಚಯ ಇಲ್ಲದವರ ಜೊತೆಗೆ ಮೋಜು-ಮಸ್ತಿ

    ಬೆಂಗ್ಳೂರಲ್ಲಿ ಟ್ರೆಂಡ್ ಆಗಿದೆ ಡೇಟಿಂಗ್ ಆ್ಯಪ್ – ಪರಿಚಯ ಇಲ್ಲದವರ ಜೊತೆಗೆ ಮೋಜು-ಮಸ್ತಿ

    ಬೆಂಗಳೂರು: ಡೇಟಿಂಗ್ ಆ್ಯಪ್ ಬಳಸುವುದರಲ್ಲಿ ಬೆಂಗಳೂರು ಈಗ ಟಾಪ್ 2 ಸ್ಥಾನ ಪಡೆದುಕೊಂಡಿದ್ದು, ನಮ್ಮ ಯುವ ಜನತೆ ನಿಜಕ್ಕೂ ಸೇಫ್ ಆಗಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ.

    ಯುವ ಸಮೂಹವೇ ಹೆಚ್ಚಾಗಿ ಡೇಟಿಂಗ್ ಆ್ಯಪ್ ಕ್ರೇಜ್‍ಗೆ ಒಳಗಾಗಿದ್ದಾರೆ. ಯಾರು, ಏನು ಅನ್ನೋದು ಗೊತ್ತಿಲ್ಲದೇ, ಪಾಶ್ಚಾತ್ಯ ಸಂಸ್ಕೃತಿ ಪ್ರಭಾವಕ್ಕೆ ಯುವ ಜನ ಒಳಗಾಗಿ ಈ ಡೇಟಿಂಗ್ ಕ್ರೇಜ್ ಹೆಚ್ಚು ಮಾಡಿಕೊಂಡಿದ್ದಾರೆ.

    ಬೆಂಗಳೂರಿನಲ್ಲಿ ಎಲ್ಲಾ ರಾಜ್ಯದ, ಹಲವು ದೇಶಗಳ ಜನ ವಾಸ ಮಾಡುತ್ತಾರೆ. ಅವರು ಈ ಆ್ಯಪ್‍ಗಳ ಮೂಲಕ ರಿಲೇಶನ್‍ಶಿಪ್‍ಗಾಗಿ ಹುಡುಕಾಟ ಮಾಡುತ್ತಿರುತ್ತಾರೆ. ಹೀಗಾಗಿಯೇ ಬೆಂಗಳೂರು 2ನೇ ಸ್ಥಾನಕ್ಕೆ ಬರಲು ಪ್ರಮುಖ ಕಾರಣ ಇರಬಹುದು ಎಂದು ಆ್ಯಪ್ ತಜ್ಞರು ಹೇಳುತ್ತಾರೆ.

    ಈ ಡಿಜಿಟಲ್ ಯುಗದಲ್ಲಿ ಎಲ್ಲಕ್ಕೂ ಆ್ಯಪ್‍ಗಳು ಬಂದುಬಿಟ್ಟಿವೆ. ಯಾವುದೇ ವಿಷಯಕ್ಕೂ ಆ್ಯಪ್ ಇಲ್ಲ ಎನ್ನುವ ಹಾಗಿಲ್ಲ. ಯುವ ಜನ ಮುಖ ಪರಿಚಯ ಇಲ್ಲದವರ ಸ್ನೇಹ ಮಾಡಿ ಸಿನಿಮಾಗಳ ರೀತಿ ಕನಸು ಕಾಣುತ್ತಿರುತ್ತಾರೆ. ಇದು ಒಂದು ಮಟ್ಟಕ್ಕಿದ್ದರೆ ಪರವಾಗಿಲ್ಲ ಆದರೆ ಆ್ಯಪ್‍ನಲ್ಲೇ ಬದುಕಿದ್ರೆ ಪಕ್ಕಾ ಡೆಂಜರ್ ಎಂದು ಜನ ಮಾತನಾಡುತ್ತಿದ್ದಾರೆ.

    ಬೆಂಗಳೂರು ಬೇರೆ ವಿಷಯಗಳಲ್ಲಿ ಟಾಪ್ ಬಂದರೆ ಖುಷಿಯಾಗುತ್ತೆ. ಆದರೆ ಈ ಆ್ಯಪ್ ಬಳಕೆಗಳನ್ನು ಕಡಿಮೆ ಮಾಡಿದರೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು ಎನ್ನುವುದು ಎಲ್ಲರ ಆಶಯ.

  • ಯುವತಿಗೆ ಬಲವಂತವಾಗಿ ಮುತ್ತು ಕೊಟ್ಟ – ಜೊತೆಯಲ್ಲಿದ್ದ ಯುವಕನ ಮೇಲೆ ಹಲ್ಲೆ

    ಯುವತಿಗೆ ಬಲವಂತವಾಗಿ ಮುತ್ತು ಕೊಟ್ಟ – ಜೊತೆಯಲ್ಲಿದ್ದ ಯುವಕನ ಮೇಲೆ ಹಲ್ಲೆ

    -ಮೂವರು ಆರೋಪಿಗಳು ಅರೆಸ್ಟ್

    ಶಿಮ್ಲಾ: ಯುವಕರ ತಂಡವೊಂದು ಯುವತಿಗೆ ಬಲವಂತವಾಗಿ ಮುತ್ತು ಕೊಟ್ಟು ಆಕೆಯ ಜೊತೆಯಲ್ಲಿದ್ದ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ಹಿಮಾಚಲ ಪ್ರದೇಶದ ಕಾಂಗಡಾ ಘಾಟ್‍ನಲ್ಲಿ ನಡೆದಿದ್ದು, ಇದೀಗ ಆ ವಿಡಿಯೋ ವೈರಲ್ ಆಗುತ್ತಿದೆ.

    ಈ ಘಟನೆ ಪಾಲಂಪುರದಲ್ಲಿ ನಡೆದಿದ್ದು, ವಿಡಿಯೋದಲ್ಲಿ ಯುವಕನೊಬ್ಬ ಇಬ್ಬರು ಯುವತಿಯರ ಜೊತೆ ರೈಲು ಹಳಿ ಮೇಲೆ ನಡೆದುಕೊಂಡು ಹೋಗುತ್ತಿರುತ್ತಾರೆ. ಈ ವೇಳೆ ಗುಂಪೊಂದು ಅಲ್ಲಿಗೆ ಬಂದು ಯುವಕನ ಮೇಲೆ ಹಲ್ಲೆ ನಡೆಸುತ್ತಾರೆ. ಗುಂಪಿನಲ್ಲಿದ್ದ ಯುವಕನೊಬ್ಬ ಈ ಸಮಯವನ್ನು ಬಳಸಿಕೊಂಡು ಯುವತಿಗೆ ಬಲವಂತವಾಗಿ ಮುತ್ತು ನೀಡಿದ್ದಾನೆ.

    ಯುವಕನ ಮೇಲೆ ಹಲ್ಲೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ತನ್ನ ಜೊತೆಗಿದ್ದವನಿಗೆ ಓಡಿ ಹೋಗುತ್ತಿದ್ದ ಮತ್ತೊಬ್ಬ ಯುವತಿಯನ್ನು ಹಿಡಿಯುವಂತೆ ಆದೇಶ ನೀಡುತ್ತಾನೆ. ತನ್ನನ್ನು ಹಿಡಿಯಲು ಬಂದ ವ್ಯಕ್ತಿಯನ್ನು ನೋಡಿ ಹೆದರಿದ ಯುವತಿ ಜೋರಾಗಿ ಕಿರುಚಿಕೊಂಡು ಓಡಲು ಪ್ರಯತ್ನಿಸುತ್ತಾಳೆ.

    ಈ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಎಸ್‍ಎಚ್‍ಒ ಶ್ಯಾಮ್ ಲಾಲ್, ಆರೋಪಿಗಳನ್ನು ಬಂಧಿಸಿದ್ದು, ಶುಕ್ರವಾರ ಕೋರ್ಟಿಗೆ ಹಾಜರುಪಡಿಸುತ್ತೇವೆ. ಸದ್ಯ ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಈ ಬಗ್ಗೆ ಇನ್ನು ತನಿಖೆ ನಡೆಸುತ್ತಿರುವ ಕಾರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ನೀಡಲು ಆಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋದಲ್ಲಿ ಕಾಣಿಸಿಕೊಂಡ ಯುವಕನ ಅಂಗಡಿ ಪಂಚ್‍ರುಕಿಯಲ್ಲಿ ಇದೆ. ಮೊದಲು ಪೊಲೀಸರು ಆ ಯುವಕನನ್ನು ವಿಚಾರಣೆ ನಡೆಸಿದ್ದಾರೆ. ಬಳಿಕ ಆತ ತನ್ನ ಇಬ್ಬರು ಸ್ನೇಹಿತರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

  • ಗಂಭೀರವಾಗಿ ಗಾಯಗೊಂಡು ನರಳಾಡ್ತಿದ್ದ ಕೋತಿಗೆ ಯುವಕರಿಂದ ಚಿಕಿತ್ಸೆ

    ಗಂಭೀರವಾಗಿ ಗಾಯಗೊಂಡು ನರಳಾಡ್ತಿದ್ದ ಕೋತಿಗೆ ಯುವಕರಿಂದ ಚಿಕಿತ್ಸೆ

    ದಾವಣಗೆರೆ: ಗಂಭೀರವಾಗಿ ಗಾಯಗೊಂಡು ನರಳಾಡುತ್ತಿದ್ದ ಕೋತಿಗೆ ಯುವಕರ ತಂಡ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದಲ್ಲಿ ನಡೆದಿದೆ.

    ಹನಗವಾಡಿ ಗ್ರಾಮದ ಆಟೋ ಕೆಂಚಪ್ಪ ಎಂಬವರ ಮನೆಯ ಮೇಲೆ ಕೋತಿ ಬಂದು ಕುಳಿತಿತ್ತು. ಈ ವೇಳೆ ಅದರ ಬೆನ್ನಿನ ಮೇಲೆ ಗಂಭೀರ ಗಾಯಗಳಾಗಿದ್ದು, ಗಾಯಕ್ಕೆ ಹುಳಗಳು ಸಹ ಬಿದ್ದಿದ್ದವು. ಮೂಕವೇದನೆ ಅನುಭವಿಸುತ್ತಿದ್ದ ಕೋತಿಯನ್ನು ನೋಡಿದ ಗ್ರಾಮದ ಯುವಕರು ಅದನ್ನು ಹಿಡಿದು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

    ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಪಶು ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದು, ಯುವಕರು ತಮ್ಮ ಸ್ವಂತ ಹಣದಲ್ಲಿ ಕೋತಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಇನ್ನು ಎರಡು ದಿನಗಳಲ್ಲಿ ಕೋತಿ ಚೇತರಿಕೆ ಆಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಕೋತಿಯನ್ನು ರಕ್ಷಣೆ ಮಾಡಿ ಚಿಕಿತ್ಸೆ ಕೊಡಿಸುತ್ತಿರುವ ಯುವಕರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಬೆಣ್ಣೆಹಳ್ಳ ಪ್ರವಾಹಕ್ಕೆ ಕೊಚ್ಚಿ ಹೋದ್ರು ನಾಲ್ವರು

    ಬೆಣ್ಣೆಹಳ್ಳ ಪ್ರವಾಹಕ್ಕೆ ಕೊಚ್ಚಿ ಹೋದ್ರು ನಾಲ್ವರು

    – ಇಬ್ಬರ ರಕ್ಷಣೆ, ಇನ್ನಿಬ್ಬರು ನಾಪತ್ತೆ

    ಗದಗ: ಭಾರೀ ಮಳೆಯಿಂದ ಮತ್ತೆ ಬೆಣ್ಣೆಹಳ್ಳದಲ್ಲಿ ಪ್ರವಾಹ ಉಂಟಾಗಿದ್ದು, ಹಳ್ಳ ದಾಟುವಾಗ ನಾಲ್ವರು ಯುವಕರು ಕೊಚ್ಚಿಹೋಗಿದ್ದರು. ಅವರಲ್ಲಿ ಇಬ್ಬರನ್ನು ರಕ್ಷಣೆ ಮಾಡಲಾಗಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ.

    ಜಿಲ್ಲೆಯ ರೋಣ ತಾಲೂಕಿನ ಮಾಳವಾಡ ಗ್ರಾಮದ ಬಳಿ ಈ ಘಟನೆ ನಡೆದಿದೆ. ನರಗುಂದ ತಾಲೂಕಿನ ಹದ್ಲಿ ಗ್ರಾಮದ ಕಳಸಪ್ಪ(30), ಈರಣ್ಣ(15), ಅಮೃತ್ ಹಾಗೂ ಇನ್ನೋರ್ವ ಯುವಕ ಮಾಳವಾಡ ಗ್ರಾಮದ ಬಳಿ ಬೆಣ್ಣೆಹಳ್ಳ ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು. ಅವರಲ್ಲಿ ಈರಪ್ಪ ಹಾಗೂ ಅಮೃತ್‍ನನ್ನು ಸ್ಥಳೀಯರು ಹಾಗೂ ಪೊಲೀಸರು ಸೇರಿ ರಕ್ಷಣೆ ಮಾಡಿದ್ದಾರೆ. ಆದರೆ ಉಳಿದ ಇಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಪೊಲೀಸರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಇತ್ತ ನಾಪತ್ತೆಯಾದ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಇತ್ತ ಮಲಪ್ರಭಾ ಹಾಗೂ ಬೆಣ್ಣೆಹಳ್ಳ ಪ್ರವಾಹದ ಅಬ್ಬರಕ್ಕೆ ಹೊಳೆಆಲೂರ ನಿಂದ ಹೊಳೆಹಡಗಲಿ, ಬಸರಕೋಡ-ಬಾದಾಮಿ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಛಿದ್ರಗೊಂಡಿದೆ. ಸುಮಾರು ನೂರಾರು ಮೀಟರ್‍ನಷ್ಟು ರಸ್ತೆ ಕಿತ್ತುಹೋಗಿದೆ. ನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು, ರೈತರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಇತ್ತ ರಸ್ತೆಯಿಲ್ಲದೆ ಅತ್ತ ವಾಹನ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ.

    ಈ ರಸ್ತೆಯಲ್ಲಿ ರಾತ್ರಿ ಸಂಚರಿಸುವ ಪ್ರಯಾಣಿಕರು ಬಹಳ ಜಾಗೃತೆಯಿಂದ ಸಂಚರಿಸಬೇಕಿದೆ. ಸ್ವಲ್ಪ ಯಾಮಾರಿದರೂ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ರಸ್ತೆಯಲ್ಲಿ ಟಂಟಂ ವಾಹನ ಬರಲು ಹರಸಾಹಸ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ, ಆದಷ್ಟು ಬೇಗ ರಸ್ತೆ ಸರಿಪಡಿಸಬೇಕೆಂದು ಸ್ಥಳೀಯರು ಮನವಿ ಮಾಡಿದ್ದರು.

  • ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ

    ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ

    ಹುಬ್ಬಳ್ಳಿ: ನಿಮ್ಮ ತಂದೆ- ತಾಯಿ ದರ್ಗಾಕ್ಕೆ ಕರೆದುಕೊಂಡು ಬಾ ಅಂತಾ ಹೇಳಿದ್ದಾರೆ ಎಂದು ಪುಸಲಾಯಿಸಿ ಕರೆದುಕೊಂಡು ಹೋಗಿ ಅಪ್ತಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳಿಯ ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ತನ್ನ ಅಜ್ಜಿಯ ಮನೆಯಲ್ಲಿದ್ದ 14 ವರ್ಷದ ಬಾಲಕಿಯನ್ನು ಬೈಕಿನಲ್ಲಿ ಬಂದ ಯುವಕನೊಬ್ಬ ನಿಮ್ಮ ತಂದೆ-ತಾಯಿ ಅಲ್ತಾಫ್ ನಗರದ ದರ್ಗಾದಲ್ಲಿ ಇದ್ದಾರೆ. ನಿನ್ನನ್ನು ಕರೆದುಕೊಂಡು ಬಾ ಎಂದು ಹೇಳಿದ್ದಾರೆ ಎಂದು ನಂಬಿಸಿ ಬೈಕಿನಲ್ಲಿ ಕರೆದುಕೊಂಡು ಹೋಗಿದ್ದಾನೆ.

    ಈ ವೇಳೆ ಯುವಕನ ಬೈಕಿಗೆ ಇಬ್ಬಾಲಿಸಿದ ಆಟೋದಲ್ಲಿದ್ದ ನಾಲ್ವರು ಯುವಕರು ಅಂಚಟಗೇರಿ ಕ್ರಾಸ್‍ವರೆಗೂ ಕರೆದುಕೊಂಡು ಹೋಗಿದ್ದಾರೆ. ಬಳಿಕ ಅಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ಕಿರುಕುಳ ನೀಡಿದ ಬಳಿಕ ಆಕೆಯನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ.

    ಘಟನೆಯಿಂದ ತೀವ್ರ ಅಸ್ವಸ್ಥಗೊಂಡ ಬಾಲಕಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

  • ಹೊಟ್ಟೆನೋವೆಂದು ಬಂದ ಯುವಕರಿಗೆ ಪ್ರಗ್ನೆನ್ಸಿ ಟೆಸ್ಟ್ ಮಾಡಿಸೆಂದ ವೈದ್ಯ

    ಹೊಟ್ಟೆನೋವೆಂದು ಬಂದ ಯುವಕರಿಗೆ ಪ್ರಗ್ನೆನ್ಸಿ ಟೆಸ್ಟ್ ಮಾಡಿಸೆಂದ ವೈದ್ಯ

    ರಾಂಚಿ: ಹೊಟ್ಟೆನೋವೆಂದು ಆಸ್ಪತ್ರೆಗೆ ಬಂದಿದ್ದ ಇಬ್ಬರು ಯುವಕರಿಗೆ ಚಿಕಿತ್ಸೆ ಕೊಡಬೇಕಾಗಿದ್ದ ವೈದ್ಯ ಸರಿಯಾಗಿ ತಪಾಸಣೆ ಮಾಡದೇ, ಪ್ರಗ್ನೆನ್ಸಿ ಟೆಸ್ಟ್ ಮಾಡಿಸಿಕೊಂಡು ಬನ್ನಿ ಎಂದು ಬರೆದು ಕೊಟ್ಟಿರುವ ಆರೋಪ ಕೇಳಿಬಂದಿದ್ದು, ಈಗ ಬಾರಿ ಚರ್ಚೆಯಾಗುತ್ತಿದೆ.

    ಜಾರ್ಖಂಡಿನ ಚತ್ರ್ ಜಿಲ್ಲೆಯ ಸಿಮಾರಿಯಾದ ರೆಫರೆಲ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್ 1 ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಮುಕೇಶ್ ವಿರುದ್ಧ ಯುವಕರಿಗೆ ಪ್ರಗ್ನೆನ್ಸಿ ಟೆಸ್ಟ್ ಮಾಡಿಸಿ ಎಂದು ಹೇಳಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

    ಗೋಪಾಲ್ ಗಂಜು(22) ಹಾಗೂ ಕಾಮೇಶ್ವರ ಗಂಜು(26) ಅವರಿಗೆ ವೈದ್ಯ ಪ್ರಗ್ನೆನ್ಸಿ ಟೆಸ್ಟ್ ಮಾಡಿಸಿಕೊಂಡು ಬನ್ನಿ ಎಂದಿದ್ದಾರೆ ಎನ್ನಲಾಗಿದೆ. ಇಬ್ಬರು ಯುವಕರು ಹಲವು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಆದ್ದರಿಂದ ಯುವಕರನ್ನು ಅವರ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಮುಕೇಶ್ ಅವರಿಬ್ಬರಿಗೂ ಕಾಟಾಚಾರಕ್ಕೆ ತಪಾಸಣೆ ಮಾಡಿ, ಎಚ್‍ಐವಿ, ಎಚ್‍ಬಿಎ, ಎಚ್‍ಸಿವಿ, ಸಿಬಿಸಿ, ಎಚ್‍ಎಚ್2 ಮತ್ತು ಎಎನ್‍ಸಿ ಪರೀಕ್ಷೆ ಮಾಡಿಕೊಂಡು ಬನ್ನಿ ಎಂದು ಚೀಟಿ ಬರೆದು ಕೊಟ್ಟಿದ್ದರು. ಜೊತೆಗೆ ಪ್ರಗ್ನೆನ್ಸಿ ಪರೀಕ್ಷೆ ಕೂಡ ಮಾಡಿಸಿಕೊಂಡು ಬರಲು ಬರೆದಿದ್ದಾರೆ.

    ಇವರಿಬ್ಬರು ವೈದ್ಯರು ಬರೆದುಕೊಟ್ಟಿದ್ದ ಚೀಟಿಯನ್ನು ಹಿಡಿದುಕೊಂಡು ಲ್ಯಾಬ್‍ಗೆ ಹೋದಾಗ ಅಲ್ಲಿನ ಸಿಬ್ಬಂದಿ ಚೀಟಿ ನೋಡಿ ದಂಗಾಗಿದ್ದಾರೆ. ಪ್ರಗ್ನೆನ್ಸಿ ಪರೀಕ್ಷೆ ನಿಮಗಲ್ಲ ಮಹಿಳೆಯರಿಗೆ ಮಾಡುವುದು ಎಂದು ತಿಳಿಸಿದ್ದಾರೆ. ಬಳಿಕ ಯುವಕರು ಯಾವ ಪರೀಕ್ಷೆಯನ್ನೂ ಕೂಡ ಮಾಡಿಸದೆ ಮನೆಗೆ ವಾಪಸ್ ಬಂದಿದ್ದಾರೆ.

    ನಂತರ ನಡೆದ ಘಟನೆ ಬಗ್ಗೆ ನಮ್ಮ ಊರಿನಲ್ಲಿ ಹೇಳಿದ್ದಾರೆ. ಈ ಸುದ್ದಿ ಒಬ್ಬರ ಬಾಯಿಂದ ಇನ್ನೊಬ್ಬರಿಗೆ ತಿಳಿದು ಇಡೀ ಜಾರ್ಖಂಡಿನಲ್ಲೇ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಆದ್ರೆ ವೈದ್ಯ ಮಾತ್ರ ಇದು ಸುಳ್ಳುಸುದ್ದಿ. ನನ್ನ ಹೆಸರನ್ನು ಹಾಳು ಮಾಡಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಇದೊಂದು ಪಿತೂರಿ, ನಾನು ತಪ್ಪು ಮಾಡಿಲ್ಲ ಎಂದು ಆರೋಪವನ್ನು ತಳ್ಳಿಹಾಕಿದ್ದಾರೆ.

  • ವ್ಯಾಪಾರ ಆಗಿಲ್ಲ ಸ್ವಾಮಿ ಆಮೇಲೆ ಹಣ ಕೊಡ್ತೀನಿ- ಕಾಡಿಬೇಡಿದ್ರೂ ವೃದ್ಧನ ತಕ್ಕಡಿಯನ್ನೇ ಹೊತ್ತೊಯ್ದ ಕಿರಾತಕರು

    ವ್ಯಾಪಾರ ಆಗಿಲ್ಲ ಸ್ವಾಮಿ ಆಮೇಲೆ ಹಣ ಕೊಡ್ತೀನಿ- ಕಾಡಿಬೇಡಿದ್ರೂ ವೃದ್ಧನ ತಕ್ಕಡಿಯನ್ನೇ ಹೊತ್ತೊಯ್ದ ಕಿರಾತಕರು

    ದಾವಣಗೆರೆ: ಜಕಾತಿ ಹಣ ನೀಡದಿದ್ದಕ್ಕೆ ಸೊಪ್ಪಿನ ವ್ಯಾಪಾರ ಮಾಡುತ್ತಿದ್ದ ವೃದ್ಧನ ತಕ್ಕಡಿ ತೆಗೆದುಕೊಂಡು ಹೋಗಿ ಯುವಕರು ದರ್ಪ ಮೆರೆದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ನಗರದ ಕೆ.ಆರ್ ಮಾರುಕಟ್ಟೆ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ವ್ಯಾಪಾರಿಗಳು ಹಾಗೂ ರೈತರು ತಮ್ಮ ತರಕಾರಿ ಮತ್ತಿತರ ಸಾಮಾಗ್ರಿಗಳನ್ನು ಮಾರಾಟ ಮಾಡಲು ಬಂದಿರುತ್ತಾರೆ. ಅಂತವರ ಬಳಿ ಪಾಲಿಕೆ ವತಿಯಿಂದ ನೆಲದ ಶುಲ್ಕವನ್ನು ಪಡೆಯಲು ಟೆಂಡರ್ ಪಡೆದಿರುತ್ತಾರೆ. ಆದರೆ ಕೆಲ ಟೆಂಡರ್ ದಾರರು ವ್ಯಾಪಾರಸ್ಥರ ಹಾಗೂ ರೈತರ ಮೇಲೆ ರೌಡಿಸಂ ಮಾಡುತ್ತಿದ್ದಾರೆ.

    ಯುವಕರ ಗುಂಪೊಂದು ವ್ಯಾಪಾರ ಮಾಡುತ್ತಿದ್ದ ವೃದ್ಧನೊಬ್ಬನ ಮೇಲೆ ದರ್ಪ ತೋರಿದೆ. ಅಲ್ಲದೆ ವ್ಯಾಪಾರ ಇನ್ನು ಆಗಿಲ್ಲ ಆಮೇಲೆ ಜಕಾತಿ ಹಣ ನೀಡುತ್ತೇವೆ ಎಂದು ಪರಿಪರಿಯಾಗಿ ಕೇಳಿಕೊಂಡರು ತಕ್ಕಡಿಯನ್ನು ತೆಗೆದುಕೊಂಡು ದರ್ಪ ಮೆರೆದಿದ್ದಾರೆ. ನಂತರ ವೃದ್ಧ ನಿಸ್ಸಾಹಯಕತನದಿಂದ ಹಣವನ್ನು ನೀಡಿ ಕಳುಹಿಸಿದ್ದಾರೆ.

    ಜಕಾತಿ ಶುಲ್ಕವನ್ನು ವ್ಯಾಪಾರವಾದ ನಂತರ ಪಡೆಯಬೇಕು. ಅದನ್ನು ಬಿಟ್ಟು ವ್ಯಾಪಾರಕ್ಕಿಂತ ಮೊದಲೇ ಹಣ ವಸೂಲಿ ಮಾಡಲು ಯುವಕರ ಗುಂಪು ದರ್ಪ ಮೆರೆದಿದೆ. ಯುವಕರು ರೌಡಿಸಂ ಮಾಡುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.