Tag: YS Jagan mohan Reddy

  • ಜಗನ್ ಸಹೋದರಿ ಭಾಷಣದ ವೇಳೆ ಜೇನು ದಾಳಿ – ಟವೆಲ್ ಬೀಸಿದ ಕಾರ್ಯಕರ್ತರು

    ಜಗನ್ ಸಹೋದರಿ ಭಾಷಣದ ವೇಳೆ ಜೇನು ದಾಳಿ – ಟವೆಲ್ ಬೀಸಿದ ಕಾರ್ಯಕರ್ತರು

    ಹೈದರಾಬಾದ್: ಆಂಧ್ರಪ್ರದೇಶ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಸಹೋದರಿ ಹಾಗೂ ಯುವಜನ ಶ್ರಮಿಕ ರೈತತೆಲಂಗಾಣ ಪಕ್ಷ ಮುಖ್ಯಸ್ಥೆ ವೈ.ಎಸ್. ಶರ್ಮಿಳಾ ಅವರು ತೆಲಂಗಾಣ ರಾಜ್ಯಾದ್ಯಂತ ಪ್ರಜಾ ಪ್ರಸ್ಥಾನಂ ಪಾದಯಾತ್ರೆ ಮಾಡುವ ವೇಳೆ ಜೇನು ನೋಣಗಳು ದಾಳಿ ನಡೆಸಿದ ವೀಡಿಯೋ ವೈರಲ್ ಆಗುತ್ತಿದೆ.

    ಶರ್ಮಿಳಾ ದುರ್ಷಗಾನಿಪಲ್ಲಿ ಗ್ರಾಮದ ಮರದ ಕೆಳಗೆ ನಿಂತು ಜನರೊಂದಿಗೆ ಸಂವಾದ ನಡೆಸುತ್ತಿದ್ದರು. ಈ ವೇಳೆ ಅದೇ ಮರಕ್ಕೆ ಗೂಡುಕಟ್ಟಿದ ಜೇನು ದಾಳಿ ನಡೆಸಿದೆ. ಒಮ್ಮೆಲೆ ಜೇನಿನ ಶಬ್ದ ಕೇಳಿ ಅಲ್ಲಿ ನೆರೆದಿದ್ದವರೆಲ್ಲರೂ ಆತಂಕಕ್ಕೊಳಗಾಗಿದ್ದಾರೆ.

    ಆದರೆ ಶರ್ಮಿಳಾ ಅವರ ಭದ್ರತಾ ಸಿಬ್ಬಂದಿ ಎಚ್ಚರದಿಂದ ಅವರನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಶರ್ಮಿಳಾರನ್ನು ರಕ್ಷಿಸಲು ಅಲ್ಲಿದ್ದವರೆಲ್ಲ ಟವೆ ಲ್‍ಗಳನ್ನು ಬೀಸಿ, ಜೇನುನೊಣಗಳನ್ನು ದೂರ ಓಡಿಸಲು ಪ್ರಯತ್ನಿಸಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಷದ ಕೆಲ ಕಾರ್ಯಕರ್ತರಿಗೆ ಜೇನು ಕಚ್ಚಿದೆ. ಇದನ್ನೂ ಓದಿ: 2025ರ ವೇಳೆಗೆ ಭಾರತದಲ್ಲಿ ತಲೆ ಎತ್ತಲಿವೆ 220 ವಿಮಾನ ನಿಲ್ದಾಣ: ಸಿಂಧಿಯಾ

    ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್)ವನ್ನು ಖಂಡಿಸಿ ಮತ್ತು ಸಿಎಂ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ಬಂಗಾರು ತೆಲಂಗಾಣ ತರುವುದಾಗಿ ಭರವಸೆ ನೀಡಿ ನ್ಯಾಯ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಶರ್ಮಿಳಾ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಗಣಿಗಾರಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ ರಚನೆ – ಸುಪ್ರೀಂಕೋರ್ಟ್

  • ಆಂಧ್ರದ ಕಡಪಾದಲ್ಲಿ ಪ್ರವಾಹ – ಮೂವರು ಸಾವು, 30 ಮಂದಿ ನಾಪತ್ತೆ

    ಆಂಧ್ರದ ಕಡಪಾದಲ್ಲಿ ಪ್ರವಾಹ – ಮೂವರು ಸಾವು, 30 ಮಂದಿ ನಾಪತ್ತೆ

    ಹೈದರಾಬಾದ್: ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ಇಂದು ಹಠಾತ್ ಪ್ರವಾಹ ಸಂಭವಿಸಿದ್ದು, ಮೂವರು ಸಾವನ್ನಪ್ಪಿ, 30 ಮಂದಿ ನಾಪತ್ತೆಯಾಗಿದ್ದಾರೆ.

    ಅಣೆಕಟ್ಟು ಒಡೆದು ಚೆಯ್ಯೆರು ನದಿ ಉಕ್ಕಿ ಹರಿಯುವ ಮೂಲಕ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ. ನಂದಲೂರಿನ ಸ್ವಾಮಿ ಆನಂದ ದೇವಸ್ಥಾನವೂ ಮುಳುಗಡೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.

    ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಹೋರಾಟದಿಂದ ಮೃತಪಟ್ಟ ರೈತರಿಗೆ 25 ಲಕ್ಷ ರೂಪಾಯಿ ಪರಿಹಾರ ಕೊಡಿ: ಸಿದ್ದರಾಮಯ್ಯ

    ತಿರುಮಲದಲ್ಲಿ ಕೂಡ ಭಾರೀ ಪ್ರವಾಹ ಉಂಟಾಗಿದ್ದು, ನೂರಾರು ಯಾತ್ರಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ತಿರುಮಲ ಬೆಟ್ಟದ ಮುಖ್ಯ ದೇವಾಲಯಕ್ಕೆ ಹೊಂದಿಕೊಂಡಿರುವ ನಾಲ್ಕು ಬೀದಿಗಳು ಜಲಾವೃತಗೊಂಡಿದ್ದು, ಪ್ರವಾಹದ ನೀರು ನೆಲದಿಂದ ಎತ್ತರಕ್ಕೆ ತುಂಬಿದ್ದು, ಜನರು ಓಡಾಡಲು ಸಹ ಪರದಾಡುತ್ತಿರುವುದನ್ನು ಕಾಣಬಹುದಾಗಿದೆ. ತಿರುಮಲ ಬೆಟ್ಟದಲ್ಲಿ ಹಲವಾರು ಮರಗಳು ನೆಲಕ್ಕುರುಳಿದ್ದು, ಪಾಪವಿನಾಶನಂ ಮತ್ತು ಶ್ರೀವಾರಿ ಪಾದಾಲು ಮುಂತಾದ ಸ್ಥಳಗಳಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ.

    ಇದೀಗ ಎನ್‍ಡಿಆರ್‌ಎಫ್ ಮತ್ತು ಎಸ್‍ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಕ್ರಮ ಕೈಗೊಂಡಿವೆ. ಇನ್ನೂ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದ್ದು, ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಹೆಚ್ಚಿಸುವಂತೆ ನಿರ್ದೇಶಿಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಮಗುವಿನ ಮುದ್ದಾದ ಫೋಟೋ ಶೇರ್ ಮಾಡಿದ ನಟಿ

  • ಟಿಟಿಡಿ ಸದಸ್ಯರಾಗಿ ಎಸ್.ಆರ್.ವಿಶ್ವನಾಥ್ ನೇಮಕ

    ಟಿಟಿಡಿ ಸದಸ್ಯರಾಗಿ ಎಸ್.ಆರ್.ವಿಶ್ವನಾಥ್ ನೇಮಕ

    ಬೆಂಗಳೂರು: ಆಂಧ್ರಪ್ರದೇಶದ ಪ್ರತಿಷ್ಠಿತ ತಿರುಮಲ ತಿರುಪತಿ ಟ್ರಸ್ಟ್​ಗೆ ಕರ್ನಾಟಕದ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಸದಸ್ಯರನ್ನಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

    ಯಲಹಂಕ ಕ್ಷೇತ್ರದ ಶಾಸಕರು ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಎಸ್.ಆರ್. ವಿಶ್ವನಾಥ್ ಅವರನ್ನು ಈ ಉನ್ನತ ಹುದ್ದೆಗೆ ನೇಮಕ ಮಾಡಲಾಗಿದೆ. ಈ ಹಿಂದೆ ಬೆಂಗಳೂರಿನ ತಿರುಮಲ ತಿರುಪತಿ ಟ್ರಸ್ಟ್ ನ ಸ್ಥಳೀಯ ಸಲಹಾ ಮಂಡಳಿಯ ಉಪಾಧ್ಯಕ್ಷರಾಗಿ ವಿಶ್ವನಾಥ್ ಅವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಸಫಾರಿಗರಿಗೆ ದರ್ಶನ ಕೊಟ್ಟ ಬಂಡೀಪುರದ ಸುಂದರಿ!

    ವಿಶ್ವನಾಥ್ ಅವರು ತಮ್ಮನ್ನು ಈ ಹುದ್ದೆಗೆ ನೇಮಕ ಮಾಡಿರುವುದಕ್ಕೆ ಜಗನ್ ಮೋಹನ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಮತ್ತು ಆಂಧ್ರಪ್ರದೇಶ ಸರ್ಕಾರದ ಪಂಚಾಯತ್ ರಾಜ್ ಮತ್ತು ಗಣಿ ಸಚಿವ ರಾಮಚಂದ್ರರೆಡ್ಡಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಈ ಹುದ್ದೆಗೆ ನನ್ನನ್ನು ನೇಮಕ ಮಾಡಿರುವುದಕ್ಕೆ ಹರ್ಷವೆನಿಸಿದೆ. ತಿರುಮಲ ಕ್ಷೇತ್ರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾಧಿಗಳಿಗೆ ಸೇವೆ ಸಲ್ಲಿಸುವ ಅದೃಷ್ಟ ನನ್ನದಾಗಿದೆ ಎಂದು ಎಸ್. ಆರ್ ವಿಶ್ವನಾಥ್ ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ದೆಹಲಿಗೆ ಹೋಗಬೇಕು – ಸದನದಲ್ಲಿ ಸ್ವಾರಸ್ಯಕರ ಚರ್ಚೆ

  • ಕ್ವಾರಂಟೈನ್‍ನಲ್ಲಿ ಇರುವವರಿಗೆ ಸಿಎಂ ಜಗನ್ ಮೋಹನ್ ‘ಕೈ ತುತ್ತು’

    ಕ್ವಾರಂಟೈನ್‍ನಲ್ಲಿ ಇರುವವರಿಗೆ ಸಿಎಂ ಜಗನ್ ಮೋಹನ್ ‘ಕೈ ತುತ್ತು’

    ಅಮರಾವತಿ: ಕ್ವಾರಂಟೈನ್‍ನಲ್ಲಿ ಇರುವ ಕೊರೊನಾ ಶಂಕಿತರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ‘ಕೈ ತುತ್ತು’ (ಗೋರು ಮುದ್ದ) ಮೆನು ನೀಡುತ್ತಿದ್ದಾರೆ.

    ವಿಜಯವಾಡದ ಕ್ವಾರಂಟೈನ್ ಕೇಂದ್ರದಲ್ಲಿ ಇರುವ ಕೊರೊನಾ ಸೋಂಕು ಶಂಕಿರಿಗೆ ಬಾಳೆಹಣ್ಣು, ಮೋಸಂಬಿ, ಒಣ ದ್ರಾಕ್ಷಿ, ಗೋಡಂಬಿ, ಪಿಸ್ತಾ, ಬಾದಾಮಿ ಖರ್ಜೂರ ಮತ್ತು ಮೊಟ್ಟೆಗಳನ್ನು ನೀಡಲಾಗುತ್ತಿದೆ. ಇದೇ ರೀತಿ ಕೈ ತುತ್ತು ಮೆನುವನ್ನು ರಾಜ್ಯದಾದ್ಯಂತದ ಎಲ್ಲಾ ಕ್ವಾರಂಟೈನ್ ಕೇಂದ್ರಗಳಲ್ಲಿ ಅನುಸರಿಸಬೇಕು ಎಂದು ಜಗನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಗುರುವಾರ ಬೆಳಗ್ಗೆ ವೇಳೆಗೆ ಒಂದೇ ದಿನದಲ್ಲಿ ಆಂಧ್ರಪ್ರದೇಶದಲ್ಲಿ 43 ಜನರಿಗೆ ಕೊರೊನಾ ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 348ಕ್ಕೆ ಏರಿಕೆ ಕಂಡಿದೆ. ಇಲ್ಲಿವರೆಗೂ 6 ಮಂದಿ ಚೇತರಿಸಿಕೊಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ.

  • ಗೋದಾವರಿಯಲ್ಲಿ ಮುಳುಗಿದ ಬೋಟ್ – 13 ಮಂದಿ ಸಾವು, 40 ಜನ ನಾಪತ್ತೆ

    ಗೋದಾವರಿಯಲ್ಲಿ ಮುಳುಗಿದ ಬೋಟ್ – 13 ಮಂದಿ ಸಾವು, 40 ಜನ ನಾಪತ್ತೆ

    ಹೈದರಾಬಾದ್: ಆಂಧ್ರ ಪ್ರದೇಶದ ಗೋದಾವರಿ ನದಿಯಲ್ಲಿ ಇಂದು ಮಧ್ಯಾಹ್ನ 63 ಪ್ರಯಾಣಿಕರಿದ್ದ ಪ್ರವಾಸಿ ಬೋಟ್ ಅಪಘಾತಕ್ಕೀಡಾಗಿ, 13 ಜನರು ಸಾವನ್ನಪ್ಪಿದ್ದು, 40 ಮಂದಿ ನಾಪತ್ತೆಯಾಗಿದ್ದಾರೆ.

    ಪೂರ್ವ ಗೋದಾವರಿ ಜಿಲ್ಲೆಯ ದೇವಿಪಟ್ನಂ ಮಂಡಲದ ಕಾಚುಲೂರು ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೋಟ್ ನಲ್ಲಿ ಒಟ್ಟು 63 ಜನರಿದ್ದು, ಅದರಲ್ಲಿ 50 ಪ್ರವಾಸಿಗರು ಮತ್ತು 13 ಮಂದಿ ಬೋಟ್ ಸಿಬ್ಬಂದಿ ಇದ್ದಾರೆ. ಗೋದಾವರಿ ನದಿಯ ಬಳಿಯಿರುವ ಪಾಪಿಕೊಂಡಲು ಬೆಟ್ಟಗಳನ್ನು ನೋಡಲು ಪ್ರವಾಸಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

    ಈ ಹಡಗಿನಲ್ಲಿದ್ದ 63 ಜನರ ಪೈಕಿ 13 ಮಂದಿಯ ಮೃತ ದೇಹ ಸಿಕ್ಕಿದ್ದು, ಇನ್ನೂ ಸುಮಾರು 40 ಮಂದಿ ನದಿಯಲ್ಲಿ ಕಾಣೆಯಾಗಿದ್ದಾರೆ. ಮೂಲಗಳ ಪ್ರಕಾರ, ದೋಣಿಯಲ್ಲಿದ್ದ ಎಲ್ಲರಿಗೂ ಲೈಫ್ ಜಾಕೆಟ್‍ಗಳು ಇದ್ದು, ಅವರಲ್ಲಿ ಕೆಲವರು ಧರಿಸಿಲ್ಲ ಎಂದು ವರದಿಯಾಗಿದೆ. ವಿಶಾಖಪಟ್ಟಣಂ ಮತ್ತು ಗುಂಟೂರಿನಿಂದ ಎರಡು ಎನ್‍ಡಿಆರ್‍ಎಫ್ ತಂಡಗಳು ಬಂದಿದ್ದು, ಸ್ಥಳೀಯ ಪೊಲೀಸರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಚರಣೆ ಮಾಡುತ್ತಿದ್ದಾರೆ.

    ಗೋದಾವರಿ ನದಿಗೆ ಪ್ರವಾಹದ ಸಮಯದಲ್ಲಿ ಸುಮಾರು 5 ಲಕ್ಷ ಕ್ಯೂಸೆಕ್ ನೀರು ಹರಿದು ಬಂದಿತ್ತು. ಅದ್ದರಿಂದ ಅಲ್ಲಿನ ಪ್ರವಾಸೋದ್ಯಮ ಅಧಿಕಾರಿಗಳು ಶನಿವಾರದವರೆಗೆ ನದಿಯಲ್ಲಿ ಪ್ರವಾಸಿಗರ ಸೇವೆಯನ್ನು ನಿಲ್ಲಿಸಿತ್ತು. ಆದರೆ ಇತ್ತೀಚಿಗೆ ನೀರಿನ ಪ್ರಮಾಣ ಕಡಿಮೆಯಾದ ಕಾರಣ ಇಂದು ಬೋಟ್‍ನಲ್ಲಿ ಹೋಗಲು ಅನುಮತಿ ನೀಡಿದ್ದರು ಎಂದು ವರದಿಯಾಗಿದೆ.

    ಈ ವಿಚಾರದ ತಿಳಿದು ತಕ್ಷಣ ಅಧಿಕಾರಿಗಳೊಂದಿಗೆ ಮಾತನಾಡಿದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗಮೋಹನ್ ರೆಡ್ಡಿ, ತಕ್ಷಣವೇ ರಕ್ಷಣಾ ಕಾರ್ಯಚರಣೆ ಕೈಗೊಳ್ಳುವಂತೆ ಸೂಚಿಸಿ, ಮೃತವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ಹಣವನ್ನು ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ನೌಕಪಡೆ ಮತ್ತು ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆ ನಡೆಸುವಂತೆ ಆದೇಶ ನೀಡಿದ್ದಾರೆ.