Tag: YST

  • ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?

    ಸಿಎಂ ಪುತ್ರನ ಎಡವಟ್ಟು – ಯತೀಂದ್ರ ಹೇಳಿದ ಮಹದೇವ್ ಯಾರು?

    ಬೆಂಗಳೂರು: ಪುತ್ರ ಯತೀಂದ್ರ (Yathindra) ತಂದೆ ಸಿದ್ದರಾಮಯ್ಯನವರ (Siddaramaiah) ಜೊತೆ ಮಾತನಾಡಿದಾಗ ಕೇಳಿ ಬಂದ ಮಹದೇವ್‌ (Mahadev) ಅವರು ಮುಖ್ಯಮಂತ್ರಿಯವರ ಹತ್ತಿರ ಸಂಬಂಧಿ ಆಗಿದ್ದಾರೆ.

    ಮೂಲತಃ ಸಬ್ ರಿಜಿಸ್ಟ್ರಾರ್ ಆಗಿರುವ ಮಹದೇವ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜನೆ ಆಗಿದ್ದಾರೆ.

    ಮಹದೇವ ಅವರು ಯತೀಂದ್ರ ಅವರ ಆಪ್ತರಾಗಿದ್ದು, ಸಿದ್ದರಾಮಯ್ಯ ಸಿಎಂ ಆಗುತ್ತಿದ್ದಂತೆ ಸಬ್ ರಿಜಿಸ್ಟ್ರಾರ್ ಮಹದೇವ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಯತೀಂದ್ರ ಅವರು ನೇಮಿಸಿದ್ದಾರೆ ಎನ್ನಲಾಗುತ್ತಿದೆ. ಈಗ ಮಹದೇವ್ ಎಂದು ಕರೆಯಲಾಗುತ್ತಿದ್ದರೂ ಅವರ ಮೂಲ ಹೆಸರು ಮಾದೇ ಸ್ವಾಮಿ.  ಇದನ್ನೂ ಓದಿ: ಹಳಿಯಲ್ಲಿ ಕಬ್ಬಿಣದ ರಾಡ್, ದೊಡ್ಡ ಮರದ ದಿಮ್ಮಿ – ಮೈಸೂರಿನಲ್ಲಿ ತಪ್ಪಿತು ಭಾರೀ ರೈಲು ದುರಂತ

     

    ಏನಿದು ವಿವಾದ?
    ಬುಧವಾರ ಯತೀಂದ್ರ ಅವರು ವರುಣ (Varuna) ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು.

    ಈ ವೇಳೆ ಅವರು ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ತಾನು ನೀಡಿದ ಪಟ್ಟಿಯ ಬಗ್ಗೆ ಮಾತುಕತೆ ಮಾಡಿದ್ದಾರೆ.

    ಆರಂಭದಲ್ಲಿ ಅಪ್ಪ ಹೇಳಿ ಅಂತಾ ಯತೀಂದ್ರ ಸಿದ್ದರಾಮಯ್ಯ ಮಾತು ಶುರುಮಾಡಿದ್ದಾರೆ. ಈ ವೇಳೆ “ವಿವೇಕಾನಂದ ಯಾರು?” ಎಂದು ಸಿಎಂ ಪ್ರಶ್ನೆ ಕೇಳಿದ್ದಾರೆ. ಆಗ ಯತೀಂದ್ರ, ಆ ಮಹದೇವ್‌ ಅವರಿಗೆ‌ ಪೋನ್ ನೀಡುವಂತೆ ಸಿಎಂಗೆ ಹೇಳುತ್ತಾರೆ.

    ಮಹದೇವ್‌ಗೆ ಫೋನ್ ಕೊಟ್ಟ ತಕ್ಷಣ ಅವರನ್ನು ತರಾಟೆ ತೆಗೆದುಕೊಂಡ ಯತೀಂದ್ರ, ನಾನು ಕೊಟ್ಟಿದ್ದು ಬಿಟ್ಟು ಬೇರೆ ಯಾವುದು ಅದು ಅಂತಾ ಪ್ರಶ್ನಿಸಿದ್ದಾರೆ. ನನಗೆ ಅದೆಲ್ಲಾ ಗೊತ್ತಿಲ್ಲ‌. ನಾನು ಕೊಟ್ಟಿರುವ ನಾಲ್ಕು, ಐದು ಮಾತ್ರ ಮಾಡುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

    ಸಿಎಂ ಸಿದ್ದರಾಮಯ್ಯನವರ (CM Siddaramaiah) ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್‌ಟಿ (YST) ಸಂಗ್ರಹಿಸುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತಂದೆಯ ಜೊತೆ ಮಾತನಾಡುತ್ತಿರುವ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಜೊತೆಗೆ ಮತ್ತೆ ವಿಪಕ್ಷಗಳ ಟೀಕೆಗೆ ಗುರಿಯಾಗಿದೆ.

  • ಹಲೋ ಅಪ್ಪ, ನಾನು ಕೊಟ್ಟಿರೋದು ನಾಲ್ಕೋ ಐದೋ ಅಷ್ಟು ಮಾತ್ರ ಮಾಡಿ – ಯತೀಂದ್ರ ಮಾತಿನ ಮರ್ಮ ಏನು?

    ಹಲೋ ಅಪ್ಪ, ನಾನು ಕೊಟ್ಟಿರೋದು ನಾಲ್ಕೋ ಐದೋ ಅಷ್ಟು ಮಾತ್ರ ಮಾಡಿ – ಯತೀಂದ್ರ ಮಾತಿನ ಮರ್ಮ ಏನು?

    ಮೈಸೂರು: ಸಿಎಂ ಸಿದ್ದರಾಮಯ್ಯನವರ (CM Siddaramaiah) ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಹೆಚ್ಚಾಗಿದೆ, ವೈಎಸ್‌ಟಿ (YST) ಸಂಗ್ರಹಿಸುತ್ತಿದ್ದಾರೆ ಎಂಬ ವಿಪಕ್ಷಗಳ ಆರೋಪದ ಬೆನ್ನಲ್ಲೇ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತಂದೆಯ ಜೊತೆ ಮಾತನಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಬುಧವಾರ ಯತೀಂದ್ರ ಅವರು ವರುಣ (Varuna) ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು.

     

    ಈ ವೇಳೆ ಅವರು ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ತಾನು ನೀಡಿದ ಪಟ್ಟಿಯ ಬಗ್ಗೆ ಮಾತುಕತೆ ಮಾಡಿದ್ದಾರೆ.

    ಆರಂಭದಲ್ಲಿ ಅಪ್ಪ ಹೇಳಿ ಅಂತಾ ಯತೀಂದ್ರ ಸಿದ್ದರಾಮಯ್ಯ ಮಾತು ಶುರುಮಾಡಿದ್ದಾರೆ. ಈ ವೇಳೆ “ವಿವೇಕಾನಂದ ಯಾರು?” ಎಂದು ಸಿಎಂ ಪ್ರಶ್ನೆ ಕೇಳಿದ್ದಾರೆ. ಆಗ ಯತೀಂದ್ರ, ಆ ಮಹದೇವ ಅವರಿಗೆ‌ ಪೋನ್ ನೀಡುವಂತೆ ಸಿಎಂಗೆ ಹೇಳುತ್ತಾರೆ.

    ಮಹದೇವ್‌ಗೆ ಫೋನ್ ಕೊಟ್ಟ ತಕ್ಷಣ ಅವರನ್ನು ತರಾಟೆ ತೆಗೆದುಕೊಂಡ ಯತೀಂದ್ರ, ನಾನು ಕೊಟ್ಟಿದ್ದು ಬಿಟ್ಟು ಬೇರೆ ಯಾವುದು ಅದು ಅಂತಾ ಪ್ರಶ್ನಿಸಿದ್ದಾರೆ. ನನಗೆ ಅದೆಲ್ಲಾ ಗೊತ್ತಿಲ್ಲ‌. ನಾನು ಕೊಟ್ಟಿರುವ ನಾಲ್ಕು, ಐದು ಮಾತ್ರ ಮಾಡುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

    ಕಳೆದ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರದಿಂದ ನಿಂತು ಶಾಸಕರಾಗಿ ಆಯ್ಕೆ ಆಗಿದ್ದರು. ಆದರೆ ಈ ಬಾರಿ ಈ ಕ್ಷೇತ್ರವನ್ನು ತಂದೆಗೆ ಬಿಟ್ಟು ಕೊಟ್ಟಿದ್ದರು.

     

  • ಫಾರಿನ್‍ನಿಂದ ಬಂದ ಹೆಚ್‍ಡಿಕೆಯಿಂದ ಮಿಡ್‍ನೈಟ್ ಬಾಂಬ್?: ಮೆಸ್‍ನಲ್ಲಿ ನಡೆದ ಸಭೆಯಲ್ಲಿ YST!

    ಫಾರಿನ್‍ನಿಂದ ಬಂದ ಹೆಚ್‍ಡಿಕೆಯಿಂದ ಮಿಡ್‍ನೈಟ್ ಬಾಂಬ್?: ಮೆಸ್‍ನಲ್ಲಿ ನಡೆದ ಸಭೆಯಲ್ಲಿ YST!

    ಬೆಂಗಳೂರು: ಎರಡು ವಾರ ರಾಜ್ಯ ರಾಜಕೀಯ ಗುದ್ದಾಟಕ್ಕೆ ಬಿದ್ದಿದ್ದ ಬ್ರೇಕ್ ತೆರವುಗೊಂಡಿದೆ ಅನ್ಸುತ್ತೆ. ಹೆಚ್‍ಡಿಕೆ (HD Kumaraswamy) ಫಾರಿನ್ ಟೂರ್ ನಿಂದ ವಾಪಸ್ ಬರ್ತಿದ್ದಿದ್ದಂತೆ ಚಾರ್ಜ್‌ಶೀಟ್ ಪಾಲಿಟಿಕ್ಸ್ ಶುರುವಾಗಿದೆ. ಕುಮಾರಸ್ವಾಮಿ ವರ್ಸಸ್ ಸಿದ್ದರಾಮಯ್ಯ ನಡುವೆ ಅಸಲಿ ವಾರ್ ಶುರುವಾಗಿದೆ. ಪೊಲೀಸ್ ಮೆಸ್‍ನಲ್ಲಿ ವೈಎಸ್‍ಟಿ (YST) ಹಾಜರ್ ಬಾಂಬ್ ಹೆಚ್‍ಡಿಕೆ ಫ್ರೆಶ್ ಫೈಲ್ಸ್ ಹಾಕಿದ್ದಾರೆ.

    ರಾಜ್ಯ ರಾಜಕಾರಣದಲ್ಲಿ 15 ದಿನ ಯುದ್ಧ ವಿರಾಮ. ಫಾರಿನ್‍ನಿಂದ ಬರ್ತಿದ್ದಂತೆ `ಕುಮಾರ’ ಸಮರ ಭರ್ಜರಿಯಾಗಿಯೇ ಶುರುವಾಗಿದೆ. ಸಿಎಂ, ಪರಂ ಸಭೆಯಲ್ಲಿ `ವೈಎಸ್‍ಟಿ ಟ್ಯಾಕ್ಸ್ ಏಕೆ ಇದ್ದರು..? ಗರುಡಾ ಮಾಲ್ ಬಳಿಯ ಪೊಲೀಸ್ ಮೆಸ್‍ನಲ್ಲಿ ಸಭೆ ನಡೆದಿತ್ತು ಎಂದು ಹೆಚ್‍ಡಿಕೆ ಫ್ರೆಶ್ ಫೈಲ್ಸ್ ಬಿಟ್ಟಿದ್ದಾರೆ. ಹಲವು ಪೊಲೀಸ್ ಇನ್ಸ್ಪೆಕ್ಟರ್‍ಗಳ ವರ್ಗಾವಣೆಗೆ ತಡೆ ಬೆನ್ನಲ್ಲೇ ಹೆಚ್‍ಡಿಕೆ ವೈಎಸ್‍ಟಿ ರಹಸ್ಯ ಬಾಂಬ್ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ ಪೊಲೀಸ್ ವರ್ಗಾವಣೆ ಸಂಬಂಧ ಸಿಎಂ, ಪರಂ ರಹಸ್ಯ ಸಭೆ ನಡೆಸಿದ್ರು. ರಹಸ್ಯ ಸಭೆ ನಡೆಸಿರುವುದನ್ನ ಸ್ವತಃ ಗೃಹ ಸಚಿವ ಪರಮೇಶ್ವರ್ ಒಪ್ಪಿಕೊಂಡಿದ್ರು. ಆದರೆ ಆ ಸಭೆ ನಡೆದಿದ್ದು ಪೊಲೀಸ್ ಮೆಸ್‍ನಲ್ಲಿ, ವರ್ಗಾವಣೆ ಸಂಬಂಧಿತ ಸಭೆಯಲ್ಲಿ ಗೃಹ ಸಚಿವರು ಚರ್ಚೆ ಮಾಡುವಾಗ ವೈಎಸ್‍ವಿ ಟ್ಯಾಕ್ಸ್ (YST Tax) ನವರು ಏಕೆ ಇದ್ರು..? ಎಂದು ಹೆಚ್‍ಡಿಕೆ ಖಾರವಾಗಿ ಪ್ರಶ್ನಿಸಿದ್ದಾರೆ. ಇದೇ ವೇಳೆ ನಾವು ಕುಟುಂಬ ಸಮೇತ ಹೋಗಿದ್ದು ಯುರೋಪ್ ಪ್ರವಾಸಕ್ಕೆ. ಸರ್ಕಾರ ಬೀಳಿಸಲು ಹೋಗಿದ್ವಿ ಅಂತಾ ಸೃಷ್ಟಿಸಿದ್ದಾರೆ. 19 ಸೀಟ್ ಗೆದ್ದ ನಮ್ ಬಗ್ಗೆ ಭಯ ಎಷ್ಟಿರಬಹುದೆಂದು ಡಿಕೆಶಿಗೂ ಟಾಂಗ್ ಕೊಟ್ಟಿದ್ದಾರೆ.

    ಈ ನಡುವೆ ಹೆಚ್‍ಡಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ (Siddaramaih) ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಹೀ ಇಸ್ ಆಲ್ವೇಸ್ ಹಿಟ್ ಅಂಡ್ ರನ್ ಎಂದು ವ್ಯಂಗ್ಯವಾಡಿದ್ದಾರೆ. ಪೆನ್ ಡ್ರೈವ್ ಬಗ್ಗೆ ಹೇಳಿದರು. ಜೇಬಲ್ಲಿ ಇಟ್ಕೊಂಡ್ರೆ ಗೊತ್ತಾಗುತ್ತಾ..? ಅದರಲ್ಲಿ ಏನಾದರು ಇದ್ದರೆ ತಾನೆ ಬಿಡೋಕೆ..? ವೈಎಸ್ ಟಿ ಟ್ಯಾಕ್ಸ್ ಹಂಗಂದ್ರೆ ಏನು…!? ಅದೆಲ್ಲಾ ಏನು ಗೊತ್ತಿಲ್ಲ ಎಂದು ಟಾಂಗ್ ಕೊಟ್ಟರು. ಇನ್ನೊಂದೆಡೆ ಗೃಹ ಸಚಿವ ಪರಮೇಶ್ವರ್ (Parameshwar) ಕೂಡ ಹೆಚ್‍ಡಿಕೆಗೆ ಕೌಂಟರ್ ಆಟ್ಯಾಕ್ ಮಾಡಿ ಅವರು ಸಿಎಂ ಆಗಿದ್ದಾಗ ನಾನು ಗೃಹ ಮಂತ್ರಿ ಆಗಿದ್ದೆ, ಆಗ ಯಾವ ರೀತಿ ಸೂಚನೆ ಕೊಡ್ತಿದ್ರು ಅನ್ನೋದು ನನಗೆ ಗೊತ್ತಿಲ್ವಾ..? ನಾನು ಅದನ್ನ ಯಾವತ್ತು ಹೇಳಿಲ್ಲ, ಅದನ್ನ ಹೇಳೋದು ಸರಿ ಕಾಣಿಸಿಲ್ಲ ಎಂದು ಪರಂ ಟಾಂಗ್ ಕೊಟ್ಟರು. ಇನ್ನೊಂದೆಡೆ ಅಣ್ಣ ಹೇಳ್ತಿರಬೇಕು.. ತಮ್ಮ ಕೇಳ್ತಿರಬೇಕು..! ಬ್ರದರ್‍ಗೆ ಬಂಡೆ ಸಾಫ್ಟ್ ಪಂಚ್..! ಕೊಟ್ಟಿದ್ದಾರೆ. ಐ ಆಮ್ ಎ ಗೌವರ್ನಮೆಂಟ್ ಐ ಸೇ..! ಎಂದು ಹೆಚ್‍ಡಿಕೆ ವಿರುದ್ಧ ಡಿಕೆಶಿ ಚೆಸ್‍ಗೇಮ್ ಚಾಲೂ..! ಮಾಡಿದ್ದಾರೆ.

    ಒಟ್ಟಿನಲ್ಲಿ ಹೆಚ್‍ಡಿಕೆ ಫಾರಿನ್ ನಿಂದ ವಾಪಸ್ ಆದ ಬಳಿಕ ಮತ್ತೊಂದು ಚಾಜ್ರ್ಶೀಟ್ ಪಾಲಿಟಿಕ್ಸ್ ಜೋರಾಗಿದ್ದು, ಏಟಿಗೆ ಎದಿರೇಟು ಎಲ್ಲಿಗೆ ಹೋಗಿ ನಿಲ್ಲುತ್ತೋ..? ಕಾದುನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂ ಕಚೇರಿಯಲ್ಲಿ ಕೆಲಸ ಆಗಬೇಕಾದ್ರೆ 30 ಲಕ್ಷ ಲಂಚ ಕೊಡಬೇಕು: ಕುಮಾರಸ್ವಾಮಿ

    ಸಿಎಂ ಕಚೇರಿಯಲ್ಲಿ ಕೆಲಸ ಆಗಬೇಕಾದ್ರೆ 30 ಲಕ್ಷ ಲಂಚ ಕೊಡಬೇಕು: ಕುಮಾರಸ್ವಾಮಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಕಚೇರಿಯಲ್ಲಿ ಲಂಚ ಕೊಡದೇ ಕೆಲಸ ಆಗೋದಿಲ್ಲ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಕುಮಾರಸ್ವಾಮಿ, ಸಿಎಂ ಕಚೇರಿಯಲ್ಲಿ ಲಂಚ ಕೊಡದೇ ಯಾವುದೇ ಕೆಲಸ ಆಗಲ್ಲ. ಶಾಸಕರು ಕೊಟ್ಟ ಪತ್ರ ತೆಗೆದುಕೊಂಡು ಹೋದರು ಕೆಲಸ ಮಾಡಿಕೊಡದೇ ಲಂಚಕ್ಕೆ ಡಿಮ್ಯಾಂಡ್ ಮಾಡುತ್ತಾರೆ ಎಂದು ಆರೋಪ ಹೊರಿಸಿದರು.

    ಕೇವಲ ಶಾಸಕರ ಪತ್ರ ತೆಗೆದುಕೊಂಡು ಬಂದರೆ ಆಗಲ್ಲ. ಅದರ ಜೊತೆ 30 ಲಕ್ಷ ಹಣ ತರಬೇಕು ಎಂದು ಅಲ್ಲಿನ ಸಿಬ್ಬಂದಿ, ಅಧಿಕಾರಿಗಳು ಡಿಮ್ಯಾಂಡ್ ಮಾಡುತ್ತಾರೆ. 30 ಲಕ್ಷ ಹಣ ತಂದರೆ ಮಾತ್ರ ಕೆಲಸ ಎಂದು ಸಿಎಂ ಕಚೇರಿಯಲ್ಲಿ ಹೇಳುತ್ತಾರೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದಿಂದ ಸಿಂಡಿಕೇಟ್ ವರ್ಗಾವಣೆ ದಂಧೆ: ಕುಮಾರಸ್ವಾಮಿ ಬಾಂಬ್‌

    ಯಾವ ಶಾಸಕರ ಪತ್ರ ಅಂತ ಹೇಳದ ಕುಮಾರಸ್ವಾಮಿ ಸಿಎಂ ಕಚೇರಿಯಲ್ಲಿ ಲಂಚ ಕೊಟ್ಟರೆ ಮಾತ್ರ ಕೆಲಸ ಆಗುತ್ತಿದೆ ಎನ್ನೋ ಮೂಲಕ ಮತ್ತೆ ವೈಎಸ್‌ಟಿ ಟ್ಯಾಕ್ಸ್ ಆರೋಪ ಮಾಡಿದರು. ಇದನ್ನೂ ಓದಿ: ಸಿನಿಮಾ ಡೈಲಾಗ್ ಹೊಡೆದುಕೊಂಡ್ರೆ ರಾಜಕಾರಣ ನಡೆಯಲ್ಲ: ಪ್ರದೀಪ್ ಈಶ್ವರ್‌ಗೆ ಸುಧಾಕರ್ ಟಾಂಗ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕದಲ್ಲಿ YST ಜೊತೆ VST ಟ್ಯಾಕ್ಸ್ , ಇದು VST ಸರ್ಕಾರ: ರವಿಕುಮಾರ್ ಕಿಡಿ

    ಕರ್ನಾಟಕದಲ್ಲಿ YST ಜೊತೆ VST ಟ್ಯಾಕ್ಸ್ , ಇದು VST ಸರ್ಕಾರ: ರವಿಕುಮಾರ್ ಕಿಡಿ

    ಬೆಂಗಳೂರು: ಕಾಂಗ್ರೆಸ್ (Congress) ಪಾಲಿಗೆ ಕರ್ನಾಟಕ ಸರ್ಕಾರ (Karnataka Government) ಖಜಾನೆಯಾಗಿದೆ. ರಾಜ್ಯದಲ್ಲಿ ಬರೀ ವೈಎಸ್‍ಟಿ (YST) ಅಲ್ಲ, ವಿಎಸ್‍ಟಿಯೂ (VST) ಇದೆ ಎಂದು ಪರಿಷತ್‌ ಬಿಜೆಪಿ (BJP) ಸದಸ್ಯ ರವಿಕುಮಾರ್‌ (Ravikumar) ಸರ್ಕಾರದ ವಿರುದ್ಧ ಕಿಡಿಕಾರಿದರು.

    ರಾಜ್ಯದಲ್ಲಿ ವೇಣುಗೋಪಾಲ್-ಸಿದ್ದರಾಮಯ್ಯ ಟ್ಯಾಕ್ಸ್ (Venugopal-Siddaramaiah Tax) ಇದೆ. ವಿಎಸ್‍ಟಿಯನ್ನು ವೇಣುಗೋಪಾಲ್ ಸಂಗ್ರಹಿಸುತ್ತಾರೆ. ಇದು ವಿಎಸ್‍ಟಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ಸಮ್ಮಿಶ್ರ ಸರ್ಕಾರದಲ್ಲಿ ನನಗೆ ವರ್ಗಾವಣೆ ಮಾಡೋ ಅಧಿಕಾರವೇ ಇರಲಿಲ್ಲ – ಹೆಚ್‌ಡಿಕೆ

    ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಅಧಿಕೃತವಾಗಿ ಮತ್ತು ಅನಧಿಕೃತವಾಗಿ ವಸೂಲಿ ಮಾಡುವ ತೆರಿಗೆ ಕುರಿತು ಕುಮಾರಸ್ವಾಮಿ ಅವರಿಗೆ ಗೊತ್ತಿದೆ. ಸಿದ್ದರಾಮಯ್ಯನವರು ದೇವೇಗೌಡರ, ಕುಮಾರಸ್ವಾಮಿಯವರ ಜೊತೆಗೆ ಇದ್ದವರು. ಜೆಡಿಎಸ್‍ನಲ್ಲಿ (JDS) ಹಿಂದೆ ಇದ್ದವರು. ಹಾಗಾಗಿ ಸಿದ್ದರಾಮಯ್ಯ ಏನೆಂದು ಅವರಿಗೆ ಚೆನ್ನಾಗಿ ಗೊತ್ತಿದೆ. ವೈಎಸ್‍ಟಿ ವಿಷಯ ತಿಳಿಸಿದ ಕುಮಾರಸ್ವಾಮಿಯವರಿಗೆ ಅಭಿನಂದನೆಗಳು ಎಂದು ತಿಳಿಸಿದರು.

    ಸಿದ್ದರಾಮಯ್ಯರು ಹಾಕಿದ ತೆರಿಗೆಯನ್ನು ಯತೀಂದ್ರರು (Yathindra Siddaramaiah) ವಸೂಲಿ ಮಾಡುತ್ತಿದ್ದಾರೆ. ಮೈಸೂರು, ಹುಬ್ಬಳ್ಳಿ ಮತ್ತಿತರ ಕಡೆ ಹಾಗೂ ರಾಜ್ಯದ ವಿವಿಧೆಡೆ ಇದರ ಕುರಿತು ಮಾತನಾಡುತ್ತಿದ್ದಾರೆ. ವೈಎಸ್‍ಟಿ, ವಿಎಸ್‍ಟಿ ಬಗ್ಗೆ ಜನರು ಜಾಗೃತರಾಗಬೇಕೆಂದು ಅವರು ಮನವಿ ಮಾಡಿದರು.

     
    ಇಲ್ಲಿ ಸಿದ್ದರಾಮಯ್ಯರು ವಿಧಿಸಿದ ತೆರಿಗೆಯನ್ನು ವೇಣುಗೋಪಾಲ್ ಡ್ರಾ ಮಾಡುತ್ತಾರೆ. ಕಾಂಗ್ರೆಸ್ ಪಾಲಿಗೆ ಕರ್ನಾಟಕ ಸರಕಾರ ಖಜಾನೆ ಇದ್ದಂತೆ ಎಂದು ಟೀಕಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]