Tag: YTPS

  • ರಾಯಚೂರು | YTPS ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ – ಕೋಟ್ಯಂತರ ಮೌಲ್ಯದ ಯಂತ್ರಗಳು ಅಗ್ನಿಗಾಹುತಿ

    ರಾಯಚೂರು | YTPS ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ – ಕೋಟ್ಯಂತರ ಮೌಲ್ಯದ ಯಂತ್ರಗಳು ಅಗ್ನಿಗಾಹುತಿ

    ರಾಯಚೂರು: ಜಿಲ್ಲೆಯ ಯರಮರಸ್ ಬಳಿಯ ವೈಟಿಪಿಎಸ್ (YTPS) ವಿದ್ಯುತ್ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಕೆನ್ನಾಲಿಗೆಗೆ ಕೋಟ್ಯಂತರ ರೂ. ಮೌಲ್ಯದ ಯಂತ್ರಗಳು ಸುಟ್ಟು ಭಸ್ಮವಾಗಿದೆ.

    ಕಲ್ಲಿದ್ದಲು ಸಾಗಣೆ ವೇಳೆ ಬೆಂಕಿ ಕಾಣಿಸಿಕೊಂಡು ಕನ್ವೇರ್ ಬೆಲ್ಟ್ ಸುಟ್ಟಿದೆ. ಪರಿಣಾಮ ಕೋಟ್ಯಂತರ ರೂ. ಮೌಲ್ಯದ ಯಂತ್ರಗಳು ಸುಟ್ಟು ಕರಕಲಾಗಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಎಚ್ಚೆತ್ತ ಸಿಬ್ಬಂದಿ ಹೊರಗೆ ಬಂದಿದ್ದರಿಂದ, ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇದನ್ನೂ ಓದಿ: ದಾವಣಗೆರೆ | ಇಬ್ಬರು ಬೈಕ್ ಕಳ್ಳರ ಬಂಧನ – 16.52 ಲಕ್ಷ ಮೌಲ್ಯದ 30 ಬೈಕ್ ವಶಕ್ಕೆ

    ಬೆಂಕಿ ದುರಂತಕ್ಕೆ ವೈಟಿಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕಾರ್ಮಿಕರು ಆರೋಪಿಸಿದ್ದು, ನಿರ್ಲಕ್ಷ್ಯ ತೋರಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

  • ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವೈಟಿಪಿಎಸ್‌ನ 1,500 ಗುತ್ತಿಗೆ ನೌಕರರಿಂದ ಉಗ್ರ ಹೋರಾಟ

    ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವೈಟಿಪಿಎಸ್‌ನ 1,500 ಗುತ್ತಿಗೆ ನೌಕರರಿಂದ ಉಗ್ರ ಹೋರಾಟ

    ರಾಯಚೂರು: ಜಿಲ್ಲೆಯ ಯರಮರಸ್‌ನಲ್ಲಿರುವ ವೈಟಿಪಿಎಸ್ ವಿದ್ಯುತ್ ಕೇಂದ್ರದ 1,500 ಗುತ್ತಿಗೆ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೆಲಸಕ್ಕೆ ಗೈರಾಗಿ ಪ್ರತಿಭಟನೆ ನಡೆಸಿದ್ದಾರೆ.

    ಸಂಬಳ ಹೆಚ್ಚಳ, ಭತ್ತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಮುಂದಾಗಿದ್ದು, ವಿದ್ಯುತ್ ಕೇಂದ್ರದ 1500 ಗುತ್ತಿಗೆ ಕಾರ್ಮಿಕರು ಪಾಳೆಯ ಪ್ರಕಾರ ಕೆಲಸಕ್ಕೆ ಗೈರಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಾಗಿ ಪ್ರತಿಭಟನೆ ವಿದ್ಯುತ್ ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಬೀಳಲಿದೆ.ಇದನ್ನೂ ಓದಿ: ಜೋರಾಯ್ತು ಛತ್ರಿ ಪಾಲಿಟಿಕ್ಸ್ – ನನಗೆ ಅಧಿಕಾರದ ಮದ, ಕಮ್ಮಿ ಮಾಡಲಿ : ಡಿಕೆಶಿ ತಿರುಗೇಟು

    ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಭೀತಿ ನಡುವೆಯೇ ವಿದ್ಯುತ್ ಕೇಂದ್ರದ ಕಾರ್ಮಿಕರು ಹೋರಾಟಕ್ಕೆ ಮುಂದಾಗಿದ್ದಾರೆ. ಹೋರಾಟ ಮುಂದುವರೆದರೆ ವಿದ್ಯುತ್ ಉತ್ಪಾದನೆಗೆ ಖಂಡಿತ ಬ್ರೇಕ್ ಬೀಳಲಿದೆ. ವಿದ್ಯುತ್ ಕೇಂದ್ರದ ವಿವಿಧ ವಿಭಾಗಗಳ ಕಾರ್ಮಿಕರು, ನೌಕರರು ಕೆಲಸಕ್ಕೆ ಗೈರಾಗಿದ್ದಾರೆ. ಗುತ್ತಿಗೆ ಪಡೆದಿರುವ ಪವರ್ ಮೇಕ್ ಕಂಪನಿ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಳವನ್ನ ಸರಿಯಾಗಿ ಕೊಡದೇ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

    1,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ವೈಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಸದ್ಯ ಕೇವಲ 839 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಈಗಾಗಲೇ ತಾಂತ್ರಿಕ ಸಮಸ್ಯೆ, ದುರಸ್ತಿ ಕಾರಣಕ್ಕೆ ರಾಜ್ಯದಲ್ಲಿ ನಡೆದಿರುವ ಲೋಡ್ ಶೆಡ್ಡಿಂಗ್ ಈ ಹೋರಾಟದಿಂದ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

    ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿರುವ ಹೊತ್ತಲ್ಲೇ ಆರ್‌ಟಿಸಿಎಲ್ ಹಾಗೂ ವೈಟಿಪಿಎಸ್ ಗುತ್ತಿಗೆ ಕಾರ್ಮಿಕ ಸಂಘದ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಹೋರಾಟ ನಡೆದಿದೆ. ಕಾರ್ಮಿಕರು ಹಾಗೂ ನೌಕರರ ಹೋರಾಟದಿಂದ ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಸಾಧ್ಯತೆಯಿದೆ.ಇದನ್ನೂ ಓದಿ: ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಹೇಗೆ ಮಾಡಬೇಕು ಅನ್ನೋದು ನನಗೆ ಗೊತ್ತಿದೆ: ಡಿಕೆಶಿ

  • PUBLiC TV Impact | ಕೃಷ್ಣಾ ನದಿಗೆ ಭೇಟಿ ನೀಡಿದ ಮಾಲಿನ್ಯ ನಿಯಂತ್ರಣ ಮಂಡಳಿ

    PUBLiC TV Impact | ಕೃಷ್ಣಾ ನದಿಗೆ ಭೇಟಿ ನೀಡಿದ ಮಾಲಿನ್ಯ ನಿಯಂತ್ರಣ ಮಂಡಳಿ

    – ಶೀಘ್ರವೇ ಆರ್‌ಟಿಪಿಎಸ್, ವೈಟಿಪಿಎಸ್‌ಗೆ ನೋಟಿಸ್

    ರಾಯಚೂರು: ರಾಯಚೂರಿನಲ್ಲಿ (Raichuru) ಕೃಷ್ಣಾ ನದಿಗೆ (Krishna River) ವಿದ್ಯುತ್ ಕೇಂದ್ರಗಳು ಎಗ್ಗಿಲ್ಲದೆ ರಾಸಾಯನಿಕ ವಸ್ತುಗಳನ್ನು ಹರಿಬಿಡುತ್ತಿವೆ. ಈ ಕುರಿತು ಪಬ್ಲಿಕ್ ಟಿವಿ ಸುದ್ದಿಯನ್ನು ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇದೀಗ ಅಧಿಕಾರಿಗಳು ವೈಟಿಪಿಎಸ್ ಹಾಗೂ ಆರ್‌ಟಿಪಿಎಸ್‌ಗೆ ನೋಟಿಸ್ ಕೊಡಲು ಮುಂದಾಗಿದ್ದಾರೆ.

    ಜಿಲ್ಲೆಯ ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಾದ ಆರ್‌ಟಿಪಿಎಸ್ ಹಾಗೂ ವೈಟಿಪಿಎಸ್ ಜಿಲ್ಲೆಯ ಹೆಮ್ಮೆ. ಆದರೆ ಇವುಗಳಿಂದ ಜಿಲ್ಲೆಯ ಜನರಿಗೆ ಯಾವುದೇ ಖುಷಿಯಿರಲಿಲ್ಲ. ಇದರಲ್ಲಿ ವಿದ್ಯುತ್ ಕೇಂದ್ರಗಳು ಜೀವಮಾರಕವಾಗಿರುವ ರಾಸಾಯನಿಕಯುಕ್ತ ತಳ ಬೂದಿಯನ್ನು ನೇರವಾಗಿ ಕೃಷ್ಣಾ ನದಿಗೆ ಹರಿಬಿಡುತ್ತಿದೆ. ಈ ಮೂಲಕ ಜನರ ಆರೋಗ್ಯ, ಜಾನುವಾರು, ಜಲಚರಗಳ ಜೀವದ ಜೊತೆ ಅಧಿಕಾರಿಗಳು ಆಟವಾಡುತ್ತಿದ್ದಾರೆ ಎಂದು ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು.ಇದನ್ನೂ ಓದಿ: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಸಂಸದ ಬಸವರಾಜ ಬೊಮ್ಮಾಯಿ

    ವಿದ್ಯುತ್ ಕೇಂದ್ರದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ, ಬೇಜವಾಬ್ದಾರಿತನದ ಬಗ್ಗೆ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿಗಳ ತಂಡ ಪರಿಶೀಲನೆಗೆ ಮುಂದಾಗಿದೆ. ಸ್ಥಳದಲ್ಲಿ ಸಂಗ್ರಹಿಸಿರುವ ನೀರಿನ ಮಾದರಿಗಳನ್ನ ಪ್ರಯೋಗಾಲಯಕ್ಕೆ ಕಳುಹಿಸಿದೆ. ಇಷ್ಟು ದೊಡ್ಡಮಟ್ಟದ ನಿರ್ಲಕ್ಷ್ಯ ಕಂಡು ಅಧಿಕಾರಿಗಳೇ ಅಚ್ಚರಿ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಜಿಲ್ಲಾ ಪರಿಸರ ಅಧಿಕಾರಿ ಪ್ರಕಾಶ್ ಮಾತನಾಡಿ, ಥರ್ಮಲ್ ಪವರ್ ಪ್ಲ್ಯಾಂಟ್‌ಗಳು ರೆಡ್ ಕೆಟಗರಿಗೆ ಬರುವುದರಿಂದ ಹಿರಿಯ ಅಧಿಕಾರಿಗಳಿಂದ ತನಿಖೆಗೆ ಪತ್ರ ಬರೆಯುತ್ತೇವೆ. ವಿದ್ಯುತ್ ಕೇಂದ್ರಗಳಿಗೆ ಕೂಡಲೇ ನೋಟಿಸ್ ನೀಡಿ ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ.

    ಸಂಗ್ರಹವಾಗುವ ದ್ರವರೂಪದ ತಳಬೂದಿಯನ್ನ ಸಮರ್ಪಕವಾಗಿ ನಿರ್ವಹಣೆ ಮಾಡದೇ ವಿದ್ಯುತ್ ಕೇಂದ್ರದ ಅಧಿಕಾರಿಗಳು ನೇರವಾಗಿ ನದಿಗೆ ಬಿಡುತ್ತಿದ್ದಾರೆ. ಇದೇ ನೀರನ್ನು ಜನ, ಜಾನುವಾರು ಕುಡಿಯುವುದರಿಂದ ಸ್ಲೋ ಪಾಯಿಸನ್ ಜನರ ದೇಹ ಸೇರುತ್ತಿದೆ. ಕೇವಲ ನೋಟಿಸ್‌ಗೆ ಸೀಮಿತವಾಗದೇ ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ದೇವೇಗೌಡರು ನನ್ನ ಸೊಕ್ಕು ಮುರಿಯುತ್ತೇನೆ ಎಂದಿದ್ದು ಸರಿಯೇ – ಜಮೀರ್‌ ಹೇಳಿಕೆಯನ್ನ ಖಂಡಿಸಿದ್ದಕ್ಕೆ ಸಿಎಂ ತಿರುಗೇಟು

  • ಆರ್‌ಟಿಪಿಎಸ್, ವೈಟಿಪಿಎಸ್‌ನಿಂದ ನದಿಗೆ ವಿಷಕಾರಿ ರಾಸಾಯನಿಕ ಬಿಡುಗಡೆ – ಕಲುಷಿತಗೊಂಡ ಕೃಷ್ಣೆಯ ಒಡಲು

    ಆರ್‌ಟಿಪಿಎಸ್, ವೈಟಿಪಿಎಸ್‌ನಿಂದ ನದಿಗೆ ವಿಷಕಾರಿ ರಾಸಾಯನಿಕ ಬಿಡುಗಡೆ – ಕಲುಷಿತಗೊಂಡ ಕೃಷ್ಣೆಯ ಒಡಲು

    ರಾಯಚೂರು: ಜಿಲ್ಲೆಯ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಹಾರುವ ಬೂದಿ ನಿರ್ವಹಣೆ ಕೊರತೆಯಿಂದ ಇಲ್ಲಿನ ಜನ ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ. ಗಾಳಿಯಲ್ಲಿ ತೇಲಿ ಬರುವ ಬೂದಿ ಸಮಸ್ಯೆ ಒಂದೆಡೆಯಾದರೆ, ದ್ರವರೂಪದ ಬೂದಿ ಸಂಗ್ರಹಣ ಹೊಂಡಗಳಿಂದ ಈಗ ಹೊಸ ಸಮಸ್ಯೆ ಎದುರಾಗಿದೆ. ಕೃಷ್ಣಾ ನದಿಯನ್ನೇ (Krishna River) ಮಾಲಿನ್ಯ ಮಾಡಲು ಹೊರಟಿರುವ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನ ನಾನಾ ಆರೋಗ್ಯ ಸಮಸ್ಯೆ ಎದುರಿಸುವಂತಾಗಿದೆ.

    ಜಿಲ್ಲೆಯ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಂದ ರಾಜ್ಯಕ್ಕೆ ಶೇ.45 ರಷ್ಟು ಪ್ರಮಾಣದ ವಿದ್ಯುತ್ ಸರಬರಾಜಾಗುತ್ತಿದೆ. ನಿಜ, ಆದರೆ ದೀಪದ ಕೆಳಗೆ ಕತ್ತಲು ಅನ್ನುವ ಹಾಗೇ ಇಡೀ ರಾಜ್ಯಕ್ಕೆ ಬೆಳಕು ನೀಡುವ ವಿದ್ಯುತ್ ಕೇಂದ್ರಗಳಾದ ಆರ್‌ಟಿಪಿಎಸ್ ಹಾಗೂ ವೈಟಿಪಿಎಸ್‌ನಿಂದ ಜಿಲ್ಲೆಯ ಜನ ನಾನಾ ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ಗಾಳಿಯಲ್ಲಿ ತೇಲಿ ನೇರವಾಗಿ ಮನುಷ್ಯರ ಶ್ವಾಸಕೋಶ ಸೇರುವ ಬೂದಿ ಸಮಸ್ಯೆ ಹಾಗೂ ದ್ರವ ರೂಪದ ತಳಬೂದಿಯನ್ನ ನೇರವಾಗಿ ಕೃಷ್ಣಾನದಿಗೆ ಹರಿಸುವ ಮೂಲಕ ಆರ್‌ಟಿಪಿಎಸ್ (RTPS) ಹಾಗೂ ವೈಟಿಪಿಎಸ್ (YTPS)  ಅಧಿಕಾರಿಗಳು ಜನರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಇದನ್ನೂ ಓದಿ: ಸಂಡೂರು ಉಪ ಚುನಾವಣೆ – ಮಾಸ್ಟರಿಂಗ್ ಕಾರ್ಯ ಪೂರ್ಣ

    ವಿದ್ಯುತ್ ಉತ್ಪಾದನೆಗಾಗಿ ಕಲ್ಲಿದ್ದಲು ಸುಟ್ಟಾಗ ಬೂದಿಯಾಗಿ ಬರುವ ಹಾರುವ ಬೂದಿ ನಾನಾ ರಾಸಾಯನಿಕ ಅಂಶಗಳನ್ನ ಹೊಂದಿರುತ್ತದೆ. ಇದಕ್ಕೆ ನೀರನ್ನ ಬೆರಸಿ ಹೊಂಡಕ್ಕೆ ಹರಿಸಲಾಗುತ್ತದೆ. ಈ ಹೊಂಡಗಳ ನಿರ್ವಹಣೆ ವೈಫಲ್ಯದಿಂದ ನಾನಾ ರಾಸಾಯನಿಕ ಪದಾರ್ಥಗಳ ಮಿಶ್ರಣವಾದ ಬೂದಿಯನ್ನ ನೇರವಾಗಿ ಕೃಷ್ಣಾ ನದಿಗೆ ಬಿಡಲಾಗುತ್ತಿದೆ. ಇದು ಜಲಚರಗಳಿಗೆ ಜೀವಕ್ಕೆ ಮಾರಕವಾಗಿದೆ. ಕೃಷ್ಣಾ ನದಿ ನೀರನ್ನೇ ರಾಯಚೂರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಕುಡಿಯಲು ಸರಬರಾಜು ಮಾಡುವುದರಿಂದ ಜನ ಈಗ ನೀರು ಕುಡಿಯಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.

    ನದಿ ಪಾತ್ರದ ದೇವಸುಗೂರು ಸೇರಿದಂತೆ ಹಲವು ಹಳ್ಳಿಗಳ ಜನ ಈ ವಿದ್ಯುತ್ ಕೇಂದ್ರಗಳಿಂದ ನೇರ ದುಷ್ಪಪರಿಣಾಮಗಳಿಗೆ ಆಗಾಗ ತುತ್ತಾಗುತ್ತಲೇ ಇದ್ದಾರೆ. ಈ ಹಿಂದೆಯೂ ಬೂದಿಯನ್ನು ನೇರವಾಗಿ ಕೃಷ್ಣಾನದಿಗೆ ಬಿಡಲಾಗಿತ್ತು. ಜನ ಮೈತುರಿಕೆ ಸೇರಿದಂತೆ ಚರ್ಮರೋಗಗಳಿಗೆ ತುತ್ತಾಗಿದ್ದರು. ಆರೋಗ್ಯದ ಮೇಲೂ ನಾನಾ ಪರಿಣಾಮ ಬೀರಿತ್ತು. ಈಗ ಪುನಃ ನದಿಗೆ ಬೂದಿ ಎಗ್ಗಿಲ್ಲದೆ ಬಿಡಲಾಗುತ್ತಿದೆ. ಸಾಮಾನ್ಯವಾಗಿ ಮಳೆಗಾಲ ಹಾಗೂ ನದಿಯಲ್ಲಿ ನೀರು ತುಂಬಿ ಹರಿಯುವಾಗ ಯಾವ ಮುಲಾಜಿಲ್ಲದೆ ಬೂದಿಯನ್ನು ನದಿಗೆ ಬಿಡುತ್ತಾರೆ. ಆದರೆ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಕಡಿಮೆಯಿದ್ದಾಗ ಜನ ಹಾಗೂ ಜಲಚರಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

    ಸಂಗ್ರಹವಾಗುವ ಬೂದಿಯನ್ನ ಸರಿಯಾಗಿ ನಿರ್ವಹಣೆ ಮಾಡದೇ ಅಧಿಕಾರಿಗಳು ನೇರವಾಗಿ ನದಿಗೆ ಹರಿಬಿಟ್ಟು ಬೇಜವಾಬ್ದಾರಿತನ ಮೆರೆಯುತ್ತಿದ್ದಾರೆ. ಬೂದಿ ಸಮಸ್ಯೆಯಿಂದ ನಿತ್ಯ ನರಕಯಾತನೆ ಅನುಭವಿಸುತ್ತಿರುವ ಜನರಿಗೆ ಈಗ ಹೊಸ ಸಮಸ್ಯೆ ತಲೆದೂರಿದಂತಾಗಿದೆ. ಜನರ ಆರೋಗ್ಯದ ಮೇಲೆ ಪರಿಣಾಮ ಕಾಣಿಸಿಕೊಳ್ಳುವ ಮೊದಲೆ ಅಧಿಕಾರಿಗಳು ಎಚ್ಚೆತ್ತು ಕ್ರಮ ಕೈಗೊಳ್ಳಬೇಕಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತ ಗಮನ ಹರಿಸಬೇಕಿದೆ.ಇದನ್ನೂ ಓದಿ: ಶಿವಮೊಗ್ಗ | ದಾನವಾಡಿ ಅರಣ್ಯದಲ್ಲಿ ಕಡವೆ ಬೇಟೆ – ಆರೋಪಿ ಅರೆಸ್ಟ್

  • ರಾಯಚೂರು ವಿದ್ಯುತ್ ಕೇಂದ್ರಗಳ ಕಲ್ಲಿದ್ದಲು ಕಳ್ಳಾಟ ಪ್ರಕರಣ- ಇಬ್ಬರ ವಿರುದ್ಧ ಎಫ್‌ಐಆರ್

    ರಾಯಚೂರು ವಿದ್ಯುತ್ ಕೇಂದ್ರಗಳ ಕಲ್ಲಿದ್ದಲು ಕಳ್ಳಾಟ ಪ್ರಕರಣ- ಇಬ್ಬರ ವಿರುದ್ಧ ಎಫ್‌ಐಆರ್

    ರಾಯಚೂರು: ಜಿಲ್ಲೆಯ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಕಳ್ಳಾಟ ಕುರಿತ ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಆರ್‌ಟಿಪಿಎಸ್ (RTPS) ಹಾಗೂ ವೈಟಿಪಿಎಸ್ (YTPS) ಅಧಿಕಾರಿಗಳು ಈಗ ಅಲರ್ಟ್ ಆಗಿದ್ದಾರೆ. ಕಲ್ಲಿದ್ದಲು ಕಳ್ಳತನ (Coal Theft) ಆರೋಪಿಸಿ ರೈಲ್ವೆ ವ್ಯಾಗಾನ್ ಸ್ವಚ್ಛತಾ ಗುತ್ತಿಗೆದಾರ (Contractor) ಶ್ರೀನಿವಾಸಲು ಹಾಗೂ ಯರಮರಸ್ ರೈಲು ನಿಲ್ದಾಣದ ಸ್ಟೇಷನ್ ಮಾಸ್ಟರ್ ವಿರುದ್ಧ ಪ್ರಕರಣ ದಾಖಲಾಗಿದೆ.

    ವೈಟಿಪಿಎಸ್ ಕಾರ್ಯನಿರ್ವಾಹಕ ನಿರ್ದೇಶಕ ಮಹೇಂದ್ರ ರಾಯಚೂರು (Raichir) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಿಂಗರೇಣಿ ಕಲ್ಲಿದ್ದಲು ಗಣಿಯಿಂದ ವೈಟಿಪಿಎಸ್‌ಗೆ ಬಂದ ಕಲ್ಲಿದ್ದಲಿನಲ್ಲಿ ಕಳ್ಳತನ ನಡೆದಿದೆ. ಅಕ್ಟೋಬರ್ 19 ರಿಂದ ನವೆಂಬರ್ 20 ರವರೆಗೆ ಅಂದಾಜು 5 ಲಕ್ಷ ರೂ. ಮೌಲ್ಯದ ಸುಮಾರು 120 ಮೆಟ್ರಿಕ್ ಟನ್ ಕಚ್ಚಾ ಕಲ್ಲಿದ್ದಲು ಕಳ್ಳತನ ಮಾಡಿ ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂದು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಲ್ಲಿದ್ದಲು ಕಳ್ಳತನ ಕೇಸ್‌ – ಇದ್ದ ಮೂವರಲ್ಲಿ ಕಳ್ಳ ಯಾರು? ವೈಟಿಪಿಎಸ್ ಅಧಿಕಾರಿಗಳು ಹೇಳೋದು ಏನು?

    ಇನ್ನೂ ಆರ್‌ಟಿಪಿಎಸ್ ಅಧಿಕಾರಿಗಳು ಕಲ್ಲಿದ್ದಲು ಕಳ್ಳತನ ವಿದ್ಯುತ್ ಕೇಂದ್ರದ ಹೊರಗಡೆ ನಡೆದಿದೆ, ತನಿಖೆ ಮಾಡಿ ಎಂದು ಪೊಲೀಸರಿಗೆ ಅರ್ಜಿ ನೀಡಿದ್ದಾರೆ. ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಪ್ರಕರಣ ದಾಖಲಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: PUBLiC TV Impact ನೂರಾರು ಟನ್‌ ಕಲ್ಲಿದ್ದಲು ಕಳ್ಳತನ – ಸ್ಥಳಕ್ಕೆ ಬಂದ ಅಧಿಕಾರಿಗಳಿಗೆ ಶಾಕ್‌, ತನಿಖೆಗೆ ಆದೇಶ

    ಏನಿದು ಪ್ರಕರಣ?
    ರಾಯಚೂರಿನ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಾದ ಆರ್‌ಟಿಪಿಎಸ್ ಹಾಗೂ ವೈಟಿಪಿಎಸ್ ಇಡೀ ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಸರಬರಾಜು ಮಾಡುತ್ತಿವೆ. ಈಗ ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲಿ ಹಿಂದೆ ಬಿದ್ದಿವೆ. ಇದರ ಹಿಂದೆ ಕಲ್ಲಿದ್ದಲು ಕಳ್ಳಾಟ ನಡೆಯುತ್ತಿರುವುದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‌ನಲ್ಲಿ ಬಯಲು ಮಾಡಿತ್ತು. ಇದನ್ನೂ ಓದಿ: ವಿದ್ಯುತ್ ಕೊರತೆ ಮಧ್ಯೆ ಕಲ್ಲಿದ್ದಲು ಕಳ್ಳಾಟ – ಕಳ್ಳರ ಪಾಲಾಗುತ್ತಿದೆ ಟನ್‌ಗಟ್ಟಲೇ ಕಲ್ಲಿದ್ದಲು

    ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ಸರಬರಾಜಾಗುವ ಕಲ್ಲಿದ್ದಲನ್ನು ಸಂಪೂರ್ಣವಾಗಿ ಬಳಕೆ ಮಾಡದೆ, ಅಲ್ಪ ಪ್ರಮಾಣದ ಕಲ್ಲಿದ್ದಲನ್ನು ಉಳಿಸಿ ಕಳುಹಿಸುತ್ತಿರುವುದು ಬಯಲಾಗಿದೆ. ಈ ಅಲ್ಪ ಪ್ರಮಾಣದ ಕಲ್ಲಿದ್ದಲೇ ಈಗ ನೂರಾರು ಟನ್ ಇದ್ದು, ಲಕ್ಷಾಂತರ ರೂಪಾಯಿ ಗೋಲ್ ಮಾಲ್ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕಲ್ಲಿದ್ದಲು ರೇಕ್‌ನ ವ್ಯಾಗನಾರ್‌ಗಳ ಸ್ವಚ್ಛತೆ ಹೆಸರಲ್ಲಿ ಟನ್‌ಗಟ್ಟಲೇ ಕಲ್ಲಿದ್ದಲು ಮಾಯಾವಾಗುತ್ತಿದೆ. ಇಡೀ ರಾಜ್ಯ ವಿದ್ಯುತ್ ಕೊರತೆ ಎದುರಿಸುತ್ತಿದ್ದರೆ ಇಲ್ಲಿ ಕಲ್ಲಿದ್ದಲಿನ ಕಳ್ಳ ದಂಧೆ ನಡೆಯುತ್ತಿರೋದು ಸ್ಪಷ್ಟವಾಗಿದೆ. ಇದನ್ನೂ ಓದಿ: ಕರ್ನಾಟಕದ ಹಿಂದೂಗಳು ಒಂದಾಗಬೇಕು: ಯತ್ನಾಳ್

  • ಕಲ್ಲಿದ್ದಲು ಕಳ್ಳತನ ಕೇಸ್‌ – ಇದ್ದ ಮೂವರಲ್ಲಿ ಕಳ್ಳ ಯಾರು? ವೈಟಿಪಿಎಸ್ ಅಧಿಕಾರಿಗಳು ಹೇಳೋದು ಏನು?

    ಕಲ್ಲಿದ್ದಲು ಕಳ್ಳತನ ಕೇಸ್‌ – ಇದ್ದ ಮೂವರಲ್ಲಿ ಕಳ್ಳ ಯಾರು? ವೈಟಿಪಿಎಸ್ ಅಧಿಕಾರಿಗಳು ಹೇಳೋದು ಏನು?

    ರಾಯಚೂರು: ಇದ್ದ ಮೂವರಲ್ಲಿ ಕದ್ದವರು ಯಾರು ಎನ್ನುವಂತೆ ರಾಯಚೂರಿನ ಕಲ್ಲಿದ್ದಲು ಕಳ್ಳಾಟ ಪ್ರಕರಣ (Coal Theft Case) ತಿರುವು ಪಡೆಯುತ್ತಿದೆ. ಪಬ್ಲಿಕ್ ಟಿವಿ ವರದಿ ಬಳಿಕ ಎಚ್ಚೆತ್ತ ಸರ್ಕಾರ (Karnataka Government) ಸಮಗ್ರ ತನಿಖೆಗೆ ಮುಂದಾಗಿದೆ. ಈ ವೇಳೆ ವೈಟಿಪಿಎಸ್ ಅಧಿಕಾರಿಗಳು (YTPS official) ಹೊಸ ವರಸೆ ಆರಂಭಿಸಿದ್ದಾರೆ.

    ರಾಯಚೂರಿನ ಶಾಖೋತ್ಪನ್ನ ವಿದ್ಯುತ್ ಕೇಂದ್ರ ವೈಟಿಪಿಎಸ್‌ಗೆ ಸೇರಿದ ಗುಣಮಟ್ಟದ ಕಲ್ಲಿದ್ದಲು ಕಳ್ಳಾಟದ ಬಗ್ಗೆ ಮಂಗಳವಾರ ಪಬ್ಲಿಕ್ ಟಿವಿ ಬಿಗ್ ಎಕ್ಸ್‌ಪೋಸ್‌ ಮಾಡಿತ್ತು. ಇಂಧನ ಸಚಿವ ಕೆಜೆ ಜಾರ್ಜ್‌ (KJ George) ಸಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ ಕಲ್ಲಿದ್ದಲು ಕಳ್ಳಾಟದ ನಿಜವಾದ ಕಳ್ಳರು ಯಾರು ಅನ್ನೋದು ಸಮಗ್ರ ತನಿಖೆಯ ಬಳಿಕವೇ ಬಯಲಾಗಬೇಕಿದೆ. ಇದನ್ನೂ ಓದಿ: ಪ.ಬಂಗಾಳದಲ್ಲಿ ರಿಲಯನ್ಸ್‌ನಿಂದ 20 ಸಾವಿರ ಕೋಟಿ ರೂ. ಹೂಡಿಕೆ: ಅಂಬಾನಿ ಘೋಷಣೆ

    ವೈಟಿಪಿಎಸ್‌ನ ಅಧಿಕಾರಿಗಳು ಹಾಗೂ ಅಲ್ಲಿನ ಕಲ್ಲಿದ್ದಲು ನಿರ್ವಹಣಾ ಏಜೆನ್ಸಿ, ರೈಲ್ವೇ ಗುತ್ತಿಗೆದಾರ, ರೈಲ್ವೇ ಇಲಾಖೆ ಅಧಿಕಾರಿಗಳು ಎಲ್ಲರ ಪಾತ್ರಗಳು ಇಲ್ಲಿ ಮೇಲ್ನೋಟಕ್ಕೆ ಅನುಮಾನ ಮೂಡಿಸಿವೆ.  ಇದನ್ನೂ ಓದಿ: ವಿದ್ಯುತ್ ಕೊರತೆ ಮಧ್ಯೆ ಕಲ್ಲಿದ್ದಲು ಕಳ್ಳಾಟ – ಕಳ್ಳರ ಪಾಲಾಗುತ್ತಿದೆ ಟನ್‌ಗಟ್ಟಲೇ ಕಲ್ಲಿದ್ದಲು

    ನಮ್ಮಲ್ಲಿ ಕಲ್ಲಿದ್ದಲು ಸಂಪೂರ್ಣ ಡಂಪ್ ಆಗುತ್ತದೆ. ಖಾಲಿ ವ್ಯಾಗನ್‌ಗಳಲ್ಲಿ ಗುಣಮಟ್ಟದ ಕಲ್ಲಿದ್ದಲು ಸಿಗಲು ಸಾಧ್ಯವೇ ಇಲ್ಲ. ರೈಲ್ವೇ ಇಲಾಖೆ ನಮ್ಮ ಗಮನಕ್ಕೆ ತಾರದೇ ಗುತ್ತಿಗೆ ನೀಡಿದ್ದು ಅನುಮಾನ ಮೂಡಿಸಿದೆ ಅಂತ ಆರೋಪಕ್ಕೆ ಮುಂದಾಗಿದ್ದಾರೆ. ಅಲ್ಲದೇ ಕಲ್ಲಿದ್ದಲು ತುಂಬಿದ ವ್ಯಾಗನ್‌ಗಳಿಂದಲೇ ಕಲ್ಲಿದ್ದಲು ಕದಿಯುತ್ತಿರುವ ಸಂಶಯವನ್ನು ವ್ಯಕ್ತಪಡಿಸಿ ತಾವು ಪಾರಾಗಲು ವೈಟಿಪಿಎಸ್‌ ಅಧಿಕಾರಿಗಳು ಮುಂದಾಗಿದ್ದಾರೆ.  ಇದನ್ನೂ ಓದಿ: PUBLiC TV Impact ನೂರಾರು ಟನ್‌ ಕಲ್ಲಿದ್ದಲು ಕಳ್ಳತನ – ಸ್ಥಳಕ್ಕೆ ಬಂದ ಅಧಿಕಾರಿಗಳಿಗೆ ಶಾಕ್‌, ತನಿಖೆಗೆ ಆದೇಶ

    ಕೆಪಿಸಿ ಕೇಂದ್ರ ಕಚೇರಿಯಿಂದಲೂ ರೈಲ್ವೇ ಇಲಾಖೆಗೆ (Indian Railways) ಟೆಂಡರ್ ಕುರಿತು ಸಮಜಾಯಿಷಿ ನೀಡುವಂತೆ ಪತ್ರ ಬರೆಯಲು ಮುಂದಾಗಿದ್ದಾರೆ ಎಂಬ ಮಾಹಿತಿ ಈಗ ಲಭ್ಯವಾಗಿದೆ. ತಮ್ಮ ಮೇಲೆ ಬಂದ ಆರೋಪವನ್ನು ಬೇರೆಡೆ ಸುಲಭವಾಗಿ ಎತ್ತಿಹಾಕಲು ವೈಟಿಪಿಎಸ್ ಅಧಿಕಾರಿಗಳು ಮುಂದಾದಂತೆ ಮೇಲ್ನೋಟಕ್ಕೆ ಕಾಣುತ್ತಿದೆ.  ಇದನ್ನೂ ಓದಿ: ಬೆಂಗ್ಳೂರಿನ ಅರ್ಧದಷ್ಟು ಇಂದಿರಾ ಕ್ಯಾಂಟೀನ್‍ಗಳಲ್ಲಿ ಸಿಗ್ತಿಲ್ಲ ಇಡ್ಲಿ!

     

    ರೈಲ್ವೇ ಇಲಾಖೆ ಅಧಿಕಾರಿಗಳು ಹಾಗೂ ಖಾಲಿ ವ್ಯಾಗನ್ ಸ್ವಚ್ಚತೆ ಗುತ್ತಿಗೆ ಪಡೆದ ಗುತ್ತಿಗೆದಾರರು ಕೂಡ ಕಲ್ಲಿದ್ದಲು ಕಳ್ಳಾಟದಲ್ಲಿ ಭಾಗಿದಾರರೇ ಎಂಬ ಅನುಮಾನಕ್ಕೂ ಪುಷ್ಠಿ ಸಿಕ್ಕಿದೆ. ವಿದ್ಯುತ್ ಕೇಂದ್ರಕ್ಕೆ ಮಾಹಿತಿ ನೀಡದೇ ಕಲ್ಲಿದ್ದಲು ಸಾಗಣೆ, ಸಂಗ್ರಹ, ಮಾರಾಟಕ್ಕೆ ಗುತ್ತಿಗೆ ನೀಡಿದ್ದು ಒಂದೆಡೆಯಾದರೆ ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿ ರೈಲ್ವೇ ನಿಲ್ದಾಣ ಪ್ರದೇಶದಲ್ಲಿ ಸಿಸಿ ಕ್ಯಾಮೆರಾ ಅಳವಡಿಸದೇ ಕಲ್ಲಿದ್ದಲು ಸಾಗಿಸುತ್ತಿರುವುದು ಸಹ ಅನುಮಾನಕ್ಕೆ ಕಾರಣವಾಗಿದೆ.

    ವಿದ್ಯುತ್ ಕೇಂದ್ರದ ಕಲ್ಲಿದ್ದಲು ಮೇಲೆ ಟೆಂಡರ್ ಹೆಸರಲ್ಲಿ ರೈಲ್ವೇ ಇಲಾಖೆ ಅಧಿಕಾರಿಗಳು ಕಣ್ಣು ಹಾಕಿದ್ದಾರಾ? ತಮ್ಮ ಮೇಲಿನ ಆರೋಪದಿಂದ ಪಾರಾಗಲು ವೈಟಿಪಿಎಸ್ ರೈಲ್ವೇ ಇಲಾಖೆ ಮೇಲೆ ಗೂಬೆ ಕೂರಿಸಲು ಮುಂದಾಗಿದ್ಯಾ? ಸಿಕ್ಕಷ್ಟು ಕಲ್ಲಿದ್ದಲು ಬಾಚಿಕೊಂಡು ಸಂಗ್ರಹಿಸುತ್ತಿರುವ ಗುತ್ತಿಗೆದಾರ ತಪ್ಪಿತಸ್ಥನಲ್ವೇ ಈ ಎಲ್ಲಾ ಪ್ರಶ್ನೆಗಳು ಈಗ ಎದ್ದಿದೆ. ಈ ವ್ಯವಸ್ಥಿತ ಕಳ್ಳಾಟದಲ್ಲಿ ಯಾರೆಲ್ಲಾ ಭಾಗಿದಾರರು ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆದು ಸರ್ಕಾರ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕಿದೆ.

  • ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಅವಘಡ – ವಿದ್ಯುತ್ ಉತ್ಪಾದನೆ ಸ್ಥಗಿತ

    ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಅವಘಡ – ವಿದ್ಯುತ್ ಉತ್ಪಾದನೆ ಸ್ಥಗಿತ

    ರಾಯಚೂರು: ನಗರದ ಯರಮರಸ್ ಸೂಪರ್ ಕ್ರಿಟಿಕಲ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಹಾರೋಬೂದಿ ಸಾಗಣೆ ಮಾರ್ಗದ ಸಂಗ್ರಹ ಟ್ಯಾಂಕ್ ಕುಸಿದು ಕೋಟ್ಯಾಂತರ ರೂ. ಹಾನಿಯಾಗಿದೆ.

    ಘಟನೆಯಿಂದ ವಿದ್ಯುತ್ ಕೇಂದ್ರದ ಎರಡನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತವಾಗಿದೆ.ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಾಮರ್ಥ್ಯಕ್ಕಿಂತ ಹೆಚ್ಚು ಭಾರವನ್ನ ಹೊತ್ತಿದ್ದರಿಂದ ಕುಸಿತವಾಗಿದ್ದು, ನಿಗದಿತವಾಗಿ ಹಾರೋಬೂದಿ ವಿಲೆವಾರಿ ನಡೆಯದೆ ಅವಘಡ ಸಂಭವಿಸಿದೆ. ಇದನ್ನೂ ಓದಿ: ಅಕ್ರಮ ಆಸ್ತಿಗಳಿಕೆ ಆರೋಪ – ವಿಚಾರಣೆ ನಡೆಸಲು ಹೈಕೋರ್ಟ್‍ಗೆ ಸುಪ್ರೀಂ ಸೂಚನೆ

    Raichuru

    ಹೀಗಾಗಿ 800 ಮೆ.ವ್ಯಾ ಸಾಮರ್ಥ್ಯ ವಿದ್ಯುತ್ ಘಟಕ ಸಂಪೂರ್ಣ ಸ್ಥಗಿತವಾಗಿದೆ. ಟ್ಯಾಂಕ್ ರಿಪೇರಿಯಾಗುವವರೆಗೂ ವಿದ್ಯುತ್ ಉತ್ಪಾದನೆ ಸ್ಥಗಿತಗೊಳ್ಳಲಿದೆ. ಈ ಮೊದಲು ಇಂತಹ ಘಟನೆ ನಡೆದಿದ್ದರು ಅಧಿಕಾರಿಗಳು ಎಚ್ಚೆತ್ತುಕೊಳ್ಳದ ಹಿನ್ನೆಲೆ ಅವಘಡ ಪುನರಾವರ್ತನೆಯಾಗಿದೆ. ಎರಡನೇ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಪುನರಾರಂಭವಾಗಲು ಇನ್ನೂ ಮೂರು ದಿನಗಳು ಬೇಕಾಗಬಹುದು ಅಂತ ವೈಟಿಪಿಎಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಮೀರ್ ಅತ್ಯಂತ ಚಿಲ್ಲರೆ, ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ : ಪ್ರಹ್ಲಾದ್ ಜೋಶಿ

  • ರಾಜ್ಯದ ಶಾಖೋತ್ಪನ್ನ ಕೇಂದ್ರಗಳಲ್ಲಿ ಕಲ್ಲಿದ್ದಲು ಕೊರತೆ – ವಿದ್ಯುತ್ ಅಭಾವದ ಆತಂಕ

    ರಾಜ್ಯದ ಶಾಖೋತ್ಪನ್ನ ಕೇಂದ್ರಗಳಲ್ಲಿ ಕಲ್ಲಿದ್ದಲು ಕೊರತೆ – ವಿದ್ಯುತ್ ಅಭಾವದ ಆತಂಕ

    ರಾಯಚೂರು: ರಾಜ್ಯಕ್ಕೆ ವಿದ್ಯುತ್ ಕ್ಷಾಮ ಎದುರಾಗುವ ಸಾಧ್ಯತೆಗಳು ದಟ್ಟವಾಗಿವೆ. ರಾಜ್ಯದ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರಗಳಿಗೆ ಕಲ್ಲಿದ್ದಲಿನ ಕೊರತೆ ಉಂಟಾಗಿದ್ದು, ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗುವ ಸಾಧ್ಯತೆಗಳಿವೆ.

    ರಾಜ್ಯಕ್ಕೆ ಶೇ.45 ರಷ್ಟು ವಿದ್ಯುತ್ ನೀಡುವ ರಾಯಚೂರಿನ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್.ಟಿ.ಪಿ.ಎಸ್ ನ ಎಂಟು ಘಟಕಗಳಲ್ಲಿ ನಾಲ್ಕು ಘಟಕಗಳು ಕಲ್ಲಿದ್ದಲು ಕೊರತೆಯಿಂದ ಈಗಾಗಲೇ ವಿದ್ಯುತ್ ಉತ್ಪಾದನೆ ನಿಲ್ಲಿಸಿವೆ. 1720 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮಥ್ರ್ಯ ಆರ್.ಟಿ.ಪಿ.ಎಸ್ ಈಗ ಕೇವಲ ಸುಮಾರು 500 ಮೆಗಾವ್ಯಾಟ್ ನಷ್ಟು ವಿದ್ಯುತ್ ಉತ್ಪಾದಿಸುತ್ತಿದೆ. ಇದನ್ನೂ ಓದಿ: ಕೊರೊನಾ ನಡುವೆ ಸಾವಿರಾರು ಬೆಂಬಲಿಗರೊಂದಿಗೆ ಎಂಎಲ್‍ಸಿ ಅದ್ದೂರಿ ಹುಟ್ಟುಹಬ್ಬ

    ಆರ್.ಟಿ.ಪಿ.ಎಸ್ ನಲ್ಲಿ ಸದ್ಯ 12,010 ಮೆಟ್ರಿಕ್ ಟನ್ ಕಲ್ಲಿದ್ದಲು ಮಾತ್ರ ಸಂಗ್ರಹವಿದೆ. ನಾಲ್ಕು ಘಟಕಗಳಿಗೆ ಒಂದು ದಿನಕ್ಕೆ ಮಾತ್ರ ಇಷ್ಟು ಕಲ್ಲಿದ್ದಲು ಸಾಕಾಗುತ್ತದೆ. ಎಂಟು ಘಟಕಗಳಿಗೆ ಒಂದು ದಿನಕ್ಕೆ 25 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಬೇಕು. ಸಿಂಗರೇಣಿ, ಮಹಾನದಿ ಮತ್ತು ವೆಸ್ಟರ್ನ್ ಕೋಲ್ ಗಣಿಯಿಂದ ದಿನಕ್ಕೆ 8 ರಿಂದ 9 ರೇಕು ಕಲ್ಲಿದ್ದಲು ಬರುತ್ತಿತ್ತು. ಈಗ ಕೇವಲ 3 ರಿಂದ 4 ರೇಕು ಕಲ್ಲಿದ್ದಲು ಬರುತ್ತಿದೆ. ರಾಷ್ಟ್ರಮಟ್ಟದಲ್ಲಿ ಕಲ್ಲಿದ್ದಲು ಹಂಚಿಕೆ, ಮಳೆಯ ಪರಿಣಾಮ ಸೇರಿದಂತೆ ನಾನಾ ತಾಂತ್ರಿಕ ಕಾರಣದಿಂದಾಗಿ ಕಲ್ಲಿದ್ದಲು ಕೊರತೆ ಎದುರಾಗಿದೆ.

    ಕಲ್ಲಿದ್ದಲು ಕೊರತೆಯಿಂದಾಗಿ ಆರ್.ಟಿ.ಪಿ.ಎಸ್ ನ ಉಳಿದ 4 ಘಟಕಗಳು ಸಹ ಬಂದ್ ಆಗುವ ಆತಂಕ ಎದುರಾಗಿದೆ. ಇನ್ನೂ ಜಿಲ್ಲೆಯ ಯರಮರಸ್ ನಲ್ಲಿರುವ ಒಟ್ಟು 1,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮಥ್ರ್ಯದ ವೈಟಿಪಿಎಸ್ ನ ಎರಡು ಘಟಕಗಳಲ್ಲಿ ಒಂದು ಘಟಕ ಮಾತ್ರ 648 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುತ್ತಿದೆ. ವೈಟಿಪಿಎಸ್ ನಲ್ಲಿ 25 ಸಾವಿರ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹವಿದ್ದು, ಎರಡುದಿನಕ್ಕೆ ಮಾತ್ರ ಸಾಕಾಗಲಿದೆ. ಇದನ್ನೂ ಓದಿ: ನವರಾತ್ರಿಯ ಮೊದಲದಿನ ಶೈಲಪುತ್ರಿಯ ಆರಾಧನೆ

    ಇನ್ನೂ ರಾಜ್ಯದ ಎಲ್ಲ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಪರಸ್ಥಿತಿಯೂ ಹೀಗೆ ಇದೆ. ಸದ್ಯ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲ ವಿದ್ಯುತ್ ಸ್ಥಾವರಗಳ ಮೇಲೆ ಅವಲಂಬನೆ ಹೆಚ್ಚಾಗಿದೆ.

  • ಶಾಖೋತ್ಪನ್ನ ವಿದ್ಯುತ್ ಕೇಂದ್ರ ವೈಟಿಪಿಎಸ್ ನಲ್ಲಿ ಬೆಂಕಿ- ಲಕ್ಷಾಂತರ ರೂ. ಹಾನಿ

    ಶಾಖೋತ್ಪನ್ನ ವಿದ್ಯುತ್ ಕೇಂದ್ರ ವೈಟಿಪಿಎಸ್ ನಲ್ಲಿ ಬೆಂಕಿ- ಲಕ್ಷಾಂತರ ರೂ. ಹಾನಿ

    ರಾಯಚೂರು: ಜಿಲ್ಲೆಯ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ (ವೈಟಿಪಿಎಸ್)ದ ಕಲ್ಲಿದ್ದಲು ಸಾಗಣೆ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.

    ಕಲ್ಲಿದ್ದಲು ಯಾರ್ಡ್ ನಲ್ಲಿ ಬೇಸಿಗೆಯ ಬಿಸಿಲಿನಿಂದ ಆಗಾಗ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯ, ಆದರೆ ಬೆಂಕಿ ನಂದಿಸಿ ಕಲ್ಲಿದ್ದಲನ್ನು ಘಟಕಕ್ಕೆ ರವಾನೆ ಮಾಡಬೇಕು. ಆದರೆ ಬೆಂಕಿ ನಂದಿಸದೆ ಕಲ್ಲಿದ್ದಲು ಬೆಲ್ಟ್ ಮೇಲೆ ಹೋಗಲು ಬಿಟ್ಟಿದ್ದರಿಂದ ಬೆಂಕಿ ಹೊತ್ತಿಕೊಂಡಿದ್ದು, ಬೆಲ್ಟ್ ಸುಟ್ಟುಹೋಗಿದೆ.

    ಇದರಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಕಲ್ಲಿದ್ದಲು ಸಾಗಣೆ ಬೆಲ್ಟ್ ಹಾಗೂ ಯಂತ್ರೋಪಕರಣಗಳು ಹಾಳಾಗಿದೆ. ಪರ್ಯಾಯವಾಗಿ ಚಲಿಸುವ ಮತ್ತೊಂದು ಕಲ್ಲಿದ್ದಲು ಸಾಗಣೆ ಮಾರ್ಗದಿಂದ ಕೇಂದ್ರಕ್ಕೆ ಕಲ್ಲಿದ್ದಲು ರವಾನೆ ಮಾಡಲಾಗುತ್ತಿದೆ. ಸುಟ್ಟಿರುವ ಬೆಲ್ಟ್ ದುರಸ್ತಿ ಕಾರ್ಯನಡೆದಿದ್ದು. ವೈಟಿಪಿಎಸ್ ಸಿಬ್ಬಂದಿ ಕಾರ್ಯಾರಂಭಿಸಿದ್ದಾರೆ. ಕಲ್ಲಿದ್ದಲು ಸಾಗಣೆ ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಹಿನ್ನೆಲೆ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

  • ವೈಟಿಪಿಎಸ್ ಖಾಸಗೀಕರಣಕ್ಕೆ ವಿರೋಧ: ಭೂಸಂತ್ರಸ್ಥರಿಂದ ಉಗ್ರ ಹೋರಾಟದ ಎಚ್ಚರಿಕೆ

    ವೈಟಿಪಿಎಸ್ ಖಾಸಗೀಕರಣಕ್ಕೆ ವಿರೋಧ: ಭೂಸಂತ್ರಸ್ಥರಿಂದ ಉಗ್ರ ಹೋರಾಟದ ಎಚ್ಚರಿಕೆ

    ರಾಯಚೂರು: ಜಿಲ್ಲೆಯ ಯರಮರಸ್‍ನಲ್ಲಿರುವ ಸೂಪರ್ ಕ್ರಿಟಿಕಲ್ ಥರ್ಮಲ್ ವಿದ್ಯುತ್ ಕೇಂದ್ರ ವೈಟಿಪಿಎಸ್‍ನ್ನು ಸರ್ಕಾರ ಖಾಸಗೀಕರಣ ಮಾಡಲು ಹೊರಟಿರುವುದಕ್ಕೆ ಭೂಸಂತ್ರಸ್ತರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ.

    ಈ ಹಿಂದಿನ ಸರ್ಕಾರ ಪವರ್ ಮೇಕ್ ಕಂಪನಿಗೆ ಮೆಂಟೇನೆನ್ಸ್ ಮತ್ತು ಆಪರೇಷನ್ ಖಾಸಗೀಕರಣಕ್ಕೆ ಮುಂದಾಗಿತ್ತು. ಭೂಸಂತ್ರಸ್ಥರ ಹೋರಾಟ ಹಿನ್ನೆಲೆ ತಾತ್ಕಾಲಿಕವಾಗಿ ಒಪ್ಪಂದ ರದ್ದಾಗಿತ್ತು. ಈಗ ಪುನಃ ಸರ್ಕಾರ ವಿದ್ಯುತ್ ಕೇಂದ್ರವನ್ನು ಖಾಸಗಿಯವರಿಗೆ ನೀಡಲು ಮುಂದಾಗಿದೆ ಎಂದು ಹೋರಾಟಗಳು ಆರಂಭವಾಗಿದ್ದು, ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಭೂಸಂತ್ರಸ್ಥರು ಎಚ್ಚರಿಕೆ ನೀಡಿದ್ದಾರೆ.

    ಇದುವರೆಗೆ ವಿದ್ಯುತ್ ಕೇಂದ್ರಕ್ಕೆ 13 ಸಾವಿರದ 250 ಕೋಟಿ ಖರ್ಚು ಮಾಡಿದ್ದಾರೆ. 1600 ಮೆಗಾ ವ್ಯಾಟ್ ಸಾಮಥ್ರ್ಯದ ವಿದ್ಯುತ್ ಕೇಂದ್ರವನ್ನು 2018 ರಲ್ಲೇ ಆರಂಭಿಸಬೇಕಾಗಿತ್ತು ಆದರೆ ಇನ್ನೂ ಆರಂಭಿಸಿಲ್ಲ. ಸರ್ಕಾರ ಸ್ಥಳೀಯರಿಗೆ, ಭೂಸಂತ್ರಸ್ಥರಿಗೆ ಉದ್ಯೋಗ ಕೊಡುತ್ತೇವೆ ಎಂದು ಭರವಸೆ ನೀಡಿದ್ದಕ್ಕೆ ಕಾರ್ಯಾರಂಭಕ್ಕೆ ಎಲ್ಲರೂ ಒಪ್ಪಿಗೆ ಕೊಟ್ಟಿದ್ದರು. ಈಗ ಪವರ್ ಮೇಕ್ ಕಂಪನಿಗೆ ನೀಡಲು ಮುಂದಾಗಿರುವುದಕ್ಕೆ ಬಿಡುವುದಿಲ್ಲ ಎಂದು ಸ್ಥಳೀಯ ಕಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.