Tag: Yusuf Pathan

  • ತೃಣಮೂಲ ಕಾಂಗ್ರೆಸ್‌ನ 42 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಾಜಿ ಕ್ರಿಕೆಟಿಗ ಯುಸೂಫ್‌ ಪಠಾಣ್‌ ಕಣಕ್ಕೆ

    ತೃಣಮೂಲ ಕಾಂಗ್ರೆಸ್‌ನ 42 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಾಜಿ ಕ್ರಿಕೆಟಿಗ ಯುಸೂಫ್‌ ಪಠಾಣ್‌ ಕಣಕ್ಕೆ

    – ನಟಿ ರಚನಾ ಬ್ಯಾನರ್ಜಿ ಸೇರಿ ಹಲವು ಹೊಸ ಮುಖಗಳಿಗೆ ಮಣೆ

    ಕೋಲ್ಕತ್ತಾ: ಮುಂಬರುವ 2024ರ ಲೋಕಸಭಾ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸುತ್ತಿರುವ ತೃಣಮೂಲ ಕಾಂಗ್ರೆಸ್‌ (TMC) 42 ಅಭ್ಯರ್ಥಿಗಳ (Lok Sabha candidates) ‌ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಸೇರಿದಂತೆ ಹಲವು ಪ್ರಮುಖರು ಕಣದಲ್ಲಿದ್ದಾರೆ.

    ಸದ್ಯ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಅವರು 5 ಬಾರಿ ಪ್ರತಿನಿಧಿಸಿದ್ದ ಬರ್ಹಾಂಪುರ ಕ್ಷೇತ್ರದಿಂದ ಯೂಸುಫ್ ಪಠಾಣ್ (Yusuf Pathan) ಸ್ಪರ್ಧಿಸಲಿದ್ದಾರೆ. ಆದ್ರೆ ಈ ಕ್ಷೇತ್ರಕ್ಕೆ ಕಾಂಗ್ರೆಸ್‌ ಇನ್ನೂ ತನ್ನ ಅಭ್ಯರ್ಥಿಯನ್ನ ಘೋಷಿಸಿಲ್ಲ. ಮೂಲಗಳ ಪ್ರಕಾರ ಅಧೀರ್‌ ರಂಜನ್‌ ಅವರೇ ಮತ್ತೆ ಸ್ಪರ್ಧಿಸಬಹುದು ಎನ್ನಲಾಗಿದೆ.

    ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಭಾನುವಾರ ನಡೆದ ಮೆಗಾ ರ‍್ಯಾಲಿಯಲ್ಲಿ ಟಿಎಂಸಿ ತನ್ನ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ (Abhishek Banerjee) ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಗಾರಪ್ಪ ಫ್ಯಾಮಿಲಿ V/S ಯಡಿಯೂರಪ್ಪ ಫ್ಯಾಮಿಲಿ

    8 ಹಾಲಿ ಸಂಸದರಿಗೆ ಕೊಕ್‌:
    42 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿಎಂಸಿ, ಪ್ರಸಕ್ತ ಅಭ್ಯರ್ಥಿಗಳ ಪಟ್ಟಿಯಲ್ಲಿ 8 ಹಾಲಿ ಸಂಸದರನ್ನು ಕೈಬಿಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮಾಜಿ ಕ್ರಿಕೆಟಿಗ ಯುಸೂಫ್‌ ಪಠಾಣ್‌, ಬಾಲಿವುಡ್ ದಂತಕಥೆ ಶತ್ರುಗನ್ ಸಿನ್ಹಾ, ಹೂಗ್ಲಿಯ ಜನಪ್ರಿಯ ನಟಿ ರಚನಾ ಬ್ಯಾನರ್ಜಿ (Rachana Banerjee) ಅವರಂತಹ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.

    ಅಲ್ಲದೇ ಈ ಹಿಂದೆ ಲೋಕಸಭೆಯಿಂದ ಉಚ್ಛಾಟಿತರಾಗಿದ್ದ ಮಹುವಾ ಮೊಯಿತ್ರಾ ಅವರನ್ನು ಕೃಷ್ಣನಗರ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಟಿಎಂಸಿ ಏಕಾಂಗಿಯಾಗಿ ಕಣಕ್ಕಿಳಿಯಲು ಅಭ್ಯರ್ಥಿಗಳನ್ನ ಘೋಷಿಸಿದ್ದು, I.N.D.I.A ಒಕ್ಕೂಟದ ಕೆಲ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Congress 1st Lok Sabha List: ಮತ್ತೆ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗಿಳಿದ ರಾಗಾ!

  • ಅಣ್ಣನ ಬೌಲಿಂಗ್‌ಗೆ ಸಿಕ್ಸರ್‌ ಸಿಡಿಸಿ ಗೆಲುವು ತಂದುಕೊಟ್ಟ ಪಠಾಣ್‌ – ಸಚಿನ್‌ ಬಳಗಕ್ಕೆ 4 ವಿಕೆಟ್‌ಗಳ ಜಯ

    ಅಣ್ಣನ ಬೌಲಿಂಗ್‌ಗೆ ಸಿಕ್ಸರ್‌ ಸಿಡಿಸಿ ಗೆಲುವು ತಂದುಕೊಟ್ಟ ಪಠಾಣ್‌ – ಸಚಿನ್‌ ಬಳಗಕ್ಕೆ 4 ವಿಕೆಟ್‌ಗಳ ಜಯ

    – ಕೊನೇ ಓವರ್‌ನಲ್ಲಿ ಸಿಕ್ಸರ್‌ ಸಿಡಿಸಿದ ಇರ್ಫಾನ್‌ ಪಠಾಣ್‌
    – ಯುವರಾಜ್‌ ಸಿಂಗ್‌ ಬಳಗಕ್ಕೆ ವಿರೋಚಿತ ಸೋಲು

    ಚಿಕ್ಕಬಳ್ಳಾಪುರ: ತಾಲೂಕಿನ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ನಡೆದ ಒನ್ ವರ್ಲ್ಡ್-ಒನ್ ಫ್ಯಾಮಿಲಿ ಕಪ್ (One World- One Family Cup) ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಚಿನ್‌ ತೆಂಡೂಲ್ಕರ್‌ (Sachin Tendulkar) ನೇತೃತ್ವದ ಒನ್‌ ವರ್ಲ್ಡ್ ತಂಡವು 4 ವಿಕೆಟ್‌ಗಳ ಜಯ ಸಾಧಿಸಿದೆ. ಕೊನೆಯ ಓವರ್‌ನಲ್ಲಿ ಅಣ್ಣ ಯುಸೂಫ್‌ ಪಠಾಣ್‌ (Yusuf Pathan) ಬೌಲಿಂಗ್‌ಗೆ ಭರ್ಜರಿ ಸಿಕ್ಸರ್‌ ಬಾರಿಸುವ ಮೂಲಕ ತಮ್ಮ ಇರ್ಫಾನ್‌ ಪಠಾಣ್‌ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

    ಸತ್ಯಸಾಯಿ ಗ್ರಾಮದಲ್ಲಿ ನೂತನ ಸಾಯಿಕೃಷ್ಣನ್ ಸ್ಟೇಡಿಯಂ (Sai Krishnan Cricket Stadium) ಲೋಕಾರ್ಪಣೆ ಅಂಗವಾಗಿ ನಡೆದ  ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಒನ್‌ ವರ್ಲ್ಡ್‌ ತಂಡವು ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಒನ್‌ ಫ್ಯಾಮಿಲಿ ತಂಡಕ್ಕೆ ಬಿಟ್ಟುಕೊಟ್ಟಿತು. ಈ ಮೂಲಕ ಮೊದಲು ಬ್ಯಾಟಿಂಗ್‌ ಮಾಡಿದ ನಾಯಕ ಯುವರಾಜ್‌ ಸಿಂಗ್‌ (Yuvraj Singh) ನೇತೃತ್ವದ ಒನ್‌ ಫ್ಯಾಮಿಲಿ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 180 ರನ್‌ ಗಳಿಸಿತ್ತು. 181 ರನ್‌ಗಳ ಗುರಿ ಬೆನ್ನತ್ತಿದ್ದ ಸಚಿನ್‌ ತೆಂಡೂಲ್ಕರ್‌ ನೇತೃತ್ವದ ಒನ್‌ ವರ್ಲ್ಡ್‌ ತಂಡ 19.5 ಓವರ್‌ಗಳಲ್ಲೇ 184 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

    ಚೇಸಿಂಗ್‌ ಆರಂಭಿಸಿದ ಒನ್‌ ವರ್ಲ್ಡ್‌ ತಂಡದ ಪರ ನಮನ್‌ ಓಜಾ ಹಾಗೂ ಸಚಿನ್‌ ತೆಂಡೂಲ್ಕರ್‌ ಜೋಡಿ ಮೊದಲ ವಿಕೆಟ್‌ಗೆ 31 ರನ್‌ಗಳ ಜೊತೆಯಾಟ ನೀಡಿದ್ರೆ, 2ನೇ ವಿಕೆಟ್‌ಗೆ ಸಚಿನ್‌ ಹಾಗೂ ಅಲ್ವಿರೋ ಪೀಟರ್ಸನ್ ಜೋಡಿ 22 ಎಸೆತಗಳಲ್ಲಿ 41 ರನ್‌ ಕಲೆಹಾಕಿತು. ನಂತರ 3ನೇ ವಿಕೆಟ್‌ಗೆ ಪೀಟರ್ಸನ್‌ ಹಾಗೂ ಉಪುಲ್ ತರಂಗ ಜೋಡಿ 44 ಎಸೆತಗಳಲ್ಲಿ 59 ರನ್‌ ಪೇರಿಸಿತು. ಇದರಿಂದ ತಂಡದ ಗೆಲುವಿನ ಹಾದಿ ಸುಗಮವಾಯಿತು.

    148 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಅಲ್ವಿರೋ ಪೀಟರ್ಸನ್ 50 ಎಸೆತಗಳಲ್ಲಿ 74 ರನ್‌ (5 ಬೌಂಡರಿ, 3 ಸಿಕ್ಸರ್‌) ಬಾರಿಸಿದರು. ಇನ್ನುಳಿದಂತೆ ನಮನ್ ಓಜಾ 25 ರನ್‌, ಸಚಿನ್‌ 27 ರನ್‌, ಉಪುಲ್ ತರಂಗ 29 ರನ್‌, ಸುಬ್ರಮಣ್ಯಂ ಬದರಿನಾಥ್ 4 ರನ್‌, ಹರ್ಭಜನ್ ಸಿಂಗ್ 4 ರನ್‌ ಗಳಿಸಿದ್ರೆ ಇರ್ಫಾನ್ ಪಠಾಣ್ (Irfan Pathan) 12 ರನ್‌ ಗಳಿಸಿ ಅಜೇಯರಾಗುಳಿದರು.

    ಚಮಿಂದಾ ವಾಸ್ ಮಾರಕ ದಾಳಿ:
    ಒನ್‌ ವರ್ಲ್ಡ್‌ ತಂಡದ ವಿರುದ್ಧ ಮಾರಕ ಬೌಲಿಂಗ್‌ ದಾಳಿ ನಡೆಸಿದ ಶ್ರೀಲಂಕಾ ತಂಡದ ಮಾಜಿ ಎಡಗೈ ವೇಗಿ ಚಮಿಂದಾ ವಾಸ್ 3 ವಿಕೆಟ್‌ ಪಡೆದರು. 4 ಓವರ್‌ಗಳಲ್ಲಿ 44 ರನ್‌ ಚಚ್ಚಿಸಿಕೊಂಡ ಹೊರತಾಗಿಯೂ 3 ವಿಕೆಟ್‌ ಪಡೆದುಕೊಂಡರು. ವಿಶೇಷವೆಂದರೆ ದಶಕಗಳ ಬಳಿಕ ಬೌಲಿಂಗ್‌ನಲ್ಲಿ ಎದುರಾದ ಮಿಂದಾ ವಾಸ್ದು ಬೌಲಿಂಗ್‌ಗೆ ಸಚಿನ್‌ ತೆಂಡೂಲ್ಕರ್‌ ಸತತ ಎರಡು ಮನಮೋಹಕ ಬೌಂಡರಿ ಸಿಡಿಸಿದರು. ಇನ್ನುಳಿದಂತೆ ಮುತ್ತಯ್ಯ ಮುರಳೀಧರನ್‌, ಯುವರಾಜ್‌ ಸಿಂಗ್‌, ಜೇಸನ್ ಕ್ರೆಜ್ಜಾ ತಲಾ ಒಂದೊಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

    181 ಟಾರ್ಗೆಟ್‌ ನೀಡಿದ್ದ ಒನ್‌ ಫ್ಯಾಮಿಲಿ:
    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಯುವರಾಜ್‌ ಸಿಂಗ್‌ ನೇತೃತ್ವದ ಒನ್‌ ಫ್ಯಾಮಿಲಿ ತಂಡ ಎದುರಾಳಿ ತಂಡಕ್ಕೆ 181 ರನ್‌ಗಳ ಗುರಿ ನೀಡಿತ್ತು. ಡ್ಯಾರೆನ್ ಮ್ಯಾಡಿ 51 ರನ್‌ (41 ಎಸೆತ, 8 ಬೌಂಡರಿ), ರೋಮೇಶ್ ಕಲುವಿತಾರಣ 22 ರನ್‌ (15 ಎಸೆತ, 4 ಬೌಂಡರಿ), ಮೊಹಮ್ಮದ್ ಕೈಫ್ 9 ರನ್‌, ಪಾರ್ಥಿವ್ ಪಟೇಲ್ 19 ರನ್‌ (13 ಎಸೆತ, 3 ಬೌಂಡರಿ), ಯೂಸುಫ್ ಪಠಾಣ್ 38 ರನ್‌ (23, 4 ಸಿಕ್ಸರ್‌, 1 ಬೌಂಡರಿ), ಯುವರಾಜ್ ಸಿಂಗ್ 23 ರನ್‌ (10 ಎಸೆತ, 2 ಸಿಕ್ಸರ್‌, 2 ಬೌಂಡರಿ), ಜೇಸನ್ ಕ್ರೆಜ್ಜಾ 2 ರನ್‌ ಹಾಗೂ ಅಲೋಕ್ ಕಪಾಲಿ 1 ರನ್‌ ಗಳಿಸಿದ್ರೆ, ಹೆಚ್ಚುವರಿ 15 ರನ್‌ ತಂಡಕ್ಕೆ ಸೇರ್ಪಡೆಯಾಗಿತ್ತು.

  • ನೂತನ ಸಾಯಿಕೃಷ್ಣನ್ ಸ್ಟೇಡಿಯಂ ಲೋಕಾರ್ಪಣೆ; ಸತ್ಯಸಾಯಿ ಗ್ರಾಮದಲ್ಲಿ ಸಚಿನ್-ಯುವಿ ತಂಡಗಳ ನಡುವೆ ಕ್ರಿಕೆಟ್ ಕಾಳಗ

    ನೂತನ ಸಾಯಿಕೃಷ್ಣನ್ ಸ್ಟೇಡಿಯಂ ಲೋಕಾರ್ಪಣೆ; ಸತ್ಯಸಾಯಿ ಗ್ರಾಮದಲ್ಲಿ ಸಚಿನ್-ಯುವಿ ತಂಡಗಳ ನಡುವೆ ಕ್ರಿಕೆಟ್ ಕಾಳಗ

    ಚಿಕ್ಕಬಳ್ಳಾಪುರ: ʻಒಂದು ಜಗತ್ತು-ಒಂದು ಕುಟುಂಬʼ (One World- One Family) ಘೋಷ ವಾಕ್ಯದಡಿ ಶ್ರೀ ಸದ್ಗುರು ಮಧುಸೂದನಸಾಯಿ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಬಳಿ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಕ್ರಿಕೆಟ್ ದಿಗ್ಗಜರ ಕಾಳಗ ನಡೆಯುತ್ತಿದೆ.

    ಸತ್ಯಸಾಯಿ ಗ್ರಾಮದಲ್ಲಿ ನೂತನ ಸಾಯಿಕೃಷ್ಣನ್ ಸ್ಟೇಡಿಯಂ (Sai Krishnan Cricket Stadium) ಲೋಕಾರ್ಪಣೆ ಅಂಗವಾಗಿ ಒಂದು ಜಗತ್ತು ಹಾಗೂ ಒಂದು ಕುಟುಂಬ ಎಂಬ (ಒನ್ ವರ್ಲ್ಡ್-ಒನ್ ಫ್ಯಾಮಿಲಿ ಕಪ್) ಟಿ20 ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ. ಸಾಯಿಕೃಷ್ಣನ್ ಕ್ರೀಡಾಂಗಣವನ್ನು ಸದ್ಗುರು ಮಧುಸೂದನಸಾಯಿ ಜೊತೆ ಸಚಿನ್ ತೆಂಡೂಲ್ಕರ್ (Sachin Tendulkar) ಹಾಗೂ ಯುವರಾಜ್ ಸಿಂಗ್ (Yuvraj Singh) ಲೋಕಾರ್ಪಣೆ ಮಾಡಿದ್ದಾರೆ. ಈ ಟೂರ್ನಿಯಲ್ಲಿ ಕ್ರಿಕೆಟ್‌ ದೇವರು ಖ್ಯಾತಿಯ ಸಚಿನ್ ತೆಂಡೂಲ್ಕರ್ ಹಾಗೂ ಯುವರಾಜ್ ಸಿಂಗ್ ನಾಯಕತ್ವದಡಿ 8 ದೇಶಗಳ 24 ಮಂದಿ ಆಟಗಾರರು ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಇದನ್ನೂ ಓದಿ: ನಾಯಕನಾಗಿ ಸಿಕ್ಸರ್‌ಗಳಿಂದಲೇ ಹೊಸ ದಾಖಲೆ – ನಂ.1 ಪಟ್ಟಕ್ಕೇರಿದ ರೋಹಿತ್‌ ಶರ್ಮಾ

    ಟಾಸ್ ಗೆದ್ದ ಒನ್ ವರ್ಲ್ಡ್ ತಂಡದ ನಾಯಕ ಸಚಿನ್ ತೆಂಡೂಲ್ಕರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಯುವರಾಜ್ ಸಿಂಗ್ ನಾಯಕತ್ವದ ಒನ್‌ ಫ್ಯಾಮಿಲಿ ತಂಡ ಬ್ಯಾಟಿಂಗ್ ನಡೆಸಿತು. ಮೊದಲ ಇನ್ನಿಂಗ್ಸ್‌ನಲ್ಲಿ ಯುವಿ ನಾಯಕತ್ವದ ಒನ್ ಫ್ಯಾಮಿಲಿ ತಂಡ 20 ಒವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 180 ರನ್ ಗಳನ್ನ ಗಳಿಸಿದೆ. ಸಚಿನ್ ತೆಂಡೂಲ್ಕರ್ ನೇತೃತ್ವದ ಒನ್‌ ವರ್ಲ್ಡ್ ತಂಡಕ್ಕೆ 181 ರನ್ ಗಳ ಗುರಿ ನೀಡಲಾಗಿದೆ. ಅಂದಹಾಗೆ ವಸುಧೈವ ಕುಟುಂಬಕಂ ಅನ್ನೋ ಮಾತಿಗೆ ಸಾಕ್ಷಿಭೂತವೆಂಬಂತೆ ಭಾರತದ ಸನಾತನ ಸಂಸ್ಕೃತಿಯನ್ನ ಸಾರುವ ವಿಶ್ವಕ್ಕೆ ಮಾನವೀಯತೆಯ ಸಂದೇಶ ಸಾರುವ ಸಲುವಾಗಿ ಈ ಒಂದು ಟೂರ್ನಿಯನ್ನ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 2 ಸೂಪರ್ ಓವರ್ ಥ್ರಿಲ್ಲರ್ – ಟೀಂ ಇಂಡಿಯಾಗೆ ರೋಚಕ ಗೆಲುವು

    ಒನ್ ಫ್ಯಾಮಿಲಿ ತಂಡದ ಸ್ಕೋರ್‌ ಕಾರ್ಡ್‌: ಡ್ಯಾರೆನ್ ಮ್ಯಾಡಿ 51 ರನ್‌ (41 ಎಸೆತ, 8 ಬೌಂಡರಿ), ರೋಮೇಶ್ ಕಲುವಿತಾರಣ 22 ರನ್‌ (15 ಎಸೆತ, 4 ಬೌಂಡರಿ), ಮೊಹಮ್ಮದ್ ಕೈಫ್ 9 ರನ್‌, ಪಾರ್ಥಿವ್ ಪಟೇಲ್ 19 ರನ್‌ (13 ಎಸೆತ, 3 ಬೌಂಡರಿ), ಯೂಸುಫ್ ಪಠಾಣ್ 38 ರನ್‌ (23, 4 ಸಿಕ್ಸರ್‌, 1 ಬೌಂಡರಿ), ಯುವರಾಜ್ ಸಿಂಗ್ 23 ರನ್‌ (10 ಎಸೆತ, 2 ಸಿಕ್ಸರ್‌, 2 ಬೌಂಡರಿ), ಜೇಸನ್ ಕ್ರೆಜ್ಜಾ 2 ರನ್‌ ಹಾಗೂ ಅಲೋಕ್ ಕಪಾಲಿ 1 ರನ್‌ ಗಳಿಸಿದ್ರೆ, ಹೆಚ್ಚುವರಿ 15 ರನ್‌ ತಂಡಕ್ಕೆ ಸೇರ್ಪಡೆಯಾಯಿತು. ಇದನ್ನೂ ಓದಿ: ರೋಹಿತ್ ಶತಕ, ರಿಂಕು ಹಾಫ್ ಸೆಂಚುರಿ, ವಿರಾಟ್ ಕೊಹ್ಲಿ 0- ಆಫ್ಘನ್‍ಗೆ 213 ರನ್ ಟಾರ್ಗೆಟ್

  • ಕ್ರಿಕೆಟ್‍ಗೆ ಗುಡ್ ಬೈ ಹೇಳಿದ ಯೂಸುಫ್ ಪಠಾಣ್

    ಕ್ರಿಕೆಟ್‍ಗೆ ಗುಡ್ ಬೈ ಹೇಳಿದ ಯೂಸುಫ್ ಪಠಾಣ್

    ನವದೆಹಲಿ: ಭಾರತ ತಂಡದ ಮಾಜಿ ಆಲ್‍ರೌಂಡರ್ ಆಟಗಾರ ಯೂಸುಫ್ ಪಠಾಣ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ಗುಡ್ ಬೈ ಹೇಳಿದ್ದಾರೆ.

    2007ರ ಟಿ20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್‍ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಯೂಸುಫ್ ಪಠಾಣ್ ತಮ್ಮ ಸ್ಪೋಟಕ ಬ್ಯಾಟಿಂಗ್ ಮತ್ತು ಸ್ಪಿನ್ ಕೈಚಳಕದಿಂದ ಎಲ್ಲರ ಗಮನಸೆಳೆದಿದ್ದರು.

    ಯೂಸುಫ್ ಪಠಾಣ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿದಾಯ ಪತ್ರವನ್ನು ಹಾಕಿದ್ದು, ನಾನು ನನ್ನ ನನ್ನ ಜೀವನದ ಕ್ರಿಕೆಟ್ ಇನ್ನಿಂಗ್ಸ್‍ಗೆ ಪೂರ್ಣ ವಿರಾಮ ಹಾಕುವ ಕಾಲ ಬಂದಿದೆ. ಇಂದಿನಿಂದ ನಾನು ಎಲ್ಲಾ ಪ್ರಕಾರದ ಕ್ರಿಕೆಟ್‍ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸುತ್ತಿದ್ದೇನೆ. ನನ್ನ ಕ್ರಿಕೆಟ್ ಜೀವನದಲ್ಲಿ ಜೊತೆಯಾದ ಸ್ನೇಹಿತರು, ಸಹ ಆಟಗಾರರು, ಕುಟುಂಬ ವರ್ಗ, ಅಭಿಮಾನಿಗಳು, ಹಲವು ತಂಡಗಳು, ತರಬೇತುದಾರರು ಹಾಗೂ ನನ್ನ ಎಲ್ಲಾ ದೇಶವಾಸಿಗಳು ನನಗೆ ಬೆಂಬಲ ಸೂಚಿಸಿರುವುದಕ್ಕಾಗಿ ಧನ್ಯವಾದ. ನಾನು 2011 ವಿಶ್ವಕಪ್ ವಿಜೇತ ಭಾರತ ತಂಡದಲ್ಲಿದ್ದಾಗ ಸಚಿನ್ ತೆಂಡೂಲ್ಕರ್ ಅವರನ್ನು ಹೆಗಲಲ್ಲಿ ಹೊತ್ತು ಸಾಗಿರುವುದು ನನಗೆ ಮರೆಯಲಾಗದ ಕ್ಷಣ ಎಂದು ನೆನಪಿಸಿಕೊಂಡಿದ್ದಾರೆ.

    ಯೂಸುಫ್ ಭಾರತದ ಪರ 57 ಏಕದಿನ ಪಂದ್ಯ ಆಡಿ 810 ರನ್ ಮತ್ತು 22 ಟಿ20 ಪಂದ್ಯವನ್ನು ಆಡಿ 236 ರನ್ ಸಿಡಿಸಿದ್ದಾರೆ. ಬಲಗೈ ಸ್ಪೋಟಕ ಬ್ಯಾಟಿಂಗ್‍ನೊಂದಿಗೆ ಬೌಲಿಂಗ್‍ನಲ್ಲೂ ಭಾರತಕ್ಕೆ ನೆರವಾಗುತ್ತಿದ್ದ ಯೂಸುಫ್ ಒಟ್ಟು 46 ವಿಕೆಟ್ ಪಡೆದು ಮಿಂಚಿದ್ದಾರೆ.

    ಯೂಸುಫ್ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 100 ಪಂದ್ಯಗಳಿಂದ 4825 ರನ್ ಮತ್ತು 201 ವಿಕೆಟ್ ಪಡೆದಿದ್ದಾರೆ. ಐಪಿಎಲ್ ನಲ್ಲಿ 2008ರಲ್ಲಿ ರಾಜಸ್ಥಾನ್ ರಾಯಲ್ಸ್, ಮತ್ತು 2012 ಮತ್ತು 2014ರಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಪರ ಆಡಿ ತಂಡ ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

  • ‘ಸಮಾಜಕ್ಕಾಗಿ ನಮ್ಮ ಕೈಲಾದಷ್ಟು’- ಮಾಸ್ಕ್ ವಿತರಿಸಿದ ಪಠಾಣ್ ಬ್ರದರ್ಸ್

    ‘ಸಮಾಜಕ್ಕಾಗಿ ನಮ್ಮ ಕೈಲಾದಷ್ಟು’- ಮಾಸ್ಕ್ ವಿತರಿಸಿದ ಪಠಾಣ್ ಬ್ರದರ್ಸ್

    ಗಾಂಧಿನಗರ: ಮಹಾಮಾರಿ ಕೊರೊನಾ ವೈರಸ್ ಇಡೀ ಜಗತ್ತನ್ನು ಬೆಚ್ಚಿಬಿಳಿಸಿದೆ. ವಿವಿಧ ಆಟಗಾರರು, ಕ್ರಿಕೆಟಿಗರು ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಹಾಗೂ ಯೂಸುಫ್ ಪಠಾಣ್ ಸಹೋದರರು ಮಾಸ್ಕ್‌ಗಳನ್ನು ವಿತರಿಸಿದ್ದಾರೆ.

    ಈ ಕುರಿತು ವಿಡಿಯೋ ಒಂದನ್ನು ಟ್ವೀಟ್ ಮಾಡಿರುವ ಇರ್ಫಾನ್ ಪಠಾಣ್, ‘ಸಮಾಜಕ್ಕಾಗಿ ನಮ್ಮ ಕೈಲಾದಷ್ಟು ಸಹಾಯ ಮಾಡಲು ಮುಂದಾಗಿದ್ದೇವೆ. ಕೊರೊನಾ ವೈರಸ್‍ನಿಂದ ಜಾಗೃತರಾಗಿರಿ. ಒಂದು ಜಾಗದಲ್ಲಿ ಹೆಚ್ಚಿನನ ಸಂಖ್ಯೆಯಲ್ಲಿ ಸೇರಬೇಡಿ. ಮಾಸ್ಕ್ ವಿತರಣೆ ಆರಂಭ ಮಾಡಿರುವುದು ಒಂದು ಸಣ್ಣ ಪ್ರಾರಂಭವಾಗಿದ್ದು, ಮುಂದೆ ನಾವು ಹೆಚ್ಚಿನ ಸಹಾಯವನ್ನು ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ.

    ಜೊತೆಗೆ ವಿಡಿಯೋದಲ್ಲಿ ಯೂಸುಫ್ ಪಠಾಣ್, ನಮ್ಮ ತಂದೆ ನಡೆಸುತ್ತಿರುವ ಟ್ರಸ್ಟ್ ಮೆಹಮೊದ್ ಖಾನ್ ಪಠಾಣ್ ಚಾರಿಟೇಬಲ್ ಟ್ರಸ್ಟ್ ಹೆಸರಿನಲ್ಲಿ ಮುಖವಾಡಗಳನ್ನು ದಾನ ಮಾಡಲಾಗುತ್ತಿದೆ. ಬರೋಡಾ ಆರೋಗ್ಯ ಇಲಾಖೆ, ಪೊಲೀಸ್ ಹಾಗೂ ಬಡ ಜನರಿಗೆ ಮಾಸ್ಕ್ ಗಳನ್ನು ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

    ಆರೋಗ್ಯ ಸಚಿವಾಲಯ ಮಂಗಳವಾರ ಬೆಳಗ್ಗೆ 8:30ಕ್ಕೆ ನೀಡಿದ ಮಾಹಿತಿ ಪ್ರಕಾರ, ಭಾರತದಲ್ಲಿ ಈಗ ಒಟ್ಟು 492 ಕೊರೊನಾ ವೈರಸ್ ಪ್ರಕರಣಗಳಿದ್ದು, ಈ ಪೈಕಿ 446 ಪ್ರಕರಣಗಳು ಸಕ್ರಿಯವಾಗಿವೆ. ಈಗಾಗಲೇ ಕೊರೊನಾ ಸೋಂಕಿತ 8 ಜನರು ಮೃತಪಟ್ಟಿದ್ದಾರೆ.

  • ಅಂಪೈರ್ ಔಟ್ ಕೊಟ್ರು ಕ್ರೀಸಿನಲ್ಲೇ ನಿಂತ ಯೂಸುಫ್- ಅಜಿಂಕ್ಯಾ ರಹಾನೆ ಗರಂ: ವಿಡಿಯೋ

    ಅಂಪೈರ್ ಔಟ್ ಕೊಟ್ರು ಕ್ರೀಸಿನಲ್ಲೇ ನಿಂತ ಯೂಸುಫ್- ಅಜಿಂಕ್ಯಾ ರಹಾನೆ ಗರಂ: ವಿಡಿಯೋ

    ವಡೋದರಾ: 2019-20ರ ರಣಜಿ ಟ್ರೋಫಿಯಲ್ಲಿ ಮುಂಬೈ ಶುಭಾರಂಭ ಮಾಡಿದ್ದು, ಬರೋಡಾ ವಿರುದ್ಧ 309 ರನ್ ಅಂತರದ ಜಯವನ್ನು ಪಡೆದಿದೆ. ಪಂದ್ಯದಲ್ಲಿ ಮುಂಬೈ ಪರ ಯುವ ಆಟಗಾರ ಪೃಥ್ವಿ ಶಾ ದ್ವಿಶತಕ ಸಿಡಿಸಿ ಗಮನ ಸೆಳೆದರೆ, ಹಿರಿಯ ಆಟಗಾರ ಯೂಸುಫ್ ಪಠಾಣ್ ಆನ್‍ಫೀಲ್ಡ್ ಅಂಪೈರ್ ವಿರುದ್ಧ ಗರಂ ಆದ ಘಟನೆ ನಡೆದಿದೆ.

    ಬರೋಡದ 2ನೇ ಇನ್ನಿಂಗ್ಸ್ ನಲ್ಲಿ ಘಟನೆ ನಡೆದಿದ್ದು, ಮುಂಬೈ ಸ್ಪಿನ್ನರ್ ಶಶಾಂಕ್ ಅರ್ಥಡೆ ಎಸೆದ 41ನೇ ಓವರಿನ ಎಸೆತವನ್ನು ಪಠಾಣ್ ರಕ್ಷಣಾತ್ಮಕವಾಗಿ ಆಡಲು ಮುಂದಾದರು. ಆದರೆ ಯೂಸುಫ್‍ರ ಪ್ಯಾಡ್‍ಗೆ ಬಡಿದ ಚೆಂಡು ಎದೆಗೆ ತಾಗಿ ಶಾರ್ಟ್ ಲೆಗ್‍ನಲ್ಲಿದ್ದ ಫೀಲ್ಡರ್ ಕೈಸೇರಿತ್ತು. ಮುಂಬೈ ಆಟಗಾರರು ಔಟ್ ಮನವಿ ಸಲ್ಲಿಸಿದ ಕಾರಣ ಅಂಪೈರ್ ಔಟ್ ಎಂದು ತೀರ್ಪು ನೀಡಿದರು.

    ಅಂಪೈರ್ ತೀರ್ಮಾನದಿಂದ ಕ್ಷಣ ಕಾಲ ಅಘಾತಕ್ಕೆ ಒಳಗಾದ ಯೂಸಫ್ ಕ್ರೀಸ್‍ನಲ್ಲೇ ನಿಂತರು. ಚೆಂಡು ಬ್ಯಾಟ್ ಅಥವಾ ಗ್ಲೌಸ್‍ಗೂ ತಾಗದೆ ಫೀಲ್ಡರ್ ಕೈಸೇರಿದ್ದು ರೀಪ್ಲೆಯಲ್ಲಿ ಸ್ಪಷ್ಟವಾಗಿ ಕಾಣುತಿತ್ತು. ಅಂಪೈರ್ ತೀರ್ಮಾನದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಯೂಸುಫ್ ಕ್ರಿಸ್‍ನಲ್ಲಿ ನಿಂತಿರುವುದನ್ನು ಕಂಡ ರಹಾನೆ ಕೂಡ ಕ್ಷಣ ಕಾಲ ಸಿಟ್ಟಾದರು. ಅಂತಿಮವಾಗಿ ಅಂಪೈರ್ ತೀರ್ಪಿನಂತೆ 14 ರನ್ ಗಳಿಸಿದ್ದ ಯೂಸುಫ್ ಒಲ್ಲದ ಮನಸ್ಸಿನಿಂದ ಪೆವಿಲಿಯನ್‍ನತ್ತ ನಡೆದರು.

    ಇದುವರೆಗೂ ದೇಶಿಯ ಕ್ರಿಕೆಟ್ ಟೂರ್ನಿಗಳಲ್ಲಿ ಡಿಆರ್ ಎಸ್ ಅಳವಡಿಸುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಅಂಪೈರ್ ಕೆಟ್ಟ ತೀರ್ಪಿಗೆ ಬಲಿಯಾದ 37 ವರ್ಷದ ಯೂಸುಫ್ ಒಂದೊಮ್ಮೆ ಡಿಆರ್ ಎಸ್ ಮನವಿಯ ಅವಕಾಶ ಹೊಂದಿದ್ದರೆ ತಮ್ಮ ವಿಕೆಟ್ ಕಾಯ್ದುಕೊಳ್ಳುತ್ತಿದ್ದರು.

    ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 431 ರನ್ ಗಳಿಸಿದ ಮುಂಬೈ, ಎದುರಾಳಿ ತಂಡವನ್ನು 307 ರನ್ ಗಳಿಗೆ ಕಟ್ಟಿಹಾಕಿ 2ನೇ ಇನ್ನಿಂಗ್ಸ್ ಆರಂಭಿಸಿತು. ಪೃಥ್ವಿ ಶಾ 2ನೇ ಇನ್ನಿಂಗ್ಸ್ ನಲ್ಲಿ ಸ್ಫೋಟಕ ದ್ವಿಶತಕ ಸಿಡಿಸಿದ ಕಾರಣ ಮುಂಬೈ ತಂಡ 4 ವಿಕೆಟ್ ಕಳೆದುಕೊಂಡು 409 ರನ್ ಗಳಿಗೆ ಡಿಕ್ಲೇರ್ ನೀಡಿತು. ಗೆಲ್ಲಲು 534 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ಬರೋಡ ತಂಡ 224 ರನ್ ಗಳಿಗೆ ಆಲೌಟ್ ಆಗುವ ಮೂಲಕ ಸೋಲುಂಡಿತು. ಪಂದ್ಯದಲ್ಲಿ 10 ವಿಕೆಟ್ ಪಡೆದ ಶಮ್ಸ್ ಮುಲಾನಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.

  • ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ಪಠಾಣ್ ಬ್ರದರ್ಸ್

    ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ಪಠಾಣ್ ಬ್ರದರ್ಸ್

    ಮುಂಬೈ: ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ಇರ್ಫಾನ್ ಪಠಾಣ್ ಹಾಗೂ ಯೂಸುಫ್ ಪಠಾಣ್ ವಡೋದರ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ. ಅಲ್ಲದೆ ಸಂತ್ರಸ್ತರಿಗೆ ಊಟ ಬಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದ ಸ್ಥಿತಿ ಎದುರಾಗಿದೆ. ಅಲ್ಲದೆ ಗುಜರಾತ್‍ನ ವಡೋದರದಲ್ಲಿ ಎರಡು ದಿನದಿಂದ ಭಾರೀ ಮಳೆಯಾಗುತ್ತಿರುವ ಕಾರಣ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಅಗತ್ಯ ವಸ್ತು ಸಿಗದೇ ಸಂತ್ರಸ್ತರು ಪರದಾಡುತ್ತಿದ್ದಾರೆ. ಹೀಗಿರುವಾಗ ಇರ್ಫಾನ್ ಪಠಾಣ್ ಹಾಗೂ ಯೂಸುಫ್ ಪಠಾಣ್ ಸಂತ್ರಸ್ತರಿಗೆ ಊಟ ಬಡಿಸುವ ಜನರ ಕಷ್ಟಕ್ಕೆ ಸ್ಪಂದಿಸಿದ್ದಾರೆ.

    https://twitter.com/farheenSRK/status/1157592182242459648?ref_src=twsrc%5Etfw%7Ctwcamp%5Etweetembed%7Ctwterm%5E1157592182242459648&ref_url=https%3A%2F%2Fwww.jagran.com%2Fcricket%2Fbouncer-indian-cricketer-irfan-pathan-and-yusuf-pathan-arranges-food-for-flood-hit-victims-in-vadodara-19458435.html

    ಯೂಸುಫ್ ಪಠಾಣ್ ಹಾಗೂ ಇರ್ಫಾನ್ ಪಠಾಣ್ ಅವರು ತಮ್ಮ ತಂಡದ ಜೊತೆ ಸೇರಿ ಪ್ರವಾಹ ಸಂತ್ರಸ್ತರಿಗೆ ಊಟ ಹಾಗೂ ಅಗತ್ಯ ವಸ್ತು ನೀಡಿದ್ದಾರೆ. ಈ ವೇಳೆ ಯೂಸುಫ್ ಪಠಾಣ್ ಸಂತ್ರಸ್ತರಿಗೆ ಆಹಾರ ಸಿದ್ಧತೆ ನಡೆಸಿ, ಕೆಲವು ಮಂದಿಗೆ ಊಟ ಕೂಡ ಬಡಿಸುವುದು ಕ್ಯಾಮೆರಾದಲ್ಲಿ ಸೆರೆ ಆಗಿದೆ. ಅಲ್ಲದೆ ಇರ್ಫಾನ್ ಪಠಾಣ್ ಅವರು ಕೂಡ ಜನರ ಸಹಾಯ ಮಾಡಿದ್ದಾರೆ.

    ಅಭಿಮಾನಿಯೊಬ್ಬರು ಟ್ವಿಟ್ಟರಿನಲ್ಲಿ ಇರ್ಫಾನ್ ಹಾಗೂ ಯೂಸುಫ್ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡುವ ಮೂಲಕ ಅವರ ಬಳಿ ಸಹಾಯ ಕೇಳಿದರು. ಅಲ್ಲದೆ, “ಕೆಲವು ಯುವತಿಯರು ಭಾರೀ ಮಳೆಯಿಂದ ತಮ್ಮ ಹಾಸ್ಟಲಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಅವರಿಗೆ ಅಲ್ಲಿ ತಿನ್ನಲು ಸಹ ಏನೂ ಇಲ್ಲ” ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ನೋಡಿ ಇರ್ಫಾನ್ ಅವರು, “ನಿಮಗೆ ಅತಿ ಶೀಘ್ರದಲ್ಲೆ ಸಹಾಯ ಮಾಡುತ್ತೇವೆ” ಎಂದು ರೀ-ಟ್ವೀಟ್ ಮಾಡಿದ್ದರು.

  • ಕೊಹ್ಲಿ ಸೂಪರ್ ಕ್ಯಾಚ್ ಪಡೆದ ಯೂಸುಫ್- ಅಭಿಮಾನಿಗಳ ರಿಯಾಕ್ಷನ್ ಹೀಗಿದೆ

    ಕೊಹ್ಲಿ ಸೂಪರ್ ಕ್ಯಾಚ್ ಪಡೆದ ಯೂಸುಫ್- ಅಭಿಮಾನಿಗಳ ರಿಯಾಕ್ಷನ್ ಹೀಗಿದೆ

    ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ, ಹೈದರಾಬಾದ್ ನಡುವಿನ ಪಂದ್ಯದಲ್ಲಿ ಕೊಹ್ಲಿ ಸೂಪರ್ ಕ್ಯಾಚ್ ಪಡೆದ ಯೂಸುಫ್ ಪಠಾಣ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪಂದ್ಯದ 9 ಓವರ್ ನಲ್ಲಿ ಸ್ಟೈಕ್ ನಲ್ಲಿದ್ದ ಕೊಹ್ಲಿ ಶಕೀಬ್ ಎಸೆತವನ್ನು ಬೌಂಡರಿಗಟ್ಟಲು ಯತ್ನಿಸಿದರು. ಈ ವೇಳೆ ಫೀಲ್ಡ್‍ನಲ್ಲಿದ್ದ 35 ವರ್ಷದ ಯೂಸುಫ್ ಒಂದೇ ಕೈಯಲ್ಲಿ ಕ್ಯಾಚ್ ಪಡೆದು ಎಲ್ಲರನ್ನು ಹುಬ್ಬೇರುವಂತೆ ಮಾಡಿದ್ದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ತಮ್ಮದೇ ಅಭಿಪ್ರಾಯ ತಿಳಿಸಿ ಟ್ವೀಟ್ ಮಾಡಿದ್ದಾರೆ.

    ಆರ್‌ಸಿಬಿ ವಿರುದ್ಧ ಪಂದ್ಯದ ಗೆಲುವಿನೊಂದಿಗೆ ಹೈದರಾಬಾದ್ ಐಪಿಎಲ್ 2018 ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಆಡಿರುವ 10 ಪಂದ್ಯಗಳಲ್ಲಿ 8 ರಲ್ಲಿ ಗೆಲುವು ಪಡೆದಿರುವ ಹೈದರಾಬಾದ್ 16 ಅಂಕಗಳನ್ನು ಪಡೆದಿದೆ. ಇನ್ನು ಹೈದರಾಬಾದ್ ವಿರುದ್ಧ ಸೋಲಿನೊಂದಿಗೆ ಆರ್‌ಸಿಬಿ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿದ್ದು, ಆಡಿರುವ 10 ಪಂದ್ಯಗಳಲ್ಲಿ ಕೇವಲ 3 ಪಂದ್ಯಗಳಲ್ಲಿ ಗೆಲುವು ಪಡೆದು 6 ಅಂಕಗಳನ್ನು ಪಡೆದುಕೊಂಡಿದೆ.

  • ಆಲ್‍ರೌಂಡರ್ ಯೂಸೂಫ್ ಪಠಾಣ್ 5 ತಿಂಗಳು ಅಮಾನತು

    ಆಲ್‍ರೌಂಡರ್ ಯೂಸೂಫ್ ಪಠಾಣ್ 5 ತಿಂಗಳು ಅಮಾನತು

    ನವದೆಹಲಿ: ಉದ್ದೀಪನಾ ಮದ್ದು ಸೇವನಾ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಆಲ್ ರೌಂಡರ್ ಯೂಸೂಫ್ ಪಠಾಣ್ ಅವರನ್ನು ಬಿಸಿಸಿಐ ಅಮಾನತುಗೊಳಿಸಿದೆ.

    ಕಫ್ ಸೀರಪ್‍ಗಳಲ್ಲಿ ಪತ್ತೆಯಾಗುವ ನಿಷೇಧಿತ ವಸ್ತುವನ್ನು ಯೂಸೂಫ್ ಪಠಾಣ್ ಅವರು ಅಜಾಗರೂಕತೆಯಿಂದ ಸೇವಿಸಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ತಮ್ಮ ಹೇಳಿಕೆಯನ್ನು ತಿಳಿಸಿದ್ದಾರೆ.

    ಮಾರ್ಚ್ 16 ರಂದು ನವದೆಹಲಿ ನಡೆದ ದೇಶಿಯ ಕ್ರಿಕೆಟ್ ಟೂರ್ನಿ ವೇಳೆ ಬಿಸಿಸಿಐ ಉದ್ದೀಪನಾ ಮದ್ದು ಪರೀಕ್ಷೆ ವೇಳೆ ಪಠಾಣ್ ಅವರ ರಕ್ತ ಹಾಗೂ ಮೂತ್ರದ ಮಾದರಿಯನ್ನು ಪಡೆಯಲಾಗಿತ್ತು. ಅವರ ಮಾದರಿಯಲ್ಲಿ ನಿಷೇಧಿತ ಟೆರ್ಬುಟಲೈನ್ ಎಂಬ ಅಂಶ ಪತ್ತೆಯಾಗಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ವಿಶ್ವ ಉದ್ದೀಪನ ಮದ್ದು ತಡೆ ಘಟಕ(ವಾಡಾ) ನಿಷೇಧಿತ ವಸ್ತುಗಳಲ್ಲಿ ಟೆರ್ಬುಟಲೈನ್ ಔಷಧಿಯು ಸೇರಿರುವ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ.

    ಬಿಸಿಸಿಐ ಆ್ಯಂಟಿ ಡೋಪಿಂಗ್ ನಿಯಮಗಳ ಅನುಚ್ಛೇದ 2.1 ರ ಅಡಿಯಲ್ಲಿ ಪಠಾಣ್ ನಿಯಮವನ್ನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಬಿಸಿಸಿಐ ಅವರನ್ನು ಅಮಾನತುಗೊಳಿಸಿದೆ. 2017 ರ ಆಕ್ಟೋಬರ್ 27 ರಿಂದ 2018ರ ಜನವರಿ 14ರ ವರೆಗೆ ಈ ನಿಷೇಧ ಅವಧಿ ಇರಲಿದೆ.

    ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಯೂಸೂಫ್, ತನಗೆ ನೀಡಬೇಕಾದ ಔಷಧಿಯ ಬದಲು ಅಜಾಗರೂಕತೆಯಿಂದ ಬೇರೆ ಔಷಧಿಯನ್ನು ನೀಡಲಾಗಿದೆ. ಉದ್ದೇಶ ಪೂರ್ವಕವಾಗಿ ಈ ಔಷಧಿಯನ್ನು ಸೇವಿಸಿಲ್ಲ ಎಂದು ತಿಳಿಸಿದ್ದಾರೆ.

    ಯೂಸೂಫ್ ಅವರ ವಿವರಣೆಯಿಂದ ತೃಪ್ತಿ ಹೊಂದಿರುವ ಬಿಸಿಸಿಐ, ತಜ್ಞರ ಅಭಿಪ್ರಾಯಗಳನ್ನು ಪಡೆಯುವ ಮೂಲಕ ಯೂಸೂಫ್ ಅವರಿಗೆ 5 ತಿಂಗಳ ಅವಧಿಗೆ ನಿಷೇಧ ಹೇರಿದೆ. ಯೂಸೂಫ್ ಅವರ ಮೇಲಿನ ನಿಷೇಧ ಜನವರಿ 14 ರಂದು ಕೊನೆ ಆಗಲಿರುವ ಕಾರಣ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ.