Tag: Yuva Snehi

  • ಯುವಸ್ನೇಹಿ, ಬದುಕಿನ ದಾರಿ ಯೋಜನೆ ಪ್ರಕಟ – ಯುವಜನತೆಗೆ ಸಿಗುತ್ತೆ ಹಣ

    ಯುವಸ್ನೇಹಿ, ಬದುಕಿನ ದಾರಿ ಯೋಜನೆ ಪ್ರಕಟ – ಯುವಜನತೆಗೆ ಸಿಗುತ್ತೆ ಹಣ

    ಬೆಂಗಳೂರು: ಕರ್ನಾಟಕ ಬಜೆಟ್‌ನಲ್ಲಿ ʼಯುವ ಸ್ನೇಹಿʼ ಮತ್ತು ʼಬದುಕಿನ ದಾರಿʼ ಹೆಸರಿನಲ್ಲಿ ಹೊಸ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

    ಯುವ ಸ್ನೇಹಿ: ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು ‘ಯುವಸ್ನೇಹಿ ಎಂಬ ಹೊಸ ಯೋಜನೆಯಡಿ ತಲಾ 2,000 ರೂ. ಗಳ ಒಂದು ಬಾರಿಯ ಆರ್ಥಿಕ ನೆರವು ನೀಡಲಾಗುವುದು.

    ಬದುಕಿನ ದಾರಿ: ಹೊಸ ಯೋಜನೆಯಡಿ ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರೆಸಲು ಸಾಧ್ಯವಾಗದೇ ಇರುವ ಯುವಜನರಿಗೆ ಐಟಿಐಗಳಲ್ಲಿ 3 ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕ 1,500 ರೂ. ಗಳ ಶಿಷ್ಯವೇತನವನ್ನು ನೀಡಲಾಗುವುದು. ತರಬೇತಿಯನ್ನು ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿಯಲ್ಲಿ 3 ತಿಂಗಳಿಗೆ ಮಾಸಿಕ 1,500 ರೂ. ಗಳ ಶಿಶಿಕ್ಷು ಭತ್ಯೆಯನ್ನು ನೀಡಲಾಗುವುದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k