Tag: YuvaBrigade

  • ಪ್ರಾಥಮಿಕ ಮಾಹಿತಿ ಇಲ್ಲದೇ ಸೂಲಿಬೆಲೆ ಸುಳ್ಳು ಹೇಳ್ತಿದ್ದಾರೆ: ಬೋಸ್ ಕಿಡಿ

    ಪ್ರಾಥಮಿಕ ಮಾಹಿತಿ ಇಲ್ಲದೇ ಸೂಲಿಬೆಲೆ ಸುಳ್ಳು ಹೇಳ್ತಿದ್ದಾರೆ: ಬೋಸ್ ಕಿಡಿ

    ಮೈಸೂರು: ಯುವ ಬ್ರಿಗೇಡ್ (Yuva Brigade) ಸಂಚಾಲಕ ವೇಣುಗೋಪಾಲ್ (Venugopal Murder Case) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆಯವರು ಪ್ರಾಥಮಿಕ ಮಾಹಿತಿ ಇಲ್ಲದೇ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮಹದೇವಪ್ಪ ಪುತ್ರ ಸುನೀಲ್ ಬೋಸ್ (Sunil Bose) ತೀಕ್ಷ್ಣ ತಿರುಗೇಟು ನೀಡಿದ್ದಾರೆ.

    ವೇಣುಗೋಪಾಲ್ ಹತ್ಯೆಯ ಹಿಂದೆ ಮಹದೇವಪ್ಪ ಪುತ್ರ ಸುನಿಲ್ ಬೋಸ್ ಕೈವಾಡ ಇದೆ ಎಂಬ ಚಕ್ರವರ್ತಿ (Chakravarti Sulibele) ಆರೋಪಕ್ಕೆ ಪ್ರತಿಕ್ರಿಯಿಸಿದ ಬೋಸ್, ಚಕ್ರವರ್ತಿ ಸೂಲಿಬೆಲೆಗೆ ತಲೆ ಸರಿ ಇಲ್ಲ. ಅವರಿಗೆ ಮೊದಲು ಉತ್ತಮ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಅಗತ್ಯತೆ ಇದೆ. ಸುಳ್ಳಿನಿಂದಲೇ ಜೀವನ ಕಟ್ಟಿಕೊಂಡಿರುವ ವ್ಯಕ್ತಿ ಅವರು. ಈ ಕೊಲೆ ಪ್ರಕರಣದಲ್ಲಿಯೂ ಸುಳ್ಳು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಕೊಲೆ ವಿಚಾರದಲ್ಲಿ ಸೂಲಿಬೆಲೆಗೆ ಪ್ರಾಥಮಿಕ ಮಾಹಿತಿ ಇಲ್ಲ. ಸತ್ತಿರುವ ಯುವಕ ನಾಯಕ ಸಮುದಾಯದ ವ್ಯಕ್ತಿ. ಆದರೆ ಸೂಲಿಬೆಲೆ ಅವರನ್ನ ದಲಿತ ಸಮುದಾಯ ಎಂದು ಸುಳ್ಳು ಹೇಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

    ವೈಯಕ್ತಿಕ ವಿಚಾರಕ್ಕೆ ಮಾಡುವ ಕೊಲೆಗೆ ಒಬ್ಬ ವ್ಯಕ್ತಿ ಅಥವಾ ಪಕ್ಷ ಹೇಗೆ ಹೊಣೆಗಾರರಾಗುತ್ತಾರೆ. ವೈಯಕ್ತಿಕ ಗಲಭೆಗಳು, ಕೃತ್ಯಗಳಿಗೆ ನಾವು ಹೊಣೆಗಾರರಾಗಲು ಸಾಧ್ಯವಿಲ್ಲ. ಬಿಜೆಪಿ ಕಾರ್ಯಕರ್ತನೊಬ್ಬ ಈ ರೀತಿ ಘಟನೆಯಲ್ಲಿ ಭಾಗಿಯಾದ್ರೆ ಅದರ ಹೊಣೆಯನ್ನ ಬಿಜೆಪಿ ಹೊರುತ್ತಾ..?. ಇಂತಹ ಸಾವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಪಕ್ಷದ ಅನೇಕ ಕಾರ್ಯಕರ್ತರು ನಮ್ಮ ಜೊತೆ ಫೋಟೋ ತೆಗೆಸಿಕೊಂಡಿರುತ್ತಾರೆ. ನಾನು ಈ ಭಾಗದ ಮುಖಂಡ. ಅವರು ಮಾಡುವ ವೈಯಕ್ತಿಕ ತಪ್ಪಿಗೆ ನಾವು ಹೇಗೆ ಪ್ರೇರಣೆಯಾಗುತ್ತೇವೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ವೇಣುಗೋಪಾಲ್‌ ಹತ್ಯೆಯ ಹಿಂದೆ ಮಹದೇವಪ್ಪ ಪುತ್ರ ಸುನಿಲ್‌ ಬೋಸ್‌ ಕೈವಾಡ: ಸೂಲಿಬೆಲೆ

    ಪ್ರಕರಣದ 4ನೇ ಆರೋಪಿ ಬಿಜೆಪಿ (BJP) ಪಾಲಿಕೆ ಸದಸ್ಯೆಯ ತಮ್ಮ. ಇದನ್ನು ನೋಡಿ ಬಿಜೆಪಿಯವರೇ ಹೇಳಿಕೊಟ್ಟಿದ್ದಾರೆ ಎಂದು ನಾನು ಪ್ರಶ್ನಿಸಿದರೆ ಅದು ಹೇಗಿರುತ್ತದೆ ಹೇಳಿ. ನೀನು ಕೊಲೆ ಮಾಡು, ನಾವು ರಾಜಕಾರಣ ಮಾಡುತ್ತೇವೆ ಎಂದು ಆತನಿಗೆ ಹೇಳಿಕೊಟ್ಟಿದ್ರಾ ಎಂದು ನಾನು ಪ್ರಶ್ನಿಸುತ್ತೇನೆ. ಈ ಪ್ರಶ್ನೆಗೆ ಅವರು ಉತ್ತರಿಸಲು ಸಾಧ್ಯನಾ..?. ಸಾವಿನಲ್ಲಿ ರಾಜಕಾರಣ ಯಾರೂ ಮಾಡಬಾರದು. ಬಿಜೆಪಿಯವರು ಶವದ ಮೇಲೆ ರಾಜಕಾರಣ ಮಾಡಲು ಹೊರಟಿದ್ದಾರೆ. ಬಿಜೆಪಿಗೆ ಸದಾ ಕಾಲ ಇಂತ ಕೊಲೆ ಗಲಭೆಗಳ ಬಗ್ಗೆ ಆಸಕ್ತಿ ಜಾಸ್ತಿ ಎಂದು ಗರಂ ಆದರು.

    ನಾನು ಈ ಕೊಲೆಯನ್ನ ನಾನು ಖಂಡಿಸುತ್ತೇನೆ. ಸರಿಯಾದ ನಿಟ್ಟಿನಲ್ಲಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ನಮ್ಮ ತಂದೆ ಮಹದೇವಪ್ಪ ಕೂಡ ಸೂಚನೆ ನೀಡಿದ್ದಾರೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರತಿನಿತ್ಯ 15 ನಿಮಿಷ ಫೋನಿನಲ್ಲಿ ಕನ್ನಡ ಕಲಿಯಿರಿ – ಯುವಾ ಬ್ರಿಗೇಡಿನಿಂದ ಕನ್ನಡ ಸುಗಂಧ

    ಪ್ರತಿನಿತ್ಯ 15 ನಿಮಿಷ ಫೋನಿನಲ್ಲಿ ಕನ್ನಡ ಕಲಿಯಿರಿ – ಯುವಾ ಬ್ರಿಗೇಡಿನಿಂದ ಕನ್ನಡ ಸುಗಂಧ

    ಬೆಂಗಳೂರು: ಯುವಾ ಬ್ರಿಗೇಡ್ ಸಂಘಟನೆ ಈಗ ಕನ್ನಡ ಗೊತ್ತಿಲ್ಲದವರಿಗೆ ಕನ್ನಡ ಕಲಿಸಲು ಮುಂದಾಗಿದೆ.

    ‘ಕನ್ನಡ ಸುಗಂಧ’ ಹೆಸರಿನಲ್ಲಿ ಪ್ರತಿನಿತ್ಯ ಪ್ರತಿನಿತ್ಯ 15 ನಿಮಿಷಗಳ ಕಾಲ ಪೋನಿನ ಮೂಲಕ ಕನ್ನಡ ಕಲಿಸುವ ಪ್ರಯತ್ನ ಮಾಡಲಾಗುವುದು ಎಂದು ಯುವಾ ಬ್ರಿಗೇಡ್ ತಿಳಿಸಿದೆ.

    ಈ ಸಂಬಂಧ ಟ್ವೀಟ್ ಮಾಡಿರುವ ಸಂಘಟನೆ, ಯುವಾ ಬ್ರಿಗೇಡಿನ ವತಿಯಿಂದ ಕನ್ಮಡಿಗರಲ್ಲದ ಹೊರರಾಜ್ಯದವರಿಗೆ ಕನ್ನಡ ಕಲಿಸುವ ವಿನೂತನ ಪ್ರಯತ್ನ. ಪ್ರತಿನಿತ್ಯ 15 ನಿಮಿಷಗಳ ಕಾಲ ಪೋನಿನ ಮೂಲಕ ಕನ್ನಡ ಕಲಿಸುವ ಪ್ರಯತ್ನ ಮಾಡಲಾಗುವುದು. ಆಸಕ್ತರು ನಮ್ಮನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳಿ. ಹೊರನಾಡಿನಿಂದ ಬಂದ ನಿಮ್ಮ ಬಂಧುಗಳಿಗೂ ತಿಳಿಸಿ. ಹೆಚ್ಚಿನ ವಿವರಕ್ಕೆ 80730 22138 ನಂಬರ್ ಸಂಪರ್ಕಿಸಿ ಎಂದು ಮನವಿ ಮಾಡಿಕೊಂಡಿದೆ. ಇದನ್ನೂ ಓದಿ: ಸೂಲಿಬೆಲೆಯಿಂದ #GramSvarga ಚಾಲೆಂಜ್- ನಾವು ರೆಡಿ ಅಂದ್ರು ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ