Tag: yuvajanotsava

  • ರನ್‌ವೇ ಸಿದ್ದವಾಗಿದೆ, ಕೌಶಲ್ಯಗಳನ್ನು ಕಲಿತು ಟೇಕಾಫ್‌ ಆಗಿ – ಯುವ ಜನತೆಗೆ ಮೋದಿ ಕರೆ

    ರನ್‌ವೇ ಸಿದ್ದವಾಗಿದೆ, ಕೌಶಲ್ಯಗಳನ್ನು ಕಲಿತು ಟೇಕಾಫ್‌ ಆಗಿ – ಯುವ ಜನತೆಗೆ ಮೋದಿ ಕರೆ

    ಹುಬ್ಬಳ್ಳಿ: ಈ ಶತಮಾನ ಭಾರತದ ಶತಮಾನ (India Century) ಎಂದು ಇಡೀ ವಿಶ್ವವೇ ಹೇಳುತ್ತಿದೆ. ಈ ಕಾರಣಕ್ಕೆ ರನ್‌ವೇ ಸಿದ್ದವಾಗಿದೆ. ಹೊಸ ಹೊಸ ಕೌಶಲ್ಯಗಳನ್ನು ಕಲಿತು ನೀವು ಟೇಕಾಫ್‌ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಯುವ ಜನತೆಗೆ ಕರೆ ನೀಡಿದ್ದಾರೆ.

    ರೈಲ್ವೇ ಮೈದಾನದಲ್ಲಿ (Hubballi Railway Ground) ನಡೆಯುತ್ತಿರುವ ರಾಷ್ಟ್ರೀಯ ಯುವಜನೋತ್ಸವ (Yuvajanotsava) ಕಾರ್ಯಕ್ರಮದಲ್ಲಿ ಆರಂಭದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ ಮುರುಘಾ ಮಠ, ಸಿದ್ದರೂಢ ಮಠ, ಸಿದ್ದೇಶ್ವರ ಸ್ವಾಮೀಜಿ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಸಿಯಾಚಿನ್‌ನಲ್ಲಿ ಹೋರಾಡಿ ಹುತಾತ್ಮರಾದ ಲ್ಯಾನ್ಸ್‌ ನಾಯಕ್‌ ಹನುಮಂತಪ್ಪ ಕೊಪ್ಪದ್‌ ಅವರನ್ನು ಸ್ಮರಿಸಿಕೊಂಡರು.

    ಹೊಸ ಸಂಕಲ್ಪದತ್ತ ಭಾರತ ಮುನ್ನಡೆಯುತ್ತಿದೆ. ಯುವ ಶಕ್ತಿಯಿಂದ ರಾಷ್ಟ್ರ ನಿರ್ಮಾಣ ಆಗುತ್ತದೆ ಎಂದು ವಿವೇಕಾನಂದರು ಹೇಳಿದ್ದಾರೆ. ಇಡೀ ವಿಶ್ವವೇ ಭಾರತವನ್ನು ಈಗ ನೋಡುತ್ತಿದೆ. ನಮ್ಮದು ಯುವ ದೇಶವಾಗಿದ್ದು ಮುಂದಿನ 25 ವರ್ಷದಲ್ಲಿ ಭಾರತವನ್ನು ಕಟ್ಟಬೇಕು. ವಿಶ್ವದ ಹೂಡಿಕೆದಾರರು ಭಾರತದಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ನಿಮ್ಮ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣಕ್ಕೆ ವಿವಿಧ ಕೌಶಲ್ಯಗಳನ್ನು ಕಲಿತು ನೀವು ಟೇಕಾಫ್‌ ಆಗಬೇಕು ಎಂದರು. ಇದನ್ನೂ ಓದಿ: ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ – ಬ್ಯಾರಿಕೇಡ್ ಹಾರಿ ಕಾರಿನತ್ತ ನುಗ್ಗಿದ ಯುವಕ

    ಡಿಫೆನ್ಸ್‌ನಿಂದ ಡಿಜಿಟಲ್‌ ಇಂಡಿಯಾದವರೆಗೆ, ಆಟಿಕೆಯಿಂದ ಹಿಡಿದು ಪ್ರವಾಸದೋದ್ಯಮದವರೆಗೆ ಉದ್ಯೋಗ ಸೃಷ್ಟಿಯಾಗುತ್ತಿದೆ. ಅವಕಾಶ, ಅಶಾವಾದ ಎರಡೂ ಜೊತೆಯಾಗಿ ಬರುತ್ತಿದೆ. ಈ ಅವಕಾಶಗಳನ್ನು ಬಳಸಿ ಭಾರತವನ್ನು ವಿಶ್ವದ ಟಾಪ್‌ 3 ಆರ್ಥಿಕತೆಯನ್ನು ಹೊಂದಿದ ದೇಶವನ್ನಾಗಿ ರೂಪಿಸುವ ಜವಾಬ್ದಾರಿ ಯುವ ಜನತೆಯ ಮೇಲಿದೆ ಎಂದು ಹೇಳಿದರು.

    ವಿಶ್ವ ಈಗ ಬದಲಾಗುತ್ತಿದ್ದು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌, ವಿಆರ್‌ ಟೆಕ್ನಾಲಜಿ, ಡೇಟಾ ಸೈನ್ಸ್‌, ಸೈಬರ್‌ ಸೆಕ್ಯೂರಿಟಿಯಂತಹ ಹೊಸ ಹೊಸ ವಿಷಯಗಳು ಬರುತ್ತಿವೆ. ಈಗ ಇರುವ ಉದ್ಯೋಗಗಳು ಮುಂದೆ ಇರುವುದಿಲ್ಲ. ಬದಲಾಗುತ್ತಿರುವ ಜಗತ್ತಿಗೆ ಅನುಗುಣವಾಗಿ ನಾವು ಬದಲಾಗಬೇಕು. ಹೊಸ ಕೌಶಲ್ಯಗಳನ್ನು ನಾವು ಕಲಿತುಕೊಳ್ಳಬೇಕು. ಹೇಗೆ ಬದಲಾಗಬೇಕು ಎಂದರೆ ಮುಂದುವರಿದ ದೇಶಗಳಿಗಿಂತ 10 ಹೆಜ್ಜೆ ಮುಂದೆ ನಾವಿರಬೇಕು. ಈ ಕಾರಣಕ್ಕೆ ಪ್ರಾಯೋಗಿಕ ಮತ್ತು ಭವಿಷ್ಯದ ದೃಷ್ಟಿಯನ್ನು ನೋಡಿಕೊಂಡು ಹೊಸ ಶಿಕ್ಷಣ ನೀತಿಯನ್ನು (NEP) ನಾವು ತಂದಿದ್ದೇವೆ ಎಂದು ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.

    ಆಶಾವಾದಿಯಾಗಿ, ಧನಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಬೇಕು. ದೇಶವನ್ನು ಮುನ್ನಡೆಸಲು ಯುವಶಕ್ತಿ ನಿರ್ಣಾಯಕ. ಯುವ ಶಕ್ತಿ ನಮ್ಮ ಚಾಲನಾ ಶಕ್ತಿ. ಡಿಜಿಟಲ್‌ ಪೇಮೆಂಟ್‌, ಸ್ವಚ್ಚ ಭಾರತ, ಜನ ಧನ್‌ ಬಂದಾಗ ಲೇವಡಿ ಮಾಡಿದರು. ಕೋವಿಡ್‌ ಬಂದಾಗ ನಮ್ಮ ಲಸಿಕೆಯನ್ನು ವ್ಯಂಗ್ಯವಾಡಿದರು. ಆದರೆ ಡಿಜಿಟಲ್‌ ಪೇಮೆಂಟ್‌ನಲ್ಲಿ ನಾವು ನಮ್ಮ ಶಕ್ತಿಯನ್ನು ವಿಶ್ವಕ್ಕೆ ತೋರಿಸಿದ್ದೇವೆ. ನಿಶ್ಚಿತ ಭಾರತ, ಸಶಕ್ತ ಭಾರತ ಲಕ್ಷ್ಯವನ್ನು ಇಟ್ಟುಕೊಂಡು ನಾವು ಮುನ್ನಡೆಯುತ್ತಿದ್ದೇವೆ. ತಮ್ಮ ಕನಸನ್ನು ಯುವ ಜನತೆ ನನಸು ಮಾಡುತ್ತಾರೆ ಎಂಂದು ವಿಶ್ವಾಸ ವ್ಯಕ್ತಪಡಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆದಿಚುಂಚನಗಿರಿಯಲ್ಲಿ ಕಳೆಗಟ್ಟಿದ ಯುವಜನೋತ್ಸವ

    ಆದಿಚುಂಚನಗಿರಿಯಲ್ಲಿ ಕಳೆಗಟ್ಟಿದ ಯುವಜನೋತ್ಸವ

    ಮಂಡ್ಯ: ಕಾಲ ಭೈರವನ ಗಿರಿ ಚಂದ, ಅಲ್ಲಿ ಕುಣಿಯುವ ನವಿಲು ಇನ್ನೂ ಚಂದ. ಇದು ಆದಿಚುಂಚನಗಿರಿಗೆ ಇರುವ ಜನಪದ ಮಾತು. ನವಿಲಿನ ಕುಣಿತಕ್ಕೆ ಪ್ರಸಿದ್ಧಿಯಾಗಿರುವ ಚುಂಚನಗಿರಿಯಲ್ಲಿ ಇಂದಿನಿಂದ ಎರಡು ದಿನ ಕಾಲ ಯುವಜನೋತ್ಸವ ನಡೆಯುತ್ತಿದೆ.

     

    ಕಾಲ ಭೈರವನ ಶ್ರೀ ಕ್ಷೇತ್ರದಲ್ಲಿ ಜನಪದ ಸಿರಿಗೆ ಕಲಾ ರಸಿಕರು ಮನಸೋತಿದ್ದಾರೆ. ಕೊರೊನಾ ಸಂಕಷ್ಟದಲ್ಲೂ ಮುಂಜಾಗ್ರತೆ ವಹಿಸಿ ಯುವ ಕಲಾವಿದರ ಪಡೆಯು ನವಿಲು ನರ್ತನ, ಡೊಳ್ಳು ಕುಣಿತ, ತಮಟೆ, ನಗಾರಿ, ಪಟಕುಣಿತದ ಮೂಲಕ ಚುಂಚನಗಿರಿಯಲ್ಲಿ ಮೇಳೈಸುತ್ತಿದೆ. ಚುಂಚನಗಿರಿಯಲ್ಲಿ ಯುವಜನೋತ್ಸವ ಕಲಾ ರಸಿರಕ ಕಣ್ಮನ ಸೆಳೆಯುತ್ತಿದೆ. ಇದನ್ನೂ ಓದಿ: ಆದಿ ಚುಂಚನಗಿರಿ ಕ್ಷೇತ್ರದಲ್ಲಿ ಜ.4-5ರಂದು ರಾಜ್ಯ ಮಟ್ಟದ ಯುವಜನೋತ್ಸವ: ನಾರಾಯಣಗೌಡ

    ಚುಂಚನಗಿರಿಯ ಆರಾಧ್ಯ ದೈವ ಕಾಲಭೈರವನ ದೇವಸ್ಥಾನದ ಪಡಸಾಲೆ ಜನಪದ ಕಲಾವಿದರಿಂದ ಕಂಗೊಳಿಸುತ್ತಿದೆ. ದೇವಸ್ಥಾನದ ಸುತ್ತಲೂ ವಿವಿಧ ಜನಪದ ಕಲಾವಿದರು ವಿವಿಧ ಕಲಾ ಪ್ರಕಾರಗಳ ಮೂಲಕ ಜನಪದ ಕಲಾ ರಸಿಕರಿಗೆ ರಸದೌತಣ ನೀಡುತ್ತಿದ್ದಾರೆ. ತಮಟೆ, ನಗಾರಿ ವಾದ್ಯಗಳು ಕರ್ಣಗಳನ್ನು ತಣಿಸುತ್ತಿವೆ. ಪಟ ಕುಣಿತ, ವೀರಭದ್ರ ಕುಣಿತ, ಕಂಸಾಳೆ, ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ಹಲವು ಜನಪದ ಕಲಾಪ್ರಕಾರಗಳು ಚುಂಚನಗಿರಿ ಕಾಲಭೈರವನ ಮನವನ್ನು ತಣಿಸುತ್ತಿವೆ. ಯುವಜನೋತ್ಸವಕ್ಕೆ ಚಾಲನೆ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ದೇಶದ ಅಭಿವೃದ್ಧಿ ಕುರಿತು ಕರೆ ನೀಡಿದರು. ಇದನ್ನೂ ಓದಿ: ಒಂದೇ ದಿನದಲ್ಲಿ 100 ವೈದ್ಯರಿಗೆ ಕೋವಿಡ್ ಪಾಸಿಟಿವ್!

    ಕಾಲ ಭೈರವ ಈ ನೆಲದ ಭೂ ಒಡೆಯ. ಭೂ ಒಡೆಯ ಶ್ರೀಮಂತಿಯೇ ಈ ಜನಪದ ಕಲಾ ಪ್ರಕಾರಗಳು. ಜೋಗಿ ಸಂಸ್ಕೃತಿಯ ಮೂಲಕ ಒಕ್ಕಲುತನವನ್ನು ಮಂಡ್ಯದ ಮಣ್ಣಿನಲ್ಲಿ ಬಿತ್ತಿದ ದೇವ ಪುರುಷ. ಈ ಪುರುಷನ ವೇಷವೇ ಜನಪದ ವೇಷ. ಕೈಯಲ್ಲಿ ಡಗಮುರಗ, ತ್ರಿಶೂಲ ಸಮೇತ ಮಣ್ಣಿನ ಸಂರಕ್ಷಣೆ ಮಾಡುತ್ತಿರುವ ಭೈರವನ ಸನ್ನಿಧಿ ಇಂದು ಮೂಲ ಜನಪದ ಸೊಗಡಿನಲ್ಲಿ ಕಂಗೊಳಿಸುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ 1,750ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದಾರೆ. ಜ ನಪದ ಕಲೆ ಸೇರಿದಂತೆ ವಿವಿಧ ಭಾಗಗಳಲ್ಲಿ ಸ್ಪರ್ಧೆಗಳು ನಡೆಯುತ್ತಿವೆ. ಯುವಜನೋತ್ಸವದ ಪ್ರಮುಖ ಆಕರ್ಷಣೆಯೇ ಜನಪದ ಕಲಾ ಮೇಳವಾಗಿದೆ. ಸ್ಪರ್ಧಾಗಳು ತಮ್ಮ ಜಿಲ್ಲೆಯ ಜನಪದ ಕಲಾ ಪ್ರಕಾರಗಳ ಅನಾವರಣವಾಯಿತು. ಇದನ್ನೂ ಓದಿ: 22 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗಳು- ತಬ್ಬಿ ಕಣ್ಣೀರಿಟ್ಟ ವೀಡಿಯೋ ವೈರಲ್

    ಯುವಜನೋತ್ಸವದಲ್ಲಿ ಹಿಂದೂಸ್ತಾನಿ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತ, ಭರತ ನಾಟ್ಯ, ಕಥಕ್, ಒಡಿಸ್ಸಿ, ಮಣಿಪುರಿ, ಕುಚುಪುಡಿ, ಹರ್ಮೋನಿಯಂ, ಗಿಟಾರ್, ಆಶು ಭಾಷಣ, ತಬಲಾ, ಸಿತಾರ್, ವೀಣೆ, ಕೊಳಲು, ಮೃದಂಗ, ಏಕಾಂಕ ನಾಟಕ, ಜಾನಪದ ನೃತ್ಯ ಮತ್ತು ಜಾನಪದ ಗೀತೆ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯುತ್ತಿವೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಸ್ಪರ್ಧಿಗಳು ಆಗಮಿಸಿದ್ದಾರೆ. ಯುವ ಕಲಾವಿದರು ಕಲೆಗೆ ತಕ್ಕಂತೆ ವೇಷವನ್ನು ಹಾಕಿರುವುದು ಮತ್ತೊಂದು ವಿಶೇಷವಾಗಿದೆ.

  • ರಾಜ್ಯಮಟ್ಟದ ಯುವ ಜನೋತ್ಸವ ಲಾಂಛನ ಅನಾವರಣ

    ರಾಜ್ಯಮಟ್ಟದ ಯುವ ಜನೋತ್ಸವ ಲಾಂಛನ ಅನಾವರಣ

    ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಹಮ್ಮಿಕೊಂಡಿರುವುದು ನಮ್ಮ ಮಂಡ್ಯ ಜಿಲ್ಲೆಗೆ ಹೆಮ್ಮೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಮಂಡ್ಯ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ಯುವಜನೋತ್ಸವ ಹಿನ್ನೆಲೆಯಲ್ಲಿ ಇಂದು ಲಾಂಛನ ಬಿಡುಗಡೆಗೊಳಿಸಲಾಯಿತು. ಪರಮಪೂಜ್ಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು, ಸಚಿವ ಡಾ.ನಾರಾಯಣಗೌಡ ಅವರು ಪೋಸ್ಟರ್ ಬಿಡುಗಡೆಗೊಳಿಸಿದರು. ಯುವಕ, ಯುವತಿಯರಲ್ಲಿ ಹುದುಗಿರುವ ಹತ್ತು ಹಲವು ಬಗ್ಗೆ ಪ್ರತಿಭೆಯ ಸೃಜನಶೀಲ ಅಭಿವ್ಯಕ್ತಿಗೆ ವೇದಿಕೆ ಕಲ್ಪಿಸಲು ರಾಜ್ಯ ಮಟ್ಟದ ಯುವ ಜನೋತ್ಸವ ಹಮ್ಮಿಕೊಳ್ಳಲಾಗಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜನವರಿ 4 ಮತ್ತು 5 ರಂದು ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    ಜನವರಿ 4 ರಂದು ಬೆಳಗ್ಗೆ 11.30ಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಯುವ ಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಲಿದ್ದಾರೆ. ಆದಿ ಚುಂಚನಗಿರಿ ಮಹಾಸಂಸ್ಥಾನ ಪೀಠಾಧ್ಯಕ್ಷರಾದ ಶ್ರೀಶ್ರೀಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಉಸ್ತುವಾರ ಸಚಿವ ಡಾ.ನಾರಾಯಣಗೌಡ ಅವರು, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ಜನವರಿ 5 ರಂದು ಮಧ್ಯಾಹ್ನ 3 ಗಂಟೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು, ಉನ್ನತ ಶಿಕ್ಷಣ ಐಟಿ-ಬಿಟಿ ಸಚಿವರಾದ ಡಾ.ಸಿಎನ್ ಅಶ್ವಥ್ ನಾರಾಯಣ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

    Narayana Gowda

    ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಪ್ರತಿಬಿಂಬಿಸಲು ಯುವ ಜನೋತ್ಸವವನ್ನು ಆಚರಿಸಲಾಗುತ್ತಿದೆ. ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಗಾಯನ, ವಾದ್ಯ, ನೃತ್ಯ, ಏಕಾಂಕ ನಾಟಕ, ಆಶುಭಾಷಣ ಸ್ಪರ್ಧೆ ಸೇರಿದಂತೆ ಸುಮಾರು 18 ಪ್ರಕಾರದ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ಜಿಲ್ಲೆಯಿಂದ ತಲಾ 57 ಸ್ಪರ್ಧಿಗಳಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಸ್ಪರ್ಧಿಗಳು ಆಗಮಿಸಲಿದ್ದಾರೆ. ಎರಡೂ ಸಾವಿರಕ್ಕೂ ಅಧಿಕ ಮಂದಿ ಈ ಯುವ ಜನೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜನದಟ್ಟಣೆ ಉಂಟಾಗದ ರೀತಿ 1 ಪ್ರಮುಖ ವೇದಿಕೆ ಸೇರಿ 5 ವೇದಿಕೆಗಳನ್ನ ನಿರ್ಮಿಸಲಾಗಿದೆ. ಜೊತೆಗೆ ಒಂದು ಎಮರ್ಜೆನ್ಸಿ ಓಪನ್ ಸ್ಟೇಜ್ ಕೂಡ ನಿರ್ಮಿಸಲಾಗಿದೆ. ಅರ್ಹ ಪ್ರತಿಭೆಗಳನ್ನು ಗುರುತಿಸಿ ರಾಷ್ಟ್ರ ಮಟ್ಟದ ಯುವಜನೋತ್ಸವಕ್ಕೆ ಕಳುಹಿಸಿಕೊಡುವ ಸಲುವಾಗಿ 30 ತೀರ್ಪುಗಾರರನ್ನು ನಿಯೋಜಿಸಲಾಗಿದೆ. ಯುವ ಜನೋತ್ಸವಕ್ಕೆ ಬರುವ ಪ್ರತಿಯೊಬ್ಬರಿಗೂ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಲಾಗಿದೆ.

    ಯುವಜನೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸ್ಪರ್ಧಿಗಳ ಬಹುಮಾನ ಮೊತ್ತವನ್ನು ಹೆಚ್ಚಿಸಲು ಸಚಿವ ಡಾ. ನಾರಾಯಣಗೌಡ ಅವರು ಈಗಾಗಲೇ ಕ್ರಮವಹಿಸಿದ್ದಾರೆ. ವೈಯಕ್ತಿಕ ಸ್ಪರ್ಧೆಗಳಿಗೆ ಮೊದಲ ಬಹುಮಾನ 15 ಸಾವಿರ, ಎರಡನೇ ಬಹುಮಾನ 10 ಸಾವಿರ, ಮೂರನೇ ಬಹುಮಾನ 5 ಸಾವಿರ, ಗುಂಪುಗಳಿಗೆ ನೀಡುವ ಮೊದಲ ಬಹುಮಾನ 25 ಸಾವಿರ, ಎರಡನೇ ಬಹುಮಾನ 15 ಸಾವಿರಕ್ಕೆ ಹೆಚ್ಚಳ ಮಾಡಿದ್ದಾರೆ.

    ದೇಶದ ಯುವಶಕ್ತಿಯನ್ನು ಸದ್ಬಾಳಕೆ ಮಾಡಿಕೊಳ್ಳಬೇಕು:
    ಇರುವ ದೇಶಗಳಲ್ಲಿ ಅತ್ಯಂತ ಯಂಗೆಸ್ಟ್ ದೇಶ ಎಂದರೇ ನಮ್ಮ ಭಾರತ. ನಮ್ಮ ದೇಶದಲ್ಲಿರುವ ಯುವ ಶಕ್ತಿ ಸದ್ಬಳಕೆ ಮಾಡಿಕೊಳ್ಳುವುದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಕರ್ತವ್ಯ. ಯುವ ಜನತೆಯಲ್ಲಿರುವ ಧನಾತ್ಮಕ ಗುಣಗಳನ್ನು ಬಳಕೆ ಮಾಡಿಕೊಳ್ಳುವಂತಹ ಕಾರ್ಯಕ್ರಮವೇ ಈ ಯುವ ಜನೋತ್ಸವ. ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮವನ್ನು ಈ ಬಾರಿ ಶ್ರೀಕ್ಷೇತ್ರದಲ್ಲಿ ಆಯೋಜಿಸಿರುವುದು ಅತ್ಯಂತ ಸಂತೋಷದ ವಿಚಾರ ಎಂದು ಶ್ರೀನಿರ್ಮಲಾನಂದನಾಥ ಸ್ವಾಮೀಜಿಯವರು ಹೇಳಿದರು. ಇದರ ಜೊತೆಗೆ ಜನವರಿ 5 ರಂದು ಶ್ರೀಕ್ಷೇತ್ರ ಆದಿಚುಂಚನಗಿರಿ ವಿಜ್ಞಾನ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ಶ್ರೀಗಳು ತಿಳಿಸಿದರು.

    ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಯುವ ಜನೋತ್ಸವ ಕಾರ್ಯಕ್ರಮ ಆಚರಣೆ:
    ಯುವಜನರು ನಮ್ಮ ಸಂಸ್ಕೃತಿ, ಪರಂಪರೆಗಳ ಹರಿಕಾರರು ಎನ್ನುವ ಹೊನ್ನುಡಿಗೆ ಸಾಕ್ಷಿಗಳಾಗಲು ಪ್ರೇರೇಪಿಸುವುದು ಈ ಯುವಜನೋತ್ಸವ ಉದ್ದೇಶವಾಗಿದೆ. ಶ್ರೀನಿರ್ಮಲಾನಂದ ಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ಪುಣ್ಯಕ್ಷೇತ್ರ ಆದಿಚುಂಚನಗಿರಿ ಕ್ಷೇತ್ರದಲ್ಲಿ ರಾಜ್ಯ ಮಟ್ಟದ ಯುವ ಜನೋತ್ಸವ ನಡೆಯುತ್ತಿರುವುದು ಸಂತಸದ ವಿಚಾರ. ಯುವ ಜನತೆ ತಮ್ಮಲ್ಲಿರುವ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಕಲ್ಪಿಸುವುದು ನಮ್ಮ ಕರ್ತವ್ಯ. ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ನಡೆಸಿ ಯಶಸ್ವಿಗೊಳಿಸುವ ವಿಶ್ವಾಸವಿದೆ ಎಂದು ಸಚಿವ ಡಾ. ನಾರಾಯಣ ಗೌಡ ಅವರು ತಿಳಿಸಿದರು.

    ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ ಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಅಶ್ವತಿ, ಎಸ್‍ಪಿ ಯತೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.