Tag: yuvarajkumar

  • ದೊಡ್ಮನೆ ಯುವರಾಜನಿಗೆ ನಾಯಕಿ ಯಾರು? ಕೊನೆಗೂ ಸಿಕ್ತು ಅಪ್‌ಡೇಟ್

    ದೊಡ್ಮನೆ ಯುವರಾಜನಿಗೆ ನಾಯಕಿ ಯಾರು? ಕೊನೆಗೂ ಸಿಕ್ತು ಅಪ್‌ಡೇಟ್

    ದೊಡ್ಮನೆಯ ಕುಡಿ ಯುವರಾಜ್‌ಕುಮಾರ್(Yuvarajkumar) ಎಂಟ್ರಿಗೆ ಕೌಂಟ್‌ಡೌನ್ ಶುರುವಾಗಿದೆ. ಯುವನ ಪಟ್ಟಾಭಿಷೇಕಕ್ಕೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿರುವ ಬೆನ್ನಲ್ಲೇ ಯುವನ ನಾಯಕಿ ಯಾರು ಎಂಬುದರರ ಬಗ್ಗೆ ಭಾರಿ ಚರ್ಚೆ ಕೂಡ ನಡೆಯುತ್ತಿದೆ. ಅದಕ್ಕೆಲ್ಲ ಉತ್ತರ ಕೂಡ ಇದೀಗ ಸಿಕ್ಕಿದೆ.

    ಸಂತೋಷ್ ಆನಂದ್‌ರಾಮ್ (Santhosh Anandram) ಮತ್ತು ಯುವ ಕಾಮಬಿನೇಷನ್ ಚಿತ್ರ ಅನೌನ್ಸ್ ಆದ ದಿನದಿಂದ ಒಂದಲ್ಲಾ ಒಂದು ವಿವಾರವಾಗಿ ಸುದ್ದಿಯಾಗುತ್ತಲೇ ಇದೆ. ಮುಂದಿನ ಜನವರಿಯಿಂದ ಯುವನ ಡೆಬ್ಯೂ ಸಿನಿಮಾ ಶೂಟಿಂಗ್‌ಗೆ ತಯಾರಿ ನಡೆಯುತ್ತಿದ್ದು, ಯುವನಿಗೆ ಉಪೇಂದ್ರ (Upendra) ಅವರ ಮಗಳು ಐಶ್ವರ್ಯ, ಸುಧಾರಾಣಿ (Sudharani) ಮಗಳು ನಿಧಿ ಎಂದು ಸುದ್ದಿಯಾಗಿತ್ತು. ಇದೀಗ ಈ ಇಬ್ಬರು ಸ್ಟಾರ್ ಕಿಡ್ಸ್ ಯುವನಿಗೆ ನಾಯಕಿನಾ ಎಂಬ ಪ್ರಶ್ನೆ ಉತ್ತರ ಸಿಕ್ಕಿದೆ.

    ಉಪೇಂದ್ರ ಅವರ ಮಗಳು ಐಶ್ವರ್ಯ ಈಗಾಗಲೇ ದೇವಕಿ ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸುಧಾರಾಣಿ ಮಗಳು ನಿಧಿಗೆ ನಟನೆಯ ಬಗ್ಗೆ ಆಸಕ್ತಿ ಇದ್ಯಾ ಎಂಬುದು ತಿಳಿದು ಬಂದಿಲ್ಲ. ಇದೀಗ ಚಿತ್ರತಂಡದಿಂದ ಹೊಸ ಅಪ್‌ಡೇಟ್‌ವೊಂದು ಸಿಕ್ಕಿದೆ. ಐಶ್ವರ್ಯಾ ಮತ್ತು ನಿಧಿ ಇಬ್ಬರು ಯುವನಿಗೆ ನಾಯಕಿಯರಾಗಿ ನಟಿಸುತ್ತಿಲ್ಲ ಎಂಬ ಸ್ಪಷ್ಟನೆ ಸಿಕ್ಕಿದೆ. ಇದು ಸುಳ್ಳು ಸುದ್ದಿ ಎಂದು ಖಾತ್ರಿಯಾಗಿದೆ. ಇದನ್ನೂ ಓದಿ: ರೂಪೇಶ್ ಶೆಟ್ಟಿ ವಿಚಾರವಾಗಿ, ಬಿಗ್ ಬಾಸ್ ವಿರುದ್ಧ ಸಾನ್ಯ ಅಯ್ಯರ್ ಗರಂ

     

    View this post on Instagram

     

    A post shared by Dr.Sudharani (@sudharanigovardhan)

    ಸದ್ಯದಲ್ಲಿ ಹೊಂಬಾಳೆ ಬ್ಯಾನರ್, ಯುವ ಚಿತ್ರದ ಕುರಿತಾದ ವಿಚಾರವನ್ನ ಅಧಿಕೃತವಾಗಿ ತಿಳಿಸುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಸದ್ಯದಲ್ಲೇ ಹೊಸ ಅಪ್‌ಡೇಟ್‌ಯೊಂದನ್ನ ಚಿತ್ರತಂಡ ರಿವೀಲ್ ಮಾಡಲಿದೆ.

    Live Tv
    [brid partner=56869869 player=32851 video=960834 autoplay=true]

  • ದೊಡ್ಮನೆ ಕುಡಿ ಯುವರಾಜ್‌ಕುಮಾರ್ ಲಾಂಚ್‌ಗೆ ಕೌಂಟ್‌ಡೌನ್: ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ

    ದೊಡ್ಮನೆ ಕುಡಿ ಯುವರಾಜ್‌ಕುಮಾರ್ ಲಾಂಚ್‌ಗೆ ಕೌಂಟ್‌ಡೌನ್: ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ

    ಣ್ಣಾವ್ರ ಕುಟುಂಬದ ಕುಡಿ ಯುವರಾಜ್‌ಕುಮಾರ್(Yuva Rajkumar) ಎಂಟ್ರಿಗೆ ಕೌಂಟ್‌ಡೌನ್ ಶುರುವಾಗಿದೆ. ಅದ್ಯಾವಾಗ ಜ್ಯೂ.ಪವರ್ ಸ್ಟಾರ್ ಎಂಟ್ರಿಯಾಗುತ್ತೋ ಅಂತಾ ಕಾತುರದಿಂದ ಫ್ಯಾನ್ಸ್ ಕಾಯ್ತಿದ್ದಾರೆ. ಇತ್ತೀಚೆಗಷ್ಟೇ ಯುವ ಚಿತ್ರದ ಬಗ್ಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್(Santhosh Anandram) ಅತೀ ಶೀಘ್ರದಲ್ಲಿ ಬರುವುದಾಗಿ ಅಪ್‌ಡೇಟ್ ನೀಡಿದ್ದರು. ಈ ಬೆನ್ನಲ್ಲೇ ಮತ್ತಷ್ಟು ಸಿನಿಮಾ ಬಗ್ಗೆ ಮಾಹಿತಿ ಸಿಕ್ಕಿದೆ.

    ಯುವರಾಜ್ ಅಪ್ಪುನಂತೆ ಪವರ್‌ಸ್ಟಾರ್‌ನಂತೆ ಮಿಂಚುತ್ತಾರೆ ಎಂಬ ಗಟ್ಟಿ ನಂಬಿಕೆಯಲ್ಲಿ ಅಪ್ಪು ಫ್ಯಾನ್ಸ್ ಇದ್ದಾರೆ. ಆ ನಂಬಿಕೆಗೆ ಎಲ್ಲೂ ಲೋಪವಾಗಬಾರದು ಎಂದು ಯುವರಾಜ್‌ಕುಮಾರ್ ಕೂಡ ತೆರೆಮರೆಯಲ್ಲಿ ಚಿತ್ರಕ್ಕಾಗಿ ಭರ್ಜರಿ ತಯಾರಿ ಮಾಡ್ತಿದ್ದಾರೆ.

    Yuvaraj Kumar

    ಯುವರಾಜ್‌ಕುಮಾರ್ ಅವರ ಚೊಚ್ಚಲ ಸಿನಿಮಾ ಸಂತೋಷ್ ಆನಂದ್‌ರಾಮ್ ಅವರ ಜೊತೆಯೇ ಬರಬೇಕು ಎಂಬುದು ಅಭಿಮಾನಿಗಳ ಆಸೆಯಾಗಿತ್ತು. ಅದರಂತೆ ಹೊಂಬಾಳೆ ಸಂಸ್ಥೆಯಡಿ ಯುವ ಮತ್ತು ಸಂತೋಷ್ ಕಾಂಬಿನೇಷನ್‌ನಲ್ಲಿ ಸಿನಿಮಾ ಮೂಡಿ ಬರಲಿದೆ. ಲೇಟ್ ಆದರೂ ಯುವ ಗ್ರ್ಯಾಂಡ್‌ ಎಂಟ್ರಿ ಕೊಡಲಿದ್ದಾರೆ.‌ ಇದನ್ನೂ ಓದಿ:ಪತಿ ರಘು ಮುಖರ್ಜಿ ಮಾತಿಗೆ ಕಣ್ಣೀರಿಟ್ಟ ಅನುಪ್ರಭಾಕರ್

    ಪುನೀತ್ ಅವರ ಭರವಸೆಯ ಪ್ರತಿರೂಪ ಯುವರಾಜ್‌, ಈಗ ಅವರ ಸಿನಿಮಾಗಾಗಿ ಕೌಂಟ್‌ಡೌನ್ ಶುರುವಾಗಿದೆ. ಯುವನ ಚಿತ್ರ ಅನೌನ್ಸ್ ಆಗಿ ತಡವಾಗುತ್ತಿರುವ ಕಾರಣ ಏನು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ. ಡಿಸೆಂಬರ್‌ನಲ್ಲಿ ಚಿತ್ರದ ಮುಹೂರ್ತ ಫಿಕ್ಸ್ ಆಗಿದೆ. ದೊಡ್ಮನೆಗೆ ಸರಿಹೊಂದುವ ಟೈಟಲ್ ಸಮೇತ ಚಿತ್ರದ ಬಗ್ಗೆ ಅನೌನ್ಸ್‌ ಮಾಡಲಿದ್ದಾರೆ. ಜನವರಿಯಲ್ಲೇ ಚಿತ್ರೀಕರಣ ಆರಂಭವಾಗುತ್ತದೆ. ಮುಂದಿನ ವರ್ಷ 2023ರಲ್ಲಿ ಯುವನ ಚೊಚ್ಚಲ ಸಿನಿಮಾ ತೆರೆಗೆ ಅಬ್ಬರಿಸಲಿದೆ. ಪವರ್‌ಫುಲ್ ಕಥೆ, ಖಡಕ್ ಟೈಟಲ್ ಜೊತೆ ಯುವ ಬರಲಿದ್ದಾರೆ. ಕೆಲವೇ ದಿನಗಳಲ್ಲಿ ರಾಜವಂಶದ ಕುಡಿ ಯುವ ಸಿನಿಮಾ ಸುದ್ದಿಯ ಕುರಿತು ಮಾಹಿತಿ ನೀಡಲಿದೆ. ಯುವನ ರಾಜ್ಯಭಾರಕ್ಕೆ ಕೌಂಟ್‌ಡೌನ್ ಶುರುವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದೊಡ್ಮನೆ ಕುಡಿ ಯುವ ಚಿತ್ರದ ಬಗ್ಗೆ ಗುಡ್ ನ್ಯೂಸ್ ಕೊಟ್ರು ಸಂತೋಷ್ ಆನಂದ್‌ರಾಮ್

    ದೊಡ್ಮನೆ ಕುಡಿ ಯುವ ಚಿತ್ರದ ಬಗ್ಗೆ ಗುಡ್ ನ್ಯೂಸ್ ಕೊಟ್ರು ಸಂತೋಷ್ ಆನಂದ್‌ರಾಮ್

    ದೊಡ್ಮನೆ ಕುಡಿ ಯುವರಾಜ್‌ಕುಮಾರ್(Yuva Rajkumar) ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಕಲ ಸಿದ್ಧತೆ ನಡೆಸಿದ್ದಾರೆ. ಅಭಿಮಾನಿಗಳ ಮನದಾಸೆಯಂತೆ ಸಂತೋಷ್ ಆನಂದ್‌ರಾಮ್(Santhosh Anandram) ಮತ್ತು ಯುವ ಕಾಂಬಿನೇಷನ್‌ನಲ್ಲಿ ಸಿನಿಮಾ ಬರೋದು ಈ ಹಿಂದಯೇ ಅಧಿಕೃತವಾಗಿದೆ. ಈ ಚಿತ್ರದ ಬಗ್ಗೆ ಏನು ಅಪ್‌ಡೇಟ್ ಸಿಗದೇ ನಿರಾಸೆಯಾಗಿದ್ದ ಫ್ಯಾನ್ಸ್‌ಗೆ ಇದೀಗ ಗುಡ್ ನ್ಯೂಸ್‌ವೊಂದು ಸಿಕ್ಕಿದೆ.

    `ಯುವ ರಣಧೀರ ಕಂಠೀರವ’ ಚಿತ್ರದ ಮೂಲಕ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ ಈ ಚಿತ್ರದ ಬದಲಾಗಿ ಯುವರತ್ನ ನಿರ್ದೇಶಕ ಸಂತೋಷ್ ನಿರ್ದೇಶನದ ಚಿತ್ರದಲ್ಲಿ ಯುವ ಲಾಂಚ್ ಆಗುತ್ತಿದ್ದಾರೆ. ಈ ಸಿನಿಮಾಗೆ ಹೊಂಬಾಳೆ ಸಂಸ್ಥೆ(Hombale Films) ಕೂಡ ಸಾಥ್ ಕೊಟ್ಟಿದೆ. ಕಳೆದ ಏಪ್ರಿಲ್ ಯುವನ ಭರ್ಜರಿ ಫೋಟೋಶೂಟ್ ಮಾಡಿಸಿ ಅಧಿಕೃತ ಅನೌನ್ಸ್ ಕೂಡ ಮಾಡಿದ್ದರು. ಬಳಿಕ ಈ ಚಿತ್ರದ ಯಾವುದೇ ಅಪ್‌ಡೇಟ್ ಕೂಡ ಅಭಿಮಾನಿಗಳಿಗೆ ಸಿಕ್ಕಿರಲಿಲ್ಲ. ಈಗ ಈ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಸಿಹಿ ಸುದ್ದಿ ಸಿಕ್ಕಿದೆ. ಇದನ್ನೂ ಓದಿ:ಮತ್ತೊಂದು ಮದುವೆಗೆ ಒಪ್ಕೊಂಡ್ರಾ ಮಲೈಕಾ?: ಯಸ್ ಅಂದೆ ಅಂತ ಪೋಸ್ಟ್ ಹಾಕಿದ ನಟಿ

    ಪುನೀತ್ ರಾಜ್‌ಕುಮಾರ್ ಹೊಂಬಾಳೆ ಬ್ಯಾನರ್ ಅಡಿ ಸಾಕಷ್ಟು ಸಿನಿಮಾಗಳನ್ನ ಮಾಡಿದ್ದರು. ಮತ್ತೆ ಮುಂಬರುವ ಪ್ರಾಜೆಕ್ಟ್ಗಳನ್ನ ಹೊಂಬಾಳೆ ಜೊತೆ ಪ್ಲ್ಯಾನ್ ಮಾಡಲಾಗಿತ್ತು. ಆದರೆ ಅಪ್ಪು ಅಗಲಿಕೆ ನಂತರ ಎಲ್ಲಾ ತಲೆಕೆಳಗಾಗಿತ್ತು. ಹೊಂಬಾಳೆ ನಿರ್ಮಾಣ ಸಂಸ್ಥೆ, ಸಂತೋಷ್ ನಿರ್ದೇಶನದಲ್ಲಿ ಯುವಗೆ ಡೈರೆಕ್ಷನ್ ಮಾಡಬೇಕು ಎಂಬುದು ಅಭಿಮಾನಿಗಳ ಬೇಡಿಕೆಯ ಜೊತೆ ಮಹಾದಾಸೆಯಾಗಿತ್ತು. ಅದರಂತೆಯೇ ಚಿತ್ರದ ಅನೌನ್ಸ್‌ಮೆಂಟ್ ಕೂಡ ನಡೆದಿತ್ತು.

    ಅನೌನ್ಸ್‌ಮೆಂಟ್ ನಂತರ ಚಿತ್ರದ ಬಗ್ಗೆ ಏನು ಅಪ್‌ಡೇಟ್ ಇಲ್ಲ ಎಂದು ಬೇಸರದಲ್ಲಿದ್ದ ಫ್ಯಾನ್ಸ್‌ಗೆ ನಿರ್ದೇಶಕ ಸಂತೋಷ್ ರಿಯಾಕ್ಟ್ ಮಾಡಿದ್ದಾರೆ. ನನ್ನ ಸಹೋದರ ಸಮಾನರಾದ ಎಲ್ಲಾ ಅಭಿಮಾನಿಗಳಿಗೆ ಅತೀ ಶೀಘ್ರದಲ್ಲಿ ನನ್ನ ಮತ್ತು ಯುವರಾಜ್‌ಕುಮಾರ್ ಕಾಂಬಿನೇಷನ್ ಚಿತ್ರದ ಎಲ್ಲಾ ಮಾಹಿತಿ ಹೊರಬರುತ್ತದೆ ನಿಮ್ಮ ಆಶೀರ್ವಾದ ಸದಾ ಇರಲಿ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಸದ್ಯದಲ್ಲೇ ಚಿತ್ರದ ಅಪ್‌ಡೇಟ್ ಸಿಗಲಿದೆ ಎಂದು ಸೂಚನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]