Tag: Yuvuvendra Chahal

  • ನಮ್ಮಿಬ್ಬರ ಎಲ್ಲ ಸಮಸ್ಯೆಗಳಿಗೆ ಧೋನಿಯೇ ಪರಿಹಾರ: ಚಹಲ್

    ನಮ್ಮಿಬ್ಬರ ಎಲ್ಲ ಸಮಸ್ಯೆಗಳಿಗೆ ಧೋನಿಯೇ ಪರಿಹಾರ: ಚಹಲ್

    – ಧೋನಿ ಬಗ್ಗೆ ಚಹಲ್ ಮನದಾಳದ ಮಾತು

    ನವದೆಹಲಿ: ನನ್ನ ಮತ್ತು ಕುಲ್ದೀಪ್ ಯಾದವ್ ಸಮಸ್ಯೆಗಳಿಗೆ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಬಳಿ ಪರಿಹಾರ ಸಿಗುತ್ತೆ ಎಂದು ಸ್ಪಿನ್ನರ್ ಯುಜುವೇಂದ್ರ ಚಹಲ್ ಹೇಳಿದ್ದಾರೆ.

    ರಾಷ್ಟ್ರೀಯ ಮಾಧ್ಯಮಕ್ಕೆ ಸಂದರ್ಶನ ನೀಡಿರುವ ಚಹಲ್ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಧೋನಿ ನಮ್ಮ ಪ್ರಾಬ್ಲಂ ಸಾಲ್ವರ್. ಹಲವು ಬಾರಿ ಮೈದಾನದಲ್ಲಿ ಧೋನಿ ನಮ್ಮ ಸಮಸ್ಯೆಯನ್ನ ಪರಿಹರಿಸಿದ್ದಾರೆ. ಇಂತಹ ಘಟನೆಗಳು ಹಲವು ಬಾರಿ ನಡೆದಿವೆ. ಪಂದ್ಯದ ವೇಳೆ ಧೋನಿ ನೀಡುವ ಸಲಹೆಗಳಿಂದಲೇ ವಿಕೆಟ್ ಪಡೆದಿದ್ದೇನೆ. ಯಾರಿಗೆ, ಯಾವಾಗ, ಹೇಗೆ ಬೌಲಿಂಗ್ ಮಾಡಬೇಕೆಂಬುದರ ಕುರಿತು ಧೋನಿ ನೀಡುವ ಸಲಹೆಗಳು ತಂಡದ ಗೆಲುವಿಗೆ ಕಾರಣವಾಗಿರುತ್ತೆ ಎಂದಿದ್ದಾರೆ.

    ಭಾರತ ಮಹೇಂದ್ರ ಸಿಂಗ್ ಧೋನಿ ಎಂಬ ಅದ್ಭುತ ಕ್ರೀಡಾಪಟುವನ್ನು ನೀಡಿದೆ. ಪಂದ್ಯದ ವೇಳೆ ನನಗೆ ಮತ್ತು ಕುಲ್ದೀಪ್ ಗೆ ಸಲಹೆ ನೀಡುತ್ತಿರುತ್ತಾರೆ. ಬ್ಯಾಟ್ಸಮನ್ ಗಳು ನಮ್ಮ ಬೌಲಿಂಗ್ ನಲ್ಲಿ ಸಿಕ್ಸ್ ಮತ್ತು ಫೋರ್ ಬಾರಿಸುತ್ತಿದ್ರೆ, ನಮ್ಮ ಬಳಿ ಬಂದು ಹೆಗಲ ಮೇಲೆ ಕೈ ಇಟ್ಟು, ಗೂಗ್ಲಿ ಎಸೆ, ಈತನಿಗೆ ಆಡಲು ಆಗಲ್ಲ ಅಂತಾ ಹೇಳ್ತಾರೆ. ಧೋನಿ ಸಲಹೆಯಂತೆ ಗೂಗ್ಲಿ ಎಸೆದಾಗ ನಾನು ವಿಕೆಟ್ ಪಡೆದಿದ್ದೇನೆ ಎಂಬ ವಿಷಯವನ್ನು ಹಂಚಿಕೊಂಡಿದ್ದಾರೆ.

    ಸೌಥ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಧೋನಿ ಸಲಹೆಯಂತೆ ಬೌಲಿಂಗ್ ಮಾಡಿದ್ದರಿಂದ 5 ವಿಕೆಟ್ ಪಡೆಯಲು ಸಾಧ್ಯವಾಯ್ತು. ಜೆಪಿ ಡುಮಿನಿ ಬಹಳ ಸಮಯದವರೆಗೆ ಕ್ರಿಸ್ ನಲ್ಲಿದ್ದರು. ಅವರ ವಿಕೆಟ್ ಪಡೆಯಬೇಕೆಂದು ಕಾಯುತ್ತಿದ್ದೆ. ಆ ವೇಳೆ ಧೋನಿ, ನೇರವಾಗಿ ಸ್ಟಂಪ್ ಗುರಿಯಾಗಿಸಿ ಬಾಲ್ ಎಸೆಯಲು ಹೇಳಿದ್ರು. ಅವರ ಮಾತು ಕೇಳಿ ಸ್ಟಂಪ್‍ಗೆ ಬಾಲ್ ಎಸೆದಾಗ ಡುಮಿನಿ ಎಲ್‍ಬಿಡಬ್ಲ್ಯೂ ಆಗಿ ಔಟಾದರು ಎಂದು ಹೇಳಿದರು.

  • ಇಬ್ಬರು ಲೆಗ್‍ಸ್ಪಿನ್ನರ್ಸ್ ಟೀಂ ಇಂಡಿಯಾದಲ್ಲಿ ಅಗತ್ಯವಿಲ್ಲ: ಸೌರವ್ ಗಂಗೂಲಿ

    ಇಬ್ಬರು ಲೆಗ್‍ಸ್ಪಿನ್ನರ್ಸ್ ಟೀಂ ಇಂಡಿಯಾದಲ್ಲಿ ಅಗತ್ಯವಿಲ್ಲ: ಸೌರವ್ ಗಂಗೂಲಿ

    ಕೋಲ್ಕತ್ತಾ: ಸಿಮೀತ ಮಾದರಿಯ ಕ್ರಿಕೆಟಿನಲ್ಲಿ ಟೀಂ ಇಂಡಿಯಾ ಮತ್ತಷ್ಟು ಬಲಿಷ್ಠವಾಗಿರಬೇಕಾದರೆ ತಂಡಕ್ಕೆ ಸ್ಪಿನ್ನರ್ ಗಳಾದ ಕುಲ್ದೀಪ್ ಯಾದವ್, ಯಜುವೇಂದ್ರ ಚಹಲ್‍ರನ್ನು ಆಯ್ಕೆ ಮಾಡಬೇಕಿದೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಸೌರವ್ ಗಂಗೂಲಿ ಅಭಿಪ್ರಾಯ ಪಟ್ಟಿದ್ದಾರೆ.

    ಸದ್ಯ ಯುವ ಆಟಗಾರರಿಗೆ ಪರೀಕ್ಷೆ ನಡೆಸುವ ಉದ್ದೇಶದಿಂದ ಚಹಲ್‍ಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೇ ತಂಡದ ಬ್ಯಾಟಿಂಗ್ ಲೈನ್ ಬಲಿಷ್ಠ ಪಡಿಸುವ ಉದ್ದೇಶದಿಂದ ಪ್ರಯೋಗಕ್ಕೆ ಮುಂದಾಗಿದೆ. ಆದರೆ ಸಿಮೀತ ಮಾದರಿ ಕ್ರಿಕೆಟಿಗೆ ಚಹಲ್ ಅಗತ್ಯವಿದ್ದು, ಮುಂದಿನ ವರ್ಷ ಟಿ20 ವಿಶ್ವಕಪ್ ನಡೆಯುತ್ತಿರುವುದರಿಂದ ಕುಲ್ದೀಪ್ ಯಾದವ್ ಹಾಗೂ ಚಹಲ್ ತಂಡದಲ್ಲಿರುವುದು ಅಗತ್ಯವಿದೆ ಎಂದಿದ್ದಾರೆ.

    ಟಿ20 ಟೂರ್ನಿಯಲ್ಲಿ ತಂಡದ ನಾಯಕರಾಗಿ ಕೊಹ್ಲಿ ಮಹತ್ವದ ಪಾತ್ರವಹಿಸುತ್ತಾರೆ. ಆದರೆ ಟೀಂ ಇಂಡಿಯಾಗೆ ಲೆಗ್ ಸ್ಪಿನ್ನರ್ ಗಳಾದ ರವೀಂದ್ರ ಜಡೇಜಾ, ಕೃಣಾಲ್ ಪಾಂಡ್ಯ ಇಬ್ಬರು ಅಗತ್ಯವಿಲ್ಲ. ಇಬ್ಬರಲ್ಲಿ ಒಬ್ಬರಿದ್ದರೆ ಸಾಕು. ಇಬ್ಬರನ್ನು ಒಂದೇ ಪಂದ್ಯದಲ್ಲಿ ಕಣಕ್ಕಿಸುವ ಅಗತ್ಯತೆಯ ಅಂಶವನ್ನು ಆಯ್ಕೆ ಸಮಿತಿ ಗಮನಿಸಬೇಕಿದೆ ಎಂದು ಸೌರವ್ ಅಭಿಪ್ರಾಯ ಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಮುಂಬರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ಟೂರ್ನಿಯಲ್ಲಿ ತಂಡ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.