Tag: Zameer Ahmed Khan

  • ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್‌ ಬರೆದು ಹೈಡ್ರಾಮಾ!

    ʻನನ್ನ ಸಾವಿಗೆ ಸಚಿವ ಜಮೀರ್ ಕಾರಣʼ – ರಕ್ತದಲ್ಲಿ ಡೆತ್‌ನೋಟ್‌ ಬರೆದು ಹೈಡ್ರಾಮಾ!

    – ತೆಲಂಗಾಣದ ಮೆಕ್ಕೆಜೋಳ ಉದ್ಯಮಿಗಳ ಪರ ನಿಂತ್ರಾ ಜಮೀರ್‌?

    ಚಿಕ್ಕಬಳ್ಳಾಪುರ: ರಾಜ್ಯದ ಮೆಕ್ಕೆಜೋಳದ (Corn) ವ್ಯಾಪಾರಿ ಹಾಗೂ ರೈತರಿಗೆ ಸಹಕಾರ ನೀಡುವ ಬದಲು ತೆಲಂಗಾಣದ ಮೆಕ್ಕೆಜೋಳದ ಉದ್ಯಮಿಗಳಿಗೆ ಸಪೋರ್ಟ್ ಮಾಡಿದ್ದಾರೆ ಅಂತ ಸಚಿವ ಜಮೀರ್ ಅಹಮದ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಚಿವರ ನಡೆ ಖಂಡಿಸಿ, ವ್ಯಾಪಾರಿ ರಾಮಕೃಷ್ಣ ಆಲಿಯಾಸ್ ಜೊನ್ನಲ ಕಿಟ್ಟಿ ಸಚಿವ ಜಮೀರ್ ವಿರುದ್ಧ ಭಾರೀ ಆಕ್ರೋಶ ಹೊರಹಾಕಿದರು. ನನ್ನ ಸಾವಿಗೆ ಸಚಿವ ಜಮೀರ್ ಅಹಮದ್ (Zameer Ahmed Khan) ಕಾರಣ ಅಂತ ರಕ್ತದಲ್ಲಿ ಡೆತ್‍ನೋಟ್ ಬರೆದು ತಂದು ಹೈಡ್ರಾಮಾ ನಡೆಸಿದರು.

    ಏನಿದು ವಿವಾದ?
    ರೈತ (Farmer) ರಾಮಕೃಷ್ಣ ಅಲಿಯಾಸ್ ಜೊನ್ನಲಕಿಟ್ಟಿ, ರಕ್ತದಲ್ಲಿ ಬರೆದ ಡೆತ್ ನೋಟ್ (Deathnote) ತಂದು ಸಚಿವ ಜಮೀರ್ ಸಮ್ಮುಖದಲ್ಲೇ ನನಗೆ ಹಣ ಕೊಡಿಸಿ, ಇಲ್ಲದಿದ್ರೆ ನಾನು ವಿಷ ಕುಡಿದು ಸಾಯ್ತೀನಿ, ನೇಣು ಹಾಕೋತಿನಿ ಅಂತ ಕಣ್ಣೀರು ಹಾಕಿದ್ದಾರೆ. ರಾಮಕೃಷ್ಣ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಬಳಿಯ ದಿಗೂರು ನಿವಾಸಿ. ದಕ್ಷಿಣ ಭಾರತದಲ್ಲೇ (South India) ಅತಿ ಹೆಚ್ಚು ಮೆಕ್ಕೆಜೋಳದ ಬ್ಯುಸಿನೆಸ್ ಮಾಡುವ ಈ ರಾಮಕೃಷ್ಣ ಕಳೆದ 4-5 ತಿಂಗಳ ಹಿಂದೆ ಹೈದರಾಬಾದ್ ನ ಅಕ್ಬರ್, ಸದ್ದಾಂ, ನಾಸೀರ್ ಅನ್ನೋ ಮೂವರು ಅಣ್ಣ ತಮ್ಮಂದಿರಿಗೆ 1 ಕೋಟಿ 89 ಲಕ್ಷ ರೂಪಾಯಿ ಮೆಕ್ಕೆಜೋಳ ಸೇಲ್ ಮಾಡಿದ್ರು. ಆದ್ರೆ ಮೂವರು ಅಣ್ಣ ತಮ್ಮಂದಿರು ರಾಮಕೃಷ್ಣಗೆ ಹಣ ನೀಡದೇ ಸತಾಯಿಸುತ್ತಿದ್ದರು. ಇದ್ರಿಂದ ನೊಂದ ರಾಮಕೃಷ್ಣ ಪೇರೇಸಂದ್ರ ಪೊಲೀಸ್ ಠಾಣೆಯಲ್ಲಿ ಅಕ್ಬರ್, ಸದ್ದಾಂ, ನಾಸೀರ್ ವಿರುದ್ಧ ದೂರು ದಾಖಲಿಸಿದ್ರು. ಹೀಗಾಗಿ ಪೇರೇಸಂದ್ರ ಪಿಎಸ್‍ಐ (PSI) ಜಗದೀಶ್ ರೆಡ್ಡಿ ಅಕ್ಬರ್ ಪಾಷಾ ನನ್ನ ಬಂಧಿಸಿ ಕರೆತಂದಿದ್ರು. ಈ ವೇಳೆ ಪಿಎಸ್‌ಐಗೆ ಕರೆ ಮಾಡಿ ಮಾತನಾಡಿದ್ದ ಸಚಿವ ಜಮೀರ್ ಅಹಮದ್, ಅವರು ನಮ್ಮ ರಿಲೇಶನ್ ಇದ್ದಾರೆ ಸ್ವಲ್ಪ ಟೈಂ ಕೊಡಿ ಸೆಟಲ್ ಮಾಡಿಕೊಡ್ತಾರೆ ಅಂತ ಮಾತನಾಡಿದ್ರು. ಈಗ ಇದೇ ಮಾತು ಸಚಿವ ಜಮೀರ್ ಅಹಮದ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ

    ಸಚಿವ ಜಮೀರ್ ಅಹಮದ್ ಹೇಳಿದ್ದೇನು..?
    ಅಂದಹಾಗೆ ಕಳೆದ 1 ವಾರದ ಹಿಂದೆ ಈ ಆಡಿಯೋ ವೈರಲ್ ಆಗಿ ಸಚಿವ ಜಮೀರ್ ಮಾತುಗಳು ಪಿಎಸ್‍ಐ ಮೇಲೆ ಪ್ರಭಾವ ಬೀರಿರೋದು ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ಇಂದು ಚಿಕ್ಕಬಳ್ಳಾಪುರ ನಗರದ ಷಾದಿ ಮಹಲ್‌ಗೆ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಚಿವ ಜಮೀರ್ ಅಹಮದ್ ಎದುರೇ ಆಗಮಿಸಿದ ದೂರುದಾರ ರೈತ ಹಾಗೂ ವ್ಯಾಪಾರಿ ರಾಮಕೃಷ್ಣ ರಕ್ತದಲ್ಲಿ ಬರೆದ ಡೆತ್ ನೋಟ್ ಹಿಡಿದು ಬಂದು, ಸರ್ ನನಗೆ ಹಣ ಕೊಡಿಸಿ ಇಲ್ಲ ಅಂದ್ರೆ ಡೆತ್ ನೋಟ್ ತಂದಿದ್ದೀನಿ, ನಾನು ವಿಷ ಕುಡಿದು ನೇಣು ಹಾಕ್ಕೊಂಡು ಸಾಯ್ತೀನಿ ಅಂತ ಸಚಿವ ಜಮೀರ್ ಅಹಮದ್ ಎದುರೇ ಕಣ್ಣೀರು ಹಾಕಿದರು. ಈ ವೇಳೆ ರಾಮಕೃಷ್ಣ ವಿರುದ್ದವೇ ಸಚಿವ ಜಮೀರ್ ಸಿಡಿಮಿಡಿಗೊಂಡರು. ನಂತರ ರೈತ-ವ್ಯಾಪಾರಿ ರಾಮಕೃಷ್ಣನನ್ನ ಸಮಾಧಾನ ಮಾಡಿ ಪೊಲೀಸರು ಕಾರ್ಯಕ್ರಮದಿಂದ ಹೊರೆಗೆ ಕರೆತಂದರು. ಕಾರ್ಯಕ್ರಮ ಮುಗಿದ ನಂತರ ಈ ಬಗ್ಗೆ ಮಾತನಾಡಿದ ಜಮೀರ್ ಅಹಮದ್ ಘಟನೆಯ ಬಗ್ಗೆ ಸ್ಪಷ್ಟನೆ ನೀಡಿ ನಾನು ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ, ನಾಳೆಯೇ ತೆಲಂಗಾಣದ ಉದ್ಯಮಿ ಅಕ್ಬರ್ ನನ್ನ ಕರೆಸಿ ಅವರಿಗೆ ಹಣ ಸೆಟ್ಲ್‍ಮೆಂಟ್ ಮಾಡಿಕೊಳ್ಳುವಂತೆ ಹೇಳುತ್ತೇನೆ ಅಂತ ಹೇಳಿ ಚಿಕ್ಕಬಳ್ಳಾಪುರದಿಂದ ಹೊರಟರು.

    ಸಚಿವ ಜಮೀರ್ ಅಹಮದ್ ವಿರುದ್ಧ ರೈತರ ಆಕ್ರೋಶ!
    ಇನ್ನೂ ರೈತ ರಾಮಕೃಷ್ಣಗೆ ಮೆಕ್ಕೆಜೋಳ ಮಾರಾಟ ಮಾಡಿರೋ ರೈತರು ಸಹ ಕಾರ್ಯಕ್ರಮಕ್ಕೆ ಆಗಮಿಸಿ ಸಚಿವ ಜಮೀರ್ ಅಹಮದ್ ವಿರುದ್ಧ ಆಕ್ರೋಶ ಹೊರಹಾಕಿದರು. ಸಚಿವರ ಮಧ್ಯ ಪ್ರವೇಶ ಮಾಡಿ ಪಿಎಸ್‍ಐಗೆ ಪೋನ್ ಮಾಡಿದ್ರಿಂದಲೇ ದುಡ್ಡು ಕೊಡ್ತೀವಿ ಅಂತ ಬಂದ ಆರೋಪಿಗಳು ದುಡ್ಡು ಕೊಡದೆ ವಾಪಸ್ ಹೋಗಿದ್ದಾರೆ. ನಮಗೆ ಈಗ ದುಡ್ಡು ಕೋಡೋವರು ಯಾರು? ಜಮೀರ್ ಅಹಮದ್ ಅವರು ಕೊಡ್ತಾರಾ ಅಂತ ಅವರ ವಿರುದ್ದವೇ ಆಕ್ರೋಶ ಹೊರಹಾಕಿದರು. ರಾಜ್ಯದ ಮೆಕ್ಕೆಜೋಳದ ವ್ಯಾಪಾರಿ-ರೈತರ ಪರ ನಿಲ್ಲುವ ಬದಲು ಸಚಿವ ಜಮೀರ್ ಅಹಮದ್ ತೆಲಂಗಾಣ ಮೂಲದ ಮೆಕ್ಕೆಜೋಳದ ಉದ್ಯಮಿಗಳು ವಂಚಕರ ಪರ ನಿಂತು ಈಗ ಇರಲಾರದೆ ಇರುವೆ ಬಿಟ್ಟುಕೊಂಡೇ ಎಂಬಂತಾಗಿದ್ದಾರೆ.

  • ಜೈನ ಮಂದಿರಗಳ ಅರ್ಚಕರಿಗೆ ವೇತನ – ಅಧಿಕೃತ ಆದೇಶ

    ಜೈನ ಮಂದಿರಗಳ ಅರ್ಚಕರಿಗೆ ವೇತನ – ಅಧಿಕೃತ ಆದೇಶ

    ಬೆಂಗಳೂರು: ಜೈನ ಮಂದಿರಗಳ (Jain Temples) ಪ್ರಧಾನ ಅರ್ಚಕರು ಹಾಗೂ ಸಹಾಯಕ ಅರ್ಚಕರಿಗೆ (Priests) ವೇತನ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ.

    ರಾಜ್ಯದ 1,043 ಜೈನ ಮಂದಿರಗಳ ಪ್ರಧಾನ ಅರ್ಚಕರಿಗೆ ತಲಾ 6 ಸಾವಿರ ರೂ., ಸಹಾಯಕ ಅರ್ಚಕರಿಗೆ ತಲಾ 5 ಸಾವಿರ ರೂ. ವೇತನ ನೀಡಲಾಗುವುದು. ಇದನ್ನೂ ಓದಿ: ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಮಡಿಕೇರಿ ದಸರಾಕ್ಕೆ ಚಾಲನೆ

    ಇದೇ ಮೊದಲ ಬಾರಿಗೆ ಜೈನ ಮಂದಿರಗಳ ವೇತನ ನಿಗದಿ ಸಂಬಂಧ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ವೇತನಕ್ಕಾಗಿ ಇದುವರೆಗೂ ಜಿಲ್ಲೆಗಳಿಂದ 1,043 ಪ್ರಸ್ತಾವನೆ ಬಂದಿದ್ದು, ಸಚಿವ ಜಮೀರ್ ಅಹಮದ್ ಖಾನ್ ಅವರು ಎಲ್ಲ ಪ್ರಸ್ತಾವನೆಗೆ ಒಪ್ಪಿಗೆ ನೀಡಿ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ದಸರಾ ವಿಶೇಷ | ಮೈಸೂರು ಸಿಂಗರಿಸಿದ ದೀಪಾಲಂಕಾರ, ಆಹಾರ ಮೇಳಕ್ಕೆ ಚಾಲನೆ

    ಇದೇ ಸಂದರ್ಭದಲ್ಲಿ ಬೆಂಗಳೂರು ಗಾಂಧಿ ನಗರದ ಮಹಾಬೋಧಿ ಸೊಸೈಟಿ ಅಭಿವೃದ್ಧಿ ಗೆ ಒಂದು ಕೋಟಿ ರೂ. ಬಿಡುಗಡೆ ಮಾಡಲು ಸಚಿವರು ಆದೇಶ ಹೊರಡಿಸಿದರು. ಇದನ್ನೂ ಓದಿ: Photo Gallery | ಹೂವು ಚೆಲುವೆಲ್ಲಾ ತನ್ನದೆನ್ನುತ್ತಿದೆ.. ಸಂಗೀತ ಝೇಂಕಾರ ಮನಮುಟ್ಟುತ್ತಿದೆ – ದಸರಾ ಸೊಬಗು ಕಣ್ತುಂಬಿಕೊಳ್ಳಿ

  • ವಿದೇಶಿ ಇಸ್ಲಾಂ ಮುಖಂಡರು ಧಾರ್ಮಿಕ ಭಾಷಣ ಮಾಡುವಂತಿಲ್ಲ – ಸಂಘಟಕರಿಗೆ ಖಾಕಿ ಖಡಕ್ ಸೂಚನೆ

    ವಿದೇಶಿ ಇಸ್ಲಾಂ ಮುಖಂಡರು ಧಾರ್ಮಿಕ ಭಾಷಣ ಮಾಡುವಂತಿಲ್ಲ – ಸಂಘಟಕರಿಗೆ ಖಾಕಿ ಖಡಕ್ ಸೂಚನೆ

    – ʻಮಿಲದುನ್ನಬಿʼ ಕಾರ್ಯಕ್ರಮದಲ್ಲಿಂದು ಸಿಎಂ, ಡಿಸಿಎಂ ಭಾಗಿ
    – 500ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ

    ಬೆಂಗಳೂರು: ಈದ್ ಮಿಲಾದ್ (Eid Milad) ಪ್ರಯುಕ್ತ ಅರಮನೆ ಮೈದಾನದಲ್ಲಿಂದು ಆಯೋಜಿಸಿರುವ ʻಮಿಲದುನ್ನಬಿʼ ಕಾರ್ಯಕ್ರಮದಲ್ಲಿ ಭಾಗಿಯಾಗುವ ವಿದೇಶಿ ಧಾರ್ಮಿಕ ಮುಖಂಡರು ಹಾಗೂ ಕಾರ್ಯಕ್ರಮದ ಮೇಲೆ ಖಾಕಿ ಹದ್ದಿನ ಕಣ್ಣಿಟ್ಟಿದೆ.

    ಭಾರತದ ವೀಸಾ ನಿಯಮಗಳನ್ನ ಉಲ್ಲಂಘನೆ ಮಾಡದಂತೆ ಕಾರ್ಯಕ್ರಮ ಆಯೋಜಕರಿಗೆ ಈಗಾಗಲೇ ಪೊಲೀಸ್ರು ಸೂಚನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆಶಿ ಭಾಗಿಯಾಗ್ತಿದ್ದು, ಸಿಎಂ ಹಾಗೂ ಡಿಸಿಎಂಗೆ ಮುಜುಗರ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಈದ್ ಮಿಲಾದ್ ಹೆಸರಲ್ಲಿ ಧರ್ಮಪ್ರಚಾರ – ಸಚಿವ ಜಮೀರ್ ನೇತೃತ್ವದ ಕಾರ್ಯಕ್ರಮಕ್ಕೆ ಭಾರಿ ವಿರೋಧ

    Zameer Ahmed Khan 2

    ಕಾರ್ಯಕ್ರಮಕ್ಕೆ ಆಗಮಿಸುವ ವಿದೇಶಿ ಗಣ್ಯರು ಕೇವಲ ಗೆಸ್ಟ್ ಆಗಿರಬೇಕು. ಕಾರ್ಯಕ್ರಮದಲ್ಲಿ ಧಾರ್ಮಿಕ ವಿಚಾರಗಳ (Religious Issue) ಬಗ್ಗೆ ಮಾತನಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಉಮರ್ ಬಿನ್ ಹಮಿದ್ ಅಲ್ ಜೀಲಾನಿ, ಶೇಖ್ ಮುಹಮ್ಮದ್ ಉಪಾದ್ ಅಲ್ ಶಂಶಿರಿ, ಅಬ್ದುಲ್ ಖಬೀರ್ ಅಲ್ ಮದಿನಾ, ಖಾದರ್ ಅಲ್ ಜೀಲಾನಿ (ಬಾಗ್ದಾದ್) ಭಾಗಿ ಸಾಧ್ಯತೆಯಿದೆ. ಇದನ್ನೂ ಓದಿ: ನೇಪಾಳದಲ್ಲಿ ಫೇಸ್ಬುಕ್, ಎಕ್ಸ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ

    ಇಡೀ ಕಾರ್ಯಕ್ರಮದ ವಿಡಿಯೋ ಚಿತ್ರೀಕರಣ ಮಾಡಲಿದ್ದು, ಆಯೋಜಕರು ಹಾಗೂ ಪೊಲೀಸ್‌ ಇಲಾಖೆಯಿಂದ ವಿಡಿಯೋಗ್ರಫಿ ಮಾಡಲಾಗುತ್ತೆ. ಅಲ್ಲದೇ ಎಫ್ಆರ್‌ಆರ್‌ಓ ನಿಂದಲೂ ನಿಗಾ ವಹಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಿದೇಶಿ ಮುಖಂಡರಿಂದ ಭಾಷಣ, ಸಂದೇಶ ಸಾಧ್ಯತೆಯಿದೆ‌. ಆದ್ದರಿಂದ ಎಲ್ಲರ ಭಾಷಣಗಳ ಮೇಲೂ ಖಾಕಿ ನಿಗಾ ವಹಿಸಿದೆ.

    ಈ ನಡುವೆ ಅರಮನೆ ಮೈದಾನದಲ್ಲಿ ಈದ್ ಮೀಲಾದ್ ಸಮಾವೇಶಕ್ಕೆ ವಿದೇಶಿ ಮುಸ್ಲಿಂ ಧರ್ಮಗುರುಗಳಿಗೆ ನೀಡಿದ್ದ ಆಹ್ವಾನ ರದ್ದುಗೊಳಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

    ಇನ್ನುಳಿದಂತೆ ಅರಮನೆ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸುಮಾರು 500ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್‌ ಮಾಡಿಕೊಳ್ಳಲಾಗಿದೆ. ಜಂಟಿ ಆಯುಕ್ತರು, ಡಿಸಿಪಿಗಳ ನೇತೃತ್ವದಲ್ಲಿ ಬಂದೋಬಸ್ತ್ ನಿಯೋಜನೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಗೋವಾ | ಹಾಸ್ಟೆಲ್ ರೂಮ್‌ನಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

  • ಮನೆ ಖರೀದಿಸುವಾಗ ರಾಧಿಕಾ ಕುಮಾರಸ್ವಾಮಿ 2 ಕೋಟಿ ಸಾಲ ಕೊಟ್ಟಿದ್ದರು: ಜಮೀರ್‌

    ಮನೆ ಖರೀದಿಸುವಾಗ ರಾಧಿಕಾ ಕುಮಾರಸ್ವಾಮಿ 2 ಕೋಟಿ ಸಾಲ ಕೊಟ್ಟಿದ್ದರು: ಜಮೀರ್‌

    ಬೆಂಗಳೂರು: ಮನೆ ಖರೀದಿಸುವಾಗ ರಾಧಿಕಾ ಕುಮಾರಸ್ವಾಮಿ (Radhika Kumaraswamy) ನನಗೆ 2 ಕೋಟಿ ರೂ. ಸಾಲ ನೀಡಿದ್ದರು ಎಂದು ವಸತಿ ಸಚಿವ ಜಮೀರ್‌ ಅಹಮದ್‌ (Zameer Ahmed Khan) ತಿಳಿಸಿದ್ದಾರೆ.

    ರಾಧಿಕಾ ಕುಮಾರಸ್ವಾಮಿ ಲೋಕಾಯುಕ್ತ ವಿಚಾರಣೆ ಎದುರಿಸಿದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಾಲ ಕೊಟ್ಟಿರುವುದನ್ನು ನಾನು ಆದಾಯ ತೆರಿಗೆಯಲ್ಲಿ ತೋರಿಸಿದ್ದೇನೆ. ರಾಧಿಕಾ ಕುಮಾರಸ್ವಾಮಿ ಅವರು ಅವರ ಆದಾಯ ತೆರಿಗೆ ಫೈಲ್‌ ಮಾಡುವಾಗ ತೋರಿಸಿದ್ದಾರೆ. ಇಡಿ ದಾಳಿ ನಂತರ ಈಗ ಲೋಕಾಯುಕ್ತದಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಾಗಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.

    ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಸಾಲ ನೀಡಿದ ವ್ಯಕ್ತಿಗಳ ಪಟ್ಟಿ ಸಿಕ್ಕಿತ್ತು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರ ಹೆಸರು ಇದ್ದ ಕಾರಣ ಪೊಲೀಸರು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ರಾಧಿಕಾ, ದಶಕದ ಹಿಂದೆ ತಾವು ಸಚಿವ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ಹೇಳಿಕೆ ದಾಖಲಿಸಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ಈದ್ ಮಿಲಾದ್ ಹೆಸರಲ್ಲಿ ಧರ್ಮಪ್ರಚಾರ ಸಚಿವ ಜಮೀರ್ ನೇತೃತ್ವದ ಕಾರ್ಯಕ್ರಮಕ್ಕೆ ಭಾರಿ ವಿರೋಧ

     

    ಏನಿದು ಪ್ರಕರಣ?
    2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್‌ ಅಹಮದ್‌ ಅವರ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿತ್ತು.

    ಇಡಿ ವರದಿಯ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ಖಾನ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ತನಿಖೆಯೂ ಲೋಕಾಯುಕ್ತ ಪೊಲೀಸರಿಗೆ (Lokayukta Police) ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು ಹಲವರ ವಿಚಾರಣೆ ನಡೆಸುತ್ತಿದ್ದಾರೆ.

    ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್‌ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು. ಇದನ್ನೂ ಓದಿ: ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್‌ ಆಪ್ತನಿಂದ ಜಾತಿ ಅಸ್ತ್ರ

    ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್‌ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ.ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್‌ ಅಹ್ಮದ್‌ ಅವರಿಗೆ 2.5 ಕೋಟಿ ರೂಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿರುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು.

  • ಬೆಂಗಳೂರಲ್ಲಿ ಈದ್ ಮಿಲಾದ್ ಹೆಸರಲ್ಲಿ ಧರ್ಮಪ್ರಚಾರ – ಸಚಿವ ಜಮೀರ್ ನೇತೃತ್ವದ ಕಾರ್ಯಕ್ರಮಕ್ಕೆ ಭಾರಿ ವಿರೋಧ

    ಬೆಂಗಳೂರಲ್ಲಿ ಈದ್ ಮಿಲಾದ್ ಹೆಸರಲ್ಲಿ ಧರ್ಮಪ್ರಚಾರ – ಸಚಿವ ಜಮೀರ್ ನೇತೃತ್ವದ ಕಾರ್ಯಕ್ರಮಕ್ಕೆ ಭಾರಿ ವಿರೋಧ

    – ಟೂರಿಸ್ಟ್ ವೀಸಾದಲ್ಲಿ ಬಂದವರಿಂದ ಪ್ರಚಾರ ಭಾಷಣ

    ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿನ ಈದ್ ಮಿಲಾದ್ (Eid Milad) ಕಾರ್ಯಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ನಡೆಯುತ್ತಿರೋ ಈ ಕಾರ್ಯಕ್ರಮದಲ್ಲಿ ಟೂರಿಸ್ಟ್ ವೀಸಾ ಪಡೆದು ಬಂದವರಿಂದ ಧರ್ಮ ಪ್ರಚಾರಕ್ಕೆ ಮುಂದಾಗಿರೋದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಅಂತ ಸಚಿವ ಜಮೀರ್ (Zameer Ahmed Khan) ಸ್ಪಷ್ಟನೆ ಕೊಟ್ಟಿದ್ದಾರೆ.

    ಹೌದು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ʻಮಿಲದುನ್ನಬಿʼ ಕಾನ್ಫರೆನ್ಸ್ ಹೆಸರಿನಲ್ಲಿ ಆಯೋಜಿಸಿರೋ ಈದ್ ಮಿಲಾದ್ ಧರ್ಮ ಪ್ರಚಾರ ಕಾರ್ಯಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮೊಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ ಹಿನ್ನೆಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ವಿದೇಶದಿಂದ ಬಂದ ಧರ್ಮಗುರುಗಳಿಂದ ಪ್ರಚಾರ ನಡೆಸೋದು ಅಗತ್ಯ ಇತ್ತೇ ಅನ್ನೋ ಪ್ರಶ್ನೆ ಎದ್ದಿದೆ.

    ನಿಯಮ ಏನ್‌ ಹೇಳುತ್ತೆ?
    * ಟೂರಿಸ್ಟ್ ವೀಸಾ ಪಡೆದು ಧರ್ಮ ಪ್ರಚಾರ ಮಾಡುವಂತಿಲ್ಲ.
    * ಕಾರ್ಯಕ್ರಮದಲ್ಲಿ ಮಾತ್ರ ಭಾಗಿ ಆಗಬಹುದು.
    * ಧರ್ಮಪ್ರಚಾರಕರು ಭಾಷಣ ಮಾಡುವಂತಿಲ್ಲ.

    ಹಿಂದೂ ಸಂಘಟನೆಗಳಿಂದ ವಿರೋಧ
    ಸೆಪ್ಟೆಂಬರ್ 5ರಂದು ನಡೆಯುತ್ತಿರೋ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಅಂತ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ.

    “ ಭಾರತೀಯ ವೀಸಾ ನಿಯಮಗಳು ಹಾಗೂ ಫಾರಿನರ್ಸ್ ಆಕ್ಟ್ ಅನ್ವಯ ಭಾರತಕ್ಕೆ ಧರ್ಮಭೋಧನೆಗೆ ಧರ್ಮ ಪ್ರಚಾರಕ್ಕೆ ಅಡ್ಡ ಧಾರ್ಮಿಕ ಚಟುವಟಿಕೆಗಳಲ್ಲಿ ಯಾವುದೇ ವೀಸಾ ಪಡೆದರೂ ಭಾಗವಹಿಸುವಂತಿಲ್ಲ. ಈಗ ನಿಜಾಮುದ್ದೀನ್ ಜಮಾತ್ ಘಟನೆಯ ಬಳಿಕ ಬೆಂಗಳೂರು ನಗರದಲ್ಲಿ ಬೆಂಗಳೂರು ಪೊಲೀಸರು 19 ವಿದೇಶಿಯರನ್ನು ಬಂಧಿಸಿದ್ದಾರೆ. ದುರಂತವೆಂದರೆ ಇವರೆಲ್ಲರೂ ಟೂರಿಸ್ಟ್ ವೀಸಾ ಪಡೆದ ಭಾರತದಲ್ಲಿ ಧರ್ಮ ಪ್ರಚಾರಕ್ಕೆ ಬಂದಿದ್ದರು ಎನ್ನಲಾಗಿದೆ. ಇವರ ಕಾರ್ಯಕ್ರಮಗಳು ಹಾಗು ಓಡಾಟಗಳು ಗುಪ್ತವಾಗಿರುವುದರಿಂದ ಇವರು ರಾಷ್ಟ್ರದ ಆಂತರಿಕ ಭದ್ರತೆಗೆ ಮಾರಕವಾಗಿದ್ದಾರೆ. ಆಲ್ಲದೇ ಬಾಂಗ್ಲಾದೇಶ ಹಾಗೂ ಇತರೆ ರಾಷ್ಟ್ರಗಳಿಂದ ಬಂದಿರುವ ಪ್ರಜೆಗಳು ವೀಸಾ ದುರ್ಬಳಕೆ ಮಾಡುತ್ತಿದ್ದಾರೆ. ಕೆಲವರ ವೀಸಾ ಅವಧಿ ಮುಗಿದು ಹೋಗಿದೆ. ವೀಸಾ ನಿಯಮ ಕೇಂದ್ರದ ವಿಷಯವಾಗಿದ್ದರೂ, ರಾಜ್ಯದ ಆಂತರಿಕ ಭದ್ರತೆ ಹಾಗೂ ಐಕ್ಯತ ದೃಷ್ಟಿಯಲ್ಲಿಟ್ಟುಕೊಂಡು ಪೊಲೀಸ್ ಇಲಾಖೆ ವೀಸಾ ಉಲ್ಲಂಘಿಸಿದವರ ವಿರುದ್ದ ಕ್ರಮ ಕೈಗೊಂಡು ಅಂತಹವರನ್ನು ಗಡಿಪಾರು ಮಾಡಬೇಕಾಗಿ ಕೋರುತ್ತೇವೆ ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.

    ತೀವ್ರ ಟೀಕೆ ಬಳಿಕ ಎಚ್ಚೆತ್ತ ಗೃಹ ಸಚಿವರು
    ಇನ್ನು, ತೀವ್ರ ಟೀಕೆ ಬಳಿಕ ಗೃಹ ಸಚಿವ ಪರಮೇಶ್ವರ್ ಎಚ್ಚೆತ್ತುಕೊಂಡಿದ್ಧಾರೆ. ಹಿಂದೂ ಕಾರ್ಯಕ್ರಮದಲ್ಲಿ ಯಾವುದೇ ವಿದೇಶಿಗರ ಭಾಷಣಕ್ಕೆ ಅವಕಾಶ ನೀಡಬಾರದು ಅಂತ ಸೂಚಿಸಿದ್ದಾರೆ. ವಿದೇಶಿಗರು ಬಂದು ಧಾರ್ಮಿಕ ಪ್ರಚಾರ ಮಾಡೋದಕ್ಕೆ ಅವಕಾಶ ಇಲ್ಲ. ಇದನ್ನ ನಿಯಂತ್ರಣ ಮಾಡಬೇಕು ಅಂತ ಆಯೋಜಕರಿಗೆ ಪರಂ ತಿಳಿಸಿದ್ಧಾರೆ. ಅಲ್ಲಿ ಏನಾದ್ರು ಉಲ್ಲಂಘನೆ ಮಾಡಿದ್ರೆ ನಿಗಾ ಇಡುತ್ತೇವೆ ಅಂತ ಪರಮೇಶ್ವರ್ ತಿಳಿಸಿದ್ದಾರೆ.

  • ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್

    ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್

    – ಜಮೀರ್ ಮನೆ ಖರೀದಿಗೆ ಸಾಲ ಕೊಟ್ಟಿದ್ದ ಉದ್ಯಮಿ

    ಬೆಂಗಳೂರು: ಸಚಿವ ಜಮೀರ್ ಅಹ್ಮದ್ (Zameer Ahmed Khan) ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಕೆಜಿಎಫ್ ಬಾಬು (KGF Babu) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ (Lokayukta) ಪೊಲೀಸರು ನೋಟಿಸ್ ನೀಡಿದ್ದಾರೆ.

    ಈ ಪ್ರಕರಣದ ತನಿಖೆ ವೇಳೆ ಕೆಜಿಎಫ್ ಬಾಬು ಮತ್ತು ಜಮೀರ್ ಅಹ್ಮದ್ ನಡುವೆ ಹಣದ ವ್ಯವಹಾರ ನಡೆದಿರೋದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆಜಿಎಫ್ ಬಾಬು ಅವರಿಗೆ ನೋಟಿಸ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು, 7 ದಿನಗಳ ಒಳಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ದೊಡ್ಡ ತಿರುವು – ಸೌಜನ್ಯ ಪ್ರಕರಣದಲ್ಲಿ ಕ್ಲೀನ್‌ ಚಿಟ್‌ ಪಡೆದವರಿಗೆ SIT ಬುಲಾವ್‌

     ತನಿಖೆ ವೇಳೆ ಸಚಿವ ಜಮೀರ್ ಅಹ್ಮದ್‌ಗೆ ಕೆಜಿಎಫ್ ಬಾಬು ಅವರು 2013ರಲ್ಲಿ ಮನೆ ಖರೀದಿಗೆ 3.70 ಕೋಟಿ ರೂ. ಸಾಲ ನೀಡಿರುವುದು ತಿಳಿದುಬಂದಿದೆ. ಹಾಗಾಗಿ ಯಾವ ಕಾರಣಕ್ಕಾಗಿ ಹಣ ನೀಡಿದ್ದೀರಿ? ಇಬ್ಬರ ವ್ಯವಹಾರಗಳೇನು? ಈ ಸಂಬಂಧ ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕಾನ್‌ಸ್ಟೆಬಲ್‌, ಸಹೋದರ ಸೇರಿ 7 ವರ್ಷಗಳಿಂದ ಚಿಕ್ಕಮ್ಮನ ಮೇಲೆ ಅತ್ಯಾಚಾರ ಆರೋಪ

    ಇದೇ ಪ್ರಕರಣದಲ್ಲಿ ಜಮೀರ್‌ಗೆ 2 ಕೋಟಿ ರೂ. ಸಾಲ ನೀಡಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಅವರೂ ಕಳೆದ ವಾರ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದರು.

  • 2026ರ ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ – ಜಮೀರ್ ಗ್ಯಾರಂಟಿ

    2026ರ ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ – ಜಮೀರ್ ಗ್ಯಾರಂಟಿ

    ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ (Slum Development Board) ವತಿಯಿಂದ ಪಿಎಂಎವೈ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ ಪ್ರಗತಿಯಲ್ಲಿರುವ 1,80,253 ಮನೆಗಳ ಕಾಮಗಾರಿಯನ್ನು 2026ರ ಡಿಸೆoಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ತಿಳಿಸಿದರು.

    ಶಾಸಕ ಸಿದ್ದು ಪಾಟೀಲ್ ಅವರ ಪ್ರಶ್ನೆಗೆ ವಿಧಾನಸಭೆಯಲ್ಲಿ ಉತ್ತರಿಸಿದ ಸಚಿವರು, ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ ಯೋಜನೆಗೆ ಸಮಸ್ಯೆ ಉಂಟಾಗಿತ್ತು. ಮುಖ್ಯಮಂತ್ರಿಗಳಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಬಡವರ ಮನೆಗೆ ಸರ್ಕಾರವೇ ಫಲಾನುಭವಿಗಳ ವಂತಿಗೆ ಪಾವತಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು. 500 ಕೋಟಿ ರೂ. ಬಿಡುಗಡೆ ನಂತರ ಮೊದಲ ಹಂತದಲ್ಲಿ 36,789 ಮನೆ ಹಂಚಿಕೆ ಮಾಡಿ 2ನೇ ಹಂತದಲ್ಲಿ 40,345 ಮನೆ ಹಂಚಿಕೆಗೆ ಸಿದ್ಧತೆ ನಡೆದಿದೆ. ಸಿಎಂ 2026ರ ಒಳಗೆ ಪೂರ್ಣ ಗೊಳಿಸಲು ಸೂಚಿಸಿದ್ದು ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಜಮೀರ್ ಮಾಹಿತಿ ನೀಡಿದರು.

    ಅರವಿಂದ್ ಬೆಲ್ಲದ್ ಅವರ ಉಪ ಪ್ರೆಶ್ನೆಗೆ ಉತ್ತರಿಸಿದ ಸಚಿವರು, ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬಡ ಕುಟುಂಬಗಳಿಗೆ 47,870 ಮನೆ ನಿರ್ಮಾಣ ಯೋಜನೆ ಸಹ ಫಲಾನುಭವಿಗಳ ವಂತಿಗೆ ಪಾವತಿ ಆಗದ ಕಾರಣ, ಆ ವಿಚಾರ ಸಹ ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದು, ಸರ್ಕಾರವೇ ವಂತಿಗೆ ಭರಿಸಲು ತಾತ್ವಿಕ ಒಪ್ಪಿಗೆ ದೊರೆತಿದ್ದು, ಸಂಪುಟಕ್ಕೆ ತಂದು ಒಪ್ಪಿಗೆ ಪಡೆಯಲಾಗುವುದು. ಆ ಮನೆಗಳನ್ನ ಆದಷ್ಟು ಬೇಗ ಪೂರ್ಣಗೊಳಿಸಿ ಹಂಚಿಕೆ ಮಾಡಲಾಗುವುದು ಎಂದು ಸಚಿವ ಜಮೀರ್ ವಿವರಿಸಿದರು.

  • ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ರೂ. ಗಿಫ್ಟ್‌ – ಜಮೀರ್ ಅಹ್ಮದ್

    ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ರೂ. ಗಿಫ್ಟ್‌ – ಜಮೀರ್ ಅಹ್ಮದ್

    – ರಾಜ್ಯದ 2 ಸಾವಿರ ಮದರಸಾಗಳಲ್ಲಿ ಕನ್ನಡ ಕಲಿಕೆ

    ಬೆಂಗಳೂರು: ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50,000 ರೂಪಾಯಿ ಸಹಾಯಧನ ಕೊಡ್ತೇವೆ ಅಂತ ಸಚಿವ ಜಮೀರ್‌ ಅಹ್ಮದ್‌ (Zameer Ahmed Khan) ತಿಳಿಸಿದರು.

    ಬೆಂಗಳೂರಿನಲ್ಲಿಂದು (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ಕೊಡುತ್ತೇವೆ. ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು, ಅದು ಆದೇಶ ಆಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರತ ಕೊಟ್ಟ ತಿರುಗೇಟಿಗೆ ಸರಿಯಾಗಿ ಉತ್ತರ ನೀಡದೇ ನುಣುಚಿದ ಟ್ರಂಪ್‌

    ಮುಂದುವರಿದು.. ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾನ್ವಿತರಿಗೆ ಸಹಾಯ ಮಾಡುತ್ತೇವೆ. ಇಲಾಖೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡುತ್ತಿದ್ದೇವೆ. 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ ಟಾಪ್ ಕೊಡುತ್ತಿದ್ದೇನೆ. ಸಾಮೂಹಿಕ ವಿವಾಹ ಮಾಡವುದು ಬಡವರು, ಹೀಗಾಗಿ ಅಲ್ಪಸಂಖ್ಯಾತರಲ್ಲಿ ಸಾಮೂಹಿಕ ವಿವಾಹ ಮಾಡುವವರಿಗೂ ಸಹಾಯ ಮಾಡುತ್ತೇವೆ ಎಂದು ತಿಳಿಸಿ ಸಹಾಯ ಮಾಡುತ್ತೇವೆಂದು ಮಾಹಿತಿ ನೀಡಿದರು. ಇದನ್ನೂ ಓದಿ: ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ

    ಮದರಸಾದಿಂದ 200 ಜನರ ಆಯ್ಕೆ
    ಇನ್ನೂ ಮದರಸಾಗಳಲ್ಲಿ ಕನ್ನಡ ಕಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಸೀದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ವಿಗಳಿಗೂ ಕನ್ನಡ ಬೋಧನೆಯನ್ನ ಮಾಡಲಾಗುವುದು. ಮದರಸಾಗಳಿಂದ 200 ಜನರನ್ನ ಆಯ್ಕೆ ಮಾಡಿದ್ದೇವೆ. 3 ತಿಂಗಳ ಒಳಗೆ ಅವರಿಗೆ ಕನ್ನಡ ಕಲಿಸುತ್ತೇವೆ. ಕನ್ನಡ ರಾಜ್ಯ ನಮ್ಮದು ಕನ್ನಡ ಬರಬೇಕು, ಎಲ್ಲ ಮಸೀದಿ ಗುರುಗಳಿಗೂ ಕನ್ನಡ ಕಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮನಗರ | ಇನ್‌ಸ್ಟಾದಲ್ಲಿ ಪರಿಚಯವಾದ ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ್ದ ಕಾಮುಕ ಅರೆಸ್ಟ್‌

    2 ಸಾವಿರ ಮದರಸಾಗಳಲ್ಲಿ ಕನ್ನಡ ಕಲಿಕೆ
    ಮುಂದಿನ ದಿನಗಳಲ್ಲಿ ರಾಜ್ಯದಲ್ಲಿರುವ 2 ಸಾವಿರ ಮದರಸಾಗಳಲ್ಲಿ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಇದಕ್ಕೆ ಅಲ್ಪಸಂಖ್ಯಾತರ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸೋಮವಾರ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು. ನಿಸಾರ್‌ ಅಹಮದ್‌ ಹೇಳಿದರು. ಅಲ್ಲದೇ, ಈ ಕುರಿತಾದ ಪಠ್ಯಕ್ರಮವನ್ನ ಅಲ್ಪಸಂಖ್ಯಾತರ ಆಯೋಗವು ಪ್ರಾಧಿಕಾರದ ಸಲಹೆಯಂತೆ ಮುದ್ರಿಸಲು ಕ್ರಮವಹಿಸಲಿದೆ ಎಂದರು.

  • ʻಕೈʼ ಸುಡುತ್ತಾ ಸ್ಕ್ಯಾಮ್ ಬೆಂಕಿ – ಸ್ಲಂ ಬೋರ್ಡ್‌ನಲ್ಲಿ ಕಾಸು ಕೊಟ್ಟವರಿಗೆ ಸೈಟ್; ಸಿಎಂಗೆ ಪಂಚಾಯಿತಿ ಅಧ್ಯಕ್ಷೆ ಪತ್ರ

    ʻಕೈʼ ಸುಡುತ್ತಾ ಸ್ಕ್ಯಾಮ್ ಬೆಂಕಿ – ಸ್ಲಂ ಬೋರ್ಡ್‌ನಲ್ಲಿ ಕಾಸು ಕೊಟ್ಟವರಿಗೆ ಸೈಟ್; ಸಿಎಂಗೆ ಪಂಚಾಯಿತಿ ಅಧ್ಯಕ್ಷೆ ಪತ್ರ

    – ಕಾಂಗ್ರೆಸ್‌ ಪಕ್ಷದ ಪಂಚಾಯಿತಿ ಅಧ್ಯಕ್ಷೆಯಿಂದಲೇ ಲೆಟರ್‌ ಬಾಂಬ್‌

    ಬೆಂಗಳೂರು: ʻಬಡವರ ದುಡ್ಡು ತಿಂದ್ರೇ ಹುಳ ಬೀಳುತ್ತೆ, ಬಡವರ ದುಡ್ಡು ತಿಂದ್ರೆ ದೇವ್ರು ಮೆಚ್ಚುತ್ತಾನಾ? ಹೀಗೆ ನಿನ್ನೆ‌ ವೆರೈಟಿ ವೆರೈಟಿ ಡೈಲಾಗ್ ಹೊಡೆದ್ರು ಸಚಿವ ಜಮೀರ್ ಅಹಮ್ಮದ್ (Zameer Ahmed Khan). ಆದ್ರೆ ಅವ್ರ ಇಲಾಖೆಯಲ್ಲೇ ದಿನಕ್ಕೊಂದು ಗೋಲ್ಮಾಲ್‌ ಸರ್ಕಾರವನ್ನು ಈಗ ಮುಜಗರಕ್ಕೆ ಸಿಲುಕಿದೆ.

    ರಾಜೀವ್ ಗಾಂಧಿ ವಸತಿ ನಿಗಮದ ಬಳಿಕ ಈಗ ಸ್ಲಂ ಬೋರ್ಡ್‌ನಲ್ಲೂ (Slum Board) ಅಕ್ರಮದ ವಾಸನೆ ಕಂಡುಬಂದಿದೆ. ಯಲಹಂಕದಲ್ಲಿ ಸ್ಲಂ ಬೋರ್ಡ್‌ನಿಂದ (Yelahanka Slum Board) ಮಂಜೂರಾಗಿರುವ ನಿವೇಶನ ಬಡವರಿಗೆ ಸಿಗ್ತಿಲ್ಲ, ಬದಲಾಗಿ ದುಡ್ಟು ಕೊಟ್ಟವರಿಗೆ ಸೈಟು ಕೊಡ್ತಿದ್ದಾರೆ ಅಂತ ಕಾಂಗ್ರೆಸ್ ಪಕ್ಷದ ಪಂಚಾಯಿತಿ ಅಧ್ಯಕ್ಷೆಯೊಬ್ಬರು ಗಂಭೀರ ಆರೋಪ ಮಾಡಿ ಸಿಎಂ, ಡಿಸಿಎಂಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸರಿ ಮಾತಾಡ್ಸಲ್ಲ ಅಂತ ರಾಜು ಕಾಗೆ ಆರೋಪ – ಶಾಸಕರಿಗೆ ನಮ್ಮ ಮೇಲೆ ಪ್ರೀತಿ ಜಾಸ್ತಿ ಎಂದ ಡಿಕೆಶಿ

    ಈ ಗೋಲ್ಮಾಲ್‌ನಲ್ಲಿ ಅಧಿಕಾರಿಗಳೂ ಶಾಮೀಲಾಗಿದ್ದಾರೆ. ಬಡವರಿಗೆ ಸೇರಬೇಕಾಗಿರುವ ಮನೆ ನಿವೇಶನ ದುಡ್ಡಿದ್ದವರ ಪಾಲಾಗಿದೆ. ಹಣ ಕೊಟ್ಟವರಿಗೆ ನಿವೇಶನ ಸೇಲ್ ಮಾಡಲಾಗುತ್ತಿದೆ ಅಂತ ಪತ್ರದಲ್ಲಿ ಆರೋಪಿಸಿದ್ದು, ಅನರ್ಹ ಫಲಾನುಭವಿಗಳ ಪಟ್ಟಿ ತಡೆಹಿಡಿಯುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: PUBLiC TV Impact | ಅಳಿವಿನಂಚಿನಲ್ಲಿದ್ದ ಸರ್ಕಾರಿ ಶಾಲೆಗೆ `ಪಬ್ಲಿಕ್’ ಪ್ರೋತ್ಸಾಹ – ಸರ್ಕಾರಿ ಶಾಲೆಗೆ ಹೆಚ್ಚಾಯ್ತು ಡಿಮ್ಯಾಂಡ್

    ಒಟ್ಟಿನಲ್ಲಿ ಸರ್ಕಾರದ ವಿರುದ್ಧ ಸಾಲು ಸಾಲು ಸ್ಕ್ಯಾಮ್ ಗಳು, ಅವರದ್ದೇ ಪಕ್ಷದವರು ಈ ಭ್ರಷ್ಟಾಚಾರದ ವಿರುದ್ಧ ತಿರುಗಿಬಿದ್ದು ಬುದ್ಧಿ ಕಲಿಸುವ ಮಟ್ಟಕ್ಕೆ ಬಂದಿದೆ. ಇದನ್ನೂ ಓದಿ: ಬಹಿರಂಗ ಹೇಳಿಕೆ ನೀಡುವ ಶಾಸಕರೇ ಹುಷಾರ್! ಕಾಂಗ್ರೆಸ್ ಹೈಕಮಾಂಡ್ ವಾರ್ನಿಂಗ್ ಕಾಲ್?

  • ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ – ಸಿಎಂ, ಜಮೀರ್‌ ರಾಜೀನಾಮೆಗೆ ರವಿಕುಮಾರ್ ಆಗ್ರಹ

    ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ – ಸಿಎಂ, ಜಮೀರ್‌ ರಾಜೀನಾಮೆಗೆ ರವಿಕುಮಾರ್ ಆಗ್ರಹ

    ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ (Congress Government) ಭ್ರಷ್ಟಾಚಾರ ಮುಗಿಲು ಮುಟ್ಟಿದೆ ಅಂತ ಬಿಜೆಪಿ ಎಂಎಲ್‌ಸಿ ರವಿಕುಮಾರ್ (N Ravikumar) ವಾಗ್ದಾಳಿ ನಡೆಸಿದ್ದಾರೆ.

    ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರಾದ ಬಿ.ಆರ್ ಪಾಟೀಲ್ (BR Patil) ಮತ್ತು ರಾಜು ಕಾಗೆ ಆರೋಪಕ್ಕೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟುತ್ತಿದೆ. ಒಬ್ಬರಾದ ಮೇಲೆ ಒಬ್ಬರು ಮಾತಾಡ್ತಿದ್ದಾರೆ. ರಾಜು ಕಾಗೆ, ಬೇಳೂರು, ಬಿ.ಆರ್. ಪಾಟೀಲ್ ಮಾತಾಡ್ತಿದ್ದಾರೆ‌. ಈ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವ ಆಡ್ತಿದೆ. ಬೇಳೂರು ಗೋಪಾಲಕೃಷ್ಣ ಅವರು ಜಮೀರ್‌ರನ್ನೇ ಭ್ರಷ್ಟಾಚಾರ ಮಂತ್ರಿ ಅಂತ ಹೇಳ್ತಿದ್ದಾರೆ. ಅನೇಕ MLA ಗಳು ಇದನ್ನ ಹೇಳ್ತಿದ್ದಾರೆ ಎಂದು ದೂರಿದರು.

    ನಮ್ಮ ಮೇಲೆ 40% ಅಂದ್ರಿ, ಸಿಎಂ, ಡಿಸಿಎಂ ಅವರೇ ನಿಮ್ಮ ಸರ್ಕಾರ ಎಷ್ಟು ಪರ್ಸೆಂಟೇಜ್ ತಗೋತಾ ಇದೆ ಹೇಳಿ ಅಂತ ಆಗ್ರಹ ಮಾಡಿದ್ರು. ಇದನ್ನೂ ಓದಿ: ಸಚಿವರು, ಸರ್ಕಾರದ ಕಾರ್ಯವೈಖರಿ ಮೇಲೆ ಶಾಸಕರ ಸಿಟ್ಟು – ಖಡಕ್ ರಿಯಾಕ್ಷನ್ ಕೊಡ್ತಿದ್ದ ಡಿಸಿಎಂ ಸಾಫ್ಟ್?

    ಸಿಎಂ, ಡಿಸಿಎಂ ಅವರೇ ರಾಜು ಕಾಗೆ, ಬಿ.ಆರ್. ಪಾಟೀಲ್ ಹೇಳಿಕೆಗೆ ಏನ್ ಹೇಳ್ತೀರಾ? ಸಿದ್ದರಾಮಯ್ಯ (Siddaramaiah) ಸರ್ಕಾರಕ್ಕೆ ಸಂವಿಧಾನ ಗೊತ್ತಿದ್ದರೆ ರಾಜೀನಾಮೆ ಕೊಡಬೇಕು. ಕೆಂಪಣ್ಣ ಪತ್ರ ಬರೆದ್ರು ಅಂತ ಅವತ್ತು ರಾಜೀನಾಮೆ ಕೇಳಿದ್ರಿ. ಇವತ್ತು ನಿಮ್ಮ ಶಾಸಕರೇ ಹೇಳ್ತಿದ್ದಾರೆ. ನೈತಿಕತೆ ‌ಇದ್ದರೆ ರಾಜೀನಾಮೆ ‌ಕೊಡಿ. ಘನತೆ, ಗೌರವ, ಪ್ರಜಾಪ್ರಭುತ್ವ ನಂಬಿಕೆ ಇದ್ದರೇ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಲೂಟಿಕೋರರ ಸರ್ಕಾರ, ಮಾನ ಮರ್ಯಾದೆ ಇದ್ದರೆ ಸಿಎಂ, ಡಿಕೆಶಿ ರಾಜೀನಾಮೆ ಕೊಡಲಿ: ಛಲವಾದಿ ನಾರಾಯಣಸ್ವಾಮಿ

    ನಾವು ಅಧಿಕಾರದಲ್ಲಿ ಇದ್ದಿದ್ದರೇ ನಮ್ಮನ್ನ ನೀವು ಸುಮ್ಮನೆ ಬಿಡ್ತಿದ್ರಾ? ನೀವು ವಿಪಕ್ಷದಲ್ಲಿ ಇದ್ದಾಗ ಏನ್ ಮಾತಾಡಿದ್ರಿ ನೆನಪು ಮಾಡಿಕೊಳ್ಳಿ. ಶಾಸಕರ ಹೇಳಿಕೆಗಳಿಗೆ ಗೌರವ ಸಿಗಬೇಕಾದ್ರೆ ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಜಮೀರ್ ಅಹಮದ್‌ರಿಂದ (Zameer Ahmed Khan) ಕೂಡಲೇ ಸಿಎಂ ರಾಜೀನಾಮೆ ಪಡೆಯಬೇಕು. ಬಿ.ಆರ್ ಪಾಟೀಲ್, ರಾಜು ಕಾಗೆ ಸೇರಿ ಎಲ್ಲರ ಹೇಳಿಕೆ ಕುರಿತು ಹೋರಾಟ ಮಾಡ್ತೀವಿ. ಸದನದಲ್ಲಿ ಈ ಬಗ್ಗೆ ನಾವು ಚರ್ಚೆ ಮಾಡ್ತೀವಿ. ರಾಜೀನಾಮೆ ಕೊಡೋವರೆಗೂ ಬಿಡೋದಿಲ್ಲ. ಮುಂದಿನ ದಿನಗಳಲ್ಲಿ ‌ದೊಡ್ಡ ಹೋರಾಟ ಮಾಡ್ತೀವಿ ಅಂತ ಎಚ್ಚರಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಕಮಿಷನ್ ಬಿಸಿ, ಹೈಕಮಾಂಡ್‌ಗೆ ತಲೆನೋವು – ಸಿಎಂ ಮಧ್ಯಪ್ರವೇಶ?