Tag: Zamir Ahmad

  • ಕೆಲ ಕೋರ್ಟ್‌ಗಳು ಬಿಜೆಪಿ ಹೇಳಿದಂತೆ ಕೇಳುತ್ತಿವೆ: ಯತೀಂದ್ರ ಸಿದ್ದರಾಮಯ್ಯ

    ಕೆಲ ಕೋರ್ಟ್‌ಗಳು ಬಿಜೆಪಿ ಹೇಳಿದಂತೆ ಕೇಳುತ್ತಿವೆ: ಯತೀಂದ್ರ ಸಿದ್ದರಾಮಯ್ಯ

    ಮೈಸೂರು: ಮುಡಾ ಪ್ರಕರಣದಲ್ಲಿ (MUDA Case) ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧದ ಆದೇಶವನ್ನು ರಾಜಕೀಯ ತೀರ್ಪು ಎಂದು ಬಣ್ಣಿಸಿ ವಸತಿ ಸಚಿವ ಜಮೀರ್ ಅಹ್ಮದ್‌(Zamir Ahmad) ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹೊತ್ತಲ್ಲೇ ಕೆಲ ನ್ಯಾಯಾಲಯಗಳು ಕೇಂದ್ರ ಬಿಜೆಪಿ ಸರ್ಕಾರ ಹೇಳಿದಂತೆ ಕೇಳುತ್ತಿವೆ ಎಂಬ ಗಂಭೀರ ಆರೋಪವನ್ನು ಸಿಎಂ ಪುತ್ರ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.

     

    ಎಚ್.ಡಿ. ಕೋಟೆಯಲ್ಲಿ ಆಯೋಜನೆಗೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ತನಿಖೆ ಬಗ್ಗೆ ಭಯ ಇಲ್ಲ. ನಾವು ಯಾವುದೇ ತಪ್ಪು ಮಾಡಿಲ್ಲ. ತನಿಖಾ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಕೆಲ ಕೋರ್ಟ್‌ಗಳು ಕೂಡ ಕೇಂದ್ರ ಬಿಜೆಪಿ (BJP) ಹೇಳುವಂತೆ ಕೇಳುತ್ತಿವೆ ಎಂದು ದೂರಿದರು. ಇದನ್ನೂ ಓದಿ: ಅಂಬೇಡ್ಕರ್ ಇಸ್ಲಾಂ ಧರ್ಮ ಸ್ವೀಕರಿಸಲು ಸಿದ್ಧರಾಗಿದ್ದರು: ಅಜ್ಜಂಪೀರ್ ಖಾದ್ರಿ ವಿವಾದಾತ್ಮಕ ಹೇಳಿಕೆ

    ಸಿದ್ದರಾಮಯ್ಯ ಮೇಲೆ ಸುಳ್ಳು ಆರೋಪದ ಮಾಡಿ ಅವರನ್ನು ಪ್ರಕರಣಗಳಲ್ಲಿ ಸಿಲುಕಿಸಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಶ್ನೆ ಮಾಡದೇ ಇದ್ದರೆ ಅವರು ಆಡಿದ್ದೇ ಆಟ ಆಗುತ್ತದೆ. ಕೇಂದ್ರ ಸರ್ಕಾರದ ಧೋರಣೆಗೆ ಜನ ಮನ್ನಣೆ ನೀಡಬಾರದು. ಬಡವರ ಪರ ಇರುವ ನಮ್ಮ ನಾಯಕರ ಪರ ನಿಮ್ಮ ಬೆಂಬಲ ಇರಬೇಕು ಎಂದು ವಿನಂತಿ ಮಾಡಿದರು.

     

  • ಸರ್ಕಾರ ಮರೆತರು, ಜನಪ್ರತಿನಿಧಿಗಳು ಕೊಟ್ಟ ಹಣದಲ್ಲಿ ಗ್ರಂಥಾಲಯ ನಿರ್ಮಿಸಿದ ಅನಕ್ಷರಸ್ಥ!

    ಸರ್ಕಾರ ಮರೆತರು, ಜನಪ್ರತಿನಿಧಿಗಳು ಕೊಟ್ಟ ಹಣದಲ್ಲಿ ಗ್ರಂಥಾಲಯ ನಿರ್ಮಿಸಿದ ಅನಕ್ಷರಸ್ಥ!

    ಮೈಸೂರು: ಜಿಲ್ಲೆಯ ರಾಜೀವ್ ನಗರದಲ್ಲಿ ಅನಕ್ಷರಸ್ಥರಾದ ಸೈಯದ್ ಇಸಾಕ್ ಸ್ಥಾಪಿಸಿದ್ದ ಸಾರ್ವಜನಿಕ ಗ್ರಂಥಾಲಯ ಇಂದು ಉದ್ಘಾಟನೆಗೊಂಡಿದೆ.

    ಈ ಹಿಂದೆ ಸೈಯದ್ ಇಸಾಕ್ ಸ್ಥಾಪಿಸಿದ್ದ ಗ್ರಂಥಾಲಯವನ್ನು ಕಿಡಿಗೇಡಿಗಳು ಸುಟ್ಟು ಹಾಕಿದ್ದರು. ಆಗ ಸಾವಿರಾರು ಪುಸ್ತಕಗಳು ಬೆಂಕಿಗಾಹುತಿಯಾಗಿದ್ದವು. ಈ ವೇಳೆ ರಾಜ್ಯ ಸರ್ಕಾರ ತಾನೇ ಗ್ರಂಥಾಲಯ ನಿರ್ಮಿಸುವುದಾಗಿ ಭರವಸೆ ನೀಡಿತ್ತು. ಆದರೆ, ವರ್ಷ ಕಳೆದರೂ ಭರವಸೆ ಈಡೇರಲಿಲ್ಲ. ಅದಕ್ಕಾಗಿ ಮಾಜಿ ಸಚಿವ ಜಮೀರ್ ಅಹಮದ್, ಸಚಿವ ಎಸ್.ಟಿ. ಸೋಮಶೇಖರ್, ಮೈಸೂರು ಸಂಸದ ಪ್ರತಾಪ್ ಸಿಂಹ, ಸುತ್ತೂರು ಮಠದ ಶ್ರೀ ಮಾಡಿದ ವೈಯಕ್ತಿಕ ಧನಸಹಾಯದಲ್ಲಿ ಈಗ ಗ್ರಂಥಾಲಯ ನಿರ್ಮಿಸಲಾಗಿದೆ. ಈ ಗ್ರಂಥಾಲಯ ಇಂದು ಉದ್ಘಾಟನೆಗೊಂಡಿದೆ. ಇದನ್ನೂ ಓದಿ: 11 ಸಾವಿರ ಕನ್ನಡ ಪುಸ್ತಕಗಳಿದ್ದ ಗ್ರಂಥಾಲಯ ಸುಟ್ಟು ಹಾಕಿದ ಕಿಡಿಗೇಡಿಗಳು!

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸೈಯದ್ ಇಸಾಕ್, ಈ ಹಿಂದೆ ಸುಟ್ಟುಹೋಗಿದ್ದ ಗ್ರಂಥಾಲಯದ ಮರು ನಿರ್ಮಾಣಕ್ಕೆ ಮೊಟ್ಟ ಮೊದಲ ಬಾರಿಗೆ ಜಮೀರ್ ಅಹಮ್ಮದ್ ಅವರು 2 ಲಕ್ಷ ರೂ., ಪ್ರತಾಪ್ ಸಿಂಹ 50 ಸಾವಿರ ರೂ., ಸಚಿವ ಎಸ್.ಟಿ. ಸೋಮಶೇಖರ್ 25 ಸಾವಿರ ರೂ. ಮತ್ತು ಸುತ್ತೂರು ಮಠದ ಶ್ರೀ 10 ಸಾವಿರ ರೂ. ಮತ್ತು ಪುಸ್ತಕಗಳನ್ನು ನೀಡಿದ್ದಾರೆ ಅಲ್ಲದೆ ವೈಯಕ್ತಿಕವಾಗಿ ಹಲವು ಮಂದಿ ಸಹಾಯ ಮಾಡಿದ್ದಾರೆ. ಇದನ್ನೂ ಓದಿ: ರಾಜಪಥದಲ್ಲಿ ಭಾರತದ ವೈಭವ ಅನಾವರಣ

    ಎಲ್ಲಾ ಧಾನಿಗಳು ಸೇರಿ ಒಟ್ಟು 3 ಲಕ್ಷ 45 ಸಾವಿರ ರೂ. ಕೊಟ್ಟಿದ್ದಾರೆ. ಈ ಹಣವನ್ನು ಬ್ಯಾಂಕ್‍ನಲ್ಲಿ ಇಡಿ ನಾವು ಗ್ರಂಥಾಲಯ ಕಟ್ಟಿ ಕೊಡುತ್ತೇವೆ ಎಂದು ಸರ್ಕಾರ ತಿಳಿಸಿತ್ತು. ಆದರೆ ಈವರೆಗೇ ಸರ್ಕಾರ ಕೊಟ್ಟಿಲ್ಲ. ನನಗೆ ಸರ್ಕಾರದ ಮೇಲೆ ನಂಬಿಕೆ ಹೊರಟು ಹೋಯಿತು ಹಾಗಾಗಿ ತಾತ್ಕಾಲಿಕವಾಗಿ ನಾನು ಗ್ರಂಥಾಲಯ ಕಟ್ಟಿದ್ದೇನೆ ಎಂದರು.