Tag: Zee Kannada

  • ಜೀ ಕನ್ನಡ ಕಾಮಿಡಿ ಕಿಲಾಡಿಗಳು: ಹೊಸ ರೂಪದೊಂದಿಗೆ ರೆಡಿ

    ಜೀ ಕನ್ನಡ ಕಾಮಿಡಿ ಕಿಲಾಡಿಗಳು: ಹೊಸ ರೂಪದೊಂದಿಗೆ ರೆಡಿ

    ನ್ನ ಹೊಸತನದಿಂದ ಯಾವಾಗಲೂ ವೀಕ್ಷಕರಿಗೆ ಹೊಸತನವನ್ನು ಕೊಟ್ಟು ಮನರಂಜಿಸುವ ಜೀ ಕನ್ನಡ (Zee Kannada) ಈಗ ಎಲ್ಲರ ಅಚ್ಚುಮೆಚ್ಚಿನ ನಾನ್-ಫಿಕ್ಷನ್ ಶೋ ಕಾಮಿಡಿ (Comedy Khiladigalu) ಕಿಲಾಡಿಗಳನ್ನು ಮತ್ತೆ ತಂದಿದೆ. ಇಡೀ ರಾಜ್ಯವನ್ನೇ ನಗಿಸಿದ ಯಶಸ್ವಿ ಸೀಸನ್‌ಗಳನ್ನು ನೀಡಿದ ನಂತರ, ಕಾಮಿಡಿಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ವಾಹಿನಿ ಸಿದ್ಧವಾಗಿದೆ. ಇನ್ನು ಎಲ್ಲರೂ ಕಾತುರತೆಯಿಂದ ಕಾಯುತ್ತಿರುವ ಕಾಮಿಡಿ ಕಿಲಾಡಿಗಳು ಅಕ್ಟೋಬರ್ 25 ರಂದು ರಾತ್ರಿ 9 ಗಂಟೆಗೆ ಶುರುವಾಗಲಿದ್ದು, ಪ್ರತಿ ವಾರಾಂತ್ಯದಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

    ತರ್ಲೆ ಮಾತು, ವಿಭಿನ್ನ ನಿರೂಪಣಾ ಶೈಲಿಯಿಂದ ಕನ್ನಡಿಗರ ಮನಗೆದ್ದ ನಿರಂಜನ್ ದೇಶಪಾಂಡೆ ಅವರು ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ನಿರೂಪಣಾ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಇನ್ನು ಈ ನಗುವಿನ ಪಯಣದ ಸಾರಥಿಗಳಾಗಿ ಅತ್ಯುತ್ತಮ ಸಿನೆಮಾಗಳನ್ನು ನೀಡಿ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದ ಕಾಮಿಡಿ ಕಿಂಗ್ ಜಗ್ಗೇಶ್ ಮತ್ತು ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್, ಎಲ್ಲರ ಅಚ್ಚುಮೆಚ್ಚಿನ ಹಿರಿಯ ನಟಿ ತಾರಾ ಅನುರಾಧ ಇರಲಿದ್ದಾರೆ. ಒಟ್ಟಾರೆಯಾಗಿ ಇವೆರಲ್ಲರೂ ನಿಮ್ಮ ನಗುವನ್ನು ಡಬಲ್ ಮಾಡೋದರಲ್ಲಿ ಯಾವುದೇ ಸಂದೇಹವಿಲ್ಲ. ಇದನ್ನೂ ಓದಿ: ಮೂರೇ ವಾರಕ್ಕೆ ಕಾಂತಾರ ಚಾಪ್ಟರ್-1 ಹೊಸ ಮೈಲಿಗಲ್ಲು

    ಸತತ 19 ವರ್ಷಗಳಿಂದ ಜೀ ಕನ್ನಡ ವಾಹಿನಿ ಕನ್ನಡಿಗರನ್ನು ಮನರಂಜಿಸುವಲ್ಲಿ ಮುಂಚೂಣಿಯಲ್ಲಿದೆ. ಇದೀಗ ಈ ಪರಂಪರೆಯನ್ನು ಮುಂದುವರೆಸುತ್ತ ಜೀ ಕನ್ನಡ ವಾಹಿನಿ ಪ್ರೇಕ್ಷಕರನ್ನು ನಕ್ಕು ನಗಿಸಲು ‘ಕಾಮಿಡಿ ಕಿಲಾಡಿಗಳು’ ಹೊಚ್ಚ ಹೊಸ ಸೀಸನ್ ಅನ್ನು ತರಲು ಸಜ್ಜಾಗಿದೆ. ಈ ಶೋನಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಪ್ರತಿಭಾನ್ವಿತ ನವಹಾಸ್ಯನಟರು ಪಾಲ್ಗೊಳ್ಳಲಿದ್ದು, ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಲಿದ್ದಾರೆ. ಹಾಸ್ಯಮಯ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುವ ನೂತನ ಸ್ಕಿಟ್ ಗಳನ್ನೂ ಈ ಪ್ರತಿಭೆಗಳು ಪ್ರದರ್ಶಿಸಲಿದ್ದಾರೆ.

    ಈ ಸೀಸನ್ ನ ಕಾಮಿಡಿ ಕಿಲಾಡಿಗಳು ಕ್ರಿಯೇಟಿವಿಟಿ ಮತ್ತು ಹೊಸತನದ ಪ್ರತಿರೂಪವಾಗಿದೆ. ಇನ್ನು ಪ್ರತಿಸಂಚಿಕೆಯಲ್ಲೂ ಹಾಸ್ಯ, ತರ್ಲೆ, ನಗುವಿನ ಚಟಾಕಿ ಇರಲಿದೆ. ಹೊಸಪ್ರತಿಭೆಗಳು ಕಾಮಿಡಿ ಸ್ಕಿಟ್ ಗಳ ಮೂಲಕ ಕನ್ನಡಿಗರ ಮನಕ್ಕೆ ಲಗ್ಗೆ ಇಡಲು ಸಜ್ಜಾಗಿದ್ದಾರೆ. ಇದೇ ಅಕ್ಟೋಬರ್ 25 ರಿಂದ, ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ಶೋ ಪ್ರಸಾರವಾಗಲಿದೆ.

  • ಕಿರುತೆರೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ

    ಕಿರುತೆರೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ

    ಕರ್ನಾಟಕದ ಎಲ್ಲರ ಅಚ್ಚುಮೆಚ್ಚಿನ ವಾಹಿನಿ ಜೀ ಕನ್ನಡ (Zee Kannada) ವಿಭಿನ್ನ ಕಥೆಗಳ ಮೂಲಕ ಪ್ರೇಕ್ಷಕರ ಹೃದಯಕ್ಕೆ ನಿರಂತರವಾಗಿ ಲಗ್ಗೆ ಇಡುತ್ತಾ ಬಂದಿದೆ. ಇದಕ್ಕೂ ಮೊದಲು ಉಘೆ ಉಘೆ ಮಾದೇಶ್ವರ ಮತ್ತು ವಿಷ್ಣು ದಶಾವತಾರ ಎಂಬ ಭಕ್ತಿಪ್ರಧಾನ ಧಾರಾವಾಹಿಗಳನ್ನು ನೀಡಿ ಕನ್ನಡಿಗರ ಮನಗೆದ್ದ ಜೀ ಕನ್ನಡ ಈಗ ಮತ್ತೊಂದು ಭಕ್ತಿಪ್ರಧಾನ ಧಾರಾವಾಹಿಯನ್ನು ಜನರ ಮುಂದಿಡಲು ಸಜ್ಜಾಗಿದೆ. `ಶ್ರೀ ರಾಘವೇಂದ್ರ ಮಹಾತ್ಮೆ’ (Shree Raghavendra Mahatme) ಎಂಬ ಧಾರಾವಾಹಿ ಇದೇ ಸೆಪ್ಟೆಂಬರ್ 1ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ ಮತ್ತು ಇದರಲ್ಲಿ ರಾಯರ ಬಾಲ್ಯ, ಪವಾಡಗಳು ಮತ್ತು ಅವರ ಜೀವನದಲ್ಲಿ ನಡೆದ ಅನೇಕ ಕಥೆಗಳು ನಮಗೆ ಕಾಣಸಿಗಲಿದೆ.

    ಜೀ ಕನ್ನಡವು ನಂಬಿಕೆ, ಸಂಪ್ರದಾಯ ಮತ್ತು ಸಂಸ್ಕೃತಿಯಲ್ಲಿ ಬೇರು ಬಿಟ್ಟಿರುವ ಭವ್ಯವಾದ ಕಥೆಗಳನ್ನು ನಿರಂತರವಾಗಿ ಪ್ರೇಕ್ಷಕರಿಗೆ ಕೊಡುವುದರ ಜೊತೆಗೆ ಅರ್ಥಪೂರ್ಣ ಮನರಂಜನೆಯನ್ನು ನೀಡುವ ತನ್ನ ಮುಖ್ಯಧ್ಯೇಯಕ್ಕೆ ಬದ್ಧವಾಗಿದೆ. ಈ ಪರಂಪರೆಯನ್ನು ಇನ್ನಷ್ಟು ಬಲಪಡಿಸುತ್ತಾ, ಜೀ ಕನ್ನಡ ಈಗ `ಶ್ರೀ ರಾಘವೇಂದ್ರ ಮಹಾತ್ಮೆ’ ಎಂಬ ಭಕ್ತಿಪರ ಧಾರಾವಾಹಿಯನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಇದು ಶ್ರೀ ರಾಘವೇಂದ್ರ ಸ್ವಾಮಿಗಳ ಅಸಾಮಾನ್ಯ ಜೀವನಯಾತ್ರೆಯನ್ನು ವಿವರಿಸುತ್ತದೆ. ರಾಯರ ಬಾಲ್ಯದಿಂದ ಹಿಡಿದು ಅವರ ಆತ್ಮಜಾಗೃತಿ, ಉಪದೇಶಗಳು, ಪವಾಡಗಳು ಮತ್ತು ಪರಂಪರೆ ಈ ಧಾರಾವಾಹಿಯಲ್ಲಿ ಕಾಣಸಿಗಲಿದೆ. ಕಥಾಶೈಲಿ, ಮತ್ತು ಭವ್ಯ ದೃಶ್ಯಾವಳಿಗಳ ಸಮನ್ವಯದೊಂದಿಗೆ ಈ ಧಾರಾವಾಹಿ ರಾಯರ ಆತ್ಮಚರಿತ್ರೆ ಮಾತ್ರವಲ್ಲದೆ ಜೀವನದ ಮೌಲ್ಯಗಳನ್ನು ವೀಕ್ಷಕರಿಗೆ ತಿಳಿಸುವಲ್ಲಿ ಯಶಸ್ವಿಯಾಗಲಿದೆ.ಇದನ್ನೂ ಓದಿ: ಕನ್ನಡದಲ್ಲಿ ಹೊಸ ಮೆಗಾ ಸೀರಿಯಲ್ – ಮಂಗಳವಾರ ʻಮಾಂಗಲ್ಯʼವಾರ 

    ಧಾರಾವಾಹಿಯಲ್ಲಿ ಪ್ರತಿಭಾನ್ವಿತ ತಾರಾ ಬಳಗ ಇದ್ದು, ಇದರ ನಿರ್ಮಾಣ ಮತ್ತು ಕ್ರಿಯೇಟಿವ್ ಹೆಡ್ ಆಗಿ ಮಹೇಶ್ ಸುಖಧರೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಟಾಲೆಂಟೆಡ್ ಆಕ್ಟರ್, ಡೈರೆಕ್ಟರ್ ನವೀನ್ ಕೃಷ್ಣ ಅವರು ಹೊತ್ತಿದ್ದಾರೆ. ಇನ್ನು ಈ ಧಾರಾವಾಹಿಗೆ ಮಣಿಕಾಂತ್ ಕದ್ರಿ ಅವರ ಅಮೋಘ ಸಂಗೀತ ಇರಲಿದ್ದು, ವಿಷ್ಣು ಪಾತ್ರದಲ್ಲಿ ಅಮಿತ್ ಕಶ್ಯಪ್ ಅವರು ನಟಿಸಿದ್ದಾರೆ. ಸಿರಿ ಪ್ರಹ್ಲಾದ್ ಲಕ್ಷ್ಮಿ ಪಾತ್ರದಲ್ಲಿ ನಟಿಸಿದ್ದು, ವ್ಯಾಸರಾಯರ ಪಾತ್ರದಲ್ಲಿ ಪರೀಕ್ಷಿತ್ ಅವರು ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕಾಸ್ ವಸಿಷ್ಠ, ದೀಪಿಕಾ, ಕಾರ್ತಿಕ್ ಸಾಮಗ, ಧನ್ಯಶ್ರೀ ಪ್ರಭು, ವಿಕ್ರಂ ಸೂರಿ, ಡಾ.ಸಂಜಯ್, ಸ್ನೇಹಾ ಹೆಗ್ಡೆ, ಶ್ರೀನಿಧಿ, ಶ್ರೀಲತಾ, ಅನುರಾಗ್ ಸೇರಿ ಅನೇಕ ಪ್ರತಿಭಾನ್ವಿತ ಕಲಾವಿದರ ದಂಡು ಕಾಣಸಿಗಲಿದೆ. ಅಷ್ಟೇ ಅಲ್ಲದೆ, ಹಿರಣ್ಯ ಕಶಿಪುವಾಗಿ ಚೆಲುವರಾಜು, ಕಯಾದು ಆಗಿ ಲೂಸಿಯಾ ಚೆಲುವೆ ಶ್ರುತಿ ಹರಿಹರನ್ ಈ ಧಾರಾವಾಹಿಯಲ್ಲಿ ನಟಿಸಲಿದ್ದಾರೆ. ಇನ್ನು ರಾಯರು ಯಾರು ಎಂಬುದಕ್ಕೆ ಉತ್ತರ ಮುಂದಿನ ದಿನಗಳಲ್ಲಿ ಸಿಗಲಿದೆ. ಒಟ್ಟಿನಲ್ಲಿ ಇದು ಪ್ರೇಕ್ಷಕರಿಗೆ ಮನರಂಜನೆಯ ಹಬ್ಬವನ್ನು ಕೊಡುವುದಂತೂ ಗ್ಯಾರಂಟಿ.

    `ಶ್ರೀ ರಾಘವೇಂದ್ರ ಮಹಾತ್ಮೆ’ ಕೇವಲ ಪೌರಾಣಿಕ ಕಥೆಯಾಗಿರದೆ ಈಗಿನ ಜನಾಂಗಕ್ಕೆ ನಮ್ಮ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವತ್ತ ಪ್ರಯತ್ನ ಮಾಡಲಿದೆ. ಉನ್ನತ ಮಟ್ಟದ ಟೆಕ್ನಾಲಜಿ, ಭವ್ಯ ಸೆಟ್ಗಳು ಮತ್ತು ಗಟ್ಟಿಯಾದ ಕಥಾಹಂದರದೊಂದಿಗೆ ಈ ಧಾರಾವಾಹಿ ಕನ್ನಡ ಪೌರಾಣಿಕ ಕಥನಶೈಲಿಗೆ ಹೊಸ ಅರ್ಥ ನೀಡಲು ಸಜ್ಜಾಗಿದೆ. ಇದೇ ಸೆಪ್ಟೆಂಬರ್ 1, ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ಗಂಟೆಗೆ ಪ್ರಸಾರ ಆಗಲಿರುವ `ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಯನ್ನು ನೋಡಲು ಮರೆಯದಿರಿ.ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ನಟಿ ಸಾಯಿ ಧನ್ಸಿಕಾ ಜೊತೆ ನಟ ವಿಶಾಲ್ ನಿಶ್ಚಿತಾರ್ಥ

  • ಹೊಚ್ಚ ಹೊಸ ಶೋಗೆ ಸಾಕ್ಷಿಯಾಗಲಿದೆ ಜೀ ಕನ್ನಡ : ಕಿರುತೆರೆಗೆ ಶರಣ್, ಅಮೂಲ್ಯ ಎಂಟ್ರಿ

    ಹೊಚ್ಚ ಹೊಸ ಶೋಗೆ ಸಾಕ್ಷಿಯಾಗಲಿದೆ ಜೀ ಕನ್ನಡ : ಕಿರುತೆರೆಗೆ ಶರಣ್, ಅಮೂಲ್ಯ ಎಂಟ್ರಿ

    ಬೆಂಗಳೂರು: ಧಾರಾವಾಹಿಗಳು, ರಿಯಾಲಿಟಿ ಶೋ ಗಳು, ಗೆಮ್ ಶೋ ಗಳಿಂದ ವೀಕ್ಷಕರ ಮನಗೆದ್ದು ನಂಬರ್ 1 ಸ್ಥಾನದಲ್ಲಿ ಇರುವ ಮನರಂಜನೆಯ ಮಹಾತಾಣ ಜೀ ಕನ್ನಡ. ಡ್ರಾಮಾ ಜೂನಿಯರ್ಸ್, ಸರಿಗಮಪ, ವೀಕೆಂಡ್ ವಿತ್ ರಮೇಶ್, ಕಾಮಿಡಿ ಖಿಲಾಡಿಗಳು, ಡಾನ್ಸ್ ಕರ್ನಾಟಕ ಡಾನ್ಸ್, ಜೋಡಿ ನಂಬರ್ 1, ಮತ್ತು ಸೂಪರ್ ಕ್ವೀನ್ ನಂತಹ ಅನೇಕ ಜನಮೆಚ್ಚಿದ ರಿಯಾಲಿಟಿ ಶೋಗಳನ್ನು ಜನರ ಮುಂದಿಟ್ಟು ಅದರಲ್ಲಿ ಯಶಸ್ವೀ ಆಗಿರುವ ಜೀ ಕನ್ನಡ ಈಗ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದೆ.

    ಹೊಚ್ಚ ಹೊಸ ರಿಯಾಲಿಟಿ ಶೋ ಫ್ಯಾಮಿಲಿ ನಂಬರ್ ಇದೇ ಆಗಸ್ಟ್ 2 ರಿಂದ ರಾತ್ರಿ 9 ಗಂಟೆಗೆ ನಿಮ್ಮನ್ನು ಮನರಂಜಿಸಲಿದೆ. ಕನ್ನಡ ಕಿರುತೆರೆ ಇತಿಹಾಸದಲ್ಲಿಯೇ ಇದು ವಿಭಿನ್ನ ಪ್ರಯತ್ನವಾಗಿದ್ದು, ನಿಮ್ಮ ನೆಚ್ಚಿನ ತಾರೆಯರು ಅವರ ಕುಟುಂಬದವರ ಜೊತೆಗೆ ಹೇಗೆ ಇರುತ್ತಾರೆ ಎಂಬುದನ್ನು ನಿಮ್ಮ ತನಕ ತಲುಪಿಸುವುದೇ ಈ ರಿಯಾಲಿಟಿ ಶೋ ದ ಮುಖ್ಯ ಉದ್ದೇಶ. ಈ ರಿಯಾಲಿಟಿ ಶೋನಲ್ಲಿ ಸಕ್ಕತ್ ಟ್ವಿಸ್ಟ್ ಜೊತೆಗೆ ಫನ್ ಇರಲಿದ್ದು ನಿಮಗೆ 100% ಮನರಂಜನೆ ಸಿಗೋದಂತೂ ಗ್ಯಾರಂಟಿ. ಅಷ್ಟೇ ಅಲ್ಲದೇ ಪ್ರತಿ ವಾರ ವಿಭಿನ್ನ ಬಗೆಯ ರೌಂಡ್ಸ್ ಇರಲಿದ್ದು ಯಾರು ಹೇಗೆ ಪರ್ಫಾರ್ಮ್ ಮಾಡ್ತಾರೆ ಎನ್ನುವುದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ.

    ತರ್ಲೆ ಮಾತು, ವಿಭಿನ್ನ ನಿರೂಪಣಾ ಶೈಲಿಯಿಂದ ಕನ್ನಡಿಗರ ಮನಗೆದ್ದ ನಿರಂಜನ್ ದೇಶಪಾಂಡೆ ಅವರು ಫ್ಯಾಮಿಲಿ ನಂ.1 ನ ನಿರೂಪಣಾ ಜವಾಬ್ದಾರಿಯನ್ನು ಹೊತ್ತುಕೊಂಡರೆ ಗೋಲ್ಡನ್ ಕ್ವೀನ್ ಅಮೂಲ್ಯ, ಎವರ್ಗ್ರೀನ್ ಚೆಲುವೆ ಮತ್ತು ಪೊಲಿಟಿಷಿಯನ್ ತಾರಾ ಅನುರಾಧ, ಎಲ್ಲರ ನೆಚ್ಚಿನ ನಟ ಶರಣ್ ಅವರು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇನ್ನು ಕರುನಾಡು ಮೆಚ್ಚಿದ ಸೆಲೆಬ್ರಿಟಿಗಳಾದ ರಜತ್-ಅಕ್ಷತಾ, ಸುಜಯ್-ಸಿಂಚನ, ಪ್ರಿಯ ಕೇಸರಿ-ಶಿವರಾಂ,ಅಲ್ಲು ರಘು-ಸುಶ್ಮಿತಾ, ಮಲ್ಲಯ್ಯ-ನೀಲಮ್ಮ, ಮೋಹನ್ ಕುಮಾರ್-ಪಲ್ಲವಿ, ವಿಶಾಲ್ ಹೆಗ್ಡೆ-ಪ್ರಿಯ, ಶಿಲ್ಪಿ-ಶೈಲೇಶ್, ಸಮೀರ್ ಆಚಾರ್ಯ-ಶ್ರಾವಣಿ ತಮ್ಮ ಕುಟುಂಬದವರೊಡನೆ ಸೇರಿ ಈ ರಿಯಾಲಿಟಿ ಶೋ ನಲ್ಲಿ ಸ್ಪರ್ಧಿಸಲಿದ್ದಾರೆ.

    ಸಂಬಂಧ, ಒಗ್ಗಟ್ಟಿಗೆ ಬೆಲೆಕೊಡುವ ಕೊಡುವ ವಿಭಿನ್ನ ಕಾನ್ಸೆಪ್ಟ್ ಇರುವ ಹೊಚ್ಚಹೊಸ ರಿಯಾಲಿಟಿ ಶೋ ‘ನಾವು ನಮ್ಮವರು’! ಇಲ್ಲಿ ಸ್ಪರ್ಧಿಗಳು ಅನೇಕ ಟ್ವಿಸ್ಟ್ಸ್ ಇರುವ ಬೇರೆ ಬೇರೆ ಟಾಸ್ಕ್‌ಗಳಲ್ಲಿ ತಮ್ಮ ಕುಟುಂಬದವರ ಜೊತೆ ಸೇರಿ ಭಾಗವಹಿಸಲಿದ್ದಾರೆ. ಸಂಬಂಧಗಳನ್ನು ಸಂಭ್ರಮಿಸೋ ‘ನಾವು ನಮ್ಮವರು’ ರಿಯಾಲಿಟಿ ಶೋ ಕುಟುಂಬದ ಹಳೆಯ ನೆನಪುಗಳನ್ನು ಸೆಲೆಬ್ರಿಟಿ ಸ್ಪರ್ಧಿಗಳ ಮೂಲಕ ವೀಕ್ಷಕರ ಮುಂದಿಡುವ ಕನ್ನಡಿ! ಸಂಬಂಧಗಳ ಬೇರನ್ನು ಗಟ್ಟಿ ಮಾಡುವ ಹೊಸ ರಿಯಾಲಿಟಿ ಶೋ ‘ನಾವು ನಮ್ಮವರು’ ಇದೇ ಆಗಸ್ಟ್ 2 ರಿಂದ ರಾತ್ರಿ 9 ಗಂಟೆಗೆ ನಿಮ್ಮ ಜೀ ಕನ್ನಡದಲ್ಲಿ!

  • ಕರ್ಣನಿಗೆ ಗ್ರೀನ್ ಸಿಗ್ನಲ್ – ಭವ್ಯಾ, ನಮ್ರತಾ, ಕಿರಣ್ ರಾಜ್ ತ್ರಿವಳಿ ಆಟ

    ಕರ್ಣನಿಗೆ ಗ್ರೀನ್ ಸಿಗ್ನಲ್ – ಭವ್ಯಾ, ನಮ್ರತಾ, ಕಿರಣ್ ರಾಜ್ ತ್ರಿವಳಿ ಆಟ

    ಜೀ ಕನ್ನಡ ವಾಹಿನಿಯ (Zee Kannada Serial) ಬಹುನಿರೀಕ್ಷಿತ ಮತ್ತು ಬಿಡುಗಡೆಗೆ ಮೊದಲೇ ಅತೀ ಸದ್ದು ಮಾಡಿದ ಧಾರಾವಾಹಿ ಕರ್ಣ. ಆದರೆ ಹುಟ್ಟುವ ಮೊದಲೇ ಶಾಪಗ್ರಸ್ತನಾದ ಈ ‘ಕರ್ಣ’ ಈಗ ಶಾಪಮುಕ್ತನಾಗಿದ್ದಾನೆ. ಎಲ್ಲಾ ಅಡೆತಡೆಗಳನ್ನು ಎದುರಿಸಿ ಕೊಟ್ಟ ಮಾತಿಗೆ ತಪ್ಪದೇ ಮನರಂಜಿಸಲು ʻಕರ್ಣʼ (Karna Serial) ಇದೇ 3 ಜುಲೈರಿಂದ ಬರಲಿದ್ದಾನೆ.

    ʻಕರ್ಣʼ ಧಾರಾವಾಹಿಯ ಮೊದಲ ಪ್ರೊಮೊ ಬಿಡುಗಡೆ ಆದ ಸ್ವಲ್ಪ ಹೊತ್ತಿಗೆ ಸಖತ್‌ ವೈರಲ್ ಆಗಿದ್ದು ಕನ್ನಡಿಗರ ಮನಗೆದ್ದಿದೆ. ಸಿನೆಮಾಟೋಗ್ರಫಿ, ನಿರ್ದೇಶನ, ಕಿರಣ್ ರಾಜ್ ನಟನೆ ಬಗ್ಗೆ ಪ್ರೇಕ್ಷಕರು ಅತಿಯಾದ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದು ಸರ್ಪ್ರೈಸ್ ಎಂಬಂತೆ ವಾಹಿನಿ ಭವ್ಯ ಗೌಡ (Bhavya Gowda) -ಕಿರಣ್ ರಾಜ್ ಹಾಡನ್ನು ಬಿಟ್ಟಿದ್ದು ಇವರಿಬ್ಬರ ಕೆಮಿಸ್ಟ್ರಿ ಪ್ರೇಕ್ಷಕರ ಮನದಲ್ಲಿ ಕಚಗುಳಿ ಎಬ್ಬಿಸಿದೆ. ಅಷ್ಟೇ ಅಲ್ಲದೇ ಪ್ರೊಮೊ ಮತ್ತು ಹಾಡು ಎರಡೂ ಸಖತ್ ಆಗಿ ಮೂಡಿ ಬಂದಿದ್ದು ಧಾರಾವಾಹಿಯನ್ನು ನೋಡಲು ಜನರು ಹಾತೊರೆಯುತ್ತಿದ್ದಾರೆ.

    ಇನ್ನೂ ವರುಷಗಳ ನಟ ಕಿರಣ್ ರಾಜ್ ಮರಳಿ ಕಿರುತೆರೆಗೆ ಬರುತ್ತಿರುವುದು ಅವರ ಅಭಿಮಾನಿಗಳಲ್ಲಿ ಉತ್ಸುಕತೆ ಹೆಚ್ಚಿಸಿದೆ. ಅಷ್ಟೇ ಅಲ್ಲದೇ ಕಿರುತೆರೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ ಭವ್ಯ ಗೌಡ ಮತ್ತು ನಮ್ರತಾ ಗೌಡ (Namratha Gowda) ಅವರು ಕಿರಣ್ ರಾಜ್ ಅವರಿಗೆ ಜೋಡಿಯಾಗಿ ನಟಿಸಲಿದ್ದಾರೆ. ಈ ಫ್ರೆಶ್ ಜೋಡಿಯ ಮೋಡಿ ಹೇಗಿರಲಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಕರ್ಣ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದ್ದು ಅಲ್ಲದೇ ಕಾಮೆಂಟ್ ಸೆಕ್ಷನ್‌ಗಳು ಪಾಸಿಟಿವ್ ಕಾಮೆಂಟ್‌ಗಳಿಂದ ತುಂಬಿವೆ. ಶ್ರುತಿ ನಾಯ್ಡು ಪ್ರೊಡ್ಯೂಸ್ ಮಾಡುತ್ತಿರುವ ಈ ಧಾರಾವಾಹಿಯಲ್ಲಿ ಹಿರಿಯ ನಟರಾದ ಅಶೋಕ್, ನಾಗಾಭರಣ ಸೇರಿ ಹಲವಾರು ದಿಗ್ಗಜರು ಅಭಿನಯಿಸಿದ್ದಾರೆ.

    ಅನಾಥವಾಗಿ ಬಿದ್ದಿದ್ದ ತಾತನಿಗೆ ಕೊಟ್ಟ ಮಾತಿನಂತೆ ದೊಡ್ಡವನಾದ ಮೇಲೆ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞನಾಗಿ ತಾತ ಕಟ್ಟಿಸಿದ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಾನೆ. ಅಷ್ಟೇ ಅಲ್ಲದೇ ಯಾವ ತಾಯಿಯು ಮಗುವನ್ನು ಕಳೆದುಕೊಳ್ಳಬಾರದು ಮತ್ತು ಯಾವ ಮಗುವು ಅಮ್ಮನಿಲ್ಲದ ತಬ್ಬಲಿಯಾಗಬಾರದು ಎಂಬುದು ಇವನ ಸಿದ್ದಾಂತ. ಸದಾ ಬಡವರ ಸೇವೆಗೆ ತುಡಿಯುವ ಈ ನಿಷ್ಕಲ್ಮಶ ಮನಸ್ಸಿನ ಕರ್ಣನಿಗೆ ಮನೆಯಲ್ಲಿ ಸಿಕ್ಕಿದ್ದು ಮಾತ್ರ ತಿರಸ್ಕಾರ. ಎಲ್ಲಾ ಆಸ್ತಿಯೂ ತನ್ನ ಹೆಸರಿನಲ್ಲೇ ಇದ್ದರೂ ಕರ್ಣ ಬಯಸುತ್ತಿರುವುದು ಮಾತ್ರ ಅಪ್ಪನ ಪ್ರೀತಿ, ಮಾಯೆಯವರ ವಾತ್ಸಲ್ಯದ ಅಪ್ಪುಗೆ. ಅಜ್ಜಿ ಬಿಟ್ಟು ಮನೆಯಲ್ಲಿರೋ ಎಲ್ಲರಿಗೂ ಕರ್ನನ್ನು ಕಂಡ್ರೆ ಅಷ್ಟಕಷ್ಟೇ. ಕರ್ಣನಿಗೆ ಮನೆಯವರ ಪ್ರೀತಿ ಸಿಗೋದು ಯಾವಾಗ? ಇನ್ನೇನು ಸದ್ಯದಲ್ಲೇ ನಿಮಗೆ ಸಿಗತ್ತೆ!

    ನಿಷ್ಕಲ್ಮಶ ಮನಸ್ಸಿನ ಕರ್ಣನಿಗೆ ನಿಷ್ಕಲ್ಮಶ ಪ್ರೀತಿ, ಅಪ್ಪನ ಪ್ರೀತಿ, ಮನೆಯವರ ಒಪ್ಪಿಗೆಯ ಅಪ್ಪುಗೆ ಸಿಗುತ್ತಾ? ತಿಳ್ಕೊಳೋಕೆ ವೀಕ್ಷಿಸಿ ಕರ್ಣ ಇದೇ ಜುಲೈ 03 ರಿಂದ ರಾತ್ರಿ 8 ಗಂಟೆಗೆ.

  • Saregamapa 19 Grand Finale: ಯಾರ ಪಾಲಾಗಲಿದ್ದಾಳೆ ವಿಜಯಲಕ್ಷ್ಮಿ

    Saregamapa 19 Grand Finale: ಯಾರ ಪಾಲಾಗಲಿದ್ದಾಳೆ ವಿಜಯಲಕ್ಷ್ಮಿ

    ಕಿರುತೆರೆ ಜನಪ್ರಿಯ ಸಿಂಗಿಂಗ್ ರಿಯಾಲಿಟಿ ಶೋ ‘ಸರಿಗಮಪ’ (Saregamapa 19) ಈಗಾಗಲೇ 18 ಸೀಸನ್‌ಗಳ ಜೊತೆಗೆ ಚಾಂಪಿಯನ್‌ಶಿಪ್ ಸೀಸನ್ ಕೂಡ ಮಾಡಿದೆ. ಇದೀಗ 19ನೇ ಸೀಸನ್‌ನ ಅಂತಿಮ ಘಟ್ಟ ತಲುಪಿದೆ. ಕಾರ್ಯಕ್ರಮ ತೆರೆ ಬೀಳಲು ಈಗಾಗಲೇ ಕೌಂಡ್‌ಡೌನ್ ಶುರುವಾಗಿದೆ.

    ಯಶಸ್ವಿ 47 ಸಂಚಿಕೆಗಳನ್ನ ಪೂರೈಸಿರುವ ‘ಸರಿಗಮಪ’ ಸೀಸನ್ 19ರ ಗ್ರಾಂಡ್ ಫಿನಾಲೆ ಸಂಚಿಕೆಗಳು ಇದೇ ಶನಿವಾರ ಮತ್ತು ಭಾನುವಾರ ಸಂಜೆ 6.30ರಿಂದ ಪ್ರಸಾರವಾಗಲಿದೆ. ಸಾವಿರಾರು ಜನರ ಮಧ್ಯೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಗ್ರ‍್ಯಾಂಡ್ ಫಿನಾಲೆ ಚಿತ್ರೀಕರಣ ಯಶಸ್ವಿಯಾಗಿ ಜರುಗಿದೆ. ಅಷ್ಟೇ ಅಲ್ಲದೆ, ಈ ಅದ್ಧೂರಿ ಸ್ವರ ಸಮರದಲ್ಲಿ ಗೆಲುವಿನ ಕಿರೀಟ ಯಾರ ಮುಡಿಗೇರಲಿದೆ ಎಂಬ ಕೂತೂಹಲದಿಂದ ವೀಕ್ಷಕರು ಕಾರ್ಯಕ್ರಮವನ್ನು ಎದುರು ನೋಡುವಂತಾಗಿದೆ. ಇದನ್ನೂ ಓದಿ:Weekend With Ramesh 5: ಮದುವೆ ಬಗ್ಗೆ ಗುಟ್ಟು ರಟ್ಟು ಮಾಡಿದ ಡಾಲಿ ಧನಂಜಯ್‌

    ಹತ್ತು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿರುವ ಸರಿಗಮಪ ಎಂದಿನಂತೆ ಈ ಬಾರಿಯೂ ಕರ್ನಾಟಕದ ಮೂಲೆ ಮೂಲೆಯಿಂದ ವಿವಿಧ ಪ್ರತಿಭೆಗಳನ್ನು ಹೆಕ್ಕಿ ತಂದು ಕನ್ನಡಿಗರಿಗೆ ಪರಿಚಯಿಸಿ ಸಾರ್ಥಕತೆ ಗಳಿಸಿದೆ. ಅರ್ಜುನ್ ಜನ್ಯ, ವಿಜಯ್ ಪ್ರಕಾಶ್ ಮತ್ತು ಮಹಾಗುರುಗಳಾದ ಹಂಸಲೇಖ ಅವರು ಈ ಕಾರ್ಯಕ್ರಮದ ಯಶಸ್ಸಿನ ರೂವಾರಿ ಎಂದು ಹೇಳಿದರೂ ತಪ್ಪಾಗಲಾರದು. ನಾಡಿನ ಹೆಸರಾಂತ ಗಾಯಕ, ಗಾಯಕಿಯರು ತೀರ್ಪುಗಾರರ ಜೊತೆ ಮೆಂಟರ್‌ಗಳಾಗಿ ತಮ್ಮ ತಂಡದ ಪ್ರತಿಯೊಬ್ಬ ಸ್ಪರ್ಧಿಯನ್ನೂ ತಿದ್ದಿ ತೀಡಿ, ಅವರಲ್ಲಿರುವ ವಿಶೇಷ ಪ್ರತಿಭೆಯನ್ನು ವೇದಿಕೆಯ ಮೇಲೆ ಪ್ರಸ್ತುತಪಡಿಸುವಲ್ಲಿ ಶ್ರಮವಹಿಸಿದ್ದಾರೆ. ನಿರೂಪಕಿ ಅನುಶ್ರೀ ಅವರು ಸರಿಗಮಪ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದಾರೆ.

    ‘ಸರಿಗಮಪ’ ಕಾರ್ಯಕ್ರಮದ ಫಿನಾಲೆಯಲ್ಲಿ ರಮೇಶ್ ಅರವಿಂದ್ (Ramesh Aravind) ಅವರು ‘ಶಿವಾಜಿ ಸುರತ್ಕಲ್’ ಸಿನಿಮಾ ತಂಡದ ಜೊತೆ ಈ ಕಾರ್ಯಕ್ರಮದ ವಿಶೇಷ ಅತಿಥಿಯಾಗಿ ಆಗಮಿಸಿ ವೇದಿಕೆಯ ಮೆರಗನ್ನು ಹೆಚ್ಚಿಸಿದ್ದಾರೆ. ಅಂತಿಮ ಟಾಪ್ 6 ಸ್ಪರ್ಧಿಗಳಾಗಿ ಮಂಗಳೂರಿನ ತನುಶ್ರೀ, ಬೆಂಗಳೂರಿನ ಕುಷಿಕ್, ಮೈಸೂರಿನ ಗುರುಪ್ರಸಾದ್, ಉಡುಪಿಯ ಶಿವಾನಿ ನವೀನ್ ಕೊಪ್ಪ, ಸೊಲ್ಲಾಪುರದ ರೇವಣಸಿದ್ಧ ಮತ್ತು ಕುಶಾಲನಗರದ ಪ್ರಗತಿ ಬಡಿಗೇರ್ ಸಂಗೀತ ಹಣಾಹಣಿಯಲ್ಲಿದ್ದಾರೆ. ಗೆಲುವಿನ ವಿಜಯಲಕ್ಷ್ಮೀ ಯಾರ ಪಾಲಾಗಲಿದ್ದಾಳೆ ಎಂಬುದನ್ನ ಕಾದುನೋಡಬೇಕಿದೆ.

  • `ಕಮಲಿ’ ಖ್ಯಾತಿಯ ಅಮೂಲ್ಯಗೌಡರ ಹಾಟ್ ಫೋಟೋ ವೈರಲ್

    `ಕಮಲಿ’ ಖ್ಯಾತಿಯ ಅಮೂಲ್ಯಗೌಡರ ಹಾಟ್ ಫೋಟೋ ವೈರಲ್

    ಜೀ ಕನ್ನಡ (Zee Kannada) ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರಾವಾಹಿ `ಕಮಲಿ'(Kamali) ಈ ಸೀರಿಯಲ್‌ನಲ್ಲಿ ಕಮಲಿಯಾಗಿ ಅಭಿನಯಿಸಿರೋ ಅಮೂಲ್ಯ ಗೌಡ (Amulya Gowda) ಹೆಸರು ಚಿರಪರಿಚಿತ.

    ಕಿರುತೆರೆಯಲ್ಲಿ ಪಕ್ಕಾ ಹಳ್ಳಿ ಹುಡ್ಗಿಯಾಗಿ (Village Girl) ಕಾಣಿಸಿಕೊಂಡಿರುವ ಅಮೂಲ್ಯ ಗೌಡರ ಹಾಟ್‌ಫೋಟೋಗಳು (Hot Photos) ಇದೀಗ ಸೋಶಿಯಲ್ ಮೀಡಿಯಾದಲ್ಲಿ (Social Media) ಭಾರೀ ಸದ್ದು ಮಾಡ್ತಿವೆ. ಇದನ್ನೂ ಓದಿ: ಬೆಳಗ್ಗೆ ಎದ್ದಾಗ್ಲೇ ಬಿಕ್ಕಳಿಕೆ- ಯಾರೋ ಮಿಸ್ ಮಾಡಿಕೊಳ್ತಿದ್ದಾರೆ ಅಂದ್ರು ರಶ್ಮಿಕಾ

    `ಕಮಲಿ’ ಸೀರಿಯಲ್ ನಲ್ಲಿ ಲಂಗ ದಾವಣಿ, ಎರಡು ಜಡೆ ಹಾಕಿಕೊಳ್ಳೊ ಅಮೂಲ್ಯ ಗೌಡ ನಿಜ ಜೀವನದಲ್ಲಂತೂ ಅದಕ್ಕೆ ಪಕ್ಕಾ ಆಪೊಸಿಟ್ ಆಗಿದ್ದಾರೆ. ರಿಯಲ್ ಲೈಫ್‌ನಲ್ಲಿ ಅಮೂಲ್ಯ ಗೌಡ ಪಕ್ಕಾ ಮಾಡರ್ನ್ ಹುಡುಗಿ ಎಂಬುದಕ್ಕೆ ಈ ಫೋಟೋಗಳಿಗಿಂತ ಬೇರೆ ಸಾಕ್ಷಿ ಬೇಕಿಲ್ಲ. ಇದನ್ನೂ ಓದಿ: Bigg Boss Special- ಈ ಬಾರಿ ಬಿಗ್ ಬಾಸ್ 9 ಮನೆ ಪ್ರವೇಶ ಮಾಡಿರುವ ಖ್ಯಾತ ಕಿರುತೆರೆ ನಟಿಯರಿವರು

    ಮೂಲತಃ ಮೈಸೂರಿನವರೇ ಆದ ಅಮೂಲ್ಯ ಸ್ವಾತಿ ಮುತ್ತು ಧಾರಾವಾಹಿಯಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಜೀ ವಾಹಿನಿಯ ಕಮಲಿ ಧಾರವಾಹಿ ಇವರಿಗೆ ಮತ್ತಷ್ಟು ಜನಪ್ರಿಯತೆ ತಂದುಕೊಟ್ಟಿತು. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಮತ್ತೆ ಮೂರು ಅಚ್ಚರಿಯ ಹೆಸರುಗಳು

    ಅಷ್ಟೇ ಅಲ್ಲ ಪುನರ್ ವಿವಾಹ, ಅರಮನೆ ಸೇರಿದಂತೆ ಹಲವು ಕನ್ನಡ ಧಾರಾವಾಹಿಗಳಲ್ಲಿ ಇವರು ನಟಿಸಿದ್ದಾರೆ. ತೆಲುಗಿನ ಕಾರ್ತಿಕ ದೀಪಂ ಧಾರಾವಾಹಿಯಲ್ಲೂ ನಟಿಸಿದ್ದಾರೆ. ಇವರ ಪೂರ್ತಿ ಹೆಸರು ಅಮೂಲ್ಯ ಓಂಕಾರ ಗೌಡ. ಇದೀಗ ಅಮೂಲ್ಯ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದು, ಈ ಬೆನ್ನಲ್ಲೇ ಅಮೂಲ್ಯಗೌರಡ ಹಾಟ್‌ ಫೋಟೋಗಳು ವೈರಲ್ ಆಗಿವೆ.

    Live Tv
    [brid partner=56869869 player=32851 video=960834 autoplay=true]

  • ಸಾವಿರಾರು ಕೋಟಿ ಬಾಚಿದ ‘ಕೆಜಿಎಫ್ 2’ ಸಿನಿಮಾ ಆಗಸ್ಟ್ 20ರಂದು ಜೀ  ಕನ್ನಡದಲ್ಲಿ ಪ್ರಸಾರ

    ಸಾವಿರಾರು ಕೋಟಿ ಬಾಚಿದ ‘ಕೆಜಿಎಫ್ 2’ ಸಿನಿಮಾ ಆಗಸ್ಟ್ 20ರಂದು ಜೀ ಕನ್ನಡದಲ್ಲಿ ಪ್ರಸಾರ

    ಕೆಜಿಎಫ್ ಚಾಪ್ಟರ್ 2, ಇಡೀ ಜಗತ್ತು ಒಮ್ಮೆಲೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಹೆಮ್ಮೆಯ ಇಂಡಿಯಾದ ಬ್ಲಾಕ್ ಬಸ್ಟರ್  ಸಿನಿಮಾ. ಕಥೆ, ತಾಂತ್ರಿಕತೆ ,ಶ್ರೀಮಂತಿಕೆ ಮತ್ತು ಕಲಾವಿದರ ಆಯ್ಕೆಯಲ್ಲಿ ಚಾಪ್ಟರ್ 1ನ್ನೇ ಮೀರಿಸುವಂತೆ ತೆರೆಗೆ ಅಪ್ಪಳಿಸಿದ ಈ ಚಿತ್ರ ಬಿಡುಗಡೆಗೊಂಡ ಎಲ್ಲಾ ಭಾಷೆಗಳಲ್ಲೂ ಯಶಸ್ವಿಯಾಗಿದ್ದು ಈಗ ಇತಿಹಾಸ . ಇದೀಗ ಈ ಸಿನಿಮಾ ಕನ್ನಡ ಕಿರುತೆರೆಗೆ ಸಿರಿತನವನ್ನು ಪರಿಚಯಿಸಿದ ಕನ್ನಡಿಗರ ನೆಚ್ಚಿನ ನಂಬರ್ 1 ಮನರಂಜನಾ ವಾಹಿನಿ  ಜೀ ಕನ್ನಡದಲ್ಲಿ ಇದೇ ಆಗಸ್ಟ್ 20 ರಂದು ಶನಿವಾರ ಸಂಜೆ 7 ಗಂಟೆಗೆ ಪ್ರಸಾರವಾಗುತ್ತಿದೆ .

    ಸ್ಯಾಂಡಲ್ ವುಡ್ ಜೊತೆಗೆ ಅತ್ಯುತ್ತಮ ನಂಟು ಹೊಂದಿರುವ ಜೀ ಕನ್ನಡ ವಾಹಿನಿ ತಮ್ಮ ವಿವಿಧ ಕಾರ್ಯಕ್ರಮಗಳ ಮೂಲಕ ಉದ್ಯಮಕ್ಕೆ ಶ್ರೇಷ್ಟ ಕಲಾವಿದರನ್ನು ಕೊಡುಗೆಯಾಗಿ ನೀಡಿರುವ ಹೆಗ್ಗಳಿಕೆ ಹೊಂದಿದೆ. ಕೆಜಿಎಫ್ 2 ಚಿತ್ರದಲ್ಲೂ ಹಲವಾರು ಜೀ ಕುಟುಂಬದ ಕಲಾವಿದರು ನಟಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಗೆಲುವಿನ ಸರದಾರ ರಾಕಿಂಗ್ ಸ್ಟಾರ್ ಯಶ್ , ಶ್ರೀನಿಧಿ ಶೆಟ್ಟಿ , ಸಂಜಯ್ ದತ್ ,ರವೀನಾ ಟಂಡನ್ , ಮಾಳವಿಕಾ ,ವಸಿಷ್ಠ ಸಿಂಹ ,ಪ್ರಕಾಶ್ ರಾಜ್  ಹೀಗೆ ದೇಶ ಕಂಡ ಅದ್ಭುತ ಕಲಾವಿದರ ದಂಡೇ ಈ ಚಿತ್ರದಲ್ಲಿದ್ದು ಪ್ರಶಾಂತ್ ನೀಲ್ ಅವರ ಅತ್ಯದ್ಭುತ ನಿರ್ದೇಶನವಿದೆ. ಚಂದನವನದ ಹೆಮ್ಮೆಯ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್  ಇದಕ್ಕೆ ಹಣ ಹೂಡಿಕೆ ಮಾಡಿದ್ದಾರೆ. ಭುವನ್ ಗೌಡ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದರೇ  ರವಿ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ . ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಆರ್ಯವರ್ಧನ್ ಗುರೂಜಿ

    ಚಾಪ್ಟರ್ 1 ನಿಂದಲೇ ಕನ್ನಡ ಚಿತ್ರರಂಗದ ದಿಕ್ಕು ಬದಲಿಸುವ ಸೂಚನೆ ನೀಡಿದ್ದ ಕೆಜಿಎಫ್ ಇದೀಗ ಚಾಪ್ಟರ್ 2 ನಿಂದ ಅದನ್ನು ನಿಜವಾಗಿಸಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಯಶಸ್ಸಿನ ಸವಾರಿ ಮಾಡಲು ಶುರುಮಾಡಿ 1000 ಕೋಟಿಗೂ ಹೆಚ್ಚು ಆದಾಯ ಗಳಿಸಿ ದಾಖಲೆ ಸೃಷ್ಟಿಸಿದ್ದಷ್ಟೇ  ಅಲ್ಲದೇ ಶತದಿನೋತ್ಸವವನ್ನು ಆಚರಿಸಿ ಬಾಕ್ಸ್ ಆಫೀಸ್ ಧೂಳಿಪಟ ಮಾಡಿದೆ.

    ಹಬ್ಬಗಳ ಮಾಸ ಶ್ರಾವಣದಲ್ಲಿ ಕಿರು ಪರದೆಯ ಮೇಲೆ ಕೆಜಿಎಫ್ 2 ಅಬ್ಬರ ಆರಂಭವಾಗುತ್ತಿದ್ದು ಈಗಾಗಲೇ ಬಿಡುಗಡೆಯಾಗಿರುವ ವಿಶಿಷ್ಟ ಶೈಲಿಯ ಪ್ರೋಮೋಗಳು ವೀಕ್ಷಕರು ಈ ಸಿನಿಮಾ ಹಬ್ಬವನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ಕಾಯುವಂತೆ ಮಾಡಿದೆ.  ಇದೇ ಆಗಸ್ಟ್ 20 ರಂದು ಶನಿವಾರ ಸಂಜೆ 7 ಗಂಟೆಗೆ ಪ್ರಸಾರವಾಗುತ್ತಿರುವ ಕೆಜಿಎಫ್ ಚಾಪ್ಟರ್ 2 ಅನ್ನು ಮನೆಮಂದಿಯೆಲ್ಲಾ ಕೂತು ನೋಡಿ ಈ ಸಿನಿಮೋತ್ಸವವನ್ನು ಆಚರಿಸಿ , ಆನಂದಿಸಿ. ಜೀ ಕನ್ನಡದ ಇತರೆ ಕಾರ್ಯಕ್ರಮಗಳಿಗೆ ನೀಡುವ ಪ್ರೋತ್ಸಾಹವನ್ನು ಮುಂದುವರೆಸಿ.

     

    Live Tv
    [brid partner=56869869 player=32851 video=960834 autoplay=true]

  • ಜೊತೆ ಜೊತೆಯಲಿ ಅನಿರುದ್ಧಅವರ ಮೊದಲ ಪತ್ನಿ ನಟಿ ಸೋನು ಗೌಡ

    ಜೊತೆ ಜೊತೆಯಲಿ ಅನಿರುದ್ಧಅವರ ಮೊದಲ ಪತ್ನಿ ನಟಿ ಸೋನು ಗೌಡ

    ಇಂತಿ ನಿನ್ನ ಪ್ರೀತಿಯ ಹುಡುಗಿ ಸೋನು ಗೌಡ ಅವರು ವಿಷ್ಣುವರ್ಧನ್ ಅವರ ಅಳಿಯ, ನಟ ಅನಿರುದ್ಧ ಅವರ ಮೊದಲ ಪತ್ನಿ ಎಂದು ಹೇಳುವ ಮೂಲಕ ‘ಜೊತೆ ಜೊತೆಯಲಿ’ ಧಾರಾವಾಹಿ ಹೊಸ ಟ್ವಿಸ್ಟ್ ಕೊಟ್ಟಿದೆ. ಹೀಗಾಗಿ ಕಿರುತೆರೆಯ ಪ್ರೇಕ್ಷಕರಿಗೆ ಕುತೂಹಲ ಹೆಚ್ಚಿದೆ. ಇದನ್ನೂ ಓದಿ : ದೂರದರ್ಶನದಲ್ಲಿ ಸಿಗ್ತಾರೆ ದಿಯಾ ಹೀರೋ

    ನೀವು ಜೊತೆ ಜೊತೆಯಲಿ ಧಾರಾವಾಹಿಗಳ ವೀಕ್ಷಕರಾಗಿದ್ದಾರೆ. ಆ ಧಾರಾವಾಹಿಯಲ್ಲಿ ಪದೇ ಪದೇ ಪ್ರಸ್ತಾಪ ಆಗುತ್ತಿದ್ದ ಹೆಸರು ರಾಜನಂದಿನಿ ಅವರದ್ದು. ಈ ರಾಜನಂದಿನಿ ಯಾರು ಎಂದು ಹಲವು ತಿಂಗಳುಗಳಿಂದ ಪ್ರೇಕ್ಷಕರು ಎದುರು ನೋಡುತ್ತಿದ್ದಾರೆ. ಈಗ ಆ ರಾಜನಂದಿನಿಯ ಪಾತ್ರ ಎಂಟ್ರಿ ಆಗಿದೆ. ಆ ಪಾತ್ರವನ್ನೇ ನಟಿ ಸೋನು ಗೌಡ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ : ಸ್ಟಾರ್ ನಟನ ಮಗಳನ್ನೂ ಬಿಡಲಿಲ್ಲ ಕಾಸ್ಟಿಂಗ್ ಕೌಚ್ : ನೋವು ಹಂಚಿಕೊಂಡ ಮೋಹನ್ ಬಾಬು ಪುತ್ರಿ

    ಈ ರಾಜನಂದಿನಿ ಬೇರೆ ಯಾರೂ ಅಲ್ಲ, ಆರ್ಯವರ್ಧನ್ (ಅನಿರುದ್ಧ) ಅವರ ಮೊದಲ ಪತ್ನಿಯಂತೆ. ಈ ದಾಂಪತ್ಯಗೀತೆ ಹೇಗೆ ಅಂತ್ಯ ಆಯಿತು ಎನ್ನುವ ಕುರಿತು ಇನ್ಮುಂದೆ ಕಥೆ ಸಾಗಬಹುದು. ಇದನ್ನೂ ಓದಿ : ಮದ್ವೆ ಸೀರೆ ವಾಪಸ್ಸು ಕೊಟ್ರಂತೆ ಸಮಂತಾ: ಮಳೆ ನಿಂತರು ಮಳೆ ಹನಿ ನಿಲ್ಲದು

    ರಂಗಭೂಮಿ ಹಿನ್ನೆಲೆಯ ಸೋನು ಗೌಡ ಅವರಿಗೆ ಕಿರುತೆರೆಯಲ್ಲಿ ಸಾಕಷ್ಟು ಅವಕಾಶಗಳು ಇದ್ದರೂ, ಅವರು ಆಯ್ಕೆ ಮಾಡಿಕೊಂಡಿದ್ದು ಹಿರಿತೆರೆಯನ್ನು. ಸಹೋದರಿ ಕೂಡ ಕಿರುತೆರೆಯ ಫೇಮಸ್ ನಟಿ. ಆದರೂ, ಸೋನು ಸಿನಿಮಾ ರಂಗ ಬಿಡಲಿಲ್ಲ. ಈಗ ಡಿಢೀರ್ ಅಂತ ಕಿರುತೆರೆಗೆ ಎಂಟ್ರಿ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.  ಇದನ್ನೂ ಓದಿ : ಡಾ.ರಾಜ್ ಹುಟ್ಟಿದ ಊರಲ್ಲಿ ಫಸ್ಟ್ ಟೈಮ್ ಸಿನಿಮಾ ಮುಹೂರ್ತ

    ಕನ್ನಡದಲ್ಲಿ ಮಾತ್ರವಲ್ಲ, ಮಲಯಾಳಂನಲ್ಲೂ ಸೋನು ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಏಳು ವರ್ಷಗಳ ಹಿಂದೆಯೇ ಮುಮ್ಮುಟಿ ಜತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಮೊದಲ ಸಿನಿಮಾದಲ್ಲೇ ಅತ್ಯುತ್ತಮ ನಟಿ ಪ್ರಶಸ್ತಿಗೂ ಕೂಡ ಕಾರಣರಾಗಿದ್ದರು. ಈಗ ಕಿರುತೆರೆಗೆ ಪ್ರವೇಶ ಮಾಡಿದ್ದಾರೆ. ಇಲ್ಲಿನ ಪ್ರೇಕ್ಷಕರು ಸೋನು ಅವರನ್ನು ಹೇಗೆ ಸ್ವೀಕರಿಸುತ್ತಾರೋ ಕಾದು ನೋಡಬೇಕು.

  • ಎಪ್ರಿಲ್ 2ನೇ ವಾರದಲ್ಲಿ ನಟಿ ಕಾವ್ಯ ಶಾ ಮದ್ವೆ : ಮಾಧ್ಯಮ ಲೋಕದ ಹುಡುಗನ ಜತೆ ಸಪ್ತಪದಿ

    ಎಪ್ರಿಲ್ 2ನೇ ವಾರದಲ್ಲಿ ನಟಿ ಕಾವ್ಯ ಶಾ ಮದ್ವೆ : ಮಾಧ್ಯಮ ಲೋಕದ ಹುಡುಗನ ಜತೆ ಸಪ್ತಪದಿ

    ನ್ನಡ, ತಮಿಳು ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಕಾವ್ಯ ಶಾ ಸದ್ಯದಲ್ಲೇ ಸಪ್ತಪದಿ ತುಳಿಯಲಿದ್ದಾರೆ. ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಗೆಳೆಯನನ್ನೇ ಅವರು ಬಾಳ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಏಪ್ರಿಲ್ ಎರಡನೇ ವಾರದಲ್ಲಿ ಬೆಂಗಳೂರಿನಲ್ಲಿ ವಿವಾಹ ಮಹೋತ್ಸವ ನಡೆಯಲಿದೆ. ಇದನ್ನೂ ಓದಿ : ಬೆಳಗಾವಿ ಭಾಗದ ದಿಟ್ಟ ಅಧಿಕಾರಿಯ ಪಾತ್ರದಲ್ಲಿ ಧನಂಜಯ್

    ಕಾವ್ಯ ಶಾ ಮದುವೆ ಆಗುತ್ತಿರುವ ಹುಡುಗ ವರುಣ್. ಮಾಧ್ಯಮ ಕ್ಷೇತ್ರದಲ್ಲೇ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಜತೆಗೆ ಕನ್ನಡದ ಬಹುತೇಕ ಸ್ಟಾರ್ ನಟರ ಜತೆ ಇವರಿಗೆ ಒಡನಾಟವಿದೆ. ಜೀ ಕನ್ನಡ ವಾಹಿನಿ ಸೇರಿದಂತೆ ಕನ್ನಡದ ನಾನಾ ವಾಹಿನಿಗಳ ರಿಯಾಲಿಟಿ ಶೋಗಳಲ್ಲಿ ಕೆಲಸ ಮಾಡಿದ್ದಾರೆ ವರುಣ್. ಇದನ್ನೂ ಓದಿ : Exclusive – ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ

    ಕಾವ್ಯ ಶಾ ಮತ್ತು ವರುಣ್ ಭೇಟಿಯಾಗಿದ್ದು ಹತ್ತು ವರ್ಷಗಳ ಹಿಂದೆ ನಡೆದ ಫ್ಯಾಶನ್ ಶೋನಲ್ಲಿ. ಆಗ ಕಾವ್ಯ ಆ ಶೋ ಸ್ಪರ್ಧಿ. ಅಲ್ಲಿಂದ ಶುರುವಾದ ಇಬ್ಬರ ಸ್ನೇಹ, ಆನಂತರ ಪ್ರೇಮಕ್ಕೆ ತಿರುಗಿದೆ. ಈಗ ಜತೆಯಾಗಿ ಬದುಕು ನಡೆಸಲು ಹೊರಟಿದೆ ಜೋಡಿ. ಇದನ್ನೂ ಓದಿ : ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕಾವ್ಯ ಶಾ, “ಹಲವು ವರ್ಷಗಳಿಂದ ನಾವಿಬ್ಬರೂ ಗೆಳೆಯರು. ಒಬ್ಬರಿಗೊಬ್ಬರನ್ನು ಅರ್ಥ ಮಾಡಿಕೊಂಡಿದ್ದೇವೆ. ಕುಟುಂಬದ ಒಪ್ಪಿಗೆ ಪಡೆದುಕೊಂಡು ಮದುವೆ ಆಗುತ್ತಿದ್ದೇವೆ. ಇದೊಂದು ರೀತಿಯಲ್ಲಿ ಲವ್ ಕಂ ಅರೇಂಜ್ಡ್ ಮದುವೆ’ ಎಂದರು. ಇದನ್ನೂ ನೋಡಿ : ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ಈಗಾಗಲೇ ಮದುವೆಗೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದ್ದಾರಂತೆ ಕಾವ್ಯ. ಸದ್ಯದಲ್ಲಿಯೇ ಸ್ಯಾಂಡಲ್ ವುಡ್ ಮತ್ತು ಟಾಲಿವುಡ್  ಸಿಲಿಬ್ರಿಟಿಗಳ ಕೈಗೆ ಇವರ ಮದುವೆ ಆಹ್ವಾನ ಪತ್ರಿಕೆ ಕೈ ಸೇರಲಿದೆ. ಇದನ್ನೂ ಓದಿ : ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!

    ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ, ಮೂಕಜ್ಜಿಯ ಕನಸು, ತಮಿಳಿನ ತಾರೈ ತಪ್ಪಟ್ಟೈ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಕಾವ್ಯ, ಫಿಟ್ ನೆಸ್ ಬಗ್ಗೆ ತಮ್ಮದೇ ಆದ ಸ್ಟುಡಿಯೋ ಹೊಂದಿದ್ದಾರೆ. ಈ ಮೂಲಕ ಫಿಟ್ನೆಸ್ ಮಂತ್ರವನ್ನೂ ಅವರು ಅಭಿಮಾನಿಗಳ ಜತೆ ಸದಾ ಹಂಚಿಕೊಳ್ಳುತ್ತಲೇ ಇರುತ್ತಾರೆ.