Tag: Zilla panchyat CEO

  • SSLCಯಲ್ಲಿ ರಾಜ್ಯಕ್ಕೆ ಪ್ರಥಮ ಬಂದ ಅಂಕಿತಾಗೆ ಜಿ.ಪಂ ಸಿಇಓ ಅಭಿನಂದನೆ

    SSLCಯಲ್ಲಿ ರಾಜ್ಯಕ್ಕೆ ಪ್ರಥಮ ಬಂದ ಅಂಕಿತಾಗೆ ಜಿ.ಪಂ ಸಿಇಓ ಅಭಿನಂದನೆ

    ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ಆಗಿರುವ ಬಾಗಲಕೋಟೆ (Bagalkote) ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣುರ್ (Ankita Basappa Konnur) ಅವರ ಸಾಧನೆಗೆ ಜಿಲ್ಲಾ ಪಂಚಾಯಿತಿ ಸಿಇಓ (Zilla Panchayat CEO) ಶಶಿಧರ ಕುರೇರ್ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಬಗ್ಗೆ ದೂರವಾಣಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿಇಓ ಕುರೇರ್, ಇಡೀ ರಾಜ್ಯವೇ ಖುಷಿ ಪಡುವ ಸಾಧನೆಯನ್ನು ನಮ್ಮ ಜಿಲ್ಲೆಯ ಅಂಕಿತಾ ಕೊಣ್ಣುರ್ ಮಾಡಿದ್ದಾರೆ. ಸಣ್ಣ ರೈತ ಕುಟುಂಬದ ಅಂಕಿತಾ, ಸರ್ಕಾರಿ ಶಾಲೆಯಲ್ಲಿ ಓದಿ, ರಾಜ್ಯದ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೂ ಮಾದರಿ ಆಗುವ ಸಾಧನೆ ಮಾಡಿದ್ದಾರೆ. ಬಾಲಕಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: SSLC Result 2024; ಬಾಗಲಕೋಟೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಟಾಪರ್

    ಹಾಗೆಯೇ ಬಾಗಲಕೋಟೆ ಜಿಲ್ಲೆ ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 24ನೇ ಸ್ಥಾನ ಪಡೆದಿತ್ತು. ಈ ಬಾರಿ 13ನೇ ಸ್ಥಾನಕ್ಕೆ ಬಂದಿದೆ. 11 ಸ್ಥಾನ ಪ್ರಗತಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: SSLC Result: 73.40 % ಫಲಿತಾಂಶ – ಬಾಲಕಿಯರೇ ಮೇಲುಗೈ; ಉಡುಪಿಗೆ ಮೊದಲ ಸ್ಥಾನ

  • ಉದ್ಯೋಗಖಾತ್ರಿಯಲ್ಲಿ ರೈತರ ಜಮೀನಿನಲ್ಲೂ ಕೆಲಸ ಮಾಡಿಸಿಕೊಳ್ಳಲು ಸಾಧ್ಯ: ಬಾಗಲಕೋಟೆ ಜಿ.ಪಂ ಸಿಇಓ

    ಉದ್ಯೋಗಖಾತ್ರಿಯಲ್ಲಿ ರೈತರ ಜಮೀನಿನಲ್ಲೂ ಕೆಲಸ ಮಾಡಿಸಿಕೊಳ್ಳಲು ಸಾಧ್ಯ: ಬಾಗಲಕೋಟೆ ಜಿ.ಪಂ ಸಿಇಓ

    ಬಾಗಲಕೋಟೆ: ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗಂಗೂಬಾಯಿ ಮಾನಕರ್ ರೈತರ ಜಮೀನುಗಳಿಗೆ ಭೇಟಿ ನೀಡಿ ಉದ್ಯೋಗಖಾತ್ರಿ ಯೋಜನೆಯ ವಿವಿಧ ಪ್ರಯೋಜನಗಳ ಕುರಿತು ಮನವರಿಕೆ ಮೂಡಿಸುವ ಕಾರ್ಯ ನಡೆಸಿದ್ದಾರೆ.

    ಉದ್ಯೋಗ ಖಾತ್ರಿ ಯೋಜನೆ ಅಡಿ ಕೇವಲ ಗ್ರಾಮದಲ್ಲಿ ರಸ್ತೆ, ಕೆರೆ, ಸೇತುವೆ ನಿರ್ಮಾಣ ಮಾಡುವುದಕ್ಕೆ ಅಷ್ಟೇ ಸಿಮೀತವಲ್ಲ. ರೈತರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವುದಕ್ಕೂ ಬಳಕೆ ಮಾಡಿಕೊಳ್ಳಬಹುದು. ಈ ಬಗ್ಗೆ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಂಗೂಬಾಯಿ ಮಾನಕರ್ ರೈತರ ಜಮೀನುಗಳಿಗೆ ಭೇಟಿ ನೀಡಿ, ಜಾಗೃತಿ ಮೂಡಿಸುವ ಕಾರ್ಯ ನಡೆಸಿದ್ದಾರೆ.

    ಸಿಇಓ ಗಂಗೂಬಾಯಿ ಮಾನಕರ್ ತೋಟಗಾರಿಕೆ ಬೆಳೆಗಳನ್ನು ಬೆಳೆಸುವ ಜೊತೆಗೆ ಹೂವು ಬಿಡುವ ಸಸಿಗಳನ್ನು ರೈತರು ತಮ್ಮ ಜಮೀನಿನಲ್ಲಿ ನಡೆಸುವುದಕ್ಕೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವೇತನ ನೀಡಲಾಗುವುದು. ಇದು ಅಲ್ಲದೆ ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ಪೇರಲೆ, ಲಿಂಬು ಸೇರಿದಂತೆ ಇತರ ಹಣ್ಣುಗಳ ಸಸಿಗಳನ್ನು ನಡೆಸುವುದಕ್ಕೆ ದಿನಗೂಲಿಯಂತೆ ಉದ್ಯೋಗ ಖಾತ್ರಿ ಯೋಜನೆ ಉಪಯೋಗ ತೆಗೆದುಕೊಳ್ಳಬಹುದು ಎಂಬುದನ್ನು ತೋರಿಸಿಕೊಟ್ಟರು.

    ಈಗಾಗಲೇ ಉದ್ಯೋಗ ಖಾತ್ರಿಯ ಯೋಜನೆಯಲ್ಲಿ ಉಪಯೋಗ ಪಡೆದುಕೊಂಡಿರುವ ಕೆಲ ರೈತರ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ರೈತರೊಂದಿಗೆ ಸಂವಾದ ನಡೆಸಿ ಮಾಹಿತಿ ನೀಡಿದರು.