ಪೊಲೀಸ್ ಕಸ್ಟಡಿಯಲ್ಲಿ ಆರೋಪಿ ಸಾವು

ಚೆನ್ನೈ: ಗಾಂಜಾ ಹೊಂದಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ರಾಜಧಾನಿಯಲ್ಲಿ ನಡೆದಿದೆ.

ವಿಘ್ನೇಶ್ ಮತ್ತು ರಮೇಶ್ ಎಂದು ಗುರುತಿಸಲಾದ ಇಬ್ಬರು ಗಾಂಜಾ ಮಾರಾಟಗಾರರನ್ನು ಮಂಗಳವಾರ ಚೆನ್ನೈನ ಪುರಶವಕ್ಕಂ ಪ್ರದೇಶದಿಂದ ಬಂಧಿಸಲಾಗಿತ್ತು.

ಅವರು ಪ್ರಯಾಣಿಸುತ್ತಿದ್ದ ಆಟೋದಲ್ಲಿ ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು ಅಯನವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ ವಿಘ್ನೇಶ್‍ಗೆ ಇದ್ದಕ್ಕಿದ್ದಂತೆ ಫಿಟ್ಸ್ ಕಾಣಿಸಿಕೊಂಡಿದ್ದರಿಂದ ಅವರನ್ನು ಬೇರೆ ಠಾಣೆಗೆ ವರ್ಗಾಯಿಸಲಾಗಿತ್ತು.

ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾನೆ. ಇದೀಗ ಅವನ ಮೃತದೇಹವನ್ನು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ.

Comments

Leave a Reply

Your email address will not be published. Required fields are marked *