ತಮಿಳುನಾಡಲ್ಲಿ ಕೊಳವೆಬಾವಿಗೆ ಬಿದ್ದು ಬಾಲಕ ಪರದಾಟ

ಚೆನ್ನೈ: 2 ವರ್ಷದ ಬಾಲಕನೊಬ್ಬ ಕೊಳವೆಬಾವಿಗೆ ಬಿದ್ದಿರುವ ಘಟನೆ ತಮಿಳುನಾಡಿನ ತಿರಚ್ಚಿ ಜಿಲ್ಲೆಯ ನಡುಕಟ್ಟುಪಟ್ಟಿಯಲ್ಲಿ ನಡೆದಿದೆ.

ಬಾಲಕನನ್ನು ಸುಜಿತ್ ವಿಲ್ಸನ್ ಎಂದು ಗುರುತಿಸಲಾಗಿದೆ. ಈತ 25 ಅಡಿ ಆಳಕ್ಕೆ ಬಿದ್ದಿದ್ದಾನೆ. ಶುಕ್ರವಾರ ಸಂಜೆ 5.30ರ ಸುಮಾರಿಗೆ ಮನೆ ಮುಂದೆ ಆಟವಾಡುತ್ತಿದ್ದಾಗ 7 ವರ್ಷದ ಹಿಂದೆ ತೆರೆದಿದ್ದ ಬೋರ್‍ವೆಲ್‍ಗೆ ಸುಜಿತ್ ವಿಲ್ಸನ್ ಬಿದ್ದಿದ್ದಾನೆ.

ಬಾಲಕ ಕೊಳವೆ ಬಾವಿಗೆ ಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆಯೇ ರಕ್ಷಣಾ ತಂಡ, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದೆ. ವೈದ್ಯರ ತಂಡ ಕೂಡ ಘಟನಾ ಸ್ಥಳಕ್ಕೆ ಬಂದಿದ್ದು, ಬಾಲಕನಿಗೆ ಆಕ್ಸಿಜನ್ ನೆರವು ನೀಡಲಾಗುತ್ತಿದೆ. ರಕ್ಷಣಾ ಕಾರ್ಯ ಮುಂದುವರಿದಿದೆ.

ಆರೋಗ್ಯ ಸಚಿವ ವಿಜಯಬಾಕರ್, ಪ್ರವಾಸೋದ್ಯಮ ಸಚಿವ ನಟರಾಜನ್ ಮುಂತಾದ ಗಣ್ಯರು ಸ್ಥಳದಲ್ಲಿದ್ದಾರೆ.

Comments

Leave a Reply

Your email address will not be published. Required fields are marked *