ಮೈಸೂರು: ಸರ್ಕಾರ ಆಚರಿಸುವ ಜಯಂತಿಗಳಿಗೆ ತೋರಿರುವ ಉತ್ಸಾಹ ಟಿಪ್ಪು ಜಯಂತಿಯಲ್ಲೂ ತೋರಬೇಕು ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಏರ್ಪಡಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅನಾರೋಗ್ಯದ ಕಾರಣ ನೀಡಿ ಟಿಪ್ಪು ಜಯಂತಿ ಕಾರ್ಯಕ್ರಮದಿಂದ ಗೈರಾಗಿದ್ದಾರೆ. ಉಪಮುಖ್ಯ ಮಂತ್ರಿಗಳು ವಿದೇಶ ಪ್ರವಾಸದಲ್ಲಿದ್ದಾರೆ. ಬಿಗಿ ಪೊಲೀಸ್ ಭದ್ರತೆಯ ನಡುವೆ ಜಯಂತಿ ಆಚರಣೆ ಮಾಡಲಾಗುತ್ತಿದೆ. ಇದು ನಮ್ಮ ಸಮುದಾಯಕ್ಕೆ ಮಾಡಿದ ಅಪಮಾನ ಎಂದು ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ವಾತಂತ್ರ್ಯವಿದೆ. ಟಿಪ್ಪು ಜಯಂತಿಯ ವಿಚಾರವಾಗಿ ಇಷ್ಟೊಂದು ನಿರ್ಬಂಧ ವಿಧಿಸುವ ಅಗತ್ಯ ಇರಲಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಮ್ಮ ಸಮುದಾಯದ ಬಗ್ಗೆ ಗೌರವ ಇದ್ದಿದ್ದರೆ ಟಿಪ್ಪು ಜಯಂತಿಯಲ್ಲಿ ಭಾಗವಹಿಸಬೇಕಿತ್ತು. ಸರ್ಕಾರಕ್ಕೆ ನಾನು ಸವಾಲು ಹಾಕುತ್ತೇನೆ. ಸರ್ಕಾರ ಟಿಪ್ಪು ಜಯಂತಿ ಮಾಡದೇ ಇದ್ದರೆ ನಮಗೆ ಮಾಡಲು ಯೋಗ್ಯತೆ ಇಲ್ಲ ಎಂದು ಅಲ್ಲ. ಸರ್ಕಾರ ಮಾಡದೇ ಇದ್ದರೂ ನಾವು ಮಾಡುತ್ತೇವೆ ಎಂದರು. ಇದೇ ವೇಳೆ ಕೇವಲ ರಾಜಕೀಯ ಕಾರಣಕ್ಕೆ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಮಹಾತ್ಮ ಗಾಂಧಿಯ ಪ್ರಾಣವನ್ನೇ ತೆಗೆದ ಜನ ರಾಷ್ಟ್ರ ಪ್ರೇಮದ ವಿಚಾರ ಮಾತನಾಡುತ್ತಾರೆ. ಟಿಪ್ಪು ಕುರಿತ ಚರ್ಚೆಗೆ ನಾನು ಸಿದ್ಧನಿದ್ದೇನೆ, ಯಾರು ಬೇಕಾದರೂ ಚರ್ಚೆಗೆ ಬರಲಿ ಎಂದು ಸವಾಲು ಎಸೆದರು.
ಟಿಪ್ಪು ಜಯಂತಿಯನ್ನು ಪೊಲೀಸ್ ಭದ್ರತೆಯಲ್ಲಿ ಮಾಡುತ್ತಿರುವುದು ನಮಗೆ ಅಪಮಾನ ಮಾಡಿದಂತೆ ಆಗಿದೆ. ಮೈಸೂರು ನಗರದಲ್ಲೂ ಕೂಡ ಇಂತಹದ್ದೇ ಘಟನೆ ನಡೆದಿದೆ. ಪೊಲೀಸರನ್ನು ನೇಮಕ ಮಾಡಿದರೆ ಎಲ್ಲವೂ ಸರಿಯಾಗುತ್ತದೆ ಎಂಬ ಅರ್ಥವಲ್ಲ. ನಮ್ಮ ಜನಾಂಗಕ್ಕೆ ಟಿಪ್ಪು ಜಯಂತಿ ಆಚರಣೆ ಮಾಡಿಕೊಳ್ಳುವ ಸಾಮಥ್ರ್ಯ ಇದೆ. ಆದರೆ ಟಿಪ್ಪು ಜಯಂತಿ ಮುಕ್ತ ವಾತಾವರಣದಲ್ಲಿ ಆಚರಣೆ ಮಾಡಬೇಕಿದೆ. ನಾವೇನೂ ಟಿಪ್ಪು ಜಯಂತಿ ಮಾಡಿ ಎಂದು ಅರ್ಜಿ ಹಾಕಿಲ್ಲ. ಆದರೆ ಸರ್ಕಾರಿ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರತಿನಿಧಿಗಳು ಹಾಜರಿ ಆಗಬೇಕಿತ್ತು. ಸಿಎಂ ಅವರು ಅನಾರೋಗ್ಯದ ಕಾರಣ ಗೈರಾದ ಸಂದರ್ಭದಲ್ಲಿ ಅವರ ಸಂದೇಶವನ್ನಾದರು ನೀಡಬೇಕಿತ್ತು. ಈ ಕುರಿತು ಸಿಎಂ ಹಾಗೂ ಡಿಸಿಎಂ ಅವರಿಗೆ ಪತ್ರ ಬರೆದು ಉತ್ತರ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply