ಟಾರ್ಗೆಟ್‌ 20 ಲಕ್ಷ, ನಡೆದಿದ್ದು 10 ಸಾವಿರ ಮಂದಿ ಗಣತಿ – ಮೊದಲ ದಿನವೇ ನೀರಸ ಆರಂಭ

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಹೊರತುಪಡಿಸಿ ರಾಜ್ಯಾದ್ಯಂತ ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನೀರಸ ಆರಂಭ ಕಂಡಿದ್ದು ಮೊದಲ ದಿನ ಕೇವಲ 10 ಸಾವಿರ ಮಂದಿಯ ಸಮೀಕ್ಷೆ (Caste Survey) ನಡೆಸಲಾಗಿದೆ.

ಪ್ರತಿ ದಿನ 20 ಲಕ್ಷ ಜನರ ಸಮೀಕ್ಷೆ ಮಾಡಬೇಕೆಂದು ಗುರಿಯನ್ನು ಹಾಕಲಾಗಿದೆ. ಆದರೆ ಮೊದಲ ದಿನವಾದ ಸೋಮವಾರ 2,765 ಕುಟುಂಬಗಳ 10,642 ಮಂದಿಯ ಸಮೀಕ್ಷೆಯನ್ನ ಮಾತ್ರ ಮಾಡಲಾಗಿದೆ. ಇದನ್ನೂ ಓದಿ:  ಕೇಂದ್ರದ ಅಧಿಕಾರವನ್ನು ರಾಜ್ಯ ಬಳಸುತ್ತಿದೆ, ಜಾತಿ ಸಮೀಕ್ಷೆಗೆ ತಡೆ ನೀಡಿ | ಲಿಂಗಾಯತ, ಒಕ್ಕಲಿಗ, ಕೇಂದ್ರ, ರಾಜ್ಯದ ವಾದ ಏನು?

ಗಣತಿದಾರರಿಗೆ ಆ್ಯಪ್ ಬಗ್ಗೆ ಅಪೂರ್ಣ ಮಾಹಿತಿ, ಇಂಟರ್‌ನೆಟ್‌ ಇಲ್ಲದ ಕಡೆ ಸಮೀಕ್ಷೆಗೆ ಬಳಸುವ ಆ್ಯಪ್ ಕೆಲಸ ಮಾಡದೇ ಇರುವುದು, ಕೆಲವು ಕಡೆ ಕಿಟ್‌ಗಳು ಸಂಜೆ ವೇಳೆ ಸಿಬ್ಬಂದಿಯ ಕೈ ಸೇರಿದ್ದು, ಇನ್ನು ಕೆಲವರಿಗೆ ಕಿಟ್‌ ಸಿಕ್ಕಿದರೂ ಮೊಬೈಲ್ ನೆಟ್ವರ್ಕ್ ಕೈಕೊಟ್ಟಿದ್ದರಿಂದ ಮೊದಲ ದಿನ ಕಡಿಮೆ ಸಂಖ್ಯೆಯ ಜನರನ್ನು ಮಾತ್ರ ಗಣತಿ ಮಾಡಲಾಗಿದೆ.

ಇಂಟರ್ನೆಟ್ ಇಲ್ಲದೆಡೆ ಆ್ಯಪ್ ಕೆಲಸ ನಿರ್ವಹಿಸದ ಕಾರಣ ಗ್ರಾಮೀಣ ಪ್ರದೇಶಗಳಲ್ಲಿ ಶಾಲೆ ಮತ್ತು ಅಂಗನವಾಡಿಗಳಲ್ಲಿ ವಿಶೇಷ ಶಿಬಿರ ಆಯೋಜಿಸಿ ಗಣತಿ ನಡೆಸಲು ಆಯೋಗ ಸಿದ್ಧತೆ ನಡೆಸಿದೆ.