ರೈಲಿನ ಚಕ್ರಕ್ಕೆ ಸಿಲುಕುತ್ತಿದ್ದ ಪ್ರಯಾಣಿಕನ ಜೀವ ಉಳಿಸಿದ ಟ್ಯಾಕ್ಸಿ ಡ್ರೈವರ್

ಆಗ್ರಾ: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಕಾಲುಜಾರಿ ಚಕ್ರಕ್ಕೆ ಸಿಲುಕುತ್ತಿದ್ದ ಪ್ರಯಾಣಿಕನನ್ನು ಟ್ಯಾಕ್ಸಿ ಚಾಲಕರೊಬ್ಬರು ಕಾಪಾಡಿ ಜೀವ ಉಳಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆ ಹೊತ್ತಿಗೆ ಈ ಘಟನೆ ನಡೆದಿದೆ. ಸುರೇಶ್(34) ಎಂಬ ಪ್ರಯಾಣಿಕರನ್ನು ರಾಜೇಶ್ ಶರ್ಮಾ ಎಂಬ ಟ್ಯಾಕ್ಸಿ ಚಾಲಕ ಬಚಾವ್ ಮಾಡಿದ್ದಾರೆ.

ಮಂಗಳ ಲಕ್ಷದ್ವೀಪ ಎಕ್ಸ್ ಪ್ರೆಸ್ ರೈಲು ಆಗ್ರಾ ನಿಲ್ದಾಣದಿಂದ ಹೊರಟ ಸಮಯಕ್ಕೆ ಸುರೇಶ್ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿದ್ದಾರೆ. ಈ ವೇಳೆ ಹತ್ತುವ ಗಡಿಬಿಡಿಯಲ್ಲಿ ಅವರ ಕಾಲು ಜಾರಿ ಇನ್ನೇನು ರೈಲಿನ ಚಕ್ರಕ್ಕೆ ಸಿಲುಕುತ್ತಿದ್ದರು. ಆದ್ರೆ ಸರಿಯಾದ ಸಮಯಕ್ಕೆ ರೈಲಿನೊಳಗಿದ್ದ ಟ್ಯಾಕ್ಸಿ ಚಾಲಕ ಸುರೇಶ್ ಅವರ ಕೈ ಹಿಡಿದು ಪ್ರಾಣ ಕಾಪಾಡಿದ್ದಾರೆ.

ಬಳಿಕ ನಿಲ್ದಾಣದಲ್ಲಿದ್ದ ಇತರ ಪ್ರಯಾಣಿಕರು ಸಹಾಯ ಮಾಡಿ ತಕ್ಷಣ ಸುರೇಶ್ ಅವರನ್ನು ಎಳೆದುಕೊಂಡಿದ್ದಾರೆ. ಈ ದೃಶ್ಯವನ್ನು ಕೆಲವರು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಟ್ಯಾಕ್ಸಿ ಚಾಲಕನ ಕೆಲಸಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

https://www.youtube.com/watch?v=qloTC2fA-bw

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *