ಯೋಗ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಶಿಕ್ಷಕ ಸಾವು!

ಬಾಗಲಕೋಟೆ: ಯೋಗ ಮಾಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳ ಪಟ್ಟಣದಲ್ಲಿ ನಡೆದಿದೆ.

ವಿಶ್ವನಾಥ್ ಬಿರಾದಾರ(50) ಮೃತ ದುರ್ದೈವಿ ಶಿಕ್ಷಕ. ತೇರದಾಳ ಪಟ್ಟಣದ ಜೆವಿ ಮಂಡಲ ಸಂಸ್ಥೆಯ ಗುರುಕುಲ ಕ್ಯಾಂಪಸ್ ನಲ್ಲಿ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಭಾಗಿಯಾಗಿದ್ದರು. ಯೋಗ ಮಾಡುತ್ತಿದ್ದ ವೇಳೆಯೇ ವಿಶ್ವನಾಥ್ ಅವರಿಗೆ ಹೃದಯಾಘಾತವಾಗಿದೆ.

ವಿಶ್ವನಾಥ್ ಎಸ್.ಜೆ. ಹೆಣ್ಣು ಮಕ್ಕಳ ಪ್ರೌಢಶಾಲೆಯ ಗಣಿತ ಶಿಕ್ಷಕರಾಗಿದ್ದು, ಮೊದಲಿಂದಲೂ ಯೋಗ ಅಭ್ಯಾಸ ಮಾಡುತ್ತಿದ್ದರು. ಸದ್ಯ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *