ನಿಶ್ಚಿತಾರ್ಥ ಆಗಿಲ್ಲವೆಂದು ಮಹಿಳಾ ದಿನಾಚರಣೆಯಂದೇ ಶಿಕ್ಷಕಿ ಆತ್ಮಹತ್ಯೆ

ಬೀದರ್: ಮಹಿಳಾ ದಿನಾಚರಣೆಯ ದಿನವೇ ಶಿಕ್ಷಕಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ.

ಪೂಜಾ (24) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಭಾಲ್ಕಿ ತಾಲೂಕಿನ ಭಾಲ್ಕೇಶ್ವರ ದೇವಸ್ಥಾನದ ಬಾವಿಯಲ್ಲಿ ಈ ಘಟನೆ ನಡೆದಿದೆ. ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟು ಬರೆದಿಟ್ಟು ಶಿಕ್ಷಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವರನ ಕಡೆಯವರು ಹಲವು ಬಾರಿ ನೋಡಿ ಹೋದರೂ ನಿಶ್ಚಿತಾರ್ಥವಾಗಿಲ್ಲ ಎಂಬ ಕಾರಣಕ್ಕೆ ಮನನೊಂದು ಶಿಕ್ಷಕಿ ಬಾವಿಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೋಷಕರ ಜೊತೆ ಪೂಜಾ ಚರ್ಚೆ ಮಾಡಿದ್ದು, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೀನಿ ಎಂದು ಹೇಳಿದ್ದಳಂತೆ. ಆಗ ಪೋಷಕರು ಹಲವಾರು ಬಾರಿ ಸಮಾಧಾನ ಮಾಡಿದ್ದರು. ಆದರೂ ಇಂದು ಡೆತ್ ನೋಟ್ ಬರೆದಿಟ್ಟು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪೂಜಾ ಭಾಲ್ಕಿಯ ಖಾಸಗಿ ಚನ್ನಬಸವ ಪದವಿ ಕಾಲೇಜಿನಲ್ಲಿ ರಾಸಾಯನಿಕ ಶಾಸ್ತ್ರದ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಈ ಕುರಿತು ಭಾಲ್ಕಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *